Author: News Desk Benkiyabale

ತುಮಕೂರು:       ಜಿಲ್ಲೆಯಲ್ಲಿ 23 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 16, ಚಿಕ್ಕನಾಯಕನಹಳ್ಳಿ-1, ಕೊರಟಗೆರೆ-2 ಕುಣಿಗಲ್-3 ಮಂದಿ ಗುಬ್ಬಿ-1 ಒಟ್ಟು 23 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಜಿಲ್ಲಾಸ್ಪತ್ರೆಯಿಂದ 20 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 287 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 346 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 20 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ಚಿಕ್ಕನಾಯಕನಹಳ್ಳಿ:       ತಾಲ್ಲೂಕಿನ ಮೂಲದ ವೃದ್ಧನೊಬ್ಬ ಬೆಂಗಳೂರಿನಿಂದ ಸ್ವಂತ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದು, ನಂತರ ಗ್ರಾಮಕ್ಕೆ ಪ್ರವೇಶನೀಡದ ಕಾರಣ ಬೆಂಗಳೂರಿಗೆ ಹಿಂತಿರುಗುವ ಸಂದರ್ಭದಲ್ಲಿ ಮರಣಹೊಂದಿದ್ದಾನೆ ಎಂಬ ಸುದ್ದಿಯಿಂದ ಗ್ರಾಮಗಳಲ್ಲಿ ಆತಂಕ ಮನೆಮಾಡಿದೆ.        ತಾಲ್ಲೂಕಿನ ಕುಪ್ಪೂರು ಪಂಚಾಯಿತಿಯ ದಿಬ್ಬದಹಳ್ಳಿಯ ಮೂಲದ ರಾಜಣ್ಣ(65) ಎಂಬುವರು ಬೆಂಗಳೂರಿನಲ್ಲಿ ತಮ್ಮ ಮಕ್ಕಳ ಮನೆಯಲ್ಲಿದ್ದರು. ಈಚೆಗೆ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾದ ಕಾರಣಕ್ಕೆ ಊರಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ಕೆಲವು ಸಮಯ ಇರಲು ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದರು. ಬುಧವಾರ ಬೆಂಗಳೂರಿನಿಂದ ಚಿ.ನಾ. ಹಳ್ಳಿಗೆ ಬಂದು, ಇಲ್ಲಿಂದ ದಿಬ್ಬದಹಳ್ಳಿಗೆ ತೆರಳಲು ವಾಹನವಿರದ ಕಾರಣ ನಡೆದುಕೊಂಡೆ ಪಯಣಬೆಳೆಸಿದರು. ಆದರೆ ಊರಿನ ಸಮೀಪದ ಕುರುಬಳ್ಳಿಗೆ ಬಂದಾಗ ವಿಷಯತಿಳಿದ ಈತನ ನೆಂಟರು ಇವರನ್ನು ತಮ್ಮ ಮನೆಗೆ ಬರುವುದಕ್ಕೆ ಅಸಮ್ಮತಿ ವ್ಯಕ್ತವಾದ ಹಿನ್ನಲೆಯಲ್ಲಿ ಕುರುಬರಳ್ಳಿಯ ತಂಗುದಾಣದಲ್ಲಿಯೇ ವಿಶ್ರಾಂತಿ ಪಡೆದರು.        ಈ ಸಮಯದಲ್ಲಿ ಈ ಗ್ರಾಮದ ಕೆಲವರೊಂದಿಗೆ ಮಾತನಾಡಿದ್ದರು. ಇವರಿಗೆ ಉಬ್ಬಸವಿದ್ದಕಾರಣ ತೀವ್ರ ನಿತ್ರಾಣರಾಗಿದ್ದ ಕಾರಣ ಗ್ರಾಮಸ್ಥರು ಕೋವಿಡ್19…

