Author: News Desk Benkiyabale

ತುಮಕೂರು:       ತುಮಕೂರು ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕವಿತಾ ರಮೇಶ್ ಅವರು, ಬುಧವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಪ್ರಭಾರ ಅಧ್ಯಕ್ಷ ಶಾಂತಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.       ತಾಪಂ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕವಿತಾ ರಮೇಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕು ಪಂಚಾಯಿತಿ ಎಲ್ಲಾ ಸದಸ್ಯರ ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸುವೆ ಎಂದು ತಿಳಿಸಿದರು. ಕುಡಿಯುವ ನೀರಿಗೆ ಆಧ್ಯತೆ:       ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿ 1 ವರ್ಷವಿದ್ದು, ಈ ಅವಧಿಯಲ್ಲಿ ತಾಲ್ಲೂಕಿನಾದ್ಯಂತ ಪ್ರವಾಸ ಮಾಡಿ, ತಾಲ್ಲೂಕಿನಲ್ಲಿ ಉದ್ಬವಿಸಿರುವ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು, ಜೊತೆಗೆ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ಮಾಡುವುದಾಗಿ ಹೇಳಿದರು. ಭ್ರಷ್ಟಾಚಾರ ನಿರ್ಮೂಲನೆ:         ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದಿಂದ…

Read More

ಮಧುಗಿರಿ:       ಕರೋನದ ವೈರಸ್ ಹರಡದಂತೆ ಸರ್ಕಾರ ಲಾಕ್ ಡೌನ್, ಸೀಲ್ ಡೌನ್ ಮತ್ತಿತರರ ಕ್ರಮ ಕೈಗೊಳ್ಳುತ್ತಿದ್ದರೂ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ನಿಯಂತ್ರಿಸುವ ಅಂದರೆ ಚೈನ್ ಬ್ರೇಕ್ ಮಾಡಲು ನಾನಾ ಪ್ರಯತ್ನಗಳು ನಡೆಯುತ್ತಲೇ ಇದೆ.      ಮಧುಗಿರಿ ಪಟ್ಟಣದ ವಿಆರ್ ಎಸ್ ಟಿ ರಸ್ತೆಯಲ್ಲಿನ ಅಮೃತ ಟ್ರೇಡರ್ಸ್ ನ ಪಶು ಆಹಾರ ಮಳಿಗೆಯವರು ಮಾತ್ರ ಮಾರ್ಚ್ ಇಪ್ಪತ್ತನಾಲ್ಕು ರಿಂದ ಇಲ್ಲಿಯವರೆಗೂ ಸಾಮಾಜಿಕ ಅಂತರ ,ಮಾಸ್ಕ್ ಧರಿಸಿದವರಿಗೆ ಮಾತ್ರ ಪಶು ಆಹಾರದ ವಸ್ತುಗಳನ್ನು ನೀಡುತ್ತಿರುವುದು ಕಾಣಬಹುದು.ಇವರ ವ್ಯಾಪಾರ ಶೈಲಿ ವ್ಯಾಪಾರಸ್ಥರಿಗೆ ಮಾದರಿಯಾಗಿದೆ.       ಕೊರೋನಾದಿಂದ ದೂರ ಉಳಿಯಲು ಇವರು ಅಂಗಡಿ ಸುತ್ತಲೂ ಸೀಲ್ಡ್ ಮಾದರಿಯಲ್ಲಿ ಅಡ್ಡ ಪಟ್ಟಿಗಳನ್ನು ಕಟ್ಟಿಕೊಂಡು ರೈತರೇ ಗ್ರಾಹಕರಾಗಿರುವುದರಿಂದ ರೈತರ ಕ್ಷೇಮಕ್ಕಾಗಿ ಸ್ಯಾನಿಟೈಸರ್ ಮಾಡಿ ನಂತರ ವ್ಯಾಪಾರ ಮಾಡುತ್ತಾರೆ. ಇವರಲ್ಲಿ ನಾಲ್ವರು ಕೆಲಸ ಮಾಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯನ್ನು ಕೇಂದ್ರೀಕರಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗದು ರೂಪದಲ್ಲಿ ಹಣ ಪಡೆಯಲು ಪ್ರತ್ಯೇಕವಾಗಿ ಮಹಿಳೆಯೊಬ್ಬರನ್ನು…

