Author: News Desk Benkiyabale

ತುಮಕೂರು :        ಶಿರಾ ಕ್ಷೇತ್ರದ ಐದು ಸಾವಿರ ಮತದಾರರಿಗೆ ಮನೆ ಬಾಗಿಲಿಗೆ ಬರುವ ಮತಗಟ್ಟೆಯಲ್ಲಿ ಮತದಾನ ಮಾಡುವ ಅವಕಾಶ ಸಿಗಲಿದೆ. ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಸಲ ಇವರ ಮನೆ ಬಾಗಿಲಿಗೆ ಮತಗಟ್ಟೆ ಹೋಗುತ್ತಿದೆ, ಅದೂ ಚುನಾವಣೆ ಮತದಾನ ದಿನಾಂಕ ಇನ್ನೂ ವಾರ ಇರುವ ಮೊದಲೇ ಇವರೆಲ್ಲ ಅವರಿಗೆ ಬೇಕಾದವರಿಗೆ ಮತ ಹಾಕಲಿದ್ದಾರೆ. ಇದು ಅಂಚೆ ಮತದಾನಕ್ಕಿಂತಲು ಭಿನ್ನವಾಗಿದೆ ಎಂಬುದು ಕುತೂಹಲಕಾರಿ ವಿಷಯ.       ಪ್ರತಿ ಮನೆಗೂ ಮತಗಟ್ಟೆಯೊಂದಿಗೆ ಚುನಾವಣಾ ಸಿಬ್ಬಂದಿ ತೆರಳಿ ಮತ ಹಾಕಿಸಿಕೊಂಡು ಬರಲಿದ್ದಾರೆ. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ.       ಕೋವಿಡ್-19 ಸಂಕಷ್ಟದಲ್ಲಿ ಮೊದಲಬಾರಿಗೆ ರಾಜ್ಯದಲ್ಲಿ ಎದುರಾಗಿರುವ ಉಪಚುನಾವಣೆಯಲ್ಲಿ ಕೋವಿಡ್ ಪಾವಿಟಿವ್ ವ್ಯಕ್ತಿ, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸುಗಮವಾಗಿ ಮತ ಚಲಾಯಿಸಲು ಚುನಾವಣಾ ಆಯೋಗ ಇಂತಹ ಅವಕಾಶ ನೀಡಿರುವುದು ಮತದಾರರ ಮೆಚ್ಚುಗೆಗೆ…

Read More

ಚಿಕ್ಕನಾಯಕನಹಳ್ಳಿ :       ಘನತ್ಯಾಜ್ಯ ವಸ್ತು ನಿರ್ವಹಣೆ ವಿಧಿಯನ್ನು ಪಾಲಿಸದವರಿಗೆ ಪುರಸಭಾ ಸಿಬ್ಬಂದಿ ದಂಡಹಾಕುವ ಪ್ರಕ್ರಿಯೆಯನ್ನು ಪಟ್ಟಣದಲ್ಲಿ ನಡೆಸಲಾಯಿತು. ಪಟ್ಟಣವನ್ನು ಕಸಮುಕ್ತಗೊಳಿಸುವ ದಿಸೆಯಲ್ಲಿ ಪುರಸಭಾ ಸಿಬ್ಬಂದಿಯವರು ಅಂಗಡಿಗಳ ಮುಂಭಾಗದಲ್ಲಿ ಕಸಗಳನ್ನು ತಂದುಹಾಕಿದಕ್ಕಾಗಿ ಅಂಗಡಿ ಮಾಲಿಕರಿಂದ ದಂಡವಸೂಲಿ ಕಾರ್ಯನಡೆಸಲಾಯಿತು.       ಕರ್ನಾಟಕಪೌರಸಭೆ ಅಧಿನಿಯಮ 1964ರ ಸಂಖ್ಯೆ 22ರ ಪ್ರಕರಣ 325ರ ಪ್ರಕಾರ ಘನತ್ಯಾಜ್ಯವಸ್ತು ನಿರ್ವಹಣೆ 2016ರ ಸೇವೆಯ ಪಾಲನೆ ಮಾಡದಿರುವ ಮನೆ, ಅಂಗಡಿ, ಟೀಶಾಪ್, ಹೋಟೆಲ್ ಮುಂತಾದ ಮುಂಗಟ್ಟುಗಳ ಮಾಲಿಕರಿಗೆ ಪ್ರಥಮವಾಗಿ ರೂ.50ನ್ನು ದಂಡಹಾಕಲಾಗುತ್ತಿದೆ ಎಂದು ಪುರಸಭೆಯ ಸಿಬ್ಬಂದಿ ವಿದ್ಯಾ ಮಾಹಿತಿ ನೀಡಿದರು. ಸಾರ್ವಜನಿಕವಾಗಿ ಈ ಬಗ್ಗೆ ಈಗಾಗಲೇ ಧ್ವನಿವರ್ಧಕಗಳ ಮೂಲಕ ಪ್ರಚಾರ ನಡೆಸಿದ್ದು, ಅಂಗಡಿಮಾಲಿಕರು ತಮ್ಮ ದಿನನಿತ್ಯದ ಕಸಗಳನ್ನು ಸಂಗ್ರಹಿಸಿ ಪುರಸಭೆಯ ವಾಹನದಲ್ಲಿಯೇ ಹಾಕಬೇಕೆಂಬ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಇಂತಹ ಕಸ ಸಂಗ್ರಹಣೆಗಾಗಿ ದಿನನಿತ್ಯಕಸದವಾಹನ ಎಲ್ಲಾ ರಸ್ತೆಗಳಲ್ಲೂ ಸಂಚರಿಸುತ್ತಿದೆ. ಇಷ್ಟೆಲ್ಲಾ ವ್ಯವಸ್ಥೆಯಿದ್ದರೂ ಕಸಗಳನ್ನು ಬೇಕಾಬಿಟ್ಟಿಹಾಕುವ ಮಂದಿಗೆ ದಂಡಹಾಕುವ ಪ್ರಕ್ರಿಯೆ ಮುಂದಿವರೆಯುವುದೆಂದರು.       ಆದರೆ ಪಟ್ಟಣದ…

