Author: News Desk Benkiyabale

ಹುಳಿಯಾರು :       ಈ ಭಾಗದ ಜನರ ದಶಕಗಳ ಕಾಲದ ಕನಸು ನನಸಾಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿಯಲಿದ್ದು, ಈ ಮೂಲಕ ಸಂಘ-ಸಂಸ್ಥೆಗಳು ಸೇರಿದಂತೆ ಅನೇಕರ ಹೋರಾಟದ ಫಲ ದಕ್ಕಲು ಕ್ಷಣಗಣನೆ ಆರಂಭವಾಗಿದೆ.       ದಶಕಗಳಿಂದಲೂ ಮಳೆಯಿಲ್ಲದೆ ಬರಪೀಡಿತ ಪ್ರದೇಶವಾಗಿರುವ ಹುಳಿಯಾರಿನಲ್ಲಿ ನೀರಿನ ಸಮಸ್ಯೆ ತೀವ್ರ ಉಲ್ಬಣವಾಗಿದ್ದು ಇಂತಹ ಸಮಯದಲ್ಲಿ ಹೇಮಾವತಿ ನೀರು ಹರಿದು ಜನರ ಸಂಕಷ್ಟಕ್ಕೆ ಇತಿಶ್ರೀ ಹಾಡಲಿರುವುದು ಇಲ್ಲಿನ ಜನಗಳ ಸಂತಸಕ್ಕೆ ಕಾರಣವಾಗಲಿದೆ.       ತಾಲೂಕಿನ 24 ಕೆರೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನೀರು ಹರಿಸಲು ಅಲೊಕೇಶನ್ ಸದ್ಯ ಶೆಟ್ಟಿಕೆರೆ ಕೆರೆಗೆ ನೀರು ತುಂಬುತ್ತಿದೆ. ಅಲ್ಲಿಂದ ಜೋಡಿ ತಿರುಮಲಾಪುರದ ಕೆರೆಗೆ ನೀರು ಬರಲಿದ್ದು, ಅದು ತುಂಬಿದ ನಂತರ ತಿರುಮಲಾಪುರದ ಕೆರೆ ಕೋಡಿಯಿಂದ ಒಣ ಕಾಲುವೆ ಮೂಲಕ ಹುಳಿಯಾರು ಕೆರೆಗೆ ನೀರು ತಲುಪಲಿದೆ.       ನಾನಾ ಕಾರಣಗಳಿಂದಾಗಿ ವಿಳಂಬಗೊಂಡಿದ್ದ ಹೇಮಾವತಿ ನಾಳೆಯ…

Read More

ತುಮಕೂರು :       ಚುನಾವಣಾ ಪೂರ್ವದಲ್ಲಿ ಪದವೀಧರರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗುತ್ತೇನೆ ಎಂದು ಆಗ್ನೇಯ ಪದವೀಧರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಇಂದಿಲ್ಲಿ ತಿಳಿಸಿದರು.       ನಿರುದ್ಯೋಗಿ ಪದವೀಧರರು, ಶಿಕ್ಷಕರು ಸೇರಿದಂತೆ ಈ ಕ್ಷೇತ್ರದ ಪದವೀಧರ ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿರುತ್ತೇನೆ. ಇಂದಿನಿಂದಲೇ ಪದವೀಧರರ ಸಮಸ್ಯೆಗಳ ನಿವಾರಣೆಗೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುವುದಾಗಿ ಅವರು ಹೇಳಿದರು.      ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನೆ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ 7134 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ನನ್ನ ಈ ಗೆಲುವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳೇ ಪ್ರಮುಖ ಕಾರಣ ಎಂದರು.       ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ…

Read More

ಹುಳಿಯಾರು:       ಹವಾಮಾನ ವೈಪರೀತ್ಯ ಪರಿಸ್ಥಿತಿಗಳಾದ ಪ್ರವಾಹ ಅನಾವೃಷ್ಟಿ, ಮಿಂಚು, ಭಾರಿ ಮಳೆ, ಶೀತ ಅಲೆಗಳು ಮತ್ತು ಶಾಖದ ಅಲೆಗಳು ಮಿಂಚಿನ ಹೊಡೆತಗಳು ಈ ಎಲ್ಲಾ ವೈಪರೀತ್ಯಗಳಿಂದಾಗಿ ಭಾರತದಲ್ಲಿ 1,562 ಜನರು ಮೃತಪಟ್ಟಿದ್ದಾರೆ. ಅದರಲ್ಲಿ 75 ಜನರು ಮಿಂಚಿನ ಹೊಡೆತಕ್ಕೆ ಮೃತಪಟ್ಟಿದ್ದಾರೆ. (2019 ರ ಕ್ಲೈಮೆಟ್ ಆಫ್ ಇಂಡಿಯಾ ವರದಿಯ ಪ್ರಕಾರ) ಹವಾಮಾನ ಬದಲಾವಣೆಯು ಇಂದಿನ ಅತಿದೊಡ್ಡ ಸಮಸ್ಯೆಯಾಗಿದೆ ಮತ್ತು ಇದು ಮಾನವ ಕುಲದ ಮೂಲಭೂತ ಉಳಿವನ್ನು ಪ್ರಶ್ನಿಸುತ್ತದೆ. ಬರ ಮತ್ತು ಪ್ರವಾಹವು ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಮತ್ತು ನಮ್ಮ ಆಹಾರ ಮತ್ತು ನೀರು ಸರಬರಾಜಿನ ಮೇಲೆ ಹವಾಮಾನ ಬದಲಾವಣೆಯನ್ನು ಪರಿಹರಿಸಲು ಮತ್ತು ಅಧ್ಯಯನ ಮಾಡಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ವಿಶ್ವದ ಅತ್ಯುತ್ತಮ ತಂತ್ರಜ್ಞಾನಗಳು ಸಹ ಪ್ರಯೋಜನಕಾರಿಯಾಗುವುದಿಲ್ಲ.       ಈ ನಿಟ್ಟಿನಲ್ಲಿ ಭಾರತ ಸರ್ಕಾರದ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ ಮತ್ತು ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ “ದಾಮಿನಿ” ಎಂಬ ಮೊಬೈಲ್ ಆಧಾರಿತ ಅಪ್ಲಿಕೇಶನ್…

Read More

ತುಮಕೂರು :        ತುಮಕೂರು ಜಿಲ್ಲಾ ಅಸಂಘಟಿತ ಕಾರ್ಮಿಕರ ಹೋರಟ ಸಮಿತಿ ಸಿ.ಐ.ಟಿಯು ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದರು ರಾಷ್ಟ್ರೀಯ ಬೇಡಿಕೆ ದಿನ ಹಾಗೂ ಮುಷ್ಕರದ ನೋಟೀಸ್ ನೀಡುವ ಚಳುವಳಿ ಅಂಗವಾಗಿ ಪ್ರತಿಭಟಿಸಲಾಯಿತು.       ಚಳುವಳಿಯನ್ನು ಉದ್ದೇಶಿಸಿ ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಮಾತಾನಾಡಿ ಹೆಚ್ಚಿನ ಶ್ರೀಮಂತರು ಸರ್ಕಾರಕ್ಕೆ ತೆರಿಗೆ ವಂಚಿಸಲು ತಂತ್ರ ರೂಪಿಸುತ್ತಾರೆ ಆದರೆ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡಪಾಯಿ ಕಾರ್ಮಿಕರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರತಿ ಕ್ಷಣವು ಸರ್ಕಾರಕ್ಕೆ ತೆರಿಗೆಯನ್ನು ತುಂಬುತ್ತಾರೆ. ಆದರೆ ಇಂತಹ ಕಾರ್ಮಿಕರನ್ನು ಗುತ್ತಿಗೆ ಕಾರ್ಮಿಕ ಕಾಯ್ದೆಯಡಿ ದುಡಿಸಿ ಅವರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡದೆ ವಂಚಿಸಲಾಗುತ್ತಿದೆ. ಆದ್ದರಿಂದ ಕಾರ್ಮಿಕ ವಿರೋಧಿ ಗುತ್ತಿಪದ್ದತಿ ರದ್ದು ಮಾಡಿ ಸಾಮಾಜಿಕ ಭದ್ರತಾ ಯೋಜನೆ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.       ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ಸಿ.ಐ.ಟಿಯುನ ಉಪಾಧ್ಯಕ್ಷ ಬಿ.ಉಮೇಶ್ ಮಾತನಾಡಿ ಕೋವಿಡ್-19ರ ಸೊಂಕಿನ ದಾಳಿಯಿಂದ ಅಸಂಘಟಿತರ ಬದುಕು…

