ಗುಬ್ಬಿ: ಕೋವಿಡ್-19 ವೈರಸ್ ಸೋಂಕಿತರ ಚಿಕಿತ್ಸೆಗೆ ತಾಲ್ಲೂಕಿನ ಕಳ್ಳಿಪಾಳ್ಯದ ಬಳಿಯ ಓಂ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಸಿದ್ದಪಡಿಸಲಾದ ಐಸ್ಯೂಲೇಷನ್ ಹಾಸಿಗೆಗಳ ಕೋವಿಡ್-19 ಕೇರ್ ಸೆಂಟರ್ಗೆ ಗುರುವಾರ ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಗಡಿಭಾಗ ಕಳ್ಳಿಪಾಳ್ಯ ಸಮೀಪ ಹೆದ್ದಾರಿ ಬದಿಯಲ್ಲಿರುವ ಓಂ ಪ್ಯಾಲೇಸ್ನಲ್ಲಿನ ಎಲ್ಲಾ ವ್ಯವಸ್ಥೆಯನ್ನು ಅವಲೋಕಿಸಿದ ಜಿಲ್ಲಾಧಿಕಾರಿಗಳು ಕಾಂಪೌಂಡ್ನಲ್ಲಿ ಮೂರು ಶೆಡ್ ನಿರ್ಮಿಸಿ ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳನ್ನು ಉಳಿಸಿಕೊಳ್ಳಲು ವ್ಯವಸ್ಥೆ ಮಾಡಿರುವ ಬಗ್ಗೆ ಪರಿಶೀಲಿಸಿದರು. ಚಿಕಿತ್ಸೆಗೆ ಬರುವ ರೋಗಿಗಳಿಗೆ ಪೌಷ್ಠಿಕ ಆಹಾರ ನೀಡಲು ಸೂಚಿಸಲಾಗಿದೆ. ಊಟ ಮತ್ತು ತಿಂಡಿಗಳ ತಯಾರಿಕೆಗೆ ಗುಣಮಟ್ಟದ ಪದಾರ್ಥ ಬಳಕೆ ಮತ್ತು ಪೌಷ್ಠಿಕಾಂಶದ ತರಕಾರಿ ಬಳಕೆಗೆ ಸೂಚಿಸಿ ಇಡೀ ಕಲ್ಯಾಣ ಮಂಟಪವನ್ನು ಸ್ಯಾನಿಟೈಜರ್ ಮಾಡಲು ಆದೇಶಿಸಿದರು. ಈ ಕಲ್ಯಾಣ ಮಂಟಪವನ್ನು ಕೇರ್ ಸೆಂಟರ್ ಬಳಕೆಗೆ ತಾಲ್ಲೂಕು ಆಡಳಿತ ಆಯ್ಕೆ ಮಾಡಿ 67 ಹಾಸಿಗೆಗಳನ್ನು ವ್ಯವಸ್ಥಿತವಾಗಿ ಅಳವಡಿಸಿದೆ. ಜಿಲ್ಲೆಯಲ್ಲಿ ಸೋಂಕಿತರ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಗುರುವಾರ 14 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 1, ತುರುವೇಕೆರೆ-1 ತಿಪಟೂರು-3, ಹಾಗೂ ತುಮಕೂರು-9 ಸೇರಿ ಒಟ್ಟು 14 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು – 9 ಮಹಾಲಕ್ಷ್ಮಿ ನಗರದ 30 ವರ್ಷದ ಗಂಡು, 28 ವರ್ಷದ ಹೆಣ್ಣು, ಬಿ ಜಿ ಪಾಳ್ಯ ಪ್ರಸನ್ನಕುಮಾರ ಬಡಾವಣೆಯ 47 ವರ್ಷದ ಗಂಡು, ಶೆಟ್ಟಿಹಳ್ಳಿ ಗೇಟ್ ಬಳಿಯ 46 ವರ್ಷದ ಗಂಡು, ದೇವನೂರು ಚರ್ಚ್ ಬಳಿಯ 64 ವರ್ಷದ ಗಂಡು, ಸಪ್ತಗಿರಿ ಬಡಾವಣೆಯ 47 ವರ್ಷದ ಗಂಡು, 40 ವರ್ಷದ ಗಂಡು, ಎಸ್ಐಟಿ 13ನೇ ಕ್ರಾಸ್ 64 ವರ್ಷದ ಗಂಡು, ಸದಾಶಿವನಗರದ 35 ವರ್ಷದ ಗಂಡು ಸೋಂಕು ದೃಡಪಟ್ಟಿದೆ.…
ತುಮಕೂರು: ತುಮಕೂರು ತಾಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕವಿತಾ ರಮೇಶ್ ಅಧ್ಯಕ್ಷರಾಗಿ ಚುನಾವಣೆಯಲ್ಲಿ ಜಯಗಳಿಸಿರುತ್ತಾರೆ. ಬಿಜೆಪಿ ಪಕ್ಷದಿಂದ 17 ಸದಸ್ಯ ಬಲವಿದ್ದು, ಜೆಡಿಎಸ್ 12 ಸದಸ್ಯರ ಬಲ, ಕಾಂಗ್ರೆಸ್ 1, ಇರುತ್ತಾರೆ. ಸ್ಪಷ್ಟ ಬಹುಮತವಿದ್ದ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಅನಾಯಾಸವಾಗಿ ಅಧ್ಯಕ್ಷಗಾದಿ ಏರಬಹುದೆಂಬ ಸಂತಸದಲ್ಲಿದ್ದರು, ಆದರೆ 12 ಸದಸ್ಯ ಬಲವಿದ್ದ ಜೆಡಿಎಸ್ ಕಾಂಗ್ರೆಸ್ ಒಬ್ಬರು ಸದಸ್ಯರ ವಿಶ್ವಾಸದೊಂದಿಗೆ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಅಧ್ಯಕ್ಷಗಾದಿಗೇರಲು ಕಸರತ್ತು ನಡೆಸಿತ್ತು. ತಮ್ಮ ಬಲಿಯಿದ್ದ 13 ಸದಸ್ಯ ಬಲದ ಜೊತೆಗೆ ಬಿಜೆಪಿಯ ಇಬ್ಬರು ಸದಸ್ಯರನ್ನು ತಮ್ಮ ಕಡೆ ಸೆಳೆದುಕೊಂಡು ಮತ್ತೊಬ್ಬ ಬಿಜೆಪಿ ಸದಸ್ಯರನ್ನ ಗೈರು ಹಾಜರಿಪಡಿಸಿ ಅಧ್ಯಕ್ಷ ಸ್ಥಾನವನ್ನು ತಾನು ಪಡೆಯಬೇಕೆಂದು ಜೆಡಿಎಸ್ನ ಹಾಲಿ ಶಾಸಕ ಡಿ.ಸಿ.ಗೌರಿಶಂಖರ್ ಕಸರತ್ತು ನಡೆಸಿದ್ದರು. ಇಬ್ಬರು ಬಿಜೆಪಿ ಸದಸ್ಯರಾದ ಕೋರಾ ಎಸ್ಟಿ ಮೀಸಲು ಕ್ಷೇತ್ರದ ಕವಿತಾ ರಮೇಶ್ ಮತ್ತು ಕುರುವೇಲು ಎಸ್ಸಿ ಮೀಸಲು ಕ್ಷೇತ್ರದ ಸುಧಾರವರುಗಳನ್ನ…
ತುಮಕೂರು : ತುಮಕೂರು ತಾಲ್ಲೂಕು ಪಂಚಾಯ್ತಿಯ ಅಧ್ಯಕ್ಷರನ್ನಾಗಿ ಕವಿತ ರಮೇಶ್ ರವರನ್ನು ಆಯ್ಕೆ ಮಾಡಿ ವಿಪ್ ಜಾರಿ ಮಾಡಲಾಗಿದೆ. ತುಮಕೂರು ತಾಲ್ಲೂಕು ಪಂಚಾಯ್ತಿಯ ಅಧ್ಯಕ್ಷರರ ಚುನಾವಣೆಯ ಕುರಿತು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಯ ಮಾಜಿ ಶಾಸಕ ಹಾಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ ಸುರೇಶ್ ಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಅರಕೆರೆ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಕವಿತ ರಮೇಶ್ ರವರನ್ನು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆಮಾಡಲು ಎಲ್ಲಾ ತಾಲ್ಲೂಕು ಪಂಚಾಯತ್ ಸದಸ್ಯರು ಸರ್ವಾನುಮತದಿಂದ ನಿರ್ಧಾರ ಕೈಗೊಂಡರು. ಕವಿತ ರಮೇಶ್ ರವರು ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದರು. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಆದೇಶದಂತೆ ಪಕ್ಷದ ಎಲ್ಲಾ 17 ಸದಸ್ಯರು ಆಯ್ಕೆಯಾಗಿರುವ ಪಕ್ಷದ ಅಧಿಕೃತ ಅಭ್ಯರ್ಥಿ ಕವಿತ ರಮೇಶ್ ರವರಿಗೆ ಮತ…
ಚಿಕ್ಕನಾಯಕನಹಳ್ಳಿ: ಇದುವರೆಗೂ ತಾಲ್ಲೂಕಿನಾದ್ಯಂತ 12 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು ಬುಧವಾರ ಒಂದೇ ದಿನದಲ್ಲಿ ಮತ್ತೆ 17 ಪ್ರಕರಣಗಳು ಧೃಡಪಟ್ಟಿದ್ದು ಒಟ್ಟಾರೆ ಕೊರೊನಾ ಸೋಂಕಿತರ ಪ್ರಮಾಣ 29 ಕ್ಕೇರಿದಂತಾಗಿದೆ. ಬುಧವಾರ ತಾಲ್ಲೂಕಿಗೆ ಮೊದಲ ಕರಾಳದಿನವೆನಿಸಿದ್ದು ಒಂದೇ ದಿನದಲ್ಲಿ 17 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಪಟ್ಟಣದ ಸಮೀಪದ ಕಾಡೇನಹಳ್ಳಿಯಲ್ಲಿ ಆರು ಮಂದಿಗೆ ಹೊಸದಾಗಿ ಸೋಂಕು ತಗುಲಿದ್ದು ಈ ಗ್ರಾಮದಲ್ಲಿ ಒಟ್ಟಾರೆ 9 ಮಂದಿಗೆ ಸೋಂಕು ತಗುಲಿದಂತಾಗಿದೆ. ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ 8 ಮಂದಿಗೆ ಸೋಂಕು ಧೃಡಪಟ್ಟಿದ್ದು ಇಲ್ಲಿ ಒಟ್ಟು ಸೋಂಕಿತರ ಪ್ರಮಾಣ 9ಕ್ಕೆರಿದೆ. ಸಮೀಪದ ಬುಳ್ಳೇನಹಳ್ಳಿಯಲ್ಲಿ ಒಂದು, ಆಶ್ರೀಹಾಲ್ ಗ್ರಾಮದಲ್ಲಿ ಒಬ್ಬರು ಹಾಗೂ ಪಟ್ಟಣದ ದೇವಾಂಗಬೀದಿಯ ಮಹಿಳೆಯೊಬ್ಬರಿಗೆ ಸೋಂಕು ಧೃಡಪಟ್ಟಿದೆ. ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಗಲಾಟೆ: ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಈ ಹಿಂದೆ ಯುವಕನೊಬ್ಬನಿಗೆ ಸೋಂಕು ಧೃಡಪಟ್ಟಿದ್ದು ಈತನ ಪ್ರಾಥಮಿಕ ಸಂಪಕದಲ್ಲಿದವರನ್ನು ಕ್ವಾರಂಟೈನ್ ಮಾಡಿ ಒಂದು ವಾರದಹಿಂದೆ ಇವರನ್ನು ಮನೆಗೆ…
ತಿಪಟೂರು : ಪೇದೆಗೆ ಕೊರೊನಾ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ತಿಪಟೂರು ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ತಿಪಟೂರು ಪೊಲೀಸ್ ಠಾಣೆಯಲ್ಲಿ ಓರ್ವ ಮುಖ್ಯಪೇದೆಗೆ ಕೊರೋನಾ ಸೋಂಕು ತಗುಲಿದ್ದು, ನಗರ ಪೊಲೀಸ್ ಠಾಣೆಯನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಪೊಲೀಸರು ಸೋಂಕಿಗೆ ಒಳಗಾಗುತ್ತಿರುವುದು ತೀವ್ರ ಆತಂಕಕ್ಕೀಡು ಮಾಡಿದೆ.
