ತುಮಕೂರು: ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಇನ್ನೂ ಕೆಲವು ಪ್ರದೇಶಗಳಲ್ಲಿ ಜಿಲ್ಲಾಡಳಿತದ ನಿರೀಕ್ಷೆಯಂತೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಈಗಲೂ ಇರುವ ಕೆಂಪು ವಲಯ ಮತ್ತು ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ತೆರವಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು. ಕೊರೋನಾ ಸೋಂಕಿತರ ಸಂಖ್ಯೆಯ ಹೆಚ್ಚಳದಿಂದಾಗಿ ಶಿರಾ ತಾಲೂಕು ಸೇರಿದಂತೆ ಉಳಿದ ತಾಲೂಕುಗಳ ಭಾಗಗಳು ಕೆಂಪುವಲಯ ಹಾಗೂ ಹಾಟ್ಸ್ಪಾಟ್ ಪ್ರದೇಶಗಳನ್ನಾಗಿ ಗುರತಿಸಲಾಗಿದೆ. ಈ ಪ್ರದೇಶಗಳಲ್ಲಿ ಸೋಂಕನ್ನು ನಿಯಂತ್ರಣಕ್ಕೆ ತಂದು ಆ ಪ್ರದೇಶಗಳನ್ನು ಕೆಂಪುವಲಯ ಹಾಗೂ ಹಾಟ್ಸ್ಪಾಟ್ಗಳಿಂದ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸೋಂಕಿತರ…
Author: News Desk Benkiyabale
ತುಮಕೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನುಸಾರ ಪದವಿ ಕೋರ್ಸ್ಗಳನ್ನು ನಾಲ್ಕು ವರ್ಷದ ಅವಧಿಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಭಾಷಾ ಬೋಧನೆಯನ್ನು ಕೂಡ ನಾಲ್ಕು ವರ್ಷಗಳವರೆಗೆ ಬೋಧಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ತುಮಕೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಒಕ್ಕೂಟ ಕುಲಪತಿ ಸಿದ್ದೇಗೌಡರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದೆ. ನೂತನ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆಯೂ ಸೇರಿದಂತೆ ಇತರೆ ಎಲ್ಲಾ ಭಾಷಾ ಬೋಧನೆಯನ್ನು ಮೊದಲನೇ ವರ್ಷದ ಪದವಿಗೆ ಮಾತ್ರ ಅಳವಡಿಸಿದೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಕನ್ನಡ ಅಧ್ಯಯನ ಮಂಡಳಿ ಅಧ್ಯಕ್ಷ ಬಿ.ನಿತ್ಯಾನಂದ ಶೆಟ್ಟಿ, ಕೆಜಿಸಿಟಿಎ ತುಮಕೂರು ವಲಯ ಅಧ್ಯಕ್ಷ ಡಾ.ಒ.ನಾಗರಾಜು, ಒಕ್ಕೂಟದ ಅಧ್ಯಕ್ಷ ಡಾ.ಡಿ.ಶಿವನಂಜಯ್ಯ, ಕಾರ್ಯದರ್ಶಿ ಡಾ.ಎಂ.ಶಂಕರಲಿಂಗಯ್ಯ ಮತ್ತು ಖಜಾಂಚಿ ಡಾ. ಶಿವಲಿಂಗಮೂರ್ತಿ ಹೇಳಿದ್ದಾರೆ. ಜೊತೆಗೆ ಅನ್ಯಶಿಸ್ತುಗಳ ಅಧ್ಯಯನಕ್ಕೂ ಅವಕಾಶವಿತ್ತು. ಈಗ ಭಾಷಾ ವಿಷಯದ ಬೋಧನೆಯ ಅವಧಿಯನ್ನು ಕಡಿತಗೊಳಿಸಿರುವುದು ವೈಜ್ಞಾನಿಕವಾಗಿ ಸಮರ್ಥನಿಯವಾದುದಲ್ಲ. ಶಿಕ್ಷಣದ ಯಾವುದೇ ಹಂತದಲ್ಲಿ ಭಾಷೆ ಮತ್ತು ಇತರ ಶಿಸ್ತುಗಳ…