Read More

ತುಮಕೂರು:       ರೈಲ್ವೆ ಖಾಸಗೀಕರಣದ ಭಾಗವಾಗಿ 109 ರೈಲುಗಳನ್ನು ಖಾಸಗಿಯವರಿಗೆ ವಹಿಸಲು ತೀರ್ಮಾನ ಕೈಗೊಂಡಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ-ಜನಪರ ಸಂಘಟನೆಗಳ ಮುಖಂಡರು ತುಮಕೂರಿನ ರೈಲ್ವೆ ನಿಲ್ದಾಣದ ಎದುರು ಜುಲೈ 17ರಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.       ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ 175 ವರ್ಷ ಹಳೆಯದಾದ 2 ಲಕ್ಷ ಕೋಟಿ ಆಸ್ತಿಯುಳ್ಳ 13 ಸಾವಿರ ಪ್ಯಾಸೆಂಜರ್ ಟ್ರೈನ್‍ಗಳನ್ನು ಓಡಿಸುವ ಬಡಜನರ ಸಾರಿಗೆ ಸಾಧನವಾದ ಜನತೆಯ ತೆರಿಗೆಯಲ್ಲಿ ಕಟ್ಟಲ್ಪಟ್ಟ ರೈಲ್ವೆಯನ್ನು ಖಾಸಗೀಕರಣ ಮಾಡುವ ಕ್ರಮ ದೇಶವಿರೋಧಿಯಾದುದು ಎಂದು ಆರೋಪಿಸಿದರು. ಇದನ್ನು ಜನಪರ ಸಂಘಟನೆಗಳು ವಿರೋಧಿಸಬೇಕು ಎಂದರು.        ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಿ.ಉಮೇಶ್ ಬಡವರ ರಥ ರೈಲ್ವೆ ಖಾಸಗೀಕರಣ ಮಾಡಬಾರದು. ಬಿಜೆಪಿ ನಿರಂತರವಾಗಿ ದೇಶದ ಆಸ್ತಿಯನ್ನು ಮಾರುತ್ತಿದೆ ಎಂದು ಹೇಳಿದರು.       ಜನಸಂಗ್ರಾಮ…

Read More

ತುಮಕೂರು:       ಜಿಲ್ಲೆಯಲ್ಲಿ 18 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 630ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 7, ಚಿಕ್ಕನಾಯಕನಹಳ್ಳಿ-5, ಕುಣಿಗಲ್-3 ಮಂದಿ ಹಾಗೂ ತಿಪಟೂರು, ಗುಬ್ಬಿ, ತುರುವೇಕೆರೆ ತಾಲೂಕಿನಲ್ಲಿ ತಲಾ ಒಬ್ಬರು ಸೇರಿದಂತೆ ಒಟ್ಟು 18 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಜಿಲ್ಲಾಸ್ಪತ್ರೆಯಿಂದ 45 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 267 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 345 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 18 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

 ಚಿಕ್ಕನಾಯಕನಹಳ್ಳಿ:       ಮದ್ಯವನ್ನು ಕಳ್ಳಹಾದಿಯಲ್ಲಿ ಗ್ರಾಮಕ್ಕೆ ತಂದು ಅಕ್ರಮವಾಗಿ ಮಾರುತ್ತಿದ್ದ ಕೃತ್ಯವನ್ನು ಮಾಲು ಸಮೇತ ಬಯಲಿಗೆಳೆದು ಕಾನೂನುಕ್ರಮ ಕೈಗೊಳ್ಳುವಂತೆ ತಾಲ್ಲೂಕಿನ ಜಾಣೇಹಾರ್ ಗ್ರಾಮದ ಮಹಿಳೆಯರು ದೂರು ಸಲ್ಲಿಸಿದ್ದಾರೆ.       ತಾಲ್ಲೂಕಿನ ಕಂದಿಕೆರೆ ಹೋಬಳಿ ಜಾಣೆಹಾರ್ ಗ್ರಾಮ ಹಿಂದುಳಿದ ಪ್ರದೇಶವಾಗಿದ್ದು, ಈ ಗ್ರಾಮದಲ್ಲಿ ಈಹಿಂದೆ ಧರ್ಮಲಿಂಗಯ್ಯ ಎಂಬುವನು ಅಕ್ರಮವಾಗಿ ಮದ್ಯಮಾರಾಟ ಮಾಡಿ ಗ್ರಾಮದ ಸ್ವಾಸ್ಥ್ಯಕ್ಕೆ ಧಕ್ಕೆಯನ್ನು ತಂದಿದ್ದನು. ಇದನ್ನು ಮನಗಂಡು ಗ್ರಾಮದ ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಪ್ರತಿಭಟನೆ ಮಾಡಿ ದೂರುನೀಡಿ ಮದ್ಯಮಾರಾಟವನ್ನು ತಡೆಹಿಡಿದಿದ್ದರು.       ಆದರೆ ಆದೇ ವ್ಯಕ್ತಿ ಮತ್ತೆ ಈಚೆಗೆ ಸರಿರಾತ್ರಿಯಲ್ಲಿ ಗ್ರಾಮದ ಬೇಲಿಗಳಲ್ಲಿ ಮದ್ಯದ ದಾಸ್ತಾನನ್ನು ಬಚ್ಚಿಟ್ಟು, ನಂತರ ಗುಟ್ಟಾಗೆ ಬೀದಿಬದಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಮತ್ತೆ ಆರಂಭಿಸಿದ್ದನು. ಈ ವಿದ್ಯಮಾನವನ್ನರಿತ ಗ್ರಾಮದ ಮಹಿಳೆಯರು ಕಳೆದ ಸೋಮವಾರ ರಾತ್ರಿ 11 ಗಂಟೆಗೆ ಹೊಂಚುಹಾಕಿ ಮಾಲುಸಮೇತ ಬರುತ್ತಿದ್ದವನ ಮೇಲೆ ಆಕ್ರಮಣ ಮಾಡಿದರು. ಇದರಿಂದ ಗಾಬರಿಗೊಂಡ ಧರ್ಮಲಿಂಗಯ್ಯನು ಮದ್ಯದ ಪೆಟ್ಟಿಗೆ…

