Author: News Desk Benkiyabale

ತುಮಕೂರು:       ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 4ರವರೆಗೆ ತುಮಕೂರು(ದ) ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಒಟ್ಟು 144 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.       ಪರೀಕ್ಷೆಗೆ 37306 ವಿದ್ಯಾರ್ಥಿಗಳು ನೋಂದಣಿ: ತುಮಕೂರು ಶೈಕ್ಷಣಿಕ ಜಿಲ್ಲೆಯ 23783 ಹಾಗೂ ಮಧುಗಿರಿಯ 13523 ಸೇರಿದಂತೆ ಒಟ್ಟು 37306 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಈ ಪೈಕಿ ಜಿಲ್ಲೆಯ 20329 ಬಾಲಕರು ಹಾಗೂ 16977 ಬಾಲಕಿಯರಿದ್ದು, ಇವರಲ್ಲಿ 34366(ಪ್ರಥಮ ಪ್ರಯತ್ನ), 2082(ಪುನರಾವರ್ತಿತ), 587(ಖಾಸಗಿ), 204(ಖಾಸಗಿ ಪುನರಾವರ್ತಿತ), 67(ಪುನರಾವರ್ತಿತ ಹಳೆಯ) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸುರಕ್ಷತೆಯೊಂದಿಗೆ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.       144 ಪರೀಕ್ಷಾ ಕೇಂದ್ರ : ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ತುಮಕೂರಿನ 85 ಹಾಗೂ ಮಧುಗಿರಿಯ 59 ಸೇರಿದಂತೆ ಒಟ್ಟು 144 ಪರೀಕ್ಷಾ…

Read More

ತುಮಕೂರು:        ಜಿಲ್ಲೆಯ ಶಿರಾ ತಾಲ್ಲೂಕು ರತ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀನಿವಾಸಪ್ಪ ಎಂಬ ರೈತ ತಮ್ಮ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದರಿಂದ ಈತನ ಕುಟುಂಬಕ್ಕೆ 40ಸಾವಿರ ರೂ.ಗಳ ಆದಾಯ(ಕೂಲಿ ಹಣ) ದೊರೆತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ. ರೈತ ಶ್ರೀನಿವಾಸಪ್ಪ ಅವರು ತಮಗಿರುವ 5 ಎಕರೆ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಇದರಿಂದ ಮಳೆಗಾಲದಲ್ಲಿ ಬದುಗಳಲ್ಲಿ ನೀರು ಶೇಖರಣೆಯಾಗಿ ತೇವಾಂಶ ಹೆಚ್ಚಿ ಕೃಷಿಯಲ್ಲಿ ಸುಮಾರು 10 ರಿಂದ 15ರಷ್ಟು ಹೆಚ್ಚಿನ ಇಳುವರಿ ಪಡೆಯಬಹುದಲ್ಲದೆ ಬದುವಿನ ಮೇಲೆ ಗಿಡಗಳನ್ನು ನೆಟ್ಟು ಬದು ಬೇಸಾಯ ಸಹ ಮಾಡಬಹುದಾಗಿದೆ. ಈ ಕಾಮಗಾರಿಯಿಂದಾಗಿ ರೈತ ಕುಟುಂಬಕ್ಕೆ 146 ಮಾನವ ದಿನಗಳ ಸೃಜನೆಯಾಗುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯೋಜನೆಯು ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಕೃಷಿಹೊಂಡ ನಿರ್ಮಾಣದಿಂದ ಜಲ ಮರುಪೂರಣ :      …

Read More

ತುಮಕೂರು:      ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 2ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ವಿದ್ಯಾರ್ಥಿಯು ಗೈರು ಹಾಜರಾಗಬಾರದಂತೆ ಎಚ್ಚರವಹಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆ ಯಶಸ್ವಿಯಾಗಿರುವಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮಪರ್ಕವಾಗಿ, ವ್ಯವಸ್ಥಿತವಾಗಿ ಮಾಡಬೇಕು. ಮಕ್ಕಳು ಭಯಪಡದೇ ಪರೀಕ್ಷೆ ಬರೆಯುವಂತಾಗಬೇಕು. ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರನ್ನು/ಬಿಸಿ ಆರಿದ ನೀರು ತರುವಂತೆ ತಿಳಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.       ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗದಂತೆ ಒಂದು ದಿನದ ಮೊದಲೇ ಕೊಠಡಿಗಳ ವಿವರಗಳನ್ನು ಮೊಬೈಲ್‍ಗೆ ಸಂದೇಶ…

Read More

ತುಮಕೂರು:       ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 3ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.       ಜಿಲ್ಲಾದ್ಯಂತ 144 ಪರೀಕ್ಷಾ ಕೇಂದ್ರ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪಾರ ದರ್ಶಕವಾಗಿ ನಡೆಸುವ ದೃಷ್ಟಿಯಿಂದ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯು ಜೂನ್ 25 ರಿಂದ ಜುಲೈ 3ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು) ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.       ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ನಿಷೇಧವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.       ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು…

Read More

ತುಮಕೂರು:       ಶಾಲಾ ಕೊಠಡಿ ನಿರ್ಮಾಣ, ಕಟ್ಟಡ ದುರಸ್ತಿ, ಮತ್ತಿತರ ಮೂಲಭೂತ ಸೌಕರ್ಯ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯು ಅನುಮೋದನೆ ನೀಡಿದೆ.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಚೌಡಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ತುಮಕೂರು ಶೈಕ್ಷಣಿಕ ಜಿಲ್ಲೆಗೆ 492.11 ಲಕ್ಷ ರೂ. ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ 301.48ಲಕ್ಷ ರೂ.ಗಳ ಅನುದಾನಕ್ಕೆ ಅವರು ಅನುಮೋದನೆ ನೀಡಲಾಯಿತು.       ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಹಾಜರಾಗಲು ಅನುವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ, ಸಾರಿಗೆ ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಪ್ರತಿ ವಿದ್ಯಾರ್ಥಿಗೂ ಸ್ಯಾನಿಟೈಸರ್, ಮಾಸ್ಕ್ ಒದಗಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ…

Read More

ತುಮಕೂರು :       ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಕೋವಿಡ್-19 ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ.       ಡಿ.ಹೆಚ್ ಒ ಡಾ.ನಾಗೇಂದ್ರಪ್ಪ ಈ ಕುರಿತು ಮಾಹಿತಿ ನೀಡಿದ್ದು, tmk-47 ಎಂಬ ಸೋಂಕಿತರು ನೆಲಮಂಗಲ ತಾಲ್ಲೂಕಿನ ಕೊರೊನಾ ರೋಗಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. tmk-48 ಎಂಬ ಸೋಂಕಿತರು ಜೂ.೧೬ ರಂದು ತಮಿಳುನಾಡಿನಿಂದ ತಿಪಟೂರಿಗೆ ಬಂದಿದ್ದರು ಎನ್ನಲಾಗಿದೆ. , tmk 49 ಎಂಬ ಸೋಂಕಿತರು ತುಮಕೂರು ಗ್ರಾಮಾಂತರದ ವಾಸಿಯಾಗಿದ್ದು, tmk-50 ಎಂಬ ಸೋಂಕಿತರು ವಿದೇಶದಿಂದ ತುಮಕೂರು ನಗರಕ್ಕೆ ಆಗಮಿಸಿದ್ದ ೨೫ ವರ್ಷದ ಪುರುಷ.        ಇನ್ನು ಈ ಎಲ್ಲಾ ಸೋಂಕಿತರನ್ನು ತುಮಕೂರು ಕೋವಿಡ್-೧೯ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಸೊಂಕಿತರು ವಾಸವಿದ್ದ ಪ್ರದೇಶಗಳನ್ನು ಕಂಟೇನ್ ಮೆಂಟ್ ಝೋನ್ ಮಾಡಲಾಗಿದೆ.       ಜಿಲ್ಲೆಯಲ್ಲಿ ಇಂದು ಒಂದೇ…

Read More

ಗುಬ್ಬಿ :       ಹಸಿರು ವಲಯ ಎನಿಸಿಕೊಳ್ಳುವ ಹಂತದಲ್ಲಿದ್ದ ಗುಬ್ಬಿ ತಾಲ್ಲೂಕಿಗೆ ಕಳೆದ 24 ತಾಸುಗಳಲ್ಲೇ ಎರಡು ಕೊವೀಡ್-19 ಪ್ರಕರಣ ದೃಢಪಟ್ಟಿರುವ ಹಿನ್ನಲೆ ಕಂಟೋನ್ಮೆಂಟ್ ಏರಿಯಾಗಳಾಗಿ ಚೇಳೂರು ಕಲ್ಯಾಣ ಮಂಟಪ ಹಾಗೂ ಪಟ್ಟಣದ ಸಮೀಪದ ಕಿಟ್ಟದಕುಪ್ಪೆ ಗ್ರಾಮ ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ.       ಗುರುವಾರ ಸಂಜೆ ಸಮಯದಲ್ಲಿ ಚೇಳೂರು ಕಲ್ಯಾಣ ಮಂಟಪದಲ್ಲಿ ಕ್ವಾರೆಂಟೈನ್‍ನಲ್ಲಿದ್ದ ದೆಹಲಿ ಮೂಲದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟೀವ್ ದೃಢವಾಗಿದೆ. ದೆಹಲಿಯಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ ಈ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಎಷ್ಟೇನೂ ಕಷ್ಟ ಎನಿಸಿದಿದ್ದರೂ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಐಸೂಲೇಷನ್‍ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಶುಕ್ರವಾರ ಮುಂಜಾನೆ ಗುಬ್ಬಿ ಪಟ್ಟಣದ ನಾಗರೀಕರಲ್ಲಿ ಆತಂಕ ಮೂಡಿಸಿದ ಕಿಟ್ಟದಕುಪ್ಪೆ ಗ್ರಾಮದ ಪಾಸಿಟೀವ್ ವ್ಯಕ್ತಿಯ ಟ್ರಾವಲ್ ಹಿಸ್ಟರಿ ತೀವ್ರ ತಲೆ ನೋವಾಗಿದೆ.       ಕಿಟ್ಟದಕುಪ್ಪೆ ಮೂಲದ ಸುಮಾರು 55 ವರ್ಷದ ವ್ಯಕ್ತಿ ಹೃದಯ ಸಂಬಂಧಿ ರೋಗಕ್ಕೆ ಔಷಧ ತರಲು ಬೆಂಗಳೂರಿನ ಜಯದೇವ ಆಸ್ಪತ್ರೆಗೆ…

Read More

ತುಮಕೂರು:       ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡತೆ, ಯಾದಗಿರಿ ಜಿಲ್ಲೆಯ ದೇವದುರ್ಗ ಕೆಶಿಫ್ ಕಚೇರಿಯನ್ನು ಪರಿವರ್ತಿಸಿ, ಲೋಕೋಪಯೋಗಿ ತುಮಕೂರು ನಗರ ಉಪವಿಭಾಗವನ್ನು ಹೊಸದಾಗಿ ಸೃಜಿಸಲಾಗಿದ್ದು, ಈ ಉಪವಿಭಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿರವರು ಉದ್ಘಾಟಿಸಿದರು.       ತುಮಕೂರು ನಗರ, ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡತೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದು, ತುಮಕೂರು ಉಪವಿಭಾಗದಲ್ಲಿ ಕಾರ್ಯಭಾರ ಹೆಚ್ಚಿದ್ದರಿಂದ, ಸರ್ಕಾರ ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡತೆ, ಯಾದಗಿರಿ ಜಿಲ್ಲೆಯ ದೇವದುರ್ಗ ಕೆಶಿಫ್ ಕಚೇರಿಯನ್ನು ಪರಿವರ್ತಿಸಿ ತುಮಕೂರು ನಗರ ಉಪವಿಭಾಗವನ್ನು ಸೃಜಿಸಿ ಆದೇಶ ಹೊರಡಿಸಿದೆ.       ಇದರಿಂದಾಗಿ ತುಮಕೂರು ನಗರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಒಳಗೊಂಡ ನಗರ ಉಪವಿಭಾಗವು ಇಲಾಖೆ ವತಿಯಿಂದ ನಿರ್ವಹಿಸುವ ಕಟ್ಟಡ, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಸೃಜಿಸಿರುವ ಈ…

