Author: News Desk Benkiyabale

ಮಧುಗಿರಿ:          ರೋಗಾಣು ನಮ್ಮ ಶತೃ, ರೋಗಿಯಲ್ಲ ಎಂಬ ದ್ಯೇಯದೊಂದಿಗೆ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಂಡದಲ್ಲಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ. ಕೆಲವೊಮ್ಮೆ ಮಧ್ಯ ರಾತ್ರಿಯವರೆಗೂ ಕರ್ತವ್ಯ ನಿರ್ವಹಿಸಬೇಕಾದ ಸಂದರ್ಭಗಳು ಒದಗಿ ಬಂದರೂ ಬೆಳಗ್ಗೆ ಮತ್ತೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುವ ಎಸಿ ಮತ್ತು ತಹಶೀಲ್ದಾರ್‍ರವರ ಕಾರ್ಯದಕ್ಷತೆಗೆ ಅಧಿಕಾರಿಗಳು ಮತ್ತು ವೈದ್ಯರು ಸಾಥ್ ನೀಡಿದ್ದಾರೆ. ರೆಸಾರ್ಟ್‍ನಂತಹ ವಾತಾವರಣ ನಿರ್ಮಾಣ:        ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಸಮೀಪ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸೋಂಕಿತರ ಚಿಕಿತ್ಸೆಗಾಗಿ 102 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಇಲ್ಲಿ ರೆಸ್ಪಾನ್ಸ್ಟ್‍ನಂತಹ ವಾತಾವರಣ ನಿರ್ಮಿಸಲಾಗಿದೆ. ಅಲ್ಲಿಗೆ ಬರುವ ಸೋಂಕಿತರನ್ನು ಕೋವಿಡ್ ಸೆಂಟರ್‍ನ ವಿಶೇಷ ಅತಿಥಿಗಳಂತೆ ಸತ್ಕರಿಸುತ್ತಿದ್ದು, ಸೋಂಕಿತರು ಬಂದ ಮಾರನೇ ದಿನವೇ ಭಯದ ವಾತಾವರಣ ಬಿಟ್ಟು, ರೆಸಾರ್ಟ್‍ನಂತಹ ವಾತಾವರಣವನ್ನು ಅನುಭವಿಸುತ್ತಿದ್ದಾರೆ. ಏನೆಲ್ಲ ಸೌಲಭ್ಯವಿದೆ:       ಉತ್ತಮ ಪರಿಸರ, ಸ್ವಚ್ಛ್ಚತೆಗೆ…

Read More

 ತುಮಕೂರು:       ಕೋವಿಡ್-19(ಕೋರೋೀನಾ ವೈರಸ್) ಸಾಂಕ್ರಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗದ ಲಕ್ಷಣಗಳು ಕಂಡು ಬಂದ ಕೂಡಲೇ ಜ್ವರ ಕ್ಲೀನಿಕ್(ಪೀವರ್ ಕ್ಲೀನಿಕ್) ಬೇಟಿ ನೀಡಿ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕೆಂದು ಉಪವಿಭಾಗಾಧಿಕಾರಿ ಅಜಯ್ ಅವರು ತಿಳಿಸಿದ್ದಾರೆ.       ವಿಶ್ವದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತವು ಮುಂದಾಗಿದೆ. ಈ ರೋಗದ ಲಕ್ಷಣಗಳಾದ ಕೆಮ್ಮು, ಸೀನು, ಜ್ವರ, ತಲೆನೋವು, ವಾಂತಿ ಬೇಧಿ, ಮೈ ಕೈ ನೋವು ಹಾಗೂ ಇತರೆ ಲಕ್ಷಣಗಳು ಕಂಡು ಬಂದರೆ ತಕ್ಷಣ ಜ್ವರ ಕ್ಲೀನಿಕ್ ನಲ್ಲಿ (ಪೀವರ್ ಕ್ಲೀನಿಕ್) ಪರೀಕ್ಷೆಗೆ ಒಳಗಾಗಿ ಹಾಗೂ ರೋಗ ದೃಢಪಟ್ಟರೆ ಸೋಕಿತರು ಯಾವುದೇ ರೀತಿಯ ಭಯಬೀತರಾಗದೆ ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್(ಸಿ,ಸಿ,ಸಿ) ಅಥವಾ ಹೋಂ ಐಸೋಲೇಷನ್ ನಲ್ಲಿ ವೈದ್ಯರ ನಿರ್ದೇಶನದಂತೆ ಪೂರಕ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.       ಜಿಲ್ಲೆಯಲ್ಲಿ ಈಗಾಗಲೇ ರ್ಯಾಪಿಡ್ ಅಂಟಿಜೆನ್…

