ಗುಬ್ಬಿ: ಚಿರತೆ ದಾಳಿಗೆ ಮಹಿಳೆಯೊಬ್ಬಳು ಬಲಿಯಾದ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮಾವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಮಣಿಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಲ್ಲೂಕಿನ ಗಡಿಭಾಗದಲ್ಲಿ ಚಿರತೆ ದಾಳಿಯು ಹೆಚ್ಚಾಗುತ್ತಿದ್ದು ಮಣಿಕುಪ್ಪೆ ಗ್ರಾಮದ ಭಾಗ್ಯಮ್ಮ (35) ತನ್ನ ರಾಸುಗಳನ್ನು ಮೇಯಿಸಲು ಪಕ್ಕದಲ್ಲೇ ಇರುವ ಅರಣ್ಯ ಇಲಾಖೆಗೆ ತೆರಳಿದ್ದು ಸುಮಾರು 3.30ರ ಸಮಯದಲ್ಲಿ ಚಿರತೆಯು ಮಂಜಮ್ಮನ ಮೇಲೆ ದಾಳಿ ನಡೆಸಿದ ವೇಳೆ ಸ್ಥಳದಲ್ಲೇ ಮಂಜಮ್ಮ ಮೃತಪಟ್ಟಿರುತ್ತಾಳೆ. ಗುಬ್ಬಿ, ಕುಣಿಗಲ್ ಹಾಗೂ ತುಮಕೂರಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ತಾಲ್ಲೂಕಿನ ಮಣಿಕುಪ್ಪೆ ಗ್ರಾಮದ ಜನರು ಭಯಭೀತರಾಗಿದ್ದು ಒಂದು ವರ್ಷದ ಹಿಂದೆ ಮೊಟ್ಟಮೊದಲ ಬಾರಿಗೆ ಸಮರ್ಥ್ ಎಂಬ ಬಾಲಕನ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ‘ಆಪರೇಷನ್ ಸಮರ್ಥ್’ ಎಂಬ ಯೋಜನೆಯನ್ನು ತಂದು ಇಲ್ಲಿಯವರೆಗೂ ಗಡಿಭಾಗದಲ್ಲೇ ಸುಮಾರು 6ಕ್ಕೂ ಹೆಚ್ಚು ಚಿರತೆ ದಾಳಿಯಿಂದ ರೈತರುಗಳು ಮರಣ ಹೊಂದಿದ್ದು ಇದರಿಂದ ಅರಣ್ಯ ಇಲಾಖೆಯ…
Author: News Desk Benkiyabale
ತುಮಕೂರು : ಕೇಂದ್ರದ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ರಸ್ತೆ ತಡೆಗೆ ಮುಂದಾದಾಗ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮದ ಅಂಗವಾಗಿ, ಕ್ಯಾತ್ಸಂದ್ರದಿಂದ ಜಾಸ್ ಟೋಲ್ ವರೆಗೂ ಮೆರವಣಿಗೆ ಹೊರಟ ರೈತರನ್ನು ಕ್ಯಾತ್ಸಂದ್ರ ಸರ್ಕಲ್ ನಲ್ಲಿ ತಡೆದ ಪೊಲೀಸರು, ಅವರನ್ನು ಬಂಧಿಸಿ, ಸಂಜೆಯವರೆಗೆ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮೈದಾನದಲ್ಲಿರಿಸಿ, ಸಂಜೆಯ ವೇಳೆಗೆ ಬಿಡುಗಡೆ ಮಾಡಿದರು. ಕ್ಯಾತ್ಸಂದ್ರ ಬಳಿ ಸಮಾವೇಶಗೊಮಡಿದ್ದ ರೈತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಆನಂದಪಟೇಲ್, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ…
ಹುಳಿಯಾರು : ಅತಿಥಿಗಳು ಮನೆಗೆ ಬಂದಾಗ ಜ್ಯೂಸ್, ಚಹ, ಹಣ್ಣು, ಹೂವು, ಸ್ನ್ಯಾಕ್ಸ್ ನೀಡುವುದು ಸಾಮಾನ್ಯ ಪದ್ಧತಿ. ಅದರಲ್ಲೂ ಸ್ವಾಮೀಜಿಗಳು ಬಂದರಂತೂ ಪಾದಪೂಜೆ ಮಾಡಿ ಡ್ರೈಪ್ರೂಟ್ಸ್, ಹಣ್ಣುಗಳನ್ನು ನೀಡುವುದು ವಾಡಿಕೆ. ಆದರೆ ಕೊರೊನಾದಿಂದಾಗಿ ಸತ್ಕಾರದ ಶೈಲಿ ಬದಲಾಗಿದ್ದು ಮಾಸ್ಕ್ ನೀಡುವ ಟ್ರೆಂಡ್ ಸೃಷ್ಠಿಯಾಗಿದೆ. ಹೌದು, ಹುಳಿಯಾರಿನ ಶ್ರೀಶಕ್ತಿ ಫರ್ನೀಚರ್ಸ್ನ ಮಾಲೀಕ ಎಚ್.ಎಸ್.ಪುಟ್ಟರಾಜು ಅವರು ಮಾಸ್ಕ್ ನೀಡುವ ಸಂಪ್ರದಾಯ ಆರಂಭಿಸಿದ್ದಾರೆ. ತಮ್ಮ ಅಂಗಡಿಗೆ ಬರುವ ಎಲ್ಲಾ ಸಾರ್ವಜನಿಕರಿಗೂ ಮಾಸ್ಕ್ ನೀಡಿ ಕಡ್ಡಾಯವಾಗಿ ಧರಿಸಿ ಕೊರೊನಾ ಓಡಿಸಿ ಎನ್ನುವ ಸಂದೇಶ ನೀಡುವ ಮೂಲಕ ಸುತ್ತಳ್ಳಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಲಾಕ್ಡೌನ್ ತೆರವಾದ ದಿನದಿಂದಲೂ ಪುಟ್ಟರಾಜು ಅವರು ತಮ್ಮ ಅಂಗಡಿಗೆ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ಜೊತೆಗೆ ಉಚಿತವಾಗಿ ಮಾಸ್ಕ್ ನೀಡುತ್ತಿದ್ದಾರೆ. ಇವರ ಮಾಸ್ಕ್ ಅಭಿಯಾನದಲ್ಲಿ ಯಳನಾಡು ಸಂಸ್ಥಾನದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಸಹ ಭಾಗಿಯಾಗಿದ್ದಾರೆ. ಪ್ರಯಾಣದ ಮರ್ಗ ಮದ್ಯೆ ಅಂಗಡಿಗೆ…
