Author: News Desk Benkiyabale

ಮಧುಗಿರಿ :        ತಾಲೂಕಿನ ಪುರವರ ಹೋಬಳಿಯ ಹಂದ್ರಾಳು ಗ್ರಾಮದ ನಿವೃತ್ತ ಕೆ.ಎ.ಎಸ್. ಅಧಿಕಾರಿ ಹಾಗೂ ಖ್ಯಾತ ಕಥೆಗಾರ ಹಂದ್ರಾಳು ಕೇಶವರೆಡ್ಡಿ ಅವರ ತೋಟಕ್ಕೆ ಬುಧವಾರ ಮಧ್ಯಾಹ್ನ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಸುಮಾರು 35 ಲಕ್ಷ ಬೆಲೆ ಬಾಳುವ ತೋಟ ಸುಟ್ಟು ಭಸ್ಮವಾಗಿದೆ.       ಒಟ್ಟು 26 ಎಕರೆಯಲ್ಲಿ 15ಎಕರೆ ಮಾವು, 5 ಎಕರೆ ಸಪೋಟ, ಉಳಿದ 6 ಎಕರೆಯಲ್ಲಿ ಮಹಾಗಣಿ, ಹೆಬ್ಬೇವು, ನೇರಳೆ, ಹಲಸು ಇತರೆ ಗಿಡಗಳನ್ನು ಬೆಳೆಸಿದ್ದೆ, ಆದರೆ ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ನನ್ನ 13 ವರ್ಷದ ಮರ-ಗಿಡಗಳು ಸುಟ್ಟು ಭಸ್ಮವಾಗಿವೆ. ಈ ಗಿಡ-ಮರಗಳನ್ನು ಬೆಳೆಸಲು ನಾನು ಸುಮಾರು 25 ಲಕ್ಷ ಸಾಲ ಮಾಡಿದ್ದೆ, ಆದರೆ ಈಗ ತೋಟ ಕೆಲ ಗಿಡಗಳು ಹೊರತುಪಡಿಸಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿ, ಸುಮಾರು 35 ಲಕ್ಷ ನಷ್ಟವಾಗಿರುವುದಕ್ಕೆ ನನ್ನ ಕೈಕಾಲುಗಳು ಕುಸಿದು ಬಿದ್ದಂತಾಗಿದೆ. ನಾನು ನಿವೃತ್ತ ಅಧಿಕಾರಿಯಾಗಿದ್ದರೂ ಕೂಡ ನನ್ನ ಜಮೀನಿನ ರಸ್ತೆಗಾಗಿ ಹಲವು…

Read More

 ಹುಳಿಯಾರು :       ಹುಳಿಯಾರಿನ ಎಪಿಎಂಸಿಯಲ್ಲಿ ಸರ್ಕಾರದ ಬೆಂಬಲ ಬೆಲೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಚಿಕ್ಕನಾಯಕಹಳ್ಳಿ ತಹಸೀಲ್ದಾರ್ ಬಿ.ತೇಜಸ್ವಿನಿ ಅವರು ಬುಧವಾರ ಸಂಜೆ ದಿಡೀರ್ ಭೇಟಿ ನೀಡಿ ಖರೀದಿ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದರು.       ಈ ಸಂದರ್ಭದಲ್ಲಿ ರಾಗಿ ಬೆಳೆಗಾರರು ಭಾನುವಾರವೂ ಸಹ ಖರೀದಿ ಮಾಡುವಂತೆಯೂ, ಇರುವ ಕೌಂಟರ್ ಜೊತೆಗೆ ಮತ್ತೊಂದು ಕೌಂಟರ್ ತೆರೆಯುವಂತೆಯೂ ತಹಸೀಲ್ದಾರ್ ಬಳಿ ಮನವಿ ಮಾಡಿದರು. ಶಿರಾದಲ್ಲಿನ ವೇರ್‍ಹೌಸ್ ಲಭ್ಯತೆ ಮಾಹಿತಿ ಪಡೆದು ಹಾಗೂ ಹಮಾಲಿಗಳ ಸಹಕಾರ ಕೇಳಿ ಭಾನುವಾರವೂ ಖರೀದಿ ಜೊತೆಗೆ ನಿತ್ಯವೂ ಮತ್ತೊಂದು ಕೌಂಟರ್ ತೆರೆಯುವ ಭರವಸೆ ನೀಡಿದರು. ಹುಳಿಯಾರು ಖರೀದಿ ಕೇಂದ್ರದಲ್ಲಿ 4150 ರೈತರು ನೊಂದಣಿ ಮಾಡಿಸಿದ್ದು ಇದುವರೆವಿಗೂ 2300 ರೈತರಿಂದ 57 ಸಾವಿರ ಕ್ವಿಂಟಲ್ ರಾಗಿ ಖರೀದಿಸಲಾಗಿದೆ. ಸರ್ವರ್ ಸಮಸ್ಯೆ ಇದ್ದಾಗ ಮಾತ್ರ ಸ್ವಲ್ಪ ಖರೀದಿ ಪ್ರಕ್ರಿಯೆ ಸ್ಲೋ ಆಗುತ್ತದೆ. ಉಳಿದಂತೆ ಬಹಳ ವೇಗವಾಗಿ ಖರೀದಿ ಮಾಡಲಾಗುತ್ತಿದೆ. ನಿತ್ಯ ಐವತ್ತರವತ್ತು ರೈತರು ಬಂದರೆ…

