Author: News Desk Benkiyabale

ತುಮಕೂರು:       ಸರ್ಕಾರ ಖಾಸಗಿ ಬಸ್ ಮಾಲೀಕರ ಬೇಡಿಕೆಯಾದ ವಿಮೆ ವಿನಾಯಿತಿ ಹಾಗೂ ಮಾಸಿಕ ಕಂತಿನ ರಿಯಾಯಿತಿಯನ್ನು ನೀಡಿದರೆ ಮಾತ್ರ ಖಾಸಗಿ ಬಸ್ ಗಳ ಸೇವೆ ಪುನರಾರಂಭವಾಗಲಿದೆ ಎಂದು ತುಮಕೂರು ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್.ಬಲಶ್ಯಾಮಸಿಂಗ್ ತಿಳಿಸಿದರು.       ನಗರದ ಹೊರವಲಯ ಹಿರೇಹಳ್ಳಿಯಲ್ಲಿ ವಿವಿಧ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಸರ್ಕಾರಕ್ಕೂ ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದ್ದು, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ, ಸರ್ಕಾರ ಒಪ್ಪಿದರೆ ಮಾತ್ರ ಸೇವೆ ನೀಡಬಹುದಾಗಿದೆ ಎಂದು ಅವರು ತಿಳಿಸಿದರು.       ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಈಗಾಗಲೇ ಬಸ್ ಮಾಲೀಕರ ಬೇಡಿಕೆಯನ್ನು ತಿಳಿಸಲಾಗಿದೆ, ಬಸ್ ಮೇಲಿನ ತ್ರೈಮಾಸಿಕ ತೆರಿಗೆಗೆ ಡಿಸೆಂಬರ್ ವರೆಗೆ ವಿನಾಯ್ತಿ ನೀಡಬೇಕು ಮತ್ತು ಜೂನ್ ವರೆಗೆ 50ರಷ್ಟು ತೆರಿಗೆ ಕಟ್ಟಲು ಅವಕಾಶ ನೀಡಬೇಕು, ಹಾಗೆಯೇಮಾಸಿಕ ಕಂತು ಹಾಗೂ…

Read More

 ತುಮಕೂರು:       ಜಿಲ್ಲೆಯಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರದಲ್ಲಿ ದುರಸ್ತಿಪಡಿಸಿ, ಜನರಿಗೆ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿರುವ ಬಗ್ಗೆ ದೂರುಗಳು ಜನರಿಂದ ಬಂದಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಮುಂದಿನ ದಿನಗಳಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.       ಕುಡಿಯುವ ನೀರಿನ ಸಮಸ್ಯೆಗಳನ್ನು ಜಿಲ್ಲಾ ಪಂಚಾಯತ್ ಸದಸ್ಯರು ಅಧ್ಯಕ್ಷರ ಗಮನಕ್ಕೆ ತಂದರು. ಸಮಸ್ಯೆಯನ್ನು ಆಲಿಸಿದ ಅಧ್ಯಕ್ಷರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ…

Read More

ಪಾವಗಡ :        ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಆಲಿಕಲ್ಲು ಸಹಿತ   ಮಳೆಗೆ ಬಹಳಷ್ಟು ಹಾನಿಉಂಟಾಗಿದೆ  ಪಟ್ಟಣದ ಕೇಲವಂದು ಕಡೆ ಮರಗಳು ಧರೆಗೆ ಉರುಳಿದ್ದು ಮರದ ಕೊಂಬೆ ಕಾರಿನ ಮೇಲೆ ಬಿದಗದು ಜಕಮ್ ಗೊಂಡಿದೆ.        ಇನ್ನೊಂದು ಕಡೆ  ರಸ್ತೆಗಳಲ್ಲಿ ನೀರು ನಿಂತು ಅಂಗಡಿ ಮುಂಗಟ್ಟುಗಳಲ್ಲಿ ನೀರು ತುಂಬಿರುವ ಘಟನೆ ಹಾಗೂ ಪಟ್ಟಣದ ಬನಶಂಕರಿ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ವಿದ್ಯುತ್ ತಂತಿಗಳು ಹಾನಿಕರವಾಗಿದೆ. ಚಳಕೆರೆ ಮುಖ್ಯರಸ್ತೆ ಇದ್ದಂತಹ ರೈತ ಹರೀಶ್ ತೋಟದಲ್ಲಿ ಬೆಳೆದಂತಹ ಪಪ್ಪಾಯ ಬೆಳೆ ಮಳೆಗೆ ಕೊಚ್ಚಿಹೋಗಿದೆ ಇದರಿಂದ ಸುಮಾರು ಏಳು ಲಕ್ಷ ನಷ್ಟ ಉಂಟಾಗಿದ್ದು ದಿಕ್ಕುತೋಚದಂತಾಗಿದೆ ಎನ್ನುತ್ತಾರೆ ಹರೀಶ್ .        ಬಹಳ ದಿನಗಳ ನಂತರ ಸುರಿದ ಮಳೆಗೆ ಬೃಹತ್ ಚರಂಡಿಗಳು ತುಂಬಿ ಹರಿಯುತ್ತಿವೆ ಕೇಲವಂದ ಮನೆಗಳಿಗೆ ಮಳೆನೀರು ಸಂಗ್ರಹ ವಾಗಿ ಮನೆ ಮಂದಿ ಹೊರಹಾಕುವ ದೃಶ್ಯಗಳು ಕಂಡುಬಂದವು. ಇನ್ನೂ ಪ್ರಮುಖ ರಸ್ತೆಗಳು ಅವೈಜ್ಞಾನಿಕ…

