ತುಮಕೂರು : ತುಮಕೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ “ಬಾಲ ಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ” ಎಂಬ ಘೋಷ ವಾಕ್ಯದೊಂದಿಗೆ ಫೆಬ್ರವರಿ 26ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಫೆಬ್ರವರಿ 26ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಶಿಷ್ಟಾಚಾರದಂತೆ ಆಹ್ವಾನಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಅವರು ನಿರ್ದೇಶಿಸಿದರು. ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಕೊರೊನಾ ನಿಯಮಾವಳಿಯನ್ನು ಪಾಲಿಸಬೇಕು. ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ರೂಪುರೇಷೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಆ ಮಾದರಿಯಲ್ಲಿಯೇ ಕಾರ್ಯಕ್ರಮ ನಡೆಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ತುಮಕೂರು ನಗರದಲ್ಲಿ ಬಾಲಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ ಎಂಬುದರ ಬಗ್ಗೆ ಜನಜಾಗೃತಿ ಮೂಡಿಸಲು ಬೈಕ್…
Author: News Desk Benkiyabale
ತುಮಕೂರು : ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಫೆಬ್ರವರಿ 20ರ 3ನೇ ಶನಿವಾರದಂದು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಲಕ್ಷ್ಮಿಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರು ವಾಸ್ತವ್ಯ ಮಾಡಿ ಗ್ರಾಮದಲ್ಲಿನ ರೈತರ ಜಮೀನುಗಳ ಪಹಣಿ ಲೋಪದೋಷ, ಪಿಂಚಣಿ, ರೇಷನ್ ಕಾರ್ಡ್, ಮತ್ತಿತರ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲೆಯ ತಹಶೀಲ್ದಾರರುಗಳಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು, ಸರ್ಕಾರದ ಸುತ್ತೋಲೆಯನ್ವಯ ಮುಂಬರುವ ಫೆಬ್ರವರಿ 20ರಂದು ಹಾಗೂ ಪ್ರತಿ ತಿಂಗಳ 3ನೇ ಶನಿವಾರದಂದು ಕೈಗೊಳ್ಳಬೇಕಾಗಿರುವ ಗ್ರಾಮಭೇಟಿ ಹಾಗೂ ಹಳ್ಳಿ ವಾಸ್ತವ್ಯದ ಬಗ್ಗೆ ನಿರ್ದೇಶನ ನೀಡಿದರು. ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ, ಮಧುಗಿರಿ ತಾಲ್ಲೂಕಿನ ತಹಶೀಲ್ದಾರ್, ಕೃಷಿ, ತೋಟಗಾರಿಗೆ, ಆರೋಗ್ಯ, ಆಹಾರ, ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾ…