Read More

ಚಿಕ್ಕನಾಯಕನಹಳ್ಳಿ:       ಎರಡು ಹಂತದ ಲಸಿಕಾ ಅಭಿಯಾನದಲ್ಲಿ ರಾಜ್ಯದಲ್ಲಿ ತುಮಕೂರು ಜಿಲ್ಲೆ ಪ್ರಥಮಸ್ಥಾನದಲ್ಲಿದ್ದು ಮೂರನೇ ಲಸಿಕೆ ಹಂತದಲ್ಲಿಯುಸಹ ನಮಗೆ ನೀಡಿದ ಗುರಿಯನ್ನು ಸಾಧಿಸಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂರನೇ ಹಂತದ ಲಸಿಕಾ ಅಭಿಯಾನದಲ್ಲಿ ತಾವೇ ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ ಕೇಂದ್ರ ಸರ್ಕಾರದ ತೀರ್ಮಾನದಂತೆ ಮೂರನೇ ಹಂತದ ಲಸಿಕಾ ಅಭಿಯಾನದಲ್ಲಿ 60ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ, ಅದರಲ್ಲೂ ಬಿಪಿ. ಮದುಮೇಹ, ಹೃದಯಸಂಬಂಧಿ ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರೂಸಹ ವೈದ್ಯರ ಸಲಹೆಯಂತೆ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಇದರಿಂದ ಯಾವುದೇ ತೊಂದರೆ ಇರುವುದಿಲ್ಲ, ಅಪಪ್ರಚಾರಕ್ಕೆ ಕಿವಿಕೊಡದೆ 60ವರ್ಷ ಮೇಲ್ಪಟ್ಟವರು ನೊಂದಣಿ ಮಾಡಿಸಿ ಲಸಿಕೆ ಪಡೆಯಿರಿ ಎಂದರು. ಖಾಸಗಿಯಾಗಿ ರೂ.250 ಶುಲ್ಕ ನಿಗಧಿಯಾಗಿದ್ದು ಅಲ್ಲಿಯೂಸಹ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ನಮಗೆ ಜಿಲ್ಲೆಗೆ 50 ಸಾವಿರ ಗುರಿಯಿದ್ದು ಈಗ 10 ಸಾವಿರ ವ್ಯಾಕ್ಸಿನ್ ಬಂದಿದೆ.…

Read More

ತುಮಕೂರು:      ಮಗು ಹುಟ್ಟಿದ ಕೂಡಲೇ ಶ್ರವಣ ದೋಷವನ್ನು ಪತ್ತೆಹಚ್ಚುವುದು ಮುಖ್ಯವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ತಿಳಿಸಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಬುಧವಾರ ಶ್ರವಣದೋಷ ನಿಯಂತ್ರಣದ ರಾಷ್ಟ್ರೀಯ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ “ವಿಶ್ವ ಶ್ರವಣ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಗು ಹುಟ್ಟಿದ ಕೂಡಲೇ ಶ್ರವಣ ದೋಷವನ್ನು ಪತ್ತೆ ಹಚ್ಚಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ/ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಹಾಗು ತಾಯಂದಿರಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.       ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ಅಧಿಕಾರಿ ಡಾ: ಮಹಿಮಾ ಮಾತನಾಡಿ, ಸೋಹಂ, ಬೆರಾ ಎಂಬ ಶ್ರವಣ ದೋಷ ಪತ್ತೆ ಹಚ್ಚುವ ಸಾಧನದಿಂದ ಹುಟ್ಟಿದ ಮಗುವಿನಲ್ಲಿರುವ ಶ್ರವಣ ದೋಷವನ್ನು ಪತ್ತೆ ಹಚ್ಚಬಹುದಾಗಿದೆ. ಅದೇ ರೀತಿ ಆಡಿಯೋ ಮೀಟರ್ ಬಳಸಿಕೊಂಡು ವಯಸ್ಕರು/ಹಿರಿಯರಲ್ಲಿರುವ ಶ್ರವಣ ದೋಷವನ್ನು ಪತ್ತೆಹಚ್ಚಬಹುದು. ಶ್ರವಣ ದೋಷವನ್ನು ನಿಯಂತ್ರಿಸುವಲ್ಲಿ…

