Author: News Desk Benkiyabale

ಶಿರಾ:      ಶಿರಾ ಉಪಚುನಾವಣಾ ರಣಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಬ್ಬರದ ಪ್ರಚಾರ ನಡೆಸಿದರು.       ಶಿರಾ ಉಪಚುನಾವಣೆಯನ್ನು ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದು ಬಿಜೆಪಿ ಅಭ್ಯರ್ಥಿ ಪರ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಕನಕಗಿರಿ ಕ್ಷೇತ್ರದ ಬಸವರಾಜ್ ದಡೇಸೂಗೂರು ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇನಕನಹಳ್ಳಿ, ಹುಳಿಗೆರೆ, ಮದಲೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ರಾಜೇಶ್‍ಗೌಡ ಪರ ಬಿರುಸಿನ ಪ್ರಚಾರ ನಡೆಸಿದರು.       ಅಷ್ಟೇ ಅಲ್ಲದೇ ಶಿರಾ ಪಟ್ಟಣದ ಕೋಟೆ ಆಂಜನೇಯ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರೇಣುಕಾಚಾರ್ಯ, ಈ ಚುನಾವಣೆಯನ್ನು ನಾವು ಯಾರೂ ಕೂಡ ಬಯಸಿರಲಿಲ್ಲಾ. ಇದು ಆಕಸ್ಮಿಕವಾಗಿ ಎದುರಾದ ಉಪಚುನಾವಣೆಯಾಗಿದ್ದು ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಗೆಲುವು ಶತಸಿದ್ದ ಎಂದರು.        ಶಿರಾ ಉಪಚುನಾವಣೆಯಲ್ಲಿ…

Read More

ತುಮಕೂರು :        14 ತಿಂಗಳಲ್ಲಿ ಇಪ್ಪತ್ತೈದು ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇ ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.       ಕಳ್ಳಂಬೆಳ್ಳ ಹೋಬಳಿಯ ಹಾಲೇನಹಳ್ಳಿ, ಬಾಲೇನಹಳ್ಳಿ, ತರೂರು, ಭೂಪಸಂದ್ರ, ದೊಡ್ಡ ಆಲದಮರ ಸೇರಿದಂತೆ ವಿವಿಧೆಡೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಸಿರಾ ತಾಲ್ಲೂಕು ಒಂದರಲ್ಲಿ ಹದಿನೇಳು ಸಾವಿರ ರೈತರು ಸಾಲಮನ್ನಾ ಪ್ರಯೋಜನ ಪಡೆದಿದ್ದಾರೆ, 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೊದಲೂರು ಕೆರೆಗೆ ನೀರು ಹರಿಸಲು 600 ಕೋಟಿ ಬಿಡುಗಡೆ ಮಾಡಿದ್ದೇ, ಈಗ ಬಿಜೆಪಿಯವರು ಮೊದಲೂರು ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು.       ಸತ್ಯಣ್ಣ ಶಾಸಕರಾದ ಮೇಲೆ ಸುಮಾರು ಹದಿನೇಳು ಸಾವಿರ ರೈತರಿಗೆ ಬಗರ್ ಹುಕುಂ ಜಮೀನು ಮಂಜೂರು ಪತ್ರ ನೀಡಿದರು, ಬಿಜೆಪಿ ಅಧಿಕಾರ ನಡೆಸುತ್ತಿದೆ, ಉತ್ತರ ಕರ್ನಾಟಕದಲ್ಲಿ ನೆರೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ ಅವರ ಸಂಕಷ್ಟಕ್ಕೆ…

