ಶಿರಾ: ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದ ಕಾರ್ಯಕರ್ತರನ್ನ ಬಿಜೆಪಿ ತನ್ನೆಡೆ ಸೆಳೆಯಲು ರಣತಂತ್ರಗಳನ್ನು ರೂಪಿಸಿ ವಿವಿಧ ಆಮಿಷಗಳ ಮಹಾಪೂರವನ್ನೇ ಹರಿಸುತ್ತಿದೆ. ಕಾಂಗ್ರೆಸ್ ಪಕ್ಷವೂ ಸಹ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತೀಯರನ್ನ ತನ್ನೆಡೆ ಸೆಳೆದುಕೊಳ್ಳುವಲ್ಲಿ ತಾನೂ ಸಹ ಕಡಿಮೆಯಿಲ್ಲ ಎಂಬುದನ್ನ ನಿರೂಪಿಸಲು ಹೊರಟಿದೆ. ಜ್ಯಾತ್ಯಾತೀಯ ಜನತಾ ದಳದಲ್ಲಿ ಸಮರ್ಥ ದಂಡನಾಯಕನ ಕೊರತೆ ಹೆಚ್ಚಾಗಿ ಕಂಡುಬರುತ್ತಿದ್ದು, ದಿವಂಗತ ಬಿ.ಸತ್ಯನಾರಾಯಣ್ರವರ ಪತ್ನಿ ಅಮ್ಮಜಮ್ಮ ಅಧಿಕೃತ ಅಭ್ಯರ್ಥಿಯೆಂದು ಘೋಷಣೆಯಾಗಿದ್ದು, ಕಣ್ಣೀರಿನ ರಾಜಕಾರಣದಲ್ಲಿ ಅನುಕಂಪದ ಅಲೆಯಲ್ಲಿ ತೇಲುವ ಕನಸು ಹೊತ್ತಿದೆ. ರಾಜ್ಯದ ಪ್ರಭಲ ನಾಯಕರ ಸಾಲಿನಲ್ಲಿ ನಿಲ್ಲುವ ಟಿ.ಬಿ.ಜಯಚಂದ್ರ 9 ಬಾರಿ ಸ್ಪರ್ಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ತಮ್ಮನ್ನು ತಾವು ಓರೆ ಹಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ರಾಜೇಶ್ಗೌಡರು ಮೂಲ ಬಿಜೆಪಿಗರಲ್ಲದಿದ್ದರೂ ಜಾತಿಯ…
Author: News Desk Benkiyabale
ತುರುವೇಕೆರೆ: ಆಸ್ತಿ ವಿಚಾರವಾಗಿ ಕಲಹ ನಡೆದು ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಕೇಳಿ ಬಂದಿದೆ. ತುರುವೇಕೆರೆ ತಾಲೂಕಿನ ಸೋಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರ್ 17 ವರ್ಷದ ಯುವತಿ ದೇವಿಕ ಮೃತ ದುದೈವಿ ಎಂದು ತಿಳಿದುಬಂದಿದೆ. ಅಜ್ಜಿ ತಾತನಿಗೆ ಸೇರಿದ ಜಮೀನು ಹಂಚಿಕೆಯ ಹಿನ್ನೆಲೆಯಲ್ಲಿ ಹತ್ಯೆಯಾದ ಯುವತಿ ಮತ್ತು ಅವರ ತಂದೆ ಮತ್ತು ದೊಡ್ಡಪ್ಪಂದಿರ ನಡುವೆ ಮಾತಿನ ವಿವಾದ ಏರ್ಪಾಟಾಗಿ ಮಾತು ಮಿತಿಮೀರಿ ಹಲ್ಲೆಯ ಹಂತ ತಲುಪಿದ್ದು, ಯುವತಿಯ ಮನೆಗೆ ನುಗ್ಗಿ ದೊಡ್ಡಪ್ಪಂದಿರಾದ ನಂಜೇಗೌಡ, ಪಂಚಾಕ್ಷರಯ್ಯ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಾದ ನಂತರ ದೇವಿಕ ತಾಯಿ ವಸಂತ ಮತ್ತು ತಂದೆ ದೇವಯ್ಯ ಹಲ್ಲೆಯ ಕುರಿತು ತುರುವೇಕೆರೆ ಪೊಲೀಸ್ ಠಾಣೆಗೆ ದೂರು ಕೊಡಲು ತೆರಳಿದ್ದು ಠಾಣೆಯಲ್ಲಿದ್ದ ಪೊಲೀಸರು ದೂರನ್ನು ಸ್ವೀಕಾರ ಮಾಡದೆ ಠಾಣೆಯಲ್ಲಿಯೇ ಬೆಳಗ್ಗೆಯಿಂದ ಸಂಜೆಯವರೆಗೂ ಕೂರಿಸಿಕೊಂಡಿದ್ದು, ಎಫ್ಐಆರ್ ಕೂಡ…