ಹುಳಿಯಾರು : ದಸೂಡಿ ಸಮೀಪದ ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯವರೆ ಬೆಳಸಿದ್ದ ಮರಗಳನ್ನು ಅರಣ್ಯಾಧಿಕಾರಿಗಳೇ ಕಡಿದು ಅದೇ ಸ್ಥಳದಲ್ಲಿ ಪುನಃ ಅರಣ್ಯೀಕರಣ ಮಾಡಲು ಹೊರಟಿದ್ದಾರೆ ಎಂದು ಗಾಣಧಾಳು ಗ್ರಾಮ ಪಂಚಾಯಿತಿ ಸದಸ್ಯ ಗುರುವಾಪುರ ಶ್ರೀನಿವಾಸ್ ಆರೋಪಿಸಿದ್ದಾರೆ. ಬುಕ್ಕಾಪಟ್ಟಣ ವಲಯ ಅರಣ್ಯ ಪ್ರದೇಶಕ್ಕೆ ಸೇರಿದ ದಸೂಡಿ ಸರ್ಕಾರಿ ಸರ್ವೆ ನಂಬರ್ 100, 101, 104, 106 ರಲ್ಲಿ ಸುಮಾರು 290 ಎಕರೆ ಅರಣ್ಯ ಪ್ರದೇಶದಲ್ಲಿ ಈ ಹಿಂದೆ ಜಾಣೆ, ಕಮರ ಸೇರಿದಂತೆ ಅನೇಕ ಗಿಡಗಳನ್ನು ಅರಣ್ಯ ಇಲಾಖೆಯವರೆ ನೆಟ್ಟು ಐದಾರು ವರ್ಷ ಟ್ಯಾಂಕರ್ಗಳಲ್ಲಿ ನೀರುಣಿಸಿ ಬೆಳೆಸಿದ್ದರು. ಈಗ ಈ ಎಲ್ಲಾ ಮರಗಳು ಹೆಮ್ಮರವಾಗಿ ಬೆಳೆದು ಪ್ರಾಣಿ ಪಕ್ಷಿಗಳಿಗೆ ನೆರಳು, ಹಣ್ಣು ನೀಡುತ್ತಿರುವ ಸಂದರ್ಭದಲ್ಲಿ ನಿರ್ಧಾಕ್ಷ್ಯಿಣ್ಯವಾಗಿ ಕಡಿದು ಧರೆಗುರುಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಮುಂಬೈ, ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ಧಾರಿ ನಿರ್ಮಾಣಕ್ಕಾಗಿ ಹಾಳಾಗಿರುವ ಅರಣ್ಯ ನಾಶದ…
ತುಮಕೂರು : ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಶಿಕ್ಷಕರುಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ಧ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಪ್ರೌಢ ಶಾಲಾಶಿಕ್ಷಕರ ಪ್ರಗತಿ ಪರಿಶೀಲನಾ ಹಾಗೂ ಮಾರ್ಗದರ್ಶನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು 14ನೇ ಸ್ಥಾನದಲ್ಲಿದೆ. ಆದರೆ ಈ ಬಾರಿ ಉತ್ತಮ ಫಲಿತಾಂಶದೊಂದಿಗೆ ಜಿಲ್ಲೆಯನ್ನು ಉತ್ತಮ ಸ್ಥಾನಕ್ಕೇರಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ತನ್ನ ಮಗು ಎಂದು ಭಾವಿಸಿ, ಉತ್ತಮ ಮಾರ್ಗದರ್ಶನ ನೀಡಬೇಕು. ಕೋವಿಡ್-19ರ ಹಿನ್ನೆಲೆಯಲ್ಲಿ ಪಠ್ಯಗಳು ಕಡಿಮೆಯಾಗಿದ್ದು, ಪ್ರತಿ ಮಗುವು ಉತ್ತೀರ್ಣರಾಗುವಂತೆ ತಯಾರು ಮಾಡಬೇಕು ಎಂದರು. ಪ್ರತಿಯೊಬ್ಬ ಮನುಷ್ಯನ ನಿರ್ಮಾಣ ಶಿಕ್ಷಕರಿಂದಲೇ ಸಾಧ್ಯ, ಅಂತಹ ಶಿಕ್ಷಕರಿಗೆ ಸಲಹೆ ನೀಡುವ ಬದಲು, ಶಿಕ್ಷಕರು ಹೇಳುವ…
