ತುಮಕೂರು : ಒಂದೆಡೆ ತುಮಕೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಬೆಂಗಳೂರಿನಲ್ಲಿ ಇಬ್ಬರಿಗೆ ರೂಪಾಂತರಿ ಒಮ್ರಿಕಾನ್ ವೈರಸ್ ತಗುಲಿದೆ. ಸುದ್ದಿ ತಿಳಿಯುತ್ತಿದ್ದಂತೆ ತುಮಕೂರು ನಗರದಲ್ಲಿ ಜಿಲ್ಲಾಡಳಿತ ಅಲರ್ಟ್ ಆಗಿದೆ. ಖುದ್ದು ರಸ್ತೆಗಿಳಿದಿರುವ ಜಿಲ್ಲಾಧಿಕಾರಿ ಪಾಟೀಲ್ ಅವರು ವ್ಯಾಕ್ಸಿನ್ ನೀಡುವಿಕೆಯ ಕಾರ್ಯಕ್ಕೆ ಭರದಿಂದ ಚಾಲನೆ ನೀಡಿದ್ದಾರೆ. ಮೊದಲ ವ್ಯಾಕ್ಸಿನ್ ತೆಗೆದುಕೊಂಡು ಎರಡನೇ ವ್ಯಾಕ್ಸಿನ್ ತೆಗೆದುಕೊಳ್ಳದೆ ಇರುವವರನ್ನು ಪತ್ತೆ ಹಚ್ಚಿರುವ ಜಿಲ್ಲಾ ಆರೋಗ್ಯ ಇಲಾಖೆ ಅವರ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಹೀಗಾಗಿ, ಜಿಲ್ಲಾಧಿಕಾರಿ ಅಂತಹ ಜನವಸತಿ ಪ್ರದೇಶಗಳ ಕಡೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಹಾಗೂ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆ ಸಿಬ್ಬಂದಿ ಜತೆಗೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಅವರ ಮನವೊಲಿಸುವಲ್ಲಿ ತೊಡಗಿದ್ದರು. ಮುಂಜಾಗ್ರತಾ ಕ್ರಮವಾಗಿ ಎರಡನೇ ವ್ಯಾಕ್ಸಿಂಗ್ ಅನ್ನು ಕಡ್ಡಾಯವಾಗಿ ಪಡೆಯುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ವ್ಯಾಕ್ಸಿನ್ ಪಡೆಯದ ಸಾರ್ವಜನಿಕರನ್ನು ಪತ್ತೆಹಚ್ಚಿ ಅವರುಗಳಿಗೆ…
Author: News Desk Benkiyabale
ತುಮಕೂರು : ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಎದ್ದಿದೆ ಈ ಮೂಲಕ ಮುಂದಿನ ದಿನದಲ್ಲಿ ದೇಶ ಹಾಗೂ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ನಾಗಮಂಗಲದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣ ರವರ ಮನೆಗೆ ಭೇಟಿ ನೀಡಿದ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆ ,ರೈತರ ವಿರೋಧಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ ಸಮಯದಲ್ಲಿ ಮೃತಪಟ್ಟ ರೈತರು ಹಾಗೂ ಇತ್ತೀಚಿಗೆ ನಡೆದ ವಿವಿಧ ಉಪಚುನಾವಣೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಜನತೆ ತಿರಸ್ಕರಿಸಿರುವುದು ಇದಕ್ಕೆ ಸಾಕ್ಷಿ ಎಂದರು. ಇನ್ನು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಕೊಂಚ ಪ್ರಬಲವಾಗಿರುವುದರಿಂದ…
ತುಮಕೂರು : ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ ಎಂದು ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ದೂರಿದರು. ನಗರದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾವು ಕಾರಣರಲ್ಲ. ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆ ವಿಷಯದಲ್ಲಿ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರಿಗೆ ಸೋಲು ಉಂಟಾಯಿತು ಎಂದು ಹೇಳಿದರು. ಕಳೆದ 3 ತಿಂಗಳಿನಿಂದ ಹಾಗೂ ನಿರಂತರ ಸೋಲಿನ ನಂತರ ಜನರೊಂದಿಗೆ ಬೆರೆತು ಹಾಗೂ ಮತದಾರರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ಹೀಗಾಗಿ ಈ ಬಾರಿ ನಾನು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ರಾಜೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಗುಬ್ಬಿ : ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗುಬ್ಬಿ ಪಟ್ಟಣದ ಹೇರೂರು ಬಳಿಯ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಆರ್.ಅನಿಲ್ ಕುಮಾರ ಅವರ ಪರವಾಗಿ ಮತಯಾಚನೆ ಮಾಡಲು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರು ಆಗಮಿಸುತ್ತಿದ್ದು ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯ್ತಿ ಸದಸ್ಯರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಬಿ.ಎಸ್.ನಾಗರಾಜು ಮನವಿ ಮಾಡಿದ್ದಾರೆ. ವಿದ್ಯಾವಂತ ಅಭ್ಯರ್ಥಿಯಾದ ಅನಿಲ್ ಕುಮಾರ್ ಅವರು ಕೆ.ಎ.ಎಸ್.ಅಧಿಕಾರಿಯಾಗಿ ಜನರ ಸಮಸ್ಯೆಯನ್ನು ಅರಿತಿದ್ದು ಅಧಿಕಾರಿಗಳ ಮತ್ತು ಸರ್ಕಾರದ ಮಟ್ಟದಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಒಬ್ಬ ವಿದ್ಯಾವಂತ, ಉತ್ತಮ ಅಭ್ಯರ್ಥಿಯನ್ನು ಜೆಡಿಎಸ್ ಪಕ್ಷದ ವರಿಷ್ಠರು ಜಿಲ್ಲೆಗೆ ನೀಡಿದ್ದು ಇಂತಹ ಅಭ್ಯರ್ಥಿಯನ್ನು ಚುನಾಯಿತ ಪ್ರತಿನಿಧಿಗಳು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾಮಾಂಜನಪ್ಪ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಹಿರಿಯ ಮುಖಂಡ ಎಂ.ಗಣಗಣ್ಣ,…
ತುಮಕೂರು : ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಕೇವಲ 9 ದಿನಗಳು ಮಾತ್ರ ಬಾಕಿ ಉಳಿದಿದೆ, ತುಮಕೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಾಗಿಸಲು ಮಾಜಿ ಪಿಎಂ ದೇವೇಗೌಡರ ಅಂಶಗಳು ಪ್ರಮಖ ಪಾತ್ರ ವಹಿಸುವ ಸೂಚನೆಗಳು ದೊರಕಿವೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದರೂ ತುಮಕೂರು ಕ್ಷೇತ್ರದಲ್ಲಿ ಗೌಡರು ಸೋತಿದ್ದರು. ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಅವರ ಪಿತೂರಿ ಇದಕ್ಕೆ ಕಾರಣಎೆಬುದು ಬಹಿರಂಗ ಸತ್ಯ, ಹೀಗಾಗಿ ಒಕ್ಕಲಿಗರು, ದಲಿತರು ಅದರ ಸೇಡು ತೀರಿಸಿಕೊಳ್ಳಲು ಹವಣಿಸಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಎಸ್ ಟಿ ನಾಯಕ ಸಮುದಾಯದ ಮಾಜಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಅದೇ ಸಮುದಾಯಕ್ಕೆ ಸೇರಿದ ರಾಜಣ್ಣ ಪುತ್ರ ಆರ್ ರಾಜೇಂದ್ರ ವಿರುದ್ಧ ಸಮರ…
