ತುಮಕೂರು : ಮಂದಾರಗಿರಿಯ ಜೈನ ಬಸದಿ ಬೆಟ್ಟಕ್ಕೆ ರಸ್ತೆ ನಿರ್ಮಾಣಕ್ಕೆ ಅಗತ್ಯ ಇರುವ ಅನುದಾನವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಒದಗಿಸಿಕೊಡುವುದಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಭರವಸೆ ನೀಡಿದರು. ನಗರದ ಹೊರವಲಯದಲ್ಲಿರುವ ಮಂದಗಿರಿಯ ಬಸದಿ ಬೆಟ್ಟಕ್ಕೆ ಭೇಟಿ ನೀಡಿ ಮುನಿಶ್ರೀಗಳ ಆಶೀರ್ವಾದ ಪಡೆದ ನಂತರ ಜೈನ ಸಮಾಜದ ಅಧ್ಯಕ್ಷರು ಮಾಡಿದ ಮನವಿಗೆ ಸ್ಪಂದಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಎಲ್ಲ ಸಮುದಾಯ, ಎಲ್ಲ ಧರ್ಮಗಳಿಗೂ ಅನುದಾನದ ನೆರವು ಒದಗಿಸುವ ಮೂಲಕ ಶಕ್ತಿ ತುಂಬುವ ಕೆಲಸ ಮಾಡುತ್ತಾ ಬಂದಿದ್ದಾರೆ. ಹಾಗೆಯೇ ಹುಬ್ಬಳ್ಳಿ ಭಾಗದಲ್ಲೂ ಜೈನ ಸಮುದಾಯಕ್ಕೆ 2009 ರಲ್ಲಿ ಆರ್ಥಿಕ ನೆರವು ನೀಡಿದ್ದರು ಎಂದರು. ಮಂದರಗಿರಿ ಬೆಟ್ಟಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಪವಿತ್ರ ಕ್ಷೇತ್ರವಾಗಿರುವ ಈ ಸ್ಥಳಕ್ಕೆ ಇಷ್ಟು ವರ್ಷವಾದರೂ ಒಮ್ಮೆಯೂ ಬರಲು ಸಾಧ್ಯವಾಗಿರಲಿಲ್ಲ. ಇಂದು ಈ ಕ್ಷೇತ್ರಕ್ಕೆ ಬಂದು ಮುನಿಶ್ರೀಗಳ ದರ್ಶನಾಶೀರ್ವಾದ ಪಡೆದಿದ್ದೇನೆ. ಇದೊಂದು ಶಕ್ತಿ ಪೀಠ…
Author: News Desk Benkiyabale
ತುಮಕೂರು: ನ.3 ರಂದು ನಡೆಯಲಿರುವ ಸಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜ್ಯೋತಿನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆರೋಗ್ಯ ತಪಾಸಣೆ ಮಾಡಿ ಮತಯಂತ್ರಗಳೊಂದಿಗೆ ಬೂತ್ಗಳಿಗೆ ಕಳುಹಿಸಿ ಕೊಡಲಾಯಿತು. ಸಿರಾ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರ ಮಾರ್ಗದರ್ಶನದಲ್ಲಿ ಥರ್ಮಲ್ ಸ್ಕ್ರೀನಿಂಗ್, ಬಿ.ಪಿ., ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ ನಡೆಸಿದ ಬಳಿಕವೇ ಮತಯಂತ್ರಗಳನ್ನು ನೀಡಿ ಬಸ್ನಲ್ಲಿ ಮತಗಟ್ಟೆಗಳಿಗೆ ತೆರಳಲು ಅನುವು ಮಾಡಿಕೊಡಲಾಯಿತು. ಬಸ್ ವ್ಯವಸ್ಥೆ: ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ತುಮಕೂರು ನಗರ ಹಾಗೂ ಗುಬ್ಬಿ ಪಟ್ಟಣದಿಂದ ಬೆಳಿಗ್ಗೆ 6.30ಕ್ಕೆ ಬಸ್ನಲ್ಲಿ ಸಿರಾ ಜ್ಯೋತಿನಗರದಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಅಲ್ಲಿನ ಆರೋಗ್ಯ ತಪಾಸಣೆಗೆ ಒಳಪಟ್ಟರು. ನಂತರು ಮತಯಂತ್ರಗಳನ್ನು…
