ತುಮಕೂರು : ಸಾರ್ವಜನಿಕವಾಗಿ ಕಂಡುಬರುವ ಅನಾಥ ಮಗುವನ್ನು ಕದ್ದು ಮುಚ್ಚಿ ಸಾಕುವವರಿಗೆ ಕಾನೂನಿನ ಮಾರ್ಗದರ್ಶನ ನೀಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿಂದು ಜರುಗಿದ ಮಕ್ಕಳ ಸಹಾಯವಾಣಿಯ(CAB-child Advisory Board) ಹಾಗೂ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ, ಸಾರ್ವಜನಿಕವಾಗಿ ಕಂಡುಬರುವ ಅನಾಥ ಮಕ್ಕಳನ್ನು ಕೆಲವು ಪೋಷಕರು ಕಾನೂನಿನ ಕಣ್ತಪ್ಪಿಸಿ ಪೋಷಿಸುತ್ತಿದ್ದಾರೆ. ಇಂಥವರಿಗೆ ಸಲಹೆ ನೀಡಿ ಕಾನೂನಾತ್ಮಕವಾಗಿ ಸಾಕಲು ಮಾರ್ಗದರ್ಶನ ನೀಡಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ತಡೆಹಿಡಿಯಲಾದ ಬಾಲ್ಯವಿವಾಹ ಪ್ರಕರಣದಲ್ಲಿ ಮಕ್ಕಳು ಹಾಗೂ ಪೋಷಕರು ಮನೆ ಬಿಟ್ಟು ಹೋಗುವ ಸಾಧ್ಯತೆ ಇರುತ್ತದೆ. ಪ್ರಕರಣದ ಪರಿಶೀಲನೆಗಾಗಿ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯನ್ನು ಬಿಟ್ಟು ಹೋಗಿದ್ದರೆ ಎಲ್ಲಿಗೆ ಹೋಗಿದ್ದಾರೋ ಆ ಗ್ರಾಮಕ್ಕೆ ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಮಾಹಿತಿ ಪಡೆದು…
Author: News Desk Benkiyabale
ಮಧುಗಿರಿ: ತಾಲೂಕಿನ ಮೈದನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಲೈಂಗಿಕ ಕಿರುಕುಳ ಒಳಪಟ್ಟಿದ್ದ ಅಪ್ರಾಪ್ತ ಬಾಲಕಿಗೆ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಗುರುವಾರದಂದು ಮಗುವಿನ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು, ಕೊಡಿಗೇನಹಳ್ಳಿ ಹೋಬಳಿಯ ಮೈದನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಬಂಧಿಸಿದ್ದಾರೆ, ಆರೋಪಿಗೆ ನ್ಯಾಯಲಯದಲ್ಲಿ ತಕ್ಕ ಶಿಕ್ಷೆಯಾಗುವಂತೆ ನಮ್ಮ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ವಹಿಸುತ್ತಾರೆ. ರಾಜ್ಯದಲ್ಲಿ 1 ಸಾವಿರ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಅನುದಾನ ದೊರೆಯಲಿದೆ ಎಂದರು. ಗ್ರಾಮಾಂತರ ಪ್ರದೇಶದಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಈಗಾಗಲೇ ಕ್ರಿಯಾ ಯೋಜನೆ ಸಿದ್ದವಾಗಿದ್ದು ಪಟ್ಟಣ ಪ್ರದೇಶಗಳಲ್ಲಿ ನಿವೇಶನಗಳ ಕೊರೆತೆಯಿಂದ ತಡವಾಗುತ್ತಿದೆ ಆದರೂ ಸ್ಥಳಿಯ…
