Author: News Desk Benkiyabale

ತುಮಕೂರು:       ಅಹೋರಾತ್ರಿ ಧರಣಿಯಲ್ಲಿ ಜೆಸಿಬಿ ವೆಂಕಟೇಶ್ , ರಾಮಯ್ಯ, ಮೋಹನ್ ಪರಮೇಶ್, ಶಿವರಾಜು, ಬಂಡೆ ಕುಮಾರ ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ.       ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ದಲಿತಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರ ಧರಣಿ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿತು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ದಲಿತಪರ ಸಂಘಟನೆಯ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ವಾಲೆ ಚಂದ್ರಯ್ಯ ಶತಶತಮಾನಗಳಿಂದ ದಲಿತರು ಹಾಗೂ ಹಿಂದುಳಿದ ಜನಾಂಗ ತುಳಿತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಸದಾಶಿವ ಆಯೋಗ ತನ್ನ ವರದಿಯನ್ನು ಸಲ್ಲಿಸಿ ಎಂಟು ವರ್ಷಗಳಾದರೂ ಯಾವುದೇ ಸರ್ಕಾರಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿ ಅವರಿಗೆ ನೀಡಬೇಕಾದ ಸೌಲಭ್ಯ ನೀಡಿಲ್ಲ ಆದ್ದರಿಂದ ಕೂಡಲೇ ಎಲ್ಲ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತಂದು ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು…

Read More

ತುಮಕೂರು:       ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಿಲ್ಲಾಸ್ಪತ್ರೆಯ ಮುಂಭಾಗ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.       ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡವಾರು ಹೆಚ್ಚಿಸಬೇಕು ಮತ್ತು ಈ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವ ಜೊತೆಗೆ ಅಗತ್ಯವಿರುವ ನೆರವನ್ನು ಕೇಂದ್ರ ಸರ್ಕಾರವು ನೀಡಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಅಭಿವೃದ್ಧಿಗೆ ಆದ್ಯತೆ ನೀಡಲು ಕ್ರಮವಹಿಸಬೇಕು, ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಿ, ಕಾಯಂಗೊಳಿಸಬೇಕು. ಎಲ್ಲಾ ಹುದ್ದೆಗಳಿಗೆ ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ನೀಡಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.       ಹರಿಯಾಣ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜಾರಿ ಮಾಡಿರುವ ಏಕರೂಪ ವೇತನದ…

Read More

ಗುಬ್ಬಿ:       ದೇವಾಲಯದ ಬಾಗಿಲು ಮುರಿದು ಹುಂಡಿ ಹಣವನ್ನು ದೋಚಿದ ಕಳವು ಪ್ರಕರಣ ತಾಲ್ಲೂಕಿನ ಕಸಬ ಹೋಬಳಿ ಮಡೇನಹಳ್ಳಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದಿದೆ.       ಗ್ರಾಮದ ಆರಾಧ್ಯ ದೈವ ಮಹಾಲಿಂಗೇಶ್ವರ ದೇವಾಲಯದಲ್ಲಿ ಅಲವಡಿಸಲಾದ ಹುಂಡಿಯಲ್ಲಿನ ಹಣ ಮಾತ್ರ ದೋಚಲಾಗಿದೆ. ಸುಮಾರು 30 ಸಾವಿರ ರೂಗಳ ಅಂದಾಜು ದೇವಾಲಯ ಸಮಿತಿ ತಿಳಿಸುತ್ತಿದೆ. ಈ ಹಿಂದೆ ಕೂಡಾ ಹುಂಡಿ ಕಳವು ನಡೆದು ಅಂದಾಜು 50 ಸಾವಿರ ರೂ ದೋಚಲಾಗಿತ್ತು. ಎರಡು ಬಾರಿ ಕಳ್ಳತನದಲ್ಲೂ ದೇವಾಲಯದಲ್ಲಿರುವ ಇನ್ನಿತರ ಚಿನ್ನಾಭರಣ, ಬೆಳ್ಳಿ ಸಾಮಾಗ್ರಿಗಳ ಕಳ್ಳತನವಾಗಿಲ್ಲ. ಈ ಬಗ್ಗೆ ಸೂಕ್ಷ್ಮತೆ ಅರಿತು ಪೊಲೀಸರು ಚುರುಕಿನ ತೀವ್ರ ತನಿಖೆ ನಡೆಸಿ ಖದೀಮರನ್ನು ಬಂದಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.       ಸ್ಥಳ ಮಹಜರು ನಡೆಸಿದ ಗುಬ್ಬಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಗುಬ್ಬಿ:       ಅಡುಗೆ ಅನಿಲ ಸೋರಿಕೆಯಿಂದ ಹಬ್ಬಿದ ಬೆಂಕಿ ಕ್ಷಣಾರ್ಧದಲ್ಲಿ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳನ್ನು ಸುಟ್ಟು ಕರಕಲಾಗಿಸಿದ ಘಟನೆ ಮಂಗಳವಾರ ಪಟ್ಟಣದ ಸಿಡಿಲು ಬಸವೇಶ್ವರ ದೇವಾಲಯದ ಬಳಿ ನಡೆದಿದೆ.       ಶಿಕ್ಷಕ ನಿಂಗಣ್ಣ ಅವರ ಮನೆಯಲ್ಲಿ ಬೆಳಿಗ್ಗೆ ಎಂದಿನಂತೆ ಅಡುಗೆ ಸಿದ್ದ ಪಡಿಸುತ್ತಿದ್ದ ಸಂದರ್ಭದಲ್ಲಿ ಸಿಲೆಂಡರ್ ಮೂಲಕ ಅನಿಲ ಸೋರಿಕೆಯಾಗಿ ಬೆಂಕಿ ಕೆನ್ನಾಲಿಗೆ ಅಡುಗೆಮನೆಯನ್ನು ಪಸರಿಸಿದೆ. ನಂತರ ಶಿಕ್ಷಕ ನಿಂಗಣ್ಣ ಸಿಲೆಂಡರ್ ಹೊರ ತರುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಿಲ್ಲ. ಕ್ಷಣಾರ್ಧದಲ್ಲಿ ಮನೆಯ ಹೊರಾಂಡಕ್ಕೂ ಹಬ್ಬಿದ ಬೆಂಕಿಗೆ ಟಿವಿ, ಫ್ರಿಡ್ಜ್, ಬೀರು ಕೂಡಾ ಆಹುತಿಯಾಗಿದೆ. ಬೀರುವಿನಲ್ಲಿದ್ದ 10 ಸಾವಿರ ನಗದು ಹಣದ ಜತೆ ಬೆಲೆಬಾಳುವ ವಸ್ತ್ರಗಳು ಸುಟ್ಟು ಕರಕಲಾಗಿದೆ.       ಶಿಕ್ಷಕ ನಿಂಗಣ್ಣ ಮತ್ತು ಪುತ್ರ ಇಬ್ಬರೇ ಮನೆಯಲ್ಲಿ ಅಡುಗೆ ಕೆಲಸಕ್ಕೆ ಮುಂದಾಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಾರು 1.20 ಲಕ್ಷ ರೂಗಳ ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ. ಅದೃಷ್ಟವಶಾತ್ ಸಿಲಿಂಡೆರ್ ಸ್ಫೋಟವಾಗಿಲ್ಲ.…

Read More

ತುಮಕೂರು:      ಜಿಲ್ಲಾ ಪಂಚಾಯತ್ ಹಂತದಲ್ಲಿ ಬಗೆಹರಿಸಬಹುದಾದ ಬೇಡಿಕೆಗಳನ್ನು ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಗ್ರಾಮ ಪಂಚಾಯತ್ ನೌಕರರು ಹಿಂತೆಗೆದುಕೊಂಡಿದ್ದಾರೆ.      ಸೆಪ್ಟೆಂಬರ್ 22ರಿಂದ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2 ಗ್ರಾಮ ಪಂಚಾಯತ್ ನೌಕರರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈಡೇರಿಸಬಹುದಾದ ಬೇಡಿಕೆಗಳ ಸಂಬಂಧ ಸೆಪ್ಟೆಂಬರ್ 30ರಂದು ಸಭೆ ಕರೆಯುವುದಾಗಿ ತಿಳಿಸಿದರು.       ಗ್ರಾಮ ಪಂಚಾಯ್ತಿ ನೌಕರರ ಬೇಡಿಕೆಗಳ ಸಂಬಂಧ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿಗಳು ಕೂಡಲೇ ಮಾಹಿತಿಯನ್ನು ತಮಗೆ ರವಾನಿಸಬೇಕೆಂದು ಪತ್ರ ಬರೆಯಲಾಗಿದೆ ಎಂದು ಪತ್ರದ ಪ್ರತಿಯೊಂದನ್ನು ಸಂಘದ ಮುಖಂಡರಿಗೆ ನೀಡಿದರು.       ಇದೇ ವೇಳೆ ಮಾತನಾಡಿ ಸಂಘದ ಜಿಲ್ಲಾಧ್ಯಕ್ಷ ಎನ್.ಕೆ.ಸುಬ್ರಮಣ್ಯ, ಇಎಫ್‍ಎಂಎಸ್ ಸೇರ್ಪಡೆ, ಉಪಧನ, ಬಾಕಿ ವೇತನ, ತೆರಿಗೆ ಸಂಗ್ರಹದಲ್ಲಿ 40ರಷ್ಟು…