ಚಿಕ್ಕನಾಯಕನಹಳ್ಳಿ: ಕೂಲಿ ಮಾಡಿ ಜೀವಿಸುವ ಬಡ ಕುಟುಂಬದ ಮಹಿಳೆಯೊಬ್ಬರಿಗೆ ಮಾಡದ ಸಾಲಕ್ಕೆ ಬ್ಯಾಂಕ್ನಿಂದ ರೂ.25ಲಕ್ಷದ ನೋಟೀಸ್ ನೀಡಿದ್ದು ಬಡ ಕುಟುಂಬಕ್ಕೆ ಆಘಾತ ನೀಡಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿಕೆರೆಹೋಬಳಿ ಕುಪ್ಪೂರು ಗ್ರಾಮದ ಎ.ಕೆ. ಕಾಲೋನಿವಾಸಿ ಜಯಮ್ಮ ಎಂಬ ಕೂಲಿಮಾಡುವ ಮಹಿಳೆಗೆ ರೂ.25ಲಕ್ಷದ ಸಾಲದ ನೋಟೀಸ್ನ್ನು ಚಿಕ್ಕನಾಯಕನಹಳ್ಳಿಯ ಕೆನರಾಬ್ಯಾಂಕ್ ನಿಂದ ನೀಡಲಾಗಿದೆ. ಅಂಚೆ ಮೂಲಕ ಬುಧವಾರ ಈ ನೊಟೀಸನ್ನು ಜಾರಿಮಾಡಲಾಗಿದೆ. ಸದರಿ ಸಾಲದ ನೋಟೀಸಿನಲ್ಲಿ ಈಕೆಯ ಹೆಸರಿನಲ್ಲಿ ಕೃಷಿಸಾಲವನ್ನು 31-3-2014ರಂದು ನೀಡಲಾಗಿದ್ದು ಇದುವರೆಗೂ ನೀವು ಯಾವುದೇ ಕಂತು, ಬಡ್ಡಿ ಹಾಗೂ ಇತರೆಖರ್ಚುಗಳನ್ನು ಕಟ್ಟದಕಾರಣ ರೂ.25ಲಕ್ಷ ವಾಗಿದ್ದು ಅಸಲು ಮತ್ತು ಇತರೆವೆಚ್ಚವನ್ನು ಕಟ್ಟಿದರೆ ಪೂರ್ತಿ ಬಡ್ಡಿಮನ್ನಾಮಾಡುವುದಾಗಿ ತಿಳಿಸಿದ್ದಾರೆ. ಆದರೆ ಒಂದು ಗುಂಟೆ ಜಮೀನುಸಹ ಇಲ್ಲದ ಜಯಮ್ಮನವರಿಗೆ ರೂ.25ಲಕ್ಷಸಾಲ ನೀಡಲಾಗಿದೆ, ಅಸಲನ್ನು ಕಟ್ಟಿ ಎಂಬ ನೋಟೀಸ್ ನೀಡಿರುವುದನ್ನು ಕಂಡು ಆಕೆಗೆ ದಿಕ್ಕೇತೋಚದಂತಾಗಿದೆ. ಪಶುಇಲಾಖೆಯಿಂದ ಕುರಿಸಾಕಾಣಿಕೆಗಾಗಿ ಹಲವು ವರ್ಷಗಳಹಿಂದೆ ಹತ್ತು ಸಾವಿರ ಸಾಲಮಾಡಿ ತೀರಿಸಿದ್ದು ಬಿಟ್ಟರೆ ನಾನು ಬ್ಯಾಂಕ್ಕಡೆ ಹೋಗಿಲ್ಲ. ಆದರೆ…
ಹುಳಿಯಾರು: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಹೆಂಚು ತೆಗೆದು ಒಳ ನುಗ್ಗಿ ಹಣ ಮತ್ತು ಒಡವೆ ಕಳ್ಳತನ ಮಾಡಿರುವ ಘಟನೆ ಹುಳಿಯಾರು ಹೋಬಳಿಯ ಹೊಸಹಳ್ಳಿಯಲ್ಲಿ ನಡೆದಿದೆ. ಹೊಸಹಳ್ಳಿಯ ಸಾಕಜ್ಜಿ ಮನೆಯಲ್ಲಿ ಕಳ್ಳತನ ನಡೆದಿದ್ದು ಅಜ್ಜಿ ಶಿರಾಕ್ಕೆ ಹೋಗಿದ್ದು ಮಗ ಹನುಮಂತರಾವ್ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಹೆಂಚು ತೆಗೆದು ಒಳ ನುಗ್ಗಿ ಮನೆಯ ಬೀರು ಹೊಡೆದು 20 ಸಾವಿರ ರೂ. ನಗದು ಹಾಗೂ ಒಂದು ಜೊತೆ ಓಲೆಯನ್ನು ಕದ್ದೊಯ್ದಿದ್ದಾರೆ. ಕುರಿಮೇಯಿಸಿಕೊಂಡು ಮನೆಗೆ ಮಗ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ದೇಶದ ಯುವಜನರು ದೊಡ್ಡ ಪ್ರಮಾಣದ ಉದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಯುವಜನರು ಯಾವ ಭರವಸೆ ಇಟ್ಟುಕೊಂಡು ಬಿಜೆಪಿಗೆ ಮತ ನೀಡಬೇಕು ಎಂದು ರಾಜ್ಯ ಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಪ್ರಶ್ನಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಸ್.