Author: News Desk Benkiyabale

 ಮಧುಗಿರಿ :      ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೋಲೀಸರು ದಾಳಿ ನಡೆಸಿ 280 ಗ್ರಾಂ ಗಾಂಜಾ ವಶ ಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.     ತಾಲೂಕಿನ ದೊಡ್ಡೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಮುಂಭಾಗದ ರಸ್ತೆಯ ಬಳಿ ಗಾಂಜಾ ಸಾಗಿಸುತ್ತಿದ್ದ ಡಿ.ಎಸ್. ಅಮರ್ ಎಂಬ ವ್ಯಕ್ತಿಯನ್ನು ತಡೆದು ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.       ಅಬಕಾರಿ ಉಪ ಅಧೀಕ್ಷಕ ಆರ್. ಸುರೇಶ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಹೆಚ್. ನಾಗರಾಜು, ಸಿಬ್ಬಂದಿಗಳಾದ ಯೋಗಾನಂದ, ರಾಜೇಶ್, ಶ್ರೀ ಶೈಲ ಪೂಜಾರಿ, ಮಹಂತೇಶ್, ಜಗದೀಶ್ ಭಾಗವಹಿಸಿದ್ದರು

Read More

 ತುಮಕೂರು :      ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಉದಾಸೀನ ಬೇಡ ಎಂದು ಮುಖ್ಯ ಚುನಾವಣಾ ವೀಕ್ಷಕರಾದ ಡಾ.ರವಿಕುಮಾರ್ ಸುರಪುರ ಚುನಾವಣಾ ವೀಕ್ಷಕರಿಗೆ ಸೂಚನೆ ನೀಡಿದರು.       ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಂಗಳವಾರ ಚುನಾವಣಾ ವೀಕ್ಷಕರಿಗಾಗಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯು ಎಂದಿನಂತೆ ನಡೆಯುವ ಸಾರ್ವತ್ರಿಕ ಚುನಾವಣಾ ಕ್ರಮಕ್ಕಿಂತ ಭಿನ್ನವಾಗಿದ್ದು, ವೀಕ್ಷಕರು ಉದಾಸೀನ ಮಾಡುವಂತಿಲ್ಲ ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಚುನಾವಣೆ ಪ್ರಕ್ರಿಯೆಗಳು ನಿಯಮಾನುಸಾರ ನಡೆಯಬೇಕಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಈಗಾಗಲೇ ಪ್ರತೀ ಮತದಾನ ಕೇಂದ್ರಕ್ಕೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳ ಸಮನ್ವಯ-ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಿ ಎಂದು ಅವರು ತಿಳಿಸಿದರು.      ಮತದಾನದ ದಿನ ಮತಾಧಿಕಾರದ ಗೌಪ್ಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಕರ್ತವ್ಯವಾಗಿದ್ದು, ವೈಯಕ್ತಿಕ ಆಸಕ್ತಿಗಳಿಗೆ ಮನ್ನಣೆ ನೀಡುವಂತಿಲ್ಲ ಎಂದರಲ್ಲದೆ, ಅಂಧರು, ವಿಶೇಷ…

Read More

 ತುಮಕೂರು :       ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು, ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಸೆಂಬರ್ 7ರ ಸಂಜೆ 4 ರಿಂದ ಡಿ.10ರ ಸಂಜೆ 4 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಆದೇಶ ಹೊರಡಿಸಿದ್ದಾರೆ.       ನಿಷೇಧಾಜ್ಞೆಯ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡಬಾರದು. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು,…

Read More

ತುಮಕೂರು : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಹೇಮಾವತಿ ನಾಲಾ ವಲಯದ ವಿಶೇ‍ಷ ಭೂಸ್ವಾಧೀನಾಧಿಕಾರಿಗಳ ಕಛೇರಿ ಮೇಲೆ ದಾಳಿ ನಡೆಸಿ ಸಹ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ನಗರದ ಕುಣಿಗಲ್ ರಸ್ತೆಯಲ್ಲಿ ಹೇಮಾವತಿ ನಾಲಾ ಕಛೇರಿ ಆವರಣದಲ್ಲಿರುವ ವಿಶೇ‍ಷ ಭೂಸ್ವಾಧೀನಾಧಿಕಾರಿಗಳ ಕಛೇರಿ ಮೇಲೆ ನೆನ್ನೆ(ಡಿ.೬) ಸಂಜೆ ಎಸಿಬಿ ಕೇಂದ್ರ ವಲಯ ಎಸ್ಪಿ ಕಲಾ ಕೃ‍ಷ್ಣಸ್ವಾಮಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ರಾತ್ರಿಯಾಗಿದ್ದರಿಂದ ತಪಾಸಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಇಂದು ಬೆಳಗ್ಗೆ ಮತ್ತೆ ದಾಖಲಾತಿಗಳ ತಪಾಸಣೆಯನ್ನು ಮುಂದುವರೆಸಿದ್ದಾರೆ. ಹೇಮಾವತಿ ನಾಲಾ ವಲಯದಲ್ಲಿ ಸ್ವಾಧೀನಪಡಿಸಿಕೊಂಡ ರೈತರ ಜಮೀನುಗಳಿಗೆ ಸಕಾಲಕ್ಕೆ ಪರಿಹಾರ ಕೊಡದೆ ವಿನಾ ಕಾರಣ ವಿಳಂಬ ಮಾಡಿರುವುದು, ಹಿರಿತನ ಪರಿಗಣಿಸಿರುವುದ್, ಹಣ ಕೊಟ್ಟವರಿಗೆ ಮತ್ತು ಶಿಫಾರಸ್ಸು ಮಾಡಿಸಿದವರಿಗೆ ಪರಿಹಾರ ವಿತರಣೆ ಮಾಡುವ ಮೂಲಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ವಿಶೇ‍ಷ ಭೂ ಸ್ವಾಧೀನಾಧಿಕಾರಿಗಳ ಕಛೇರಿಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಹಲವು ದಾಖಲಾತಿಗಳ ಪರಿಶೀಲನೆ ನಡೆಸಿದ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು…

