Author: News Desk Benkiyabale

ತುಮಕೂರು :        ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿ ತೋಟಗಾರಿಕೆ ಇಲಾಖೆ ಎದುರು ಭಾರತೀಯ ಭೋವಿ ಪರಿಷತ್(ಓ.ಸಿ.ಸಿ.ಐ) ತುಮಕೂರು ಜಿಲ್ಲಾ ಕಛೇರಿಯನ್ನು ಮಾಜಿ ಸಚಿವರು, ಭಾರತೀಯ ಭೋವಿ ಪರಿಷತ್‍ನ ರಾಷ್ಟ್ರೀಯ ಗೌರವಾಧ್ಯಕ್ಷರು, ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗು ಕೋರ್ ಕಮಿಟಿ ಸದಸ್ಯರು, ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ ರವರು ಉದ್ಘಾಟಿಸಿದರು.       ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿರುವ ಸಮಾಜದ ಜನಸಂಖ್ಯೆ, ಅವರ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಅವಲೋಕಿಸಿ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸಂಘಟನೆ ಶ್ರಮಿಸಬೇಕು ಎಂದರು. ಭೋವಿ ಸಮಾಜ ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿದ್ದು. ಕಲ್ಲು ಕೆಲಸ, ಕಟ್ಟಡ ಕಟ್ಟುವ ಅನೇಕ ಕುಲಕಸುಬುಗಳನ್ನೆ ನಂಬಿರುವ ಶ್ರಮಿಕರೇ ಹೆಚ್ಚಾಗಿರುವ ಸಮಾಜ ಭೋವಿ ಸಮಾಜ ಎಂದರು. ಕಲ್ಲು ಗಣಿಗಾರಿಕೆಯಲ್ಲಿ ಕುಲಕಸುಬನ್ನೆ ನಂಬಿರುವ ಭೋವಿ ಸಮಾಜಕ್ಕೆ ಕಲ್ಲುಗಣಿಗಾರಿಕೆಯಲ್ಲಿ ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ದಿವ್ಯಾಸಾನಿಧ್ಯ ವಹಿಸಿ ಮಾತನೀಡದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ…

Read More

ಕೊರಟಗೆರೆ :       ಸ್ನೇಹಿತರ ಜೊತೆ ಆಟವಾಡುತ್ತ ಈಜಾಡಲು ಅಕ್ಕಿರಾಂಪುರ ಕೆರೆಗೆ ತೆರಳಿದ ಯುವಕರಿಬ್ಬರು ಕೊರಟಗೆರೆ ಪಿಡ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಕೆರೆಏರಿ ಕಾಮಗಾರಿಗೆ ಪರವಾನಗಿ ಇಲ್ಲದೇ ತೆಗೆದಿರುವ 60 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.        ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಕೆರೆಯಲ್ಲಿ ಹೊಸಹಳ್ಳಿ ಗ್ರಾಮದ ರಮೇಶನ ಮಗನಾದ ಸತೀಶ(15) ಮತ್ತು ಹನುಮಂತರಾಯಪ್ಪನ ಮಗನಾದ ನಂದನ ಕುಮಾರ್(16) ಈಜಾಡಲು ಬರದೆ ಕೆರೆಯಲ್ಲಿನ ಆಳವಾದ ಗುಂಡಿಯಲ್ಲಿ ಮುಳುಗಿ ಮೃತಪಟ್ಟ ದುರ್ಧೈವಿ ಆಗಿದ್ದಾರೆ.       ಹೊಸಹಳ್ಳಿ ಗ್ರಾಮದ ಸತೀಶ, ನಂದನ, ಆಕಾಶ್, ಸಂತೋಷ, ಮಧುಸೂದನ ಎಂಬ ಐದು ಜನ ಯುವಕರು ಈಜಾಡಲು ತೆರಳಿದ್ದಾರೆ. ಸತೀಶ ಆಳವಾದ ನೀರಿನಲ್ಲಿ ಈಜಾಡಲು ಹೋಗಿ ಮುಳುಗಿರುವ ವೇಳೆ ಕಾಪಾಡಲು ಪ್ರಯತ್ನಿಸಿ ನಂದನ ಕೂಡ ದಡದಿಂದ ಜಾರಿ ಮುಳುಗಿದ್ದಾನೆ. ಇಬ್ಬರ ಕೈಹಿಡಿಯಲು ತೆರಳುತ್ತಿದ್ದ ಸಂತೋಷನನ್ನು ಆಕಾಶ್ ಹಿಂದಕ್ಕೆ ಎಳೆದು ತಮ್ಮನ ಪ್ರಾಣವನ್ನು ರಕ್ಷಣೆ…

