ಗುಬ್ಬಿ : ನೀರು ಇಂಗಿಸಿ ಅಂತರ್ಜಲ ವೃದ್ಧಿ ಮಾಡುವ ಯೋಜನೆಗಳಲ್ಲಿ ಬಚ್ಚಲುಗುಂಡಿ ಯೋಜನೆ ಕೂಡಾ ವಿಶೇಷ ಅಭಿಯಾನವಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 50 ಗುಂಡಿಗಳ ಕಾಮಗಾರಿ ನಡೆಸಲು ಸರ್ಕಾರ ಮುಂದಾಗಿದೆ. ಈ ವಿಶೇಷ ಅಭಿಯಾನ ಅನುಷ್ಠಾನಕ್ಕೆ ಸಮುದಾಯ ಸಹಕಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಅನುಸೂಯ ನರಸಿಂಹಮೂರ್ತಿ ತಿಳಿಸಿದರು. ತಾಲ್ಲೂಕಿನ ಎಂ.ಎಚ್.ಪಟ್ಟಣ ಗ್ರಾಮದಲ್ಲಿ ಶುಕ್ರವಾರ ಸಾಂಕೇತಿಕವಾಗಿ ಆರಂಭವಾದ ಬಚ್ಚಲುಗುಂಡಿ ಅಭಿಯಾನ ಅನುಷ್ಠಾನಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಉದ್ಯೋಗ ಖಾತ್ರಿ ಯೋಜನೆಗೆ ಮರು ರೂಪ ನೀಡುತ್ತಿರುವ ಹಲವು ಯೋಜನೆಯಲ್ಲಿ ಈ ಬಚ್ಚಲುಗುಂಡಿ ಯೋಜನೆ ಕೂಡಾ ಒಂದಾಗಿದೆ. ಈ ಜತೆಯಲ್ಲಿ ಪೌಷ್ಠಿಕ ತೋಟ ನಿರ್ಮಾಣ, ಅಣಬೆ ಬೇಸಾಯ ಶೆಡ್ ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದೆ ಎಂದರು. ಬಚ್ಚಲುಗುಂಡಿ ಕಾಮಗಾರಿಗೆ ಸರ್ಕಾರ 17 ಸಾವಿರ ರೂಗಳನ್ನು ಪಂಚಾಯಿತಿ ಮೂಲಕ ನೀಡಲಿದೆ. ಎನ್ಆರ್ಇಜಿಎ ಯೋಜನೆ ಮೂಲಕ ಇದರ ಉಪಯೋಗ ಪಡೆದುಕೊಳ್ಳಲು ಗ್ರಾಮಸ್ಥರು ಮುಂದಾಗಬೇಕು.…
Author: News Desk Benkiyabale
ತುಮಕೂರು: ಇಂದು ನಾವೆಲ್ಲರೂ ಪರಿಸರದ ಶ್ರೀರಕ್ಷೆಯಲ್ಲಿದ್ದೇವೆ. ಪರಿಸರ ತುಂಬಾ ಮಹತ್ವದ್ದು, ಪರಸ್ಪರ ದೇವೋಭವ ಎಂದು ಹೇಳುವ ಹಾಗೆ ಪರಿಸರ ದೇವೋಭವ ಎಂದು ಹೇಳಬೇಕಾದ ಕಾಲಘಟ್ಟವಿದು. ಪರಿಸರವನ್ನು ನಾವು ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ ಎಂದು ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಬೊಮ್ಮನಹಳ್ಳಿ ಸಿದ್ಧಗಿರಿ ಶನೇಶ್ಚರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಎಚ್.ಶಿವಕುಮಾರ್ (ಬಂಡೆಕುಮಾರ್) ಅವರ 40ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೊಮ್ಮನಹಳ್ಳಿ ಸಿದ್ಧಗಿರಿ ಶನೇಶ್ಚರ ದೇವಸ್ಥಾನದ ಸನ್ನಿಧಾನದಲ್ಲಿ ವೃಕ್ಷವನ್ನು ಆರೋಪಣ ಮಾಡುವಂತಹ ಕಾರ್ಯಕ್ರಮವನ್ನು ಬಂಡೆ ಕುಮಾರ್ ಅವರು ಮಾಡಿದ್ದಾರೆ. ಇದು ಅವರ ಪರಿಸರ ಪ್ರೇಮ, ಪರಿಸರ ಕಾಳಜಿಯನ್ನು ತೋರಿಸುತ್ತದೆ ಎಂದರು. ಪರಿಸರ ಕಾಳಜಿಯನ್ನು ಹೊಂದಿರುವ ಬಂಡೆ ಕುಮಾರ್ ಅವರು, ಈ ಹಿಂದೆಯೂ ಕೂಡ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಸಸಿ ಆರೋಪಣವನ್ನು ನಮ್ಮ…
ತುಮಕೂರು : ಜಿಲ್ಲೆಯಲ್ಲಿ 222 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6662 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 57, ಪಾವಗಡ-27, ಕುಣಿಗಲ್-21, ಮಧುಗಿರಿ-20, ಕೊರಗಟಗೆರೆ-09, ತುರುವೇಕೆರೆ-16, ಶಿರಾ-09, ತಿಪಟೂರು-27, ಗುಬ್ಬಿ-13, ಚಿಕ್ಕನಾಯಕನಹಳ್ಳಿ-23 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 222 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 189 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4707 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1778 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 171 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು : ಜಿಲ್ಲೆಯಲ್ಲಿ 292 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6440 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 124, ಪಾವಗಡ-37, ಕುಣಿಗಲ್-07, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-12, ಶಿರಾ-32, ತಿಪಟೂರು-33, ಗುಬ್ಬಿ-10, ಚಿಕ್ಕನಾಯಕನಹಳ್ಳಿ-10 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 292 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 140 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1752 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 165 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ನಗರದ ವಾರ್ಡ್ ನಂ 15 ರಲ್ಲಿ ನಡೆಯುತ್ತಿರುವ ಸ್ಮಾರ್ಟಸಿಟಿ ಕಾ ಸಮಗಾರಿಗಳನ್ನು ಮುಂದಿನ 15 ದಿನಗಳಲ್ಲಿ ಮುಗಿಸಿ, ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ಸ್ಮಾರ್ಟ್ಸಿಟಿ ಅಧಿಕಾರಿಗಳಿಗೆ ಆಯುಕ್ತರಾದ ಶ್ರೀಮತಿ ರೇಣುಕ ಸೂಚಿಸಿದರು. ಹದಿನೈದನೇ ವಾರ್ಡಿನ ಕಾರ್ಪೋರೇಟರ್ ಮತ್ತು ನಾಗರಿಕರ ದೂರಿನ ಹಿನ್ನೆಲೆಯಲ್ಲಿ ಇಂದು ವಾರ್ಡಿನ ಹಲವು ರಸ್ತೆಗಳನ್ನು ಪರಿವೀಕ್ಷಣೆ ನಡೆಸಿದ ಆಯುಕ್ತರು, ವಾರ್ಡಿನ ಸಿ ಎಸ್ ಐ ಲೇಔಟ್, ಎಸ್.ಎಸ್.ಪುರಂನ ಹಲವರು ರಸ್ತೆಗಳಲ್ಲಿ ಪೈಪ್ಲೈನ್ ಕಾಮಗಾರಿ,ಡಕ್ ನಿರ್ಮಾಣಕ್ಕೆ ಅಗೆದಿರುವ ಜಾಗವನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದ ಆಯಾಯ ಬಡಾವಣೆಯ ನಾಗರಿಕರು ಒಡಾಡಲು ತೊಂದರೆಯಾಗುತ್ತಿದೆ.ಈ ಬಗ್ಗೆ ಹಲವರು ಪೋನ್ ಮೂಲಕ ದೂರು ನೀಡಿದ್ದರು,ಅಲ್ಲದೆ ಎಸ್.ಎಸ್.ಪುರ ಮೊದಲನೇ ಕ್ರಾಸ್ನ ಬಾಲಾಜಿ ನರ್ಸೀಂಗ ಹೋಂ ಬಳಿ ಗುಂಡಿ ತೆಗೆದು ವಾರಗಳೇ ಕಳೆದಿದ್ದರೂ ಮುಚ್ಚಿಲ್ಲ. ಇದರಿಂದ ಆ ಭಾಗದಲ್ಲಿ ಅಂಬುಲೇನ್ಸ್ಗಳ ಓಡಾಟಕ್ಕೆ ತೊಂದರೆಯಾಗಿದೆ ಎಂದು ಖುದ್ದ ವೈದ್ಯರೇ ಆಯುಕ್ತರಲ್ಲಿ ದೂರಿದರು. ಸಾರ್ವಜನಿಕರ ಮನವಿಯನ್ನು ಆಲಿಸಿದ…
ಮಧುಗಿರಿ: ಮಧುಗಿರಿ ಪಟ್ಟಣದ ಲಿಂಗೇನ ಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಪುರಸಭೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸಲು ಮುಂದಾದಾಗ, ಪೆಟ್ಟಿಗೆ ಅಂಗಡಿ ಮಾಲೀಕರು ಹಾಗೂ ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮಧುಗಿರಿ ಪೆÇಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಸಾರ್ವಜನಿಕ ರಸ್ತೆಯಲ್ಲಿ ಹಲವಾರು ತಿಂಗಳಿನಿಂದ ಪೆಟ್ಟಿಗೆ ಅಂಗಡಿ ಹಾಗೂ ರಸ್ತೆಯನ್ನು ಒತ್ತವರಿ ಮಾಡಿಕೊಂಡಿದ್ದರಿಂದ ವೃದ್ಧರು, ಮಹಿಳೆಯರು ಮತ್ತು ಮಕ್ಕಳಿಗೆ ಓಡಾಡಲು ದಾರಿ ಇಲ್ಲದೇ ತುಂಬಾ ತೊಂದರೆ ಅನುಭವಿಸುತ್ತಿದ್ದರು. ಒತ್ತುವರಿ ಜಾಗವವನ್ನು ತೆರವುಗೊಳಿಸಲೇಬೇಕೆಂದು ನಿವಾಸಿಗಳು ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾದರು. ಪುರಸಭೆ ಮುಖ್ಯಾಧಿಕಾರಿ ಅಮರನಾರಾಯಣ ಪೆಟ್ಟಿಗೆ ಅಂಗಡಿಯ ಮಾಲೀಕನಿಗೆ ಖಡಕ್ ಎಚ್ಚರಿಕೆ ನೀಡಿ ಒತ್ತುವರಿ ರಸ್ತೆಯನ್ನು ತೆರವುಗೊಳಿಸುವಂತೆ ಸೂಚಿಸಿದಾಗ, ಅಂಗಡಿ ಮಾಲೀಕ ಪೆಟ್ಟಿಗೆ ಅಂಗಡಿಯನ್ನು ಬೇರೆಡೆಗೆ ಸ್ಥಾಳಾಂತರಿಸಿದರು. ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳ…
ಚಿಕ್ಕನಾಯಕನಹಳ್ಳಿ: ದೊಡ್ಡವರ ಬಾಯಿಯ ಮಾತು, ಹುಚ್ಚನ ಕೈನಲ್ಲಿರುವ ಕಲ್ಲು ಯಾರಿಗೆ ಬೇಕಾದರು ಬೀಸಬಹುದು ಎಂಬಂತಾಗಿದೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿಯವರ ಹೇಳಿಕೆ ಎಂದು ತಿಮ್ಲಾಪುರ-ಲಕ್ಷ್ಮಗೊಂಡನಹಳ್ಳಿ ಗ್ರಾಮದ ರೈತ ಗಂಗಾಧರಯ್ಯ ನುಡಿದರು. ತಾಲೂಕಿನ ಕುಡಿಯುವ ನೀರಿನ ಹೇಮಾವತಿ ಯೋಜನೆ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಪರಿಹಾರ ಕೊಡುವಂತೆ ಒತ್ತಾಯಿಸಿ ಹೇಮಾವತಿ ನಾಲೆಯ ಹತ್ತಿರ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು. ಈ ಬಗ್ಗೆ ಸಚಿವರನ್ನು ಕೇಳಲು ಸಂತ್ರಸ್ತ ರೈತರು ಅವರ ಮನೆಗೆ ಹೋದಾಗ ಬಾಯಿಗೆ ಬಂದಂತೆ ಬೈದು ಅಂದು ನೀವು ಎರಡು ಸಾವಿರ ರೂಪಾಯಿಗಳಿಗೆ ಹೇಸಿಗೆ ತಿಂದಿದ್ದೀರಿ, ಇಂದು ಅದರ ಪರಿಣಾಮವನ್ನು ಅನುಭವಿಸಿ. ಎಂದು ಹೀನಾಯವಾಗಿ ರೈತರನ್ನು ನಿಂದಿಸಿ ಮನೆಯಿಂದ ಹೊರಗೆ ಅಟ್ಟಿದರು ಎಂದು ಸುಮಾರು 40 ವರ್ಷಗಳಿಂದ ಜೆ.ಸಿ.ಮಾಧುಸ್ವಾಮಿಯವರ ಕಟ್ಟಾ ಬೆಂಬಲಿಗರಾಗಿದ್ದ ಗಂಗಾಧರಯ್ಯ ತಮ್ಮ ಆಕ್ರೋಶವನ್ನು ಹೊರಹಾಕಿದರು. 2011 ರಲ್ಲಿ ಆರಂಭವಾದ ಹೇಮಾವತಿ ಕಾಮಗಾರಿಗೆ, ಮೊದಲು ಬಿಟ್ಟುಕೊಟ್ಟದ್ದೆ ನಮ್ಮ…
ತುಮಕೂರು: ಕೊರೊನ ಲಾಕ್ಡೌನ್ ಮತ್ತು ಸ್ಮಾರ್ಟ್ಸಿಟಿ ಕಾಮಗಾರಿಯಿಂದಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಕಳೆದ ಐದಾರು ತಿಂಗಳಿಂದ ಯಾವುದೇ ವ್ಯಾಪಾರ ವಹಿವಾಟು ನಡೆಯದೇ ಇರುವುದರಿಂದ ಮಾರ್ಚ್ ನಿಂದ ಆಗಸ್ಟ್ ತಿಂಗಳವರೆಗೆ ವಾಣಿಜ್ಯ ಮಳಿಗೆಗಳ ಬಾಡಿಗೆ ಮನ್ನಾ ಮಾಡುವಂತೆ ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಹರಾಜಿನ ಮೂಲಕ ಮಳಿಗೆಗಳನ್ನು ಬಾಡಿಗೆ ಪಡೆದ ಕೆಲವೇ ದಿನಗಳಲ್ಲಿ ಕೊರೊನ ಸೋಂಕು ವ್ಯಾಪಿಸಿ ಲಾಕ್ಡೌನ್ ಹೇರಲಾಯಿತು. ಜೊತೆಗೆ ಸ್ಮಾರ್ಟ್ಸಿಟಿ ಯೋಜನೆಯಡಿ ಅಶೋಕ ರಸ್ತೆ ಮತ್ತು ಖಾಸಗಿ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಖಾಸಗಿ ಬಸ್ಗಳ ಓಡಾಟವೂ ಇಲ್ಲವಾಗಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿತು. ಖಾಸಗಿ ಬಸ್ ನಿಲ್ದಾಣದಲ್ಲಿ ಇರುವ ಮಳಿಗೆಗಳಿಗೆ 10 ರಿಂದ 50 ಸಾವಿರ ರೂಪಾಯಿ ಬಾಡಿಗೆ ನಿಗದಿಪಡಿಸಿದೆ. ಬಾಡಿಗೆ ಪಡೆದ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿದ್ದರಿಂದ ವ್ಯಾಪಾರವನ್ನೇ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆರು ತಿಂಗಳ ಬಾಡಿಗೆ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಲಾಕ್ಡೌನ್ಗೂ…
ಮಧುಗಿರಿ: “ಉಬ್ಬೆ ಮಳೆ ಬಂದರೆ ಉಬ್ಬಿಬ್ಬಿ ಕೊಂಡು ಬರುತ್ತದೆ’ ಎಂಬುದಕ್ಕೆ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯ ಸಾಕ್ಷಿಯಾಗಿದೆ. ಸೋಮವಾರ ರಾತ್ರಿ ಹತ್ತರಿಂದ ಪ್ರಾರಂಭವಾದ ಮಳೆ ಬೆಳಗಿನ ಜಾವದವರೆಗೂ ನಿಂತು ನಿಂತು ಬಂದ ಮಳೆಯಿಂದ ಹಲವು ಹಳ್ಳಗಳು ಮೈದುಂಬಿ ಹರಿದಿದೆ. ತಾಲ್ಲೂಕಿನ ಗಡಿಭಾಗದಲ್ಲಿರುವ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿ ಕೆರೆ ಹಳ್ಳ ಮೈದುಂಬಿ ಹರಿದಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ ಪ್ರವಾಹದ ಭೀತಿಯಂತೆ ಇಲ್ಲಿ ಅನುಭವ ಉಂಟಾಗಿದೆ. ಹಳ್ಳದ ನೀರು ಹೊಲ ಗದ್ದೆಗಳಿಗೆ ಹರಿದು ಬೆಳೆ ನಷ್ಟವಾಗಿದೆ, ರೆಡ್ಡಿಹಳ್ಳಿ ಕೆರೆಗೆ ಒಂದೇ ರಾತ್ರಿಯ ಮಳೆಯಿಂದಾಗಿ ಶೇ ಎಪ್ಪತ್ತರಷ್ಟು ಭಾಗ ಕೆರೆಗೆ ನೀರು ಹರಿದು ಬಂದಿದೆ. ವಾರ್ಷಿಕ ಬೆಳೆಗಳಿಗೆ ನಷ್ಟವಾಗಿದ್ದು ,ಹತ್ತಿ ಬೆಳೆಗೆ ತೊಂದರೆಯಾಗಿದೆ, ಶೇಂಗಾ ಬೆಳೆ ಒಣಗುವ ಸ್ಥಿತಿ ತಲುಪುತ್ತಿದ್ದರೂ ಅತಿವೃಷ್ಟಿಯ ರೀತಿಯಲ್ಲಿ ಬಿದ್ದ ಮಳೆಯಿಂದಾಗಿ ರೈತರು ಚಿಂತಕ್ರಾಂತರಾಗಿದ್ದಾರೆ. ಹನುಮಂತಪುರ ಕೆರೆ ಹಳ್ಳ, ನೇರಳೆಕೆರೆ, ಹೊಸಕೆರೆ ಕೆರೆಗಳ ಹಳ್ಳಗಳು ಹರಿದಿವೆ…
ತುಮಕೂರು : ಜಿಲ್ಲೆಯಲ್ಲಿ 192 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 95, ಪಾವಗಡ-22, ಕುಣಿಗಲ್-11, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-09, ಶಿರಾ-10, ತಿಪಟೂರು-13, ಗುಬ್ಬಿ-07, ಚಿಕ್ಕನಾಯಕನಹಳ್ಳಿ-08 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 192 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.