ತುಮಕೂರು: ತುಮಕೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಗುರುವಾರ ಬೆಳಗಿನ ಜಾವ ಕಳ್ಳತನವಾಗಿದ್ದು ಕಛೇರಿಯ ಬೀಗ ಮುರಿದು ಟಿವಿ ಕದ್ದೊಯ್ಯಲಾಗಿದ್ದು, ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಮಾಲು ಸಮೇತ ಬಂಧಿಸಲಾಗಿದ್ದು, ಆರೋಪಿ ಮಂಜುನಾಥ್ ಆಲಿಯಾಸ್ ಕಳ್ಳಮಂಜ, ಚೆನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯ ವಾಸಿ. ಈತ ವೃತ್ತಿನಿರತ ಕಳ್ಳತನದ ಆರೋಪಿಯಾಗಿದ್ದು, ತುಮಕೂರು ನಗರ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಆರೋಪಿಯ ಮೇಲೆ ಈ ಹಿಂದೆ ಪ್ರಕರಣಗಳು ದಾಖಲಾಗಿದೆ. ಹೊಸಬಡಾವಣೆ ಪೊಲೀಸ್ ಠಾಣೆ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಕಳ್ಳಮಂಜನ ವಿರುದ್ಧ ಸುಮಾರು 15 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಕಳ್ಳತನ ಪ್ರಕರಣದ ವಿಚಾರವಾಗಿ ತುಮಕೂರು ನ್ಯಾಯಾಲಯಕ್ಕೆ ಬಂದಿದ್ದು, ನ್ಯಾಯಾಲಯದಲ್ಲಿ ಬುಧವಾರ ಎಂದಿನಂತೆ ತನ್ನ…
Author: News Desk Benkiyabale
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಧಿಸೂಚನೆಯನ್ನು ಅಕ್ಟೋಬರ್ 9ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಅದರಂತೆ ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 17, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 19 ಕೊನೆಯ ದಿನವಾಗಿರುತ್ತದೆ. ನವೆಂಬರ್ 3ರಂದು ಚುನಾವಣಾ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದರು. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಧುಗಿರಿ ಉಪವಿಭಾಗದ ಉಪವಿಭಾಗಾಧಿಕಾರಿ ಡಾ: ನಂದಿನಿದೇವಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಶಿರಾ ತಾಲ್ಲೂಕಿನ ತಹಶೀಲ್ದಾರ್ ನಾಹೀದಾ ಝಂ ಝಂ ಸಹಾಯಕ…
ತುಮಕೂರು: ಇಡೀ ಪ್ರಪಂಚದಲ್ಲಿ ಶೈಕ್ಷಣಿಕ ಸಂಶೋಧನೆಗಳಿಗೆ ಮನ್ನಣೆ ದೊರೆಯುತ್ತಿರುವ ಸಂದರ್ಭದಲ್ಲಿ ನಮ್ಮಲ್ಲಿಯೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದ ಬಗ್ಗೆ ಸಂಶೋಧನೆ ನಡೆಯಬೇಕು. ಸಂಶೋಧನೆಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ, ಸಂಶೋಧನಾ ಲೇಖನಗಳನ್ನು ದಾಖಲಿಸುವ ಕೆಲಸಕ್ಕೆ ಉನ್ನತ ಶಿಕ್ಷಣ ಸಂಸ್ಥೆಗಳು ಮುಂದಾಗುವ ಅನಿವಾರ್ಯತೆ ಇಂದಿನದಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟಿದ್ದಾರೆ. ನಗರದ ಸಿದ್ದಾರ್ಥನಗರದಲ್ಲಿ ಶ್ರೀ ಸಿದ್ದಾರ್ಥ ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ (ಸಾಹೇ ವಿಶ್ವವಿದ್ಯಾಲಯ) ಏರ್ಪಡಿಸಿದ್ದ ಸಂಯೋಜಿತ ವಿಷಯಗಳ ಸಂಶೋಧನಾತ್ಮಕ ಪ್ರಕಟಣೆಗಳಾದ ‘ಸಾಹೇ ಜರ್ನಲ್ಸ್ ಆಪ್ ಇಂಟರ್ ಡಿಸಿಪ್ಲಿನರಿ ರೀಸರ್ಚ್ ಮತ್ತು ಜರ್ನಲ್ಸ್ ಆಪ್ ಆ್ಯಕ್ಸನ್ ರೀಸರ್ಚ್ ಆ್ಯಂಡ್ ಸೋಷಿಯಲ್ ಡೆವೆಲಪ್ಮೆಂಟ್’ ಬಿಡುಗಡೆ ಮಾಡಿ ಮಾತನಾಡಿದರು. ಇಡೀ ಪ್ರಂಚದಲ್ಲಿ ಅಂತರ ಶಿಕ್ಷಣ ಮತ್ತು ಸಂಶೋಧನೆಗಳು ನಡೆಯುತ್ತಿವೆ. ಸಮಾಜದಲ್ಲಿ ಸವiತೋಲದ ಶೈಕ್ಷಣಿಕ ಚಟುವಟಿಕೆಗಳು ಗರಿಗೆದರಿವೆ. ಸಂಶೋಧಕರ ಮಸಸ್ಥಿತಿಗಳು ಬದಲಾಗುತ್ತಿರುವ ಕಾಲಘಟ್ಟದಲ್ಲಿರುವುದರಿಂದ ಸಾಮಾಜಿಕ ಅಭಿವೃದ್ದಿ ಕುರಿತ ಗುಣಮಟ್ಟದ ಸಂಶೋಧನಾ…
ತುಮಕೂರು: ಜಿಲ್ಲೆಯಲ್ಲಿ ಅಕ್ಟೋಬರ್ 4ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆ.ಎ.ಆರ್.ಟೆ.ಇ.ಟಿ) ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಕ್ಟೋಬರ್ 4ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು (ಆರೋಗ್ಯ ತಪಾಸಣಾ ಕೌಂಟರ್)ನಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಯಿಂದ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು ಎಂದರು. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೋವಿಡ್-19 ಪಾಸಿಟಿವ್ ಎಂದು ದೃಢಪಟ್ಟ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜಿಲ್ಲಾ…
ತುಮಕೂರು: ಧರ್ಮದ ಮೂಲಕ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅರುಣಾದೇವಿ ಉದಯಕುಮಾರ್ ಹೇಳಿದರು. ನಗರದ ಸಿದ್ದಗಂಗಾ ಮಠಕ್ಕೆ ಪತಿ ಉದಯಕುಮಾರ್, ಪುತ್ರಿ ಮಾಧುರ್ಯರವರೊಂದಿಗೆ ಭೇಟಿ ನೀಡಿದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಕುಟುಂಬ ವ್ಯವಸ್ಥೆ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು. ನಾಲ್ಕು ಗೋಡೆಗಳ ಮಧ್ಯೆ ಇರುವ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಕೆಲಸ ಮಾಡುವ ಚಿಂತನೆ ಹೊಂದಲಾಗಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕ ಕಾರ್ಯನಿರ್ವಹಿಸಲಿದೆ ಎಂದರು.…
ತುಮಕೂರು: ಅನಾರೋಗ್ಯ ದಿಂದ ಬಳಲು ತ್ತಿದ್ದ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಯಶೋಧಗಂಗಪ್ಪ (59) ಅವರು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ ಗಂಗಪ್ಪ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಲ್ಲಿನ ಶಾಂತಿನಗರದ ವಾಸಿಯಾಗಿದ್ದ ಯಶೋಧ ಅವರು 2008 