ತುಮಕೂರು: ಕೋರೋನ ಸಂಕಷ್ಟದಿಂದ ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರಲಾಗದೆ ಆಗಿರುವ ನಷ್ಟವನ್ನು ಅಂದಾಜು ಮಾಡಲು ಸರಕಾರ ಕೂಡಲೇ ಒಂದು ಸಮಿತಿ ರಚಿಸಬೇಕು, ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂಗಳ ಪರಿಹಾರ ವಿತರಿಸಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ರೈತ ಸಂಘದ ಮತ್ತು ಹಸಿರು ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು, ಸರಕಾರ ರೈತ ವಿರೋಧಿ ನಡೆವಳಿಕೆಗಳ ವಿರುದ್ದ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಎ.ಗೋವಿಂದರಾಜು, ಕೋರೋನ ಲಾಕ್ಡೌನ್ ರೈತರು ಸಾವಿರಾರು ಎಕರೆಯಲ್ಲಿ ಬೆಳೆದ ಹಣ್ಣು, ತರಕಾರಿ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲಾಗದ ಪರಿಣಾಮ ಸುಮಾರು 1 ಲಕ್ಷ ಕೋಟಿ…
ತುಮಕೂರು : ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಸಕಲ ರೀತಿಯಲ್ಲಿಯೂ ಸಜ್ಜಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು. ಕೊರೋನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗರೂಕ ಕ್ರಮಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಎದುರಾದಲ್ಲಿ ಮಕ್ಕಳಿಗೆ ಸಮರ್ಪಕವಾಗಿ ಚಿಕಿತ್ಸೆ ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಸಜ್ಜಾಗಿರಬೇಕು ಎಂದು ನಿರ್ದೇಶಿಸಿದರು. ಕೋವಿಡ್ ಮೂರನೇ ಅಲೆಗೆ ಹೆಚ್ಚಿನ ಮಕ್ಕಳು ಬಾಧಿತರಾಗುವ ನಿರೀಕ್ಷೆಯಿದ್ದು, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ವ್ಯವಸ್ಥೆ, ಆಮ್ಲಜನಕ, ವೆಂಟಿಲೇಟರ್ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವುದರೊಂದಿಗೆ ಶಿಶುತಜ್ಞ ವೈದ್ಯರನ್ನು ನೇಮಕ ಮಾಡಿಕೊಂಡು ವೈದ್ಯಕೀಯ ಸೌಲಭ್ಯ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.…
ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ ಹೆಚ್ಚಳದಿಂದ ರೈತರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ರೈತರು ಟ್ರಾಕ್ಟರ್ಗೆ ಡೀಸೆಲ್ ಹಾಕಿಸಲು ಯೋಚನೆ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಒಂದು ಬ್ಯಾರಲ್ ಖಚ್ಚಾ ತೈಲ ಬೆಲೆ 125 ಡಾಲರ್ ಇತ್ತು, ಆಗ 60 ರೂ.ಗೆ ಪೆಟ್ರೋಲ್, 50 ರೂ.ಗೆ ಡೀಸೆಲ್ ಸಿಗುತ್ತಿತ್ತು. ಈಗ ಒಂದು ಬ್ಯಾರಲ್ ಖಚ್ಚಾ ತೈಲ ಬೆಲೆ 71 ಡಾಲರ್ ಇದೆ. ಇವರು ಅರ್ಧದಷ್ಟು ಇಳಿಸಬೇಕಿತ್ತು. ಅದನ್ನು ಬಿಟ್ಟು ಪ್ರತಿದಿನ ಇಂಧನ ಬೆಲೆ ಹೆಚ್ಚು ಮಾಡುತ್ತಿದ್ದಾರೆ. ಇದು ಯಾರೂ ಒಪ್ಪುವಂತಹುದಲ್ಲ, ಸರ್ಕಾರ ತೆರಿಗೆಗಳನ್ನು ರದ್ದುಪಡಿಸಿದರೆ ಕೇವಲ 30 ರೂ.ಗೆ ಪೆಟ್ರೋಲ್, ಡೀಸೆಲ್ ಕೊಡಬಹುದು ಎಂದು ಹೇಳಿದರು.\ …