ತುಮಕೂರು : ಜಿಲ್ಲೆಯ ಸ್ಥಳೀಯ ಸಂಸ್ಥಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ, ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿಂದು ಜರುಗಿದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಸಂಬಂಧ ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ತರಬೇತಿ ಪಡೆದು ಯಾವುದೇ ಲೋಪದೋಷಗಳಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ಮಾಡಿಕೊಡದಂತೆ ಚುನಾವಣೆಯನ್ನು ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಸಬೇಕು ಎಂದು ಜಿಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ಗಳಿಗೆ ಸೂಚನೆ ನೀಡಿದರು. ಈ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಒಟ್ಟು 5559 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಎಂದಿನಂತೆ ನಡೆಯುವ ಸಾರ್ವತ್ರಿಕ ಚುನಾವಣೆ…
ಚಿಕ್ಕನಾಯಕನಹಳ್ಳಿ : ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಜನಪ್ರಿಯ ಶಾಸಕರಾದ ಡಾ.ಜಿ.ಪರಮೇಶ್ವರ್ ಜಿ ರವರ ನೇತೃತ್ವದಲ್ಲಿ ವಿಧಾನಪರಿಷತ್ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ರಾಜೇಂದ್ರ ರವರ ಪರ ಇಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾಜಿ ಕೇಂದ್ರ ಸಚಿವರಾದ ಕೆ.ಎಚ್.ಮುನಿಯಪ್ಪ,ಶಾಸಕರಾದ ರಿಜ್ವಾನ್ ಆರ್ಷದ್ ರವರು,ಡಾ.ರಂಗನಾಥ್ ರವರು, ಮಾಜಿ ಸಚಿವರಾದ ಶ್ರೀ ಟಿ.ಬಿ.ಜಯಚಂದ್ರ ರವರು,ಮಾಜಿ ಸಂಸದರಾದ ಮುದ್ದಹನುಮೇಗೌಡವರು ,ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ನವರು,ಶಫಿ ಅಹಮದ್ ರವರು,ಕೆ ಷಡಕ್ಷರಿರವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣಪ್ಪರವರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿಹುಲಿಕುಂಟೆ ಮಾಜಿ ಜಿ.ಪಂ ಸದಸ್ಯರಾದ ಪಾವಗಡ ವೆಂಕಟೇಶ್, ಕೆಂಚಮಾರಯ್ಯ,ಜಿ.ಜೆ.ರಾಜಣ್ಣ,ಮುಖಂಡರಾದ ಕೊಂಡವಾಡಿ ಚಂದ್ರಶೇಖರ್,ಚಂದ್ರಶೇಖರ್ ಗೌಡ, ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಚಿಕ್ಕನಾಯಕನಹಳ್ಳಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರು.ಮಾಜಿ ಜಿ.ಪಂ, ತಾ.ಪಂ.ಸದಸ್ಯರು,ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಭಾಗವಹಿಸಿದ್ದರು.
ತುಮಕೂರು: ಕಲ್ಪತರು ನಾಡಿನಲ್ಲಿ ಮತ್ತೆ ಕೋವಿಡ್-19 ಆತಂಕ ಮತ್ತೆ ಹೆಚ್ಚಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ ಪಟ್ಟಿದೆ. ಈ ಸಂಬಂಧ ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ತುಮಕೂರಿನ ಸಿದ್ದಗಂಗಾ ಹಾಗೂ ವಾದೀರಾಜ್ ನರ್ಸಿಂಗ್ ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳ ಸ್ವಾಬನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ವಿದ್ಯಾರ್ಥಿಗಳನ್ನು ಕ್ವಾರೆಂಟೈನ್ ಮಾಡಲಾಗಿದೆ.
