Author: News Desk Benkiyabale

ತಿಪಟೂರು :       ಕೂಲಿ ಮತ್ತು ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯಗಳಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬ ಉದ್ದೇಶದಿಂದ ಶಾಂತಕುಮಾರ್ ಅಭಿಮಾನಿ ಬಳಗದ ವತಿಯಿಂದ ಉಚಿತ ಸ್ಮಾರ್ಟ್ ಕಾರ್ಡ್‍ಗಳನ್ನು ಮಾಡಿಸಿಕೊಡಲಾಗುವುದು ಎಂದು ತಾಲೂಕು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.       ನಗರದ ಖಾಸಗಿ ಹೋಟೆಲ್‍ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು ಅವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಎಷ್ಟೋ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ಬಗ್ಗೆ ಮಾಹಿತಿ ಇಲ್ಲದಂತಾಗಿದೆ. ಕಟ್ಟಡಕಾರ್ಮಿಕರು, ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್, ಕೃಷಿ, ರಸ್ತೆ ಕಾರ್ಮಿಕರು, ಕಮ್ಮಾರರು, ಗಾರ್ಮೆಂಟ್ಸ್ ಸೇರಿದಂತೆ ಕೆಳ ವರ್ಗದ ಕೂಲಿ ಕಾರ್ಮಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ವರೆಲ್ಲ ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದು, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಕುಟುಂಬ ನಿರ್ವಹಣೆಗೆ ಕಷ್ಟಪಡುವಂತಾಗಿದೆ. ಸರ್ಕಾರವೂ ಸಹ ಇಂತಹ ಅಸಂಘಟಿತ ವಲಯಗಳನ್ನು ಗುರ್ತಿಸಿ ಅಂಬೇಡ್ಕರ್…

Read More

 ತುಮಕೂರು :       ಜಿಲ್ಲೆಯಲ್ಲಿ ತೆಂಗು ಕುರಿತ ಕಾರ್ಯಾಗಾರ/ ಮೇಳವನ್ನು ಆಯೋಜಿಸುವ ಕುರಿತಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.       ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯು ಕೇಂದ್ರ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನದಡಿ ತೆಂಗು ಆಯ್ಕೆಯಾಗಿದ್ದು, ತೆಂಗು ಬೆಳೆಯುವುದು, ತೆಂಗಿನ ವಿವಿಧ ಉತ್ಪನ್ನಗಳು, ಅಭಿವೃದ್ಧಿ, ಉತ್ಪಾದನೆ, ರೋಗನಿಯಂತ್ರಣ ಸೇರಿದಂತೆ ತೆಂಗುವಿನ ಅನೇಕ ವಿಷಯಗಳ ಬಗ್ಗೆ ತಜ್ಞರಿಂದ ರೈತರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಕಾರ್ಯಾಗಾರ ಮೇಳ ಆಯೋಜಿಸಲಾಗುವುದು. ಮೇಳ ಆಯೋಜಿಸುವ ದಿನಾಂಕ, ಸಮಯ, ಸ್ಥಳ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು.       ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಸ್ವಾಗತ ಸಮಿತಿ, ಪ್ರಚಾರ ಸಮಿತಿ, ಪ್ರದರ್ಶನ ಹಾಗೂ ಮಳಿಗೆ ಸಮಿತಿ, ಹಣಕಾಸು ಸಮಿತಿ ಹೀಗೆ…

Read More

 ತುಮಕೂರು :       ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನವಾಗುವ ವಿವಿಧ ಯೋಜನೆಗಳಡಿ ನೀಡುವ ಸಾಲ-ಸಹಾಯಧನ ಸೌಲಭ್ಯಕ್ಕಾಗಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ , ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳ ಆಯ್ಕೆ ಸಮಿತಿ, ಧನಶ್ರೀ ಫಲಾನುಭವಿಗಳ ಆಯ್ಕೆ ಸಮಿತಿ ಹಾಗೂ ದಮನಿತ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅವರು ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿದರು. ಆಯ್ಕೆ ಪ್ರಕ್ರಿಯೆ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಇರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ವಿವರ/ದಾಖಲೆಗಳನ್ನು ಡಾಟಾ ಬೇಸ್‍ನಲ್ಲಿ ದಾಖಲಿಸಬೇಕು. ಡಾಟಾ ಬೇಸ್‍ನಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತಿತರ ವಿವರಗಳನ್ನು ದಾಖಲಿಸುವುದರಿಂದ ಫಲಾನುಭವಿಗಳು ಪುನರಾವರ್ತಿತರಾಗುವುದಿಲ್ಲ. ಇಲ್ಲದಿದ್ದರೆ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿಗಳೇ…