Read More

ತುಮಕೂರು :       ಜಿಲ್ಲೆಯ ತುಮಕೂರು ನಗರದ 13 ಹಾಗೂ ತಾಲ್ಲೂಕು ಕೇಂದ್ರಗಳ 8 ಸೇರಿದಂತೆ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಸಿಇಟಿ ಪರೀಕ್ಷೆಯು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆದಿದೆ.       ಇಂದು ಬೆಳಿಗ್ಗೆ ನಡೆದ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ 7166 ವಿದ್ಯಾರ್ಥಿಗಳು ಹಾಜರಾಗಿದ್ದು, 805 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.       ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 7164 ವಿದ್ಯಾರ್ಥಿಗಳು ಹಾಜರಾಗಿದ್ದು, 807 ಮಂದಿ ವಿದ್ಯಾರ್ಥಿಗಳು ಗೈರಾಗಿರುತ್ತಾರೆ, ಪರಿಕ್ಷೆಯು ಜಿಲೆಯಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಕೆ. ನರಸಿಂಹಮೂರ್ತಿ ಅವರು ತಿಳಿಸಿದ್ದಾರೆ.

Read More

ಕೊರಟಗೆರೆ:        ಸಿರಿದೇವಿಗೆ ಮೀಸಲಾದ ಕರುನಾಡಿನ ಏಕೈಕ ಧಾರ್ಮಿಕ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿಧಾನಕ್ಕೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಬರುತ್ತೀದ್ದ ಲಕ್ಷಾಂತರ ಭಕ್ತರಲ್ಲಿ ಸಾವಿರಕ್ಕೂ ಕಡಿಮೆ ಭಕ್ತರು ಆಗಮಿಸಿ ಸಾಮಾಜಿಕ ಅಂತರದ ಮೂಲಕ ಶುಕ್ರವಾರ ಮುಂಜಾನೆಯಿಂದಲೇ ದರ್ಶನ ಪಡೆದಿದ್ದಾರೆ.        ಕಲ್ಪತರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೀತಾ ಸಮೀಪದ ಗೊರವನಹಳ್ಳಿ ಶ್ರೀಕ್ಷೇತ್ರದ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ನೂರಾರು ಭಕ್ತಾಧಿಗಳು ಕಲಿಯುಗದ ದೇವತೆ ಎಂದೇ ಪ್ರಸಿದ್ದಿ ಪಡೆದಿರುವ ಕಮಲಮ್ಮ ತಾಯಿಯ ಬೃಂದಾವನದ ದರ್ಶನ ಪಡೆದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಣೆ ಮಾಡಿರುವುದೇ ವಿಶೇಷವಾಗಿದೆ.       ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ ಆಡಳಿತ ಅಧಿಕಾರಿ ಡಾ.ನಂದಿನಿದೇವಿ ನೇತೃತ್ವದಲ್ಲಿ ಪೊಲೀಸ್-ಕಂದಾಯ ಮತ್ತು ಗ್ರಾಪಂ ಸಹಕಾರದಿಂದ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಕೊವೀಡ್-19 ಆದೇಶ ಪಾಲನೆಯ ಜೊತೆ ಸಾಮಾಜಿಕ ಅಂತರದ ಬಗ್ಗೆ ಆರೋಗ್ಯದ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.       ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ದೇವಾಲಯ…

