Author: News Desk Benkiyabale

ತುಮಕೂರು:       ದೇಶದಲ್ಲಿ ಕೊರೊನಾ ಮಹಾಮಾರಿಯಿಂದಾಗಿ ಲಕ್ಷಾಂತರ ಜನರು ಸಾವೀಗೀಡಾಗುತ್ತಿವುದು ದುರದೃಷ್ಟಕರ ಸಂಗತಿ. ಇಂತಹ ಸಂದರ್ಭದಲ್ಲಿ ನೇಕಾರಿಕೆಯನ್ನೆ ನಂಬಿ ಬದುಕುತ್ತಿದ್ದವರ ಬದುಕು ದುಸ್ಥಿರವಾಗಿದೆ ಈ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರು ನೇಕಾರರತ್ತ ಗಮನಹರಿಸಬೇಕೆಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಅಧ್ಯಕ್ಷ ಹಾಗೂ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ್ ಮನವಿ ಮಾಡಿದ್ದಾರೆ.        ನಿನ್ನೆ ಬೆಳಿಗ್ಗೆ ಬೆಂಗಳೂರು ಯಲಹಂಕ ಕೋಗಿಲು ಅಗ್ರಹಾರದ ನೇಕಾರರ ಕಾಲೋನಿಯ ಲಕ್ಷ್ಮೀಪತಿ (60) ವರ್ಷದ ಬಡ ನೇಕಾರ ಕೊರೋನಾ ಖಾಯಿಲೆ ಹಾಗೂ ಮಾಡಿದ ಸಾಲ ತೀರಿಸಲಾಗದೆ ಶುಕ್ರವಾರ ಬೆಳಿಗ್ಗೆ ನೇಕಾರಿಕೆ ಮಾಡುತ್ತಿರುವ ಜಾಗದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.       ಅನೇಕ ಬಾರಿ ತಮಗೆ ಹಾಗೂ ಜವಳಿ ಮಂತ್ರಿಗಳಿಗೆ ನೇಕಾರರ ಸಮಸ್ಯೆಗಳನ್ನು ಬಗೆಹರಿಸಲು ಪತ್ರ ನೀಡಿದ್ದೂ ಇದುವರೆವಿಗೂ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ಪರಿಹಾರ ನೀಡಿರುವುದಿಲ್ಲ. ಹಾಗೂ ನೇಕಾರರ ಸಮಸ್ಯೆಗಳನ್ನು ಪರಿಹಾರ ಮಾಡಿರುವುದಿಲ್ಲ. ತಕ್ಷಣ ನೇಕಾರರ ಸಮಸ್ಯೆಗಳನ್ನು ಬಗೆಹರಿಸಲು ಸಭೆ ಕರೆಯಬೇಕು.…

Read More

ತುಮಕೂರು :       ಜಿಲ್ಲೆಯಲ್ಲಿ ಇಂದು 59 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 991 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-22, ಮಧುಗಿರಿ-8, ಗುಬ್ಬಿ ಹಾಗೂ ತಿಪಟೂರಿನಲ್ಲಿ ತಲಾ 7, ಕುಣಿಗಲ್ ಹಾಗೂ ತುರುವೇಕೆರೆಯಲ್ಲಿ ತಲಾ 5, ಚಿಕ್ಕನಾಯಕನಹಳ್ಳಿ-2, ಕೊರಟಗೆರೆ, ಪಾವಗಡ ಹಾಗೂ ಶಿರಾ ತಲಾ 1 ಸೇರಿದಂತೆ ಒಟ್ಟು 67 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಜಿಲ್ಲಾಸ್ಪತ್ರೆಯಿಂದ 35 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 523 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 430 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 38 ಮಂದಿ ಸಾವನ್ನಪ್ಪಿದ್ದು, ಶುಕ್ರವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Read More