Read More

ಮಧುಗಿರಿ:       ಪದವೀಧರ ಮತದಾ ರರು ಮತದಾನದಲ್ಲಿ ಹೆಚ್ಚಾಗಿ ಭಾಗವಹಿಸಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿಯವರ ಗೆಲುವು ನಿಶ್ಚಿತವಾಗಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.       ಪಟ್ಟಣದ ಕೆ.ಆರ್.ಬಡಾವಣೆಯ ಸರ್ಕಾರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡಿ ಮಾತನಾಡಿದ ಅವರು ತಾಲೂಕಿನ ಎಲ್ಲ ಹೋಬಳಿ ಕೇಂದ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿಯ ಪರವಾಗಿ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಸ್ವತಃ ಎಲ್ಲ ಮತಗಟ್ಟೆಗೂ ಖುದ್ದಾಗಿ ಭೇಟಿ ನೀಡಿದ್ದು, ಕಾರ್ಯಕರ್ತರು ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸುತ್ತಿದ್ದಾರೆ. ಪದವೀಧರ ಮತದಾರನ ಮನಸ್ಥಿತಿಯು ಜೆಡಿಎಸ್ ಪರವಾಗಿರುವುದು ಕಂಡು ಬಂದಿದೆ. ಕುಮಾರಸ್ವಾಮಿ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕ್ರಾಂತಿಕಾರಿ ಅಭಿವೃದ್ಧಿ ಕಂಡಿತ್ತು. ಹಾಗೂ ಸಾವಿರಾರು ಹುದ್ದೆಗಳ ಸೃಷ್ಟಿಯಾಗಿದೆ. ಶಿಕ್ಷಕರ ಪರವಾದ ನಿಲುವನ್ನು ಹೊಂದಿರುವ ಕುಮಾರಸ್ವಾಮಿಯವರ ಕಾರ್ಯವೈಖರಿಯು ಪಕ್ಷದ ಅಭ್ಯರ್ಥಿಯ ಗೆಲುವಿನಲ್ಲಿ ಪ್ರಧಾನಪಾತ್ರ ವಹಿಸಲಿದ್ದು, ಚೌಡರೆಡ್ಡಿ ತೂಪಲ್ಲಿಯವರ ಗೆಲುವು ನಿಶ್ಚಯವಾಗಿದೆ ಎಂದರು.      ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಎಂ.ಆರ್.ಜಗನ್ನಾಥ್, ಚಂದ್ರಶೇಖರ್, ನಿವೃತ್ತ…

Read More

ತುಮಕೂರು:       ಶಿರಾ ವಿಧಾನಸಭೆ ಉಪಚುನಾವಣೆಯ ಪ್ರಚಾರಕ್ಕೆ ತೆರಳುವ ಮುನ್ನ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು, ನಗರದ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದ ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದು ಶಿರಾಕ್ಕೆ ಪ್ರಯಾಣ ಬೆಳೆಸಿದರು.        ನಗರಕ್ಕೆ ಆಗಮಿಸಿದ ಬಿ.ವಿ.ಶ್ರೀನಿವಾಸ್ ಅವರನ್ನು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಈ ದೇಶ ಮತ್ತು ಈ ರಾಜ್ಯ ಉಳಿಯಬೇಕೆಂದರೆ ಕಾಂಗ್ರೆಸ್ ಪಕ್ಷ ಗೆಲ್ಲಬೇಕು, ಬಿಜೆಪಿಯವರು ದೊಡ್ಡ ದೊಡ್ಡ ಆಶ್ವಾನೆಗಳನ್ನು ನೀಡಿ ಅಧಿಕಾರಕ್ಕೆ ಬಂದರೂ ಯಾವುದೇ ಆಶ್ವಾಸನೆಯನ್ನೂ ಈಡೇರಿಸಲಿಲ್ಲ, ಈಗ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಕೇಳಲು ಮತ್ತೊಂದು ಸುಳ್ಳಿನ ಆಶ್ವಾನೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.       ಕೋವಿಡ್ ಸಂದರ್ಭದಲ್ಲಿ ಸಮರ್ಥವಾಗಿ ನಿಭಾಯಿಸದ ಕಾರಣ…

Read More

 ತುಮಕೂರು:       ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅನುಮತಿ ಇಲ್ಲದೆ ಕಾರ್ಯಕ್ರಮ ಹಾಗೂ ಸಭೆ ಮಾಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರು ತಿಳಿಸಿದರು.       ಶಿರಾ ಮಿನಿ ವಿಧಾನಸೌಧದಲ್ಲಿಂದು ನಡೆದ ಎಫ್ಎಸ್ಟಿ ತಂಡಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಎಫ್ಎಸ್ಟಿ ತಂಡಗಳು ಮಾಡುವ ಮನೆ ಮನೆಯ ಹತ್ತಿರ ಹೋಗಿ ಪ್ರಚಾರ ಮಾಡುವುದನ್ನೂ ಕೂಡ ವಿಡಿಯೋ ಮಾಡಬಹುದು. ಸ್ತ್ರೀಶಕ್ತಿ ಸಂಘಗಳ ಸಭೆ ನಡೆಸಬಹುದು. ಆದರೆ ಸಭೆ ನಡೆಸುವ ಸ್ಥಳದಲ್ಲಿ ರಾಜಕೀಯ ವ್ಯಕ್ತಿಗಳಿದ್ದರೆ ಅಂತಹ ಸಭೆಗಳಿಗೆ ಅನುಮತಿಯನ್ನು ಪಡೆಯಬೇಕೆಂದು ಅವರು ತಿಳಿಸಿದರು.       ಚುನಾವಣಾ ಸಂಬಂಧ ಹೆಚ್ಚು ಜನರಿದ್ದಾಗ ವಿಡಿಯೋ ಚಿತ್ರೀಕರಣ ಮಾಡಿ ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಯಾವುದಾದರೂ ಅಹಿತಕರ ಘಟನೆ ನಡೆದ ತಕ್ಷಣವೇ ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಹಾಗೂ ಚುನಾವಣಾಧಿಕಾರಿಗಳಿಗೆ…

