Author: News Desk Benkiyabale

ತುಮಕೂರು:       ಹೊರದೇಶಗಳಿಂದ ಕೇಂದ್ರ ಸರ್ಕಾರ ಹಾಲು ಉತ್ಪನ್ನಗಳ ತರಿಸಿಕೊಳ್ಳುವುದರಿಂದ ದೇಶೀಯ ಹಾಲು ಉತ್ಪಾದಕರಿಗೆ ತೊಂದರೆಯಾಗಲಿದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.       ತುಮಕೂರು ಹಾಲು ಒಕ್ಕೂಟಕ್ಕೆ ಭೇಟಿ ನೀಡಿದ ಸಚಿವರು, ಹಾಲು ಸಂಸ್ಕರಣಾ ಘಟಕದ ಪರಿಶೀಲನೆ ನಡೆಸಿ ಅವರು ಮಾತನಾಡಿದರು.       ಕೋವಿಡ್-19 ಸಾಂಕ್ರಾಮಿಕ ರೋಗದಿಂದ ನಂದಿನಿ ಹಾಲಿನ ಮಾರಾಟ ಗಣನೀಯವಾಗಿ ಕಡಿಮೆಯಾಗಿ ನಷ್ಟ ಉಂಟಾಗಿದೆ. ಮೈಸೂರು ಹಾಗೂ ತುಮಕೂರು ಹಾಲಿನ ಡೈರಿಗಳಿಗೆ ಭೇಟಿ ನೀಡಿದಾಗ ಇದೇ ಸಮಸ್ಯೆ ತಲೆದೋರಿದೆ. ಡೈರಿಯಲ್ಲಿ ತುಪ್ಪ ಹಾಗೂ ಹಾಲಿನ ಪುಡಿಯು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಿದ್ದು, ಹಾಗೆ ಉಳಿದಿದ್ದು ಮಾರಾಟವಾಗುತ್ತಿಲ್ಲ. ಈ ಕುರಿತು ಕೆಎಂಎಫ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.       ತುಮಕೂರು ಹಾಲು ಒಕ್ಕೂಟದಲ್ಲಿ 154 ಕೋಟಿ ರೂ.ಗಳ ಮೆಗಾ ಡೈರಿ ನಿರ್ಮಾಣಕ್ಕೆ ಮನವಿ ಮಾಡಿದ್ದು, ಕೋವಿಡ್-19 ನಿಯಂತ್ರಣಕ್ಕೆ ಬಂದ…

Read More

ತುಮಕೂರು :      ಜಿಲ್ಲೆಯಲ್ಲಿಂದು 32 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 597 ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.      ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 17, ಚಿಕ್ಕನಾಯಕನಹಳ್ಳಿ -6, ಮಧುಗಿರಿ-8, ಕೊರಟಗೆರೆ -1 ಸೇರಿ ಒಟ್ಟು 32 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಈವರೆಗೆ 213 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 367 ಸಕ್ರಿಯ ಪ್ರಕರಣಗಳಿದ್ದು, ಇಂದು 58 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.      ಈವರೆಗೆ 17 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಧುಗಿರಿ:       ಹೋಂ ಕ್ವಾರಂಟೈನ್‍ನಲ್ಲಿರುವವರು ಸಮುದಾಯದಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದರೆ, ಅಂತಹವರನ್ನು ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪತ್ತೆ ಹಚ್ಚಿ ಅವರುಗಳ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.       ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಧುಗಿರಿ ತಾಲೂಕಿನ ಕೋವಿಡ್ 19 ನಿಯಂತ್ರಣದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಸೋಕಿತ ವ್ಯಕ್ತಿಯ ಕೋವಿಡ್ ವರದಿ ಬಂದ ನಂತರವಷ್ಟೇ ಮನೆಯಿಂದ ಹೊರ ಬರಬೇಕು, ಅಂತಹವರನ್ನು ಸ್ಥಲೀಯ ಆಡಳಿತದವರು ನಿಗಾವಹಿಸಬೇಕು ಇಲ್ಲವಾದರೆ ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟುವುದು ಕಷ್ಟಕರವಾಗುತ್ತದೆ. ಕಂಟೈನ್ಮೆಂಟ್ ವಲಯದಲ್ಲಿನ ಎಲ್ಲರ ಪರೀಕ್ಷಾ ವರದಿ ಬಂದ ನಂತರವಷ್ಟೆ ತೆರವುಗೊಳಿಸಬೇಕು.       ಕೋವಿಡ್-19 ಗೆ ಸಂಬಂದಿಸಿದಂತೆ ಜಿಲ್ಲೆಗೆ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ತುರ್ತಾಗಿ ಆಂಟಿ ರ್ಯಾಪಿಡ್ ಕಿಟ್‍ಗಳು ಮಂಜೂರಾಗಿದ್ದು, ಇನ್ನೂ ಹೆಚ್ಚಿನ ಕಿಟ್‍ಗಳಿಗಾಗಿ ಸಿಎಂಗೆ ಮನವಿ ಮಾಡಲಾಗಿದೆ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಕರೋನಾ ಸೋಂಕು ಪತ್ತೆಯ ಫಲಿತಾಂಶ ಬರುವುದು…