ಮಧುಗಿರಿ : ಮಧುಗಿರಿ ಪುರಸಭೆ ಅಧ್ಯಕ್ಷರಾಗಿ ತಿಮ್ಮರಾಜು( ತಿಮ್ಮರಾಯಪ್ಪ) ಹಾಗೂ ಉಪಾಧ್ಯಕ್ಷರಾಗಿ ರಾಧಿಕಾ ಆನಂದಕೃಷ್ಣ ರವರುಗಳು “ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ನವರ ಬಲದಿಂದಾಗಿ’ ಬುಧವಾರದಂದು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು.21 ನೇ ವಾರ್ಡಿನಿಂದ ಆಯ್ಕೆಯಾಗಿದ್ದ ತಿಮ್ಮರಾಯಪ್ಪ ಅವರನ್ನು ಲಾಲಪೇಟೆ ಮಂಜುನಾಥ್ ಮತ್ತು ಮಂಜುನಾಥಾಚಾರ್ ರವರು ಸೂಚಿಸಿದರು. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು 20 ನೇ ವಾರ್ಡ್ ನಿಂದ ಆಯ್ಕೆಯಾಗಿದ್ದ ರಾಧಿಕಾ ಅನಂದಕೃಷ್ಣರವರಿಗೆ ಅಲೀಂಮುಲ್ಲಾ ಮತ್ತು ನಟರಾಜು ರವರು ಸಿ. ಸೂಚಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಿಮ್ಮರಾಯಪ್ಪ ಹಾಗೂ ರಾಧಿಕ ಅನಂದಕೃಷ್ಣರವರನ್ನು ಬಿಟ್ಟರೆ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಡಾ. ಜಿ. ವಿಶ್ವನಾಥ್ ಇವರಿಬ್ಬರನ್ನು ಅವಿರೋಧವಾಗಿ ಬಆಯ್ಕೆಯಾಗಿರುವುದಾಗಿ ಘೋಷಿಸಿದರು. 1998 ರ ಸೆಪ್ಟೆಂಬರ್ 11 ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ವು ಪರಿಶಿಷ್ಟ…
ತುಮಕೂರು : ಸಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ 15 ಅಭ್ಯರ್ಥಿಗಳ ಭವಿಷ್ಯ ಅಡಕವಾಗಿರುವ ಮತಯಂತ್ರಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿದ್ದಪಡಿಸಲಾಗಿರುವ 2 ಭದ್ರತಾ ಕೊಠಡಿಗೆ ಸ್ಥಳಾಂತರಿಸಿ ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿರಾ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಮತದಾನ ನಿನ್ನೆ ಸಂಜೆ 6 ಗಂಟೆವರೆಗೆ ನಡೆದ ನಂತರ 330 ಮತಗಟ್ಟೆಗಳ ಇವಿಎಂ ಯಂತ್ರಗಳು ಸಿರಾ ಜ್ಯೋತಿನಗರದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಬಂದು ಸೇರಿದ ನಂತರ ನಿನ್ನ ಬೆಳಗಿನ ಜಾವ ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ತಂದು 2 ಭದ್ರತಾ ಕೊಠಡಿಗಳಲ್ಲಿ ಇಡಲಾಗಿದೆ. ಮತ ಯಂತ್ರಗಳಿರುವ 2 ಭದ್ರತಾ ಕೊಠಡಿಗಳಿಗೆ ಅಭೂತಪೂರ್ವ ಬಿಗಿ ಪೆÇಲೀಸ್ ಬಂದೋಬಸ್ತ್ನೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ ವಂಶಿಕೃಷ್ಣ, ಚುನಾವಣಾ ಸಾಮಾನ್ಯ ವೀಕ್ಷಕರಾದ ಬಿ.ಮಹೇಶ್ವರಿ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಚುನಾವಣಾಧಿಕಾರಿ…