ಹುಳಿಯಾರು: ಎಸಿಬಿಯ ಸಾರ್ವಜನಿಕ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂಧಿಸದೆ ಪೆಂಡಿಗ್ ಇಟ್ಟರೆ ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಎಸಿಬಿ ಅಧಿಕಾರಿ ಪ್ರವೀಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ವತಿಯಿಂದ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಅನೇಕ ಕಡೆ ಎಸಿಬಿಯಿಂದ ಸಾರ್ವಜನಿಕ ಸಭೆ ನಡೆಸಿದ್ದು ಈ ಸಭೆಯಲ್ಲಿ ಬಂದಿದ್ದ ಅರ್ಜಿಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಪೆಂಡಿಗ್ ಇಟ್ಟಿದ್ದಾರೆ. ಎಸಿಬಿಗೆ ಕೊಟ್ಟರೂ ಸಮಸ್ಯೆ ಬಗೆಹರಿಯದಿದ್ದರೆ ಸಾರ್ವಜನಿಕವಾಗಿ ಇಲಾಖೆ ನಂಬಿಕೆ ಕಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜನರು ಎಸಿಬಿ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಿರ್ಲಕ್ಷ್ಯಿಸಿರುವ ಅಧಿಕಾರಿಗಳ ಮೇಲೆ ಕ್ರಮ ಅನಿವಾರ್ಯ ಎಂದರು. …
ತುಮಕೂರು : ರಾಷ್ಟ್ರೀಯ ಹೆದ್ಧಾರಿ 2006 ರಸ್ತೆಗೆ ಹೊಂದಿಕೊಂಡಿರುವ ಮಲ್ಲಸಂದ್ರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣ ಮಾಡಲು ಆಡಳಿತಾಧಿಕಾರಿ ಸ್ಥಳ ಪರಿಶೀಲನೆ ನೆಡೆಸಿದರು. ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ಧಾರಿ ಅಗಲೀಕರಣದಿಂದ ಗ್ರಾಮ ಪಂಚಾಯಿತಿತೆರವಾಗುತ್ತಿರುವ ಹಿನ್ನೇಲೆಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸ್ಥಳಾಂತರಿಸಲಾಗುತ್ತಿದ್ದು,ನೂತನ ಕಟ್ಟಡವನ್ನು ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಪಂಚಾಯಿತಿ ಅಭಿವೃದ್ಧಿ ಅಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಮಾತನಾಡಿ,ಗ್ರಾಮ ಪಂಚಾಯಿತಿಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮಾಡುವ ಹಿನ್ನೇಲೆಯಲ್ಲಿ ಪಂಚಾಯಿತಿಯನ್ನು ಸ್ಥಳಾಂತರ ಮಾಡಬೇಕಿದೆ. ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗ ಸರ್ವೆ ನಂಬರ್ 34 ರಲ್ಲಿ 1.5 ಎಕರೆ ಜಾಗವಿದ್ದು,ಈ ಜಾಗದಲ್ಲಿ ಸುಸರ್ಜಿತವಾಗಿ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಸುಮಾರು 60-70 ಲಕ್ಷಗಳಲ್ಲಿ ನಿರ್ಮಾಣ ಮಾಡಲಾಗುವುದು.ಶೀಘ್ರವೇ ಕಾಮಗಾರಿ ಆರಂಭ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ…
ತುಮಕೂರು : ಪೊಕ್ಸೊ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣಗಳ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಪೊಕ್ಸೊ ಪ್ರಕರಣಗಳ ಪರಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪೊಕ್ಸೋ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದಕ್ಕೆ ವಿಳಂಬವಾಗಬಾರದು. ಆರೋಪಿತರಿಗೆ ಶಿಕ್ಷೆಯಾದರೆ ಬೇರೆಯವರಿಗೆ ಭಯ ಉಂಟಾಗುತ್ತದೆ. ಪ್ರಕರಣದಲ್ಲಿ ತಪ್ಪಿತಸ್ಥರು ಖುಲಾಸೆಯಾಗದಂತೆ ಸಂಬಂಧಪಟ್ಟ ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ಪೊಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳನ್ನು ಗಮನಿಸಿದರೆ 15 ವರ್ಷದ ಮೇಲ್ಪಟ್ಟ ಮಕ್ಕಳ ಪ್ರಕರಣಗಳು ಹೆಚ್ಚಾಗಿವೆ. ಹೈಸ್ಕೂಲ್ ಮತ್ತು ಕಾಲೇಜಿನಲ್ಲಿ ಓದುತ್ತಿರುವವರು ಪ್ರೀತಿಸಿ ಓಡಿಹೋದವರು, ಪ್ರೀತಿಸಿ ಮಧುವೆಯಾದವರೂ ಇದ್ದಾರೆ. ಇಂತಹ ಪ್ರಕರಣಗಳನ್ನು ಕಿಡ್ನಾಪ್ ಪ್ರಕರಣಗಳೆಂದು ಪರಿಗಣಿಸಿ ಪೊಕ್ಸೊ ಕಾಯ್ದೆ ಹಾಕಲಾಗಿದೆ ಎಂದರು. …
ಮಧುಗಿರಿ: ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನಾಗಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದ ನಂತರ ತುಮಕೂರು ಜಿಲ್ಲೆಯ 4 ತಾಲೂಕುಗಳನ್ನು ವಿಭಜಿಸಿ ಮಧುಗಿರಿಯನ್ನು ಜಿಲ್ಲೆಯನ್ನಾಗಿಸಬೇಕೆಂಬ ಕೂಗು ಮತ್ತೆ ಕೇಳಿ ಬರುತ್ತಿದೆ. 2013 ರ ವಿಧಾನಸಭಾ ಚುನಾವಣೆಯ ಸಮಯದಲ್ಲೇ ಕೆ.ಎನ್.ರಾಜಣ್ಣನವರು ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಾಗ ಅದನ್ನು ಯಾರೂ ಸಹ ನಂಬಿರಲಿಲ್ಲ. ಅದಕ್ಕೆ ಕಾರಣಗಳೂ ಇದ್ದವು… ಏನಿದೆ ಮಧುಗಿರಿಯಲ್ಲಿ ಹದಗೆಟ್ಟ ಮತ್ತು ದೂಳು ತುಂಬಿದ ತಾಲೂಕಿನ ರಸ್ತೆಗಳು, ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದ ಹಳ್ಳಿಗಳು, ಪಟ್ಟಣದ ಬಹುತೇಕ ನೀರಿನ ಟ್ಯಾಂಕುಗಳ ಮುಂದೆ ಪ್ರದರ್ಶನ ನೀಡುತ್ತಿದ್ದ ಖಾಲಿ ಕೊಡಗಳು. ಪಟ್ಟಣದ ತುಂಬೆಲ್ಲಾ ನೀರು ತುಂಬಿಕೊಂಡು ಓಡಾಡುತ್ತಿದ್ದ ಟ್ಯಾಂಕರ್ಗಳು. ಇಷ್ಟು ಬಿಟ್ಟರೆ ಇಲ್ಲಿ ಏನೂ ಇಲ್ಲ. ನಿಜ ಹೇಳಬೇಕೆಂದರೆ ವಾಸಕ್ಕೆ ಮಧುಗಿರಿ ಯೋಗ್ಯವೇ ಅಲ್ಲ ಇನ್ನು ಜಿಲ್ಲಾ ಕೇಂದ್ರದ ವಿಷಯ ಆಗದ ಮಾತು ಬಿಡಿ ಎಂದೇ ಬಹಳಷ್ಟು ಜನ…