ರಲ್ಲಿ 18ನೇ ವಾರ್ಡ್ನಿಂದ ಸ್ಪರ್ಧಿಸಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2009-10ರಲ್ಲಿ ತುಮ ಕೂರು ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗುವ ಮೊದಲ ಮಹಿಳಾ ಮೇಯರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಮಾಜಿ ಮೇಯರ್ ಯಶೋಧ ಗಂಗಪ್ಪ ಅವರ ನಿಧನಕ್ಕೆ ಪಾಲಿಕೆಯ ಮೇಯರ್ ಫರಿದಾಬೇಗಂ, ಉಪಮೇಯರ್, ಶಶಿಕಲಾ ಗಂಗಹನುಮಯ್ಯ, ಶಾಸಕ ಜ್ಯೋತಿಗಣೇಶ್, ಮಾಜಿ ಶಾಸಕ ಡಾ. ರಫೀಕ್ಅಹಮದ್ ಸೇರಿದಂತೆ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರು: ದೇಶದ ಬೆನ್ನೆಲುಬಾದ ರೈತರ ಬದುಕನ್ನು ಕೋವಿಡ್-19 ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆಯು ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪರವರು, ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲೆಯ ರೈತರೊಂದಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದ ಮುರಳೀಧರ ಹಾಲಪ್ಪ ಅವರು, ಕೋವಿಡ್-19 ಮಹಾಮಾರಿ ರೈತರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ರೈತರ ಸ್ಥಿತಿ ಇಂದು ಚಿಂತಾಜನಕವಾಗಿದೆ. ರೈತರು ಸಾಲಸೋಲ ಮಾಡಿ ಬೋರ್ವೆಲ್ ಕೊರೆಸಿ ಹಣ್ಣು, ತರಕಾರಿ ಬೆಳೆದ ಬೆಳೆಗಾರರ ಬದುಕು ಅತಂತ್ರವಾಗಿದ್ದು, ನಿರೀಕ್ಷೆಯಷ್ಟು ಬೆಲೆ ಸಿಗದೇ ಕಂಗಾಲಾಗಿದ್ದಾರೆ. ಇಂತಹ ಸಮಯದಲ್ಲಿ ರೈತರನ್ನು ಇಲಾಖೆಗೆ ಅಲೆದಾಡಿಸದೆ ಸಮಸ್ಯೆ ನಿವಾರಿಸಬೇಕೆಂದರು ರೈತರಿಗೆ ಶೀಘ್ರ ಪರಿಹಾರ ಸಿಗಲಿ: ಫಸಲ್ ಬಿಮಾ ಯೋಜನೆಯಡಿಯಲ್ಲಿ ಇದುವರೆಗೂ ಎಷ್ಟು ರೈತರಿಗೆ ಪರಿಹಾರ ವಿತರಿಸಲಾಗಿದೆ. ಎಷ್ಟು ರೈತರು…
ತುಮಕೂರು: ನಗರದ ವಿವಿಧೆಡೆಗಳಲ್ಲಿ ಸರಕಾರ ನೀಡಿದ್ದ 25 ಕೋಟಿ ರೂ ವಿಶೇಷ ಅನುದಾನದಲ್ಲಿ ಸಿ.ಸಿ.ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಸಂದರ್ಭದಲ್ಲಿ ಕೆಲವು ಸಣ್ಣ,ಪುಟ್ಟ ತೊಂದರೆಗಳಾಗುವುದು ಸಹಜ, ನಾಗರಿಕರು ಸಹಕಾರ ನೀಡುವಂತೆ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಎಸ್.ಐ.ಟಿ. ಬಡಾವಣೆಯ 1 ರಿಂದ 3 ಅಡ್ಡರಸ್ತೆ ಹಾಗೂ 31ರಿಂದ 35ನೇ ಅಡ್ಡ ರಸ್ತೆಯಲ್ಲಿ ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿ.ಸಿ.ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತಿದ್ದ ಅವರು, ಶೇ90ರಷ್ಟು ತೆರಿಗೆದಾರರಿರುವ ಈ ಬಡಾವಣೆಗೆ ಅತಿ ಹೆಚ್ಚಿನ ರೀತಿಯಲ್ಲಿಯೇ ಅನುದಾನ ಒದಗಿಸಲಾಗಿದೆ ಎಂದರು. ಕೊರೊನಾ ಸಂಕಷ್ಟದಲ್ಲಿಯೂ ಯಡಿ ಯೂರಪ್ಪನವರು ಪಾಲಿಕೆಗೆ 25 ಕೋಟಿ ರೂಗಳ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ. ಅದರಲ್ಲಿ ಸಿಂಹಪಾಲು ಅಂದರೆ 5.50 ಕೋಟಿ ಅನುದಾನವನ್ನು ನಗರದಲ್ಲಿ ದೊಡ್ಡ ವಾರ್ಡುಗಳಲ್ಲಿ ಒಂದಾಗಿರುವ 26ನೇ ವಾರ್ಡಿಗೆ…
