ತುಮಕೂರು: ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ನಿಟ್ಟಿನಲ್ಲಿ ತಿಪಟೂರಿನಲ್ಲಿ ವಿಶೇಷ ಕೋರ್ಸ್ ಆರಂಭಿಸಲು ತುಮಕೂರು ವಿವಿ ಚಿಂತನೆ ನಡೆಸಿದೆ. ತಿಪಟೂರು ಹೊರವಲಯದ ರಂಗಾಪುರ ಹೊಸಳ್ಳಿ ಸರ್ವೇ ನಂ28ರಲ್ಲಿ ಸರ್ಕಾರ ವಿವಿಗೆ ನೀಡಿರುವ 15 ಎಕರೆ ಭೂಮಿ ಸರ್ವೇ ವೇಳೆ ಸಿಂಡಿಕೇಟ್ ಸದಸ್ಯ ರಾಜು ಈ ಬಗ್ಗೆ ಮಾಹಿತಿ ನೀಡಿದರು. ತಿಪಟೂರು ಸೇರಿ ತೆಂಗು ಸೀಮೆಯ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲು ಸರ್ಕಾರ ಭೂಮಿ ನೀಡಿದ್ದು, ಸದುಪಯೋಗ ಮಾಡಿಕೊಳ್ಳುವ ಹೊಣೆ ವಿವಿ ಮೇಲಿದೆ ಎಂದರು. ಇದರ ಮೊದಲ ಹಂತವಾಗಿ ಭೂಮಿ ಭದ್ರಪಡಿಸಿಕೊಳ್ಳುವ ಕಾರ್ಯಕ್ಕೆ ಈಗ ಚಾಲನೆ ನೀಡಲಾಗಿದ್ದು, ಭವಿಷ್ಯದಲ್ಲಿ ವಿವಿ ಆಂತರಿಕ ಸಂಪನ್ಮೂಲ ಹಾಗೂ ಸರ್ಕಾರದ ವಿಶೇಷ ಅನುದಾನ ಬಳಸಿಕೊಂಡು ಕ್ಯಾಂಪಸ್ ನಿರ್ಮಿಸುವ ಕನಸಿದೆ ಎಂದರು. ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನೀಲ್ಪ್ರಸಾದ್ ಮಾತನಾಡಿ, ವಿವಿಗೆ ಸಂಬಂಧಪಟ್ಟ ಭೂಮಿ ತಿಪಟೂರು ಹಾಗೂ ಶಿರಾ ತಾಲೂಕಿನಲ್ಲಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಶೈಕ್ಷಣಿಕ ವರ್ಷದಿಂದಲೇ ಹೊಸ ಕೋರ್ಸ್ ಆರಂಭಿಸಲು ವಿವಿ ಆಸಕ್ತಿ…
Author: News Desk Benkiyabale
ತುಮಕೂರು: ಅಪೌಷ್ಟಿಕತೆಯನ್ನು ದೂರ ಮಾಡಲು ಪೌಷ್ಟಿಕ ಕೈತೋಟಗಳನ್ನು ಬೆಳೆಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ರೈತ ಮಹಿಳೆಯರಿಗೆ ಕರೆ ನೀಡಿದರು. “ರಾಷ್ಟ್ರೀಯ ಪೋಷಣ್ ಅಭಿಯಾನ} ಅಂಗವಾಗಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಇಫ್ಕೊ(Iಈಈಅಔ) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಇತ್ತೀಚೆಗೆ ಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯನ್ನು ದೂರ ಮಾಡಲು ತಮ್ಮ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರಲ್ಲದೆ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಅಂಗನವಾಡಿ ಕಾರ್ಯಕತೆಯರು ಮನೆ-ಮನೆಗೆ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದಾರೆ. ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಲು ನೀಡುವ ಸಲಹೆಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಮನವಿ ಮಾಡಿದರು. “ಕಾವೇರಿ ಕೂಗು ಅಭಿಯಾನ”ದ ಸಂಚಾಲಕ ಶರದ್ ಮಾತನಾಡಿ, ರೈತ ಮಹಿಳೆಯರು ಮರ ಆಧಾರಿತ ಕೃಷಿ…
ಗುಬ್ಬಿ: ಕಳೆದ 34 ವರ್ಷದ ನಂತರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಚಿಂತನೆಯು ಭಾರತೀಯ ಪರಂಪರೆ, ಸಂಸ್ಕøತಿಯನ್ನು ಅಳವಡಿಸುವ ಪಠ್ಯಕ್ರಮವಾಗಿದೆ. ಯಾವ ಗೊಂದಲವಿಲ್ಲದೇ ಸ್ಥಳೀಯವಾಗಿಯೇ ಪಠ್ಯಕ್ರಮವನ್ನು ಜಾರಿಗೆ ತರಲು ಆಯಾ ರಾಜ್ಯ ಸರ್ಕಾರವು ಸ್ವತಂತ್ರವಾಗಿದೆ ಎಂದು ವಿದ್ಯಾಭಾರತಿ ಕ್ಷೇತ್ರೀಯ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್.ಜಗದೀಶ್ ತಿಳಿಸಿದರು. ಪಟ್ಟಣದ ಶ್ರೀ ಚಿದಂಬರಾಶ್ರಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಹೊಸ ಶಿಕ್ಷಣ ನೀತಿಯ ಬಗ್ಗೆ ಹಲವು ಗೊಂದಲ ಮೂಡಿದ್ದು ಏಕ ರೂಪ ಶಿಕ್ಷಣ ಎನ್ನುವುದನ್ನು ಮತ್ತೊಂದು ರೀತಿ ಬಿಂಬಿಸಲಾಗುತ್ತಿದೆ. ಏಕ ರೂಪ ಸಿದ್ದಾಂತ ಅಳವಡಿಸಿಕೊಳ್ಳಲು ಮಾತ್ರ ಸೂಚಿಸಲಾಗಿ ನಮ್ಮ ಭಾರತೀಯ ಶಿಕ್ಷಣಕ್ಕೆ ಮಹತ್ವ ನೀಡಲು ಈ ನೀತಿ ಮುಂದಾಗಿದೆ. ಮೆಕಾಲೆ ಆಂಗ್ಲ ಮಾದರಿಯಿಂದ ಹೊರ ಬಂದು ಉದ್ಯೋಗಾಧಾರಿತ ಶಿಕ್ಷಣವನ್ನು ಮೌಲ್ಯಾಧಾರಿತ ಶಿಕ್ಷಣವಾಗಿ ಮಾರ್ಪಡಿಸಿ ನಮ್ಮ ಪರಂಪರೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ. ಇಲ್ಲಿ ಯಾವುದೇ ಕಡ್ಡಾಯ ಎಂಬ ಅಂಶವಿಲ್ಲ. ಉತ್ತಮ ಸಲಹೆಯ ನೀತಿ ಅಳವಡಿಸಿಕೊಳ್ಳಲು…
ತುಮಕೂರು: ಜಿಲ್ಲೆಯಲ್ಲಿ ಸೆ.21ರಿಂದ ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪರವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ 21 ರಿಂದ 28 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು ಎಂದರು. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಹೊರಾಂಗಣ ಮತ್ತು ಒಳಾಂಗಣ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಕೋವಿಡ್-19 ಸೋಂಕಿತ ಮಕ್ಕಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ…
