Author: News Desk Benkiyabale

ತುಮಕೂರು :         ದೆಹಲಿಯಲ್ಲಿರುವ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ,ದೇಶದೆಲ್ಲಡೆ ರೈತರು ನಡೆಸುತ್ತಿರುವ ಹೆದ್ದಾರಿ ಪ್ರತಿಭಟನೆಯ ಅಂಗವಾಗಿ ತುಮಕೂರಿನಲ್ಲಿ ರೈತ ಸಂಘ, ಹಸಿರು ಸೇನೆ, ಪ್ರಗತಿಪರ ಸಂಘಟನೆಗಳು ಹಾಗೂ ಕಾರ್ಮಿಕರು ಹಮ್ಮಿಕೊಂಡಿದ್ದ ಶಾಂತಿಯುತ ರಸ್ತೆ ತಡೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಪೊಲೀಸರ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಸಿದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಆರೋಪಿಸಿದ್ದಾರೆ.       ನಗರದ ಗುಬ್ಬಿಗೇಟ್ ಬಳಿ ಶಾಂತಿಯುತ ಪ್ರತಿಭಟನೆಗೆ ಮುಂದಾದ ರೈತರು,ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಮಿಕರನ್ನು ಬಂಧಿಸಿದ ಪೊಲೀಸರ ಕ್ರಮ ಸರಿಯಲ್ಲ ಎಂದ ಅವರು,ನಾವುಗಳು ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವು.ಆದರೆ ತುಮಕೂರು ಪೊಲೀಸರು ಪ್ರತಿಭಟನೆಗೆ ಕುಳಿತುಕೊಳ್ಳುವ ಮುನ್ನವೇ ನಮ್ಮನ್ನು ಬಲವಂತವಾಗಿ ಬಂಧಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ.ಇದು ಸರಿಯಲ್ಲ.ಇಂದು ರೈತರ ಸ್ಥಿತಿ ಬೀದಿಗೆ ಬಿದ್ದಿದೆ.ರೈತರ ಹೋರಾಟಕ್ಕೆ ಪ್ರಪಂಚದಾದ್ಯಂತ ತಿಳಿದವರು ಮಾತನಾಡುತಿದ್ದಾರೆ. ಇದನ್ನು ಸಹಿಸದ ಕೇಂದ್ರ ಮತ್ತು ರಾಜ್ಯ ಸರಕಾರ ಪೊಲೀಸ್ ಬಲ ಬಳಸಿ…

Read More

ಹುಳಿಯಾರು :       ರೈತರು ಈ ದೇಶದ ಮೂಲನಿವಾಸಿಗಳು, ದೆಹಲಿ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಸಮಸ್ಯೆಗಳನ್ನು ಆಲಿಸದ ಕೇಂದ್ರ ಸರ್ಕಾರ ಕಣ್ಣು, ಕಿವಿ ಇಲ್ಲದ ಹೃದಯಹೀನ ಸರ್ಕಾರ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಟೀಕಿಸಿದರು.       ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ ಹೆದ್ದಾರಿ ಬಂದ್ ಬೆಂಬಲಿಸಿ ಹೊಸಹಳ್ಳಿ ಚಂದ್ರಣ್ಣ ಬಣದ ರೈತ ಸಂಘದಿಂದ ಹುಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 234 ಬಂದ್ ಹಾಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.        ಕೇಂದ್ರ ಸರ್ಕಾರ ಕೃಷಿ ಕಾಯ್ದೆ ತಿದ್ದು ಪಡಿಯು ರೈತನ ಮರಣ ಶಾಸನವಾಗಿದೆ ಹಾಗಾಗಿ ಕೊರೆಯುವ ಚಳಿಯಲ್ಲಿ 90 ವರ್ಷದವರೆಗಿನ ವಯೋವೃದ್ಧರು ಸೇರಿದಂತೆ ಮಹಿಳೆಯರು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರೆಲ್ಲರೂ ಅಪ್ಪಟ ರೈತರ ವಿನಹ ಭಯೋತ್ಪಾದಕರಲ್ಲ. ಆದರೂ ಅದಾನಿ, ಅಂಬಾನಿಗಾಗಿ ದೇಶದ ರೈತರನ್ನು ಪ್ರಧಾನಿಗಳು ದೇಶದ್ರೋಹಿಗಳು ಎಂದಿದ್ದಾರೆ. ಇದು ಖಂಡನಾರ್ಹವಾಗಿದ್ದು…