Read More

ತುಮಕೂರು:       ಜಿಲ್ಲೆಯಲ್ಲಿ ಇಂದು 37 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 813 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 20, ಪಾವಗಡ-03, ಗುಬ್ಬಿ-3, ಕುಣಿಗಲ್-02 ಮಧುಗಿರಿ-1, ಶಿರಾ-06, ತಿಪಟೂರು-02 ಮಂದಿ ತಾಲೂಕಿನಲ್ಲಿ ಒಟ್ಟು 78 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಜಿಲ್ಲಾಸ್ಪತ್ರೆಯಿಂದ 25 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 436 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 349 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 28 ಸಾವನ್ನಪ್ಪಿದ್ದು, ಮಂಗಳವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ತುಮಕೂರು ಗ್ರಾಮಾಂತರ ಹಾಲಿ ಜೆಡಿಎಸ್‍ನ ಶಾಸಕ ಡಿ.ಸಿ.ಗೌರಿಶಂಕರ್ ವಿರುದ್ಧ ಜುಲೈ 18,2020 ರಂದು ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.       2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಕಲಿ ವಿಮಾ ಪಾಲಿಸಿಗಳನ್ನ ಸ್ವತಃ ತಯಾರು ಮಾಡಿ ಆ ಕ್ಷೇತ್ರದ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ವಿತರಿಸಿರುವ ಆರೋಪ ಕುರಿತು ಮೊಕದ್ದಮೆ ದಾಖಲು ಮಾಡಲಾಗಿದೆ.        2018 ರ ಚುನಾವಣೆಯ ಸಂದರ್ಭದಲ್ಲಿ ಕರ್ತವ್ಯ ನಿರತ ಚುನಾವಣಾ ಅಧಿಕಾರಿಗಳು ನಕಲಿ ಬಾಂಡ್ ಹಂಚಿಕೆ ಮಾಡುತ್ತಿದ್ದ ಜೆಡಿಎಸ್‍ನ ಮುಖಂಡೆ ಗೌರಮ್ಮ ಎನ್ನುವವರಿಂದ ಬಾಂಡ್‍ಗಳನ್ನು ವಶಪಡಿಸಿಕೊಂಡು ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಆ ಸಮಯದಲ್ಲಿಯೇ ದೂರು ದಾಖಲು ಮಾಡಲಾಗಿತ್ತು. ನಂತರ ತನಿಖೆಯ ಹಂತದಲ್ಲಿರುವಾಗ ಉಚ್ಛಾ ನ್ಯಾಯಾಲಯದಲ್ಲಿ ತನಿಖೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಥಮ ವರ್ತಮಾನ ವರದಿಯನ್ನ ರದ್ದುಗೊಳಿಸುವಂತೆ ಆರೋಪಿತರ ಪರವಾಗಿ ಉಚ್ಛಾನ್ಯಾಯಾಲಯದಲ್ಲಿ ಮನವಿ ಮಾಡಿ ಮಾನ್ಯ ಉಚ್ಛಾನ್ಯಾಯಾಲ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿತ್ತು.       ನಂತರ 2018ರ ಚುನಾಣೆಯಲ್ಲಿ ನಕಲಿ…

Read More

ಕೊರಟಗೆರೆ:       ಕರುನಾಡಿನ ಮುಖ್ಯಮಂತ್ರಿ ಕ್ವಾರೈಂಟೆನ್‍ಗೆ ಹೋಗಿದ್ದಾರೆ. ಆರೋಗ್ಯ ಸಚಿವರು ದೇವರೇ ಗತಿ ಅಂತಾ ಹೇಳ್ತಿದ್ದಾರೇ.. ಕೊರೊನಾ ವಿಚಾರವಾಗಿ ಒಬ್ಬೊಬ್ಬ ಸಚಿವ ಒಂದೊಂದು ರೀತಿಯ ವಿಭಿನ್ನ ಹೇಳಿಕೆ ನೀಡ್ತಿದ್ದಾರೇ.. ಕರ್ನಾಟಕದ ಜನರ ಆರೋಗ್ಯ ಪರಿಸ್ಥಿತಿ ಅರಿಯಲು ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಡಾ.ಜಿ.ಪರಮೇಶ್ವರ್ ಆರೋಪ ಮಾಡಿದರು.       ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆಯ ಸಭಾಂಗಣದಲ್ಲಿ ಇತ್ತೀಚಿಗೆ ಏರ್ಪಡಿಸಲಾಗಿದ್ದ ಕೊರೊನಾ ಹರಡುವಿಕೆ ತಡೆಯುವ ತುರ್ತುಸಭೆಯಲ್ಲಿ ಅಧಿಕಾರಿಗಳ ಚರ್ಚಿಸಿ ನಂತರ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.       ಕೊರೊನಾ ಹರಡುವಿಕೆ ತಡೆಯಲು ಕರ್ನಾಟಕ ಸರಕಾರದ ಸಮರ್ಪಕ ಮಾರ್ಗದರ್ಶನ ಇಲ್ಲದೇ ತುಮಕೂರು ಜಿಲ್ಲಾಡಳಿತ ಮತ್ತು ಕೊರಟಗೆರೆ ಕೊರೊನಾ ಆಡಳಿತ ಯಂತ್ರ ನಿಷ್ಕ್ರೀಯವಾಗಿದೆ. ರಾಜ್ಯ ಸರಕಾರ ಮತ್ತು ಆರೋಗ್ಯ ಇಲಾಖೆಯ ಸಚಿವರ ವಿಭಿನ್ನ ರೀತಿಯ ಹೇಳಿಕೆಯಿಂದ ಕೊರೊನಾ ಸಿಲ್‍ಡೌನ್, ಲಾಕ್‍ಡೌನ್ ಮತ್ತು ಕ್ವಾರೈಂಟೆನ್‍ಗೆ ಬೆಲೆಯೇ ಇಲ್ಲದಾಗಿದೆ ಎಂದು ಆರೋಪ ಮಾಡಿದರು.       ತುಮಕೂರು ಜಿಲ್ಲಾಡಳಿತ ಕೊರೊನಾ…

Read More

ತುಮಕೂರು:       ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹೆದರುತ್ತಿರುವ ಇಂದಿನ ದಿನಗಳಲ್ಲಿ ಶ್ರೇಯಸ್ ಎನರ್ಜಿ ಅಂಡ್ ಟೆಕ್ನಾಲಜಿಸ್ ಪ್ರವೈಟ್ ಲಿ ಕಂಪನಿಯವರು ಅಭಿವೃದ್ದಿ ಪಡಿಸಿರುವ ಸ್ಥಳಾಂತರಿಸಬಹುದಾದ ಐಸಿಯು ಜೊತೆಗಿನ ಐಸೋಲೇಷನ್ ವಾರ್ಡು ಅತ್ಯಂತ ಉಪಯುಕ್ತವಾಗಲಿದ್ದು, ಇದು ರೋಗಿಗಳ ಚಿಕಿತ್ಸೆಗೆ ಬಳಕೆಗೆ ಬರುವಂತಾ ಗಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಶ್ರೀಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ.       ಸಿದ್ದಗಂಗಾ ಕ್ಷೇತ್ರದಲ್ಲಿ ಶ್ರೇಯಸ್ ಎನರ್ಜಿ ಅಂಡ್ ಟೆಕ್ನಾಲಜಿಸ್ ಪ್ರವೈಟ್ ಲಿ ಕಂಪನಿಯವರಾದ ಮಂಜುನಾಥ್ ಮತ್ತು ಶ್ರೇಯಸ್ ಅವರು ಅಭಿವೃದ್ಧಿಪಡಿಸಿರುವ ಪೋರ್ಟಬಲ್ ಐಸೋಲೇಷನ್ ಕಂ ಐಸಿಯು ವಾರ್ಡು ಯೋಜನೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕಂಪನಿಯವರು ಹೇಳುವಂತೆ ಅತ್ಯಂತ ಅಧುನಿಕ ತಂತ್ರಜ್ಞಾನವನ್ನು ಬಳಸಿ, ಅತ್ಯಂತ ಗಂಭೀರ ಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳನ್ನು ವೈದ್ಯರು ತಮಗೆ ಯಾವುದೇ ಸೋಂಕು ಹರಡದ ರೀತಿ ಚಿಕಿತ್ಸೆ ಮಾಡಬಹುದಾಗಿದೆ.       ಈಗಾಗಲೇ ಸರಕಾರದ ಕೋವಿಡ್ ಟಾಸ್ಕಪೋರ್ಸ್‍ನಿಂದ, ಆರೋಗ್ಯ ಮಂತ್ರಿಗಳಿಂದ ತಾಂತ್ರಿಕವಾಗಿ ಶಿಫಾರಸ್ಸಾಗಿರುವ ಈ ಯೋಜನೆಯನ್ನು ಸರಕಾರ ಅಳವಡಿಸಿಕೊಂಡು…

Read More

ತುಮಕೂರು:       ಜಿಲ್ಲೆಯಲ್ಲಿ ಇಂದು 78 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 777 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 17, ಪಾವಗಡ-10 ಕುಣಿಗಲ್-24 ಮಧುಗಿರಿ-10, ಕೊರಗಟಗೆರೆ-08, ತುರುವೇಕೆರೆ-1, ಶಿರಾ-06, ತಿಪಟೂರು-02 ಮಂದಿ ತಾಲೂಕಿನಲ್ಲಿ ಒಟ್ಟು 78 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 53 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 411 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 341 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 26 ಸಾವನ್ನಪ್ಪಿದ್ದು, ಸೋಮುವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ಗುಬ್ಬಿ:       ಕೊರೊನಾ ತಡೆಗೆ ಸರ್ಕಾರವೇ ತಲೆ ಕೆಡಿಸಿಕೊಂಡು ಸರ್ಕಸ್ ಮಾಡುತ್ತಿದ್ದರೆ ಇತ್ತ ಜಿಲ್ಲಾ ಪಂಚಾಯತ್ ಉನ್ನತ ಅಧಿಕಾರಿಗಳು ಬೇಲಿಯೇ ಎದ್ದು ಹೊಲ ಮೇದಂತೆ ಎಂಬ ಗಾದೆಗೆ ತಕ್ಕನಾಗಿ ಕೊರೋನಾ ಸೋಂಕಿನ ಅಧಿಕಾರಿಯ ಸಂಪರ್ಕಿತ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ತಮ್ಮ ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ.        ಇತ್ತೀಚೆಗೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಪಂ ಯೋಜನಾ ನಿರ್ದೇಶಕ ಮಹಮದ್ ಮುಬೀನ್ ಮತ್ತು ಸಹಾಯಕ ಯೋಜನಾ ನಿರ್ದೇಶಕ ಈಶ್ವರ್ ಪ್ರಸಾದ್ ತಮ್ಮ ಕರ್ತವ್ಯ ನಿಷ್ಠೆ ತೋರಲು ಮುಂದಾಗಿ ತಾವು ಹೋಂ ಕ್ವಾರೆಂಟೈನ್‍ನಲ್ಲಿರಬೇಕಿರುವ ಬಗ್ಗೆ ಮರೆತಿದ್ದಾರಾ ಅಥವಾ ನಮ್ಮನ್ನು ಯಾರು ಕೇಳುತ್ತಾರೆ ಎಂಬ ಬೇಜವಾಬ್ದಾರಿತನವಾ ಎಂಬುದು ಸಭೆಯಲ್ಲಿನ ಅಧಿಕಾರಿಗಳ ಮಧ್ಯೆ ಗುಸುಗುಸು ಚರ್ಚೆ ನಡೆದಿದೆ.       ತುಮಕೂರು ಜಿಲ್ಲಾ ಪಂಚಾಯಿತಿ ಡಿಎಸ್-1 ಅಧಿಕಾರಿಯೊಬ್ಬರಿಗೆ ಕೊರೋನಾ ಪಾಸಿಟೀವ್ ದೃಢವಾದ ಹಿನ್ನಲೆ…