ತುಮಕೂರು:       ಗುರುವಾರ ಸಂಜೆ ಸುರಿದ ಮಳೆಗೆ ತುಮಕೂರಿನ ಅಮಾನಿಕೆರೆ ಸಮೀಪವಿರುವ ಕನ್ನಡ ಭವನದ ಸುವರ್ಣ ಭವನಕ್ಕೆ ಮಳೆನೀರು ನುಗ್ಗಿ ಪೀಠೋಪಕರಣಗಳು ಮತ್ತು ನೂರಾರು ಬಂಡಲ್ ಹಳೆಯ ಪೇಪರ್ ನೀರಿನಲ್ಲಿ ಮುಳುಗಿ ಹೋಗಿದೆ.       ಸ್ಮಾರ್ಟ್‍ಸಿಟಿ ಅಸಮರ್ಪಕ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿದ್ದು ಸುವರ್ಣಭವನಕ್ಕೆ ನೀರು ನುಗ್ಗಲು ಕಾರಣ. ಈ ಸಮಸ್ಯೆಯನ್ನು ಮಹಾನಗರ ಪಾಲಿಕೆ ಆಯುಕ್ತರು ಮತ್ತು ಸ್ಮಾರ್ಟ್‍ಸಿಟಿ ಇಂಜಿನಿಯರ್ ಗಮನಕ್ಕೆ ತಂದರೂ ನೀರು ಹೊರಹಾಕಿಸಲು ಕ್ರಮ ಕೈಗೊಳ್ಳಲಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ.ಹ.ರಮಾಕುಮಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.       ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ಮಹಲಿಂಗಪ್ಪ ಅವರನ್ನು ಸಂಪರ್ಕಿಸಿ ಸುವರ್ಣ ಸಭಾ ಭವನದಲ್ಲಿರುವ ಮಳೆ ನೀರು ಹೊರಹಾಕಿಕೊಡುವಂತೆ ಮನವಿ ಮಾಡಲಾಯಿತು. 2 ಅಗ್ನಿಶಾಮಕ ವಾಹನಗಳು ಮತ್ತು 10 ಸಿಬ್ಬಂದಿ ಬಂದು ಸಭಾಭವನದಲ್ಲಿ ತುಂಬಿಕೊಂಡಿದ್ದ ನೀರನ್ನು ಪಂಪ್ ಮೂಲಕ ಹೊರಹಾಕಿದರು. ಇದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.    …

Read More

    ತುಮಕೂರು :       ಜಿಲ್ಲೆಯಲ್ಲಿ ಇಂದು 67 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 931 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 26, ಪಾವಗಡ-06, ಗುಬ್ಬಿ-09, ಕುಣಿಗಲ್-05, ಮಧುಗಿರಿ-07, ಶಿರಾ-04, ತಿಪಟೂರು-02, ತುರುವೇಕೆರೆ-05, ಚಿಕ್ಕನಾಯಕನಹಳ್ಳಿ-02, ಕೊರಟಗೆರೆ-01 ಮಂದಿ ತಾಲೂಕಿನಲ್ಲಿ ಒಟ್ಟು 67 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಜಿಲ್ಲಾಸ್ಪತ್ರೆಯಿಂದ 03 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 408 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 35 ಸಾವನ್ನಪ್ಪಿದ್ದು, ಗುರುವಾರ-05 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Read More