Read More

ತುಮಕೂರು :      ನಗರ ಪೊಲೀಸ್ ಠಾಣೆ ವ್ಯಾಪ್ತಿ ಬಾರ್ಲೈನ್ ರಸ್ತೆಯ ಶಿಲ್ಪಬಾರ್ ಬಳಿ ಫೆಬ್ರುವರಿ 1ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯು ಫೆ.3ರಂದು ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯು 172 ಸೆ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ಬಿಳಿ ಬಣ್ಣದ ಟಿ ಷರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಹಾಗೂ ಎದೆಯ ಮೇಲೆ ರಾಗಿ ಕಾಳು ಗಾತ್ರದ ಮಚ್ಚೆ ಇರುತ್ತದೆ. ಮೃತನ ಹೆಸರು, ವಿಳಾಸ ಪತ್ತೆಯಾಗಿರುವುದಿಲ್ಲ,       ಪ್ರಕರಣವು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಯನ್ನು ಸಂರ್ಪಕಿಸಬಹುದಾಗಿದೆ ಎಂದು ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.

Read More

ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಮನುಷ್ಯನ ಬದುಕಲ್ಲಿ ಯಾಂತ್ರಿಕವಾಗಿ ಜೀವನ ಮಾಡುತ್ತಿದ್ದೇವೆ. ಮನಸ್ಸನ್ನು ಹಗುರ ಮಾಡಿಕೊಂಡು ಹೊಸ ಮನುಷ್ಯರಾಗಬೇಕು. ಮನುಷ್ಯ ಮಾನಸಿಕ ಒತ್ತಡದಿಂದ ಹೊರಬರಬೇಕಾದರೆ ಕ್ರೀಡೆ, ಸಂಗೀತ, ನೃತ್ಯ, ಓದುವಂತಹ ಅಭ್ಯಾಸಗಳಲ್ಲಿ ತಲ್ಲೀನರಾಗಬೇಕು. ಮನಸ್ಸು ಸದಾ ಆರೋಗ್ಯವಾಗಿದ್ದರೆ ನಮ್ಮ ದಿನನಿತ್ಯ ಚಟುವಟಿಕೆ ಚೈತನ್ಯದಿಂದ ಕೂಡಿರುತ್ತದೆ. ಸರ್ಕಾರಿ ನೌಕರರು ಸದಾ ಉತ್ಸಕರಾಗಿ ಜನರ ಸೇವೆ ಮಾಡಬೇಕು. ಜಿಲ್ಲೆಯ ಅಭಿವೃದ್ಧಿ…