ತುಮಕೂರು: ಕೊರೋನಾ ಮುನ್ನೆಚ್ಚರಿಕೆ ನಡುವೆ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನವು ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿತು. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ನಡೆದಿದ್ದು, ಮತದಾರರು ಮಾಸ್ಕ್ ಧರಿಸಿ, 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ಎಲ್ಲೆಡೆ ಕಂಡು ಬಂತು. ಪ್ರತಿ ಮತಗಟ್ಟೆಯನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಮತದಾನ ಮಾಡಲು ಆಗಮಿಸುವ ಮತದಾರರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಸ್ಯಾನಿಟೈಸ್ ಮಾಡಿದ ನಂತರ ಮತ ಕೇಂದ್ರವನ್ನು ಪ್ರವೇಶಿಸಿದ ಮತದಾರರರಿಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಿಸಿಕೊಂಡು ಬಲಗೈಗೆ ಕೈಗವಸು ಧರಿಸಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರು. ಕ್ಷೇತ್ರದಲ್ಲಿ ಒಟ್ಟು 330 ಮತ ಕೇಂದ್ರಗಳಲ್ಲಿ ಚುನಾವಣಾ ಮತದಾನವು ಪೊಲೀಸ್ ಭದ್ರತೆಯಲ್ಲಿ ಶಾಂತಿಯುತವಾಗಿ…
ತುಮಕೂರು : ಸಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆ ನಂತರ ಕೋವಿಡ್ ಸೋಂಕಿತರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಸಿರಾ ವಿಧಾನಸಭಾ ಕ್ಷೇತ್ರದ ಕೋವಿಡ್ ನೋಡಲ್ ನಿಯಂತ್ರಣಾಧಿಕಾರಿ ಡಾ. ಸನತ್ ತಿಳಿಸಿದರು. 71 ಕೋವಿಡ್ ರೋಗಿಗಳ ಮತದಾನಕ್ಕೆ ಅವಕಾಶ ನೀಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎರಡು ಆಂಬ್ಯುಲೆನ್ಸ್ನಲ್ಲಿ ಕೋವಿಡ್ ರೋಗಿಗಳನ್ನು ಮತಗಟ್ಟೆಗೆ ಕರೆ ತಂದು ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು. ಕೋವಿಡ್ ಸೋಂಕಿತ ಮತದಾರರು ಮತಗಟ್ಟೆಗೆ ಬರುವ ಮುನ್ನ ಮತಗಟ್ಟೆ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ದರಿದ್ದು, ಸೋಂಕಿತರ ಮತದಾನಕ್ಕೆ ಅನುವು ಮಾಡಿಕೊಟ್ಟರು ಎಂದರು. ಮತದಾನ ಮಾಡಿದ ಕೋವಿಡ್ ಸೋಂಕಿತರನ್ನು ಮತ್ತೆ ಆಂಬ್ಯುಲೆನ್ಸ್ನಲ್ಲೇ ಮನೆಗಳಿಗೆ ವಾಪಸ್ ಕರೆದೊಯ್ಯಲಾಯಿತು ಎಂದರು. ಆರೋಗ್ಯ ದೃಷ್ಠಿಯಿಂದ ಕೆಲ ಕೋವಿಡ್ ಸೋಂಕಿತರು ಮತಗಟ್ಟೆಗಳಿಗೆ ಬರಲು ನಿರಾಕರಿಸಿದ್ದು, ಅಂತಹವರ ವಾಯ್ಸ್ ರೆಕಾರ್ಡ್ ಮಾಡಿಕೊಳ್ಳಲಾಗಿದೆ…
ತುಮಕೂರು: ತುಮಕೂರು ನಗರದ ಹೊಸ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಕಾಯಿತಿ ಮಾಡಿದ್ದ 10 ಜನ ಆರೋಪಿಗಳನ್ನ ಬಂಧಿಸುವಲ್ಲಿ ತುಮಕೂರು ಪೊಲೀಸ್ ತಂಡ ಯಶಸ್ವಿಯಾಗಿದೆ. ದಿನಾಂಕ: 20-10-2020 ರಂದು ತುಮಕೂರು ನಗರದ ಹೊಸಬಡಾವಣೆಯ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ವಾಲ್ಮೀಕಿ ನಗರದ ವಾಸಿ ವಿಶ್ವೇಶ್ವರ್ ಆರಾಧ್ಯರವರ ಮನೆಗೆ ಹಾಡುಹಗಲೇ ನುಗ್ಗಿದ 6 ಜನ ಅಪರಿಚಿತರ ತಂಡ ಮನೆಯೊಳಗೆ ನುಗ್ಗಿ ವಿಶ್ವೇಶ್ವರ ಆರಾಧ್ಯ ಮತ್ತು ಅವರ ಪತ್ನಿ ಪೇಮಾಕುಮಾರಿರವರನ್ನು