Read More

ತುಮಕೂರು:      ಸ್ಲಂ ನಿವಾಸಿಗಳ ಕುಂದು ಕೊರತೆ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳಾದ ಚೆನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಸಲಾಯಿತು ಕಳೆದ ಕೆಲ ದಿನಗಳ ಹಿಂದೆ ನೂತನ ಜಿಲ್ಲಾಧಿಕಾರಿಗಳಿಗೆ ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ಕರೆಯಲು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಮನವಿ ನೀಡಲಾಗಿತ್ತು ಅದರಂತೆ 5-03-2021ರ ಸಭೆ ಕರೆಯಲಾಗಿತ್ತು.        ಸಭೆಯ ಅಧ್ಯಕ್ಷತೆ ವಹಿಸಿದ ಅಪರ ಜಿಲ್ಲಾಧಿಕಾರಿಗಳು ಇಂದು ತುಮಕೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಪಾಲ್ಗೊಂಡಿದ್ದು ಪೂರ್ವ ನಿಗಧಿತವಾಗಿರುವ ಈ ಸಭೆಯನ್ನು ನಡೆಸಲು ಜಿಲ್ಲಾಡಳಿತ ತ್ರಿಪಕ್ಷೀಯ ಸಭೆ ಕರೆದಿದ್ದು ವ್ಯಕ್ತಿಗತ ಸಮಸ್ಯೆಗಳಿಗಿಂತ ಸಮುದಾಯ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ಕರೆಯಲಾಗಿದೆ.       ಅದರಂತೆ ಈಗಾಗಲೇ ತುಮಕೂರು ಕೊಳಗೇರಿ ಸಮಿತಿಯಿಂದ 15 ಅಂಶಗಳ ಸಮಸ್ಯೆಗಳನ್ನು ನೀಡಿದ್ದು ಈ ಸಭೆಯಲ್ಲಿ ಚರ್ಚಿಸಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕಾಲಮಿತಿಯನ್ನು ನಿಗಧಿಗೊಳಿಸಿ ಅನುಪಾಲನ ಸಭೆಗಳನ್ನು ಹಂತಹಂತವಾಗಿ ಮಾಡುವ…

Read More

ತುಮಕೂರು :        ಸಮಾಜದಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.        ಶಿಸ್ತು, ಸಂಯಮ, ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿರುವ ಪೆÇಲೀಸ್ ಇಲಾಖೆಯನ್ನು ಸದಾ ಜನಸಾಮಾನ್ಯರು ಗಮನಿಸುತ್ತಿರುತ್ತಾರೆ. ಹಾಗಾಗಿ ಪೊಲೀಸರು ಪ್ರತಿ ಕ್ಷಣವೂ ಬಹಳ ಎಚ್ಚರಿಕೆಯಿಂದಲೇ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ ಪ್ರತಿ ಕ್ಷಣವೂ ಒತ್ತಡ ಎಂಬುದು ಬೆನ್ನೇರಿರುತ್ತದೆ. ಈ ಎಲ್ಲ ಒತ್ತಡಗಳಿಂದ ಮುಕ್ತರಾಗಲು ಕ್ರೀಡಾಕೂಟಗಳು ಅನಿವಾರ್ಯ ಎಂದರು.      ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.       ಕ್ರೀಡೆ ಮನುಷ್ಯನ ದೈಹಿಕ ಸದೃಢತೆ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ…

Read More

ಹುಳಿಯಾರು :       ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿಯಿಂದ ಕೆಂಕೆರೆ ಗ್ರಾಮದ ಮೀನು ಪಾಚುವಾರು ಹರಾಜು ಪ್ರಕ್ರಿಯೆಯು ಗುರುವಾರ ನಡೆಯಿತು.       ಗ್ರಾಪಂ ಅಧ್ಯಕ್ಷ ಕೆ.ಸಿ.ವಿಕಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಹರಾಜಿನಲ್ಲಿ ನಾಲ್ವರು ಭಾಗವಹಿಸಿದ್ದು ಕೆಂಕೆರೆಯ ಕೆ.ಜಿ.ಶರತ್ ಅವರಿಗೆ ವರ್ಷಕ್ಕೆ 35,500 ರೂ.ಗಳಂತೆ ವರ್ಷಿಕ ಶೇ.10 ರೂ. ಹೆಚ್ಚಳ ಮಾಡಿ 2021 ಮಾರ್ಚ್ 4 ರಿಂದ 2024 ಮಾರ್ಚ್ 31 ರ ವರೆವಿಗೆ 3 ವರ್ಷದ ಅವಧಿಗೆ ಹರಾಜು ನಿಂತಿತು.       ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಸಿ.ಬಲರಾಮಯ್ಯ ಸೇರಿದಂತೆ ಗ್ರಾಪಂ ಕಾರ್ಯದರ್ಶಿ ಜ್ಞಾನಮೂರ್ತಿ ಹಾಗೂ ಗ್ರಾಪಂ ಸದಸ್ಯರುಗಳು ಭಾಗವಹಿಸಿದ್ದರು.