Read More

ತುಮಕೂರು:      ಕೇವಲ ಕೊಳವೆ ಬಾವಿ ಕೊರೆಯುವುದಷ್ಟೇ ಆರ್.ಡಬ್ಲ್ಯಎಸ್ ಕೆಲಸವಲ್ಲ. ಆ ನಂತರದ ಎಲ್ಲಾ ಕೆಲಸಗಳನ್ನು ಮೇಲುಸ್ತುವಾರಿ ಮಾಡಿ, ಅಂತಿಮವಾಗಿ ಜನರಿಗೆ ಕುಡಿಯುವ ನೀರು ಒದಗಿಸುವವರು, ಗ್ರಾ.ಪಂ., ತಾ.ಪಂ. ಅಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸಿ,ಉದ್ದೇಶ ಈಡೇರಿಸುವಂತೆ ಜಿ.ಪಂ.ಉಪಾಧ್ಯಕ್ಷೆ ಶ್ರೀಮತಿ ಶಾರದ ನರಸಿಂಹ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.       ಜಿ.ಪಂ.ಸಭಾಂಗಣದಲ್ಲಿ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಂದು ಒವರ್ ಹೆಡ್‍ಟ್ಯಾಂಕು ನಿರ್ಮಿಸುವ ಮುನ್ನ ಕೇವಲ ಕೊಳವೆ ಬಾವಿ ಕೊರೆದು,ಪೈಪ್ ಲೈನ್ ಅಳವಡಿಸಿದ ನಂತರ ಟ್ಯಾಂಕ್ ನಿರ್ಮಾಣಕ್ಕೆ ಮುಂದಾಗಬೇಕು.ಇಲ್ಲದಿದ್ದರೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ಸರಕಾರ ಲಕ್ಷಾಂತರ ರೂ ವೆಚ್ಚ ಮಾಡಿದರೂ ಉದ್ದೇಶ ಈಡೇರಿರುವುದಿಲ್ಲ. ಇದು ಸರಿಯಲ್ಲ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ, ತಾ.ಪಂ,ಆರ್.ಡಬ್ಲು ಎಸ್ ಹಾಗೂ ಪಿಆರ್‍ಇಡಿ ಅಧಿಕಾರಿಗಳು ಪರಸ್ವರ ಪೂರಕವಾಗಿ ಕೆಲಸ ಮಾಡಬೇಕೆಂದು ಸ್ಪಷ್ಟ ನಿರ್ದೇಶನ ನೀಡಿದರು.  …

Read More

ತುಮಕೂರು  :      ಸಿದ್ದಗಂಗಾ ಮಠದಲ್ಲಿ 10 ರಿಂದ 12 ಸಾವಿರ ಮಕ್ಕಳು ಪ್ರತಿನಿತ್ಯ ಊಟ ಮಾಡುವುದರಿಂದ ತರಕಾರಿ ಸಂಗ್ರಹಣೆ ಮಾಡುವುದು ಕಷ್ಟವಾಗುತ್ತಿದೆ ಹಾಗಾಗಿ ಮಠಕ್ಕೆ ಕೃಷಿ ಇಲಾಖೆಯು ನಬಾರ್ಡ್‍ನಿಂದ 7.5 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್‍ನ್ನು ನಿರ್ಮಾಣ ಮಾಡಲು ಹಣ ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.       ಶ್ರೀ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಸಚಿವರು ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಲಾಭ ಬರುವ ಯಾವ ಬೆಳೆಯನ್ನು ಬೇಕಾದರು ಬೆಳೆಯಲಿ ಸರ್ಕಾರ ಅವರಿಗೆ ಬಿತ್ತನೆ ಬೀಜದ ವ್ಯವಸ್ಥೆ ಮಾಡುವ ಕಾರ್ಯಮಾಡುತ್ತದೆ ಎಂದು ಅವರು ಹೇಳಿದರು.       ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಎಲ್ಲಿ ಬೇಕಾದರು ಮಾರಾಟ ಮಾಡುವ ಸ್ವಾತಂತ್ರ ರೈತರಿಗೆ ಇದೆ. ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಸಂಪೂರ್ಣ ಅನುಕೂಲವಾಗುತ್ತದೆ. ಎಂ.ಎನ್.ಸಿ. ಕಂಪನಿಯವರು…

Read More