ತುಮಕೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ, ಕರ್ನಾಟಕ ರೈತ ಸಂಘ ಮತ್ತು ಹಸಿರುಸೇನೆ ಹಾಗೂ ಎಐಕೆಸಿಸಿ ಕಾರ್ಯಕರ್ತರು ತುಮಕೂರಿನಲ್ಲಿ ರೈಲು ತಡೆಯಲು ಮುಂದಾದಾಗ ಪೊಲೀಸರು ಬಂಧಿಸಿರುವ ಘಟನೆ ಗುರುವಾರ ನಡೆದಿದೆ. ರೈತರಿಗೆ ಮರಣ ಶಾಸನವಾಗಿರುವ ನಾಲ್ಕು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಕಳೆದ 90 ದಿನಗಳಿಂದ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದನ್ನು ಬೆಂಬಲಿಸಿ ಇಂದು ದೇಶದಾದ್ಯಂತ ರೈತರು,ರೈತ ಸಂಘಟನೆಯ ಕಾರ್ಯಕರ್ತರುಗಳು ರೈಲು ತಡೆ ಚಳವಳಿ ಹಮ್ಮಿಕೊಂಡಿದ್ದು,ಇದರ ಭಾಗವಾಗಿ ಇಂದು ತುಮಕೂರಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ಮತ್ತು ಎಕೆಐಸಿಸಿಯ ಆರ್.ಕೆ.ಎಸ್ನ ಸ್ವಾಮಿ ಅವರ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ,ರೈಲು ತಡೆಯಲು ಮುಂದಾದಾಗ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿದರು. ಪ್ರತಿಭಟನೆಯ ವೇಳೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ್ಪಟೇಲ್, ರೈತರಿಗೆ…
Author: News Desk Benkiyabale
ತುಮಕೂರು : ಭೂಮಿಯ ಮೇಲ್ಮೈ ಮತ್ತು ಒಳಗಿರಬಹುದಾದ ರಚನೆಗಳನ್ನು ವೈಜ್ಞಾನಿಕವಾಗಿ ತಿಳಿದುಕೊಂಡು ಸೂಕ್ತ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲು ಜಿಐಎಸ್ ತಂತ್ರಜ್ಞಾನವು ತುಂಬಾ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿಂದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ನಿರ್ದೇಶಕರು(ಗ್ರಾ.ಉ), ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರುಗಳಿಗಾಗಿ ಜಿ.ಐ.ಎಸ್ ಆಧಾರಿತ ಕ್ರಿಯೋಯೋಜನೆ ತಯಾರಿಸುವ ಕುರಿತು ಹಮ್ಮಿಕೊಂಡಿದ್ದ 4 ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿ ಕಾರ್ಯಕ್ರಮದಲ್ಲಿ ಶ್ರದ್ಧೆಯಿಂದ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳು ವಿವರಿಸುವ ತಾಂತ್ರಿಕ ಸಲಹೆಗಳನ್ನು ಕಲಿತು ತಮ್ಮ ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಬೇಕೆಂದು. ಪ್ರತಿ ಜಿಲ್ಲೆಯಿಂದ ತಲಾ 5 ಜನರಂತೆ ಆಗಮಿಸಿದ್ದ ಪ್ರಶಿಕ್ಷಣಾರ್ಥಿಗಳಿಗೆ ಕರೆ…
ತುಮಕೂರು : ತುಮಕೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ “ಬಾಲ ಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ” ಎಂಬ ಘೋಷ ವಾಕ್ಯದೊಂದಿಗೆ ಫೆಬ್ರವರಿ 26ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಫೆಬ್ರವರಿ 26ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಶಿಷ್ಟಾಚಾರದಂತೆ ಆಹ್ವಾನಪತ್ರಿಕೆಯನ್ನು ಮುದ್ರಿಸಿ ಗಣ್ಯರಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಅವರು ನಿರ್ದೇಶಿಸಿದರು. ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಕೊರೊನಾ ನಿಯಮಾವಳಿಯನ್ನು ಪಾಲಿಸಬೇಕು. ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ರೂಪುರೇಷೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಆ ಮಾದರಿಯಲ್ಲಿಯೇ ಕಾರ್ಯಕ್ರಮ ನಡೆಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ತುಮಕೂರು ನಗರದಲ್ಲಿ ಬಾಲಕಾರ್ಮಿಕ ಮುಕ್ತ ನಡೆ ತುಮಕೂರು ಕಡೆ ಎಂಬುದರ ಬಗ್ಗೆ ಜನಜಾಗೃತಿ ಮೂಡಿಸಲು ಬೈಕ್…
ತುಮಕೂರು : ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಫೆಬ್ರವರಿ 20ರ 3ನೇ ಶನಿವಾರದಂದು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಲಕ್ಷ್ಮಿಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ ಅವರು ವಾಸ್ತವ್ಯ ಮಾಡಿ ಗ್ರಾಮದಲ್ಲಿನ ರೈತರ ಜಮೀನುಗಳ ಪಹಣಿ ಲೋಪದೋಷ, ಪಿಂಚಣಿ, ರೇಷನ್ ಕಾರ್ಡ್, ಮತ್ತಿತರ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲೆಯ ತಹಶೀಲ್ದಾರರುಗಳಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು, ಸರ್ಕಾರದ ಸುತ್ತೋಲೆಯನ್ವಯ ಮುಂಬರುವ ಫೆಬ್ರವರಿ 20ರಂದು ಹಾಗೂ ಪ್ರತಿ ತಿಂಗಳ 3ನೇ ಶನಿವಾರದಂದು ಕೈಗೊಳ್ಳಬೇಕಾಗಿರುವ ಗ್ರಾಮಭೇಟಿ ಹಾಗೂ ಹಳ್ಳಿ ವಾಸ್ತವ್ಯದ ಬಗ್ಗೆ ನಿರ್ದೇಶನ ನೀಡಿದರು. ಫೆಬ್ರವರಿ 20ರಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ, ಮಧುಗಿರಿ ತಾಲ್ಲೂಕಿನ ತಹಶೀಲ್ದಾರ್, ಕೃಷಿ, ತೋಟಗಾರಿಗೆ, ಆರೋಗ್ಯ, ಆಹಾರ, ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾ…
ಹುಳಿಯಾರು : ದಸೂಡಿ ಸಮೀಪದ ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯವರೆ ಬೆಳಸಿದ್ದ ಮರಗಳನ್ನು ಅರಣ್ಯಾಧಿಕಾರಿಗಳೇ ಕಡಿದು ಅದೇ ಸ್ಥಳದಲ್ಲಿ ಪುನಃ ಅರಣ್ಯೀಕರಣ ಮಾಡಲು ಹೊರಟಿದ್ದಾರೆ ಎಂದು ಗಾಣಧಾಳು ಗ್ರಾಮ ಪಂಚಾಯಿತಿ ಸದಸ್ಯ ಗುರುವಾಪುರ ಶ್ರೀನಿವಾಸ್ ಆರೋಪಿಸಿದ್ದಾರೆ. ಬುಕ್ಕಾಪಟ್ಟಣ ವಲಯ ಅರಣ್ಯ ಪ್ರದೇಶಕ್ಕೆ ಸೇರಿದ ದಸೂಡಿ ಸರ್ಕಾರಿ ಸರ್ವೆ ನಂಬರ್ 100, 101, 104, 106 ರಲ್ಲಿ ಸುಮಾರು 290 ಎಕರೆ ಅರಣ್ಯ ಪ್ರದೇಶದಲ್ಲಿ ಈ ಹಿಂದೆ ಜಾಣೆ, ಕಮರ ಸೇರಿದಂತೆ ಅನೇಕ ಗಿಡಗಳನ್ನು ಅರಣ್ಯ ಇಲಾಖೆಯವರೆ ನೆಟ್ಟು ಐದಾರು ವರ್ಷ ಟ್ಯಾಂಕರ್ಗಳಲ್ಲಿ ನೀರುಣಿಸಿ ಬೆಳೆಸಿದ್ದರು. ಈಗ ಈ ಎಲ್ಲಾ ಮರಗಳು ಹೆಮ್ಮರವಾಗಿ ಬೆಳೆದು ಪ್ರಾಣಿ ಪಕ್ಷಿಗಳಿಗೆ ನೆರಳು, ಹಣ್ಣು ನೀಡುತ್ತಿರುವ ಸಂದರ್ಭದಲ್ಲಿ ನಿರ್ಧಾಕ್ಷ್ಯಿಣ್ಯವಾಗಿ ಕಡಿದು ಧರೆಗುರುಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಮುಂಬೈ, ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ಧಾರಿ ನಿರ್ಮಾಣಕ್ಕಾಗಿ ಹಾಳಾಗಿರುವ ಅರಣ್ಯ ನಾಶದ…