ಚಿಕ್ಕನಾಯಕನಹಳ್ಳಿ: ಹೇಮಾವತಿ ನಾಲೆಯಿಂದ ತಾಲ್ಲೂಕಿನ 22 ಕೆರೆಗಳಿಗೆ ಕುಡಿಯುವ ನೀರಿಗಾಗಿ ನೀರುಣಿಸುವ ಯೋಜನೆಯ ಕಾಮಗಾರಿಯ ಒಂದು ಭಾಗ ಮುಗಿದಿದ್ದು ಪ್ರಾಯೋಗಿಕವಾಗಿ ನಾಲೆಯಲ್ಲಿ ನೀರು ಹರಿಸಲಾಗಿದೆ. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯವರೆಗೆ ಹೇಮಾವತಿ ನಾಲೆಯಿಂದ ನೀರು ಹರಿಸುವ ಕಾಮಗಾರಿ ಈಚೆಗೆ ಭರದಿಂದ ನಡೆಯುತ್ತಿತ್ತು. ಈ ಕಾಮಗಾರಿ ಕೆಲತಿಂಗಳಹಿಂದಯೇ ಮುಗಿಯಬೇಕಿತ್ತು ಆದರೆ ಭೂ ಸಂತ್ರಸ್ಥರ ಪರಿಹಾರ, ಗುತ್ತಿಗೆದಾರರ ಸಮಸ್ಯೆ, ಲಾಕ್ಡೌನ್ ಹಾಗೂ ಮಳೆಯಕಾರಣದಿಂದ ಕಾಮಗಾರಿ ವಿಳಂಬವಾಗಿತ್ತು. ಇದೆಲ್ಲದರ ತೊಡಕುಗಳನ್ನು ಶೀಘ್ರವಾಗಿ ನಿವಾರಿಸಿ ಕಾಮಗಾರಿ ಅತ್ಯಂತ ತ್ವರಿತಗತಿಯಲ್ಲಿ ನಡೆಸುವ ನಿಟ್ಟಿನಲ್ಲಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತೋರಿದ ಆಸ್ಥೆಯಿಂದ ಒಂದುಭಾಗದ ಕಾಮಗಾರಿ ಪೂರ್ಣಗೊಂಡಿದ್ದು ಈಗ ಸಾಸಲುಕೆರೆವರೆಗಿನ ಕಾಮಗಾರಿಯನ್ನು ಮುಗಿಸಲಾಗಿದೆ. ಇಂದು ನಾಲೆಯಿಂದ ನೀರನ್ನು ಪ್ರಾಯೋಗಿಕವಾಗಿ ಹರಿಯಬಿಡಲಾಗಿದ್ದು ನಾಲೆಯಲ್ಲಿ ನೀರಿನ ಹರಿಯುವಿಕೆಯ ಸಮಯದಲ್ಲಿ ಆಗುವ ಮಣ್ಣುಕುಸಿತ ಮುಂತಾದ ತೊಡಕುಗಳನ್ನು ನಾಲಾ ಅಧಿಕಾರಿಗಳು ಗಮನಿಸಿ ನೀರು ಹರಿಯುವ ನಡುವೆಯೇ ಕುಸಿದ ಮಣ್ಣು ಕಲ್ಲುಗಳನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಗುತ್ತಿತ್ತು. …
ಮಧುಗಿರಿ : ಇಲ್ಲಿನ ಪುರಸಭೆಗೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಸರ್ಕಾರ ಆದೇಶ ಮಾಡಿರುವುದು, 22 ವರ್ಷಗಳ ನಂತರ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ಸಿಕ್ಕಿರುವುದರಿಂದ ಈ ಬಾರಿ ಆಯ್ಕೆಯಾಗಿರುವ ಪುರಸಭಾ ಸದಸ್ಯರ ಪೈಕಿ ಒಬ್ಬರೇ ಈ ಮೀಸಲಾತಿಯಿಂದ ಆಯ್ಕೆಯಾಗಿರುವುದು, ಪುರಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪುರಸಭೆಗೆ ವಾರ್ಡುವಾರು ಪದ್ಧತಿ ಜಾರಿಯಾದ ನಂತರ ಎರಡನೇ ಅವಧಿಯಲ್ಲಿ ಅಧ್ಯಕ್ಷ ಸ್ಥಾನ 1998 ರಿಂದ 2001ರವರೆವಿಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿ ಅಂಜಿನಪ್ಪ ಮತ್ತು ಇಂದಿರಮ್ಮ ಅಧ್ಯಕ್ಷರಾದರು. ತದನಂತರ 2020ರಲ್ಲಿ ಈ ಮೀಸಲಾತಿ ದೊರೆತಿದೆ. ಮಧುಗಿರಿ ಪುರಸಭೆ ಸದಸ್ಯ ಸ್ಥಾನಕ್ಕೆ 2018 ರ ಆಗಸ್ಟ್ 30 ರಂದು ಚುನಾವಣೆ ನಡೆದು, ಸೆಪ್ಟೆಂಬರ್ 3 ರಂದು ಪ್ರಕಟವಾದ ಫಲಿತಾಂಶದಲ್ಲಿ ಕಾಂಗ್ರೆಸಿನಿಂದ ಹದಿಮೂರು, ಜೆಡಿಎಸ್ ನಿಂದ ಒಂಬತ್ತು ಹಾಗೂ ಒಬ್ಬರು ಪಕ್ಷೇತರರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಜೆಡಿಎಸ್…
ತುಮಕೂರು: ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿರಾ ಚುನಾವಣಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸುವ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಜರಿದ್ದರು. ಶಿರಾ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ 12.1 ನಿಮಿಷಕ್ಕೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳುದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು. ಈ ಅವಧಿ ಶುಭಗಳಿಗೆ ಎನ್ನುವ ಕಾರಣ ಜಯಚಂದ್ರ ನಾಮಪತ್ರ ಸಲ್ಲಿಸಿದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜಯಚಂದ್ರ, ಅವರು ಅಂದುಕೊಂಡಿದ್ದ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಮತ್ತೊಬ್ಬರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ಕಾರಣದಿಂದ ಇಂದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,…
ಬೆಂಗಳೂರು: ಶಿರಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಕೆಪಿಸಿಸಿ ನಿರ್ಧಾರವನ್ನು ರಾಜ್ಯ ಉಸ್ತುವಾರಿ ಕಾಂಗ್ರೆಸ್ನ ನಾಯಕ ರಣದೀಪ್ ಸುರ್ಜೆವಾಲ ಟೀಕಿಸಿದ್ದಲ್ಲದೇ, ರಾಜ್ಯ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಜಯಚಂದ್ರ 9 ಬಾರಿ ಚುನಾವಣೆಗೆ ನಿಂತಿದ್ದಾರೆ. ಮತ್ತೆ ಅವರ ಹೆಸರನ್ನೇ ಶಿಫಾರಸ್ಸು ಮಾಡಿದ್ದೀ ರಲ್ಲ. ನಿಮಗೆ ಸಾಮಾನ್ಯಜ್ಞಾನ ವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ರಣದೀಪ್ ಸುರ್ಜೆವಾಲ ಶಿರಾ ಕ್ಷೇತ್ರದ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಕಾರ್ಯಕ್ರಮದ ಸಂದರ್ಭದಲ್ಲಿ ಹೈಕಮಾಂಡ್ನ ಸುರ್ಜೆವಾಲಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದು, ಜಯಚಂದ್ರ ಅವರಿಗೆ ಟಿಕೆಟ್ ನೀಡಬಾರದಿತ್ತು. ರಾಜೇಶಗೌಡ ಅವರಿಗೆ ಟಿಕೆಟ್ ಕೊಡಬೇಕಿತ್ತು ಎಂದಿದ್ದಾರೆ. 1978ರಿಂದಲೂ 9 ಬಾರಿ ಜಯಚಂದ್ರ ಅವರೇ ಚುನಾವಣೆಗೆ ನಿಂತಿದ್ದಾರೆ. ನಿಮಗೆ ಕಾಮನ್ ಸೆನ್ಸ್ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜೇಶ್ಗೌಡ ಅವರು ಕಳೆದ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿ ದ್ದರು. ಈಗ ಬಿಜೆಪಿ ಸೇರಿ ದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೆಪ…