Read More

ಮಧುಗಿರಿ :          ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಕುಂಚಿಟಿಗ ಜನಾಂಗವನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಎಲೆರಾಂಪುರ ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಹನುಮಂತನಾಥಸ್ವಾಮಿ ನೇತೃತ್ವದಲ್ಲಿ ರಾಜ್ಯ ಕುಂಚಿಟಿಗ ಸಂಘದ ಪದಾಧಿಕಾರಿಗಳು ಹಾಗೂ ಶಿವಮೊಗ್ಗ, ಮೈಸೂರು, ತುಮಕೂರು ಸಂಘದ ಪದಾಧಿಕಾರಿಗಳು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರನ್ನು ಬೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.        ರಾಜ್ಯದಲ್ಲಿ ಸುಮಾರು 25 ಲಕ್ಷ ಕುಂಚಿಟಿಗ ಜನಾಂಗವಿದ್ದು, ತುಮಕೂರು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ 18 ವಿಧಾನ ಸಭಾ ಕ್ಷೇತ್ರಗಳಲ್ಲಿ ಕುಂಚಿಟಿಗ ಜನಾಂಗ ಪ್ರಭಲ್ಯ ಹೊಂದಿದ್ದು, ಕೆಲವು ವಿಧಾನ ಸಭಾ ಕ್ಷೇತ್ರಗಳಲ್ಲಿ ಕುಂಚಿಟಿಗ ಜನಾಂಗದ ಮತಗಳು ನಿರ್ಣಾಯಕ ಮತಗಳಾಗಿವೆ ಆದರೆ ರಾಜಕೀಯ ಪಕ್ಷಗಳು ಸಮಾಜವನ್ನು ಚುನಾವಣಾ ಸಮಯದಲ್ಲಿ ಓಟ್ ಬ್ಯಾಂಕಿಗೋಸ್ಕರ ಬಳಸಿಕೊಳ್ಳುತ್ತಿದ್ದೆ ಮತ್ತು ಚುನಾವಣಾ ಸಮಯದಲ್ಲಿ ಮಾತ್ರ ನೆನಪಿಗೆ ಬರುತ್ತದೆ. ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಆರ್ಥಿಕವಾಗಿ ರಾಜಕೀಯವಾಗಿ ಹಿಂದುಳಿದ…

Read More

 ತುಮಕೂರು :       ಶಿರಾ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 10ರಂದು ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿ ಹಾಗೂ ಶಿರಾ ತಾಲ್ಲೂಕಿನಾದ್ಯಂತ ನವೆಂಬರ್ 10ರ ಬೆಳಿಗ್ಗೆ 6 ರಿಂದ ನವೆಂಬರ್ 11ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.       ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಲು ಮೆರವಣಿಗೆ ಮುಖೇನ ಘೋಷಣೆಗಳನ್ನು ಕೂಗುವ ಹಾಗೂ ಪರಾಭವಗೊಂಡ ಅಭ್ಯರ್ಥಿಗಳ ಬೆಂಬಲಿಗರು ಮತ್ತು ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗಲಾಟೆ ಆಗುವ ಸಾಧ್ಯತೆಗಳು ಇರುವುದರಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.       ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಮೆರವಣಿಗೆ,…

Read More

ತುರುವೇಕೆರೆ :       ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಶಾಸಕ ಮಸಾಲಜಯರಾಮ್ ಗುರುವಾರ ಅನಿರೀಕ್ಷಿತ ಭೇಟಿ ನೀಡಿ ಇಲ್ಲಿನ ಅವ್ಯವಸ್ಥೆಯನ್ನು ಕಂಡು ಶಾಲಾ ಪ್ರಾಂಶುಪಾಲ ಕೃಷ್ಣಪ್ಪನವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.        ತುರುವೇಕೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ಗುಡೇನಹಳ್ಳಿಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮೇಲೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾಲೇಜಿಗೆ ಅನಿರೀಕ್ಷಿತವಾಗಿ ಶಾಸಕ ಮಸಾಲಜಯರಾಮ್ ಭೇಟಿನೀಡಿ ಕಾಲೇಜು ಪ್ರಾಂಶುಪಾಲರು ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿ ಅಸಮಾಧಾನ ವ್ಯಕ್ತಪಡಿಸಿದರು.        ಕಾಲೇಜಿಗೆ ಭೇಟಿ ನೀಡಿದ ವೇಳೆ ಸಿಬ್ಬಂದಿ ಹಾಜರಾತಿ ಪುಸ್ತಕವನ್ನು ಪರಿಶೀಲಿಸಿ ನೋಡಲಾಗಿ ಕಾಲೇಜು ಸಿಬ್ಬಂದಿ ಒಂದು ಗಂಟೆ ಮುಂಚಿತವಾಗಿಯೇ ಕಾಲೇಜಿನಿಂದ ಹೊರಟು ಹೋಗಿರುವುದನ್ನು ಗಮನಿಸಿ ಪ್ರಾಶಂಪಾಲರ ವಿರುದ್ದ ಗರಂ ಆದರು, ನಂತರ ಕಾಲೇಜಿನ ಸುತ್ತಲೂ ಪರಿಶೀಲನೆ ನಡೆಸಿ ಕಾಲೇಜಿನ ಪರಿಸರದಲ್ಲಿ ಅಲ್ಲಲ್ಲಿ ಮದ್ಯದ ಬಾಟಲಿಗಳು ಕಂಡು ಬಂದು ಅನೈರ್ಮಲ್ಯ ಸೃಷ್ಟಿಯಾಗಿದ್ದದ್ದನ್ನು ಕಂಡು ಪ್ರಾಂಶುಪಾಲರ ಮೇಲೆ ಕೆಂಡಾಮಂಡಲವಾದರು, ಅಲ್ಲದೆ ನಾಲ್ಕೈದು ವರ್ಷಗಳಿಂದ…

Read More

ಚಿಕ್ಕನಾಯಕನಹಳ್ಳಿ :        ರಿಪಬ್ಲಿಕ್ ಟಿವಿ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಮೇಲೆ ಮಹಾರಾಷ್ಟ್ರ ಸರ್ಕಾರದಿಂದ ನಡೆದಿರುವ ದೌರ್ಜನ್ಯವನ್ನು ತಾಲ್ಲೂಕು ಪತ್ರಕರ್ತರ ಸಂಘ ಖಂಡಿಸಿದೆ.      ಪ್ರಜಾ ಪ್ರಭುವತ್ವದ 4ನೇ ಅಂಗವಾದ ಮಾಧ್ಯಮದ ಮೇಲೆ ದ್ವೇಶದ ಹಿನ್ನಲೆಯಿಂದ ಮಹಾರಾಷ್ಟ್ರ ಸರ್ಕಾರ ಅರ್ನಾಬ್ ಗೋಸ್ವಾಮಿಯನ್ನು ದೌರ್ಜನ್ಯದಿಂದ ಬಂಧಿಸಿ ಕರೆದೊಯ್ದಿರುವ ಘಟನೆಯನ್ನು ತಾಲ್ಲೂಕು ಪತ್ರಕರ್ತರ ಸಂಘದ ಸದಸ್ಯರು ಖಂಡಿಸಿ ತಹಸೀಲ್ದಾರ್‍ರಿಗೆ ಮನವಿ ಸಲ್ಲಿಸಿದರು.       ಎರಡುವರ್ಷದ ಹಿಂದೆ ದಾಖಲಾಗಿ ಮುಕ್ತಾಯವಾಗಿರುವ ಪ್ರಕರಣವನ್ನು ನೆಪವಾಗಿರಿಸಿಕೊಂಡು ರಾಷ್ಟ್ರಿಯ ಸುದ್ದಿವಾಹಿನಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ. ಅವರನ್ನು ಬಂಧಿಸಿರುವ ರೀತಿ ಗೂಂಡಾ ಮಾದರಿಯೆನಿಸಿದ್ದು, ಬೆಳಗಿನ ಜಾವ ಎಕೆ-47 ಬಂದೂಕುಗಳೊಂದಿಗೆ ಮನೆಗೆ ನುಗ್ಗಿ ಒಬ್ಬ ಜವಾಬ್ದಾರಿಯುತ ವ್ಯಕ್ತಿಯನ್ನು ದೈಹಿಕವಾಗಿ ಹಲ್ಲೆಮಾಡಿ ಬಂಧಿಸಿರುವ ಮಹಾರಾಷ್ಟ್ರ ಪೊಲಿಸರುತಮ್ಮ ಪೌರುಷವನ್ನು ಉಗ್ರಗಾಮಿಗಳು, ರೌಡಿಗಳನ್ನು ಹಿಡಿಯುವಲ್ಲಿ ತೋರಿಸಲಿ.     ಮಹಾರಾಷ್ಟ್ರ ಸರ್ಕಾರದ ಈ ಕೃತ್ಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಕಾನೂನಿಗೆ ಅಗೌರವ ತೋರುವ…