ತುಮಕೂರು : ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಶಿಕ್ಷಕರುಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ಧ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಪ್ರೌಢ ಶಾಲಾಶಿಕ್ಷಕರ ಪ್ರಗತಿ ಪರಿಶೀಲನಾ ಹಾಗೂ ಮಾರ್ಗದರ್ಶನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು 14ನೇ ಸ್ಥಾನದಲ್ಲಿದೆ. ಆದರೆ ಈ ಬಾರಿ ಉತ್ತಮ ಫಲಿತಾಂಶದೊಂದಿಗೆ ಜಿಲ್ಲೆಯನ್ನು ಉತ್ತಮ ಸ್ಥಾನಕ್ಕೇರಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ತನ್ನ ಮಗು ಎಂದು ಭಾವಿಸಿ, ಉತ್ತಮ ಮಾರ್ಗದರ್ಶನ ನೀಡಬೇಕು. ಕೋವಿಡ್-19ರ ಹಿನ್ನೆಲೆಯಲ್ಲಿ ಪಠ್ಯಗಳು ಕಡಿಮೆಯಾಗಿದ್ದು, ಪ್ರತಿ ಮಗುವು ಉತ್ತೀರ್ಣರಾಗುವಂತೆ ತಯಾರು ಮಾಡಬೇಕು ಎಂದರು. ಪ್ರತಿಯೊಬ್ಬ ಮನುಷ್ಯನ ನಿರ್ಮಾಣ ಶಿಕ್ಷಕರಿಂದಲೇ ಸಾಧ್ಯ, ಅಂತಹ ಶಿಕ್ಷಕರಿಗೆ ಸಲಹೆ ನೀಡುವ ಬದಲು, ಶಿಕ್ಷಕರು ಹೇಳುವ…
ತುಮಕೂರು : ರಾತ್ರಿ ವೇಳೆಯಲ್ಲಿ ಸಿರಾ ಟೌನ್, ಸಂತೇಪೇಟೆ ಸರ್ಕಾರಿ ಸ್ಕೂಲ್ ಮುಂಭಾಗ ಸಿರಾ- ತುಮಕೂರು ಎನ್.ಹೆಚ್-4 ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸುಮಾರು 11 ಲಕ್ಷ ರೂ ಮೌಲ್ಯದ KA-64 -3627 ನಂಬರಿನ 12 ಚಕ್ರದ ಅಶೋಕ್ ಲೈಲ್ಯಾಂಡ್ ಲಾರಿಯನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಪ್ರಕರಣ ದಾಖಲಿಸಿಲಾಗಿತ್ತು. ಕಳವಾದ ಲಾರಿ ಮತ್ತು ಆರೋಪಿಗಳನ್ನು ಪತ್ತೆ ಮಾಡಲು ಶಿರಾ ಎಲ್ ಡಿ.ಎಸ್.ಪಿ. ಕುಮಾರಪ್ಪ ರವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ಸದರಿ ತಂಡವು ಕೆಳಕಂಡ ಅರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಆರೋಪಿಗಳಾದ ಎಸ್. ಮಣಿಕಂಠನ್ @ ರಮೇಶ್ ಕುಮಾರ್, ಮನೋಜ್ ತಿರಕಿ @ ಮೈಕಲ್ ಬಿನ್ ಒಮದ ತಿರಕಿ ರವರುಗಳು ಲಾರಿಯನ್ನು ಕಳ್ಳತನ ಮಾಡಿ ತಮಿಳುನಾಡಿನ ಸೇಲಂಗೆ ತಗೆದುಕೊಂಡು ಹೋಗಿ ಪಳನಿಸ್ವಾಮಿ ಮತ್ತು ಸೆಂಥಿಲ್ ನಾಥನ್ ವಕೀಲರು ರವರುಗಳಿಗೆ ಮಾರಾಟ ಮಾಡಿದ್ದು, ಪಳನಿ ಸ್ವಾಮಿ ಮತ್ತು ಸಂಥಿಲ್ ನಾಥನ್ ರವರು ಪ್ರಸಾದ್ ಬಿನ್ ಕನ್ನನ್,…
ತುಮಕೂರು: ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್ ಅವರಿಂದ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ವಹಿಸಿಕೊಂಡರು. ನೂತನ ಜಿಲ್ಲಾಧಿಕಾರಿ ಪಾಟೀಲ್ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಜಿಲ್ಲಾಧಿಕಾರಿಗಳ ಕಚೇರಿ ತೆರಳಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನೂತನ ಜಿಲ್ಲಾಧಿಕಾರಿಗಳನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಉಪವಿಭಾಗಾಧಿಕಾರಿ ಅಜಯ್ ಅಭಿನಂದಿಸಿದರು.