Read More

ಮಧುಗಿರಿ:         ಕೊರೊನಾ ಮಹಾಮಾರಿಯ ಹೊಡೆತಕ್ಕೆ ರಾಟೆ ಆಡಿಸುವವರ ಬದುಕು ಅಕ್ಷರಸಃ ನಲುಗಿ ಹೋಗಿದ್ದು, ಇತ್ತ ರಾಟೆಯೂ ಆರಂಭವಾಗದೆ, ಅತ್ತ ತಮ್ಮ ಸ್ವಂತ ಊರುಗಳಿಗೂ ಹೋಗಲು ಸಾಧ್ಯವಾಗದೆ ಸುಮಾರು 35 ಕಾರ್ಮಿಕರು 8 ಕ್ಕೂ ಹೆಚ್ಚು ಮಕ್ಕಳೊಂದಿಗೆ ರಾಟೆ ಸ್ಥಳದಲ್ಲೇ ಷೆಡ್ ನಿರ್ಮಿಸಿಕೊಂಡು ಜೀವನ ನಿರ್ವಹಣೆಗೆ ತತ್ತರಿಸುತ್ತಿದ್ದಾರೆ. ಜಾತ್ರೆಗೆಂದು ಬಂದವರ ಬದುಕು ತತ್ತರ:        ಪ್ರತೀ ವರ್ಷ ನಡೆಯುವ ಶ್ರೀ ದಂಡಿನ ಮಾರಮ್ಮ ಜಾತ್ರೆಯಲ್ಲಿ ರಾಟೆಯೇ ಭಕ್ತಾದಿಗಳಿಗೆ ಬಹು ದೊಡ್ಡ ಮನೋರಂಜನೆ. ಈ ಬಾರಿಯೂ ಎಂದಿನಂತೆ ಮಾರ್ಚ್ ತಿಂಗಳಲ್ಲಿ ಆರಂಭವಾದ ಜಾತ್ರೆಯಲ್ಲಿ ರಾಟೆ ಆಡಿಸಿದಲ್ಲಿ ನಾಲ್ಕು ಕಾಸು ನೋಡಬಹುದು ಎಂದು ರಾಜ್ಯದ ವಿವಿಧ ಊರುಗಳಿಂದ ಬಂದಿರುವ ಸುಮಾರು 35 ಕಾರ್ಮಿಕರಿಗೆ ಈ ಬಾರಿ ಕರೋನಾ ಬಹು ದೊಡ್ಡ ಹೊಡೆತ ನೀಡಿದ್ದು, ಜಾತ್ರೆ ಆರಂಭವಾದ 3 ದಿನಗಳಿಗೇ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ವಿಧಿಯಿಲ್ಲದೇ ರಾಟೆ ನಿಲ್ಲಿಸಬೇಕಾಯಿತು. ಇದರಿಂದ ಕಾರ್ಮಿಕರ ಬದುಕು ಅಕ್ಷರಶಃ ನಲುಗಿ ಹೋಗಿದ್ದು, ಸುಮಾರು 8…

Read More

ಕೊರಟಗೆರೆ :        ಕೊರೊನ ಮಹಾಮಾರಿ ಮೊದಲು ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಂಡಿತ್ತು. ಈಗ ಗ್ರಾಮೀಣ ಭಾಗಕ್ಕೂ ಹರಡಿದೆ. ಹಳ್ಳಿಗಳಲ್ಲಿ ಸಾರ್ವಜನಿಕರು ಮಾಸ್ಕ್‍ಗಳನ್ನ ಧರಿಸದೇ ನಿರ್ಲಕ್ಷ್ಯ ಮಾಡುತ್ತಿರುವ ಕಾರಣಕ್ಕೆ ರೋಗ ಹರಡುತ್ತಿದೆ ಎಂದು ಹೊಳವನಹಳ್ಳಿ ಆಸ್ಪತ್ರೆಯ ವೈದ್ಯಡಾ.ಗಣೇಶ್ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಗ್ರಾಮದ ನಾಡಕಚೇರಿಗೆ ಬರುವ ಸಾರ್ವಜನಿಕರಿಗೆ ಕರೋನದ ಬಗ್ಗೆ ಜಾಗೃತಿ ಮೂಡಿಸಿ ಹಾಗೂ ತಪಾಸಣೆ ನಡೆಸಿ ಮಾತನಾಡಿದರು.       ಗ್ರಾಮೀಣ ಭಾಗದ ಮುಗ್ಧ ಜನರಿಗೆ ಕರೋನದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಪಂ, ಆಶಾ ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳ ಜತೆ ಅನೇಕ ಇಲಾಖೆಗಳು ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ನಿರ್ಲಕ್ಷ ಮಾಡದೆ ಪ್ರತಿಯೊಬ್ಬರು ಮಾಸ್ಕ್, ಸ್ಯಾನಿಟೈಸರ್ ಹಾಗೂ ಒಂದು ಗಂಟೆಗೊಮ್ಮೆ ಕೈ ತೊಳೆದು ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು ಎಂದರು.       ಹೊಳವನಹಳ್ಳಿ ನಾಡಕಚೇರಿಗೆ ಬರುವ ಸುಮಾರು 80 ಜನರಿಗೆ ತಪಾಸಣೆ ಮಾಡಲಾಗಿದೆ. ಈ…