Read More

ತುಮಕೂರು :       ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಅಕ್ಕಿ ಮತ್ತು ಕಡಲೆಕಾಳನ್ನು ಜಿಲ್ಲೆಗೆ ಜೂನ್ ಮಾಹೆಗೆ ಆಯಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಂಟಿ ನಿರ್ದೇಶಕ ಎಂ.ಶ್ರೀನಿವಾಸಯ್ಯ ಅವರ ತಿಳಿಸಿದ್ದಾರೆ.        ಆಯಾ ನ್ಯಾಯಬೆಲೆ ಅಂಗಡಿ ವ್ಯಾಪ್ತಿಯಲ್ಲಿರುವ ವಲಸಿಗರು ಮತ್ತು ಯಾವುದೇ ಪಡಿತರ ಚೀಟಿ ಹೊಂದಿಲ್ಲದೇ ಇರುವ ಕುಟುಂಬ ಸದಸ್ಯರು ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಮತ್ತು ಕಡಲೆಕಾಳನ್ನು ಪಡೆದುಕೊಳ್ಳಬಹುದು. ಮೇ ತಿಂಗಳಿನಲ್ಲಿ ಪಡಿತರ ಪಡೆದಿರುವವರು ಜೂನ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಮತ್ತು ಮೇ ತಿಂಗಳಿನಲ್ಲಿ ಪಡಿತರ ಪಡೆಯದೇ ಇರುವವರು ಮೇ ಮತ್ತು ಜೂನ್ 2 ತಿಂಗಳು ಸೇರಿ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಮತ್ತು ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳನ್ನು ಪಡೆಯಬಹುದಾಗಿದೆ.      ಕುಟುಂಬದ ಪ್ರತಿ…

Read More

 ಗುಬ್ಬಿ :       ನಾಪತ್ತೆಯಾಗಿದ್ದ ವ್ಯಕ್ತಿಯ ಹುಡುಕಾಟದಲ್ಲಿ ವಿಳಂಬ ಅನುಸರಿಸಿದ್ದ ಗುಬ್ಬಿ ಪೊಲೀಸ್ ಠಾಣೆಯ ಮುಂದೆ ಕೆಂಚನಹಳ್ಳಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಎಚ್ಚೆತ್ತ ಪೊಲೀಸರು ತನಿಖೆ ಚುರುಕುಗೊಳಿಸಿ ಒಂದೇ ತಾಸಿನಲ್ಲೇ ನಾಪತ್ತೆ ವ್ಯಕ್ತಿ ಶವವಾಗಿರುವ ಮಾಹಿತಿ ಕಲೆ ಹಾಕಿ ಶವ ಕೂಡಾ ಪತ್ತೆ ಮಾಡಿದ ಘಟನೆ ಸೋಮವಾರ ನಡೆದಿದೆ.       ಕಳೆದ ಬುಧವಾರ ಬೆಳಿಗ್ಗೆ ಮನೆಯಿಂದ ಟೈರ್ ಖರೀದಿ ಮಾಡಿ ಬರುವುದಾಗಿ ಹೊರಟ ನಿಟ್ಟೂರು ಹೋಬಳಿ ಕೆಂಚನಹಳ್ಳಿಯ ಜೆಸಿಬಿ ಯಂತ್ರ ಆಪರೇಟರ್ ಲಕ್ಷೀರಾಜು(37) ನಂತರದಲ್ಲಿ ನಾಪತ್ತೆಯಾಗಿದ್ದರು.      ಈ ಸಂಬಂಧ ದೂರು ನೀಡಿದ ಲಕ್ಷ್ಮೀರಾಜು ಸಂಬಂಧಿಕರು ಕಿಡ್ನಾಪ್ ಆಗಿರುವ ಅನುಮಾನದ ಕೆಲ ವಿಚಾರವನ್ನು ಮೌಖಿಕವಾಗಿ ತಿಳಿಸಿದ್ದರೆನ್ನಲಾಗಿದೆ.       ಆದರೂ 6 ದಿನಗಳ ವಿಳಂಬ ಅನುರಿಸಿದ್ದ ಕಾರಣ ಸೋಮವಾರ ದಿಢೀರ್ ಠಾಣೆಗೆ ಮುತ್ತಿಗೆ ಹಾಕಿದ ಕೆಂಚನಹಳ್ಳಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ನಾಪತ್ತೆ ಪ್ರಕರಣದಲ್ಲಿ ನ್ಯಾಯ ಒದಗಿಸಿಕೊಡಲು ಒತ್ತಾಯ ಮಾಡಿದ್ದಾರೆ.  …