ಪಾವಗಡ:       ತಾಲ್ಲೂಕಿನ ನಿಡಗಲ್ ಹೋಬಳಿ ಗುಜ್ಜನಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಟಿ.ಎನ್.ಬೆಟ್ಟ ಗ್ರಾಮದ ತಿಮ್ಮಪ್ಪನ ಬೆಟ್ಟದ ತಪ್ಪಲಿನಲ್ಲಿರುವ ಸನಾತನ ಪುಷ್ಕರಣಿಯನ್ನು ಕಳೆದ ಒಂದು ವಾದದಿಂದ ಸ್ವಚ್ಛಮಾಡಲಾಗುತ್ತಿದೆ. ಇದರಲ್ಲಿ 18 ಮತ್ತು19 ನೇ ಶತಮಾನದ ನಾಣ್ಯಗಳು ದೊರೆತಿವೆ. ಈ ಅಪರೂಪದ ನಾಣ್ಯಗಳು ದೊರೆತಿರುವುದನ್ನು ಪೆಮ್ಮನಹಳ್ಳಿಯ ಗ್ರಾಮಸ್ಥರು ತಾಲ್ಲೂಕು ಆಡಳಿತದ ಗಮನಕ್ಕೆ ತಂದ ಕಾರಣ ಗುರುವಾರ ತಹಸಿಲ್ದರ್ ವರದರಾಜ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.       ನಂತರ ಮಾತನಾಡುತ್ತಾ ಪುರಾತನ ಪುಷ್ಕರಣಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಅಪರೂಪದ ನಾಣ್ಯಗಳು ದೊರೆತಿವೆ ಇವುಗಳನ್ನು ಗ್ರಾಮಸ್ಥರು ಸಂಗ್ರಹಿಸಿ ಶ್ರೀರಾಮನ ದೇವಸ್ಥಾನದಲ್ಲಿ ಇಟ್ಟಿದ್ದರು. ನಂತರ ಈ ಸಂಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.      ಈ ದೇವಸ್ಥಾನದ ಹತ್ತಿರ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಎಲ್ಲಾ ರೀತಿಯ ಸಮಸ್ಯೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ…

Read More

ಮಧುಗಿರಿ:       ಪಕ್ಷದ ಪದಾಧಿಕಾರಿಗಳು ಕೇವಲ ವಿಸಿಟಿಂಗ್ ಕಾರ್ಡ್ ಗೆ ಸೀಮಿತವಾಗಿರದೆ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪುವಂತೆ ಮಾಡಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗ ಬೇಕು ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ ಕರೆ ನೀಡಿದರು.      ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಲಯದಲ್ಲಿ ಬುಧವಾರ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿ.ಎಸ್ ಬಸವರಾಜುರವನ್ನು ಬಹುಮತದಿಂದ ಇಲ್ಲಿನ ಮತದಾರರು ಆಯ್ಕೆ ಮಾಡಿದಂತೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೂ ತಲುಪಿಸಿ ಜನರನ್ನು ಸಂಘಟನೆ ಮಾಡಬೇಕಾದ ಜವಾಬ್ದಾರಿ ಹೊಸ ಕಾರ್ಯಕರ್ತರದ್ದಾಗಿದೆ. ಪಕ್ಷ ಸಂಘಟನೆ ಮಾಡುವಾಗ ಹಿರಿಯ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಂಡು ಅವರ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.       ಇದೇ ಸಂಧರ್ಭದಲ್ಲಿ ತಾಲ್ಲೂಕಿನ ಘಟಕದ ವಿವಿಧ…

Read More

ಮಧುಗಿರಿ:       ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಪ್ರೇಮಿಗಳು ಜೋಡಿಯೊಂದು ಮೌಡ್ಯತೆ ತೊರೆದು ಭೀಮನ ಅಮಾವಾಸ್ಯೆಯಂದೇ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವಚಿತ್ರದ ಎದುರು ನೂತನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ಮಧುಗಿರಿಯಲ್ಲಿ ನಡೆದಿದೆ.       ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಯುವತಿ ಚಂದನಾ (18) ಹಾಗೂ ಅದೇ ಗ್ರಾಮದ 25 ವರ್ಷದ ಯುವಕ ಶ್ರೀಧರ್ ಕಳೆದ 6 ತಿಂಗಳಿನಿಂದ ಪರಸ್ಪರ ಪ್ರಿತಿಸುತ್ತಿದ್ದರು. ಇವರ ಪ್ರೀತಿಗೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಯಲ್ಲಿ ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ರಕ್ಷಣೆ ಕೊಡುವಂತೆ ವೀಡಿಯೋ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದರು. ಬಳಿಕ ಜು20 ರ ಸೋಮವಾರ ಭೀಮನ ಅಮಾವಾಸ್ಯೆಯಂದು ಮೌಡ್ಯತೆ ತೊರೆದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮಿಕಿ ಭಾವ ಚಿತ್ರದ ಎದುರೇ ಸಂವಿಧಾನ ಪೀಠಿಕೆಯನ್ನೇ ಮಾಂಗಲ್ಯ ಧಾರಣೆಯ ಮಂತ್ರವಾಗಿ ಓದಿ ತಾಳಿಕಟ್ಟುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.       ಬಳಿಕ…

