ತುಮಕೂರು: ರಾಜ್ಯದ ಜನಹಿತಕ್ಕಾಗಿ ಹಲವಾರು ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಧಾರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ರಾಜ್ಯ ಸರ್ಕಾರದ ಅಧಿಕಾರಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ವಿಧಾನ ಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ಏರ್ಪಡಿಸಿದ್ದ ಸರ್ಕಾರದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾ ಪಂಚಾಯತಿಯಲ್ಲಿ ಏರ್ಪಡಿಸಿದ್ದ ವೀಕ್ಷಣಾ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜನರ ವೈಯಕ್ತಿಕ ಜೀವನ, ಕೈಗಾರಿಕಾ ಅಭಿವೃದ್ಧಿ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಶಾಸನಾತ್ಮಕವಾಗಿ ಕೆಲಸ ಮಾಡುವ ಮೂಲಕ ಈ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ ಎಂದರು. ಸಂಜೆ ಹೊತ್ತಿನಲ್ಲಿ ದುಡಿಯುವ ಮಹಿಳೆಯರ ಸುರಕ್ಷತೆಗಾಗಿ ಅಂಗಡಿ ಮತ್ತು ಸ್ಥಾಪನೆ ಕಾಯ್ದೆ ತಿದ್ದುಪಡಿ ಮಾಡಲಾಗಿದೆ ಹಾಗೂ ಯಾವುದೇ ಇಲಾಖೆಯ ನಿರಾಕ್ಷೇಪಣಾ ಪತ್ರವಿಲ್ಲದೆ ಹೊಸದಾಗಿ ಉದ್ಯಮ ಆರಂಭಿಸುವವರಿಗಾಗಿ ಕೈಗಾರಿಕಾ ಕಾಯ್ದೆಯಡಿ ಅನುಕೂಲ…
Author: News Desk Benkiyabale
ಕೊರಟಗೆರೆ : ತಾಲೂಕಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ಕ್ಷೇತ್ರದ ದೇವಸ್ಥಾನ ಒಂದರ ಅರ್ಚಕರ ಮಡದಿಗೆ ಕಾಣಿಸಿಕೊಂಡಿದ್ದ ಕೊರೊನಾ ಪಾಸಿಟಿವ್ ವರದಿಯಿಂದ ದೇವಸ್ಥಾನ ಹಾಗೂ ಆವರಣವನ್ನು ಸೀಲ್ಡ್ ಮಾಡಲಾಗಿತ್ತು . ಇನ್ನೇನು ಇದೇ ತಿಂಗಳ 31 ರಂದು ವರಮಹಾಲಕ್ಷ್ಮಿ ಹಬ್ಬವಾಗಿದ್ದು ಕರುನಾಡಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ಜುಲೈ 28 ರ ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ ಭಾನುವಾರ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ ತಾಲ್ಲೂಕಿನ ಪುಣ್ಯಕ್ಷೇತ್ರ ಶ್ರೀ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಿಯ ದೇವಾಲಯವನ್ನು ಜುಲೈ 27 ರಂದು ತೆರೆದು ಸ್ವಚ್ಛತೆ ಮತ್ತು ಕೊರೊನಾ ಭದ್ರತಾ ಕ್ರಮ ಕೈಗೊಂಡು ಮರುದಿನ ಮುಂಜಾನೆಯಿಂದ ಭಕ್ತರಿಗೆ ದೇವಿಯ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ . ಜುಲೈ ೩೧ ಶುಭ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ದಿನವೂ…