Read More

ತುಮಕೂರು :        ಸಿರಾ ಉಪಚುನಾವಣೆಯ ಸಮರ ಅಂತ್ಯಗೊಂಡಿದ್ದು, ಅತಿರಥಮಹಾರಥರೆಲ್ಲಾ ರಾಜಕೀಯವಾಗಿ ಭೂಗತವಾಗಿದ್ದಾರೆ. ನೆಲೆಯೇ ಇಲ್ಲದಿದ್ದ ಬಿಜೆಪಿ ಶಿರಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರುವ ಮೂಲಕ ಕೇಸರಿ ಪತಾಕೆ ಹಾರಿಸಿದ್ದೇವೆ ಎಂಬ ಹೆಮ್ಮೆಯಲ್ಲಿದೆ.       ಈ ಕ್ಷೇತ್ರದಲ್ಲಿ 10 ನೇ ಬಾರಿ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ರಾಜಕೀಯ ಚತುರತೆಯುಳ್ಳವರು, ಬಹಳಷ್ಟು ವರ್ಷಗಳಿಂದ ಈ ಕ್ಷೇತ್ರದಲ್ಲಿ ಅಧಿಕಾರದ ಗದ್ದುಗೆ ಏರಿ ಸೋಲಿನ ರುಚಿ ಕಂಡು ತನ್ನ ಅಧಿಪತ್ಯದ ಹಿಡಿತ ಸಾಧಿಸಿದ್ದ ಹಿರಿಯ ಮುತ್ಸದ್ಧಿ ಟಿ.ಬಿ.ಜಯಚಂದ್ರ ಗೆಲುವಿನ ಸನಿಹದಲ್ಲಿದ್ದೇವೆ ಎಂಬ ಭ್ರಮೆಯಲ್ಲಿ ತೊಡಗಿದ್ದರು. ಆದರೆ, ಜಯಚಂದ್ರರವರ ಸೋಲು ಪೂರ್ವ ನಿಯೋಜಿತ ಎನ್ನುವ ರೀತಿಯಲ್ಲಿ ಕೆಲವು ಕಾಂಗ್ರೆಸ್ ನಾಯಕರ ವರ್ತನೆಗಳು ಕಂಡುಬಂದದ್ದು ಚುನಾವಣೆಯ ಹಿಂದೆಯೇ ಗೋಚರವಾಗಿತ್ತಾದರೂ ಇದನ್ನು ಯಾರು ಗಣನೆಗೆ ತೆಗೆದುಕೊಳ್ಳಲಿಲ್ಲ.       ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಮತ್ತು ಮುನ್ನಡೆಯಲ್ಲಿದ್ದ ಕೆಲವು ನಾಯಕರು ಆತ್ಮಸಾಕ್ಷಿಯಾಗಿ ಜಯಚಂದ್ರ ಗೆಲುವು ಕಾಂಗ್ರೆಸ್ ಪಕ್ಷದ ಗೆಲುವು ಎಂದು ಭಾವಿಸಿ ಚುನಾವಣೆಯನ್ನು…

Read More

 ತುಮಕೂರು:       ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.       ಇದಕ್ಕೂ ಮುನ್ನ ಬೆಳಿಗ್ಗೆ 7-30 ಗಂಟೆಗೆ ಚುನಾವಣೆ ವೀಕ್ಷಕರು ಹಾಗೂ ಅಭ್ಯರ್ಥಿಗಳು/ ರಾಜಕೀಯ ಪಕ್ಷಗಳ ಏಜೆಂಟರುಗಳ ಸಮಕ್ಷಮದಲ್ಲಿ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು.       ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿಂದು ನಡೆಯುವ ಚುನಾವಣಾ ಮತ ಎಣಿಕೆಯ ಅಂತಿಮ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಹಾಗೂ ಚುನಾವಣಾಧಿಕಾರಿ ಡಾ: ಕೆ. ನಂದಿನಿದೇವಿ ಪರಿಶೀಲಿಸಿದರು.       ಬೆಳಿಗ್ಗೆ 8 ಗಂಟೆಗೆ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, 8 ಗಂಟೆಗೆ ಅಂಚೆ ಮತಪತ್ರ ಹಾಗೂ ಸರ್ವೀಸ್ ವೋಟ್‍ಗಳ ಎಣಿಕೆ ಆರಂಭವಾಗಲಿದೆ. 8-30ರಿಂದ ಇವಿಎಂ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಮತ ಯಂತ್ರಗಳ(ಇವಿಎಂ)…