Read More

ತುಮಕೂರು :        ಕೃಷಿಕರು ಸಾವಯವ ಪದ್ಧತಿಯನ್ನ ಅಳವಡಿಸಿಕೊಂಡು ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದರು. ಈ ಹಿಂದೆ ಸಿರಿಧಾನ್ಯಗಳು ಬಡವರ ಧಾನ್ಯಗಳಾಗಿದ್ದವು. ಆದರೆ ಇಂದು ಖಾಯಿಲೆಗಳ ಅಬ್ಬರದಿಂದ ಬಡವರ ಧಾನ್ಯಗಳು ಸಿರಿಧಾನ್ಯಗಳಾಗಿ ಮಾರ್ಪಟ್ಟಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಿಳಿಸಿದರು.       ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಆಯೋಜಿಸಿದ್ದ ಕೃಷಿ ಭವನ ಕಟ್ಟಡದ ಉದ್ಘಾಟನೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಕಾರ್ಯಕ್ರಮದಲ್ಲಿ ಕೃಷಿ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು, ಕೋವಿಡ್ ನಂತರ ಕೃಷಿ ಸುಧಾರಿಸಿದೆ. ಕೃಷಿ ಉಳಿದರೆ ರೈತರು ಉಳಿಯುತ್ತಾರೆ. ದೇಶ ಉಳಿಯುತ್ತದೆ. ಇಲ್ಲವಾದರೆ ದೇಶವೇ ನಾಶವಾಗುತ್ತದೆ.  ಇಂತಹ ಮಹತ್ವವಿರುವ ಕೃಷಿ ಕಾಯಕವನ್ನು ನಾವು ಮರೆಯುತ್ತಿದೇವೆ. ಇದು ತುಂಬಾ ನೋವಿನ ಸಂಗತಿ. ರೈತರು ಕೊಡುಗೈ ದಾನಿಗಳು. ದೇಶಕ್ಕೆ ಅನ್ನವನ್ನು ಕೊಡುತ್ತಿದ್ದಾರೆ. ಆದರೆ ಬದಲಾದ ವಾತಾವರಣದ ಸಮಯದಲ್ಲಿ ಇಂದು ಕೃಷಿ ಪದ್ಧತಿಯಲ್ಲಿ ಬದಲಾವಣೆ…