ಮಧುಗಿರಿ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಎಟಿಎಂ ಕಾರ್ಡ್ನ್ನು ಅದಲು -ಬದಲು ಮಾಡಿ ಗಾರ್ಮೆಂಟ್ಸ್ ಮಹಿಳೆಯೊಬ್ಬರ ಖಾತೆಯಿಂದ ಇಪ್ಪತ್ತು ಸಾವಿರ ಹಣ ಡ್ರಾ ಮಾಡಿ ಮೋಸ ಮಾಡಿದ್ದ ವ್ಯಕ್ತಿಯನ್ನು ಮಧುಗಿರಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ನ್ಯಾಯದೀಶರು ಅದೇಶಿಸಿದ್ದಾರೆ. ಆಚೇನಹಳ್ಳಿ ಗ್ರಾಮದ ನಾಗರತ್ನಮ್ಮ ಕರ್ನಾ ಟಕ ಬ್ಯಾಂಕ್ ಖಾತೆಯಿಂದ ಇಪ್ಪತ್ತು ಸಾವಿರ ರೂಗಳನ್ನು ಬಿಡಿಸಿಕೊಂಡು ಬರುವಂತೆ ಅವರ ತಂದೆಯ ಮೂಲಕ ಎಟಿಎಂ ಕಾರ್ಡನ್ನು ಕೊಟ್ಟು ಕಳುಹಿಸಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಾರದಿದ್ದಾಗ ಪಕ್ಕದಲ್ಲಿದ್ದ ವ್ಯಕ್ತಿಗೆ ಎಟಿಎಂ ಕಾರ್ಡ್ ನೀಡಿ ಹಣ ಡ್ರಾ ಮಾಡುವಂತೆ ಹೇಳಿದ್ದಾರೆ. ಆ ವ್ಯಕ್ತಿ ತನ್ನ ಬಳಿ ಇದ್ದ ಹಳೆ ಕಾರ್ಡನ್ನು ನೀಡಿ ಈ ಎಟಿಎಂ ಕಾರ್ಡ್ ನ್ನು ಬೇರೆ ಎಟಿಎಂ ನಲ್ಲಿ ಬಳಸಿ ಹಣ ಡ್ರಾ ಮಾಡಿದ್ದಾರೆ. ಆದರೆ ಹಣ ಡ್ರಾ ಆಗಿರುವ ಬಗ್ಗೆ ಗ್ರಾಹಕರಿಗೆ ದೂರವಾಣಿ ಮೆಸೇಜ್ ಬಂದಿದೆ. ತಂದೆಗೆ ಹಣ ದೊರೆತ್ತಿಲ್ಲ. ಈ…
ತುಮಕೂರು: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಗಳಲ್ಲಿ ನಿಂತಿರುವ ಲಾರಿಗಳಲ್ಲಿ ಡೀಸೆಲ್ ಕದಿಯುತಿದ್ದ ಕಳ್ಳರು ಸಬ್ ಇನ್ಸ್ಪೆಕ್ಟರ್ ಕೈಗೆ ಸಿಕ್ಕಿದರೂ ಸಹ ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿರುವ ಆಪಾದನೆ ತುಮಕೂರು ತಿಲಕ್ ಪಾರ್ಕ್ ವೃತ್ತದ ಹೊಸ ಬಡಾವಣೆ ಪೆÇಲೀಸ್ ಠಾಣೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದರ ಪೂರ್ಣ ವಿವರಗಳನ್ನು ನೋಡಿದರೆ ಪೊಲೀಸರೇ ಈ ರೀತಿ ನಡೆದುಕೊಂಡರೆ ಇನ್ನೂ ಬೇರೆಯವರ ಕಥೆಯೇನು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬದಿಗಳಲ್ಲಿ ನಿಲ್ಲಿಸಿರುವ ವಾಹನಗಳನ್ನು ಗುರಿಯಾಗಿರಿಸಿಕೊಂಡು ಡೀಸೆಲ್ ಕದಿಯುತಿದ್ದ ಕಳ್ಳರು ತುಮಕೂರು ಕಡೆ ಬರುತ್ತಿದ್ದಾಗ ರಾತ್ರಿಯ ಪಾಳೆಯದಲ್ಲಿ ಕರ್ತವ್ಯ ನಿರತ ಮಹಿಳಾ ಸಬ್ ಇನ್ಸ್ಪೆಕ್ಟರ್ ಕಾರನ್ನು ತಡೆದು ತಪಾಸಣೆಗೊಳಪಡಿಸಿ ಅನುಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗÀ ಸಿಕ್ಕಿರುವ ವ್ಯಕ್ತಿಗಳು ಕಳ್ಳತನದ ಕಸುಬಿನವರು ಎನ್ನುವುದು ತಿಳಿಯುತ್ತದೆ ಆಗ ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ ಎನ್ನುವುದು ಹಿರಿಯ ಅಧಿಕಾರಿಗಳಿಗೆ ತಿಳಿದಿರಲಿಲ್ಲ…