Read More

ತುಮಕೂರು :        ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾಡಹಬ್ಬ ದಸರಾ ಆಚರಣೆಯಲ್ಲಿ ಕೋವಿಡ್-19ರ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.       ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ನಾಡಹಬ್ಬ ದಸರಾವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವುದು, ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವಿಲ್ಲದೆ ನಡೆಸಲಾದ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.       ದಸರಾ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಆಚರಿಸುವ ಮೂಲಕ ಸಮಾಜದ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. ದಸರಾ ಹಬ್ಬದ ತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಿಸಿದ ಪ್ರಾಧಿಕಾರಗಳು ಆಗ್ಗಿಂದಾಗ್ಗೆ…

Read More

ತುಮಕೂರು:       ಹೃದಯ ರೋಗಕ್ಕೆ ಸಂಬಂಧಿಸಿದ ಆರೋಗ್ಯ ಸೇವೆ ಬಡಜನರಿಗೆ ಸಿಗುವುದು ಕಷ್ಟವಾಗಿದೆ. ಹಣವಂತರು ದೊಡ್ಡ ದೊಡ್ಡ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆದರೆ ಬಡವರಿಗೆ ಸರ್ಕಾರಿ ಆಸ್ಪತ್ರೆ ನಿಗಧಿತ ಸಮಯದೊಳಗೆ ಚಿಕಿತ್ಸೆ ಸಿಗುವುದಿಲ್ಲ. ಅಂಥ ಜನಜನರ ಸೇವೆಗಾಗಿ ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್’ ತೆರೆಯಲಾಗುತ್ತಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದರು.      ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 26ರಂದು ವೈದ್ಯಕೀಯ ಕಾಲೇಜಿನಲ್ಲಿ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ಆರಂಭವಾಗಲಿದ್ದು, ವಿದೇಶಿ ಗುಣಮಟ್ಟದ ಆಧುನಿಕ ಸಲಕರಣೆಗಳನ್ನು ಒಳಗೊಂಡ ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ.       32 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ತಂದೆ ಡಾ. ಗಂಗಾಧರಯ್ಯ ಮತ್ತು ಸಹೋದರರಾದ ಡಾ.ಶಿವಪ್ರಸಾದ್ ಆಶಯದಂತೆ ಸಮಾಜದ ಕಟ್ಟಕಡೆಯ ಬಡಜನರಿಗೆ ಆರೋಗ್ಯ ಸೇವೆ…