Read More

 ಹುಳಿಯಾರು:       ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುಳಿಯಾರು ಸಮೀಪದ ಮತಿಘಟ್ಟದ ಯುವಕ ಹಸೀಬುಲ್ಲ (28 ವರ್ಷ) ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ.           ಮತಿಘಟ್ಟದಿಂದ ತನ್ನ ತಾಯಿಯನ್ನು ಹೊಸದುರ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಹಿಂದಿರುಗುತ್ತಿದ್ದ ವೇಳೆ ಹೊಸದುರ್ಗದ ಪೆಟ್ರೋಲ್ ಬಂಕ್ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಟ್ರಕ್ ಮುಖಾಮುಖಿಯಾಗಿ ನಡೆದ ಅಪಘಾತದಲ್ಲಿ ಹಸೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಕಾರಿನಲ್ಲಿದ್ದ ಅವನ ತಂದೆಯ ಕಾಲಿಗೆ ಪೆಟ್ಟಾಗಿದ್ದು, ತಾಯಿ ಹಾಗೂ ಅವನ ಅತ್ತೆಗೂ ಸಹ ಅಪಘಾತದಲ್ಲಿ ಹೆಚ್ಚಿನ ಪೆಟ್ಟಾಗಿದ್ದು ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೆದುಕೊಂಡು ಹೋಗಲಾಗಿದೆ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು:        ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮೀಸಲು ಇದ್ದ ಕಾರಣ ಬಿಜೆಪಿಯ ಅಭ್ಯರ್ಥಿ ಒಬ್ಬರೇ ಇದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸದಸ್ಯ ಜಿ.ಎನ್.ಅಣ್ಣಪ್ಪಸ್ವಾಮಿಯವರು ಅವಿರೋಧವಾಗಿ ಆಯ್ಕೆ ಯಾಗಿದ್ದು, ಇದರಿಂದ ಪಟ್ಟಣ ಪಂಚಾಯಿತಿಯು ಭಾರತೀಯ ಜನತಾ ಪಾರ್ಟಿಯ ಪಾಲಾಯಿತು.       ಪಟ್ಣ ಪಂಚಾಯಿತಿಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬಿಜೆಪಿ ಅಧಿಕಾರವನ್ನು ಹಿಡಿದಿದ್ದು, ಇದರಿಂದ ಜೆಡಿಎಸ್ ಪಕ್ಷದ ಶಾಸಕರಿಗೆ ಹಿನ್ನೆಡೆಯಾಗಿದ್ದು, ಇದರಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸವಿತಾ ಅವರು ಸಾಮಾನ್ಯ ಮಹಿಳಾ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಥಿಸಿದ್ದರೂ ಸಹ ಒಂದು ಮತವನ್ನು ಪಡೆದು ಸೋಲನ್ನು ಅನುಭವಿಸುವಂತಹ ಸ್ಥಿತಿಯನ್ನು ಸ್ಥಳೀಯ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿ ಪಕ್ಷದ ಅಭ್ಯರ್ಥಿಗೆ ದ್ರೋಹವೆಸಗಿದ್ದಾರೆ ಎಂದು ಸದಸ್ಯೆ ಸವಿತಾ ಅವರು ಆರೋಪಿಸಿದರು.       ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 19 ವಾರ್ಡ್‍ಗಳಿದ್ದು, ಬಿಜೆಪಿ…

Read More

ಕೊರಟಗೆರೆ :        ಕರುನಾಡಿನ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಸ್ವಕ್ಷೇತ್ರವಾದ ಕೊರಟಗೆರೆ ಪಪಂಯ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷದ ಪಾಲಾಗಿದೆ. ಗುರುವಾರ ನಿಗದಿಯಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತ ಮಂಜುಳ ಅಧ್ಯಕ್ಷೆ ಮತ್ತು ಕೆ.ವಿ.ಭಾರತಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಘಟನೆ ನಡೆದಿದೆ.       ಪಟ್ಟಣದ ಪಪಂಯ ಪರಿಶಿಷ್ಟ ಪಂಗಡದ ಮಹಿಳಾ ಮೀಸಲು ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ 8ನೇ ವಾರ್ಡಿನ ಜೆಡಿಎಸ್ ಪಕ್ಷದ ಬೆಂಬಲಿತ ಸದಸ್ಯೆ ಮಂಜುಳ ಸತ್ಯನಾರಾಯಣ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ 15ನೇ ವಾರ್ಡಿನ ಕೆ.ವಿ.ಭಾರತಿ ಸಿದ್ದಮಲ್ಲಪ್ಪ ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಮಾತ್ರ ನಾಮಪತ್ರ ಸಲ್ಲಿಸಿರುವ ಪರಿಣಾಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಕೊರಟಗೆರೆ ಪಟ್ಟಣ ಪಂಚಾಯಿತಿ ಪರಿಮಿತಿಯಲ್ಲಿ ಪ್ರಸ್ತುತ ಒಟ್ಟು 14ಜನ ಚುನಾಯಿತ ಸದಸ್ಯರಿದ್ದಾರೆ. ಅದರಲ್ಲಿ 8ಜನ ಜೆಡಿಎಸ್, 4ಜನ ಕಾಂಗ್ರೇಸ್, ಬಿಜೆಪಿ-1, ಪಕ್ಷೇತರ-1 ಸೇರಿದಂತೆ ಸಂಸದ ಮತ್ತು ಶಾಸಕರ ಮತವನ್ನು…

Read More

ಹುಳಿಯಾರು:       ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಸರ್ಕಲ್‍ನಿಂದ ಗವಿರಂಗಾಪುರ ಪುಣ್ಯ ಕ್ಷೇತ್ರಕ್ಕೆ ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ತಕ್ಷಣ ದುರಸ್ಥಿ ಮಾಡಿಸುವಂತೆ ದೊಡ್ಡಎಣ್ಣೇಗೆರೆಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಮನವಿ ಮಾಡಿದ್ದಾರೆ.       ತಿಪಟೂರಿನಿಂದ ಹಂದನಕೆರೆ ಮಾರ್ಗವಾಗಿ ಇದೇ ರಸ್ತೆಯಲ್ಲಿ ಹೊಸದುರ್ಗಕ್ಕೆ ಪ್ರತಿದಿನ ಅನೇಕ ಕೆ.ಎಸ್.ಆರ್.ಟಿ.ಸಿ ಬಸ್‍ಗಳು ಸಂಚರಿಸುತ್ತವೆ. ಅಲ್ಲದೆ ಗಂವಿರಂಗಾಪುರದ ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ನಿತ್ಯ ಅಪಾರ ಸಂಖ್ಯೆಯಲ್ಲಿ ಬೈಕ್, ಕಾರುಗಳಲ್ಲಿ ಭಕ್ತರು ಬಂದೋಗುತ್ತಾರೆ. ಈ ಭಾಗದಲ್ಲಿ ಜಮೀನುಳ್ಳ ರೈತರು ಸಹ ನಿತ್ಯ ಇಲ್ಲಿ ಓಡಾಡುತ್ತಾರೆ.       ಆದರೆ ಈ ರಸ್ತೆ ಅನೇಕ ವರ್ಷಗಳಿಂದ ಗುಂಡಿಗಳು ಬಿದ್ದು ರಸ್ತೆಯ ಜಲ್ಲಿಗಳು ಮೇಲೆದ್ದು ಸುಗಮ ಸಂಚಾರಕ್ಕೆ ತೊಡಕಾಗಿದೆ. ಬೈಕ್ ಸವಾರರಂತೂ ಬಿದ್ದು ಪೆಟ್ಟು ಮಾಡಿಕೊಂಡಿರುವ ನಿದರ್ಶನಗಳು ಬಹಳಷ್ಟಿವೆ. ಮಳೆಗಾಲದಲ್ಲಂತೂ ಗುಂಡಿಯಾವುದು ರಸ್ತೆಯಾವುದು ಎಂದು ತಿಳಿಯದೆ ಅಪಘಾತಗಳು ಸಹ ಆಗಿವೆ. ಈ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.…

Read More