ತುಮಕೂರು: ಸೌಹಾರ್ದ, ಸಹಕಾರ ಕ್ಷೇತ್ರದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಅವರ ಸೇವೆ ಅನನ್ಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು. ತುಮಕೂರು ತಾಲ್ಲೂಕು ಯಲ್ಲಾಪುರದಲ್ಲಿ ಟಿಎಂಸಿಸಿ ನಾಲ್ಕನೇ ಎಟಿಎಂ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಿಂದ ಆರಂಭವಾದ ಟಿಎಂಸಿಸಿ ಕಾರ್ಯಚಟುವಟಿಕೆ ದೇಶದ ಹಲವೆಡೆ ಕಾರ್ಯನಿರ್ವಹಿಸುವಂತಾಗಿದ್ದು, ದೇಶ ವ್ಯಾಪಿ ಟಿಎಂಸಿಸಿ ಕಾರ್ಯನಿರ್ವಹಿಸುವಂತಾಗಲಿ ಎಂದು ಆಶಿಸಿದರು. ಬ್ಯಾಂಕ್ ಲಾಭವನ್ನು ಬಡವರ ಸೇವೆಗೆ ಉಪಯೋಗಿಸುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿರುವ ಟಿಎಂಸಿಸಿ ಈಗಾಗಲೇ ಕೊರೋನಾ ವಾರಿಯರ್ಸ್ ಗಳಿಗೆ ಪಿಪಿಇ ಕಿಟ್ ಹಾಗೂ ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು ನೀಡಲು ಮುಂದೆ ಬಂದಿದ್ದು, ಇಂತಹ ಸೇವೆಯನ್ನು ಮಾಡಲು ಉಳ್ಳವರು ಮುಂದೆ ಬರಬೇಕೆಂದು ಸಲಹೆ ನೀಡಿದರು. ಟಿಎಂಸಿಸಿ ನಮ್ಮ ಬ್ಯಾಂಕ್ ಎನ್ನುವ ಭಾವನೆ ಜನರಲ್ಲಿ ಮೂಡಿರುವುದರಿಂದಲೇ ಇಂದು ಉತ್ತಮ ಸೇವೆಯನ್ನು ನೀಡುವುದರೊಂದಿಗೆ ಟಿಎಂಸಿಸಿ ಲಾಭಾಂಶವನ್ನು ಷೇರುದಾರರಿಗೆ ಒದಗಿಸುತ್ತಿದ್ದು, ಜನರ ನಂಬಿಕೆಯನ್ನು ಹೆಚ್ಚಿಸಿಕೊಂಡು…
ತುಮಕೂರು: ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 10 ರಿಂದ ಸಂಜೆ 4-30ಗಂಟೆವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಈ ಅವಧಿಯಲ್ಲಿ ನಿಷೇಧಿತ ಪ್ರದೇಶಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು : ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿರುವ ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರಮಹಾಲಕ್ಷ್ಮಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಇತ್ತೀಚೆಗೆ ದೇವಾಲಯದ ಅರ್ಚಕರ ಪತ್ನಿಗೆ ಕೊರೋನಾ ಸೋಂಕು ದೃಡಪಟ್ಟಿತ್ತು, ಇದೀಗ ಅವರು ಗುಣಮುಖವಾಗಿ ಮನೆಗೆ ಬಂದಿದ್ದಾರೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಮೂಲಗಳು ಸ್ಪಷ್ಟಪಡಿಸಿವೆ. ಜುಲೈ 20ರಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗಿದ್ದು, ಭಕ್ತರ ದರ್ಶನ ಹಾಗೂ ಪೂಜೆಗೆ ನಿರ್ಬಂಧ ವಿಧಿಸಲಾಗಿದೆ. ಪೂಜೆ-ಪುನಸ್ಕಾರವನ್ನು ಸ್ಥಗಿತಗೊಳಿಸಲಾಗಿದೆ.