Read More

ತುರುವೇಕೆರೆ :        ತಾಲೂಕಿನ ತೊರೆಮಾವಿನಹಳ್ಳಿ ಗೇಟ್‍ನಿಂದ ಬೂವನಹಳ್ಳಿ-ಆನೆಕೆರೆ ಮಾರ್ಗವಾಗಿ ಮಲ್ಲಾಘಟ್ಟ ಕೆರೆ, ನಲ್ಲಿಕೆರೆ ಮಾರ್ಗವಾಗಿ ತಿಪಟೂರಿಗೆ ತಲುಪುವ ಸಂಪರ್ಕ ರಸ್ತೆ, ತೊರೆಮಾವಿನಹಳ್ಳಿ ಗೇಟ್‍ನ ಬಸವನತೋಟದ ಸಮೀಪ ಅಕಾಲಿಕ ಮತ್ತು ಸತತ ಮಳೆಯಿಂದ ಸಂಪೂರ್ಣ ಹಾಳಾಗಿದೆ.      ಜನ ಜಾನುವಾರುಗಳು, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ.ಸಂಬಂಧಪಟ್ಟವರು ಈ ಕೂಡಲೇ ಗಮನಹರಿಸಿ, ರಸ್ತೆ ದುರಸ್ತಿ ಮಾಡಿಕೊಡುವಂತೆ ಸುತ್ತಮುತ್ತಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

 ತುಮಕೂರು :        ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷ/ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವುದರೊಂದಿಗೆ ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿ ಸಾರ್ವಜನಿಕ ಸಭೆ, ಬೈಕ್ ರ್ಯಾಲಿ, ಬೀದಿ ನಾಟಕ ಸೇರಿದಂತೆ ಮತ್ತಿತರ ಬಹಿರಂಗ ಪ್ರಚಾರಗಳನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.        ಈ ಸೂಚನೆಯನ್ವಯ ಬಹಿರಂಗ ಚುನಾವಣಾ ಪ್ರಚಾರವನ್ನು ಡಿಸೆಂಬರ್ 7ರ ಸಂಜೆ 4 ಗಂಟೆಯೊಳಗೆ ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Read More

 ತುಮಕೂರು :        ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಮಕ್ಕಳ ಮತ್ತು ಕ್ಯಾನ್ಸರ್ ತಜ್ಞರಾದ ಡಾ. ಸ್ಟಾಲಿನ್‍ರಾಮ್‍ಪ್ರಕಾಶ್ ಅವರು ಬಾಂಗ್ಲಾದೇಶದ ಢಾಕಾ ನಗರದಲ್ಲಿ ಅಸ್ಥಿಮಜ್ಜೆ (ಥಲಸ್ಸೆಮಿಯಾ) ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು ಏಳು ವರ್ಷದ ಹೆಣ್ಣು ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ನಡೆಸುವ ಮೂಲಕ ಆ ದೇಶದಿಂದ ಸೈ ಎನಿಸಿಕೊಂಡು ಭಾರತಕ್ಕೆ ಕೀರ್ತಿ ಮತ್ತು ಹೆಮ್ಮೆ ತಂದಿದ್ದಾರೆ.       ಢಾಕಾದ ಕಂಬೈನ್ ಮಿಲಿಟರಿ ಆಸ್ಪತ್ರೆಯ ವೈದ್ಯರಾದ ಡಾ.ಶಾರ್ಮಿನ್ ಅವರು ಥಲಸ್ಸೆಮಿಯಾ ಹೊಂದಿರುವ ಮಗುವಿಗೆ ತಮ್ಮ ಮೊದಲ ಮಕ್ಕಳ ಅಲೋಜೆನಿಕ್ ಮೂಳೆ ಮಜ್ಜೆಯ ಕಸಿ ಮಾಡುವಾಗ ಈ ಪ್ರಕ್ರಿಯೆಗೆ ಸಹಾಯ ಮಾಡಲು ಡಾ.ಸ್ಟಾಲಿನ್ ರಾಮ್‍ಪ್ರಕಾಶ್ ಅವರ ಬೆಂಬಲ ಮತ್ತು ಸಹಾಯವನ್ನು ಕೋರಿ ಸ್ಟಾಲಿನ್ ಅವರು ಢಾಕಾಗೆ ಆಹ್ವಾನಿಸಿದ್ದರು. ಅವರ ಆಹ್ವಾನದ ಮೇರೆಗೆ ಡಾ.ಸ್ಟಾಲಿನ್ ರಾಮ್‍ಪ್ರಕಾಶ್ ಅವರು ಢಾಕಾಗೆ ಹೋಗಿ ಥಲಸ್ಸೆಮಿಯಾ ಸಮಸ್ಯೆ ಇವರು 7 ವರ್ಷದ ಮಗುವಿಗೆ ಮೂಳೆ ಮಜ್ಜೆಯ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದರು.…