ಮಧುಗಿರಿ: ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಎಂ.ಪ್ರವೀಣ್ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಸುಮಾರು 19 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಇತ್ತೀಚೆಗೆ ನಡೆದಿದೆ. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಬಡಿಗೇನಹಳ್ಳಿ ಗ್ರಾಮದ ಜಮೀನಿನಲ್ಲಿ ಪಾಪಣ್ಣ ಎಂಬುವವರು 19 ಗಾಂಜಾ ಗಿಡಗಳನ್ನು ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂದಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಪಿಐ ಸರ್ಧಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ತುಮಕೂರು: ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ದೇಶವ್ಯಾಪಿ ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆ ಮತ್ತು ಮೂಲಭೂತ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತ ಬಂದಿದೆ. ನವ ಉದಾರಿಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಪರಿಣಾಮ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಪೋರೇಟ್ ಕಂಪನಿಗಳು ಹಣಹೂಡಿ ವಿದ್ಯಾರ್ಥಿಗಳಿಂದ ವಸೂಲಿಗೆ ಇಳಿದಿವೆ. ಇಂತಹ ಸಂದರ್ಭದಲ್ಲಿ ಬಡವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಂಬುದು ಕನಸಿನ ಮಾತಾಗಿದೆ. ಕಲಾ ಮತ್ತು ವಿಜ್ಞಾನ ಹೊರತುಪಡಿಸಿ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ನಮ್ಮನ್ನು ಆಳುವ ಸರ್ಕಾರಗಳು ಸಹ ಶ್ರೀಮಂತರ ಪರವಾದ ನೀತಿಗಳನ್ನು ಜಾರಿಗೊಳಿಸಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರವಿಡುವ ಕೆಲಸ ಮಾಡುತ್ತಿವೆ. ರಾಜಕಾರಣಿಗಳಿಗೆ ಸೇರಿದ ಶಿಕ್ಷಣ ಸಂಸ್ಥೆಗಳೇ ಹೆಚ್ಚಾಗಿದ್ದು ದುಬಾರಿ ಶುಲ್ಕ ವಿಧಿಸುವ ಮೂಲಕ ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಇದನ್ನು ಗಮನಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಉಚಿತವಾಗಿ…
ತುಮಕೂರು: ತುಮಕೂರು ಜಿಲ್ಲೆಯ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಅರಕೆರೆರವರನ್ನು ಆಯ್ಕೆ ಮಾಡಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಸುರೇಶ್ಗೌಡರು ಆದೇಶ ಹೊರಡಿಸಿರುತ್ತಾರೆ. ನೂತನ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ರವೀಶ್ ಅರಕೆರೆರವರು ಉತ್ತಮ ಸಂಘಟನಾ ಸಾಮಥ್ರ್ಯವನ್ನು ಹೊಂದಿದ್ದು, ಸಂಘಟನೆಯ ವಿಚಾರದಲ್ಲಿ ಪ್ರಭಾವಿ ರಾಜಕಾರಣಿಗಳ ಅನುಭವವನ್ನು ಮೀರಿಸುವಂತಹ ಸಂಘಟನಾ ಚಾತುರ್ಯವನ್ನು ಹೊಂದಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಜವಾಬ್ದಾರಿಗಳನ್ನ ಯಾವುದೇ ರೀತಿಯ ಲೋಪಗಳಿಲ್ಲದೆ ಸಮರ್ಥವಾಗಿ ನಿಭಾಯಿಸುವ ಮುಖೇನ ಚುನಾವಣೆಯ ಜವಾಬ್ದಾರಿಗಳಲ್ಲಿ ತಮ್ಮ ಚಾಣಾಕ್ಷತನವನ್ನು ಪ್ರದರ್ಶಿಸಿದ್ದರು. ಯಾವುದೇ ರೀತಿಯ ಅಧಿಕಾರ ಮತ್ತು ಲಲಾಸೆಗೆ ಒಳಗಾಗದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆಸಲ್ಲಿಸಿದ್ದ ಇವರ ಚಾಣಾಕ್ಷನದ ಸಂಘಟನಾ ಸಾಮಥ್ರ್ಯವನ್ನು ಅರಿತ ಸುರೇಶ್ಗೌಡರು ಪ್ರಸ್ತುತ ಜಿಲ್ಲಾ ಯುವಮೋರ್ಚಾಗೆ ಇವರ ಅಗತ್ಯತೆ ಇದೆ ಎನ್ನುವುದನ್ನು ಮನಗಂಡು ಆಯ್ಕೆ ಮಾಡಿದ್ದಾರೆ ಎನ್ನುವುದು ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಯುವ ಮೋರ್ಚಾದ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆ…
ತುಮಕೂರು : ಜಿಲ್ಲೆಯ ಅಂಗಡಿ ಮುಂಗಟ್ಟು ಗಳಿಗೆ ಹಾಗೂ ಜಾಹೀರಾತು ಫಲಕಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥಗೌಡ ಅವರ ನೇತೃತ್ವದಲ್ಲಿ ನೂರಾರು ಕರವೇ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕನ್ನಡ ನಾಮಪತ್ರಗಳನ್ನು ಅಳವಡಿಸುವಂತೆ ಆಗ್ರಹಿಸಿದರು. ಭಾರತ ಬಹುಭಾಷೆಗಳ ನಾಡು, ಭಾಷಾ ವಾರು ಪ್ರಾಂತ್ಯಗಳ ವಿಂಗಡನೆಯ ನಂತರ ಕರ್ನಾಟಕ ಆಸ್ಥಿತ್ವಕ್ಕೆ ಬಂದಿದ್ದು, ಇದಕ್ಕಾಗಿ ಗೋಕಾಕ್ ಚಳುವಳಿಯಂತಹ ಹಲವಾರು ಹೋರಾಟಗಳೇ ನಡೆದಿವೆ. ಆದರೂ ಸಹ ಇಂದಿಗೂ ಕರ್ನಾಟಕದ ರಾಜ್ಯಧಾನಿ ಸೇರಿದಂತೆ, ಜಿಲ್ಲಾ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕ ಹಾಕುವುದರಲ್ಲಿ ಹಿಂದೆಟು ಹಾಕಲಾಗುತ್ತಿದೆ. ನಾಡಿನ ಇತರ ಭಾಷೆಗಳಿಗಿಂತ ಕನ್ನಡ ಭಾಷೆಯ ನಾಮಫಲಕ ದೊಡ್ಡದಾಗಿರ ಬೇಕೆಂಬ ನಿಯಮವನ್ನು ಜಾರಿಗೆ ತಂದರೂ ಪ್ರಯೋಜನವಾಗಿಲ್ಲ. ನಿಯಮ ಪಾಲಿಸ ದವರ ವಿರುದ್ಧ ಕೇಸು ದಾಖಲಿಸಲು ಕಾರ್ಮಿಕ…