Author: News Desk Benkiyabale

ತುಮಕೂರು:       ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಬಿಜೆಪಿ ಮುಖಂಡನ ದುಬಾರಿ ಬೆಲೆಯ ಡೆವಿಡ್‍ಸನ್ ಬೈಕ್ ಮೇಲೆ ಕುಳಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಬಗ್ಗೆ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದನ್ನು ಕೈಬಿಡಬೇಕು ಎಂದು ಪ್ರಗತಿಪರ ಚಿಂತಕ ಸಿ.ಯತಿರಾಜ್ ಒತ್ತಾಯಿಸಿದರು.       ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ವಕೀಲ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ವಾಪಸ್ ಪಡೆಯಿರಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಿರಿ ಎಂಬ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಡಿದರು.       ದೇಶದಲ್ಲಿ ಕೋವಿಡ್ ನೆಪಮಾಡಿಕೊಂಡು ಜನಪರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕೃಷಿ, ರೈತರು, ಕಾರ್ಮಿಕರನ್ನು ದಿವಾಳಿ ಮಾಡುವಂತಹ ಕೆಲಸ ನಡೆಯುತ್ತಿದೆ. ಇಂತಹ ಸಾಂಕ್ರಾಮಿಕ ರೋಗ ನ್ಯಾಯಾಂಗಕ್ಕೂ ಹಬ್ಬುತ್ತಿದೆ. ಪ್ರಶಾಂತ್ ಭೂಷಣ್ ಅವರ ಅಭಿಪ್ರಾಯವನ್ನು ತಪ್ಪು ವ್ಯಾಖ್ಯಾನ ಮಾಡಿ ನ್ಯಾಯಾಂಗ ನಿಂದನೆಗೆ ಗುರಿಪಡಿಸುವುದು ಸರಿಯಲ್ಲ. ಪ್ರಜಾಸತ್ತಾತ್ಮಕ ಟೀಕೆಗಳನ್ನು ಸಹಿಸಿಕೊಳ್ಳಬೇಕು ಎಂದು ಹೇಳಿದರು.…

Read More

ತುಮಕೂರು :      ಜಿಲ್ಲೆಯಲ್ಲಿ 149 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4557 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 37, ಪಾವಗಡ-31, ಕುಣಿಗಲ್-06, ಮಧುಗಿರಿ-08, ತುರುವೇಕೆರೆ-10, ಶಿರಾ-06, ತಿಪಟೂರು-18, ಗುಬ್ಬಿ-05, ಚಿಕ್ಕನಾಯಕನಹಳ್ಳಿ-24 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 149 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 149 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3353 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1061 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 143 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಅಭಿವೃದ್ಧಿಯ ದೃಷ್ಠಿಯಿಂದ ಸರ್ಕಾರ ತುಮಕೂರಿಗೆ ಸ್ಮಾರ್ಟ್‍ಸಿಟಿಯನ್ನು ಘೋಷಿಸಿದೆ. ಆದರೆ ತುಮಕೂರು ನಗರದ ಹೃದಯ ಭಾಗದ ಅಂತರಸನಹಳ್ಳಿಯಲ್ಲಿ ಕೋಳಿ ಮಾಂಸದ ಕಸದ ರಾಶಿರಾಶಿ ರಸ್ತೆ ಪಕ್ಕ ಬಿದಿದ್ದರೂ ಅಧಿಕಾರಿಗಳು ಮಾತ್ರ ತಮಗೇನೂ ಸಂಬಂಧವಿಲ್ಲವೆಂಬಂತೆ ಸುಮ್ಮನಿರುವುದು ನಿಜಕ್ಕೂ ಅಚ್ಚರಿಯ ವಿಷಯವಾಗಿದೆ.       ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಇತ್ತೀಚೆಗಷ್ಟೇ ನಗರದ ಸಿಟಿ ಮಾರುಕಟ್ಟೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂದು ತುಮಕೂರು ನಗರದ ಅಂತರಸನಹಳ್ಳಿಯ ಬಳಿಯಿರುವ ವಿಶಾಲವಾದ ಸ್ಥಳಕ್ಕೆ ಮಾರುಕಟ್ಟೆಯನ್ನು ಸ್ಥಳಾಂತರಿಸಿದ್ದರು. ಆದರೆ ಇದೇ ಸ್ಥಳದಲ್ಲಿ ಮಾಂಸದ ತ್ಯಾಜ್ಯವನ್ನು ತಮ್ಮ ಮನಸ್ಸಿಗೆ ಬಂದಂತೆ ರಸ್ತೆಯ ಪಕ್ಕದಲ್ಲಿ ಎಸೆದು ಹೋಗುತ್ತಿದ್ದರೂ ಸಹ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ತಮಗೇನೂ ಸಂಬಂಧವಿಲ್ಲದಂತೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.       ಅಂತರಸನಹಳ್ಳಿಯ ಬೆಂಗಳೂರು ಮಾರ್ಗದ ಕಡೆಯಿರುವ ಸರ್ವೀಸ್ ರಸ್ತೆಯಲ್ಲಿ ದಿನನಿತ್ಯ ಮಾಂಸದ ತ್ಯಾಜ್ಯವನ್ನು ಎಸೆದು ಹೋಗುತ್ತಿದ್ದಾರೆ. ಇಲ್ಲಿನ ಸ್ಥಳೀಯರು ಎಷ್ಟೋ ಬಾರಿ ಈ ಬಗ್ಗೆ ದೂರುಗಳನ್ನು ನೀಡಿದ್ದರೂ ಸಹ ತಮಗೇನೂ ಸಂಬಂಧವಿಲ್ಲ…