ತುಮಕೂರು : ಅಕ್ಕನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಹಾಡುಹಗಲೇ ತಮ್ಮ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಮಂಡಿಪೇಟೆಯ ಜಾಮಿಯಾ ಮಸೀದಿ ಬಳಿ ನಡೆದಿದೆ. ದಾದಾಪೀರ್(55) ಕೊಲೆಯಾಗಿದ್ದು, ಮಧುಕುಮಾರ್ ಕೊಲೆಗೈದ ಆರೋಪಿ. ಘಟನೆಯ ವಿವರ: ಆರೋಪಿ ಮಧುಕುಮಾರ್ ಎಂಬಾತನ ಅಕ್ಕ ಲಕ್ಷ್ಮಿ ನಗರದ ಚರ್ಚ್ ವೃತ್ತದ ಬಳಿ ಕ್ಯಾಂಟೀನ್ ನಡೆಸುತ್ತಿದ್ದು, ಇಂದು ಮಧ್ಯಾಹ್ನ ಅಲ್ಲಿಗೆ ಬಂದ ದಾದಾಪೀರ್ ಬಿಸ್ಕೆಟ್ ಪ್ಯಾಕೆಟ್ ಹೇಳಿದ್ದಾನೆ. ಲಕ್ಷ್ಮಿಯವರು ಹಣ ಕೇಳಿದ್ದಾರೆ, ನಾನೇನು ದುಡ್ಡು ಪ್ರಿಂಟ್ ಮಾಡುತ್ತೇನೆಯೇ ಎಂದು ವ್ಯಂಗ್ಯವಾಗಿ ಮಾತನಾಡಿದ್ದಾನೆ ದಾದಾಪೀರ್. ಮಾತ್ರವಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲೇ ಕುಳಿತು ಟೀ ಕುಡಿಯುತ್ತಿದ್ದ ತಮ್ಮ ಮದು ದಾದಾಪೀರ್ ಗೆ ಸರಿಯಾಗಿ ಮಾತನಾಡುವಂತೆ ಹೇಳಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಸ್ಥಳೀಯರು ಆ ಜಗಳವನ್ನು ಬಿಡಿಸಿ ಕಳುಹಿಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಮೃತ ದಾದಾಪೀರ್ ಮಧು ಕುಮಾರನನ್ನು…
ತುಮಕೂರು: ಜಿಲ್ಲೆಯಲ್ಲಿ ಬುಧವಾರ 27 ಜನರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 319 ತಲುಪಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಈ ಕುರಿತು ಮಾಹಿತಿ ನೀಡಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕೊಂದರಲ್ಲೇ 16 ಜನರಲ್ಲಿ ಸೋಂಕು ಕಾಣಿಸಿದೆ. ಕೊರಟಗೆರೆ 1, ಮಧುಗಿರಿ 5, ತಿಪಟೂರು 3, ತುಮಕೂರಿನಲ್ಲಿ 2 ಪ್ರಕರಣ ಪತ್ತೆಯಾಗಿದೆ. ಚಿಕ್ಕನಾಯಕನಹಳ್ಳಿ – 16: ಚಿಕ್ಕನಾಯಕನಹಳ್ಳಿ ತಾಲೂಕಿನ ವಿಭಾಗದಲ್ಲಿ 38 ವರ್ಷ ಮತ್ತು 15 ವರ್ಷದ ಹೆಣ್ಣು, ಗೋಡೆ ಕೆರೆಯ 22 ವರ್ಷದ ಗಂಡು, 45 ವರ್ಷದ ಹೆಣ್ಣು, 50 ವರ್ಷದ ಗಂಡು, 70 ವರ್ಷದ ಹೆಣ್ಣು, 47 ವರ್ಷದ ಗಂಡು, 32 ವರ್ಷದ ಹೆಣ್ಣು, 18 ವರ್ಷದ ಹೆಣ್ಣು, ಹೆಸರಳ್ಳಿಯ 5 ವರ್ಷದ ಹೆಣ್ಣು, ಕಾಡೇನಹಳ್ಳಿಯ 19 ವರ್ಷದ ಗಂಡು, 45 ವರ್ಷದ ಗಂಡು, 19 ವರ್ಷದ ಗಂಡು, 62…