ಮಧುಗಿರಿ: ನರೇಗಾ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಸಾಮಾಜಿಕ ಕಾರ್ಯಕರ್ತನ ದೂರಿಗೆ ಜಿಪಂ ಒಂಬುಡ್ಸ್ ಮನ್ ಸಿಂಗನಹಳ್ಳಿ ಗ್ರಾಮ ಪಂಚಾಯಿತಿಯ ವೆಂಗಮ್ಮನಹಳ್ಳಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಆರ್ ಟಿಐ ಕಾರ್ಯಕರ್ತ ಗಂಗಾಧರ್ ನೀಡಿರುವ ದೂರಿನಲ್ಲಿ ಹಳೆಯ ಬಾವಿ ಮತ್ತು ಹಳೆಯ ದನದ ಕೊಟ್ಟಿಗೆಗಳನ್ನು ತೋರಿಸಿ ನರೇಗಾ ಯೋಜನೆಯಡಿ ಕಾಮಗಾರಿಗೆ ಮುನ್ನವೇ ಹಣ ಡ್ರಾ ಮಾಡಲಾಗಿದ್ದು ಕೃಷಿ ಹೊಂಡ ನಿರ್ಮಾಣವನ್ನು ಹಳೆಯ ಬಾವಿಯನ್ನು ತೋರಿಸಲಾಗಿದೆ ,ಹಳೆಯ ಗುಡಿಸಲಿನ ಶೀಟಿನ ಮನೆ ಗಳನ್ನು ತೋರಿಸಿ ದನದ ಕೊಟ್ಟಿಗೆ ಎಂದು ಹೇಳಿ ಹಳೆ ಶೆಡ್ ಗಳನ್ನು ತೋರಿಸಿ ಬಿಲ್ ಪಡೆಯಲಾಗಿದೆ ಎಂದು ಆರೋಪಿಸಿದ್ದರು . ಸರ್ವೆ ನಂಬರ್ 5/6ರಲ್ಲಿ ಹಳೆಬಾವಿ ಯನ್ನು ಕೃಷಿ ಹೊಂಡ ಎನ್ನಲಾಗಿದ್ದು 13/4 ರಲ್ಲಿ ನೂತನವಾಗಿ ಕೃಷಿಹೊಂಡ ನಿರ್ಮಿಸಿ ಕೊಡಲಾಗಿದೆ ಮತ್ತು ದನದ ಕೊಟ್ಟಿಗೆ ನಿರ್ಮಾಣ ಸ್ಥಳಗಳಿಗೆ ಓಂಬುಡ್ಸ್ ಮನ್ ವೆಂಕಟೇಶ್ವರ…
ತುಮಕೂರು : ನಗರಪಾಲಿಕೆ ಗೆ ನೇಮಕಗೊಂಡಿರುವ ನಾಮಿನಿ ಸದಸ್ಯರು ತಮ್ಮ ಇತಿಮಿತಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಿ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ. ನಗರದ ವಿಘ್ನೇಶ್ವರ ಕಂಪರ್ಟ್ನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ನಗರಪಾಲಿಕೆ ಯ ನೂತನ ನ್ಯಾಮಿನಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು, ನಗರದಲ್ಲಿ ಕಸವಿಲೇವಾರಿ , ರಾಜಗಾಲುವೆಗಳ ಒತ್ತುವರಿ ತೆರವು,ಈ ಹಿಂದೆ ನಡೆದಿರುವ ಅಕ್ರಮ ಖಾತೆಗಳ ಕುರಿತು ಮಾಹಿತಿ ಕಲೆ ಹಾಕಿ, ಜನರ ಮುಂದಿಡುವ ಕೆಲಸವನ್ನು ನಾಮಿನಿ ಸದಸ್ಯರು ಅದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕೆಂದರು. ಕೇಂದ್ರ ಸರಕಾರ ಇಡೀ ದೇಶದಲ್ಲಿಯೇ ವಿದ್ಯುತ್ ಉಳಿತಾಯದ ಹಿನ್ನೆಲೆಯಲ್ಲಿ ಬೀದಿ ದೀಪಗಳಿಗೆ ಎಲ್.ಇ.ಡಿ ಬಲ್ಪ್ ಅಳವಡಿಕೆ ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಅನುದಾನ ದಲ್ಲಿ ಕಂಭ ಮತ್ತು ಲೈನ್ ಎಳೆದಿರುವ ಕಡೆ ಎಲ್ ಇ ಡಿ ಬಲ್ಪ್ ಅಳವಡಿಸಲು ಟೆಂಡರ್ ನೀಡಿದೆ.…