Read More

ಕೊರಟಗೆರೆ:       ಗುಡುಗು-ಮಿಂಚಿನ ನಡುವೆ ಬಿರುಗಾಳಿಯ ಮಳೆ ಬೀಳು ತ್ತಿರುವ ನಡುವೆಯೇ ಸೋಮವಾರ ಮಧ್ಯರಾತ್ರಿ ಕಳ್ಳರ ತಂಡ ಬೈರೇನಹಳ್ಳಿ ಮಧ್ಯದ ಅಂಗಡಿಯ ಬೀಗ ಮುರಿದು ಸುಮಾರು 2ಲಕ್ಷ 32ಸಾವಿರ ಮೌಲ್ಯದ 498 ಲೀಟರ್ ಮಧ್ಯ ಕಳ್ಳತನ ಮಾಡಿರುವ ಘಟನೆ ನಡೆದಿದೆ.       ತುಮಕೂರು ನಗರ ವಾಸಿಯಾದ ಸೀನಪ್ಪ ಮಾಲೀಕತ್ವದ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿಯ ಸಪ್ತಗಿರಿ ವೈನ್ಸ್‍ನಲ್ಲಿ ಕಳೆದ ವರ್ಷ ನಡೆದಿದ್ದ ಕಳ್ಳತನ ಮಾಸುವ ಮುನ್ನವೇ ಈಗ ಅದೇ ವೈನ್ಸ್‍ನಲ್ಲಿ ಮತ್ತೊಂದು ಸಲ ಕಳ್ಳತನ ನಡೆದು ಸಿಸಿಟಿವಿ ಸಮೇತ ಪರಾರಿ ಆಗಿದ್ದಾರೆ.       ಬೈರೇನಹಳ್ಳಿ ಗ್ರಾಮದ ಹೊರವಲಯದ ಸಪ್ತಗಿರಿ ವೈನ್ಸ್‍ನ ಮಾಲೀಕ ಮತ್ತು ವ್ಯವಸ್ಥಾಪಕನ ದಿವ್ಯನಿರ್ಲಕ್ಷ್ಯದಿಂದ ಕಳ್ಳತನ ನಡೆದಿದೆ. ಮೊದಲ ಸಲ ಕಳ್ಳತನ ನಡೆದಾಗ ಪೊಲೀಸ್ ಇಲಾಖೆ ಸಿಸಿಟಿವಿ ಮತ್ತು ಭದ್ರತೆಗಾಗಿ ಸೆಕ್ಯುರಿಟಿ ನೇಮಿಸುವಂತೆ ಸೂಚನೆ ನೀಡಿದ್ದಾರೆ. ವೈನ್ಸ್ ಮಾಲೀಕ ನಿರ್ಲಕ್ಷ್ಯ ಮಾಡಿರುವ ಪರಿಣಾಮ ಕಳ್ಳರ ತಂಡ…