ಟಿ ಮತ್ತು ನೋಟು ಅಮಾನೀಕರಣದ ಪರಿಣಾಮವಾಗಿ ಯುವಜನರಿಗೆ ಹೆಚ್ಚು ಉದ್ಯೋಗ ಒದಗಿಸುತ್ತಿದ್ದ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಮುಚ್ಚಿ ಹೋದ ಪರಿಣಾಮ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುವಂತಾಯಿತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಕಳೆದ ಆರು ವರ್ಷಗಳನ್ನು ಅದನ್ನು ಈಡೇರಿಸಿದೆಯೇ, ಇದನ್ನು ಪ್ರತಿಯೋಬ್ಬ ಯುವ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಇದುವರೆಗೂ ಇದ್ದ ಭೂ ಹಿಡುವಳಿ ಸಣ್ಣ ಮತ್ತು ಅತಿ ಸಣ್ಣ…
ಹುಳಿಯಾರು: ತೆಂಗಿನಗರಿಗೆ ವಿದ್ಯುತ್ ತಂತಿ ತಗುಲಿ ಪದೇ ಪದೇ ಶಾರ್ಟ್ ಆಗುತ್ತಿದ್ದರೂ ಬೆಸ್ಕಾಂ ನಿರ್ಲಕ್ಷಿಸಿದ್ದು ತಕ್ಷಣ ಮೇಲಧಿಕಾರಿಗಳು ಸ್ಪಂಧಿಸುವಂತೆ ಹುಳಿಯಾರು ಹೋಬಳಿಯ ಯಳನಾಡು ಗ್ರಾಪಂ ವ್ಯಾಪ್ತಿಯ ಬಿಳಿಕಲ್ಲುಗೊಲ್ಲರಹಟ್ಟಿ ಬಳಿಯ ರೈತ ನಂಜುಂಡಯ್ಯ ಮನವಿ ಮಾಡಿದ್ದಾರೆ. ತಮ್ಮಡಿಹಳ್ಳಿ ಬಿಳಿಕಲ್ಲುಗೊಲ್ಲರಹಟ್ಟಿಯ ರೈತರೊರ್ವರ ಐಪಿಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ ನಂಜುಂಡಯ್ಯ ಅವರ ಜಮೀನಿನಲ್ಲಿ ಕಂಬಗಳನ್ನು ನೆಟ್ಟು ವಿದ್ಯುತ್ ತಂತಿಗಳನ್ನು ಎಳೆಯಲಾಗಿದೆ. ಕಂಬಗಳನ್ನು ನೆಡುವ ಸಂದರ್ಭದಲ್ಲಿ ತೆಂಗಿನ ಸಸಿಗಳಿಗೆ ತೊಂದರೆಯಾಗುತ್ತದೆಂದು ವಿರೋಧ ಮಾಡಿದಾಗ ತೆಂಗಿನಗರಿಗಳಿಗೆ ತಗುಲದಂತೆ ತಂತಿಗಳನ್ನು ಅಳವಡಿಸುವುದಾಗಿ ಹೇಳಿ ಕಾಮಗಾರಿ ಪೂರೈಸಿದರು. ಆದರೆ ವಿದ್ಯುತ್ ಲೈನ್ ಎಳೆಯುವಾಗ ಮಾತು ತಪ್ಪಿನ ಬೆಸ್ಕಾಂನವರು 3 ಫಲಭರಿತ ತೆಂಗಿನ ಮರಗಳ ಗರಿಗಳಿಗೆ ಪದೇಪದೇ ತಗುಲಿ ಶಾರ್ಟ್ ಆಗುವಂತೆ ವಿದ್ಯುತ್ ತಂತಿಗಳನ್ನು ಎಳೆದಿದ್ದಾರೆ. ಪರಿಣಾಮ ಆಗಾಗ ವಿದ್ಯುತ್ ಶಾರ್ಟ್ ಆಗಿ ತೆಂಗಿನಗರಿಗಳು ಹೊತ್ತಿ ಉರಿದಿದೆ. ಅಲ್ಲದೆ ಶಾರ್ಟ್ನಿಂದ ಹೊರಹೊಮ್ಮುಖ ಕಿಡಿಗಳು ಕೆಳಗೆ ಬೀಳುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. …