Read More

ಮಧುಗಿರಿ:      ನಡುರಾತ್ರಿ ಕೊಟ್ಟಿಗೆಗೆ ಬೆಂಕಿಬಿದ್ದು, 2 ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ತಾಲೂಕಿನ ವೀರಣ್ಣನ ತಾಂಡದಲ್ಲಿ ನಡೆದಿದ್ದು, ವಿಮೆ ಮಾಡಿಸದ ರೈತ ನಷ್ಟದಿಂದ ಕಂಗಾಲಾಗಿದ್ದಾನೆ.       ತಾಲೂಕಿನ ವೀರಣ್ಣನತಾಂಡದ ಹನು ಮಂತರಾಯಪ್ಪ ಎಂಬುವವರಿಗೆ ಸೇರಿದ ಮಿಶ್ರತಳಿ ಹಸು ಹಾಗೂ ಎತ್ತು ಬೆಂಕಿಗೆ ಆಹುತಿಯಾಗಿದ್ದು, ಸುಟ್ಟು ಕರಕಲಾಗಿವೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಆದರೆ ರಾಸುಗಳಿಗೆ ವಿಮೆ ಮಾಡಿಸಿದ ಕಾರಣ ಹೆಚ್ಚಿನ ಪರಿಹಾರ ಸಿಗುವುದಿಲ್ಲ. ಆದ್ದರಿಂದ ತಾಲೂಕಿನಲ್ಲಿನ ಹೈನುಗಾರರು ತಮ್ಮ ರಾಸುಗಳಿಗೆ ಶೀಘ್ರವಾಗಿ ವಿಮೆ ಮಾಡಿಸಬೇಕು ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ನಾಗಭೂಷಣ್ ತಿಳಿಸಿದ್ದಾರೆ.       ತಾಲೂಕಿನಲ್ಲಿ ಈಗಾಗಲೇ 2019-20 ನೇ ಸಾಲಿನಲ್ಲಿ 154 ಡೇರಿಗಳಿಂದ 9700 ಜಾನುವಾರುಗಳಿಗೆ ವಿಮೆ ಮಾಡಿದ್ದು, 2020-21 ನೇ ಸಾಲಿನಲ್ಲಿ 63 ಡೇರಿಗಳಿಂದ 6 ಸಾವಿರ ರಾಸುಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ.ಜಾತಿ, ಪ.ಪಂಗಡದ ರೈತರಿಗೆ ಉಚಿತವಾಗಿ ವಿಮೆ ಮಾಡಿಸಬಹುದಾಗಿದ್ದು, ನೇರವಾಗಿ ಡೇರಿ ಕಾರ್ಯದರ್ಶಿಗಳನ್ನು ಸಂಪರ್ಕಿಸಿ…

Read More

ತುಮಕೂರು:        ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯು ನಾಳೆ((ನ.10) ನಡೆಯಲಿದ್ದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾಧಿಕಾರಿ ಡಾ:ಕೆ.ನಂದಿನಿ ದೇವಿ ತಿಳಿಸಿದ್ದಾರೆ.       ನಗರದ ಪಾಲಿಟೆಕ್ನಿಕ್ ಕಾಲೇಜಿನ ಚುನಾವಣಾ ಮತ ಎಣಿಕೆ ನಡೆಸಲು ಆಗುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ನವೆಂಬರ್ 10ರಂದು ಬೆಳಿಗ್ಗೆ 8 ಗಂಟೆಗೆ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತ ಎಣಿಕೆ ಯಂತ್ರಗಳ ಮತ ಎಣಿಕೆಗೆ 14 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬ ಎಣಿಕೆ ಸೂಪರ್‍ವೈಸರ್, ಒಬ್ಬ ಎಣಿಕೆ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರ್‍ನ್ನು ನೇಮಕ ಮಾಡಲಾಗಿದೆ. ಅಂಚೆ ಮತಯಂತ್ರ ಹಾಗೂ ಸರ್ವೀಸ್ ವೋಟ್‍ಗಳ ಎಣಿಕೆಯು 4 ಟೇಬಲ್‍ಗಳಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.       ಸುಮಾರು 24 ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದ್ದು, ಪ್ರತಿ ಟೇಬಲ್‍ಗೆ ಒಬ್ಬ ಅಭ್ಯರ್ಥಿಗೆ ಒಬ್ಬ ಏಜೆಂಟ್‍ನಂತೆ ಹಾಜರಿರಲು ಅವಕಾಶ…

Read More