Read More

 ತುಮಕೂರು:       ಜಿಲ್ಲೆಯಲ್ಲಿಂದು 81 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1617ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-38, ಕುಣಿಗಲ್-11, ತಿಪಟೂರು-10, ಮಧುಗಿರಿ-8, ಪಾವಗಡ-5, ಗುಬ್ಬಿ-4, ತುರುವೇಕೆರೆ-2, ಹಾಗೂ ಶಿರಾ, ಕೊರಟಗೆರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತಲಾ-1, ಸೇರಿದಂತೆ ಒಟ್ಟು 81 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 11 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 736 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 844 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 52 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪಾವಗಡ:       ಅಪೌಷ್ಟಿಕ ಮಕ್ಕಳ ರೋಗ ನೀರೋಧಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ನೈಸರ್ಗಿಕವಾಗಿ ತಯಾರಿಸಿರುವ ಸ್ಪೀರುಲಿನಾ ಚಿಕ್ಕಿಯನ್ನು ತಾಲ್ಲೂನಿಕಿನ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದರು.       ಮಂಗಳವಾರ ಪಾವಗಡ ಪಟ್ಟಣದ ಸಮೀಪ ಇರುವ ತಿಮ್ಮಾನಾಯ್ಕಪೇಟೆ ಗ್ರಾಮದಲ್ಲಿ ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ, ಸಮಗ್ರಶಿಶು ಅಭಿವೃದ್ದಿಯೋಜನೆ, ಸಿ.ಟಿ.ಎಫ್. ಆರ್.ಐ. ಮೈಸೂರು, ಸ್ಪಿರುಲಿನಾ ಪೌಂಡೇಷನ್ ತುಮಕೂರು, ಇವರ ಸಹಯೋದಲ್ಲಿ ಹಮ್ಮಿಕೊಂಡಿದ್ದ ಸ್ಪೀರುಲಿನಾ ಚಿಕ್ಕಿ, ಹಾಗೂ ಮಕ್ಕಳ ತೂಕದ ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಸೊಂಕಿತರು ಚಿಕ್ಕಿಯನ್ನು ಸೇವಿಸಿ ಗುಣಮುಖರಾಗಿದ್ದಾರೆ, ಅದ್ದರಿಂದ ಕೋವಿಡ್ ಸೊಂಕಿತರಿಗೆ ಚಿಕ್ಕಿಯನ್ನು ನೀಡಲಾಗುತ್ತದೆ, ಜಿಲ್ಲೆಯಲ್ಲಿ ಮೊದಲಬಾರಿಗೆ ಪಾವಗಡ ತಾಲ್ಲೂಕಿನ ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳಿಗೆ ಸ್ಪೀರುಲಿನಾ ಚಿಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ, ಚಿಕ್ಕಿಯನ್ನು ಸೇವಿಸಿದ ನಂತರ ಮಕ್ಕಳ ತೂಕ ಮತ್ತು ಅವರ ಅರೋಗ್ಯವನ್ನು ಪರೀಕ್ಷಿಸಬೇಕು ಎಂದು ತಿಳಿಸಿ, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಚಿಕ್ಕಿಯನ್ನು…

Read More

ತುಮಕೂರು:       ಕೊರೋನಾ ಮಧ್ಯೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಹಾಗೂ ವಿಭಿನ್ನ ರೀತಿಯಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.        ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಕೇಂದ್ರ ಸರ್ಕಾರ ಮಾರ್ಗ ಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಸಾಮಾಜಿಕ ಅಂತರ       ಜಿಲ್ಲಾ ಮಟ್ಟದ ಕಛೇರಿಯಿಂದ ಗ್ರಾಮಪಂಚಾಯತಿಯವರೆಗೂ ಸ್ವಾತಂತ್ರ್ಯ ದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಬೇಕು. ಜಿಲ್ಲಾ ಮಟ್ಟದಲ್ಲಿ ಪ್ರತಿವರ್ಷದಂತೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ ಎಂದು ಅವರು ತಿಳಿಸಿದರು. ಈ ಬಾರಿ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಂಜೆಯ ಕಾರ್ಯಕ್ರಮವಿರುವುದಿಲ್ಲ. 18 ವರ್ಷಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳ ಎನ್‍ಸಿಸಿ, ಸ್ಕೌಟ್ಸ್ ಹಾಗೂ ಪೊಲೀಸ್…