Read More

ಚಿಕ್ಕನಾಯಕನಹಳ್ಳಿ:       ಸೀಲ್‍ಡೌನ್‍ಗೆ ಪ್ರತಿರೋಧ ಒಡ್ಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕೋವಿಡ್ ನಿಯಂತ್ರಣದ ಹೋರಾಟಕ್ಕೆ ಸಹಕರಿಸಿದ್ದವರ ಮೇಲೆ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.       ತಾಲ್ಲೂಕಿನ ಗೋಡೆಕೆರೆಹಟ್ಟಿಯಲ್ಲಿ ಈವರೆಗೆ 15 ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸೋಂಕಿತರನ್ನು ಕ್ವಾರಂಟೈನ್‍ಗೆ ಒಳಪಡಿಸಲು ಮುಂದಾದ ತಾಲ್ಲೂಕು ಆಡಳಿತಕ್ಕೆ ಸ್ಥಳೀಯರು ಪ್ರತಿರೋಧ ಒಡ್ಡಿ ತಹಸೀಲ್ದಾರ್ ರರನ್ನು ಸೇರಿದಂತೆ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಅವಾಚ್ಯಶಬ್ದಗಳಿಂದ ನಿಂದಿಸಿದ್ದರು ಹಾಗೂ ಸೀಲ್‍ಡೌನ್ ಮಾಡಲಾಗಿದ್ದ ವ್ಯವಸ್ಥೆಯನ್ನು ಕಿತ್ತುಹಾಕಿದ್ದರು.       ಈಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್ ಗೋಡೆಕೆರೆಹಟ್ಟಿಗೆ ಭೇಟಿ ನೀಡಿ ಸ್ಥಳೀಯರಿಗೆ ಪರಿಸ್ಥಿತಿಯ ಮನವರಿಕೆ ಮಾಡಿದರು.       ಹಾಗೂ ಕೊರೊನಾ ಹೋರಾಟದಲ್ಲಿ ಶ್ರಮಿಸುತ್ತಿರುವ ಸರ್ಕಾರಿ ಇಲಾಖೆಗಲ ಸಿಬ್ಬಂದಿಯ ರಕ್ಷಣೆ ನನ್ನ ಹೊಣೆಗಾರಿಕೆಯಾಗಿದ್ದು, ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ನಿಧ್ರ್ಯಾಕ್ಷಣ್ಯಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಕೋರೊನಾ ಸೋಂಕಿತ ನಿಯಂತ್ರಣದ ಹೋರಾಟದಲ್ಲಿ ಎಲ್ಲರೂ ಶಾಂತಿಯಿಂದ ಸಹಕರಿಸಬೇಕೆಂದು ತಿಳಿಸಿದರು.  …

