ಹಿರಿಯೂರು: ಚಿತ್ರದುರ್ಗ ಮತ್ತು ತುಮಕೂರಿನ ವಿವಿಧ ಕಡೆಗಳಲ್ಲಿ ಮನೆಗಳ್ಳತನ ಮಾಡಿ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ದರೋಡೆ ಮಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಪೊಲೀಸ್ ಅಧೀಕ್ಷರಾದ ಶ್ರೀಮತಿ ಜಿ.ರಾಧಿಕ, ಪಿಎಸ್ಐ ಹಾಗೂ ಹೆಚ್ಚುವರಿ ಪೊಲೀಸ್ ಉಪಾಧೀಕ್ಷಕರಾದ ಮಹಾನಿಂಗ ಬಿ.ನಂದಗಾಂವಿರವರ ಮಾರ್ಗದರ್ಶನಲ್ಲಿದ್ದ ಹಿರಿಯೂರು ಪೊಲೀಸ್ ಉಪಾಧೀಕ್ಷಕರಾದ ಎಸ್.ರೋಷನ್ ಜಮೀರ್, ಹಿರಿಯೂರು ಪೊಲೀಸ್ ನಿರೀಕ್ಷಕರಾದ ಆರ್.ಕೆ.ರಾಘವೇಂದ್ರ, ಹಿರಿಯೂರು ಪೊಲೀಸ್ ಠಾಣೆಯ ಪಿಎಸ್ಐ ಡಿ.ಜಿ.ಪರಮೇಶ್ ಮತ್ತು ಸಿಬ್ಬಂದಿಗಳಾದ ಕಮಲಾಕರ, ಆನಂದಮೂರ್ತಿ, ಧನಂಜಯಮೂರ್ತಿ, ಮಂಜುನಾಥ, ವೆಂಕಟೇಶ್, ತಿಮ್ಮೇಶ್ ಹಾಗೂ ನಳಿನಾರವರ ತಂಡವು ಈ ಖದೀಮರ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಸದರಿ ಬಂಧಿತ ಆರೋಪಿಗಳು ಚಿತ್ರದುರ್ಗ ಹಾಗೂ ತುಮಕೂರಿಗೆ ಸಂಬಂಧಿಸಿದಂತೆ 9 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆರೋಪಿಗಳಾದ ಧನಂಜಯ@ಧನು ತಂದೆ ರಾಮಕೃಷ್ಣಪ್ಪ (44), ಕಾರ್ ಡ್ರೈವಿಂಗ್ ಕೆಲಸ ಮಾಡುತ್ತಿದ್ದ. ಈತ ಮೂಲತಃ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಎನ್.ಜಿ.ಓ ಕಾಲೋನಿಯ ನಿವಾಸಿ. ಮತ್ತೊಬ್ಬ ಮೋಹನ್ ತಂದೆ ನಾರಾಯಣಸ್ವಾಮಿ (39), ಚಿಕ್ಕಬಳ್ಳಾಪುರ…
Author: News Desk Benkiyabale
ತುಮಕೂರು: ಕೃಷಿಗೆ ಪ್ರವಾಸೋದ್ಯಮ ಸ್ಪರ್ಶ ನೀಡಲು ಅಗ್ರಿ ಟೂರಿಸಂ ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಚಿವರಾದ ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಗ್ರಿ ಟೂರಿಸಂ ಯೋಜನೆಯಿಂದ ನಗರ ಪ್ರದೇಶದಲ್ಲಿರುವ ಯುವ ಪೀಳಿಗೆಗೆ ಕೃಷಿ ಆಧಾರಿತ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಮಾಹಿತಿ ತಿಳಿಸುವುದು ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಕುಣಿಗಲ್ ತಾಲೂಕು ಮತ್ತು ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯಲ್ಲಿರುವ ಮೈಸೂರು ಬಿತ್ತನೆ ಪ್ರದೇಶದಲ್ಲಿ 911.56 ಹೆಕ್ಟೇರ್ ಪ್ರದೇಶದಲ್ಲಿ ಶುದ್ಧ ಮೈಸೂರು ರೇಷ್ಮೆ ಬೆಳೆಯುತ್ತಿದ್ದಾರೆ. ಅಲ್ಲದೇ ತಿಪಟೂರು, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳು ದ್ವಿತಳಿ ಬಿತ್ತನೆ ಪ್ರದೇಶವಾಗಿವೆ. ವಿಶೇಷ ಕ್ಲಸ್ಟರ್ ಅಭಿವೃದ್ಧಿ ಯೋಜನೆಯಡಿ 19.347 ಲಕ್ಷ ದ್ವಿತಳಿ ಸಂಕರಣ ಮೊಟ್ಟೆ…
ತುಮಕೂರು: ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಪಾಲಿಕೆ ಸದಸ್ಯ ಎಸ್.ಮಂಜುನಾಥ್ ಪೋಷಕರಿಗೆ ಕರೆ ನೀಡಿದರು. ನಗರದ 2ನೇ ವಾರ್ಡ್ ವ್ಯಾಪ್ತಿಯ ಸಿರಾಗೇಟ್ನ ಉತ್ತರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಪೋಷಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕಿದೆ ಎಂದರು. ಸರ್ಕಾರಿ ಶಾಲೆಯಲ್ಲಿಯೇ ಓದಿ ಇಂದು ಅನೇಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ದೇಶ, ರಾಜ್ಯವನ್ನಾಳುತ್ತಿದ್ದಾರೆ. ಆದರೂ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಿರುವುದು ವಿಪರ್ಯಾಸಕರ ಎಂದರು. ನಾನು ಉತ್ತರ ಬಡಾವಣೆಯ ಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಈ ಶಾಲೆಯಲ್ಲಿ…
ತುಮಕೂರು: ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು, ಶಾಶ್ವತ ನೆಲೆಯಾಗಿ ವೆಂಡಿಂಗ್ ಜೋನ್ಗ¼ನ್ನು ನಿರ್ಮಿಸಬೇಕು ಮತ್ತು ಕೂಡಲೇ ವೆಂಡಿಂಗ್ ಕಮಿಟಿ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಪುಟ್ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ ಜಿಲ್ಲಾಧಿಕಾರಿ ರಾಕೇಶ್ಕುಮಾರ್, ಬೀದಿಬದಿ ವ್ಯಾಪಾರಿ ಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಭೆ ಕರೆಯಲಾಗುವುದು. ವೆಂಡಿಂಗ್ ಜೋನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು, ಎಂಜಿ.ರಸ್ತೆಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬದ್ದವಾಗಿದೆ ಎಂದು ಭರವಸೆ ನೀಡಿದರು. ಇದಕ್ಕೂ ಮೊದಲು ಪ್ರತಿಭಟನಾಕಾರರನ್ನ ಉದ್ದೇಶಿಸಿ ಮಾತನಾಡಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಕೇಂದ್ರದ ಕಾಯ್ದೆ ಮತ್ತು ರಾಜ್ಯ ಸರ್ಕಾರದ ನಿಯಮಾವಳಿಗಳಂತೆ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಮತ್ತು ಬದುಕುವ ಹಕ್ಕನ್ನು ನೀಡಿದೆ. ಅವರು ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲೇ…
ತುಮಕೂರು: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಮದ್ ಐಮಾನ್ಗೆ ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ ಕಲಂ 6ರಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ಮತ್ತು ಕಲಂ 366 ಐಪಿಸಿ ಅಡಿ 5 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಯ್ಯ ಅವರು ಈ ತೀರ್ಪು ನೀಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ತನಿಖಾಧಿಕಾರಿಗಳಾದ ರಾಘವೇಂದ್ರ ಸಿ.ಪಿ.ಐ ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ವಿಶೇಷ ಅಭಿಯೋಜಕಿ ಗಾಯತ್ರಿ ರಾಜು ಸರ್ಕಾರದ ಪರ ವಾದ ಮಂಡಿಸಿದ್ದರು.
ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಿದ ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ವೇಗ ನೀಡಿ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಈಗ ಕೈಗೊಂಡಿರುವ ರಸ್ತೆ ಕಾಮಗಾರಿಗಳಿಂದ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೈನೇಜ್ ಬೋರ್ಡ್ಗಳನ್ನು ಅಳವಡಿಸಿ ಎಂದು ಅವರು ತಿಳಿಸಿದರು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಲಭ್ಯವಿರುವ ಜಾಗ ಆಧಾರದ ಮೇಲೆ ರಸ್ತೆ ಮತ್ತು ಪುಟ್ಪಾತ್ನ್ನು ನಿರ್ಮಾಣ ಮಾಡಬೇಕು. ನಗರದಲ್ಲಿ ಏಕಕಾಲಕ್ಕೆ ರಸ್ತೆಗಳನ್ನು ಅಗೆದು…
ಮಧುಗಿರಿ: ಮಧುಗಿರಿ ಪಟ್ಟಣದ 14ನೇವಾರ್ಡ್ನಲ್ಲಿ ಡಿವೈಎಸ್ಪಿ ಆಫೀಸ್ ಹಿಂಬಾಗ ನಕಲಿ ದಾಖಲೆ ಸೃಷ್ಟಿಸಿ ಜಮೀನು ಗುಳುಂ ಮಾಡಿರುವ ಘಟನೆ ಜರುಗಿದೆ. ಜಿಲ್ಲಾಧಿಕಾರಿಗಳಿಂದ ಆಶ್ರಯ ನಿವೇಶ ನಕ್ಕಾಗಿ ಮಧುಗಿರಿ ಸರ್ವೆ ನಂ.15 ರಲ್ಲಿ 35ಗುಂಟೆ ಜಮೀನು ಮಂಜೂರಾಗಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಪುರಸಭೆ ಯಿಂದ ಖಾತೆ ಹಾಗು ಹಕ್ಕುಪತ್ರ ಪಡೆದಿದ್ದಾರೆಂದು ಆರೋಪಿಸಿ ಮಧುಗಿರಿ ಪುರಸಭೆಯ 14ನೇ ವಾರ್ಡ್ ವಾಲ್ಮೀಕಿ ಬಡಾವಣೆ (ಮಂಡರಕಾಲೋನಿ) ನಿವಾಸಿಗಳು ಈ ಹಿಂದೆ ತಹಸೀಲ್ದಾರ್ ರವರಿಗೆ ಇಲ್ಲಿನ ನಿವಾಸಿಗಳು ಮನವಿಯನ್ನು ನೀಡಿದ್ದಾರೆ. ಹಾಗು ಇದೇ ಜಮೀನು ನಲ್ಲಿ ವಾಲ್ಮಿಕಿ ಸಮುದಾಯಭವನ ನಿರ್ಮಾಣ ಮಾಡಿಕೋಡಿ ಎಂದು ಉಪವಿಭಾಗಾಧಿಕಾರಿ ಕಛೇರಿ ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಮಧುಗಿರಿ ಗ್ರಾಮದ ಸರ್ವೆ ನಂಬರ್ 15ರಲ್ಲಿ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಮೃತ ತಹಶೀಲ್ದಾರ್ ಒಬ್ಬರ ಸಹಿ ದುರುಪಯೋಗಪಡಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದು ಅಲ್ಲದೆ ಈಗ ಅದೇ ಜಾಗದಲ್ಲಿ ಶೆಡ್ ನಿರ್ಮಿಸಿ…