Read More

ಬರಗೂರು:      ಆಕಸ್ಮಿಕವಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಅದರ ಪಕ್ಕದಲ್ಲೇ ಕಟ್ಟಿ ಹಾಕಿದ್ದ ಎರಡು ಹಸುಗಳು ಸೇರಿದಂತೆ ಹುಲ್ಲು ಬಣವೆ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾದ ಕರುಣಾಜನಕ ಘಟನೆ ಶಿರಾ ತಾಲ್ಲೂಕು ಬರಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ.       ಮೃತ ಹಸುಗಳ ಮಾಲಿಕ ರೈತ ಕುಮಾರ್’ಗೆ ಹೈನುಗಾರಿಕೆಯೆ ಆರ್ಥಿಕತೆಗೆ ಆಧಾರವಾಗಿತ್ತು. ಹಾಲನ್ನು ಡೈರಿಗೆ ಹಾಕಿ ಜೀವನ ಸಾಗಿಸುತ್ತಿದ್ದ ಕುಮಾರ್ ಹಸುಗಳ ಮೇವಿಗಾಗಿ ಸುಮಾರು 45 ಸಾವಿರ ವೆಚ್ಚ ಮಾಡಿ ಮೂರು ಲೋಡು ಜೋಳದ ಸೆಪ್ಪೆ ಮತ್ತು ಕಡಳೆ ಬಳ್ಳಿಯನ್ನು ಅವರ ಮನೆಯ ಪಕ್ಕದಲ್ಲೆ ಬಣವೆ ಹಾಕಿಕೊಂಡಿದ್ದರು. ಸೋಮವಾರ ಸಂಜೆ 5.30ರ ವೇಳೆಗೆ ಆಕಸ್ಮಿಕವಾಗಿ ಹುಲ್ಲು ಬಳವೆಗೆ ಬೆಂಕಿ ಹೊತ್ತಿಕೊಂಡಿದೆ. ಊರ ಹೊರ ಭಾಗದಲ್ಲಿರುವ ಹುಲ್ಲು ಬಣವೆಗೆ ಬೆಂಕಿ ಹೊತ್ತಿಕೊಂಡಿರುವುದು ಬೇಗನೆ ಜನರಿಗೆ ಗೋಚರವಾಗಿಲ್ಲ. ಬೆಂಕಿಯ ಜ್ವಾಲೆಗಳು ಹೆಚ್ಚಳವಾದ ನಂತರ ಕಂಡ ಹಲವು ಮಂದಿ ಬೆಂಕಿ ಆರಿಸಲು ಮುಂದಾಗಿದ್ದಾರೆ, ಆದರೆ ಸಾಧ್ಯವಾಗಿಲ್ಲ.      …

Read More

ತುಮಕೂರು:      ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚಾಲನೆ ನೀಡಿದರು.      15 ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಜನರಿಗೆ ಕೃಷಿ, ತೋಟಗಾರಿಕೆ, ರೇμÉ್ಮ , ಆರೋಗ್ಯ, ಶಿಕ್ಷಣ, ಪೊಲೀಸ್ ಹೀಗೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ.       ಚಾಲನೆ ನೀಡಿದ ಬಳಿಕ ವಸ್ತುಪ್ರದರ್ಶನದಲ್ಲಿ ಅನಾವರಣಗೊಂಡಿದ್ದ ಪ್ರದರ್ಶನಗಳನ್ನು ಒಂದೊಂದಾಗಿಯೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರು ಜೊತೆಯಾಗಿ ವೀಕ್ಷಿಸಿದರು.ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ದಿವ್ಯಸಾನಿಧ್ಯವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊರೊನಾ ಕುರಿತ…

Read More

ಮಧುಗಿರಿ:       ತಾಲ್ಲೂಕಿನ ಜಯಮಂಗಲಿ ಕೃಷ್ಣ ಮೃಗ ವನ್ಯ ಧಾಮಕ್ಕೆ ಹೊಂದಿಕೊಂಡಿರುವ ಹುಲ್ಲುಗಾವಲು ಪ್ರದೇಶದಲ್ಲಿ ಭಾನುವಾರ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.       ಜಯಮಂಗಲಿ ಕೃಷ್ಣ ಮೃಗ ವನ್ಯಜೀವಿ ಧಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಕೃಷ್ಣ ಮೃಗಗಳು ವಾಸಿಸುತ್ತಿವೆ. ರಾಜ್ಯದ ಕೆಲವೇ ಕಡೆಗಳಲ್ಲಿ ಕಂಡು ಬರುವ ಅಪರೂಪದ ಪಕ್ಷಿ ಸಂಪತ್ತುಗಳನ್ನು ಇಲ್ಲಿ ಕಾಣಬಹುದಾಗಿದ್ದು, ದೇಶ ವಿದೇಶಗಳಿಂದ ಪಕ್ಷಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ.       ಇಂತಹ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ನೂರಾರು ಎಕರೆ ಹುಲ್ಲುಗಾವಲು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಗಾಹುತಿಯಾಗಿರುವ ಪ್ರದೇಶವು ಕೃಷ್ಣ ಮೃಗಗಳು ವಿಹರಿಸುವ ಹುಲ್ಲುಗಾವಲಾಗಿದ್ದು, ಕೃಷ್ಣ ಮೃಗಗಳ ಜೀವಕ್ಕೆ ಆಪತ್ತುಂಟಾಗಿದೆ. ನೂರಾರು ಸಂಖ್ಯೆಯಲ್ಲಿ ಪಕ್ಷಿಗಳು, ಅವುಗಳ ಮೊಟ್ಟೆ, ಮರಿಗಳು ಸುಟ್ಟು ಕರಕಲಾಗಿವೆ. ಬೆಂಕಿಯ ಕೆನ್ನಾಲಿಗೆಯು ರಸ್ತೆಗೂ ವ್ಯಾಪಿಸಿದೆ. ಸ್ಥಳೀಯರು ಬೆಂಕಿ ಗಮನಿಸಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರಾದರೂ ಗಂಟೆ ಕಳೆದರೂ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದಿರಲಿಲ್ಲ. ಬದಲಾಗಿ ಅಗ್ನಿ ಶಾಮಕ…