Read More

ತುಮಕೂರು :       ತುಮಕೂರಿನ ಜಿಲ್ಲಾಸ್ಪತ್ರೆಯ ಕೊರೊನಾ ತೀವ್ರ ನಿಗಾ ಘಟಕಕ್ಕೆ ಬೆಂಗಳೂರಿನ ಯುನೈಟೆಡ್ ವೇ ಸಂಸ್ಥೆ ವತಿಯಿಂದ 4 ಎಚ್.ಎಫ್.ಎನ್.ಸಿ. ಯಂತ್ರಗಳನ್ನು ನೀಡಲಾಯಿತು.        ಬೆಂಗಳೂರಿನ ಯುನೈಟೆಡ್ ವೈ ಸಂಸ್ಥೆಯು ಜಿಲ್ಲಾಡಳಿತ ಮೂಲಕ ಜಿಲ್ಲಾಸ್ಪತ್ರೆಯ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಉಪವಿಭಾಗಾಧಿಕಾರಿ ಅಜಯ್ ಅವರಿಗೆ ನೀಡಲಾಯಿತು.       ಜಿಲ್ಲಾಡಳಿತದ ಕಡೆಯಿಂದ ಪಡೆದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಅವರು, ಈ ಸಾಧನಗಳು ಐಸಿಯುನಲ್ಲಿರುವ ಕೊರೊನಾ ರೋಗಿಗಳಿಗೆ ಉಪಯೋಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.       ಈ ಸಾಧನಗಳು ಕೊರೊನಾ ರೋಗಿಗಳಿಗೆ ಆಕ್ಸಿಜನ್‍ನ್ನು ಅತಿ ಸಾಂಧ್ರತೆಯಲ್ಲಿ ವೇಗವಾಗಿ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿವೆ. 8 ಲಕ್ಷ ರೂ. ಮೌಲ್ಯದ ಸಾಧನಗಳನ್ನು ನೀಡಿದ ಯುನೈಟೆಡ್ ವೇ ಸಂಸ್ಥೆಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.       ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಡಾ. ಸನತ್, ಯುನೈಟೆಡ್ ವೇ…

Read More

ಮಧುಗಿರಿ:        ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ-4 ರಂದು ಪುರಸಭೆ ಕಾರ್ಯಾಲಯದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಡಾ. ಜಿ. ವಿಶ್ವನಾಥ್ ತಿಳಿಸಿದ್ದಾರೆ.       ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಅವರು ಪುರಸಭೆಯ ಯಾವುದೇ ಚುನಾಯಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ಚುನಾಯಿಸುವ ಬಗ್ಗೆ ಚುನಾವಣಾಧಿಕಾರಿಗಳಾದ ಮಧುಗಿರಿ ತಹಶೀಲ್ದಾರ್ ರವರಿಗೆ ತಿಳಿಸಿ ಬೆಳಗ್ಗೆ 10 ರಿಂದ 11 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಸ್ಪರ್ಧಿಸುವವರು ತಮ್ಮ ಲಿಖಿತ ಒಪ್ಪಿಗೆಯನ್ನು ನಮೂನೆಯಲ್ಲಿ ಸಲ್ಲಿಸಬೇಕು. ಚುನಾಯಿತ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ತಮ್ಮ ಹೆಸರನ್ನು ತಾವೇ ಸೂಚಿಸಿಕೊಳ್ಳಬಾರದು.       ನಾಮ ನಿರ್ದೇಶನ ಪತ್ರವನ್ನು ಬೇರೆಯವರು ಸಲ್ಲಿಸುವಂತಿಲ್ಲ. ಸೂಚಕರಾಗಲಿ ಅಥವಾ ಅಭ್ಯರ್ಥಿ ಯಾಗಲಿ ಖುದ್ದಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು.       ಮಧ್ಯಾಹ್ನ 1 ರಿಂದ 1.15 ರೊಳಗೆ ನಾಮಪತ್ರ ಪರಿಶೀಲನೆ ನಡೆಸಲಿದ್ದು,…