ಗುಬ್ಬಿ: ಕಾರ್ತಿಕ ಅಮಾವಾಸ್ಯೆ ಹಿನ್ನೆಲೆ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಮತ್ತು ಶ್ರೀ ಮಲ್ಲಿಕಾರ್ಜುನಸ್ವಾಮಿ ಪಾರ್ವತಮ್ಮನವರ ಹೂವಿನವಾಹನವನ್ನು ಡಿಸೆಂಬರ್ 4 ರ ರಾತ್ರಿ 10.30 ಕ್ಕೆ ಕೋವಿಡ್ ಮಾರ್ಗಸೂಚಿಯಂತೆ ಸರ್ಕಾರ ಆದೇಶ ಪ್ರಕಾರ ಎಲ್ಲಾ ಸಂಪ್ರದಾಯ ಆಚರಿಸಿ ನಡೆಸಲಾಗುವುದು ಎಂದು ತಹಸೀಲ್ದಾರ್ ಬಿ.ಆರತಿ ತಿಳಿಸಿದರು. ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಡಿಸೆಂಬರ್ 4 ರ ಶನಿವಾರ ರಾತ್ರಿ ಪುಷ್ಪ ಅಲಂಕೃತ ಹೂವಿನವಾಹನ ಆರಂಭಿಸಿ ಇಡೀ ರಾತ್ರಿ ರಾಜಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು. ಮಾರ್ಗ ಮಧ್ಯೆ ಅಲಂಕಾರಗೊಂಡ ಬಾಳೆ ಕಂದು ಕಡಿಯುವ ಮೂಲಕ ಸ್ವಾಮಿಯ ರಥ ಮುಂದೆ ಸಾಗಲಿದೆ. ಈ ವೇಳೆ ಭಕ್ತರು ಸಲ್ಲಿಸುವ ಪೂಜೆಗೆ ಅನುವು ಮಾಡಲಾಗುತ್ತದೆ. ಪಟಾಕಿ ಸಿಡಿಸಿ ವಾಯುಮಾಲಿನ್ಯ ಮಾಡದಂತೆ ಮನವಿ ಮಾಡಿದರು. ರಾತ್ರಿ ಪೂರ್ತಿ ನಡೆಯುವ ಉತ್ಸವ ಡಿಸೆಂಬರ್ 5 ರ ಬೆಳಿಗ್ಗೆ ನಸುಕಿನಲ್ಲಿ ಊರಿನ ಬಂಗ್ಲೋಮಠ…
ತಿಪಟೂರು: ಹಾಸ್ಯ ಚಕ್ರವರ್ತಿ ಟಿ.ಆರ್.ನರಸಿಂಹರಾಜು ಅವರ ಹುಟ್ಟುರಾದ ತಿಪಟೂರಿನಲ್ಲಿ ಅವರ ಸ್ಮರಣಾರ್ಥ ನಿರ್ಮಾಣವಾಗುತ್ತಿರುವ ಸ್ಮಾರಕ ಭವನದ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ದಶಕಗಳು ಕಳೆದರೂ ಪೂರ್ಣಗೊಂಡಿಲ್ಲ. 1923 ಜುಲೈ 24ರಂದು ಜನಿಸಿದ್ದ ನರಸಿಂಹರಾಜು ಸುಮಾರು 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಬೆಳ್ಳಿತೆರೆಯ ಜೊತೆಗೆ ರಂಗಭೂಮಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಚಲನಚಿತ್ರ ನಿರ್ಮಾಣದಲ್ಲಿಯೂ ತೊಡಗಿದ್ದರು. ತಮ್ಮ 56ನೇ ವಯಸ್ಸಿನಲ್ಲಿ ನಿಧನರಾದರು. ನರಸಿಂಹರಾಜು ಸ್ಮರಣಾರ್ಥ ವಿವಿಧ ಕಲಾವಿದರಿಗೆ ಅವರ ಕಲೆ ಪ್ರದರ್ಶನಕ್ಕೆ ಸಹಕಾರಿಯಾಗಲು ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮ ನಡೆಸಲು ಅನುಕೂಲವಾಗಲೆಂದು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿ ದಶಕಗಳೇ ಕಳೆದಿವೆ. ಆದರೆ ಕಾಮಗಾರಿ ಇನ್ನೂ ಪ್ರಗತಿಯಲ್ಲೇ ಇದ್ದು, ಸದ್ಯದಲ್ಲಿ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. 2011-12ನೇ ಸಾಲಿನಲ್ಲಿ 5.2 ಕೋಟಿ ವೆಚ್ಚದಲ್ಲಿ 680 ಜನ ಕುಳಿತುಕೊಳ್ಳಲು ಅನುಕೂಲವಾಗುವಂತಹ ಬೃಹತ್ ಸಭಾಂಗಣ ನಿರ್ಮಾಣ ಮಾಡುವ ಹೊಣೆಯನ್ನು ತುಮಕೂರಿನ ನಿರ್ಮಿತಿ ಕೇಂದ್ರಕ್ಕೆ ಸರ್ಕಾರ ನೀಡಿತ್ತು. ಕಾಮಗಾರಿ ಪ್ರಾರಂಭಗೊಂಡ ಮರುವರ್ಷವೇ ವಿಧಾನಸಭಾ ಚುನಾವಣೆ ಬಂದ ಹಿನ್ನೆಲೆಯಲ್ಲಿ ಕಾಮಗಾರಿ ಕುಂಠಿತವಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ…