Read More

ಹುಳಿಯಾರು:       ಕೆಲಸ ಎಷ್ಟಾದ್ರೂ ಕೇಳಿ, ಶಕ್ತಿ ಮೀರಿ ಮಾಡ್ತೀನಿ. ಆದರೆ, ಹಣಕೇಳೋಕೆ ನನ್ನ ಹತ್ತಿರ ಅವಕಾಶ ಇಲ್ಲಾ. ಇದೊಂದೇ ಕಾರಣಕ್ಕೆ ಕೆಲವರು ನನ್ನ ಬೈಕೊಂಡ್ ಓಡಾಡುತ್ತಾರೆ. ಹೀಗಂತ ಹೇಳಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ.       ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಿಡ್ಲೆಕೋಣ ಗ್ರಾಮದಲ್ಲಿನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಮಾಡಿ ಮಾತನಾಡಿದರು      ಸಚಿವರು ನಾನು ಯಾರ ಜೇಬಿಗೂ ಕೈ ಇಟ್ಟವನಲ್ಲ. ಅಡ್ಡದಾರಿ ಹಿಡಿದು ದುಡ್ದು ಮಾಡಿ ರಾಜಕಾರಣ ಮಾಡೋ ಜಾಯಮಾನ ನನ್ನದಲ್ಲ. ಇದೇ ಸಿದ್ಧಾಂತ ಮೈಗೂಡಿಸಿಕೊಂಡು 30 ವರ್ಷ ರಾಜಕಾರಣದಲ್ಲಿ ಹೆಜ್ಜೆ ಸವೆಸಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಎಂದೆಂದಿಗೂ ಹೀಗೆಯೇ ಮುಂದುವರಿಯಲಿ. ಮತ ನೀಡಿ ಚುನಾಯಿಸಿದ ನಿಮ್ಮ ಋಣವನ್ನ ಪ್ರಾಮಾಣಿಕವಾಗಿಯೇ ತೀರಿಸುವೆ ಎಂದು ಭಾವುಕರಾಗಿ ನುಡಿದರು.       ಯಾವುದೇ ನೀರಾವರಿ ಯೋಜನೆ ಕಾಣದ ಬುಕ್ಕಾ ಪಟ್ಟಣ ಹೋಬಳಿಗೆ ಭದ್ರಾಮೇಲ್ದಂಡೆ ಯೋಜ ನೆಯಡಿಯಲ್ಲಿ ನೀರು…

Read More

ತುಮಕೂರು:      ಪದೋನ್ನತಿ ಹೊಂದಿ ರುವ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹೆಚ್.ಸವಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎನ್. ಸೌಭಾಗ್ಯ ಅವರಿಗೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಸೋಮವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.      ಸವಿತಾ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರರಾಗಿ ಹಾಗೂ ಸೌಭಾಗ್ಯ ಅವರು ಸಿದ್ದರಬೆಟ್ಟ ಶ್ರೀ ಸಿದ್ದೇಶ್ವರ ದೇವಾಲಯದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ.       ಬೀಳ್ಕೊಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಪದೋನ್ನತಿ ಹೊಂದಿದವರು ಸಲ್ಲಿಸಿದ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದೆಯೂ ಇದೇ ರೀತಿ ಉತ್ತಮ ಸೇವೆ ಸಲ್ಲಿಸಬೇಕೆಂದು ಶುಭ ಹಾರೈಸಿದರು.       ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಯಡಿಯೂರು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೈ.ಎಸ್.…

Read More

ಹುಳಿಯಾರು:       ಹುಳಿಯಾರು ಪಟ್ಟಣದ ಭೀಮಮ್ಮನ ದೇವಾಲಯದ ಬಳಿ ಇಟ್ಟಿಗೆ ತುಂಬಿದ ಲಾರಿ ಅಪಘಾತಕ್ಕೀಡಾಗಿ ಕೂದಳೆಲೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ.       ಶಿರಾ-ಹುಳಿಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟಿಗೆ ತುಂಬಿದ ಲಾರಿ ಪಟ್ಟಣದ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಉರುಳಿದೆ. ಒಂದಿಂಚು ಮುಂದೆ ಬಿದ್ದಿದ್ದರೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುತ್ತಿತ್ತು.      ಅದು ಹೈವೋಲ್ಟೇಜ್ ಇರುವ ಲೈನ್ ಆಗಿರುವುದರಿಂದ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶತ್ ಕಂಬದ ಸಮೀಪದ ಗುಂಡಿಗೆ ಬಿದ್ದಿದೆ. ಲಾರಿ ತಲೆಕೆಳಗಾಗಿ ಬಿದ್ದಿದ್ದು ಇಟ್ಟಿಗೆ ಚಲ್ಲಾಪಿಲ್ಲಿಯಾಗಿ ಬಿದಿದ್ದು ಚಾಲಕ, ಕ್ಲೀನರ್ ಅನಾಹುತದಿಂದ ಪಾರಾಗಿದ್ದಾರೆ.

Read More

ಗುಬ್ಬಿ:       ಹೆದ್ದಾರಿ ರಸ್ತೆ ಬದಿ ಯಲ್ಲಿ ನಿಂತಿದ್ದ ಟಿಪ್ಪರ್ ಲಾರಿ ಯ ಹಿಂಬದಿಗೆ ಗುದ್ದಿದ್ದ ಸರ್ಕಾರಿ ಬಸ್ ಸಂಪೂರ್ಣ ಜಖಂಗೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಮುಂಜಾನೆ ನುಸುಕಿನಲ್ಲಿ ತಾಲ್ಲೂಕಿನ ನಿಟ್ಟೂರು ಬಾಗೂರು ಬಳಿ ರಾ.ಹೆ 206 ರಲ್ಲಿ ನಡೆದಿದೆ.       ಬಸ್‍ನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು ತರೀಕೆರೆ ತಾಲ್ಲೂಕು ತಡಿಗೆಬಯಲು ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದ ಶಿವಮೂರ್ತಿ(24) ಹಾಗೂ ಪೂಜಾ(20) ಮೃತರಾದ ದುರ್ದೈವಿಗಳು. ಬಸ್ ಚಾಲಕನ ಅಜಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿ ಗಮನಿಸದೇ ವೇಗವಾಗಿ ಬಂದು ಗುದ್ದಿದ ಚಾಲಕ ಪಾರಾಗಿದ್ದು, ಎಡ ಬದಿಯಲ್ಲಿ ಕುಳಿತಿದ್ದ ಈ ಇಬ್ಬರು ಬಲಿಯಾದರು.       ಶಿವಮೂರ್ತಿ ಮತ್ತು ಪೂಜಾಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾದೇ ಈರ್ವರು ಮೃತಪಟ್ಟರು. ಉಳಿದಂತೆ ಏಳು ಮಂದಿಗೆ ತೀವ್ರ ಸ್ವರೂಪದ ಗಾಯಗೊಂಡವರನ್ನು ಬೆಂಗಳೂರು ಮತ್ತು ತುಮಕೂರು ಆಸ್ಪತ್ರೆಯಲ್ಲಿ…

Read More

ತುಮಕೂರು :        ಮೋಟಾರ್ ಸೈಕಲ್ ಗಳನ್ನು ಕಳವು ಮಾಡುತ್ತಿದ್ದ ಕಳ್ಳನನ್ನು ಬಂಧಿಸಲಾಗಿದೆ.        ಆರೋಪಿಯನ್ನು ಜಗನ್ನಾಥ ಗೌಡ (28 ವರ್ಷ) ಎಂದು ಗುರುತಿಸಲಾಗಿದೆ.         ಸೆ. 20 ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆ ಪಿ.ಎಸ್.ಐ. ಮಂಜುಳ ರವರು ಹಿರೇಹಳ್ಳಿ ಕೈಗಾರಿಕಾ ಪ್ರದೇಶದದಲ್ಲಿ ತನ್ನ ಸಿಬ್ಬಂದಿಗಳೊಂದಿಗೆ ಗಸ್ತು ಮಾಡುತ್ತಿರುವಾಗ ಪಂಡಿತನಹಳ್ಳಿ ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ಒಬ್ಬ ಅಸಾಮಿಯು ಅನುಮಾನಸ್ಪದವಾಗಿ ಪೊಲೀಸ್ ಜೀಪನ್ನು ನೋಡಿ ಬೈಕನ್ನು ತಿರುಗಿಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಹಿಡಿದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಆರೋಪಿಯು ಶಿರಾ, ಕ್ಯಾತ್ಸಂದ್ರ, ಮತ್ತು ಬೆಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಸುಮಾರು 1 ಲಕ್ಷ ರೂ ಮೌಲ್ಯದ ಒಟ್ಟು 03 ಮೋಟಾರ್ ಸೈಕಲ್‌ಗಳನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿರುತ್ತದೆ.       ಸದರಿ ಆರೋಪಿಯು ಈ ಹಿಂದೆ 2018 ನೇ ಸಾಲಿನಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ ಬಾಗಿಯಾಗಿಯಾಗಿವುದಾಗಿ ತಿಳಿದು ಬಂದಿರುತ್ತದೆ.…

Read More