ಹುಳಿಯಾರು: ಹುಳಿಯಾರು ಪಟ್ಟಣದಲ್ಲಿನ ಏಕೈಕ ಆಟದ ಮೈದಾನವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನವನ್ನು ಉಳಿಸಿ ಶಾಲಾ ಕಟ್ಟಡದ ಕಾಮಗಾರಿ ನಿರ್ಮಾಣ ಮಾಡುವುದಾಗಿ ಜಿಲ್ಲಾ ಪಂಚಾಯ್ತಿ ಎಇಇ ರವಿಕುಮಾರ್ ಭರವಸೆ ನೀಡಿದ್ದಾರೆ. ಹುಳಿಯಾರು ಪಟ್ಟಣದ 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆಗೆ ಹೃದಯಭಾಗದಲ್ಲಿರುವ ಈ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನ ಆಸರೆಯಾಗಿದೆ. ಅದ್ದೂರಿ ಸಾರ್ವಜನಿಕ ಕಾರ್ಯಕ್ರಮ, ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ, ಆರ್ಎಸ್ಎಸ್ ಶಾಖೆ ಸೇರಿದಂತೆ ಹಿರಿಯ ನಾಗರಿಕರ ವಾಕಿಂಗ್, ಸ್ಥಳಿಯ ಯುವಜನತೆಯ ಆಟ, ವ್ಯಾಯಾಮ ಎಲ್ಲವೂ ಇಲ್ಲಿ ನಡೆಯುತ್ತಿದೆ. ಆದರೆ ಈ ಆಟದ ಮೈದಾನದಲ್ಲೇ ಕರ್ನಾಟಕ ಪಬ್ಲಿಕ್ ಶಾಲೆಗೆ ನೂತನವಾಗಿ ಮಂಜೂರಾಗಿರುವ ಕಟ್ಟಡಗಳನ್ನು ಕಟ್ಟಲು ಗುತ್ತಿಗೆದಾರರು ಮುಂದಾಗಿದ್ದರು. ಕಟ್ಟಡದ ಮಾರ್ಕ್ ಮಾಡುವಾಗಲೇ ಸ್ಥಳಿಯರು ಮನವಿ ಮಾಡಿದ್ದರೂ ಕೇಳದೆ ಜೆಸಿಬಿ ಮೂಲಕ ಪಿಲ್ಲರ್ ಗುಂಡಿಗಳನ್ನು ಸಹ ತೆಗೆಸಿದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆಗೆ ಸಿದ್ಧತೆ ಸಹ ನಡೆಸಿದರು. ವಿಷಯ ತಿಳಿದ ಜಿಪಂ…
ತುಮಕೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿಯ ಬಧಿಸಲಾಗಿದೆ. ಸೌಮ್ಯ ( ಲಾವಣ್ಯ ಗೌಡ) ಬೆಂಗಳೂರಿನ ಕಡಬಗಲಿಯ ಜನಪ್ರಿಯ ಲೇಔಟ್’ನ ಸೌಮ್ಯ ( ಲಾವಣ್ಯ ಗೌಡ) ಎಂಬ ಆರೋಪಿಯು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಆಗಾಗ್ಗೆ ಬಂದು ಹೋಗುತ್ತಾ ತಾನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತೇನೆಂದು ನಂಬಿಸಿ ನಿರುದ್ಯೋಗಿ ಯುವಕ ಮತ್ತು ಯುವತಿಯರಾದ ಬೆಂಗಳೂರಿನ ವಾಸಿಗಳಾದ ರಶ್ಮಿ, ರಾಜೇಶ್, ತಿಮ್ಮರಾಜು ಮತ್ತು ಸಂದೀಪ್ ಕುಮಾರ್ ಎಂಬುವವರಿಗೆ ನಂಬಿಸಿ ಅದಕ್ಕೆ ಪೂರಕವೆಂಬಂತೆ ಜಿಲ್ಲಾಧಿಕಾರಿಗಳ ಸಭಾ ನಡವಳಿಯ ಒಂದು ಪುಸ್ತಕವನ್ನು ತೋರಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿ.ಸಿ, ಎ.ಡಿಸಿ, ಎ.ಸಿ ಮತ್ತು ಮುಜರಾಯಿ ಇಲಾಖೆಯ ನಿರ್ದೇಶಕರ ಆಪ್ತ ಸಹಾಯಕ ಹುದ್ದೆಗಳನ್ನು ಕೊಡಿಸುವುದಾಗಿ ಅವರುಗಳಿ೦ದ ಹಣ ಮತ್ತು ಮೂಲ ಆಂಕಪಟ್ಟಗಳನ್ನು ಪಡೆದು ಮೋಸ ಮಾಡಿದ್ದು, ಮೋಸ ಹೋದ ರಾಜೇಶ್ ಹಾಗೂ ಇತರರು ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗಿ ಕೆಲಸದ ಬಗ್ಗೆ ವಿಚಾರಿಸಲಾಗಿ…