ತುಮಕೂರು: ತುಮಕೂರು ನಗರ ಬಿಜೆಪಿ ವತಿಯಿಂದ ನಮ್ಮ ಬೂತ್ ನನ್ನ ಜವಾಬ್ದಾರಿ ಎಂಬ ವಿಶಿಷ್ಟ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರು ನಗರದ 24ನೇ ವಾರ್ಡ್ ಉಪ್ಪಾರಹಳ್ಳಿಯಲ್ಲಿ ಪ್ರತಿ ಬೂತ್ ಅಧ್ಯಕ್ಷರ ಮನೆಯ ಮುಂಭಾಗ ಪಕ್ಷದ ಜವಾಬ್ದಾರಿಯ ನಾಮಫಲಕ ಹಾಕುವ ಮೂಲಕ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ರವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂರ್ಭದಲ್ಲಿ 24ನೇ ವಾರ್ಡ್ನ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಭಾರತೀಯ ಜನತಾ ಪಾರ್ಟಿಯ ಮೂಲ ಶಕ್ತಿ ಇರುವುದು, ಬೂತ್ ಮಟ್ಟದಲ್ಲಿ. ಬೂತ್ ಮಟ್ಟದಲ್ಲಿರುವ ಬಡವರು, ಮಹಿಳೆಯರು, ದೀನದಲಿತರು, ಅಶಕ್ತರ ಅಭ್ಯುದಯಕ್ಕೆ ಸರ್ಕಾರದಿಂದ ಬರುವ ಯೋಜನೆಗಳನ್ನು ಅವರಿಗೆ ತಲುಪಿಸುವ ಮೂಲಕ ಹಾಗೂ ಕೇಂದ್ರ & ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದರು. ಅಲ್ಲದೇ ಕರೋನ ಸಂದರ್ಭದಲ್ಲಿ ತುಮಕೂರು ನಗರದಲ್ಲಿ ಪ್ರತಿ ಬೂತ್ನಲ್ಲಿ ಬಿಜೆಪಿ ಕಾರ್ಯಕರ್ತರು ಮಾಡಿದ ಸೇವಾ ಕಾರ್ಯವನ್ನು ಈ ಸಂದರ್ಭದಲ್ಲಿ ಶ್ಲಾಘೀಸಿದರು. …
ತುಮಕೂರು : ರಾಜ್ಯದಲ್ಲಿ ಅನುಷ್ಠಾನ ದಲ್ಲಿರುವ ಸ್ಮಾರ್ಟ್ಸಿಟಿಗಳಲ್ಲಿ ಉತ್ತಮ ಎಂಬ ಬಹುಮಾನ ಪಡೆದಿರುವ ತುಮಕೂರು ನಗರ ಮತ್ತಷ್ಟು ಸ್ಮಾರ್ಟ್ ಆಗಲು ನಾಗರಿಕರು, ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ಕರೆ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜೋತಿಗಣೇಶ್ ಅವರ 2 ವರ್ಷದ ಸಾಧನೆ ಅಭಿವೃದ್ದಿ ಪಥದತ್ತ ತುಮಕೂರು ಎಂಬ ವೆಬ್ಸೈಟ್ ಬಿಡುಗಡೆಗೊಳಿಸಿ ಮಾತನಾಡುತಿದ್ದ ಅವರು,ನಾಗರಿಕರು ಸ್ಮಾರ್ಟ್ ಆಗುವ ಮೂಲಕ ಈಗಾಗಲೇ ನಡೆದಿರುವ ಅಭಿವೃದ್ದಿ ಕಾರ್ಯಗಳು ಜನರ ಉಪಯೋಗಕ್ಕೆ ಬರುವಂತೆ ಮಾಡಬೇಕಿದೆ ಎಂದರು. ಕಳೆದ ಎರಡು ವರ್ಷಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಲ್ಲದೆ, ಸರಕಾರದ ಅನು ದಾನವನ್ನು ಬಳಸಿ ಶಾಸಕರು, ಕುಡಿಯುವ ನೀರು, ರಸ್ತೆ, ಚರಂಡಿ,ವಿದ್ಯುತ್ ದ್ವೀಪಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಈಗಾಗಲೇ ಕುಡಿಯುವ ನೀರಿಗಾಗಿ ತುಮಕೂರಿನ ಅತಿ ದೊಡ್ಡ ಕೆರೆ ಅಮಾನಿಕೆರೆಯನ್ನು ತುಂಬಿಸುವ ಕೆಲಸ ನಡೆದಿದೆ. ಇದೇ ರೀತಿ ಗಂಗಸಂದ್ರ, ಮರಳೂರು…