Read More

ಹುಳಿಯಾರು:      ಕಾಳು ಕಟ್ಟುವ ಹಂತದಲ್ಲಿ ಮಳೆಯಿಲ್ಲ ಎಂದು ಚಿಂತಾಕ್ರಾಂತರಾಗಿದ್ದ ರೈತರಿಗೆ ಕಳೆದ ಎರಡು ದಿನಗಳಿಂದ ಆಗಾಗ ಬಿಟ್ಟೂ ಬಿಡದಂತೆ ಸುರಿಯುತ್ತಿರುವ ಮಳೆ ಒಂದೆಡೆ ಸಂತಸಕ್ಕೆ ಕಾರಣವಾದರೆ ಮತ್ತೊಂದೆಡೆ ಮಳೆ ಹೊಡೆತಕ್ಕೆ ಸಿಕ್ಕಿ ತೆನೆ ಬಂದಿರುವ ರಾಗಿ ಮತ್ತು ಸಾಮೆ ಬೆಳೆ ನೆಲಕ್ಕೆ ಉರುಳಿ ಬಿದ್ದು ಆತಂಕಕ್ಕೆ ಕಾರಣವಾಗಿದೆ.       ಲಾಕ್‍ಡೌನ್‍ನಿಂದಾಗಿ ಪಟ್ಟಣ ಸೇರಿದ್ದ ಯುವಕರು ಹಳ್ಳಿಗಳಿಗೆ ಮರಳಿ ಬಂದ ಪರಿಣಾಮ ಈ ಬಾರಿ ಹುಳಿಯಾರು ಸುತ್ತ ಮುತ್ತ ದಾಖಲೆಯ ರಾಗಿ ಬಿತ್ತನೆ ಆಗಿತ್ತು. ಕಳೆದ ತಿಂಗಳು ಉತ್ತಮವಾಗಿ ಮಳೆ ಬಂದಿದ್ದರಿಂದ ರೈತರು ಬೆಳೆಗೆ ಸಾಕಷ್ಟು ಯೂರಿಯಾ ಗೊಬ್ಬರ ಹಾಕಿದ್ದರು. ಇದರಿಂದ ರಾಗಿ ಬೆಳೆಯು ಹುಲುಸಾಗಿ ಬೆಳೆದಿತ್ತಲ್ಲದೆ ಹಲವೆಡೆ ಹೊಡೆ ಬಿಚ್ಚಿ ಮಳೆಯ ನಿರೀಕ್ಷೆಯಲ್ಲಿತ್ತು. ಅದೃಷ್ಟವಶತ್ ಕಳೆದ ವಾರದಿಂದ ಆಗಾಗ ಮಳೆ ಬೀಳುತ್ತಿದ್ದು ರೈತರ ಹರ್ಷಕ್ಕೆ ಕಾರಣವಾಗಿತ್ತು.       ಆದರೆ ಮಂಗಳವಾರ ಮತ್ತು ಬುಧವಾರ ಬಿದ್ದ ಮಳೆಗೆ ಕೆಲವೆಡೆ ರಾಗಿ ಮತ್ತು ಸಾಮೆ ಬೆಳೆಗೆ…

Read More

ತುಮಕೂರು:       ಆಗ್ನೇಯ ಪದವಿಧರರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು.       ಮೊದಲಿಗೆ ಹಿರಿಯ ಶ್ರೀಗಳಾದ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ನಂತರ, ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿ ಅವರ ಬಳಿ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ರಮೇಶ್‍ಬಾಬು, ಸಿದ್ದಗಂಗಾ ಮಠಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಅದರಲ್ಲಿಯೂ ಚಿಕ್ಕನಾಯಕನಹಳ್ಳಿ ತಾಲೂಕಿನವನಾದ ನನಗೆ ಸಿದ್ದಗಂಗಾ ಮಠದ ಅನುಗ್ರಹ ಸದಾ ಇರುತ್ತದೆ.ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿ ಹಾಗೂ ಶ್ರೀಸಿದ್ದಲಿಂಗಸ್ವಾಮೀಜಿ ಇಬ್ಬರ ಅಶೀರ್ವಾದವೂ ನನ್ನ ಮೇಲಿದೆ.ನನ್ನ ರಾಜಕೀಯ ಜೀವನದ ಬೆಳವಣಿಗೆಗೆ ಇದು ಕಾರಣ ಎಂದರು.       ಕಳೆದ ಸಾಲಿನಲ್ಲಿ ನನಗೆ ಸಿಕ್ಕ ಅಲ್ಪ ಅವಧಿಯಲ್ಲಿಯೇ ಶಿಕ್ಷಕರು ಮತ್ತು ಪದವಿಧರರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸಿದ್ದೇನೆ.ಅಲ್ಲದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದ 6ನೇ ವೇತನ ಆಯೋಗದ ಶಿಫಾರಸ್ಸುಗಳ ಸಂಪೂರ್ಣ ಜಾರಿ ಹಾಗೂ…