Read More

ಮಧುಗಿರಿ:       ಮುಂಗಾರು ಹಂಗಾಮಿನಲ್ಲಿ ಮೂಬೈಲ್ ಆಫ್ ಮೂಲಕ ಜಿಐಎಸ್ ಮತ್ತು ಜಿಪಿಎಸ್ ಬಳಸಿ ಮುಂಗಾರು ಬೆಳೆ ಸಮೀಕ್ಷೆ ಮಾಡಿದ ಕೆಲ ಪಿಆರ್‍ಗಳಿಗೆ ಹಣ ನೀಡಿಲ್ಲಾ ಎಂದು ಬೆಳೆ ಸಮೀಕ್ಷೆ ಮಾಡಿದ ಪಿಆರ್‍ಗಳು ಆರೋಪಿಸಿದ್ದಾರೆ.       ಮಧುಗಿರಿಯ ವ್ಯಾಪ್ತಿಯಲ್ಲಿ ಕಳೆದ ವರ್ಷ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆಯ ನೇತೃತ್ವದಲ್ಲಿ ಖಾಸಗಿ ವ್ಯಕ್ತಿಗಳಿಂದ ಮೊಬೈಲ್ ಆಪ್ ಮೂಲಕ ಮುಂಗಾರು ಹಾಗು ಹಿಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲಾಗಿತ್ತು.       ಖಾಸಗಿ ಪಿಆರ್‍ಗಳು ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಂಡು ಪ್ರತಿ ಸರ್ವೆ ನಂಬರ್‍ನ ಎಲ್ಲಾ ಫ್ಲಾಟ್‍ಗಳ ತೆರಳಿ ಬೆಳೆ ಇದ್ದರೆ ಬೆಳೆಯ ಮಾಹಿತಿಯನ್ನು ಫೋಟೋ ಸಹಿತ ಅಪ್ಲೋಡ್ ಮಾಡಿದ್ದಾರೆ, ಇದರಿಂದ ಎಲ್ಲಿ ಮತ್ತು ಯಾವ ಬೆಳೆ ಬೆಳೆಯಲಾಗಿದೆ ಎಂಬ ಮಾಹಿತಿಯೊಂದಿಗೆ ಸಮೀಕ್ಷೆಯಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.       ಪ್ರತಿ ಸರ್ವೆ ನಂಬರ್‍ಗೆ ಇಂತಿಷ್ಟು…

Read More

ಗುಬ್ಬಿ:      ಸೀಲ್‍ಡೌನ್ ಪ್ರದೇಶದಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸುವ ಜತೆಗೆ ಕೊರೋನಾ ವಾರಿಯರ್ಸ್‍ಗಳಾದ ಆಶಾ ಕಾರ್ಯಕರ್ತೆಯರ ಬವಣೆ ಆಲಿಸುವ ಕೆಲಸ ಸೇವೆಗೆ ಅರ್ಥ ನೀಡಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ತಿಳಿಸಿದರು.       ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ವಿಎಸ್‍ಎಸ್‍ಎನ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾದ ದಿನಸಿ ಪದಾರ್ಥಗಳ ಕಿಟ್ ನೀಡಿ ಮಾತನಾಡಿದ ಅವರು ದೊಡ್ಡಗುಣಿ ಭಾಗದಲ್ಲಿ ಎರಡು ಕೊರೋನಾ ಪಾಸಿಟೀವ್ ಪ್ರಕರಣ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಈ ವಾರಿಯರ್ಸ್‍ಗಳ ಸೇವೆ ಸ್ಮರಣೀಯ. ಅವರ ಶ್ರಮದ ಫಲ ಮತ್ತೇ ಯಾವುದೇ ಪ್ರಕರಣ ಈ ಭಾಗದಲ್ಲಿ ಕಂಡಿಲ್ಲ ಎಂದು ಶ್ಲಾಘಿಸಿದರು.       ಕೊರೋನಾ ವೈರಸ್ ಗ್ರಾಮೀಣ ಭಾಗದಲ್ಲಿ ಕಾಡುತ್ತಿದೆ. ಮುಗ್ದ ಜನರ ಬದುಕಿನಲ್ಲಿ ಆವಾಂತರ ಹುಟ್ಟಿಸುವ ಈ ವೈರಾಣು ತಡೆಗೆ ಅಗತ್ಯ ಜಾಗೃತಿ ಕ್ರಮವನ್ನು ಸ್ವಯಂಪ್ರೇರಿತರಾಗಿ ಜನರು ಅನುಸರಿಸಬೇಕಿದೆ. ಈ ಸಂದರ್ಭದಲ್ಲಿ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಆದರೆ ಆಶಾ…