ಮಧುಗಿರಿ : ತುಮುಲ್ ವತಿಯಿಂದ ತಾಲೂಕಿನ ರೈತರಿಗೆ ಸಬ್ಸಿಡಿ ದರದಲ್ಲಿ ಮೇವಿನ ಬೀಜ ವಿತರಿಸಲಾಗುತ್ತಿದ್ದು, ಹಾಲು ಉತ್ಪಾದಕ ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು. ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ಮಂಗಳವಾರ ಮೇವಿನ ಬೀಜ ವಿತರಿಸಿ ಮಾತನಾಡಿದ ಅವರು ಹಾಲು ಉತ್ಪಾದಕರಿಗೆ ಹಸಿರು ಮೇವು ಬೆಳೆದುಕೊಳ್ಳಲು ಉತ್ತೇಜನ ನೀಡಲು ಮತ್ತು ಗುಣಮಟ್ಟದ ಹಾಲು ಶೇಖರಣೆ ಮಾಡುವ ಉದ್ದೇಶದಿಂದ 153 ಸಂಘಗಳ 8900 ಹಾಲು ಉತ್ಪಾದಕ ಸದಸ್ಯರಿಗೆ 70 ಟನ್ ಮೇವಿನ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ತಾಲೂಕಿನ ಹಾಲು ಉತ್ಪಾದಕ ರೈತರಿಗೆ 56 ಸಾವಿರ ಕೆ.ಜಿ ಸೌಥ್ ಆಫ್ರಿಕಾ ಬಿತ್ತನೆ ಮೇವಿನ ವಿತರಿಸಲಾಗುತ್ತಿದ್ದು, ಇದಕ್ಕೆ ಕೆ.ಜಿ ಗೆ 35 ರೂಗಳು ಮೂಲ ಧರವಿದ್ದು, ಒಕ್ಕೂಟದ ವತಿಯಿಂದ 17. 50 ರೂಗಳ ಸಬ್ಸಿಡಿ ದೊರೆಯಲಿದೆ. ಹಾಲು ಉತ್ಪಾದಕರು 17. 50 ರೂಗಳನ್ನು…
ತುಮಕೂರು : ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ಬದುಗಳನ್ನು ನಿರ್ಮಿಸಿಕೊಳ್ಳುವ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವಜೆ.ಸಿ. ಮಾಧುಸ್ವಾಮಿ ರೈತರಿಗೆ ಕರೆ ನೀಡಿದರು. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ದುಗಡೀ ಗ್ರಾಮ ಪಂಚಾಯಿತಿ ವ್ಯಾಪ್ತಿ ದುಗಡೀಹಳ್ಳಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕ್ಷೇತ್ರ ಬದು ಮಾಸಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ದುಗಡೀಹಳ್ಳಿಯಲ್ಲಿ 50 ಹೆಕ್ಟೇರ್(125 ಎಕರೆ) ಭೂ ಪ್ರದೇಶದಲ್ಲಿ ಕ್ಷೇತ್ರ ಬದು ನಿರ್ಮಾಣ ಕಾರ್ಯ ಹಮ್ಮಿಕೊಳ್ಳಲಾಗಿದೆ. ಪ್ರತಿ ಎಕರೆಗೆ ಸುಮಾರು 18 ಬದುವಿನಂತೆ ಒಟ್ಟು 125 ಎಕರೆ ಭೂ ಪ್ರದೇಶದಲ್ಲಿ 2250 ಬದುಗಳನ್ನು ನಿರ್ಮಾಣ ಮಾಡಬಹುದು. ಇದರಿಂದ ಒಮ್ಮೆ ಉತ್ತಮ ಮಳೆಯಾದರೆ ಸುಮಾರು 1.35 ಲಕ್ಷ ಲೀಟರ್ ನೀರು ಸಂಗ್ರಹಣೆಯಾಗಲಿದ್ದು ರೈತರ ಜಮೀನಿನ ಮಣ್ಣಿನ ಮೇಲ್ಮೈ ಭಾಗ ಸಂಪೂರ್ಣ ಸಂರಕ್ಷಣೆಗೊಳ್ಳಲಿದೆ. ಅಲ್ಲದೆ ಮಳೆ ನೀರು ಸಹ…
ಹುಳಿಯಾರು: ರಸ್ತೆ ಅಪಘಾತದಲ್ಲಿ ಮೃತರಾದ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿನಿಮಾ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವು ಹುಟ್ಟೂರಿಗೆ ಹುಳಿಯಾರು ಮಾರ್ಗವಾಗಿ ತೆರಳಿತು. ಹುಳಿಯಾರಿನಲ್ಲಿ ವಿಜಯ್ ಅವರ ಪಾರ್ಥಿವ ಶರೀರ ವೀಕ್ಷಣೆಗೆ ಕಿಕ್ಕಿರಿದು ಜನ ಸೇರಿದ್ದರು. ವಿಜಯ್ ಅವರು ಹುಟ್ಟೂರಾದ ಪಂಚನಹಳ್ಳಿಗೆ ಅಂತ್ಯಸಂಸ್ಕಾರಕ್ಕೆ ಪಾರ್ಥಿವ ಶರೀರವನ್ನು ಹುಳಿಯಾರು ಮಾರ್ಗದಲ್ಲಿ ತೆರಳುತ್ತದೆಂದು ತಿಳಿದ ಅಭಿಮಾನಿಗಳು ಇಲ್ಲಿನ ಪೊಲೀಸ್ ಸ್ಟೇಷನ್ ಸರ್ಕಲ್ ಬಳಿ ಮಧ್ಯಾಹ್ನ ಹನ್ನೆರಡು ಗಂಟೆಯಿಂದಲೇ ಅಂತಿಮ ದರ್ಶನ ಪಡೆಯಲು