Read More

ತುಮಕೂರು:       ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ಉದ್ದಿಮೆ ಪರವಾನಗಿ ದರವನ್ನು ಶೇ.5ರಷ್ಟು ಹೆಚ್ಚಳ ಮಾಡಲು ಪಾಲಿಕೆ ಸದಸ್ಯರೆಲ್ಲರೂ ಸಹಮತ ನೀಡಿದರು.       ಪಾಲಿಕೆ ಸಭಾಂಗಣದಲ್ಲಿ ನಡೆದ ಕೌನ್ಸಿಲ್ ವಿಶೇಷ ಸಾಮಾನ್ಯ ಸಭೆಯಲ್ಲಿ ಕೋವಿಡ್-19ನಿಂದಾಗಿ ಪಾಲಿಕೆ ವತಿಯಿಂದ ಉದ್ದಿಮೆ ದರಗಳನ್ನು ಶೇ.5ರಷ್ಟು ಹೆಚ್ಚಳ ಮಾಡುವಂತೆ ಆಗ್ರಹಿಸಿದರಲ್ಲದೇ ದಂಡ ಶುಲ್ಕ ಶೇ.30ರಷ್ಟು ಸೀಮಿತಗೊಳಿಸುವಂತೆ ಸದಸ್ಯರೆಲ್ಲರೂ ಒಮ್ಮತ ಸೂಚಿಸಿದರು.       ಪಾಲಿಕೆ ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮಡಿವಾಳ ಸಮಾಜ ಹಾಗೂ ಸವಿತಾ ಸಮಾಜ ಕಸುಬುಗಳಾದ ಕಟಿಂಗ್ ಶಾಪ್(ಹೇರ್ ಡ್ರೆಸೆಸ್) ಹಾಗೂ ಐರನ್ ಅಂಗಡಿಗಳಿಗೆ(ಲಾಂಡ್ರಿ ಡ್ರೈಕ್ಲಿಂಗ್ ಶಾಫ್) ಪಾಲಿಕೆ ನೀಡುವ ಪರವಾನಗಿ ದರವನ್ನು ಶೇ.50 ರಿಯಾಯಿತಿ ದರದಲ್ಲಿ ಅನ್ವಯವಾಗುವಂತೆ ಉದ್ದಿಮೆ ರಹದಾರಿಯನ್ನು ನೀಡಲು ಸಭೆ ತೀರ್ಮಾನಿಸಿತು. ಅಲ್ಲದೇ ಕಡಿಮೆ ಆದಾಯ ಹೊಂದಿರುವ ಇತರೆ ಸಮುದಾಯದವರಿಗೂ ಕೂಡ ಈ ದರ ಅನ್ವಯವಾಗುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಆಯುಕ್ತರಿಗೆ ಸದಸ್ಯರೆಲ್ಲರೂ ಆಗ್ರಹಿಸಿದರು.        …