Read More

ತುಮಕೂರು :      ಜಿಲ್ಲೆಯಲ್ಲಿ ಇಂದು 51 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 864 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 23, ಪಾವಗಡ-05, ಗುಬ್ಬಿ-03, ಕುಣಿಗಲ್-07, ಮಧುಗಿರಿ-02, ಶಿರಾ-04, ತಿಪಟೂರು-03, ತುರುವೇಕೆರೆ-01, ಚಿಕ್ಕನಾಯಕನಹಳ್ಳಿ-03 ಮಂದಿ ತಾಲೂಕಿನಲ್ಲಿ ಒಟ್ಟು 51 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಜಿಲ್ಲಾಸ್ಪತ್ರೆಯಿಂದ 48 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 485 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 349 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 30 ಸಾವನ್ನಪ್ಪಿದ್ದು, ಬುಧವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Read More

ಚಿಕ್ಕನಾಯಕನಹಳ್ಳಿ:       ಸೀಲ್‍ಡೌನ್ ಪ್ರದೇಶದಲ್ಲಿನ ನಿವಾಸಿಗಳಿಗೆ ಜೀವನೋಪಾಯದ ಅಗತ್ಯವಸ್ತು ಪೂರೈಸದೆ ನಿಲ್ರ್ಯಕ್ಷಿಸಲಾಗುತ್ತಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.       ಪಟ್ಟಣದ 10ನೇವಾರ್ಡ್‍ನ ಬ್ರಾಹ್ಮಣರಬೀದಿಯ ಪೂರ್ವದಿಕ್ಕಿನ ರಸ್ತೆಯನ್ನು ಕಳೆದೆರಡುದಿನದ ಹಿಂದೆ ಕೊರೊನಾ ಸೋಂಕು ಪತ್ತೆಯಾದ ಕಾರಣಕ್ಕೆ ಸೀಲ್‍ಡೌನ್ ಮಾಡಲಾಗಿತ್ತು.       ಆದರೆ ಸೀಲ್‍ಡೌನ್ ಆದ ನಂತರ ಅಲ್ಲಿರುವ ನಿವಾಸಿಗಳಿಗೆ ಜೀವನೋಪಾಯದ ಅಗತ್ಯವಸ್ತುಗಳನ್ನು ಸರಬರಾಜು ಮಾಡುವಲ್ಲಿ ಸ್ಥಳೀಯ ಪುರಸಭೆ ನಿಲ್ರ್ಯಕ್ಷವಹಿಸಿದ ಕಾರಣ ಕೆಲವರು ಸೀಲ್‍ಡೌನ್ ಪ್ರದೇಶದಿಂದ ಹೊರಕ್ಕೆ ತೆರಳಿ ತಮಗೆಬೇಕಾದ ದಿನಸಿ, ತರಕಾರಿ, ಔಷಧಿ, ಹಾಲು ಇತ್ಯಾದಿಗಳನ್ನು ತರಲಾರಂಭಿಸಿದರು.      ಈ ಓಡಾಟವನ್ನು ಗಮನಿಸಿದ ಕೆಲವರಿಂದ ದೂರುಹೋದ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸೀಲ್ದಾರ್ ಹಾಜರಾಗಿ ಸೀಲ್ಡೌನ್ ಪ್ರದೇಶದಲ್ಲಿರುವ ಜನರನ್ನುದ್ದೇಶಿಸಿ ಮಾತನಾಡಿ ನೀವು ಯಾವುದೇ ಕಾರಣಕ್ಕೆ ಹೊರಗೆಹೋಗುವ ಹಾಗಿಲ್ಲ, ನಿಮಗೇ ಏನಾದರೂ ಬೇಕಿದ್ದರೆ ಕಾವಲಿರುವ ಸಿಬ್ಬಂದಿಗಳಿಂದ ವಸ್ತುಗಳನ್ನು ತರಿಸಿಕೊಳ್ಳಬಹುದೆಂದರು. ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಸ್ಥಳೀಯರು ಇಲ್ಲಿ ಒಬ್ಬರೇ ಸಿಬ್ಬಂದಿ ಇದ್ದಾರೆ, ಅವರೂಸಹ ಸರಿಯಾಗಿ ಇರುವುದಿಲ್ಲ, ಇಲ್ಲಿ…

Read More