ತುಮಕೂರು: ಕೊರೊನದಿಂದ ತೀವ್ರ ಸಂಕಷ್ಟಕ್ಕೊಳಗಾಗಿ ವೃತ್ತಿ ಜೀವನ ನಡೆಸಲು ಸಾಧ್ಯವಾಗದ ಅಮಲಾಪುರ ಕೇಂದ್ರೀಯ ವಿದ್ಯಾಲಯದ ಸಮೀಪವಿರುವ ಹಕ್ಕಿಪಿಕ್ಕಿ ಜನಾಂಗದ ಸುಮಾರು 35 ಕುಟುಂಬಗಳಿಗೆ ಬುಧವಾರ ದಿನಸಿ ಪದಾರ್ಥಗಳ ಆಹಾರ ಕಿಟ್ ವಿತರಿಸುವ ಮೂಲಕ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ರಂಗೇಗೌಡ ಮತ್ತು ಸ್ನೇಹಿತರು ಕೊರೋನ ಸಂಕಷ್ಟದಲ್ಲಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಜಿಲ್ಲಾ ಅಲೆಮಾರಿ ಅಭಿವೃದ್ಧಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಯಾದ ರಂಗೇಗೌಡ, ಕೋವಿಡ್-19 ಲಾಕ್ಡೌನ್ ನಂತರ ಅಲೆಮಾರಿ ಜಾತಿ ಜನರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದು, ಪ್ರತಿನಿತ್ಯದ ಊಟಕ್ಕೂ ಪರದಾಡುತ್ತಿದ್ದಾರೆ. ಊರೂರು ಸುತ್ತಿ ವ್ಯಾಪಾರ ಮಾಡಿ ಜೀವನ ಮಾಡುವ ಇವರು ಕೋರೊನಾದಿಂದಾಗಿ ಜನ ಗ್ರಾಮಕ್ಕೆ ಇವರನ್ನು ಸೇರಿಸುತ್ತಿಲ್ಲ. ವ್ಯಾಪಾರವಿಲ್ಲದೆ ಜೀವನ ದುಸ್ಥರವಾಗಿರುವಂತಹ ಸಂದರ್ಭದಲ್ಲಿ ಕಷ್ಟಕ್ಕೆ ಸ್ಪಂಧಿಸುವಂತೆ ಅಲೆಮಾರಿ ಸಮುದಾಯ ಮನವಿ ಮಾಡಿದ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಕೇಂದ್ರದ ಅಡಿಯಲ್ಲಿ ಸ್ಥಾಪಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನವನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉಧ್ಘಾಟನೆ ನೆರವೇರಿಸಿದರು. ಪಂಡಿತನಹಳ್ಳಿಯ ಬಸದಿ ಬೆಟ್ಟದ ಹತ್ತಿರ ಉಧ್ಘಾಟನೆ ಮಾಡಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಶ್ರೀಮಂತವಾಗಿರುವ ತುಮಕೂರು ಜಿಲ್ಲೆಯಲ್ಲಿ ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ. ಇದೀಗ ಲೋಕಾರ್ಪಣೆ ಆಗಿರುವ ಜೈವಿಕವನವೂ ಉತ್ತಮ ಪ್ರಯತ್ನವಾಗಿದೆ ಎಂದರು. ತುಮಕೂರು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ನಗರವಾಗಿದೆ. ಆದರೆ, ನಗರದ ಸುತ್ತಮುತ್ತಲಿನ ಪ್ರದೇಶಗಳು ಹಿಂದುಳಿದಿವೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುವುದು. ಅದಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಸರಕಾರ ಮಾಡಲಿದೆ. ಅಭಿವೃದ್ಧಿಯಲ್ಲಿ ಸುಸ್ಥಿರತೆ ಮತ್ತು ಕಮರ್ಷಿಯಲ್ ವಯಬಲಿಟಿ ಇಲ್ಲವಾದರೆ ಆ ಪ್ರಗತಿಗೆ ಯಾವುದೇ ಅರ್ಥವಿರುವುದಿಲ್ಲ ಎಂದು ಅವರು ಹೇಳಿದರು. ಶೈಕ್ಷಣಿಕವಾಗಿ ಬಹಳಷ್ಟು ಮುಂದುವೆರದಿರುವ ತುಮಕೂರಿನಲ್ಲಿ ಅತ್ಯುತ್ತಮ ಮಾನವ…
ಕೊರಟಗೆರೆ: ಪ್ರತಿನಿತ್ಯ ದುಡಿದು ಜೀವನ ಸಾಗಿಸಲು ಕೈಲಾಗದ ವಯಸ್ಸು. ಕೈಕಾಲು ಇಲ್ಲದೇ ಕಣ್ಣು-ಕಿವಿ ಕೇಳಿಸದಿರುವ ವಿಶೇಷ ಚೇತನರ ಬದುಕು ಬೀದಿಪಾಲು. ಮಕ್ಕಳ ಆಸರೇ ಇಲ್ಲದಿರುವ ಹಿರಿಯ ನಾಗರೀಕರ 3 ಸಾವಿರಕ್ಕೂ ಹೆಚ್ಚು ಬಡಜನತೆಗೆ ಸರಕಾರದ ಪಿಂಚಣಿ ಮತ್ತು ಮಾಶಾಸನ 6 ತಿಂಗಳಿಂದ ಮರೀಚಿಕೆಯಾಗಿ ಅಂಚೆ ಇಲಾಖೆ ಮತ್ತು ಉಪಖಜಾನೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಪತರು ನಾಡು ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ 8 ಅಂಚೆ ಇಲಾಖೆ ವ್ಯಾಪ್ತಿಯ 80 ಗ್ರಾಮದ 5500 ಕ್ಕೂ ಹೆಚ್ಚು ಬಡಜನರಿಗೆ ಪ್ರತಿ ತಿಂಗಳು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಷ್ಟ್ರೀಯ ಕುಟುಂಬ, ಅಂತ್ಯ ಸಂಸ್ಕಾರ, ಸಂಧ್ಯಾ ಸುರಕ್ಷಾ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ, ನಿರ್ಗತಿಕ ವಿಧವಾ, ವಿಶೇಷ ಚೇತನ, ಮನಸ್ವಿನಿ ಯೋಜನೆಯಡಿ 45 ಲಕ್ಷಕ್ಕೂ ಅಧಿಕ ಪಿಂಚಣಿ ಹಣ ಬರಲಿದೆ. ಕೊರಟಗೆರೆ ಉಪಖಜಾನೆಯಿಂದ ಪ್ರತಿ ತಿಂಗಳು 20 ರೊಳಗೆ ಕೊರಟಗೆರೆಯ ಎಲ್ಲಾ ಅಂಚೆ ಇಲಾಖೆಗೆ ಬಡವರ ಹಣ…
ತುಮಕೂರು: ಕೋವಿಡ್-19 ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಿಪಿಇ ಕಿಟ್ ನೀಡಬೇಕು. ಕೆಲಸ ಮುಗಿದ ಮೇಲೆ ಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಎಲ್ಲರ ಸೇವೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಪೌರಕಾರ್ಮಿಕರ ಸಂಘದ ಸಿಐಟಿಯು ನೇತೃತ್ವದಲ್ಲಿ ಪೌರ ಕಾರ್ಮಿಕರು ಆಗಸ್ಟ್ 11ರಂದು ಬೆಳ್ಳಂಬೆಳಗ್ಗೆಯೇ ನಗರದ ಮಹಾನಗರ ಪಾಲಿಕೆ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಪೌರಕಾರ್ಮಿಕರ ಅಹವಾಲುಗಳನ್ನು ಆಲಿಸಿದ ಪಾಲಿಕೆ ಆಯುಕ್ತರಾದ ರೇಣುಕಾ ಅವರು ನೇರಪಾವತಿಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಖಾಯಂಗೊಳಿಸುವ ಪ್ರಕ್ರಿಯೆ ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು. ನಿಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು. ನೇರಪಾವತಿಯಡಿ ಕೆಲಸ ಮಾಡುವ ಸಂದರ್ಭದಲ್ಲಿ ಮರಣ ಹೊಂದಿರುವ ಪೌರಕಾರ್ಮಿಕರ ಅವಲಂಬಿತರಿಗೆ ಕೆಲಸ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ. ಕೆಲಸ ಮಾಡಿದ ನಂತರ ಸ್ನಾನದ ವ್ಯವಸ್ಥೆಗೆ ಕ್ರಮ ವಹಿಸುತ್ತೇನೆ. ಇರುವ ಸ್ನಾನಗೃಹಗಳನ್ನು ವಾರದಲ್ಲಿ ಚಾಲ್ತಿಗೊಳಿಸುತ್ತೇನೆ. ಹೆಚ್ಚುವರಿ ಸ್ನಾನಗೃಹಗಳ ಅಗತ್ಯವಿದ್ದರೆ ಕ್ರಮ ಕೈಗೊಳ್ಳುವುದಾಗಿ…
ತುಮಕೂರು: ಜಿಲ್ಲೆಯಲ್ಲಿ ಕ್ಷಯರೋಗಿಗಳ ಕಾಂಟ್ಯಾಕ್ಟ್ ಟ್ರೇಸಿಂಗ್ ಸಪ್ತಾಹವು ಆಗಸ್ಟ್ 17ರವರೆಗೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಹೊರವಲಯದಲ್ಲಿ ಅನುಕೂಲವಾಗುವಂತೆ ಇಂದು ಮೊಬೈಲ್ ಎಕ್ಸ್-ರೇ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ|| ಸನತ್ಕುಮಾರ್ ಜಿ.ಕೆ ಅವರು ಚಾಲನೆ ನೀಡಿದರು. ಸಪ್ತಾಹದಲ್ಲಿ ಆರೋಗ್ಯ ಕಾರ್ಯಕರ್ತರ ಕ್ಷಯರೋಗಿಗಳ ಮನೆಯ ಸುತ್ತ ಅಂದರೆ ಕನಿಷ್ಠ 100 ಮೀಟರ್ ಸುತ್ತಳತೆಯಲ್ಲಿರುವ ಜನರಿಗೆ ಯಾವುದೇ ಕ್ಷಯರೋಗದ ಲಕ್ಷಣಗಳಾದ(ಕೆಮ್ಮು,ರಾತ್ರಿ ವೇಳೆ ಜ್ವರ, ತೂಕ ಕಡಿಮೆ ಆಗುವುದು, ಹಸಿವಾಗದೇ ಇರುವುದು ಕಫದಲ್ಲಿ ರಕ್ತ ಬೀಳುವುದು) ಇಂತಹ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ ತಕ್ಷಣವೇ ಕಫ ಪರೀಕ್ಷೆ ಒಳಪಡಿಸಿ ಕ್ಷಯರೋಗ ದೃಡಪಟ್ಟರೆ ಆ ದಿನವೇ ಚಿಕಿತ್ಸೆಯನ್ನು ಪ್ರಾರಂಭಿಸುವುದು ಈ ಸಪ್ತಾಹದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಕ್ಷಯರೋಗದ ಲಕ್ಷಣಗಳು ಕಂಡು ಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಿ…
ತುಮಕೂರು: ಕೋವಿಡ್-19 ರ ರೋಗದ ಹರಡುವಿಕೆಯ ನಂತರ ವಿಶ್ವದಾದ್ಯಂತ ಆಗುತ್ತಿರುವ ಸಾಮಾಜಿಕ ಪರಿಣಾಮ ಮತ್ತು ಬದಲಾವಣೆಗಳು ಶಿಕ್ಷಣ ಕ್ಷೇತ್ರದ ಮೇಲೂ ಬೀರಿದ್ದು, ಪ್ರಾಥಮಿಕ ಶಿಕ್ಞಣದಿಂದ ಉನ್ನತ ಶಿಕ್ಷಣದವರಗೆ ಆನ್ಲೈನ್ ಶಿಕ್ಷಣ ಅನಿವಾರ್ಯವಾಗಿರುವುದು ತಂತ್ರಜ್ಞಾನದ ಬೆಳವಣಿಗೆ ಗಮನ ಹರಿಸುವ ಅಗತ್ಯವಿದೆ ಎಂದು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವದ ಅಂಗವಾಗಿ ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಮತ್ತು ಟೆಕ್ನಿಕಲ್ ಇನ್ಸಿಟ್ಯೂಟ್ ಪಾರ್ ಇಂಜಿನಿಯರ್ಸ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ ¨ಭವಿಷ್ಯದ ತಂತ್ರಜ್ಞಾನದಲ್ಲಿ ಇಂಜಿನಿಯರಿಂಗ್ ವಿಜ್ಞಾನದ ಆವಿಷ್ಕಾರದ ಪ್ರವೃತ್ತಿಗಳು’ ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವೆಬಿನಾರ್ ಉದ್ಗಾಟಿಸಿ ಅವರು ಮಾತನಾಡಿದರು. ಕರೋನ ಸೋಂಕಿನಿಂದ ಜಗತ್ತಿನಲ್ಲಿ ಆಗುತ್ತಿವ ಅನೇಕ ಬದಲಾವಣೆಯ ಪ್ರವೃತ್ತಿಗಳ ವೇದಿಕೆಯನ್ನು ಆನ್ಲೈನ್ ತಂತ್ರಜ್ಞಾನ…
ತುಮಕೂರು: ಕಾರ್ಮಿಕರ ಗಳಿಕೆ ಪಟ್ಟಿಯಲ್ಲಿರುವ ರಜೆಗಳನ್ನು ಕಡಿತಗೊಳಿಸದೆ ಪ್ರತಿ ತಿಂಗಳು 7ನೇ ತಾರೀಖಿನಂದು ವೇತನ ನೀಡಬೇಕು, ತುಟ್ಟಿಭತ್ಯ ನೀಡಬೇಕು, ಇಎಲ್ ನಗದೀಕರಣ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿ ತುಮಕೂರಿನ ಕೆಎಸ್ಆರ್ಟಿಸಿ ನಿಗಮದ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಸೈಯದ್ ಮುಜೀಬ್, ಸಾರ್ವಜನಿಕ ಉದ್ದಿಮೆಯಾದ ಸಾರಿಗೆ ನಿಗಮಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು. ಇದರಿಂದ ರಿಯಾರಿತಿ ದರದ ಪಾಸ್ ಪಡೆದಿರುವ ವಯೋವೃದ್ದರು, ಸ್ವಾತಂತ್ರ್ಯ ಹೋರಾಟಗಾರರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಬೇಕು. ತೈಲ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಫ್ಯಾಬ್ರಿಕೇಶನ್…
ತುಮಕೂರು: ವಸತಿಹೀನ ಅಲೆಮಾರಿ ಜನಾಂಗದವರನ್ನು ಗುರುತಿಸಿ ಪಟ್ಟಿ ತಯಾರಿಸುವಲ್ಲಿ ಪಿಡಿಓಗಳ ಕಾರ್ಯ ತೃಪ್ತಿ ತಂದಿಲ್ಲ. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಖುದ್ದು ಸರ್ವೆ ನಡೆಸಿ ಯಾರೊಬ್ಬ ಫಲಾನುಭವಿಗೂ ವಸತಿ ತಪ್ಪದಂತೆ ಕ್ರಮವಹಿಸಲು ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯಿಂದ 1390 ಫಲಾನುಭವಿಗಳನ್ನು ಗುರುತಿಸಿರುವುದಾಗಿ ಪಟ್ಟಿ ಸಿದ್ದವಾಗಿದೆ. ಆದರೆ ವಾಸ್ತವದಲ್ಲಿ ಎರಡು ಪಟ್ಟು ಫಲಾನುಭವಿಗಳು ಸಿಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅರ್ಹರನ್ನು ಗುರುತಿಸಿ ಏಳು ದಿನದಲ್ಲಿ ಪಟ್ಟಿ ತಯಾರಿಸಿ ತಾಲ್ಲೂಕು ಪಂಚಾಯಿತಿಗೆ ಒಪ್ಪಿಸಬೇಕು ಎಂದು ತಿಳಿಸಿದರು. ನಮ್ಮಲ್ಲಿ ಅಲೆಮಾರಿಗಳು, ಬುಡಕಟ್ಟು ಜನಾಂಗದ ಪೈಕಿ ಗೊಲ್ಲ ಸಮಾಜವೇ ಅತಿ ಹೆಚ್ಚು ಕಂಡು ಬರುತ್ತದೆ. ಈಗಾಗಲೇ ಹಲವು ವಸತಿ ಯೋಜನೆಯಲ್ಲಿ ಮನೆ ನೀಡಲಾಗಿದೆ. 7 ಸಾವಿರಕ್ಕೂ ಅಧಿಕ ಮನೆಗಳನ್ನು ಒದಗಿಸಲಾಗಿದೆ. ಆದರೂ…
ಗುಬ್ಬಿ: ಹೇಮೆ ಹರಿಸಿಕೊಳ್ಳುವ ವಿಚಾರದಲ್ಲಿ ಕಳೆದ ಬಾರಿ ಹಾಸನದಲ್ಲಿ ದೇವೇಗೌಡರ ಪುತ್ರರ ರಾಜಕಾರಣದಿಂದ 18.5 ಟಿಎಂಸಿ ಮಾತ್ರ ನೀರು ಸಿಕ್ಕಿತ್ತು. ಈ ಬಾರಿ ಜಿಲ್ಲೆಯತ್ತ ಹರಿಸಲಾಗುತ್ತಿರುವ ಹೇಮೆಯನ್ನು ನಮ್ಮ ಪಾಲಿನ ಸಂಪೂರ್ಣ 25 ಟಿಎಂಸಿ ನೀರನ್ನು ಹರಿಸಿಕೊಳ್ಳುತ್ತೇವೆ ಎಂದು ಸಂಸದ ಜಿ.ಎಸ್.ಬಸವರಾಜು ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಹಾಗಲವಾಡಿ ಹೋಬಳಿ ಬೆಟ್ಟದಹಳ್ಳಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಬಾರ್ಡ್ನ 22 ಲಕ್ಷ ರೂಗಳ ನೂತನ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೇಮಾವತಿ ಬಳಸಿಕೊಳ್ಳುವ ಎಲ್ಲಾ ಕೆರೆಗಳಿಗೆ ನೀರು ಹರಿಸಲಾಗಿತ್ತು. 18 ಟಿಎಂಸಿ ನೀರಿನಲ್ಲೇ ಬಹುತೇಕ ಕೆರೆಗಳಿಗೆ ನೀರು ನೀಡಲಾಗಿತ್ತು. ಈ ಬಾರಿ ಸಹ ನಿಯಮಾನುಸಾರ ಎಲ್ಲಾ ಕೆರೆಗಳನ್ನೂ ಭರ್ತಿ ಮಾಡುವ ಭರವಸೆ ನೀಡಿದರು. ಕಡಬ ಕೆರೆಯು ಕಳೆದ ಬಾರಿಯೇ ತುಂಬಿಸಲಾಗುತ್ತಿತ್ತು. ಇಲ್ಲಿನ ಕೆಟ್ಟ ರಾಜಕಾರಣದಿಂದ ಕಡಬ ಕೆರೆಗೆ ನೀರು ಕಡಿಮೆಯಾಯಿತು. ಈಗಾಗಲೇ ಹೇಮಾವತಿ ಡ್ಯಾಂ ನಿಂದ…
ತುಮಕೂರು: ತುಮಕೂರು ಮಹಾನಗರ ಪಾಲಿಕೆ ವತಿಯಿಂದ ದಿನಾಂಕ: 18/7/2020 ರಂದು ಕರೆದಿದ್ದ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ನಲ್ಲಿ ಲಂಚಪಡೆದು ಭ್ರಷ್ಟಾಚಾರವೆಸಗಿ ತಮಗೆ ಬೇಕಾದ ಗುತ್ತಿಗೆದಾರರ ಹೆಸರಿಗೆ ಟೆಂಡರ್ ನಿಲ್ಲಿಸಲು ಹೊರಟಿದ್ದ ಕಿರಿಯ ಅಭಿಯಂತರ ಕಿರಣ್. ತುಮಕೂರು ಮಹಾನಗರ ಪಾಲಿಕೆಯ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ದಿನಾಕ: 18-7-2020 ರಂದು ಟೆಂಡರ್ ಕರೆಯಲಾಗಿದ್ದು, ದಿನಾಂಕ:3-8-2020ಕ್ಕೆ ಆನ್ಲೈನ್ ಟೆಂಡರ್ ಸಲ್ಲಿಸುವ ಅವಧಿ ಮುಕ್ತಾಯವಾಗಿರುತ್ತದೆ. ಅವುಗಳ ಪೈಕಿ ವಿದ್ಯುತ್ ಮತ್ತು ನೀರು ಸರಬರಾಜು ಕುರಿತು ಟೆಂಡರ್ ಕರೆಯಲಾಗಿದ್ದು, ಟೆಂಡರ್ ಸಮಯದಲ್ಲಿ ಕಿರಿಯ ಅಭಿಯಂತರರಾದ ಕಿರಣ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಿ.ಆರ್.ವಸಂತಕುಮಾರ್ರವರುಗಳು ಉದ್ದೇಶಪೂರ್ವಕವಾಗಿ ಸರ್ಕಾರದ ಮಾರ್ಗದರ್ಶಿ, ಸೂಚನೆಗಳನ್ನು ಬದಿಗೆ ಸರಿಸಿ ಅಕ್ರಮ ಟೆಂಡರ್ ಕರೆದಿರುತ್ತಾರೆ. ಸ್ಟ್ಯಾಂಡರ್ಡ್ ಬಿಡ್ ಡಾಕ್ಯುಮೆಂಟ್ (ಏW 1) ಅಧಿನಿಯಮದ ಅಡಿಯಲ್ಲಿ ಟೆಂಡ್ ಕೆರೆಯಲಾಗಿದ್ದು, ಸದರಿ ನಿಯಮಾವಳಿಗಳನ್ನು ಧಿಕ್ಕರಿಸಿ ತಮಗೆ ಬೇಕಾದವರಿಗೆ ಅಕ್ರವಾಗಿ ಟೆಂಡರ್ ನಿಲ್ಲಿಸುವ ದುರುದ್ದೇಶದಿಂದ ಲಂಚದ ಹಣ ಪಡೆದು ಭ್ರಷ್ಟಾಚಾರವೆಸಗಿ ಪಾರದರ್ಶಕ…