Read More

ಹುಳಿಯಾರು :        ಹುಳಿಯಾರು ಹೋಬಳಿಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು ಈ ಬಾರಿಯ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಅವರು ಹೇಳಿದರು.       ಹುಳಿಯಾರಿನ ಪಪಂ ಮಾಜಿ ಸದಸ್ಯ ಧನುಷ್ ರಂಗನಾಥ್ ಅವರ ಮನೆಯಲ್ಲಿ ನಡೆದ ಯುವ ಕಾಂಗ್ರಸ್ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.       ಟಿ.ಬಿ.ಜಯಚಂದ್ರ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ 4 ಬಾರಿಯೂ ಹುಳಿಯಾರು ಹೋಬಳಿ ಲೀಡ್ ಕೊಟ್ಟಿತ್ತು. ಕಳೆದ ಬಾರಿ ಜಯಚಂದ್ರ ಅವರ ಪುತ್ರ ಸಂತೋಷ್ ಸ್ಪರ್ಧಿಸಿದ್ದಾಗಲೂ ಹೆಚ್ಚು ಮತಗಳು ಈ ಹೋಬಳಿಯಿಂದ ಬಂದಿತ್ತು. ಹುಳಿಯಾರು ಗ್ರಾಮ ಪಂಚಾಯ್ತಿಗೂ ಸಹ ಕಾಂಗ್ರೆಸ್ ಬೆಂಬಲಿತರೇ ಹೆಚ್ಚು ಮಂದಿ ಗೆದ್ದು ಅಧಿಕಾರ ಹಿಡಿದಿದ್ದರು ಎಂದು ವಿವರಿಸಿದರು.      ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ 6 ತಿಂಗಳ ಒಳಗಾಗಿ ಚುನಾವಣೆ ಮಾಡಬೇಕಿದ್ದರೂ ಹುಳಿಯಾರು ಪಂಚಾಯ್ತಿಗೆ ಮೇಲ್ದರ್ಜೆಗೇರಿ ಎರಡ್ಮೂರು ವರ್ಷಗಳು…

Read More

ತುಮಕೂರು :       ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ಯಾರಾಮೆಡಿಕಲ್/ಫಾರ್ಮಸಿ/ನರ್ಸಿಂಗ್/ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಕುರಿತಂತೆ ಜಿಲ್ಲೆಯಲ್ಲಿನ ಪ್ಯಾರಾಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಹೊರ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳ ಮಾಹಿತಿ ಪಡೆದುಕೊಂಡು ಕಡ್ಡಾಯವಾಗಿ 24 ಗಂಟೆಯೊಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ನೆಗೆಟಿವ್ ಬಂದವರಿಗೆ ಮಾತ್ರ ಕಾಲೇಜು ಪ್ರವೇಶಾತಿ ನೀಡಬೇಕು. ಪರೀಕ್ಷೆ ಫಲಿತಾಂಶ ಬರುವವರೆಗೂ ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಶನ್ ಮಾಡಬೇಕು. ಆಯಾ ಕಾಲೇಜು ಆಡಳಿತವು ಕೇರಳ, ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳಿಂದ ಪ್ರಯಾಣದ ಮಾಹಿತಿ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಿಂದ “ನನಗೆ ಯಾವುದೇ ಕೋವಿಡ್ ಲಕ್ಷಣಗಳಿರುವುದಿಲ್ಲ ಮತ್ತು ಯಾವ ವ್ಯಕ್ತಿಯ ಜೊತೆಯು ಬೇರೆಯುವುದಿಲ್ಲ” ಎಂದು ಮುಚ್ಚಳಿಕೆ…

Read More