Read More

ತುಮಕೂರು:       ನಗರದಲ್ಲಿ ದಿನೇ ದಿನೇ ಕೊರೋನ ವೈರಸ್ ಸೋಂಕು ಹೆಚ್ಚುತ್ತಿರುವುದರಿಂದ ವಿತರಕರು ಹಾಗೂ ಸಿಬ್ಬಂದಿ ಹಿತದೃಷ್ಠಿಯಿಂದ ನಗರದಲ್ಲಿ ಒಂದು ವಾರಗಳ ಕಾಲ ಸ್ವಯಂ ಪ್ರೇರಿತ ಲಾಕ್‍ಡೌನ್ ಮಾಡಲು ನಿರ್ಧರಿಸಿ ತುಮಕೂರು ತಹಶೀಲ್ದಾರ್ ಮೋಹನ್‍ಕುಮಾರ್ ಅವರ ಮೂಲಕ ತುಮಕೂರು ವಿತರಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.         ಈ ಸಂದರ್ಭದಲ್ಲಿ ಮಾತನಾಡಿದ ತುಮಕೂರು ವಿತರಕರ ಸಂಘದ ಅಧ್ಯಕ್ಷ ನವೀನ್‍ಕುಮಾರ್, ಕೊರೋನ ವೈರಸ್ ನಮ್ಮ ದೇಶದಲ್ಲೇ ಅಲ್ಲ, ಇಡೀ ವಿಶ್ವಕ್ಕೇ ವ್ಯಾಪಿಸಿದೆ. ಕಳೆದ ಮಾರ್ಚ್ 24 ರಿಂದ ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಲಾಕ್ ಡೌನ್ ಮಾಡಿದ್ದರೂ ಸಹ ಸೋಂಕು ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಕೊರೋನ ವೈರಸ್ ನಿಂದ ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ ಈ ನಿಟ್ಟಿನಲ್ಲಿ ನಮ್ಮ ವಿತರಕರು ಮತ್ತು ಸಿಬ್ಬಂದಿ ವರ್ಗದ ಹಿತದೃಷ್ಠಿಯಿಂದ ಜು.19ರಿಂದ ಜು.26ರವರೆಗೆ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದರು.  …

Read More

ಚಿಕ್ಕನಾಯಕನಹಳ್ಳಿ :        ಚಿಕ್ಕನಾಯಕನಹಳ್ಳಿ ಠಾಣೆಯ 55 ವರ್ಷದ ಎಎಸ್‍ಐಗೆ ಸೋಂಕು ಕಾಣಿಸಿರುವ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.        ಪಟ್ಟಣದ ಬೇಕರಿ ಮಾಲೀಕ, ಬ್ರಾಹ್ಮಣರ ಬೀದಿ ನಿವಾಸಿ 30 ವರ್ಷದ ವ್ಯಕ್ತಿ, ಪಟ್ಟಣದ 28ವರ್ಷದ ಯುವಕ, ಕಾಡೇನಹಳ್ಳಿಯ 38 ವರ್ಷದ ಮಹಿಳೆ, ಅರಸೀಕೆರೆ ಗಾರ್ಮೆಂಟ್ಸ್‍ಗೆ ಕೆಲಸಕ್ಕೆ ಹೋಗುತ್ತಿದ್ದ 22 ವರ್ಷದ ಹಂದನಕೆರೆ ಯುವತಿಗೂ ಸೋಂಕು ತಗುಲಿದೆ. ಅಂತ್ಯಸಂಸ್ಕಾರಕ್ಕೆ ಜಾಗ ಗುರುತಿಸಿ: ಈಗಾಗಲೇ ರಾಜ್ಯಸರ್ಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋವಿಡ್-19 ತಡೆಗಟ್ಟುವ ಹಾಗೂ ಇದರಿಂದಾಗುವ ದುಷ್ಪರಿಣಾಮಗಳನ್ನು ನಿಯಂತ್ರಿಸುವ ಹೊಣೆ ನೀಡಿದೆ. ನಗರ ಸೇರಿ ತುಮಕೂರು ತಾಲೂಕಿನಲ್ಲಿ ಮೃತಪಡುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನರದಲ್ಲಿ ಎಲ್ಲ ಧರ್ಮಿಯರು ವಾಸವಿದ್ದು ಹತ್ತಿರವಾದ ಸೂಕ್ತ ಸ್ಥಳ ಗುರುತಿಸಿ ಸೋಂಕಿತ ಮೃತರ ಅಂತಿಮ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಶಾಸಕ ಡಾ.ಕೆ.ರಫೀಕ್ ಅಹ್ಮದ್ ಮನವಿ ಮಾಡಿದ್ದಾರೆ.

Read More