ಮಚ್ಚು, ಚಾಕು, ಡ್ರ್ಯಾಗನ್ಗಳನ್ನು ತೋರಿಸಿ ಬೆದರಿಸಿ 5.87 ಲಕ್ಷ ಬೆಲೆ ಬಾಳುವ ಚಿನ್ನದ ಆಭರಣಗಳು 22000 ರೂ ಹಣ, ಎರಡು ಮೊಬೈಲ್ ಫೋನ್ಗಳನ್ನು ದರೋಡೆ ಮಾಡಿದ್ದರು ಈ ವಿಚಾರವಾಗಿ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿತ್ತು. ಈ ಪ್ರಕರಣ ಭೇದಿಸಲು ತಿಲಕ್ ಪಾರ್ಕ್ ಸಿಪಿಐ ಮುನಿರಾಜು, ನಗರ ವೃತ್ತ ನಿರೀಕ್ಷಕ ನವೀನ್ರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಸದರಿ ತಂಡವು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ರೋಹಿತ,…
ಸಿರಾ : ಸಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನಕ್ಕೆ ಬಳಸಲಾಗಿರುವ ಇವಿಎಂ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಈ ಚುನಾವಣೆ ನನಗೆ 10ನೇ ಚುನಾವಣೆಯಾಗಿದೆ. ಆದರೆ ಹಿಂದೆಂದೂ ಕಾಣದಂತಹ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆಯುತ್ತಿದೆ. ಅಧಿಕಾರಿಗಳು ಪಕ್ಷವೊಂದರ ಏಜೆಂಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಇದು ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಆಕ್ರೋಶ ಹೊರ ಹಾಕಿದರು. ಸಿರಾದಲ್ಲಿ ಮತದಾನದ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ದೂರಿದರು. ನಿನ್ನೆ ಬೆಳಿಗ್ಗೆಯಿಂದ ಸಂಜೆವರೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಹಾಸನ ಮೂಲದವರು ಮತದಾರರಿಗೆ ಹಣ ಹಂಚುವಾಗ ಸಿಕ್ಕಿ ಬಿದ್ದಿದ್ದಾರೆ. ಜನರು ಅವರನ್ನು ಕೂಡಿ ಹಾಕಿದ್ದರು. ಆದರೆ ಮಾನವೀಯತೆ ದೃಷ್ಟಿಯಿಂದ ಅವರನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಚುನಾವಣಾ ಆಯೋಗದ…
ತುಮಕೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಚುನಾವಣಾ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಪೊಲೀಸ್ ಬಿಗಿಭದ್ರತೆಯಲ್ಲಿ 330 ಮತಗಟ್ಟೆಗಳಲ್ಲಿ ನಡೆಯಲಿದೆ. ಕ್ಷೇತ್ರದಲ್ಲಿ ಪುರುಷರು 1,10,281 ಮಹಿಳೆಯರು 105434, ಇತರೆ 10 ಒಟ್ಟು 215725 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಮತದಾನ ಮಾಡುವ ಮತದಾರರಿಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. ಮುಕ್ತ ಮತ್ತು ಶಾಂತಿಯುತ ಮತದಾನವನ್ನು ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ತಾಲ್ಲೂಕಿನಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಆದೇಶವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿರುವ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ. ಶಿರಾ ವಿಧಾನ ಸಭಾ ಉಪ ಚುನಾವಣೆಯನ್ನು ಶಾಂತಿಯುತವಾಗಿ ನೆರವೇರಿಸಲು 10 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. 5 ಎಫ್ಎಸ್ಟಿ…