Read More

ತುಮಕೂರು :        ಮೊಬೈಲ್ ಶೋರೂಂನ ಶೆಟರ್ ಮೀಟಿ ಮೊಬೈಲ್ ಶೋರೂಂಗೆ ನುಗ್ಗಿದ ಕಳ್ಳರು ಬೆಲೆಬಾಳುವ ಮೊಬೈಲ್‍ಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಗರದಲ್ಲಿ ತಡರಾತ್ರಿ ನಡೆದಿದೆ.       ನಗರದ ಶಿವಕುಮಾರಸ್ವಾಮೀಜಿ ವೃತ್ತದ ಬಳಿಯಿರುವ ಒನ್ ಪ್ಲಸ್ ಮೊಬೈಲ್ ಶೋರೂಂನಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಶೋರೂಂನ ಶೆಟರ್ ಮೀಟಿ ಅದರಲ್ಲಿದ್ದ ಸುಮಾರು 40 ಲಕ್ಷ ರೂ.ಗಳ 80ಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್‍ಗಳನ್ನು ಕದ್ದಿದ್ದು, ಶೋ ರೂಂ ನಲ್ಲಿದ್ದ ಸಿಸಿ ಕ್ಯಾಮೆರಾ ಹಾಗೂ ಹೊರಗಿರುವ ಸಿಸಿ ಕ್ಯಾಮೆರಾಗಳಲ್ಲಿ ಪತ್ತೆ ಹಚ್ಚಬಹುದೆಂಬ ಶಂಕೆಯಿಂದ ಸಿಸಿ ಕ್ಯಾಮೆರಾ ಹಾರ್ಡ್ ಡಿಸ್ಕ್‍ನ್ನೂ ಸಹ ಕದ್ದೊಯ್ದಿದ್ದಾರೆ.       ಸೋಮವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

 ತುಮಕೂರು :        ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಪ್ರಸವ ಸಂದರ್ಭದಲ್ಲಿ ಸಂಭವಿಸುವ ತಾಯಿ ಹಾಗೂ ಶಿಶು ಮರಣವನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.        ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಒಟ್ಟು 27 ತಾಯಿಯ ಮರಣ ಹಾಗೂ ಒಟ್ಟು 113 ಶಿಶು ಮರಣ ಪ್ರಕರಣಗಳು ದಾಖಲಾಗಿವೆ.       2021ರ ಜುಲೈನಿಂದ ಅಕ್ಟೋಬರ್ ಮಾಹೆಯ ಅಂತರದಲ್ಲಿ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆಗಳಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಚಿ.ನಾ.ಹಳ್ಳಿ, ಮಧುಗಿರಿ, ತಿಪಟೂರು ಹಾಗೂ ತುಮಕೂರು ತಾಲೂಕಿನಲ್ಲಿ ತಲಾ 1, ಪಾವಗಡ-3, ತುರುವೇಕೆರೆ-2 ಸೇರಿದಂತೆ ಒಟ್ಟು 9 ಮಂದಿ ತಾಯಂದಿರು ಸಾವನ್ನಪ್ಪಿರುತ್ತಾರೆ. ಮುಂದಿನ ದಿನಗಳಲ್ಲಿ ಈ ಮರಣ ಪ್ರಮಾಣವನ್ನು ನಿಯಂತ್ರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು…

Read More

ತುಮಕೂರು :       ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲು ನೋಂದಣಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪ್ರತಿ ತಾಲ್ಲೂಕಿನ ಎಪಿಎಂಸಿ ಪ್ರಾಂಗಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿ ಮಾಡಲು ರೈತರ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ನಿರ್ದೇಶಿಸಿದರು.       ಉತ್ತಮ ಗುಣಮಟ್ಟದ ಸಾಮಾನ್ಯ ದರ್ಜೆಯ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1940 ರೂ. ಹಾಗೂ ಪ್ರತಿ ಕ್ವಿಂಟಾಲ್ ಗ್ರೇಡ್-ಎ ಭತ್ತಕ್ಕೆ 1960 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಗೊಳಿಸಿದ್ದು, ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟ ಮಾಡಲಿಚ್ಛಿಸುವ ರೈತರು ನೋಂದಣಿ ಕೇಂದ್ರಗಳಿಗೆ ತಮ್ಮ ಈಖUIಖಿ Iಆ ಯೊಂದಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.       ರೈತರ ನೋಂದಣಿ ಕಾರ್ಯ ಪೂರ್ಣಗೊಂಡ…

Read More