Read More

ಮಧುಗಿರಿ:       ಪರಿಶಿಷ್ಟ ಜಾತಿಯವರು ಉಳುಮೆ ಮಾಡುತ್ತಿದ್ದ ಸಾಗುವಳಿ ಜಮೀನಿನಲ್ಲಿ ಪಣ್ಣೇನಹಳ್ಳಿ ಗ್ರಾಮದ ಅನ್ಯಕೋಮಿನ ಕೆಲವರು ದೌರ್ಜನ್ಯ ನಡೆಸಿದ್ದಾರೆಂದು ದಲಿತ ಮುಖಂಡರು ಆರೋಪಿಸಿ ಮಧುಗಿರಿ ಉಪವಿಭಾಗಧಿಕಾರಿ ಡಾ.ಕೆ.ನಂದಿನಿದೇವಿರವರಿಗೆ ಮನವಿ ಸಲ್ಲಿಸಿದರು.       ಪಟ್ಟಣದ ಉಪವಿಭಾಗಧಿಕಾರಿಗಳ ಕಛೇರಿ ಮುಂದೆ ಆಗಮಿಸಿದ ಕೊರಟಗೆರೆ ತಾಲೂಕಿನ ದಲಿತ ಮುಖಂಡರು ನಮ್ಮ ಬಡ ರೈತರಿಗೆ ಆನ್ಯಾಯವೆಸಗಿದ್ದು ತೊಗರಿಘಟ್ಟ ಗ್ರಾಮದ ನಮ್ಮ ಪರಿಶಿಷ್ಟ ಜಾತಿಯವರು ಇಲ್ಲಿಗೆ ಸುಮಾರು 30-40 ವರ್ಷಗಳಿಂದ ಸರ್ವೆ ನಂಬರ್ 24 ರಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದು ಸರ್ಕಾರಿ ನಿಯಮಾವಳಿಯಂತೆ 2017-18 ನೇ ಸಾಲಿನಲ್ಲಿ ಬಗರ್ ಹುಕ್ಕುಂ ಸಮಿತಿಯಿಂದ ಸುಮಾರು 15 ಕುಟುಂಬಗಳಿಗೆ ಸಾಗುವಳಿ ಪತ್ರಗಳನ್ನು ಕೊರಟಗೆರೆ ತಹಶಿಲ್ದಾರ್ ರವರು ನೀಡಿರುತ್ತಾರೆ.       ಇದರನ್ವವಾಗಿ ನಮ್ಮ ಬಡ ಕುಟುಂಬಗಳು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ದಲಿತರ ಜಮೀನುಗಳ ಮೇಲೆ ಕಣ್ಣು ಹಾಕಿರುವ ಕೆಲವರು ಉದ್ದೇಶವಾಗಿ ಜುಲೈ 15 ತಾರೀಖು ಪಣ್ಣೇನಹಳ್ಳಿಯ ಅನ್ಯ…

Read More

 ತುಮಕೂರು :       ಜಿಲ್ಲೆಯಲ್ಲಿಂದು 15 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು ತಾಲ್ಲೂಕಿನಲ್ಲಿ 12 ಮಂದಿ ಹಾಗೂ ತಿಪಟೂರು, ಶಿರಾ, ಗುಬ್ಬಿ ತಲಾ ಒಬ್ಬರು ಸೇರಿದಂತೆ ಒಟ್ಟು 15 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.       ಇಂದು ಜಿಲ್ಲಾಸ್ಪತ್ರೆಯಿಂದ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 222 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 18 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More