Read More

ಮಧುಗಿರಿ:       ಕೋಲಾರ ಜಿಲ್ಲೆ ಬಂಗಾರ ಪೇಟೆ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಕೆ.ಚಂದ್ರಮೌಳೇಶ್ವರ ರವರ ಹತ್ಯೆಯ ಬಗ್ಗೆ ಸೂಕ್ತ ಸಿ.ಬಿ.ಐ ತನಿಖೆ ನಡೆಸುವ ಅಗತ್ಯ ಇದೆ ಎಂದು ಮಧುಗಿರಿ ತಾಲ್ಲೂಕು ಯಾದವ ನೌಕರರ ಸಂಘ ಹಾಗೂ ಮಧುಗಿರಿ ತಾಲ್ಲೂಕು ಯಾದವ ಸಂಘ ಒತ್ತಾಯಿಸಿವೆ.       ಬಿ.ಕೆ.ಚಂದ್ರಮೌಳೇಶ್ವರವರ ತಾಯಿಯವರ ತವರೂರು ಮಧುಗಿರಿ ತಾಲ್ಲೂಕು ಕಸಬಾ ಮರುವೇಕೆರೆ ಆಗಿದ್ದು ಹಾಗೂ ಮಧುಗಿರಿ ಗಾಂಧಿ ಎಂ.ಪುಟ್ಟತಿಮ್ಮಯ್ಯ ರವರ ಸೋದರಳಿಯನವರಾಗಿದ್ದು ಸರಳ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರ ಪ್ರಾಮಾಣಿಕತೆಯನ್ನು ಕೋಲಾರ ಜನತೆ ಕೊಂಡಾಡಿದ್ದು ಇವರು ಜಮೀನಿನ ವಿವಾದ ಬಗ್ಗೆ ಖುದ್ದು ಹಾಜರಾಗಿ ಪರಿಶೀಲಿಸುವಾಗ ಪೊಲೀಸರ ಸಮ್ಮುಖದಲ್ಲಿ ವೆಂಕಟಾಚಲ ಎನ್ನುವ ವ್ಯಕ್ತಿ ಯಾವುದೇ ಕಾರಣವಿಲ್ಲದೇ ಚೂರಿಯಿಂದ ತಹಸೀಲ್ದಾರ್‍ರಿಗೆ ಇರಿದಿರುತ್ತಾರೆ. ಈ ಕೊಲೆ ಕೆಲವು ಅನುಮಾನಗಳಿಗೆ ಆಸ್ಪದವಾಗಿರುತ್ತದೆ. ಆದುದರಿಂದ ಜರೂರಾಗಿ ಸಿ.ಬಿ.ಐ ತನಿಖೆಗೆ ಒಳವಡಿಸುವುದರ ಮೂಲಕ ಅನುಕೂಲಕಲ್ಪಿಸಿಕೊಟ್ಟು ಮೃತರ ಕುಟುಂಬಕ್ಕೆ ನ್ಯಾಯದೊರಕಿಸಿಕೊಡಲು ಮಧುಗಿರಿ ತಾಲ್ಲೂಕು ಯಾದವ ನೌಕರರ ಸಂಘದ ಅಧ್ಯಕ್ಷರಾದ ಸಿ.ಕೃಷ್ಣಪ್ಪ ರವರು…