ಹುಳಿಯಾರು: ಹುಳಿಯಾರು ಹೋಬಳಿಯ ಯಳನಾಡು ಗ್ರಾಪಂ ವ್ಯಾಪ್ತಿಯ ಕಾಚನಕಟ್ಟೆ ಗಂಗಮ್ಮನಕೆರೆ ಸುತ್ತಮುತ್ತ ಕಳೆದ 2 ತಿಂಗಳಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬುಧವಾರ ಬೆಳಗಿನ ಜಾವ ಬಿದ್ದಿದೆ. 2 ತಿಂಗಳಿಂದ ದಿನಗಳಿಂದ ಸಾರ್ವಜನಿಕವಾಗಿ ಚಿರತೆ ಆಗಾಗ ಕಾಣಿಸಿಕೊಂಡು ಇಲ್ಲಿನ ಜನರಲ್ಲಿ ಆತಂಕ ಮೂಡಿಸಿತ್ತು. ಅಲ್ಲದೆ ಸಾಕುಪ್ರಾಣಿಗಳನ್ನು ತಿಂದು ಭಯದ ವಾತವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಸ್ಥಳೀಯರು ಬುಕ್ಕಪಟ್ಟಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಿಯರು ಮಾಹಿತಿ ಯಂತೆ ಚಿರತೆ ನಿತ್ಯ ಓಡಾಡುವ ಜಾಗದಲ್ಲಿ ಅರಣ್ಯ ಇಲಾಖೆ ಬೋನನ್ನು ಇಟ್ಟು ಸೆರೆ ಹಿಡಿಯಲು ಮುಂದಾಗಿತ್ತು. ಅಂತಿಮವಾಗಿ ಆಹಾರ ಅರಸುತ್ತಾ ಬಂದ ಚಿರತೆ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮುಂಜಾನೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ.ರವಿ ಅವರ ಮಾರ್ಗದರ್ಶನದಂತೆ…
ತುಮಕೂರು: ಶಿರಾ ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳು ಮೈಕೊಡವಿ ಮೇಲೆದ್ದಿವೆ. ಸಾವಿನ ಸೂತಕ, ಅನುಕಂಪದ ಅಲೆ ದಿವಂಗತ ಶಾಸಕ ಬಿ.ಸತ್ಯನಾರಾಯಣ್ರವರ ಕುಟುಂಬದ ಮೇಲಿದೆ. ಅನುಕಂಪದ ಮತಬುಟ್ಟಿಯನ್ನ ಭದ್ರಪಡಿಸಿಕೊಂಡು ಮತ್ತೆ ತಮ್ಮ ಪಕ್ಷದ ಶಾಸಕ ಸ್ಥಾನದ ಲೆಕ್ಕ ಹಾಗೆಯೇ ಉಳಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಜಾತ್ಯಾತೀತ ಜನತಾದಳದ ವರಿಷ್ಠ ದೇವೆಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದ್ದಾರೆ. ಅದಕ್ಕಾಗಿಯೇ ಶಾಸಕ ಬಿ.ಸತ್ಯನಾರಾಯಣ್ರವರ ಮಗ ಸತ್ಯಪ್ರಕಾಶ್ರವರನ್ನು ಕಣಕ್ಕಿಳಿಸುವ ನಿರ್ಧಾರ ಬಹುಶಃ ಅಂತಿಮಗೊಂಡಂತಿದೆ. ನಿರ್ವಿವಾದಿತ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸತ್ಯಪ್ರಕಾಶ್ ಸ್ಪರ್ಧಾಳುವಾಗುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷದ ಟಿಕೇಟನ್ನೇ ನಂಬಿಕೊಂಡಿದ್ದ ಕೆಲವರು ನಿರಾಸೆಯಲ್ಲಿ ನಲುಗುವಂತಾಗಿದೆ. ಕುಂಚಿಟಿಗ ಗೌಡರ ಪ್ರಭಲ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್ನ ಏಕಮೇವ ಅಭ್ಯರ್ಥಿ ಎಂದುಕೊಂಡಿದ್ದರು. ಆದರೆ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಾರುವ ಸಲುವಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಾನು ಸಹ…