ಗುಬ್ಬಿ: ಮೂಲಭೂತ ಸೌಲಭ್ಯ ಒದಗಿಸುವ ಅಭಿವೃದ್ಧಿ ಕೆಲಸಗಳೇ ಮರೀಚಿಕೆಯಾದ ಹಿನ್ನಲೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಮತ ಬಹಿಷ್ಕರಿಸಲು ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜವರೇಗೌಡನಪಾಳ್ಯ ಗ್ರಾಮಸ್ಥರು ಒಕ್ಕರಲಿನ ತೀರ್ಮಾನಕ್ಕೆ ನಿಂತಿದ್ದಾರೆ. ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಬ್ಯಾಡಗೆರೆ ಕ್ಷೇತ್ರಕ್ಕೆ ಒಳಪಟ್ಟ ಮೂರು ಗ್ರಾಮಗಳಿಂದ ಒಟ್ಟು 700 ಮತದಾರರಿದ್ದಾರೆ. ಪಂಚಾಯಿತಿ ನಿಯಮಾನುಸಾರ ಈ ಕ್ಷೇತ್ರ ಎರಡು ಸದಸ್ಯತ್ವ ಪಡೆಯಬೇಕಿದೆ. ಈ ಬಗ್ಗೆ ಕಳೆದ 5 ವರ್ಷದ ಹಿಂದೆಯೇ ಪ್ರಸ್ತಾಪ ಮಾಡಿ ಮತದಾನ ಬಹಿಷ್ಕಾರದ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಮೂಲ ಸವಲತ್ತು ಪಡೆಯಲು ಬಹಿಷ್ಕಾರದ ಅಸ್ತ್ರ ಬಳಸಬೇಕಿದೆ. ಚುನಾವಣಾ ಸಂದರ್ಭದಲ್ಲಿ ಮಾತ್ರವೇ ಒಂದಿಷ್ಟು ಕೆಲಸ ಮಾಡಿಕೊಡುವ ಅಧಿಕಾರಿಗಳು ಪ್ರತಿಭಟನೆಗೆ ಮಾತ್ರ ಬೆಲೆ ನೀಡುತ್ತಿದ್ದಾರೆ. ಮೌಖಿಕ ಚರ್ಚೆ ಮಾಡಿದರೆ ವರ್ಷನಾಗಟ್ಟಲೇ ಯಾವ ಕೆಲಸ ಮಾಡಿಕೊಡುವುದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ಗ್ರಾಮ ಪಂಚಾಯಿತಿಯಲ್ಲಿ 470 ಮತದಾರರು, 550 ಜನಸಂಖ್ಯೆ ಇರುವ…
ತುಮಕೂರು : ಜಿಲ್ಲೆಯಲ್ಲಿ ಇಂದು 119 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1110 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-49, ಮಧುಗಿರಿ-9, ಗುಬ್ಬಿ-01, ತಿಪಟೂರಿನಲ್ಲಿ -09 , ಕುಣಿಗಲ್ -08, ತುರುವೇಕೆರೆ-05, ಚಿಕ್ಕನಾಯಕನಹಳ್ಳಿ-13, ಕೊರಟಗೆರೆ-08, ಪಾವಗಡ-13, ಶಿರಾ -03 ಸೇರಿದಂತೆ ಒಟ್ಟು 119 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 43 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 595 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 473 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 42 ಮಂದಿ ಸಾವನ್ನಪ್ಪಿದ್ದು, ಶುಕ್ರವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಧುಗಿರಿ: ತಾಲೂಕಿನಲ್ಲಿ ಕರೊನಾ ಕಾಟ ಮುಂದುವರೆದಿದ್ದು ಶುಕ್ರವಾರವೂ ಸಹ ಎಂಟು ಮಂದಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಇಲ್ಲಿಯವರೆಗೂ 84ಮಂದಿಗೆ ಸೋಂಕು ದೃಢಪಟ್ಟು ಶತಕದ ಹಂಚಿಗೆ ತಲುಪಿದೆ. ಈ ಪೈಕಿ ಶುಕ್ರವಾರ ಒಬ್ಬರು ಅಸ್ಪತ್ರೆಯಿಂದ ಬಿಡುಗಡೆ ಯಾಗಿದ್ದು,ಇಲ್ಲಿಯವರೆಗೂ 84ಸೋಂಕಿತರಲ್ಲಿ 46 ಸೋಂಕಿತರು ಅಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. ಒಬ್ಬರು ಮೃತಪಟ್ಟಿದ್ದು, 37ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ವರದಿ: ತಾಲೂಕಿನ ರಂಗನಹಳ್ಳಿ ಗ್ರಾಮದ ಇಬ್ಬರಿಗೆ, ಮತ್ತು ಐ.