ತುಮಕೂರು : ರಾತ್ರಿ ವೇಳೆಯಲ್ಲಿ ಸಿರಾ ಟೌನ್, ಸಂತೇಪೇಟೆ ಸರ್ಕಾರಿ ಸ್ಕೂಲ್ ಮುಂಭಾಗ ಸಿರಾ- ತುಮಕೂರು ಎನ್.ಹೆಚ್-4 ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸುಮಾರು 11 ಲಕ್ಷ ರೂ ಮೌಲ್ಯದ KA-64 -3627 ನಂಬರಿನ 12 ಚಕ್ರದ ಅಶೋಕ್ ಲೈಲ್ಯಾಂಡ್ ಲಾರಿಯನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಪ್ರಕರಣ ದಾಖಲಿಸಿಲಾಗಿತ್ತು. ಕಳವಾದ ಲಾರಿ ಮತ್ತು ಆರೋಪಿಗಳನ್ನು ಪತ್ತೆ ಮಾಡಲು ಶಿರಾ ಎಲ್ ಡಿ.ಎಸ್.ಪಿ. ಕುಮಾರಪ್ಪ ರವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ಸದರಿ ತಂಡವು ಕೆಳಕಂಡ ಅರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಆರೋಪಿಗಳಾದ ಎಸ್. ಮಣಿಕಂಠನ್ @ ರಮೇಶ್ ಕುಮಾರ್, ಮನೋಜ್ ತಿರಕಿ @ ಮೈಕಲ್ ಬಿನ್ ಒಮದ ತಿರಕಿ ರವರುಗಳು ಲಾರಿಯನ್ನು ಕಳ್ಳತನ ಮಾಡಿ ತಮಿಳುನಾಡಿನ ಸೇಲಂಗೆ ತಗೆದುಕೊಂಡು ಹೋಗಿ ಪಳನಿಸ್ವಾಮಿ ಮತ್ತು ಸೆಂಥಿಲ್ ನಾಥನ್ ವಕೀಲರು ರವರುಗಳಿಗೆ ಮಾರಾಟ ಮಾಡಿದ್ದು, ಪಳನಿ ಸ್ವಾಮಿ ಮತ್ತು ಸಂಥಿಲ್ ನಾಥನ್ ರವರು ಪ್ರಸಾದ್ ಬಿನ್ ಕನ್ನನ್,…
ತುಮಕೂರು: ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್ ಅವರಿಂದ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ವಹಿಸಿಕೊಂಡರು. ನೂತನ ಜಿಲ್ಲಾಧಿಕಾರಿ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಜಿಲ್ಲಾಧಿಕಾರಿಗಳ ಕಚೇರಿ ತೆರಳಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನೂತನ ಜಿಲ್ಲಾಧಿಕಾರಿಗಳನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಉಪವಿಭಾಗಾಧಿಕಾರಿ ಅಜಯ್ ಅಭಿನಂದಿಸಿದರು.
ಹುಳಿಯಾರು: ಹುಳಿಯಾರು ಪಟ್ಟಣದಲ್ಲಿನ ಏಕೈಕ ಆಟದ ಮೈದಾನವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನವನ್ನು ಉಳಿಸಿ ಶಾಲಾ ಕಟ್ಟಡದ ಕಾಮಗಾರಿ ನಿರ್ಮಾಣ ಮಾಡುವುದಾಗಿ ಜಿಲ್ಲಾ ಪಂಚಾಯ್ತಿ ಎಇಇ ರವಿಕುಮಾರ್ ಭರವಸೆ ನೀಡಿದ್ದಾರೆ. ಹುಳಿಯಾರು ಪಟ್ಟಣದ 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಗೆ ಹೃದಯಭಾಗದಲ್ಲಿರುವ ಈ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನ ಆಸರೆಯಾಗಿದೆ. ಅದ್ದೂರಿ ಸಾರ್ವಜನಿಕ ಕಾರ್ಯಕ್ರಮ, ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ, ಆರ್ಎಸ್ಎಸ್ ಶಾಖೆ ಸೇರಿದಂತೆ ಹಿರಿಯ ನಾಗರಿಕರ ವಾಕಿಂಗ್, ಸ್ಥಳಿಯ ಯುವಜನತೆಯ ಆಟ, ವ್ಯಾಯಾಮ ಎಲ್ಲವೂ ಇಲ್ಲಿ ನಡೆಯುತ್ತಿದೆ. ಆದರೆ ಈ ಆಟದ ಮೈದಾನದಲ್ಲೇ ಕರ್ನಾಟಕ ಪಬ್ಲಿಕ್ ಶಾಲೆಗೆ ನೂತನವಾಗಿ ಮಂಜೂರಾಗಿರುವ ಕಟ್ಟಡಗಳನ್ನು ಕಟ್ಟಲು ಗುತ್ತಿಗೆದಾರರು ಮುಂದಾಗಿದ್ದರು. ಕಟ್ಟಡದ ಮಾರ್ಕ್ ಮಾಡುವಾಗಲೇ ಸ್ಥಳಿಯರು ಮನವಿ ಮಾಡಿದ್ದರೂ ಕೇಳದೆ ಜೆಸಿಬಿ ಮೂಲಕ ಪಿಲ್ಲರ್ ಗುಂಡಿಗಳನ್ನು ಸಹ ತೆಗೆಸಿದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆಗೆ ಸಿದ್ಧತೆ ಸಹ ನಡೆಸಿದರು. ವಿಷಯ ತಿಳಿದ ಜಿಪಂ…
ತುಮಕೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿಯ ಬಧಿಸಲಾಗಿದೆ. ಸೌಮ್ಯ ( ಲಾವಣ್ಯ ಗೌಡ) ಬೆಂಗಳೂರಿನ ಕಡಬಗಲಿಯ ಜನಪ್ರಿಯ ಲೇಔಟ್’ನ ಸೌಮ್ಯ ( ಲಾವಣ್ಯ ಗೌಡ) ಎಂಬ ಆರೋಪಿಯು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಆಗಾಗ್ಗೆ ಬಂದು ಹೋಗುತ್ತಾ ತಾನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತೇನೆಂದು ನಂಬಿಸಿ ನಿರುದ್ಯೋಗಿ ಯುವಕ ಮತ್ತು ಯುವತಿಯರಾದ ಬೆಂಗಳೂರಿನ ವಾಸಿಗಳಾದ ರಶ್ಮಿ, ರಾಜೇಶ್, ತಿಮ್ಮರಾಜು ಮತ್ತು ಸಂದೀಪ್ ಕುಮಾರ್ ಎಂಬುವವರಿಗೆ ನಂಬಿಸಿ ಅದಕ್ಕೆ ಪೂರಕವೆಂಬಂತೆ ಜಿಲ್ಲಾಧಿಕಾರಿಗಳ ಸಭಾ ನಡವಳಿಯ ಒಂದು ಪುಸ್ತಕವನ್ನು ತೋರಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿ.ಸಿ, ಎ.ಡಿಸಿ, ಎ.ಸಿ ಮತ್ತು ಮುಜರಾಯಿ ಇಲಾಖೆಯ ನಿರ್ದೇಶಕರ ಆಪ್ತ ಸಹಾಯಕ ಹುದ್ದೆಗಳನ್ನು ಕೊಡಿಸುವುದಾಗಿ ಅವರುಗಳಿ೦ದ ಹಣ ಮತ್ತು ಮೂಲ ಆಂಕಪಟ್ಟಗಳನ್ನು ಪಡೆದು ಮೋಸ ಮಾಡಿದ್ದು, ಮೋಸ ಹೋದ ರಾಜೇಶ್ ಹಾಗೂ ಇತರರು ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗಿ ಕೆಲಸದ ಬಗ್ಗೆ ವಿಚಾರಿಸಲಾಗಿ…