Read More

ಹುಳಿಯಾರು:      ಮಾನ್ಯ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮತ್ತು ಸಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮಾದಿಗರಿಗೆ ನೀಡಿದ ಭರವಸೆಯಂತೆ ಕೂಡಲೇ ಕರ್ನಾಟಕದಲ್ಲಿ ಸದಾಶಿವ ವರದಿ ಜಾರಿ ಮಾಡಿ ಒಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಮಾದಿಗ ಚೈತನ್ಯ ರಥ ಯಾತ್ರೆಯು ಹುಳಿಯಾರಿಗೆ ಆಗಮಿಸಿತು.       ಹುಳಿಯಾರಿನ ಎಸ್‍ಎಲ್‍ಆರ್ ಬಂಕ್ ಬಳಿ ರಥ ಯಾತ್ರೆಗೆ ಸ್ವಾಗತ ಕೋರಿದ ಮಾದಿಗ ಸಮುದಾಯದವರು ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿದರು. ರಾಮಗೋಪಾಲ್ ಸರ್ಕಲ್, ವಿನಾಯಕ ನಗರ, ಪೊಲೀಸ್ ಸ್ಟೇಷನ್ ಸರ್ಕಲ್‍ನಲ್ಲಿ ಸಭೆ ನಡೆಸಿ ಬೆಂಗಳೂರಿನಲ್ಲಿ ಫೆಬ್ರವರಿ 8 ರಂದು ಮಾದಿಗ ಮತ್ತು ಸಂಬಂಧಿತ 47 ಜಾತಿಗಳ 10 ಲಕ್ಷ ಜನರ ಬೃಹತ್ ವಿರಾಟ್ ಶಕ್ತಿ ಪ್ರದರ್ಶನ ಮತ್ತು ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಲ್ಲರೂ ಭಾಗವಹಿಸುವಂತೆ ಕರೆ ನೀಡಲಾಯಿತು. ಅಂಬೇಡ್ಕರ್ ಅವರ ಸಂವಿಧಾನದ ಮುನ್ನುಡಿಯಲ್ಲಿ ಎಲ್ಲಾ ಜಾತಿ, ಜನಾಂಗ ಧರ್ಮದವರಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ನೀಡಬೇಕೆಂದು ಮತ್ತು ಅವಕಾಶಗಳಲ್ಲಿ…

Read More

ತುಮಕೂರು :       ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಕೇಂದ್ರ ಸಂಘ(ರಿ)ದವತಿಯಿಂದ ಸರಕಾರಕ್ಕೆ ಇಲಾಖೆಯ ನೌಕರರ ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದು, ಸರಕಾರ ಸರಕಾರತ್ಮಕವಾಗಿ ಸ್ಪಂದಿಸಿದೆ ಎಂದು ಆರೋಗ್ಯ ಇಲಾಖೆಯ ನೌಕರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,sಸುಮಾರು 150ಕ್ಕೂ ಹೆಚ್ಚು ವೃಂದಗಳನ್ನು ಹೊಂದಿರುವ ಅತಿ ದೊಡ್ಡ ಇಲಾಖೆ ಇದಾಗಿದ್ದು,ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿಗಳಿಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಸಚಿವರು, ಪ್ರಧಾನ ಕಾರ್ಯದರ್ಶಿಗಳಿಗೆ ಮುಂದಿನ ಕ್ರಮಕ್ಕಾಗಿ ರವಾನಿಸಿದ್ದಾರೆ ಎಂದರು.      ಇಲಾಖೆಯ ನೌಕರರು ಪ್ರಮುಖವಾಗಿ ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ.ಆದರೆ ವೈದ್ಯ ವೃಂದಕ್ಕೆ ಮಾತ್ರ 25 ಸಾವಿರದಿಂದ 1.25 ಲಕ್ಷದ ವರೆಗೆ ವಿಶೇಷ ಭತ್ಯೆ ನೀಡಲಾಗಿದೆ.ಉಳಿದ ಅರೆ ವೈದ್ಯಕೀಯ,…

Read More

 ತುಮಕೂರು :        ತುಮಕೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿವೇಶನ ಕೊರತೆಯಿಂದ ನಿರ್ಮಾಣವಾಗದಿರುವ ಅಂಗನವಾಡಿ ಕೇಂದ್ರಗಳ ಪಟ್ಟಿ ತಯಾರಿಸಿ ಎಂದು ಉಪವಿಭಾಗಾಧಿಕಾರಿ ಅಜಯ್ ಅವರು ಸಿಡಿಪಿಒಗಳಿಗೆ ಸೂಚಿಸಿದರು.       ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೋಷಣ್ ಅಭಿಯಾನ ಒಗ್ಗೂಡಿಸುವಿಕೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳಿಗೆ ಪೋಷಣ್ ಅಭಿಯಾನ ಯೋಜನೆಯಡಿ ಸರಬರಾಜುಗೊಂಡಿರುವ ಅಳತೆ ಮಾಪನಗಳ ಉಪಯೋಗಗಳು, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗಿರುವ ಸ್ಮಾರ್ಟ್‍ಫೋನ್‍ಗಳ ಬಗ್ಗೆ, ಪೂರಕ ಪೌಷ್ಠಿಕ ಆಹಾರ ವಿತರಣೆಯ ಬಗ್ಗೆ ಹಾಗೂ ಇನ್‍ಕ್ರಿಮೆಂಟಲ್ ಲರ್ನಿಂಗ್ ಅಪ್ರೊಚ್() ತರಬೇತಿಗಳ ಬಗ್ಗೆ ಚರ್ಚಿಸಲಾಯಿತು. ಮಕ್ಕಳ ಪೌಷ್ಠಿಕ ಮಟ್ಟವನ್ನು ಕೇಂದ್ರವಾರು ಪಟ್ಟಿ ಮಾಡಿ ಪ್ರತಿ ಮಾಹೆ ದಾಖಲಿಸುವಂತೆ ಅವರು ತಿಳಿಸಿದರು.       ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಅಂಗನವಾಡಿ ಕಟ್ಟಡಗಳು ಮತ್ತು ಶೌಚಾಲಯಗಳ ಲಭ್ಯತೆ, ಅಲಭ್ಯತೆ ಮತ್ತು ದುರಸ್ಥಿಗಳ ಕುರಿತು ಮಾಹಿತಿಯನ್ನು ಲಿಖಿತ ರೂಪದಲ್ಲಿ ನೀಡುವಂತೆ ಸಿಡಿಪಿಒಗಳಿಗೆ ಸೂಚಿಸಿದರು.    …

Read More

ತುಮಕೂರು :       ತಾಲೂಕಿನ ಅರಕೆರೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ವನಜಾಕ್ಷಮ್ಮ, ಉಪಾಧ್ಯಕ್ಷರಾಗಿ ಪ್ರೇಮಕುಮಾರಿ ಅವರುಗಳು ಆಯ್ಕೆಯಾಗಿದ್ದಾರೆ.       ತುಮಕೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಅರಕೆರೆ ಗ್ರಾಮಪಂಚಾ ಯಿತಿಯಲ್ಲಿ ಒಟ್ಟು 18 ಜನ ಸದಸ್ಯರಿದ್ದು,ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅರಕೆರೆ ಒಂದನೇ ವಾರ್ಡಿನ ಸದಸ್ಯೆ ವನಜಾಕ್ಷಮ್ಮ 14 ಸದಸ್ಯರ ಬೆಂಬಲದೊಂದಿಗೆ ಆಯ್ಕೆಯಾದರೆ,ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹೊಸಹಳ್ಳಿ ಕ್ಷೇತ್ರದ ಪ್ರೇಮಕುಮಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವನಜಾಕ್ಷಮ್ಮ,ತುಮಕೂರು ನಗರಕ್ಕೆ ಹತ್ತಿರದಲ್ಲಿರುವ ಅರಕೆರೆ ಗ್ರಾಮಪಂಚಾಯಿತಿಯನ್ನು ಮಾದರಿ ಗ್ರಾಮಪಂಚಾಯಿತಿಯಾಗಿ ರೂಪಿಸಬೇಕೆಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.       ಚುನಾಯಿತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಜಿಲ್ಲಾ…