Read More

ಪಾವಗಡ:       ಕೊರೊನ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ತಾಲೂಕು ಆಡಳಿತ ನಿಷ್ಟ್ರಿಯವಾಗಿದೆ. ನೀವು ನಿಮ್ಮ ಕೆಲಸಕ್ಕೆ ನಾಲಾಯಕ್, ನಿಮಗೆ ಕೆಲಸ ಮಾಡುವ ಮನಸ್ಸು ಇಲ್ಲದ ಕಾರಣದಿಂದ ತಾಲೂಕಿ ಗ್ರಾಮೀಣ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ ಇಂತಹ ದುರ್ಘಟನೆಗೆ ನೇರವಾಗಿ ನೀವುಗಳೇ ಕಾರಣವೆಂದು ತಾಲೂಕು ಆಡಳಿತದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಕೆಂಡಕಾರಿದರು.       ಪಾವಗಡ ಪಟ್ಟಣದ ತುಮಕೂರು ರಸ್ತೆಯ ಕಣಿವೆ ಲಕ್ಷ್ಮಿನರಸಿಂಹ್ಮ ಸ್ವಾಮಿ ದೇವಾಲಯದ ಬಳಿಯ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದು ಮಾತನಾಡಿದ ಅವರು, ತಹಶೀಲ್ದರ್, ತಾಪಂ ಇಒ ಹಾಗೂ ಪೊಲೀಸ್ ಇಲಾಖೆಯನ್ನ ತೀವ್ರ ತರಾಟೆಗೆ ತೆಗೆದುಕೊಂಡ ಅವರು ಇದೇ ರೀತಿ ಮುಂದೆ ತಲೆದಂಡ ತಪ್ಪಿದಲ್ಲ ಉಷಾರ್ ಎಂದು ಎಚ್ಚರಿಕೆ ನೀಡಿದರು.       ಪಾವಗಡ ಒಂದು ಗಡಿ ತಾಲೂಕು ಆಗಿದ್ದು ಇಲ್ಲಿ ನಿರಂತರವಾದ ತಪಾಸಣಿ ನಡೆಸಬೇಕು. ಈ ಕೆಲಸ ನೀವು…

Read More

ತುಮಕೂರು:       ತುಮಕೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳನ್ನ ಸೀಲ್ ಡೌನ್ ಮಾಡಲಾಗಿದೆ.       ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳೆರಡನ್ನೂ ಸೀಲ್ ಡೌನ್ ಮಾಡಲಾಗಿದೆ.       ಹಾಗೆ, ಇಂದು ಮೀಸಲು ಪಡೆಯ 4 ಮಂದಿ ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.       ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿತ್ತು.       ಈ ಕುರಿತಂತೆ ಸ್ಪಷ್ಟನೆ ನೀಡಿರುವ ಜಿಲ್ಲಾ ಎಸ್ಪಿ ವಂಶಿಕೃಷ್ಣ, ಎರಡು ದಿನಗಳ ಕಾಲ ಕಚೇರಿಯಲ್ಲಿ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದಿದ್ದರು.       

Read More

ಗುಬ್ಬಿ:       ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಯಾವುದೇ ಶುದ್ಧೀಕರಣವಾಗದೇ ನೇರ ಸಾರ್ವಜನಿಕರಿಗೆ ತಲುಪುತ್ತಿದೆ.       ಈ ಅಶುದ್ದ ನೀರು ಬಳಸಿದರೂ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ ಕೆಲ ಪ್ರಜ್ಞಾವಂತ ನಾಗರೀಕರು ಸಾಮಾಜಿಕ ಜಾಲತಾಣದ ಮೂಲಕ ಇಡೀ ದಿನ ಚಾಟಿಂಗ್ ಮೂಲಕ ಕೊರೋನಾ ಸಂಕಷ್ಟದಲ್ಲಿ ವಿನೂತನ ರೀತಿ ಪ್ರತಿಭಟಿಸಿದ ಘಟನೆ ಭಾನುವಾರ ಕಂಡುಬಂತು.       ಪಟ್ಟಣದ ಹಲವು ಬಡಾವಣೆಗೆ ಬೆಳಿಗ್ಗೆ ಸರಬರಾಜು ಆದ ಹೇಮಾವತಿ ನೀರು ಕೆಂಪು ಮಣ್ಣಿನಿಂದ ಕೂಡಿದ್ದು ಕಂಡು ಫೋಟೋ ತೆಗೆದು ವಾಟ್ಸ್‍ಪ್ ಮೂಲಕ ಚರ್ಚಿ ಆರಂಭಿಸಿದ ಕೆಲವರ ಆಕ್ರೋಶಕ್ಕೆ ಸಾಥ್ ನೀಡಿದ ಬಹಳ ಮಂದಿ ಸಾಮಾಜಿಕ ಜಾಲತಾಣದಲ್ಲೇ ತಮ್ಮೆಲ್ಲಾ ಆಕ್ರೋಶ ಹೊರಹಾಕಿದರು. ಜಲ ಶುದ್ದೀಕರಣ ಘಟಕ ಬಹಳ ತಿಂಗಳಿಂದ ಕೆಲಸ ಮಾಡುತ್ತಿಲ್ಲ. ನೀರು ಶುದ್ದಗೊಳಿಸದೇ ಕೆರೆಯ ನೀರು ನೇರವಾಗಿ ಸಾರ್ವಜನಿಕರ ಸಂಪು ಸೇರುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ತಲೆ…