Read More

ಗುಬ್ಬಿ :         ಬಿಜೆಪಿ ಸರ್ಕಾರ ಮೂರು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಷ್ಟೇ ಸಂಖ್ಯೆ ನಿರುದ್ಯೋಗ ಸೃಷ್ಟಿಸಿ ದೇಶದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಈ ಸಂದರ್ಭದಲ್ಲಿ ಪದವೀಧರರು ಬಿಜೆಪಿ ಸರ್ಕಾರದಿಂದ ಏನನ್ನೂ ನಿರೀಕ್ಷಿಸಲಾಗದ ಸ್ಥಿತಿ ಇದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್.ಚೌಡರೆಡ್ಡಿ ತೂಪಲ್ಲಿ ತಿಳಿಸಿದರು.       ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಶೇ 40 ರಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಸೃಷ್ಟಿಸುವ ಕೆಲಸ ಮಾಡಬೇಕಾದ ಬಿಜೆಪಿ ಸರ್ಕಾರ ಕೇವಲ ವ್ಯಾಪಾರೀಕರಣ ನಡೆಸಿಕೊಂಡು ಕಾಲಹರಣ ಮಾಡಿದೆ ಎಂದು ದೂರಿದರು.       ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅನುಭವಿ ಶಿಕ್ಷಣ ಸಚಿವರಾಗಿ ಬಸವರಾಜು ಹೊರಟ್ಟಿ ಮಾಡಿದ ಕಾರ್ಯ ಅಭೂತಪೂರ್ವ. ಅಂದು ಶಾಲಾಕಾಲೇಜು ಸ್ಥಾಪಿಸಿ ಶಿಕ್ಷಣ ರಂಗದಲ್ಲಿ ಕ್ರಾಂತಿ ನಡೆಸಿದ್ದರು. ಈ ವೇಳೆ ಸಾವಿರಾರು ಉದ್ಯೋಗ ಸೃಷ್ಟಿಸುವ ಕೆಲಸ…

Read More

 ತುಮಕೂರು :       ಶಿರಾ ವಿಧಾನಸಭಾ ಉಪ ಚುನಾವಣೆಯ ಚುನಾವಣಾ ತರಬೇತಿಗೆ ಗೈರು ಹಾಜರಾಗಿರುವ ಪಿಆರ್‍ಓ ಹಾಗೂ ಎಪಿಆರ್‍ಓ ಅಧಿಕಾರಿಗಳಿಗೆ ಅಕ್ಟೋಬರ್ 24ರಂದು ತುಮಕೂರು ನಗರದ ಸಿದ್ದಗಂಗಾ ಮಹಿಳಾ ಪದವಿ/ಪದವಿಪೂರ್ವ ಕಾಲೇಜಿನಲ್ಲಿ ತರಬೇತಿಯನ್ನು ಹಮ್ಮಿಕೊಂಡಿದ್ದು, ಕಡ್ಡಾಯವಾಗಿ ತರಬೇತಿಗೆ ಹಾಜರಾಗುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ಸೂಚಿಸಿದ್ದಾರೆ.        ಅಕ್ಟೋಬರ್ 21ರಂದು ನಡೆದ ತರಬೇತಿಗೆ ಕೆಲ ಪಿಆರ್‍ಓ ಹಾಗೂ ಎಪಿಆರ್‍ಓಗಳು ಗೈರು ಹಾಜರಾಗಿದ್ದು, ತಮ್ಮ ಗೈರು ಹಾಜರಿಗೆ ಲಿಖಿತ ವಿವರಣೆಯೊಂದಿಗೆ ಕಡ್ಡಾಯವಾಗಿ ಅಂದಿನ(ಅಕ್ಟೋಬರ್ 24) ತರಬೇತಿಗೆ ಹಾಜರಾಗುವಂತೆ ನಿರ್ದೇಶನ ನೀಡಿದ್ದಾರೆ. ತಪ್ಪಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

