ತುಮಕೂರುಃ ಆಧಾರ್ ಕಾರ್ಡ್ನೊಂದಿಗೆ ಎಪಿಕ್(ಇPIಅ) ಸಂಖ್ಯೆಯನ್ನು ಕೂಡಲೇ ಜೋಡಣೆ(ಐiಟಿಞ) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.ಮಂಗಳವಾರ ನವದೆಹಲಿಯ ನಿರ್ವಾಚನ ಸದನದಲ್ಲಿ ಚುನಾವಣಾ ಆಯುಕ್ತರಾದ ಡಾ: ಸುಖಬೀರ್ ಸಿಂಗ್ ಸಂಧು ಹಾಗೂ ಡಾ: ವಿವೇಕ್ ಜೋಶಿ, ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಇಲಾಖೆ ಕಾರ್ಯದರ್ಶಿ, ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ, ಇಸಿಐನ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದ ಅವರು, ಚುನಾವಣಾ ಆಯೋಗವು ಆರ್ಟಿಕಲ್ ೩೨೬, ಆರ್ಪಿ ಆಕ್ಟ್, ೧೯೫೦ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳಲಿದ್ದು, ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ. ಭಾರತದ ಸಂವಿಧಾನದ ೩೨೬ನೇ ವಿಧಿಯ ಪ್ರಕಾರ ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡಲಾಗುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆಯಾದ್ದರಿಂದ ಇPIಅ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ ೩೨೬ನೇ ವಿಧಿ, ೧೯೫೦ರ ಜನತಾ ಪ್ರಾತಿನಿಧ್ಯ…
Author: News Desk Benkiyabale
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಮಾರ್ಚ್ ೨೮ರಂದು ಶ್ರೀ ಅಗ್ನಿಬನ್ನಿರಾಯ ಜಯಂತಿ ಹಾಗೂ ಏಪ್ರಿಲ್ ೨ರಂದು ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ನಿಗಧಿತ ದಿನಾಂಕಗಳAದು ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಯಂತಿ ದಿನದಂದು ಮಹನೀಯರ ತತ್ವಾದರ್ಶಗಳ ಕುರಿತು ಉಪನ್ಯಾಸವನ್ನು ಏರ್ಪಡಿಸಬೇಕು ಎಂದು ತಿಳಿಸಿದರಲ್ಲದೆ, ಜಯಂತಿ ಆಚರಣೆ ಕುರಿತು ಸಮುದಾಯದ ಮುಖಂಡರಿAದ ಸಲಹೆಗಳನ್ನು ಪಡೆದರು. ಸಮುದಾಯದವರ ಅಭಿಪ್ರಾಯ ಪಡೆದ ನಂತರ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ನಗರದ ಕನ್ನಡಭವನದಲ್ಲಿ ಏರ್ಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು…
ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿ ೨೬೨೭ ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬAಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಚುನಾವಣೆಗಳಿಗೆ ಸಂಬAಧಿಸಿದAತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ಸೈಟ್ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು ಸದರಿ ವೆಬ್ಸೈಟ್ಗೆ ಭೇಟಿ…
ಚಿಕ್ಕನಾಯಕನಹಳ್ಳಿ: ಅಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ಕರುಣಾ ಕಾರ್ಯಕ್ರಮ ಹಾಗೂ ಪಶು ಆರೋಗ್ಯ ಶಿಬಿರವನ್ನು ತಾಲ್ಲೂಕಿನ ಎಚ್.ಎಂ. ಕಾವಲು ಗ್ರಾಮದಲ್ಲಿ ನಡೆಸಲಾಯಿತು. ತಾಲ್ಲೂಕಿನ ಹಂದನಕೆರೆ ಹೋಬಳಿ ಎಚ್.ಎಂ. ಕಾವಲು ಗ್ರಾಮದಲ್ಲಿ ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆಯಡಿ ನಡೆದ ಪಶು ಆರೋಗ್ಯ ಶಿಬಿರದಲ್ಲಿ ಬೆಳಿಗ್ಗೆ ಡಾ. ಪ್ರಮೋದ್ಕುಮಾರ್ ತಂಡದಿAದ ೧೦ ಬರಡುರಾಸುಗಳ ತಪಾಸಣೆ, ಚಿಕಿತ್ಸೆ ಹಾಗೂ ಗರ್ಭ ಪರೀಕ್ಷೆ ನಡೆಸಿ ಇವುಗಳಲ್ಲಿ ನಾಲ್ಕು ರಾಸುಗಳ ಗರ್ಭದೋಶ ಪತ್ತೆಹಚ್ಚಿ ಚಿಕಿತ್ಸೆ ನೀಡಲಾಯಿತು. ೨೦ ರಾಸುಗಳಿಗೆ ವಿವಿಧ ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡಿ, ೫೦೦ ಕುರಿ ಮೇಕೆಗಳಿಗೆ ಜಂತುನಾಶಕ ಔಷಧಿಯನ್ನು ಕುಡಿಸಲಾಯಿತು. ೭೫ ಮಿಶ್ರತಳಿ ಹಸುಗಳಿಗೆ ತಲಾ ಒಂದು ಕೇಜಿ ಲವಣ,ಖನಿಜ ಹಾಗೂ ಜೀವಸತ್ವಯುಕ್ತ ಮಿಶ್ರಣವನ್ನು ನೀಡಲಾ ಯಿತು. ೩೦ ಕರುಗಳಿಗೆ ಜಂತುನಾಶಕ ಔಷಧಿಕುಡಿಸಿ ಆರೋಗ್ಯವರ್ಧಕ ಚುಚ್ಚುಮದ್ದು ನೀಡಲಾಯಿತು. ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೆ.ಮಾ. ನಾಗಭೂಷಣ್ರವರು ರೈತರ ಸೆಭೆನಡೆಸಿ ಮಾತನಾಡಿ, ಪಶುಪಾಲನೆಯನ್ನು ಲಾಭದಾಯಿಕಗೊಳಿಸಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ವೈಜ್ಞಾನಿಕ ಹಾಗೂ…
ತುಮಕೂರು: ಎಸ್ಎಸ್ಎಲ್ಸಿ ವರೆಗೂ ಹೆಣ್ಣು ಮಕ್ಕಳೇ ಮುಂದೆ ಇರುತ್ತಾರೆ. ಆಮೇಲೆ ಅವರು ಎಲ್ಲಿ ಹೋಗುತ್ತಾರೋ ತಿಳಿಯುವುದಿಲ್ಲ. ಹೀಗಾಗಿ ಮಹಿಳೆ ಶಿಕ್ಷಣದಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ಲೇಖಕಿ ದು.ಸರಸ್ವತಿ ಹೇಳಿದರು. ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ಮಾರ್ಚ್ ೨೦ರಂದು ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಓದಿಯೇ ಇಲ್ಲ ಅಂದರೆ ಉದ್ಯೋಗ ಎಲ್ಲಿಯದು? ಎಲ್ಲ ಹೆಣ್ಣು ಮಕ್ಕಳು ಶಾಲೆ ಬಿಟ್ಟು ಕೂಲಿನಾಲಿ ಮಾಡಿಕೊಂಡಿರುವುದನ್ನು ನಾವು ಕಾಣುತ್ತೇವೆ. ಹೆಣ್ಣು ಮಕ್ಕಳಿಗೆ ಆರೋಗ್ಯವೇ ಸರಿ ಇರುವುದಿಲ್ಲ. ತಾಯ್ತನದ ಮರಣ ಸಂಖ್ಯೆ ಹೆಚ್ಚಾಗಿದೆ. ಶಿಶು ಹತ್ಯೆ ಜಾಸ್ತಿ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹೆಣ್ಣು ಮಕ್ಕಳ ಮೇಲೆ ಹಿಂಸೆ, ದೌರ್ಜನ್ಯ ಎಥೇಚ್ಚವಾಗಿ ನಡೆಯುತ್ತಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮಹಿಳೆಯರ ಮೇಲಿನ ಹಿಂಸೆ, ದೌರ್ಜನ್ಯದಲ್ಲಿ ಮೇಲಿನ ಸ್ಥಾನದಲ್ಲಿದ್ದೇವೆ. ೭೫ ರಿಂದ ೮೫ರವರೆಗೂ ಮಹಿಳಾ ದಶಕ ಅಂತ ಮಾಡಿದರು. ಹೀಗಾಗಿ ಸರ್ಕಾರ ಪಂಚವಾರ್ಷಿಕ ಯೋಜನೆಯಲ್ಲಿ…
ಹುಳಿಯಾರು: ಹಂದನಕೆರೆ ಹೋಬಳಿ ಹೆಚ್.ಎಂ. ಕಾವಲು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಚಿಕ್ಕನಾಯಕನಹಳ್ಳಿ ವತಿಯಿಂದ ಕರುಣಾ ಕಾರ್ಯಕ್ರಮ ಮತ್ತು ಪಶುಆರೋಗ್ಯ ಶಿಬಿರವನ್ನು ಬುಧವಾರ ಏರ್ಪಡಿಸಲಾಗಿತ್ತು. ಹಂದನಕೆರೆ ಪಶುಆಸ್ಪತ್ರೆಯ ಪಶುವೈ ದ್ಯಾಧಿಕಾರಿ ಡಾ.ಪ್ರಮೋದ್ಕುಮಾರ್ ರವರು ೧೦ ಬರಡು ರಾಸುಗಳಿಗೆ ಚಿಕಿತ್ಸೆ ಮತ್ತು ೧೦ ಗರ್ಭ ಪರೀಕ್ಷೆಗಳನ್ನು ನಡೆಸಿದರು. ೪ ವಿವಿಧ ಗರ್ಭಕೋಶ ತೊಂದರೆ ಇರುವ ರಾಸುಗಳಿಗೆ ಚಿಕಿತ್ಸೆ ೨೦ ರಾಸುಗಳಿಗೆ ವಿವಿಧ ಸಾಮಾನ್ಯ ತೊಂದರೆಗಳಿಗೆ ಚಿಕಿತ್ಸೆಯನ್ನು ನೀಡಿದರು. ೫೦೦ ಕುರಿ/ಮೇಕೆಗಳಿಗೆ ಜಂತುನಾಶಕ ಔಷಧಿಯನ್ನು ವಿತರಿಸಲಾಯಿತು. ಶಿಬಿರಕ್ಕೆ ಬಂದಿದ್ದ ಎಲ್ಲಾ ೧೨೫ ರಾಸುಗಳಿಗೆ ಜಂತುನಾಶಕ ಔಷಧಿಯನ್ನು ಕುಡಿಸಲಾಯಿತು. ೭೫ ಮಿಶ್ರತಳಿ ಹಸುಗಳಿಗೆ ಒಂದು ಕೆಜಿಯ ಲವಣ/ಖನಿಜ/ಜೀವಸತ್ವಯುಕ್ತ ಟಾನಿಕ್ ಮಿಶ್ರಣವನ್ನು ನೀಡಲಾಯಿತು. ೩೦ ಕರುಗಳಿಗೆ ಜಂತು ನಾಶಕ ಔಷಧಿ ಕುಡಿಸಿ ಬೆಳವಣಿಗೆಗೆ ಪೂರಕವಾದ ಮತ್ತು ಆರೋಗ್ಯ ವರ್ಧಕ ಚುಚ್ಚು ಮದ್ದು ಹಾಗೂ ಟಾನಿಕ್ಗಳನ್ನು ನೀಡಲಾಯಿತು. ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೆ.ವi.ನಾಗಭೂಷಣರವರು ನೆರೆದಿದ್ದ ರೈತರನ್ನು ಉದ್ದೇಶಿಸಿ ಪಶುಪಾಲನ ಚಟುವಟಿಕೆಗಳ ಕುರಿತು ಮಾತನಾಡಿದರು. ಕರುಗಳ ಸಾಕಾಣಿಕೆ…
ಹುಳಿಯಾರು: ಕನ್ನಡಿಗರು ಅರ್ಜಿ ಹಾಕಲು ಸಾಧ್ಯವಾಗದ ರೀತಿಯ ಷರತ್ತು ವಿಧಿಸಿ ನಮ್ಮ ಮೆಟ್ರೊ ಚಾಲಕರನ್ನು (ಲೋಕೊ ಪೈಲಟ್) ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ. ಕರವೇಯ ತಾಲೂಕು ಅಧ್ಯಕ್ಷ ಬೇಕರಿ ಪ್ರಕಾಶ್ ಅವರು ಈ ಸಂಬAಧ ಪತ್ರಿಕಾ ಹೇಳಿಕೆ ನೀಡಿ ಬೆಂಗಳೂರಿನಲ್ಲಿ ಉದ್ಯೋಗ ಇಲ್ಲದೆ ಕನ್ನಡಿಗರು ಪರದಾಡುತ್ತಿದ್ದಾರೆ. ಅಂತಹದರಲ್ಲಿ ಬೇರೆ ರಾಜ್ಯದವರಿಗೆ ಅನುಕೂಲ ಮಾಡಿಕೊಡುವ ರೀತಿಯಲ್ಲಿ ನೇಮಕಾತಿ ನಿಯಮಗಳನ್ನು ರೂಪಿಸುತ್ತಿದ್ದಾರೆ. ಈ ಮೂಲಕ ನಮ್ಮ ಮೆಟ್ರೊವನ್ನು ಅವರ ಮೆಟ್ರೋ ಆಗಿ ಬದಲಾಯಿಸಿ ಕೊಂಡಿದ್ದಾರೆ. ಅನ್ಯಭಾಷಿಗರಿಗೆ ಅನುಕೂಲ ಮಾಡಿಕೊಡುವ ನೇಮಕಾತಿ ಅಧಿ ಸೂಚನೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನೇಮಕಾತಿ ನಿಯಮಗಳಲ್ಲಿ ಕನ್ನಡಿಗರಿಗೆ ಪ್ರಾಧಾನ್ಯವನ್ನು ಉಲ್ಲೇಖಿಸಿದ್ದರೆ ಈ ರೀತಿಯ ಸಮಸ್ಯೆಯಾಗುತ್ತಿರಲಿಲ್ಲ. ತಕ್ಷಣ ಅಧಿಸೂಚನೆ ರದ್ದುಪಡಿಸಿ ಕನ್ನಡಿಗರಿಗೆ ಅವಕಾಶಕೊಟ್ಟು ಮತ್ತೊಂದು ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸAತೋಷ್, ಉಪಾಧ್ಯಕ್ಷ ರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾದರೆ ಎಂದು ಚುನಾವಣಾಧಿಕಾರಿಯಾಗಿದ್ದ ಹಿರಿಯ ವಕೀಲ ನಾಗೇಂದ್ರಪ್ಪ ಘೋಷಣೆ ಮಾಡಿದರು. ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಿ. ಡಿ.ದೇವರಾಜು, ಟಿ.ಕೃಷ್ಣಮೂರ್ತಿ, ಎಂ.ಎಲ್. ಸಂತೋಷ್ ಸ್ಪರ್ಧೆ ಮಾಡಿದ್ದು, ದೇವರಾಜು ೧೮ ಮತ ಪಡೆದರೆ ಎಂ.ಎಲ್ ಸಂತೋಷ್ ಅವರು ೧೯ ಮತ ಪಡೆದು ಜಯಶೀಲರಾಗಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷಲಕ್ಷಿö್ಮÃ ಅವರು ೧೫ ಮತ ಮತ್ತು ಕೃಷ್ಣಪ್ಪ ಅವರು ೨೨ ಮತ ಪಡೆದು ಕೃಷ್ಣಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇನ್ನೂಳಿದಂತೆ ಉಪಾಧ್ಯಕ್ಷ, ಪ್ರಧಾನಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷ ಎಂ.ಎಲ್.ಸAತೋಷ್ ಮಾತ ನಾಡಿ ವಕೀಲರ ನಾನಾ ಕುಂದುಕೊರತೆಗಳು ಇದ್ದು, ಎಲ್ಲರ ಸಹಕಾರ ಪಡೆದು ಎರಡು ವರ್ಷಗಳ ಕಾಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಮ್ಮ ವಕೀಲರ ಸಮಸ್ಯೆಗಳನ್ನ ಬಗೆಹರಿಸಲು ಎಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ನನಗೆ…
ತುಮಕೂರು: ಅಂಗವಿಕಲರ ಪುನರ್ ವಸತಿಗಾಗಿ ದುಡಿಯುತ್ತಿರುವ ಮೊಬಿಲಿಟಿ ಇಂಡಿಯಾ ಸಂಸ್ಥೆ ಯವತಿಯಿಂದ ತುರುವೇಕೆರೆ ತಾಲೂಕು ವ್ಯಾಪ್ತಿಯ ದೈಹಿಕ ವಿಕಲಚೇತನ ಮಕ್ಕಳಿಗೆ ಅಗತ್ಯ ಇರುವ ಸಹಾಯಕ ಸಾಧನ ಸಲಕರಣೆಗಳ ಜೋಡಣಾ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ತುರು ವೇಕೆರೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ, ವಿಕಲಚೇತನರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ತುರುವೇಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ನಟೇಶ್, ಮೊಬಿಲಿಟಿ ಇಂಡಿಯಾ ಸಂಸ್ಥೆಯು ನೀಡಿರುವ ಸಲಕರಣೆಗಳು ಮತ್ತು ವ್ಯಾಯಾಮ ಸೇವೆಗಳನ್ನು ಸಮರ್ಪಕವಾಗಿ ಬಳಸಿಕೊಂಡು,ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಂಥ ಆಗಬೇಕೆಂದು ಪೋಷಕರಿಗೆ ತಿಳಿಸಿದರು ಭವಿಷ್ಯದಲ್ಲಿ ವಿಕಲಚೇತನ ಮಕ್ಕಳ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕು.ದೇಶದಾದ್ಯಂತ ಅಂಗವಿಕಲರ ಕಲ್ಯಾಣಕ್ಕಾಗಿ ಶ್ರಮಿ ಸುತ್ತಿರುವ ಮೊಬಿಲಿಟಿ ಇಂಡಿಯಾ ಸಂಸ್ಥೆಯ ಕೆಲಸ ಕಾರ್ಯಗಳಿಗೆ ಪಟ್ಟಣ ಪಂಚಾಯಿತಿ ವತಿ ಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರಸವೆ ನೀಡಿದರು. ಮೊಬಿಲಿಟಿ ಇಂಡಿಯಾ ಸಂಸ್ಥೆಯ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕರಾದ ಆನಂದ್ ಎಸ್.ಎನ್.ಮಾತನಾಡಿ,ಸಂಸ್ಥೆಯು ತುರುವೇಕೆರೆ ತಾಲೂ ಕಿನ ವ್ಯಾಪ್ತಿಯಲ್ಲಿ ಬರುವಂತಹ ವಿಕಲಚೇತನ…
ಪಾವಗಡ: ತೆಲಂಗಾಣ ವಿಧಾನಸಭೆಯಲ್ಲಿ ಒಳಮೀಸ ಲಾತಿ ವರ್ಗೀಕರಣ ಸಂಬAಧಿತ ವರದಿ ಅಂಗೀಕಾರಗೊAಡಿರುವ ಹಿನ್ನೆಲೆಯಲ್ಲಿ, ಪಾವ ಗಡ ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ಈ ನಿರ್ಧಾರವನ್ನು ಶ್ಲಾಘಿಸಿ ಹರ್ಷೋದ್ಗಾರವನ್ನು ಬುಧವಾರ ಸಂಜೆ ೪ ಗಂಟೆಯಲ್ಲಿ ವ್ಯಕ್ತಪಡಿಸಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಂಃಅಆ ವರ್ಗೀಕರಣ ಜಾರಿಗೊಳಿಸುವ ಶಾಸನವನ್ನು ಮಂಡಿಸಿ ಅದನ್ನು ಅಂಗೀಕರಿಸುವಲ್ಲಿ ಮಹತ್ವದ ಪಾತ್ರವಹಿಸಿದ ಕಾರಣ, ಪಾವಗಡ ತಾಲ್ಲೂಕಿನ ದಲಿತ ಮುಖಂಡರು ಹಾಗೂ ನಾಯಕರು ಹಾಲಿನ ಅಭಿಷೇಕ ನಡೆಸಿ ಹರ್ಷವನ್ನು ಹಂಚಿಕೊAಡರು. ಈ ಕಾರ್ಯಕ್ರಮದಲ್ಲಿ ಮಾದಿಗ ಮೀಸಲಾತಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ಅವರಿಗೂ ಹಾಲಿನ ಅಭಿಷೇಕ ಮಾಡಲಾಯಿತು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಟಿ.ಎನ್.ಪೇಟೆ ರಮೇಶ್, ಕೋರ್ಟ್ ನರ ಸಪ್ಪ, ವಳ್ಳೂರು ನಾಗೇಶ್, ಎನ್.ರಾಮಾಂ ಜಿನಪ್ಪ, ಮಂಜುನಾಥ್ ಮಂಗಳವಾಡ, ಕೆ.ಪಿ. ಲಿಂಗಣ್ಣ, ಮೀನಕುಂಟನಹಳ್ಳಿ ನರಸಿಂಹಪ್ಪ, ಶಿವಶಂಕರ, ನರಸಿಂಹ, ದೇವಲಕೆರೆ ಹನುಮಂತರಾಯ, ಭೀಮನಕುಂಟೆ ರಾಮಾಂ ಜಿನಪ್ಪ, ರವಿ, ನಾರಾಯಣಪ್ಪ, ಬಂಗಾರಪ್ಪ ಭಾಗವಹಿಸಿದ್ದರು…