Read More

ತುಮಕೂರು:        ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷರಾಗಿ ಹೆಬ್ಬೂರು ಹೋಬಳಿ ಸಿರಿವರದ ಉಮೇಶ್‍ಗೌಡ ಮತ್ತು ಉಪಾಧ್ಯಕ್ಷರಾಗಿ ಬೆಳ್ಳಾವಿ ಹೋಬಳಿ ಕೊಟ್ಟನಹಳ್ಳಿ ಗೊಲ್ಲರಹಟ್ಟಿಯ ಶಿವರಾಜ್ ಬುಧವಾರ ಅಧಿಕಾರ ಸ್ವೀಕರಿಸಿದರು.       ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 15 ಸದಸ್ಯರನ್ನು ಸರ್ಕಾರ ನಾಮರ್ದೇಶನ ಮಾಡಿದ್ದು, ಸಿರಿವರದ ಉಮೇಶ್‍ಗೌಡ ಅಧ್ಯಕ್ಷರಾಗಿ ಮತ್ತು ಕೊಟ್ಟನಹಳ್ಳಿ ಗೊಲ್ಲರಹಟ್ಟಿಯ ಶಿವರಾಜ್ ಉಪಾಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.       ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‍ಗೌಡ ಅವರು ಭೇಟಿ ನೀಡಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭ ಕೋರಿದರು. ಈ ವೇಳೆ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಕೊಡಿಸುವಂತಹ ಮಾರುಕಟ್ಟೆ ಇದಾಗಿದ್ದು, ಇಲ್ಲಿ ಭತ್ತ, ರಾಗಿ, ಜೋಳ ಈ ರೀತಿಯ ಬೆಳೆಗಳನ್ನು ರೈತರು ಮಾರಾಟ ಮಾಡಲು ಬರುತ್ತಾರೆ. ರೈತರಿಗೆ ಸರಿಯಾದ ಬೆಂಬಲ…

Read More

 ತುಮಕೂರು:       ಜಿಲ್ಲೆಯಲ್ಲಿಂದು 127 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1473ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-60, ಶಿರಾ-6, ಪಾವಗಡ-10, ಮಧುಗಿರಿ ಹಾಗೂ ಗುಬ್ಬಿ ತಾಲೂಕಿನಲ್ಲಿ ತಲಾ 7, ಕುಣಿಗಲ್-13, ತಿಪಟೂರು-8, ಚಿಕ್ಕನಾಯಕನಹಳ್ಳಿ-1, ತುರುವೇಕೆರೆ-9, ಕೊರಟಗೆರೆ-6 ಸೇರಿದಂತೆ ಒಟ್ಟು 127 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 761 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 47 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

 ತುಮಕೂರು:       ಜಿಲ್ಲೆಯಲ್ಲಿಂದು 132 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-56, ಶಿರಾ-5, ಪಾವಗಡ-5, ಗುಬ್ಬಿ-6, ಕುಣಿಗಲ್-22, ತಿಪಟೂರು-9, ಮಧುಗಿರಿ-8, ಚಿಕ್ಕನಾಯಕನಹಳ್ಳಿ-4, ತುರುವೇಕೆರೆ-13, ಕೊರಟಗೆರೆ-4 ಸೇರಿದಂತೆ ಒಟ್ಟು 132 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 33 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 636 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 667 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದು, ಈವರೆಗೆ 43 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More