Read More

ಕೊರಟಗೆರೆ :       ಟೋಟಲ್ ಟರ್ನ್ ಕೀ ಆಧಾರದಲ್ಲಿ ಬೆಸ್ಕಾಂನಲ್ಲಿ ಬಹುಕೋಟಿಯ ಟೆಂಡರ್ ಕರೆದಿರುವ ಬಗ್ಗೆ ಹಾಗೂ ಇದರಿಂದ ವಿದ್ಯುತ್ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಹಾಗೂ ಗ್ರಾಹಕರಿಗೂ ಆಗುತ್ತಿರುವ ತೊಂದರೆಗಳೇನಂದರೆ, ಬೆಸ್ಕಾಂನಲ್ಲಿ ಟೋಟಲ್ ಟರ್ನ್ ಕೀ ಆಧಾರದಲ್ಲಿ ಬೆಸ್ಕಾಂನ ಎಲ್ಲಾ ವಿದ್ಯುತ್ ಕಾಮಾಗಾರಿಗಳನ್ನು ಕಾರ್ಯ ನಿರ್ವಾಹಿಸಲು ಬಹುಕೋಟಿಯ ಟೆಂಡರ್ ಕರೆದಿರುವುದು ಲಕ್ಷಾಂತರ ಗ್ರಾಹಕರಿಗೆ ಹಾಗೂ ಸ್ಥಳಿಯ ಬೆಸ್ಕಾಂ ಗುತ್ತಿಗೆದಾರರಿಗೆ ತೊಂದರೆಯಾಗಿದೆ.       ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊರಟಗೆರೆ ತಾಲ್ಲೂಕು ಅಧ್ಯಕ್ಣ ಎಸ್ ಆರ್ ಸೋಮಶೇಖರ್ ಮಾತನಾಡಿ, ಈ ಟೆಂಡರ್ ಪ್ರಕ್ರಿಯೆಯಿಂದ ಎಲ್ಲಾ ಗುತ್ತಿಗೆದಾರರಿಗೆ ಅಪಾರ ನಷ್ಟವಾಗುತ್ತದೆ ಹಾಗೂ ಕುಟುಂಬ ನಿರ್ವಹಣೆಯು ತುಂಬಾ ಕಷ್ಟಕರವಾಗುತ್ತದೆ ಕಾರಣ ಬೆಸ್ಕಾಂನ ಕಾಮಾಗಾರಿಗಳನ್ನು ನಂಬಿಕೊಂಡು ಕರ್ನಾಟಕ ರಾಜ್ಯದ ಅನುಮತಿ ಪಡೆದು ವಿದ್ಯುತ್ ಗುತ್ತಿಗೆದಾರ ಲೈಸನ್ಸ್ ಅನ್ನು ಕರ್ನಾಟಕ ಸರ್ಕಾರದಿಂದಲೇ ಪಡೆದು ಕೆಲಸ ನಿರ್ವಹಿಸುತ್ತಿರುತ್ತೇವೆ. ಆದರೆ ಈಗ ಬೆಸ್ಕಾಂನಲ್ಲಿ ಟೋಟಲ್ ಟರ್ನ್ ಕೀ ಆಧಾರದಲ್ಲಿ ಟೆಂಡರ್…

Read More

ತುಮಕೂರು :       ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.       ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳಿಗೆ ನ.3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಂತ ಬಹುತದಿಂದ ಜಯಶೀಲರಾಗಿ ಈ ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪರ್ವವನ್ನೇ ಸೃಷ್ಠಿಸಲಿದ್ದಾರೆ ಎಂದರು.       ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಅಭಿವೃದ್ಧಿಯತ್ತ ಜನರ ಒಲವಿದೆ. ಇನ್ನು ಎರಡು ಮುಕ್ಕಾಲು ವರ್ಷ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದ್ದು, ಜನರಿಗೆ ಅಗತ್ಯ ಸವಲತ್ತು, ಸೌಲಭ್ಯಗಳನ್ನು ಪೂರೈಸುವ ಕೆಲಸ…

Read More