Read More

ತುಮಕೂರು:      ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಸಲುವಾಗಿ ಸಿದ್ದಗಂಗಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊರೊನಾ ಚಿಕಿತ್ಸಾ ಕೇಂದ್ರವನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.       ಸಿದ್ದಗಂಗಾ ಆಸ್ಪತ್ರೆಯು ವಿಷಮ ಪರಿಸ್ಥಿತಿಯ ಕೊರೊನಾ ಪೀಡಿತರನ್ನು ಉಪಚರಿಸಲು ಅವಶ್ಯವಿರುವ ಎಲ್ಲ ಅತ್ಯಾಧುನಿಕ ಸೌಲಭ್ಯ, ಹೆಚ್ಚು ರೋಗಿಗಳನ್ನು ಉಪಚರಿಸುವ ವ್ಯವಸ್ಥೆ, ಸಂಪನ್ಮೂಲಗಳನ್ನು ಹೊಂದಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ. ಜಿ.ಎಸ್. ಮಹೇಶ್ ತಿಳಿಸಿದ್ದಾರೆ.       ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಇತರ ರೋಗಿಗಳನ್ನು ಏಕಕಾಲಕ್ಕೆ ಶುಶ್ರೂಷೆ ಮಾಡುವಷ್ಯು ಸ್ಥಳಾವಕಾಶ ಮತ್ತು ಸಂಪನ್ಮೂಲ ಲಭ್ಯವಿದೆ ಎಂದು ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಪರಮೇಶ್ ತಿಳಿಸಿದ್ದಾರೆ.ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ತುರ್ತು ಚಿಕಿತ್ಸೆಗೆ ಅಂದರೆ ಹೃದ್ರೋಗ, ಮೂತ್ರಕೋಶ ಸಮಸ್ಯೆ, ನರರೋಗ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ನಿರ್ವಹಿಸಲು ತಜ್ಞ ವೈದ್ಯರ ತಂಡ ಸದಾಕಾಲ ಲಭ್ಯ ಇರುತ್ತಾರೆ.      ಈ ನಿರ್ಧಾರದಿಂದಾಗಿ ಸೋಂಕಿತರು…

Read More

ಗುಬ್ಬಿ:       ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೇರೂರು ಕೆರೆಯ ನೀರು ಯಾವುದೇ ಶುದ್ಧೀಕರಣವಾಗದೇ ನೇರ ಸಾರ್ವಜನಿಕರಿಗೆ ತಲುಪುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪಟ್ಟಣದ ನಾಗರೀಕರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.       ಕಳೆದ ಮೂರು ತಿಂಗಳಿಂದ ಕೆಂಪು ಬಣ್ಣದಿಂದ ಕೂಡಿದ ನೀರು ಸಾರ್ವಜನಿಕರಿಗೆ ಸರಬರಾಜು ಆಗುತ್ತಿದೆ. ಇತ್ತೀಚೆಗೆ ಸಂಪೂರ್ಣ ಅಶುದ್ಧ ನೀರು ಕಂಡು ಹೌಹಾರಿದ ಸ್ಥಳೀಯರು ವಾಟ್ಸ್‍ಪ್ ಮೂಲಕ ತಮ್ಮ ಮನೆಯ ಸಂಪಿನ ನೀರಿನ ಪೋಟೋ ಹಾಕಿ ಸಿಡಿಮಿಡಿ ವ್ಯಕ್ತಪಡಿಸಿದ್ದರು.       ಈ ಅಶುದ್ಧ ನೀರು ಬಳಸಿದರೂ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆರೋಪಿಸಿ ಪಟ್ಟಣದ ಕೆಲ ಪ್ರಜ್ಞಾವಂತ ನಾಗರೀಕರು ಸಾಮಾಜಿಕ ಜಾಲತಾಣದಲ್ಲೇ ಇಡೀ ದಿನ ಚಾಟಿಂಗ್ ಮೂಲಕ ವಿನೂತನ ರೀತಿ ಆಕ್ರೋಶ ಹೊರಹಾಕಿದ್ದರು. ಸೂಕ್ತ ಉತ್ತರ ಸಿಗದ ಕಾರಣ ಮುಂದುವರೆದು ಸೋಮವಾರ ಬೆಳಿಗ್ಗೆ ಪಪಂ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿದ ನಾಗರೀಕರ ದಂಡು…

Read More

ತುಮಕೂರು :      ಜಿಲ್ಲೆಯಲ್ಲಿಂದು 35 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 513ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 31, ಗುಬ್ಬಿ-2, ಕುಣಿಗಲ್-1, ಶಿರಾ-1 ಸೇರಿ ಒಟ್ಟು 35 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಆಸ್ಪತ್ರೆಯಿಂದ 3 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 137 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 361 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ 15 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More