Read More

ತುಮಕೂರು:       ತುರುವೇಕೆರೆ ಫ್ಲೆಕ್ಸ್ ಹಾಕಿದ ವಿಚಾರ ಜೆಡಿಎಸ್, ಬಿಜೆಪಿ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಪೊಲೀಸರ ಎದುರೇ ನಡೆದಿದೆ.      ತುರುವೇಕೆರೆಯ ತಾಲ್ಲೂಕಿನ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಆಗಸ್ಟ್ 30 ಮತ್ತು 31ರಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಪಾದ ಯಾತ್ರೆಯ ಫ್ಲೆಕ್ಸ್‍ನಲ್ಲಿ ಆಕ್ಷೇಪಣಾರ್ಹ ಪದ ಬಳಸಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ಹಾಗು ಬಿಜೆಪಿಯ ಹಾಲಿ ಶಾಸಕ ಮಸಾಲೆ ಜಯರಾಮು ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು, ಮಾರಾಮಾರಿ ಗಲಾಟೆ ನಡೆದು ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದಾಗ ಪೊಲೀಸರು ಲಾಟಿ ಚಾರ್ಜ್ ಮಾಡಿದ್ದಾರೆ.       ಮಾಕಿ ಶಾಸಕೆ ಎಂಟಿ ಕೃಷ್ಣಪ್ಪ ಮತ್ತು ಅವರ ಹಿಂಬಾಲಕರ ಎದುರಿನಲ್ಲಿಯೇ ಹಾಲಿ ಶಾಸಕ ಮಸಾಲೆ ಜಯರಾಮು ತನ್ನ ಬೆಂಬಲಿಗರೊಂದಿಗೆ ಆಗಮಿಸಿ ನಗರದ ರಸ್ತೆಯ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಪ್ಲೆಕ್ಸ್ ಗಳನ್ನು ತಮ್ಮ ಬೆಂಬಲಿಗರನ್ನು ಬಿಟ್ಟು ಕಿತ್ತುಹಾಕಿಸಿದರು…

Read More

ತುರುವೇಕೆರೆ:       ಶೀಘ್ರದಲ್ಲೇ ಎನ್.ಬಿ.ಸಿ. ಹೇಮಾವತಿ ನಾಲೆಯ ಡಿ-26 ಉಪನಾಲೆಯ ಮೂಲಕ ತಾಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಶಾಸಕ ಮಸಾಲಜಯರಾಮ್ ತಿಳಿಸಿದರು.      ತಾಲೂಕಿನ ಎರದಹಳ್ಳಿ ಸಮೀಪವಿರುವ ಹೇಮಾವತಿ ನಾಲೆಯ ಡಿ-26 ಉಪನಾಲೆಯ ಸ್ಥಳ ಪರಿಶೀಲನೆಯನ್ನು ಹೇಮಾವತಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿ ಮಾತನಾಡಿದರು.       ಸುಮಾರು 15ವರ್ಷಗಳ ನಂತರ ಹೇಮಾವತಿ ನಾಲೆಯ ಉಪನಾಲೆ ಡಿ-26 ನಾಲೆಯ ಮೂಲಕ ತಾಲೂಕಿನ ಮಾಯಸಂದ್ರ ಹೋಬಳಿಯ ಸೀಗೆಹಳ್ಳಿ, ಹರಳಕೆರೆ, ಇಟ್ಟಿಗೆಹಳ್ಳಿ, ನರೀಗೆಹಳ್ಳಿ, ಮಲ್ಲೂರು, ಯರದಹಳ್ಳಿ ಕೆರೆಗಳಿಗೆ ನೀರು ಹರಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿದ್ದು, ನೀರು ಹರಿಸುವುದರಿಂದ ಸಾವಿರಾರು ಎಕರೆ ಕೃಷಿ ಭೂಮಿಗೆ ಅನುಕೂಲವಾಗುವುದರ ಜೊತೆಗೆ ಅಂತರ್ಜಲ ಅಭಿವೃದ್ಧಿ ಹೊಂದಲಿದೆ. ಇದು ಸ್ಥಳೀಯ ರೈತರುಗಳ ಹಲವು ವರ್ಷಗಳ ಕನಸಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಈಗಾಗಲೆ ಹೇಮಾವತಿ ಇಲಾಖೆಯ ಅಧಿಕಾರಿಗಳಿಗೆ ಉಪನಾಲೆಯಲ್ಲಿ ಬೆಳೆದಿರುವ ಜಂಗಲ್ ತೆರವುಗೊಳಿಸಲು ಸೂಚಿಸಲಾಗಿದೆ…

Read More

ತುಮಕೂರು:       ಬೆಳಗಾವಿ ನಗರದ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಲಾಗಿದ್ದ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಹಾಗೂ ಸದರಿ ಸ್ಥಳದಲ್ಲಿಯೇ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯಿಸಿ ಇಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.       ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಶಂಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಎಸ್.ಶಂಕರ್,ದೇಶದ ಅದರಲ್ಲಿಯೂ ಕನ್ನಡನಾಡಿನ ಕಿತ್ತೂರನ್ನು ಬ್ರಿಟಿಷ್‍ರ ಕಪಿಮುಷ್ಠಿಯಿಂದ ಬಿಡುಗಡೆಗೊಳಿಸಬೇಕು ಎಂಬ ಮಹದಾಸೆಯಿಂದ ತನ್ನ ಜೀವದ ಕೊನೆಯ ಉಸಿರು ಇರುವವರೆಗೂ ಹೋರಾಡಿದ ಸಂಗೋಳ್ಳಿ ರಾಯಣ್ಣನ ಪ್ರತಿಮೆಯನ್ನು ಪೊಲೀಸರು ದುರುದ್ದೇಶದಿಂದ ತೆರವುಗೊಳಿಸಿರುವುದು ಖಂಡನೀಯ.       ಸಂಗೋಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಯಿಂದ ಇದುವರೆಗೂ ಯಾರಿಗೂ ಯಾವ ರೀತಿಯ ತೊಂದರೆಯೂ ಆಗಿರಲಿಲ್ಲ.ಶಾಂತಿ, ಸೌಹಾರ್ಧತೆಗೆ ಧಕ್ಕೆಯಾಗಿರಲಿಲ್ಲ.ಆದರೆ ಏಕಾಎಕಿ ಪ್ರತಿಮೆ ತೆರವುಗೊಳಿಸಿರುವುದು ಇಡೀ ಕನ್ನಡನಾಡಿನ ಸ್ವಾತಂತ್ರ…

Read More

ಕೊರಟಗೆರೆ:      ಹುಣಸೆ ಮರದ ಪ್ರತಿ ಸಸಿಗೆ 300ರೂಗೆ ಖರೀದಿಸಿ ಬರಗಾಲದಲ್ಲಿಯೂ 3 ವರ್ಷ ಕಷ್ಟಪಟ್ಟು ಬೆಳೆಸಿದ ಹುಣಸೆ ಗಿಡಗಳನ್ನ ಶುಕ್ರವಾರ ರಾತ್ತೋರಾತ್ರಿ ಕತ್ತರಿಸಿರುವ ಪರಿಣಾಮ ರೈತನಿಗೆ ದಾರಿ ಕಾಣದೇ ಪರಿಹಾರ ಮತ್ತು ಭದ್ರತೆಗಾಗಿ ಅರಣ್ಯ ಇಲಾಖೆಯಿಂದ ಪೊಲೀಸ್ ಠಾಣೆಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.        ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಪಂ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದ ಸರ್ವೇ ನಂ.8/2ರ ಜಮೀನಿನಲ್ಲಿ ರೈತ ವೀರಭದ್ರಯ್ಯ ಕಳೆದ 3ವರ್ಷದ ಹಿಂದೆ ಆಂಧ್ರ್ರಪ್ರದೇಶದಿಂದ ಪ್ರತಿ ಹುಣಸೆ ಸಸಿಗೆ 300ರೂ ಪಾವತಿಸಿ ತಂದು 3 ವರ್ಷ ನೀರಿನ ಕೊರತೆಯ ನಡುವೆ ಬೆಳೆಸಿರುವ ಗಿಡಗಳನ್ನು ದುಷ್ಕರ್ಮಿಗಳ ತಂಡ ದ್ವೇಷದಿಂದ ಕತ್ತರಿಸಿದ್ದಾರೆ.       ಸೊಣ್ಣೇನಹಳ್ಳಿ ಗ್ರಾಮದ ರೈತ ವೀರಭದ್ರಯ್ಯನ ಕುಟುಂಬ ತನ್ನ ಜಮೀನಿನಲ್ಲಿ ಬೆಳೆದಿರುವ ಹುಣಸೆ ಗಿಡಗಳನ್ನು ಈ ಮೊದಲು ಜು.7ರಂದು 15 ಹುಣಸೆ ಗಿಡಗಳನ್ನು ಕಡಿದು ಹಾಕಿದ್ದರು. ಆಗ ರೈತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈಗ ಜು.21ರ ಶುಕ್ರವಾರ…

Read More

      ಜಿಲ್ಲೆಯಲ್ಲಿ 165 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4408 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 40, ಪಾವಗಡ-15, ಕುಣಿಗಲ್-19, ಮಧುಗಿರಿ-10, ತುರುವೇಕೆರೆ-19, ಶಿರಾ-11, ತಿಪಟೂರು-26, ಗುಬ್ಬಿ-10, ಚಿಕ್ಕನಾಯಕನಹಳ್ಳಿ-11 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 165 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 165 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3254 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1015 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 139 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು :       ಜಿಲ್ಲೆಯಲ್ಲಿ 117 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3866 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 63, ಪಾವಗಡ-14, ಕುಣಿಗಲ್-10, ಮಧುಗಿರಿ-02, ತುರುವೇಕೆರೆ-06, ಶಿರಾ-4, ತಿಪಟೂರು-09, ಗುಬ್ಬಿ-05, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 117 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 102 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2767 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 980 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 11+ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More