ತುಮಕೂರು: ತುಮಕೂರು ನಗರದಲ್ಲಿ ಲೋಕೋಪಯೋಗಿ ಇಲಾಖೆಯ ಸುಮಾರು 4.50 ಕೋಟಿ ರೂಗಳಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಸಿಸಿ ರಸ್ತೆ, ಚರಂಡಿ ಹಾಗೂ ಇನ್ನಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ 26ನೇ ವಾರ್ಡಿನ ಆಶೋಕ ನಗರದ 9ನೇ ಅಡ್ಡರಸ್ತೆಯಲ್ಲಿ ನಿರ್ಮಿಸಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಯನ್ನು ಪಿಡಬ್ಲ್ಯುಡಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು,ನಗರದ ಸತ್ಯಮಂಗಲ, ಮಂಜುನಾಥ ನಗರ,ಗಿರಿನಗರ, ಅಶೋಕ ನಗರ,ಸರಸ್ವತಿಪುರಂಗಳಲ್ಲಿ ಸಿಸಿ ರಸ್ತೆ,ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.ಸರಸ್ವತಿಪುರಂ ಮತ್ತು ಅಶೋಕನಗರದ ಮುಖ್ಯ ರಸ್ತೆಗಳು ಚನ್ನಾಗಿದ್ದರೂ ಒಳಗಡೆ ಇರುವ ರಸ್ತೆಗಳು,ಅಲ್ಲಿರುವ ಜನರು ಇನ್ನೂ ಕೊಳಗೇರಿ ರೀತಿ ಯಲ್ಲಿಯೇ ವಾಸ ಮಾಡುತ್ತಿದ್ದಾರೆ.ಹಾಗಾಗಿ ಕೆಲವು ವಾರ್ಡುಗಳನ್ನು ಹೊರತು ಪಡಿಸಿ ಉಳಿದಂತೆ 35 ವಾರ್ಡು ಗಳಿಗೂ ಎಸ್ಸಿಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಮಾರ್ಟ್ಸಿಟಿ ಯೋಜನೆಯಡಿ ನಗರದ ಪ್ರಮುಖ ರಸ್ತೆಗಳಾದ ಮಹಾತ್ಮಗಾಂಧಿ ರಸ್ತೆ,ಅಶೋಕ…
ಗುಬ್ಬಿ: ಹವಾಗುಣಕ್ಕೆ ತಕ್ಕ ಬೇಸಾಯ ಮಾಡುವ ಬಗ್ಗೆ ಪ್ರತಿ ಜಿಲ್ಲೆಯಲ್ಲಿ ಒಂದು ಗ್ರಾಮ ಆಯ್ಕೆ ಮಾಡಿ ಇಡೀ ದಿನ ರೈತರೊಂದಿಗೆ ಸಂವಾದ ನಡೆಸಿ ಕೃಷಿ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಪ್ರವಾಸ ಆರಂಭಿಸಿ ಮಂಡ್ಯ ಮತ್ತು ಕೋಲಾರ ಜಿಲ್ಲೆ ಪ್ರವಾಸ ಮುಗಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ಸಂಪರ್ಕ ಕೇಂದ್ರ ನೂತನ ಕಟ್ಟಡ ಉದ್ಘಾಟನೆ ಮತ್ತು ಏಳು ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರಿಗೆ ಸನ್ಮಾನ ಹಾಗೂ ಬಿಜೆಪಿ ಕಾರ್ಯರ್ತರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಹಿರಿಯರ ಆಲೋಚನೆಗಳು ಇಂದಿಗೂ ಪ್ರಸ್ತುತವಾಗಿದೆ. ನೀರಿನ ಲಭ್ಯತೆ ಜತೆಗೆ ಮಣ್ಣಿನ ಗುಣ ಅರಿತು ಬೇಸಾಯ ಮಾಡುವ ಕಲೆ ನಮ್ಮ ಹಿಂದಿನ ಸಂಪ್ರದಾಯದಲ್ಲಿ ಅಡಗಿದೆ. ಇಂತಹ ಸಂದರ್ಭದಲ್ಲಿ ಇಸ್ರೇಲ್ ಮಾದರಿ ಕೃಷಿ ನಮಗೆ ಅವಶ್ಯವಿಲ್ಲ ಎಂದರು. ಕೃಷಿಕನ ದುಡಿಮೆಗೆ ಬೆಲೆ ಕಟ್ಟಲಾಗದು ಎಂಬ ಮಾತಿದೆ.…