Read More

ಹುಳಿಯಾರು :       ಹುಳಿಯಾರು ಎಪಿಎಂಸಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಪಟ್ಟಣದಲ್ಲಿ ಕೆಟ್ಟಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಅವರಿಗೆ ಸೂಚನೆ ನೀಡಿದರು.      ಹುಳಿಯಾರು ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಹುಳಿಯಾರಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ವರ್ಷಗಳೇ ಕಳೆದಿದ್ದರೂ ಸಹ ದುರಸ್ತಿ ಮಾಡದ ಪರಿಣಾಮ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದ ನೀರು ಖರೀದಿಸಿ ಕುಡಿಯುವಂತ್ತಾಗಿದೆ ಎಂದು ಸಾರ್ವಜನಿಕರು ದೂರಿದರು.       ಜಿಲ್ಲಾಧಿಕಾರಿಗಳು ತಕ್ಷಣ ಪಪಂ ಮುಖ್ಯಾಧಿಕಾರಿಗಳನ್ನು ಕರೆಸಿ ದುರಸ್ತಿ ಮಾಡಿಸದೆ ನಿರ್ಲಕ್ಷ್ಯಿಸಿರುವ ಬಗ್ಗೆ ಪ್ರಶ್ನಿಸಿದರು. ಶುದ್ಧ ಕುಡಿಯುವ ನೀರಿನ ಘಟಕಗಳೆಲ್ಲವೂ ಆರ್‍ಡಿಪಿಆರ್ ವ್ಯಾಪ್ತಿಯಲ್ಲಿದ್ದು ನಮಗೆ ಇದೂವರೆವಿಗೂ ಹಸ್ತಾಂತರಿಸಿರುವುದಿಲ್ಲ. ಅವರು ಹಸ್ತಾಂತರಿಸಿದರೆ ದುರಸ್ತಿ ಮಾಡಿಸುವುದಾಗಿ ತಿಳಿಸಿದರು. ಅಲ್ಲದೆ 70 ಸಾವಿರಕ್ಕೂ ಹೆಚ್ಚು ಹಣ ದುರಸ್ತಿಗೆ ಬೇಕಾಗುತ್ತದೆ ನಮ್ಮಲ್ಲಿ ಕಂದಾಯ ವಸೂಲಿಯಾಗದಿರುವುದರಿಂದ…

Read More

ತುಮಕೂರು :       ತುಮಕೂರು ವಿಶ್ವವಿದ್ಯಾನಿಲಯದ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ 73 ವಿದ್ಯಾರ್ಥಿಗಳಿಗೆ ಒಟ್ಟು 92 ಚಿನ್ನದ ಪದಕ, ಆರು ನಗದು ಬಹುಮಾನ ಹಾಗೂ 147 ಪಿಎಚ್‍ಡಿ ಪದವಿ ಹಾಗೂ 3 ಡಿಲಿಟ್ ಪದವಿ ಪ್ರದಾನ ಮಾಡಲಾಯಿತು.       ತುಮಕೂರು ನಗರದ ವಿಶ್ವವಿದ್ಯಾನಿಲಯದ ಶ್ರೀ ಶ್ರೀ ಶ್ರೀ ಶಿವಕುಮಾರ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಘನತೆವೆತ್ತ ರಾಜ್ಯಪಾಲ ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಾಜುಭಾಯಿ ವಾಲಾ ಅವರು, 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 147 ಪಿಎಚ್‍ಡಿ ಅಭ್ಯರ್ಥಿಗಳಿಗೆ ಮತ್ತು 3 ಡಿಲಿಟ್ ಪದವಿ ಪ್ರದಾನ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಐ.ಎಸ್. ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಉದಾರ ಶಿಕ್ಷಣ ಪರಿಕಲ್ಪನೆಯಲ್ಲಿ ತುಮಕೂರು ವಿವಿಗೆ ವಿಶಿಷ್ಟ ಸ್ಥಾನ: ತುಮಕೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಶಿಕ್ಷಣ ನೀತಿಯ ಉದಾರ ಶಿಕ್ಷಣ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಶಿಷ್ಟ ಸ್ಥಾನ ಹೊಂದಿದೆ ಎಂದು ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಇಸ್ರೋ ಭಾರತ ಸರ್ಕಾರ…

Read More

ತುಮಕೂರು:       ತುಮಕೂರಿನ ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಕೀಲು ಮತ್ತು ಮೂಳೆ ವಿಭಾಗ ವೈದ್ಯರು 60 ವರ್ಷದ ವ್ಯಕ್ತಿಗೆ ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸ್ವಾವಲಂಬಿಯಾಗಿ ನಡೆದಾಡುವಂತೆ ಮಾಡಿ ದ್ದಾರೆ.       ಕೊರಟಗೆರೆ ತಾಲ್ಲೂಕಿನ ಸಿಂಗಲಿಕಾಪುರ ಗ್ರಾಮದ ಅರಸಪ್ಪ (60) ವರ್ಷ ಎಂಬುವವರು ಸೊಂಟದ ಕಾಲುನೋವಿನಿಂದ ಬಳಲುತ್ತಿದ್ದರು. ಇವರ ಜೀವನ ತುಂಬ ದುಸ್ತರವಾಗಿತ್ತು. ದಿನನಿತ್ಯದ ಕೆಲಸಗಳಿಗೆ ಬೇರೆಯವರ ಸಹಾಯಯಾಚಿಸುವಂತಾಗಿತ್ತು. ಇವರಿಗೆ (ಊiಠಿ ಖeಠಿಟಚಿಛಿemeಟಿಣ) ಆಪರೇಷನ್ ಅಗತ್ಯವಾಗಿತ್ತು. ಇತರರ ಸಹಾಯದಿಂದ ನಡೆದಾಡುತ್ತಿದ್ದರು ಅಪರೇಷನ್ ಮಾಡಿದ ನಂತರ ತಾವೇ ನಡೆದಾಡುವಂತಾಗಿದ್ದಾರೆ.       ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯರುಗಳು ಸಕಲ ಪರೀಕ್ಷೆ ಮಾಡಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದರು. ರೋಗಿಯೂ ಸಾಮಾನ್ಯ ಶಸ್ತ್ರಚಿಕಿತ್ಸೆಗೆ ಗುಣವಾಗುವುದು ಕಷ್ಟವಾಗಿರುವುದರಿಂದ ಸೊಂಟದ ಕೀಲು ಮಂಡಿ ಮರುಜೋಡಣೆ ಶಸ್ತ್ರಚಿಕಿತ್ಸೆ ಮಾಡಿ ಅತಿ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ತಾವೇ ನಡೆದಾಡುವಂತಾಗಿದ್ದಾರೆ. ಇವರು ಸುಮಾರು 10 ವರ್ಷಗಳ ಕಾಲ…

Read More

ತುಮಕೂರು:       ಹಿರಿಯ ಕ್ರೀಡಾಪಟುಗಳಿಗೆ ಅವಕಾಶ ಒದಗಿಸುವ ನಿಟ್ಟಿನಲ್ಲಿ ಮಾರ್ಚ್ 13 ಮತ್ತು 14 ರಂದು ಬೆಂಗಳೂರಿನ ಯಲಹಂಕ ಕ್ರೀಡಾಂಗಣದಲ್ಲಿ 2 ದಿನಗಳ ರಾಜ್ಯಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ತುಮಕೂರು ಜಿಲ್ಲೆಯಿಂದ ಭಾಗವಹಿಸುವ ಹಿರಿಯ ಕ್ರೀಡಾಪಟುಗಳು ಮಾರ್ಚ್ 07ರೊಳಗೆ ಹೆಸರು ನೊಂದಾಯಿಸಲು ಎಂದು ಮಾಸ್ಟರ್ ಗೇಮ್ಸ್ ಅಸೋಸಿಯೇಷನ್‍ನ ತುಮಕೂರು ಜಿಲ್ಲಾಧ್ಯಕ್ಷ ಧನಿಯಕುಮಾರ್ ಮನವಿ ಮಾಡಿದ್ದಾರೆ.       ನಗರದ ಸಿ.ಎಸ್.ಐ ಲೇಔಟ್‍ನಲ್ಲಿರುವ ಅಸೋಸಿಯೇಷನ್ ಕಚೇರಿಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಲು ತುಮಕೂರು ತಂಡಕ್ಕೆ ಹೆಸರು ನೊಂದಾಯಿಸುವ ಸಂಬಂಧ ಕರೆದಿದ್ದ ಪೂರ್ವಬಾವಿ ಸಭೆಯಲ್ಲಿ ಮಾಸ್ಟರ್ ಕ್ರೀಡಾಕೂಟದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು,ತುಮಕೂರು ಮಾಸ್ಟರ್ ಗೇಮ್ಸ್ ಅಸೋಸಿಯೇಷನ್(ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ(ರಿ)ನ ಮಾನ್ಯತೆ ಪಡೆದಿದ್ದು,ಮಾರ್ಚ್ 7 ರವರೆಗೆ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದರು.        ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ,ದ್ರಾವಿಡ್ ಪಡುಕೋಣೆ ಅಕಾಡೆಮಿ ,ಜಯಪ್ರಕಾಶ್ ನಾರಾಯಣ ಯುತ್ ಸೆಂಟರ್,ವಿದ್ಯಾನಗರ…

Read More