ತುಮಕೂರು : ಬಿಡಿಎ ಅಧಿಕಾರಿಗಳು ಎಂದು ಜನರನ್ನು ನಂಬಿಸಿ ಟೂಡಾಕ್ಕೆ ಸೇರಿದ ಖಾಲಿ ಜಾಗಗಳನ್ನು ಹರಾಜಗಿಂತ ಮುಂಚೆಯೇ ಕಡಿಮೆ ದರಕ್ಕೆ ಮಾರಾಟ ಮಾಡಿಸಿಕೊಡುವುದಾಗಿ ನಂಬಿಸಿ ಟೂಡಾ ಆಯುಕ್ತರ ಹೆಸರಿನಲ್ಲಿ ಡಿಡಿಗಳನ್ನು ಪಡೆದು ಲಕ್ಷಾಂತರ ಹಣವನ್ನು ವಂಚಿಸಿರುವ ಕತರ್ನಾಕ್ ಗ್ಯಾಂಗನ್ನು ತಿಲಕ್ ಪಾರ್ಕ್ ಪೊಲೀಸರು ಪತ್ತೆ ಹಚ್ಚಿ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 10 ಲಕ್ಷ ನಗದು 6 ಲಕ್ಷ ಬೆಲೆಬಾಳುವ ಕಾರು ಎರಡು ಲಕ್ಷ ಬೆಲೆಬಾಳುವ ಬುಲೆಟ್ ಸಮೇತ ಬಂಧಿಸಿದ್ದಾರೆ. ಬಂಧಿತರಲ್ಲಿ ಮಧುಕುಮಾರ್ ಆಲಿಯಾಸ್ ಮಧು( 40) ತುಮಕೂರಿನ ಹೊರಭಾಗದಲ್ಲಿರುವ ಶಿರಾಗೇಟ್ ಬಳಿಯಿರುವ ಸಾಡೆಪುರ ಗ್ರಾಮದ ನಿವಾಸಿಯಾದ ಈತ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾನೆ. ಈತನ ದಂದೆಯ ಪ್ರಮುಖ ರೂವಾರಿಯಾಗಿದ್ದಾನೆ. ಗುರು ಪ್ರಸಾದ್ (36) ಬನಶಂಕರಿ ಬಡಾವಣೆಯ ವಿನಾಯಕ ಆಸ್ಪತ್ರೆಯ ಪಕ್ಕದಲ್ಲಿರುವ ಹರಳ ಶೆಟ್ಟಿಕೆರೆಪಾಳ್ಯ ನಿವಾಸಿಯಾದ ಈತ ಬ್ಯಾಂಕಿನಲ್ಲಿ ಎಸ್ಡಿಸಿ ಕೆಲಸ ನಿರ್ವಹಿಸುತ್ತಿದ್ದಾನೆ. ಶ್ರೀನಿವಾಸ್ ಅಲಿಯಾಸ್ ಗುಂಡ (48)…
ಕೊರಟಗೆರೆ: ದೇವರಾಯನದುರ್ಗ ಸಮೀಪದ ಇತಿಹಾಸವುಳ್ಳ ಜರಿಬೆಟ್ಟ ವನ್ಯಜೀವಿಗಳ ಆವಾಸಸ್ಥಾನ. ಪಿತ್ರಾರ್ಜಿತ ಆಸ್ತಿಯನ್ನು ಭೂಸ್ವಾಧೀನ ಮಾಡಿಕೊಳ್ಳಲು ರೈತರ ಒಪ್ಪಿಗೆ ಇಲ್ಲದೇ ಅನಧಿಕೃತವಾಗಿ ಭೂಸ್ವಾಧೀನ ಪೂರ್ಣಗೊಂಡಿದೆ. ಖಾಸಗಿ ಕಂಪನಿ ನೀಡುವ ಚಿಲ್ಲರೇ ಕಾಸು ನಮಗೆ ಬೇಡ. ನಮಗೆ ನಮ್ಮ ಕೃಷಿ ಭೂಮಿಯೇ ಸಾಕು. ನಾವು ನಮ್ಮ ಪ್ರಾಣವನ್ನು ಬೇಕಾದರೇ ಬಿಡ್ತೀವಿ. ಆದರೆ ನಮ್ಮ ಕೃಷಿ ಭೂಮಿಯನ್ನು ಮಾತ್ರ ಬಿಡೆವು ಎಂಬುದು ರೈತರ ಮನದಾಳದ ನೋವಾಗಿದೆ. ಕಲ್ಪತರು ನಾಡು ತುಮಕೂರು ಗ್ರಾಮಾಂತರ ಮತ್ತು ಕೊರಟಗೆರೆ ಕ್ಷೇತ್ರದ ನಡುವಿನ ತಂಗನಹಳ್ಳಿ ಜರಿಬೆಟ್ಟದಲ್ಲಿ ಗಣಿಗಾರಿಕೆ ನಡೆಸಲು 49ಎಕರೇ ಕೃಷಿ ಜಮೀನು ಭೂಸ್ವಾಧೀನಕ್ಕಾಗಿ ಕಳೆದ 2ವರ್ಷದಿಂದ ವಿವಿಧ ರೀತಿಯ ಕಸರತ್ತು ನಡೆಯುತ್ತಿದೆ. ಎತ್ತಿನಹೊಳೆಗೆ ಜಮೀನು ಹೋಗಲಿದೆ. ಜಮೀನು ಅಭಿವೃದ್ಧಿ ಪಡಿಸಿ ಕೊಳವೆಬಾವಿ ಹಾಕಿಸುತ್ತೇವೆ. ಕೃಷಿಗೆ ಸಹಾಯ ಮಾಡ್ತೇವೆ ಎಂದು ಲಕ್ಷಾಂತರ ರೂ ಹಣದ ಆಸೆ ತೋರಿಸಿ ಕೃಷಿ ಭೂಮಿ ಕಬಳಿಸುವ ಯತ್ನ ಈಗಾಗಲೇ ನಡೆದಿದೆ. ರೈತರಿಂದ ಕೃಷಿ…
ತುರುವೇಕೆರೆ: ಹೇಮಾವತಿಗೆ ನಾಲೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗೆ ಅಕ್ಕಪಕ್ಕ ತಡೆಗೋಡೆ ಇಲ್ಲದಿರುವುರಿಂದ ಇಲ್ಲಿ ಓಡಾಡುವ ಪ್ರಾಣಕ್ಕೆ ಕುಂದುಂಡಾಗಲಿದೆ ಎಂದು ಕರ್ನಾಟಕ ವಿಜಯಸೇನೆಯ ತಾಲ್ಲೂಕು ಪದಾಧಿಕಾರಿಗಳು ಸ್ಥಳದಲ್ಲಿ ಹೇಮಾವತಿ ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ತಾಲ್ಲೂಕಿನ ಅರೆಮಲ್ಲೇನಹಳ್ಳಿ ಮುಖ್ಯರಸ್ತೆಯಲ್ಲಿ ಹೆಡಗೀಹಳ್ಳಿ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಹಾದುಹೋಗಿರುವ ಎನ್ಬಿಸಿ ಹೇಮಾವತಿ ನಾಲಾವಲಯದಲ್ಲಿ ಇತ್ತೀಚೆಗಷ್ಟೇ ನಿರ್ಮಾಣಗೊಂಡಿದ್ದು ತಡೆಗೋಡೆ ಹಾಕದೆ ಸಾರ್ವಜನಿಕರಿಗೆ ಓಡಾಡಲು ಅನುವು ಮಾಡಿಕೊಟ್ಟಿದ್ದಾರೆ. ಇದರಿಂದ ಯಾವುದೇ ಸಂದರ್ಭದಲ್ಲಿಯಾದರೂ ಅಪಘಾತವಾಗುವ ಸಂಭವವಿದೆ. ನಾಲೆ ತುಂಬಾ ಆಳವಾಗಿದ್ದು ಯಾವುದೇ ಸಂದರ್ಭದಲ್ಲಿ ಅಪಾಯದ ಸಂಭವವಿದ್ದು ಕೂಡಲೇ ತಡೆಗೋಡೆ ನಿರ್ಮಾಣಮಾಡಿ ತದನಂತರ ಸಾರ್ವಜನಿಕರಿಗೆ ಸೇತುವೆ ಮೇಲೆ ಓಡಾಡಲು ಅನುವು ಮಾಡಿಕೊಡಲಿ. ಅದು ಬಿಟ್ಟು ತಡೆಗೋಡೆ ನಿರ್ಮಾಣ ಮಾಡದೆ ಓಡಾಡಲು ರಸ್ತೆ ತೆರವು ಮಾಡಿರುವುದು ಸರಿಯಲ್ಲ ಎಂದು ಇಂಜಿನಿಯರ್ನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕ ವಿಜಯಸೇನೆಯ ತಾಲ್ಲೂಕು ಅಧ್ಯಕ್ಷ ಗಿರೀಶ್ ಮಾತನಾಡಿ ಹೇಮಾವತಿ ನಾಲೆಗೆ ಅಡ್ಡಲಾಗಿ 29.5 ಮೀ. ಉದ್ದ ಹಾಗೂ…