ಕಾದು ನಿಂತಿದ್ದರು. ಶಿರಾ ಮಾರ್ಗವಾಗಿ ಬರುವಾಗ ಬೆಳ್ಳಾರ, ಹೊಯ್ಸಲಕಟ್ಟೆಯಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದರಿಂದ ಹುಳಿಯಾರಿ ನಿಗಧಿ ಸಮಯಕ್ಕಿಂತ 1 ಗಂಟೆ ತಡವಾಗಿ ಆಗಮಿಸಿತ್ತು. ಹಾಗಾಗಿ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ಪೊಲೀಸರಿಗೆ ಜನಸಂದಣಿ ಕಂಟ್ರೋಲ್ ಮಾಡುವುದು ಸವಾಲಿನ ಕೆಲಸವಾಗಿತ್ತು. ಪದೇ ಪದೇ ದೂರದೂರ ನಿಂತು ಸಾಮಾಜಿಕ ಅಂತರ ಕಾಪಾಡುವಂತೆ ಮನವಿ ಮಾಡಿದ್ದರೂ ಕೇಳದೆ ಗುಂಪು-ಗುಂಪಾಗಿ ನಿಂತಿದ್ದರು. ಪರಿಣಾಮ…
ತುಮಕೂರು : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಬಗ್ಗೆ ರೈತರಿಗೆ ವಿಮಾ ಕಂಪನಿಗಳು ಹಾಗೂ ಇಲಾಖೆಗಳು ಜಾಗೃತಿ ಮೂಡಿಸಬೇಕಲ್ಲದೆ ಅರ್ಹನಿರುವ ಯಾವುದೇ ರೈತನೂ ವಿಮಾ ಯೋಜನೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ರೈತರಿಗಾಗುವ ಅನುಕೂಲದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು. ರೈತರಿಗೆ ಸಮಸ್ಯೆ ಉಂಟಾಗದಂತೆ ವಿಮಾ ಮೊತ್ತ ಪಾವತಿಗೆ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು. ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಎಲ್ಲಾ ರೈತರು ಬೆಳೆ ವಿಮೆ ಮಾಡಿಸಿ ಗರಿಷ್ಟ ಪ್ರಯೋಜನ…
ಹುಳಿಯಾರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಸರ್ಕಾರ ಕೊರೋನಾ ನಿರ್ಬಂಧ ಸಡಿಸಿಲಿದೆ. ಪರಿಣಾಮ ಹುಳಿಯಾರು ಪಟ್ಟಣಕ್ಕೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಪಟ್ಟಣ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆ ರಸ್ತೆಯಲ್ಲಿ ಸಂಚರಿಸುವವರಿಗೆ ಕೊರೋನಾ ಪರೀಕ್ಷೆ ಮಾಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಹುಳಿಯಾರಿನ ಪೊಲೀಸ್ ಸ್ಟೇಷನ್ ಸರ್ಕಲ್ಗೆ ನಾಲ್ಕು ದಿಕ್ಕಿನ ರಸ್ತೆ ಸೇರುತ್ತದೆ. ಅಲ್ಲದೆ ಹಳ್ಳಿಗಳಿಂದ ಪಟ್ಟಣಕ್ಕೆ ಬರುವವರು ಈ ಸರ್ಕಲ್ ಮೂಲಕ ಓಡಾಡಲೇ ಬೇಕಿದೆ. ಹಾಗಾಗಿ ಸರ್ಕಲ್ನಲ್ಲಿ ಬಳಿ ಜನರ ಕೊರೋನಾ ಪರೀಕ್ಷೆಗೆ ಮುಂದಾಗಿದ್ದರು. ಅತ್ತ ಪಪಂ ಸಿಬ್ಬಂದಿ ಬೈಕ್ನಲ್ಲಿ ತೆರಳುವವರನ್ನು ನಿಲ್ಲಿಸಿ ಕೊರೋನಾ ಪರೀಕ್ಷೆ ಮಾಡಿಸುವಂತೆ ಸೂಚಿಸುತ್ತಿದ್ದರು. ಇತ್ತ ಆರೋಗ್ಯ ಸಿಬ್ಬಂದಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುತ್ತಿದ್ದರು. ಕೊರೋನಾ ಪರೀಕ್ಷೆ ಮಾಡಿಸುವಂತೆ ತಿಳಿಸಿದಾಗ ಕೆಲವರು ಈಗಾಗಲೇ ಮಾಡಿಸಿದ್ದು ನೆಗೆಟಿವ್ ಬಂದಿದೆ ಎಂದು ಮೊಬೈಲ್ ಮೆಸೇಜ್ ತೋರಿಸಿ ತೆರಳುತ್ತಿದ್ದರು. ಇನ್ನೂ ಕೆಲವರು ಟೆಸ್ಟ್ ಸ್ಥಳಕ್ಕೆ ಹೋಗಿ ಸ್ವಲ್ಪ ಸಮಯ ಅಲ್ಲಿದ್ದು ಟೆಸ್ಟ್…