ಮಧುಗಿರಿ: ಚಿಕ್ಕ ಮಕ್ಕಳಿರುವ ಅಂಗನವಾಡಿ ಸುತ್ತಮುತ್ತ ಪರಿಸರ ಶುಭ್ರವಾಗಿ ಇರಬೇಕು, ಆದರೆ ಪಟ್ಟಣದ ಎಂಟನೇ ವಾರ್ಡಿನಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಲೂ ಪರಿಸರ ಕಲುಷಿತದಿಂದ ಕೂಡಿದೆ. ನಿರೀಕ್ಷಣಾ ಮಂದಿರ ಮುಂಭಾಗದ ರಸ್ತೆಯಿಂದ ಜಿಲ್ಲಾ ಪಂಚಾಯತ್ ಇಇ ಕಚೇರಿಯ ಹಿಂಭಾಗವಿರುವ ಬೆಂಕಿಪುರ ಅಂಗನವಾಡಿ ಕೇಂದ್ರದ ಸಮೀಪದಲ್ಲೇ ಹಂದಿಗಳ ವಾಸ ಸ್ಥಳವಾಗಿದ್ದು. ರಸ್ತೆಯೂ ಸರಿ ಇಲ್ಲ, ಹಂದಿಗಳು ವಾಸ ಸ್ಥಳವಾಗಿರುವುದರಿಂದ ಮಕ್ಕಳಿಗೆ ಎಲ್ಲಿ ಮೆದುಳು ಜ್ವರ ಬರುವುದೆಂಬ ಆತಂಕ ಪೋಷಕರಲ್ಲಿ ಉಂಟಾಗಿದೆ. ಇತ್ತೀಚೆಗೆ ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಈ ಅಂಗನವಾಡಿ ಕೇಂದ್ರದಿಂದಲೇ ಆರಂಭಿ ಸಬೇಕೆಂದು ತಹಶಿಲ್ದಾರರು ಸ್ಥಳ ನಿಗದಿಪಡಿಸಿದ್ದರು. ಆದರೆ ಇಲ್ಲಿನ ಅವ್ಯವಸ್ಥೆ ಕಂಡು ಈ ಕಾರ್ಯಕ್ರಮವನ್ನು ನಿರೀಕ್ಷಣಾ ಮಂದಿರಕ್ಕೆ ಸ್ಥಳಾಂತರಿಸಲಾಯಿತು. ಉಪವಿಭಾಗಾಧಿಕಾರಿಗಳು ಏನಾದರೂ ಈ ಸ್ಥಳಕ್ಕೆ ಭೇಟಿ ನೀಡಿದರೆ ವಾಸ್ತವಾಂಶ ಅರಿಯುತ್ತಿದ್ದರೂ ಇದಕ್ಕೆ ಅವಕಾಶವೇ ದೊರೆಯಲಿಲ್ಲ. ಇನ್ನೂ ಸಿಡಿಪಿಒ ಕಚೇರಿ ಸಮೀಪದಲ್ಲಿದ್ದರೂ, ಈ ಅಂಗನವಾಡಿ ಕೇಂದ್ರಕ್ಕೆ ಒಮ್ಮೆಯೂ ಸಿಡಿಪಿಒ ಭೇಟಿ…
ಗುಬ್ಬಿ: ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಿರ್ವಹಿಸಿ 3.17 ಕೋಟಿ ರೂಗಳ ಅವ್ಯವಹಾರ ಮಾಡಿದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು ಎಂದು ತಾಲ್ಲೂಕಿನ ಮಲ್ಲೇನಹಳ್ಳಿ ಹಟ್ಟಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ನಮ್ಮ ಊರು ನಮ್ಮ ರಸ್ರೆ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಜಂಟಿಯಾಗಿ ರೂಪಿಸಿ ತಾಲ್ಲೂಕಿನ ಜೈನಿಗರಹಳ್ಳಿಯಿಂದ ಸೋಮಲಾಪುರ ಸಂಪರ್ಕಿಸುವ 5.10 ಕಿಮೀ ದೂರ ಕ್ರಮಿಸುವ ಡಾಂಬರ್ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ವರ್ಷವಾದರೂ ಕೆಲಸ ಆರಂಭವಾಗಲಿಲ್ಲ. ನಂತರದಲ್ಲಿ ತರಾತುರಿಯಲ್ಲಿ ಈ ವರ್ಷದ ಮಾರ್ಚ್ನಲ್ಲಿ ಕೆಲಸ ಆರಂಭಿಸಿ ಮೊದಲಿನಿಂದಲೂ ಕಳಪೆ ಕಾಮಗಾರಿಯನ್ನು ಮಾಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳಿಂದಲೂ ತಡೆಯಲು ಸಾಧ್ಯವಾಗದೇ ಮೂರ್ನಾಲ್ಕು ತಿಂಗಳಲ್ಲೇ ರಸ್ತೆ ಡಾಂಬರ್ ಬರಿಗೈಗೆ ಬರುತ್ತಿತ್ತು. ಮಳೆಗಾಲದಲ್ಲಿ ಸಂಪೂರ್ಣ ಹಾಳಾಗಿದೆ.…