ತುಮಕೂರು: ಕಳೆದ ಮೂವತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಮಾಡುತ್ತಾ ಬಂದಿದೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಎಷ್ಟು ಬೆಳೆಯುತ್ತಿದ್ದೇಯೊ, ಅಷ್ಟೇ ತುಮಕೂರು ಬೆಳೆಯುತ್ತಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ. ನಮ್ಮ ಉತ್ತಮ ಸಮಾಜ ಮತ್ತು ಪರಿಸರ ನಿರ್ಮಾಣ ಮಾಡುವುದರಲ್ಲಿ ತನ್ನದೇ ಆದ ಕನಸನ್ನು ನನಸು ಮಾಡುವುದೇ ಕೃಷ್ಣ ಬಿಲ್ಡರ್ಸ್ ಅಂಡ್ ಡೆವೆಲಪರ್ಸ್ನ ಉದ್ದೇಶವಾಗಿದೆ ಎಂದು ತುಮಕೂರಿನ ಶ್ರೀಸಿದ್ಧಗಂಗೆ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನುಡಿದರು. ತುಮಕೂರಿನ ಅಮರಜ್ಯೋತಿ ನಗರದ ಸಾಯಿಬಾಬ ಮಂದಿರದ ಹಿಂಭಾಗದಲ್ಲಿರುವ ಈಡಿಗರ ಲೇಡಿಸ್ ಹಾಸ್ಟೆಲ್ ಕಾಂಪ್ಲೆಕ್ಸ್ನ ಕೃಷ್ಣ ಬಿಲ್ಡರ್ಸ್ ಅಂಡ್ ಡೆವೆಲಪರ್ಸ್ ವತಿಯಿಂದ ಪಾದಪೂಜೆ ಹಾಗೂ ವೆಬ್ಸೈಟ್, ವೀಡಿಯೋ ಕ್ಲಿಪ್ ಬಿಡುಗಡೆ ಸಮಾರಂಭವನ್ನು ಅ.30 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಮಾತನಾಡುತ್ತಾ ಮಾಧ್ಯಮ ವರ್ಗದವರಿಗೆ ಕನಸು- ನನಸು ಮಾಡುವ ಉದ್ದೇಶದಿಂದ ಗುಣಮಟ್ಟದ ಮನೆಗಳನ್ನು ದೀರ್ಘಕಾಲ…
ಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತ ಹೆಚ್ಚಿದ್ದು ಹಲವರು ಇವುಗಳ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣದ ಹಲವೆಡೆ ಬೀದಿನಾಯಿಗಳ ಹಾವಳಿ ವಿಪರೀತ ಹೆಚ್ಚಿದ್ದು ಹಲವರು ಇವುಗಳಿಂದ ಕಚ್ಚಿಸಿಕೊಂಡಿದ್ದಾರೆ. ಪಟ್ಟಣದ ಶೆಟ್ಟಿಕೆರೆಗೇಟ್, ನೆಹರೂವೃತ್ತ, ಖಾಸಗಿಬಸ್ನಿಲ್ದಾಣ, ತರಕಾರಿ ಮರುಕಟ್ಟೆ, ಮಹಾಲಕ್ಷ್ಮಿ ಬಡವಾಣೆ ಹಾಗೂ ಕೋಳಿ ಮತ್ತು ಮಟಲ್ ಮಾರಾಟ ಮಳಿಗೆಗಳ ಬಳಿ ಇವಗಳದಂಡೇ ನೆರೆದಿರುತ್ತದೆ. ಕೆಲೆವಡೆ ದಾರಿಹೋಕರ ನಡುವೆ ಗುಂಪುಗುಂಪಾಗಿ ನುಗ್ಗಿ ಹಲವರನ್ನು ಗಾಸಿಗೊಳಿಸಿದೆ. ಜನನಿಬಿಡ ರಸ್ತೆಗಳಲ್ಲಿ ಸಂಚರಿಸುವ ಬೈಕ್ ಸವಾರನ್ನು ಅಟ್ಟಿಸಿಕೊಂಡು ಬರುವ ನಾಯಿಗಳಿಂದ ಹಲವರು ಗಾಬರಿಗೊಂಡು ಬಿದ್ದು ಪೆಟ್ಟುಮಾಡಿಕೊಂಡಿದ್ದಾರೆ. ಇವುಗಳ ಜೊತೆಗೆ ಹುಚ್ಚುನಾಯಿಗಳು ಕೆಲವು ಸೇರಿಕೊಂಡು ಕಂಡಕಂಡವರನ್ನು ಕಚ್ಚಿಗಾಯಗೊಳಿಸಿದ್ದರೆ, ಕೆಲವು ಗಾಯಗೊಂಡು ವಾಸನೆ ಹತ್ತಿದ ನಾಯಿಗಳು ಕಂಡಕಂಡ ಮನೆಗಳಿಗೆ ನುಗ್ಗಿ ರಂಪಾಟ ನಡೆಸಿವೆ. ಈಚೆಗೆ ನಾಯಿಗಳ ಕಡಿತಕ್ಕೆ ಹತ್ತಕ್ಕೂ ಹೆಚ್ಚುಮಂದಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇಂತಹ ನಾಯಿಗಳನ್ನು ನಿಯಂತ್ರಿಸುವುದಕ್ಕೆ ಪ್ರಾಣಿದಯಾಸಂಘದವರಿಂದ ಅಡ್ಡಿ ಯಾಗುತ್ತಿದೆ…
ಸಿರಾ: ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಯನ್ನು ನುಚ್ಚುನೂರು ಮಾಡಿ ಸಿರಾದಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಬಿಜೆಪಿ ಗೆಲ್ಲುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಘಂಟಾಘೋಷವಾಗಿ ಹೇಳಿದರು.ಸಿರಾ ತಾಲ್ಲೂಕಿನ ಮದಲೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮದಲೂರು ಕೆರೆಗೆ ಕೆನಾಲ್ ನಿರ್ಮಾಣಕ್ಕೆ ಅನುದಾನ ನೀಡಿದ್ದೇ ನಾನು. ಇನ್ನು 6 ತಿಂಗಳೊಳಗೆ ಕೆರೆ ತುಂಬಿಸಿ, ನಾನೇ ಉದ್ಘಾಟಿಸುತ್ತೇನೆ. ಇದುವರೆಗೂ ಯಡಿಯೂರಪ್ಪ ನೀಡಿದ್ದ ಭರವಸೆಗಳ್ಯಾವೂ ಹುಸಿಯಾಗಿಲ್ಲ ಎಂದರು. ಸಿರಾದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸವಿದೆ. ಹೇಮಾವತಿಯಿಂದ ಮದಲೂರು ಕೆರೆಗೆ ನೀರು, ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆ, ಕುಂಚಿಟಿಗ ಸಮಾಜವನ್ನು 2ಎಗೆ ಸೇರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು. ಭದ್ರ ಮೇಲ್ದಂಡೆ ಯೋಜನೆಯಿಂದ ಸಿರಾ ತಾಲ್ಲೂಕಿನ 60 ಕೆರೆಗಳನ್ನು ತುಂಬಿಸುವ ಕಾರ್ಯ ಮಾಡುತ್ತೇವೆ ಎಂದ ಅವರು, ಕಿಸಾನ್ ಸನ್ಮಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ…
ತುಮಕೂರು : ಕೊರೊನಾ ಮುನ್ನೆಚ್ಚರಿಕೆ ನಡುವೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಮತದಾನವು ಗುರುವಾರ ಶಾಂತಿಯುತವಾಗಿ ಜಿಲ್ಲೆಯಲ್ಲಿ ಮುಕ್ತಾಯಗೊಂಡಿದ್ದು, ಶೇಕಡ 76ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ನಡೆದಿದ್ದು, ಪದವೀಧರ ಮತದಾರರು ಮಾಸ್ಕ್ ಧರಿಸಿ, 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ಕಂಡು ಬಂತು. ಪ್ರತಿ ಮತಗಟ್ಟೆಯನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಮತದಾನ ಮಾಡಲು ಆಗಮಿಸುವ ಮತದಾರರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಸ್ಯಾನಿಟೈಸ್ ಮಾಡಿದ ನಂತರ ಮತಕೇಂದ್ರವನ್ನು ಪ್ರವೇಶಿಸಿ ಕೈಗವಸು ಧರಿಸಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದರು. ಜಿಲ್ಲೆಯಲ್ಲಿ ಒಟ್ಟು 64 ಮತ ಕೇಂದ್ರಗಳಲ್ಲಿ ಚುನಾವಣಾ ಮತದಾನವು ಪೊಲೀಸ್ ಭದ್ರತೆಯಲ್ಲಿ ನಡೆಯಿತು. 256ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿ ಚುನಾವಣಾ ಮತದಾನ ಕರ್ತವ್ಯವನ್ನು ನಿರ್ವಹಿಸಿದರು. ಯುವ…