ತುಮಕೂರು: ಪುರುಷ ಸಂತಾನನಿರೋಧ ಶಸ್ತ್ರಚಿಕಿತ್ಸೆಯು ಸರಳ ಹಾಗೂ ಸುರಕ್ಷಿತ ವಿಧಾನವಾಗಿದ್ದು, ಯಾವುದೇ ಭಯವಿಲ್ಲದೆ ಪುರುಷರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದೆಂದು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಹಿಮ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆಯ ಸಹಯೋಗದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿಂದು ಹಮ್ಮಿಕೊಂಡಿದ್ದ ಎನ್ಎಸ್ವಿ(ನೋಸ್ಕಾಲ್ಪೆಲ್ ವ್ಯಾಸೆಕ್ಟಮಿ) ಪಾಕ್ಷಿಕ ಆಚರಣೆ(ನವೆಂಬರ್ 21ರಿಂದ ಡಿಸೆಂಬರ್ 4) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯು ಗರ್ಭಧಾರಣೆ, ಹೆರಿಗೆ, ಬಾಣಂತನಗಳಿಂದ ಈಗಾಗಲೇ ನೋವು ಅನುಭವಿಸಿರುತ್ತಾಳೆ. ಮತ್ತೊಮ್ಮೆ ಉದರದರ್ಶಕ/ಟುಬೆಕ್ಟಮಿ ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ತಪ್ಪಿಸಲು ವ್ಯಾಸೆಕ್ಟಮಿ ಸುಲಭೋಪಾಯವಾಗಿದೆ ಎಂದರು. ಕುಟುಂಬ ಯೋಜನೆಗಾಗಿ ಮಹಿಳೆಯರು ಒಳಗಾಗುವ ಟುಬೆಕ್ಟಮಿ ಶಸ್ತ್ರಚಿಕಿತ್ಸೆಯಲ್ಲಿ ಉದರವನ್ನು ಗಾಯಗೊಳಿಸಿ ಹೊಲಿಗೆ ಹಾಕಲೇಬೇಕಾಗುತ್ತದೆ. ಆದರೆ ಪುರುಷರು ಒಳಗಾಗುವ ವ್ಯಾಸಕ್ಟಮಿಯಲ್ಲಿ ಗಾಯವಿಲ್ಲದ ಹೊಲಿಗೆ ಇಲ್ಲದ ಸಂತಾನನಿರೋಧ ಶಸ್ತ್ರಚಿಕಿತ್ಸೆಯನ್ನು ಮಾಡಬಹುದಾಗಿದೆ. ಅರಿವಿನ ಕೊರತೆ ಇರುವುದರಿಂದ ಈ ಶಸ್ತ್ರ ಚಿಕಿತ್ಸೆಗೆ ಒಳಗಾಗಲು ಪುರುಷರು ಮುಂದೆ ಬರುತ್ತಿಲ್ಲ. ಸಂತಾನ ನಿಯಂತ್ರಿಸಲು ಪುರುಷರಿಗೆ ಮಾಡುವ ಎನ್ಎಸ್ವಿ…
ಕೊರಟಗೆರೆ: ಬೆಂಗಳೂರಿನ ರಿಯಲ್ ಎಸ್ಟೇಟ್ ಮಾಫೀಯಾದ ಏಜೆಂಟ್ಗಳಿಗೆ ಕೊರಟಗೆರೆ ಕ್ಷೇತ್ರದ ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿವರ್ಗ ಹಣದ ದುರಾಸೆಯಿಂದ ಸಹಕಾರದ ಜೊತೆ ಪರೋಕ್ಷವಾಗಿ ಬೆಂಬಲಿಸಿ ಸ್ಥಳೀಯ ರೈತರ ಮೇಲೆ ವಿನಾಕಾರಣ ದಬ್ಬಾಳಿಕೆ ಮಾಡುತ್ತೀದ್ದಾರೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಆನಂದಪಟೇಲ್ ಆರೋಪ ಮಾಡಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ಅಕ್ಕಾಜಿಹಳ್ಳಿ ಗ್ರಾಮದ ದಾಳಿನರಸಿಂಹ ಮತ್ತು ಕಾಮಯ್ಯ ಎಂಬ ರೈತರ ಸರ್ವೆ ನಂ.33ರ ಜಮೀನಿಗೆ ಕೊರಟಗೆರೆ ಘಟಕದ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಜೊತೆ ಸೋಮವಾರ ಬೇಟಿ ನೀಡಿದ ವೇಳೆ ಮಾತನಾಡಿದರು. 30ವರ್ಷದಿಂದ ಉಳು ಮೆ ಮಾಡು ತ್ತಿರುವ ಸ್ಥಳೀ ಯ ರೈತರಿಗೆ ಅನ್ಯಾಯ ಮಾಡಿ ಬೆಂಗಳೂರಿನ ಒಂದೇ ಕುಟುಂಬದ 4ಜನ ರೀಯಲ್ ಎಸ್ಟೇಟ್ ಉದ್ಯಮಿಗಳಿಗೆ ಕೊರಟಗೆರೆ ಆಡಳಿತ 8ಎಕರೇ ಜಮೀನು ಮಾರಾಟ ಮಾಡಿದೆ. ಜಮೀನಿನ ದಾಖಲೆ ಕೇಳಿದರೇ ಹಾರಿಕೆ ಉತ್ತರ ನೀಡುತ್ತಾರೆ. ನಕಲಿ ಸಾಗುವಳಿ…