Read More

 ತುಮಕೂರು:       ಜಿಲ್ಲಾ ಪಂಚಾಯತ್ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು 3ನೇ ಅವಧಿಗೆ ಚುನಾವಣೆ ಮೂಲಕ ಆಯ್ಕೆ ಮಾಡುವ ಸಂಬಂಧ ಜೂನ್ 2ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6-30ರವರೆಗೆ ಸಮಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ.       ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರುಗಳು ಚುನಾವಣೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ತಿಳಿಸಿದ್ದಾರೆ.

Read More

ತುಮಕೂರು:       ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಮೊಟ್ಟ ಮೊದಲನೇ ಬಾರಿಗೆ ವರ್ಲ್ಡ್ ಫಸ್ಟ್ ಸೆನ್ಸಾರ್ ಸ್ಯಾನಿಟೈಸರ್ ಎಟಿಎಂ ಆರಂಭಿಸಿದೆ.        ನಗರದ ಜೆ.ಸಿ. ರಸ್ತೆಯಲ್ಲಿರುವ ಟಿಎಂಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ಈ ಸೆನ್ಸಾರ್ ಸ್ಯಾನಿಟೈಸರ್ ಎಟಿಎಂ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಇಂದಿಲ್ಲಿ ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು, ಟಿಎಂಸಿಸಿ ಬ್ಯಾಂಕ್ ಹಲವು ತಂತ್ರಜ್ಞಾನಗಳನ್ನು ಬಳಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ಕೊರೊನಾ ಸಂಕಷ್ಟದ ಕಾಲದಲ್ಲೂ ಗ್ರಾಹಕರ ಆರೋಗ್ಯ ದೃಷ್ಠಿಯಿಂದ ಸೆನ್ಸಾರ್ ಸ್ಯಾನಿಟೈಸರ್ ಎಟಿಎಂ ಕೇಂದ್ರವನ್ನು ಆರಂಭಿಸುವ ಮೂಲಕ ಮತ್ತೊಂದು ಹೊಸ ಹೆಜ್ಜೆ ಇಟ್ಟಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.       ಟಿಎಂಸಿಸಿ ಬ್ಯಾಂಕ್ ಅಧ್ಯಕ್ಷ ಎನ್.ಎಸ್. ಜಯಕುಮಾರ್ ಮಾತನಾಡಿ, ಪ್ರಸ್ತುತ ಕೊರೊನಾ ಸೋಂಕು ಹರಡುವ ಭೀತಿ ಎಲ್ಲೆಡೆ ಆವರಿಸಿರುವುದರಿಂದ ಬ್ಯಾಂಕ್‌ಗಳಿಗೆ ಗ್ರಾಹಕರು ಬರಲು ಬಹಳ ಯೋಚನೆ ಮಾಡುತ್ತಿದ್ದಾರೆ. ಹಾಗಾಗಿ ನಾವು ಹೊಸ ತಂತ್ರಜ್ಞಾನವನ್ನು ಬಳಕೆ…

Read More

ಚಿಕ್ಕನಾಯಕನಹಳ್ಳಿ:      ಒಂದು ಕೆರೆ ಇಡೀ ಊರಿನ ಜೀವನಾಡಿ, ಕೆರೆಯೊಂದರ ಅಸ್ತಿತ್ವ ಮರೆಯಾಗುತ್ತಾ ಹೋದಂತೆ ಊರಿನ Àಬದುಕು ಚೈತನ್ಯರಹಿತವಾಗುತ್ತಾ ಹೋಗಲಿದೆ. ಇಂತಹ ಕೆರೆಗೆ ಕಾಯಕಲ್ಪ ಸ್ಪರ್ಷವಾಗುತ್ತಿದ್ದು ಪಟ್ಟಣದ ಮೆರಗನ್ನು ಹೆಚ್ಚಿಸುವ ಆಶಾಕಿರಣವೊಂದು ಒಡಮೂಡುತ್ತಿದೆ.       ಹೇಮಾವತಿಯೇ ಆಸರೆ: ಸುಮಾರು 25ವರ್ಷದ ಹಿಂದೆ ಪ್ರತಿವರ್ಷ ಪಟ್ಟಣದ ಕೆರೆಗೆ ಅಷ್ಟಿಷ್ಟು ಮಳೆ ನೀರು ಸಂಗ್ರಹವಾಗುತ್ತಾ ಇದ್ದ ಕಾರಣ ಕೆಲವೇ ಸಂಖ್ಯೆಯಲ್ಲಿದ್ದ ಕೊಳವೆಬಾವಿಗಳಿಂದ ದಿನನಿತ್ಯ ಕುಡಿಯುವ ನೀರು ಕೊಳಾಯಿಮೂಲಕ ