ತುಮಕೂರು: ಜಿಲ್ಲೆಯಲ್ಲಿ 98 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2509 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 28, ಪಾವಗಡ-09 ಕುಣಿಗಲ್-17 ಮಧುಗಿರಿ-06, ಕೊರಗಟಗೆರೆ-03, ತುರುವೇಕೆರೆ-13, ಶಿರಾ-02, ತಿಪಟೂರು-02, ಗುಬ್ಬಿ-14, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 98 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 90 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1459 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 976 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 74 ಸಾವನ್ನಪ್ಪಿದ್ದು, ಶನಿವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Author: News Desk Benkiyabale
ತುಮಕೂರು: ಆರೋಗ್ಯ ಬಿಸಿಯೂಟ, ಶಿಕ್ಷಣ ಮೊದಲಾದ ಅಗತ್ಯ ಮೂಲಭೂತ ಸೇವೆಗಳ ಖಾಸಗಿಕರಣದ ಪ್ರಸ್ತಾಪಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸೇವೆಗಳ ಖಾಸಗಿಕರಣ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಗಸ್ಟ್ 7ರಂದು ಪ್ರತಿಭಟನೆ ನಡೆಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಖಾಯಂ ಮಾಡಿ. ಪ್ರತಿ ತಿಂಗಳಿಗೆ 21000 ರೂ. ಕನಿಷ್ಟ ವೇತನ ನೀಡಬೇಕು. ಮಾಸಿಕ ಪಿಂಚಣಿ 10,000 ರೂ. ಕೊಡಬೇಕು. ಇಎಸ್.ಐ ಮತ್ತು ಪಿಎಫ್ ನೀಡಬೆಕು ಎಂದು ಆಗ್ರಹಿಸಿದರು. ಕಾರ್ಮಿಕ ಕಾನೂನುಗಳನ್ನು ಮಾಲಿಕರ ಪರವಾಗಿ ಬದಲಾಯಿಸುವುದನ್ನು ನಿಲ್ಲಿಸಬೇಕು. ಕೋವಿಡ್ ಅವಧಿಯ ನೆಪವೊಡ್ಡಿ ಕೆಲಸದ ಅವಧಿ ಹೆಚ್ಚಿಸುವುದನ್ನು ಕೈಬಿಡಬಬೇಕು. ಆದಾಯ ತೆರಿಗೆ ಪಾವತಿಸಲಾಗದ ಎಲ್ಲಾ ಬಡ ಕುಟುಂಬಗಳಿಗೆ 6 ತಿಂಗಳ ಕಾಲ ಪ್ರತಿ ತಿಂಗಳಿಗೆ 7500 ರೂ. ನೀಡಬೇಕು. ಉಚಿತ ರೇಷನ್ ಮತ್ತು ಆಹಾರ…
ಹುಳಿಯಾರು: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವ ಸಲುವಾಗಿ ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಪ್ರಾಯೋಗಿಕವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ದೂರವಿದ್ದರೆ ಒಂದು ಐಪಿ ಸೆಟ್ಗೆ, ಹತ್ತಿರವಿದ್ದರೆ ಎರಡು ಐಪಿ ಸೆಟ್ಟಿಗೊಂದರಂತೆ ಪ್ರತ್ಯೇಕ ಟ್ರಾನ್ಸ್ಫಾರ್ಮರ್ ಅಳವಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹುಳಿಯಾರು ಹೋಬಳಿಯ ಭಟ್ಟರಹಳ್ಳಿ ಗ್ರಾಮದಲ್ಲಿ ಭದ್ರಾ ನಾಲಾ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು. ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ತಾಲೂಕಿನ ಗಡಿಭಾಗವಾದ ಡಿಂಕನಹಳ್ಳಿಯಲ್ಲಿ 400 ಕೋಟಿ ರೂ. ವೆಚ್ಚದ 400 ಕೆವಿ ಸಾಮಧ್ರ್ಯದ ಸ್ವಿಚ್ ಗೇರ್ ಸ್ಟೇಷನ್ ಮಾಡಲಾಗುವುದು. ಇನ್ನೊಂದು ತಿಂಗಳಲ್ಲಿ ಈ ಕಾಮಗಾರಿಯ ಭೂಮಿ ಪೂಜೆ ಮಾಡಲಾಗುವುದು ಎಂದರಲ್ಲದೆ ದೊಡ್ಡಎಣ್ಣೇಗೆರೆ, ಮತಿಘಟ್ಟ, ಜೆ.ಸಿ.ಪುರ, ಬೆಳಗುಲಿ, ದೊಡ್ಡಅಗ್ರಹಾರದಲ್ಲಿ ಬೆಸ್ಕಾಂ ಎಂವಿಎಸ್ಎಸ್ ಮಾಡಲಾಗುವುದು ಎಂದು ಭರವಸೆ ನೀಡಿದರು. ಕೊಳವೆ ಬಾವಿ…
ತುಮಕೂರು : ಜಿಲ್ಲೆಯಲ್ಲಿಂದು 133 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2411ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-44, ಕುಣಿಗಲ್-13, ಕೊರಟಗೆರೆ-15, ಚಿಕ್ಕನಾಯಕನಹಳ್ಳಿ-4, ಶಿರಾ-5, ಮಧುಗಿರಿ-4, ಗುಬ್ಬಿ-7, ಪಾವಗಡ-5, ತಿಪಟೂರು-25, ತುರುವೇಕೆರೆ-11 ಸೇರಿದಂತೆ ಒಟ್ಟು 133 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಇಂದು ಜಿಲ್ಲಾಸ್ಪತ್ರೆಯಿಂದ 104 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1369 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 972 ಸಕ್ರಿಯ ಪ್ರಕರಣಗಳಿದ್ದು, ಇಂದು ಮೂವರು ಮೃತಪಟ್ಟಿದ್ದಾರೆ. ಈವರೆಗೆ 70 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಅಯೋಧ್ಯೆಯಲ್ಲಿ ಪುಟ್ಟ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸದ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪ್ರಭು ಶ್ರೀ ರಾಮಚಂದ್ರನನ್ನು ಪೂಜಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ 1992ರ ಅಯೋದ್ಯೇಯ ಕರ ಸೇವೆಯಲ್ಲಿ ಭಾಗವಹಿಸಿದ ತುಮಕೂರು ನಗರದ ಹೆಚ್.ಕೆ.ಶಿವಣ್ಣ (ಕಾಂಡಿಮೇಂಟ್ಸ್ ಶಿವಣ್ಣ) ಅವರನ್ನು ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಶಿವಣ್ಣನವರು ಅಂದಿನ ಬಾಬ್ರಿ ಮಸೀದಿ ಕೆಡುವ ಹೋರಾಟದಲ್ಲಿ ಆನೇಕ ಜನ ತುಮಕೂರಿನಿಂದ ಭಾಗವಹಿಸಿದ್ದರು. ಸ್ವಯಂ ಪ್ರೇರಿತವಾಗಿ ಆ ಸಮಯದಲ್ಲಿ ರಾಮಭಕ್ತರು ಭಾಗವಹಿಸಿದ್ದರು. ಆ ಕ್ಷಣಗಳನ್ನು ನೆನಪಿಸಿಕೊಂಡರೆ ಇಂದಿಗೂ ರೋಮಾಂಚನಗಾಗುತ್ತದೆ. ಬಾಬ್ರಿ ಮಸೀದಿ ಕೆಡವಿನ ಗುರುತಿಗಾಗಿ 4 ಇಟ್ಟಿಗೆಗಳನ್ನು ಅಲ್ಲಿಂದ ತಂದಿರುವೆ ಇಂದಿಗೂ ಅದನ್ನು ಇಟ್ಟಿರುವೆ. ಇವತ್ತು ಅದರ ಭೂಮಿ ಪೂಜೆ ಆಗುತ್ತಿರುವುದು ತುಂಬಾ ಸಂತೋಷವಾಗಿದೆ ಎಂದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ ಇವತ್ತಿನ ಭೂಮಿ ಪೂಜೆಯ ಕಾರ್ಯ ಇಡೀ ದೇಶಕ್ಕೆ ಅಲ್ಲ ವಿಶ್ವವೇ ಇದರ ಸಂಭ್ರಮದಲ್ಲಿ ಭಾಗಿಯಾಗಿದೆ. ಅಮೇರಿಕಾದ ನ್ಯೂಯರ್ಕ್ನ…
ಮಧುಗಿರಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಪ್ರತಿಯೊಂದು ಇಟ್ಟಿಗೆಯೂ ಭವ್ಯ ಭಾರತದ ಬುನಾದಿಯಾಗಿರಲೆಂದು ಪಾವಗಡ ಶ್ರೀರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದ ಮಹಾರಾಜ್ ತಿಳಿಸಿದರು. ಗುರುವಾರದಂದು ಪಟ್ಟಣದಲ್ಲಿರುವ ಕುಂಚಿಟಿಗ ಒಕ್ಕಲಿಗರ ಸಮುದಾಯ ಭವನದ ಅವರಣದಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮ ಹಾಗೂ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಇನ್ಫೋಸಿಸ್ ಫೌಂಡೇಷನ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಹಕಾರದೊಂದಿಗೆ ಮಧುಗಿರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ಸುಮಾರು 712 ಅಡುಗೆ ಸಿಬ್ಬಂದಿಯವರಿಗೆ ದವಸ ಧಾನ್ಯ ಹಾಗೂ ಅಡುಗೆ ಎಣ್ಣೆಯ ಕಿಟ್ನ್ನು ವಿತರಣಾ ಸಮರಂಭದ ದಿವ್ಯ ಸಾನಿದ್ಯವಹಿಸಿ ಮಾತನಾಡಿದರು. ಕೊರೊನಾದಿಂದಾಗಿ ಇಡೀ ದೇಶವೇ ಒಗ್ಗೂಡಿದ್ದು, ಅದೇ ರೀತಿಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದಿಂದ ಭಾವೈಕ್ಯತೆ ಮೂಡಲು ನಾಂದಿ ಹಾಡಿದೆ ಎಂದರು. ಪ್ರತಿಯೊಬ್ಬ ನಾಗರಿಕನು ಸರ್ಕಾರ ಮತ್ತು ಸರ್ಕಾರಿ ನೌಕರರನ್ನು ದೂಷಿಸುವುದು ತರವಲ್ಲ, ಪ್ರಸ್ತುತ…
ತುಮಕೂರು: ಜಿಲ್ಲೆಯಲ್ಲಿಂದು 69 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2278ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-39, ಕುಣಿಗಲ್-8, ಕೊರಟಗೆರೆ-8, ಚಿಕ್ಕನಾಯಕನಹಳ್ಳಿ-5, ಶಿರಾ-4, ಮಧುಗಿರಿ-2, ಗುಬ್ಬಿ-1, ಪಾವಗಡ-1, ತಿಪಟೂರು-1 ಸೇರಿದಂತೆ ಒಟ್ಟು 69 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಇಂದು ಜಿಲ್ಲಾಸ್ಪತ್ರೆಯಿಂದ 65 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1265 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 946 ಸಕ್ರಿಯ ಪ್ರಕರಣಗಳಿದ್ದು, ಇಂದು ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ 67 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ತಡೆಯಲು ಜಿಲ್ಲಾ ಪೊಲೀಸರಿಂದ ಎಲ್ಹೆಚ್ಎಂಎಸ್ ತುಮಕೂರು ಪೊಲೀಸ್ ಆ್ಯಪ್ ವಿನೂತನ ಪ್ರಯೋಗವನ್ನು ಇಡಿ ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ತುಮಕೂರು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ಕೆ.ವಂಶಿಕೃಷ್ಣ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಮಾತನಾಡಿ, ಜಿಲ್ಲೆಯಲ್ಲಿ ಇದು ಯಶಸ್ವಿಯಾದರೆ ಇಡಿ ರಾಜ್ಯಕ್ಕೆ ವಿಸ್ತರಿಸಲು ಚಿಂತನೆ ನಡೆದಿದೆ ಎಂದ ಅವರು, ರಾಜ್ಯಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದಾಗ ಐ.ಜಿ. ಅವರು ಇದಕ್ಕೆ ಅನುಮೋದನೆ ನೀಡಿದ್ದಾರೆ ಎಂದರು. ಮನೆಗಳಿಗೆ ಬೀಗ ಹಾಕಿಕೊಂಡು ಬೇರೆ ಊರುಗಳಿಗೆ ತೆರಳುವ ಮಾಲೀಕರು ಮೊಬೈಲ್ ಆ್ಯಪ್ ಮೂಲಕ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ನೊಂದಾಯಿಸಿಕೊಂಡರೆ ಪೊಲೀಸ್ ಇಲಾಖೆಯಿಂದ ಅಂತಹ ಮನೆಗಳಿಗೆ ಸಿ.ಸಿ. ಕ್ಯಾಮರಾ ಟೆಕ್ನಾಲಜಿ ಮೂಲಕ ಮನೆಗಳ ಮೇಲೆ ನಿಗಾವಹಿಸಲಾಗುತ್ತದೆ ಎಂದರು.…
ತುಮಕೂರು: ಜಿಲ್ಲೆಯಲ್ಲಿ 128 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2209 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 27, ಪಾವಗಡ-2 ಕುಣಿಗಲ್-28 ಮಧುಗಿರಿ-9, ಕೊರಗಟಗೆರೆ-25, ತುರುವೇಕೆರೆ-2, ಶಿರಾ-21, ತಿಪಟೂರು-1, ಗುಬ್ಬಿ-6, ಚಿಕ್ಕನಾಯಕನಹಳ್ಳಿ-7 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 128 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 90 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1200 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 944 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 65 ಸಾವನ್ನಪ್ಪಿದ್ದು, ಬುಧವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ಹಲವು ಆಮಿಷಗಳೊಡ್ಡಿದರೂ ಅದಕ್ಕೆ ಮಾರುಹೋಗದ ಪಕ್ಷದಲ್ಲೇ ನಿಷ್ಠಾವಂತರಾಗಿ ಉಳಿದುಕೊಂಡ ವ್ಯಕ್ತಿ ಬಿ.ಸತ್ಯನಾರಾಯಣ್ ನನ್ನ ಮಗನಂತಿದ್ದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಣ್ಣಿಸಿದ್ದಾರೆ. ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದ ಬಿ.ಸತ್ಯನಾರಾಯಣ್ ಪಾರ್ಥೀವ ಶರೀರರದ ಅಂತಿಮ ದರ್ಶನ ಪಡೆದು ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಅತ್ಯಂತ ಸರಳ, ಸಜ್ಜನ ವ್ಯಕ್ತಿ. ನನ್ನ ಮಗನಂತೆಯೇ ನಡೆದುಕೊಳ್ಳುತ್ತಿದ್ದ. ಪಕ್ಷಕ್ಕೆ ನಿಷ್ಠೆ ಇಟ್ಟುಕೊಂಡಿದ್ದ. ಹಾಗಾಗಿ ಎರಡು ಬಾರಿ ಸಚಿವರನ್ನಾಗಿ ಮಾಡಿದ್ದೆ. ಒಮ್ಮೆ ಕಾರ್ಮಿಕ ಸಚಿವರನ್ನಾಗಿ ಕೆಲಸ ನಿರ್ವಹಿಸಿದ್ದರು. ಸತ್ಯನಾರಾಯಣ್ ಅವರನ್ನು ಕಳೆದು ಕೊಂಡಿರುವುದು ಅತೀವ ದುಃಖ ತಂದಿದೆ ಎಂದು ಕಂಬನಿ ಮಿಡಿದರು. ಬಿ.ಸತ್ಯನಾರಾಯಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಪಕ್ಷಾತೀತವಾಗಿ ಎಲ್ಲಾ ನಾಯಕರು ಆಗಿಮಿಸಿದ್ದರು. ಜೆಡಿಎಸ್. ಕಚೇರಿಯಲ್ಲಿ ಕೊರೊನ ಸಂದರ್ಭದಲ್ಲೂ ನೂರಾರು ಮಂದಿ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. …