ಡಿ.ಹಳ್ಳಿ ಹೋಬಳಿ ಹೊಸಇಟಕಲೋಟಿ,ದೊಡ್ಡೇರಿ ಹೋಬಳಿ ಎಂ.ಗೊಲ್ಲರಹಟ್ಟಿಯ ಯುವಕನೊಬ್ಬನಿಗೆ ಸೋಂಕು ತಗುಲಿದೆ. ಪಟ್ಟಣದ ಕೆ.ಹೆಚ್ ರಸ್ತೆಯ ದಿನಸಿ ಅಂಗಡಿಯ ದಂಪತಿಗಳಿಗೆ ಸೋಂಕು ತಗುಲಿದ್ದು ಆತಂಕ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ 84 ಕ್ಕೇರಿದ್ದು ಶತಕದ ಗಡಿ ಸಮೀಪಿಸಿದ್ದು ಸಹಜವಾಗಿ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಗುರುವಾರದ ವರದಿ: ಗುರುವಾರದಂದು7ಸೋಂಕಿತರು ಪತ್ತೆಯಾಗಿದ್ದವು.ಪಟ್ಟಣದ ಪಿಎಲ್ಡಿ ಬ್ಯಾಂಕ್ ರಸ್ತೆ ಎಂಟು ವರ್ಷದ ಬಾಲಕಿ ,ಕೆ.ಆರ್.ಬಡಾವಣೆಯ ಎಪ್ಪತ್ತು ವರ್ಷದ ವ್ಯಕ್ತಿ ಸೇರಿದಂತೆ…
ಮಧುಗಿರಿ: ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಅದೇ ಗ್ರಾಮದ ಯುವಕನೊಂದಿಗೆ ವಿವಾಹ ವಾಗಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೂವಿನಹಳ್ಳಿ ಗ್ರಾಮದ ಪ್ರಾಪ್ತ ಯುವಕ ನೊಬ್ಬ ಅದೇ ಗ್ರಾಮದ ವಾಸಿ ಇತ್ತೀಚೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೊನೆಯ ವಿಷಯವನ್ನು ಬರೆಯಲು ಹೋಗಿದ್ದ ಬಾಲಕಿಯೊಬ್ಬಳು ಮನೆಗೆ ಹಿಂದಿರುಗದೆ ಅದೇ ಗ್ರಾಮದ ಯುವಕ ನೊಂದಿಗೆ ವಿವಾಹವಾಗಿದ್ದಾಳೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಸಿಡಿಪಿಓ ಇಲಾಖೆಯ ಅಧಿಕಾರಿ ಮಿಡಗೇಶಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹದಲ್ಲಿ ಭಾಗಿರುವವರ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ತುರುವೇಕೆರೆ: ನನಗೂ ಹಾಗೂ ನಮ್ಮ ಗ್ರಾಮದ ಉಮರ್ ಎಂಬುವವರಿಗೂ ನಡೆದ ಜಮೀನು ವಿವಾದದ ಪ್ರಕರಣದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹಿಂದೂ ಮುಸಲ್ಮಾನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆಂದು ನಾಗಲಾಪುರದ ಮಂಜುನಾಥ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮದಲ್ಲಿ ನಮ್ಮ ತಾತನವರ ಕಾಲದಿಂದಲೂ ಉಳಿಮೆ ಮಾಡುತ್ತಿದ್ದ ಜಮೀನನ್ನು ಅಕ್ರಮವಾಗಿ ಮುಸಲ್ಮಾನ್ ಜನಾಂಗದ ಉಮರ್ ಎಂಬುವವರು ಉಳಿಮೆ ಮಾಡಲು ಮುಂದಾದಾ, ತಡೆಯಲು ಹೋದ ನನ್ನ ಮೇಲೆ ಟ್ರಾಕ್ಟರ್ ಹರಿಸಲು ಪ್ರಯತ್ನಿಸಿದರು ತಕ್ಷಣ ನಾನು ಪಕ್ಕಕ್ಕೆ ಬಿದ್ದೆ ಆದರೂ ಟ್ರಾಕ್ಟರ್ನ ನೇಗಿಲು ನನ್ನ ತೊಡೆ ಹಾಗೂ ಕೈಗೆ ತಾಕಿ ರಕ್ತಸ್ರಾವ ಉಂಟಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದೆ, ಆದರೆ ಅಷ್ಟರೊಳಗಾಗಲೇ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನ ಸಹಾಯದಿಂದ ಪೋಲೀಸ್ ಠಾಣೆಗೆ ನನ್ನ ಮೇಲೆಯೇ ದೂರು ನೀಡಿದ್ದಾರೆ, ಅಲ್ಲದೆ ವಾಸ್ತವದ ಅರಿವಿಲ್ಲದ ಮಾಜಿ ಶಾಸಕರು…