ತುಮಕೂರು: ಹಾಡು ಹಗಲೇ ರೌಡಿಶೀಟರ್ ಒಬ್ಬನ ಸಹಚರರು ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದು ಮಾಂಗಲ್ಯ ಸರಗಳು, ಮೋಬೈಲ್ಗಳನ್ನು ದೋಚುತ್ತಿದ್ದ ಖದೀಮರನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತುಮಕೂರು ನಗರದ ಭಾರತಿ ನಗರದ ನಿವಾಸಿಯಾದ ರೌಡಿಶೀಟರ್ ರವಿ ಎಂಬುವನ ಹಿಂಬಾಲಕರಾದ ಆನಂತ್, ಪಾಪಣ್ಣಿ, ವಿಕ್ಕಿ ಎಂಬುವವರೆ ಬಂಧಿಸಲಾಗಿರುವ ಕಳ್ಳರು. ಮೊದಲೇ ಕದ್ದಿದ್ದ ಬೈಕಿನಲ್ಲಿ ಮೂರು ಜನ ತುಮಕೂರು ಕುಣಿಗಲ್ ಮಾರ್ಗದ ಹೊನ್ನುಡಿಕೆ ಹ್ಯಾಂಡ್ ಪೆÇೀಸ್ಟ್ ಬಳಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯಾಹ್ನ ಮದ್ಯಪಾನ ಹಾಗೂ ಗಾಂಜಾ ಸೇವಿಸಿ ತುಮಕೂರು ಕಡೇ ಬರುವ ಜನರ ಬಳಿ ದರೋಡೆ ಮಾಡಿದ್ದಾರೆ. ಗೂಳೊರು ಬಳಿ ಬರುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಮಾಂಗಲ್ಯ ಸರವನ್ನು ಕಿತ್ತು ಕೊಂಡು ರಸ್ತೆ ತುಂಬಾ ಅಡ್ಡಾದಿಡ್ಡಿಯಾಗಿ ಬೈಕ್ ಓಡಾಡಿದ್ದಾರೆ. ಇತ್ತ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರ ಬಾ ಆಸ್ಪತ್ರೆಯ ಸಮೀಪ ಮಹಿಳೆಯೂಬ್ಬರ…
ತುಮಕೂರು: ಜಿಲ್ಲೆಯಲ್ಲಿಂದು 24 ಹೊಸ ಕೊವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 292ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಪಾವಗಡ ತಾಲ್ಲೂಕಿನಲ್ಲಿ 14, ಗುಬ್ಬಿ-3, ಕೊರಟಗೆರೆ-2 ಹಾಗೂ ಚಿಕ್ಕನಾಯಕನಹಳ್ಳಿ ಕುಣಿಗಲ್, ಮಧುಗಿರಿ, ತುಮಕೂರು, ಹಾಗೂ ತುರುವೇಕೆರೆ ತಾಲ್ಲೂಕಿನಲ್ಲಿ ತಲಾ ಒಂದು ಸೇರಿ ಒಟ್ಟು 24 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ ಓರ್ವ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ಆಸ್ಪತ್ರೆಯಿಂದ ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 67 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 10 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಡಿ.ಹೆಚ್.ಓ. ಡಾ||ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.