Read More

ತುಮಕೂರು :       ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರ ವ್ಯಾಪ್ತಿಯಲ್ಲಿ 10 ಹಾಗೂ ಗ್ರಾಮಾಂತರದಲ್ಲಿ 6 ಸೇರಿ ತುಮಕೂರು ತಾಲ್ಲೂಕಿನಲ್ಲಿ 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಹಶೀಲ್ದಾರ್ ಮೋಹನ್‍ಕುಮಾರ್ ತಿಳಿಸಿದರು.         ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಆಯೋಗದ ನಿರ್ದೇಶನದ ಮೇರೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಯೇ ನಡೆಸಲಾಗುತ್ತಿದೆ ಎಂದರು.        ತುಮಕೂರು ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ ಮಸ್ಟರಿಂಗ್ ಮತ್ತು ಡಿಮಸ್ಟರಿಗೆ ಕೌಂಟರ್‍ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. . ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಲಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಿ.ಪಿ.ಇ. ಕಿಟ್, ಮಾಸ್ಕ್, ಸ್ಯಾನಿಟೈಸರ್ ಎಲ್ಲವನ್ನು ಚುನಾವಣಾ ಆಯೋಗದಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

Read More

ತುಮಕೂರು :       ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಬಾರಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ಗೆಲುವು ಸಾಧಿಸಿದ್ದರೂ ಅಭಿವೃದ್ಧಿ ಎಂಬುದು ಕುಂಠಿತವಾಗಿದೆ. ಕುಡಿಯುವ ನೀರು, ರಸ್ತೆಯಂತಹ ಮೂಲಭೂತ ಸೌಕರ್ಯಗಳು ಇಂದಿಗೂ ಮರೀಚಿಕೆಯಾಗಿವೆ. ಹಾಗಾಗಿ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದರು.       ಕಾಂಗ್ರೆಸ್ ಮತ್ತು ಜೆಡಿಎಸ್ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ.ಹಣ, ಹೆಂಡ ಹಂಚುವ ಸಂಸ್ಕøತಿ ನಮ್ಮದಲ್ಲ. ಅದು ಕಾಂಗ್ರೆಸ್ ಪಕ್ಷದ್ದು, ನಮ್ಮದೆನಿದ್ದರೂ ಸಂಘಟನೆ ಮತ್ತು ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತವೆ.ಅಡ್ಡದಾರಿ ಹಿಡಿಯುವುದಿಲ್ಲ. ನೀರಾವರಿ ಹೆಚ್ಚಿನ…

Read More

ಹುಳಿಯಾರು:       ನಾಡ ಹಬ್ಬ ದಸರಾ ಇರುವುದರಿಂದ ಹಬ್ಬದ ತಯಾರಿಗಾಗಿ ಪಟ್ಟಣದಲ್ಲಿ ಜನರು ವಿವಿಧ ವಸ್ತುಗಳನ್ನು ಖರೀದಿಯಲ್ಲಿ ತೊಡಗಿಕೊಂಡಿದ್ದರು. ದಿನಸಿ, ಹೂವು, ಹಣ್ಣಿನ ಬೆಲೆ ಏರಿಕೆಯ ಬಿಸಿಗಿಂತ ಹಬ್ಬದ ಸಂಭ್ರಮದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಮರೆತು ಇನರು ಓಡಾಡುತ್ತಿರುವುದು ಆತಂಕಕ್ಕೆ ಕಾರಣವಾಗಿತ್ತು.       ಪಟ್ಟಣದಲ್ಲಿ ಈ ಬಾರಿ ಹಿಂದಿಗಿಂತಲೂ ಹೆಚ್ಚಾಗಿ ಹೂವು, ಹಣ್ಣು, ಕುಂಬಳಕಾಯಿ, ಬಾಳೆಕಂದಿನ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿತ್ತು. ಬೆಲೆಯೂ ಸಹ ದುಪ್ಪಟ್ಟಾಗಿದ್ದರೂ ಹಬ್ಬ ಮಾಡಲೇಬೇಕೆಂಬ ಆಶಯದಿಂದ ಚೌಕಾಸಿ ವ್ಯಾಪಾರ ಮಾಡಿ ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.       ಪಟ್ಟಣದ ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆ, ಕರವೇ ಸರ್ಕಲ್‍ನಲ್ಲಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಕಂಡು ಬಂದಿತಲ್ಲದೆ ಸೋಂಕಿನ ಪ್ರಮಾಣ ಇಳಿಮುಖವಾಗಿಯೇ ಬಿಟ್ಟಿದೆ ಎಂಬಂತೆ ಹಲವು ಅಂಗಡಿಗಳಲ್ಲಿ ಸಾರ್ವಜನಿಕರು ಸಾಮಾ ಜಿಕ ಅಂತರವನ್ನು ಮರೆತಂತಿದ್ದರು. ವ್ಯಾಪಾರಿಗಳೂ ಸಹ ಸ್ಯಾನಿಟೈಸರ್, ಸಾಮಾಜಿಕ ಅಂತರ ಗಾಳಿಗೆ ತೂರಿ ವ್ಯಾಪಾರ ಮಾಡುತ್ತಿದ್ದರು.…

Read More