Read More

 ತುಮಕೂರು :       ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಸೂಚನೆ ನೀಡಿದ್ದಾರೆ.       ಇತ್ತೀಚಿಗೆ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಇಲಾಖಾ ಕಾರ್ಯಕ್ರಮಗಳಿಗಾಗಿ ಜಿಲ್ಲೆಗೆ 2020-21ನೇ ಸಾಲಿಗಾಗಿ 170 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನವನ್ನು ಬಳಸಿಕೊಂಡು ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ, ಫ್ಯಾನ್ ಹಾಗೂ ಲೈಟ್‍ಗಳನ್ನು ಅಳವಡಿಸಬೇಕೆಂದು ನಿರ್ದೇಶನ ನೀಡಿದ್ದಾರೆ.       ಪ್ರತಿ ಅಂಗನವಾಡಿ ಕೇಂದ್ರಕ್ಕೆ 25000 ರೂ.ನಂತೆ ಸಿದ್ಧಪಡಿಸಿರುವ ಅಂದಾಜುಪಟ್ಟಿ ಬಗ್ಗೆ ಚರ್ಚಿಸಿದ ಅವರು, ಪ್ರತಿ ಕೇಂದ್ರಕ್ಕೆ 25000 ರೂ.ಗಳ ಅನುದಾನ ಅಗತ್ಯವಿರುವುದಿಲ್ಲ. ಆದ್ದರಿಂದ ಅಂದಾಜು ಪಟ್ಟಿಗಳನ್ನು ಪರಿಷ್ಕರಿಸಿ ವಾಸ್ತಾವಿಕ ವೆಚ್ಚದಲ್ಲಿ ಹೆಚ್ಚು ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಭೆಯಲ್ಲಿ ಹಾಜರಿದ್ದ ಪಿ.ಆರ್.ಇ.ಡಿ ಅಭಿಯಂತರರಿಗೆ ಸಭೆಯಲ್ಲಿ ಸೂಚಿಸಿದ್ದಾರೆ.       ವಿದ್ಯುತ್‍ನೊಂದಿಗೆ…

Read More

ಗುಬ್ಬಿ:      ಸುಟ್ಟುಹೋದ ವಿದ್ಯುತ್ ಪರಿವರ್ತಕವನ್ನು ಬದಲಿಸಿಕೊಡುವಲ್ಲಿ ವಿಳಂಬ ಅನುಸರಿಸಿದ ಗುಬ್ಬಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾಡಿಗೆರೆ ಗ್ರಾಮಸ್ಥರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಈ ಬಗ್ಗೆ ಅಸಡ್ಡೆವಹಿಸಿದ ಬೆಸ್ಕಾಂ ಸಿಬ್ಬಂದಿಗಳ ವಿರುದ್ದ ಆಕ್ರೋಶ ಹೊರಹಾಕಿದ ಸ್ಥಳೀಯರು ಇಡೀ ಬೆಸ್ಕಾಂ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.         ಕಸಬ ಹೋಬಳಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಿಗೆರೆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ದಿಢೀರ್ ಸುಟ್ಟುಹೋದ ಟ್ರಾನ್ಸ್‍ಫಾರ್ಮರ್ ಇಡೀ ಗ್ರಾಮ ಕಗ್ಗತ್ತಲಲ್ಲಿ ಇರುವಂತಾಯಿತು. ಈ ಬಗ್ಗೆ ಕೂಡಲೇ ಅಧಿಕಾರಿಗಳಿಗೆ ತಿಳಿಸಲಾಯಿತು. ದುರಸ್ಥಿ ಮಾಡುವುದಾಗಿ ಹೇಳಿ ದಿನ ಕಳೆದಂತೆ ಒಂದಲ್ಲಾ ಒಂದು ಸಬೂಬು ಹೇಳಿಕೊಂಡು 15 ದಿನಗಳಾದರೂ ಟಿಸಿ ಬದಲಿಸಲಿಲ್ಲ. 200 ಕ್ಕೂ ಅಧಿಕ ಮನೆಗಳಿರುವ ಈ ಗ್ರಾಮಕ್ಕೆ ವಿದ್ಯುತ್ ಕುಡಿಯುವ ನೀರಿಗೆ ಬೇಕಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.       ಗ್ರಾಮಗಳ ಮನೆಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ವಿದ್ಯುತ್ ಪಡೆದುಕೊಳ್ಳಲು ಹರಸಾಹಸ…

Read More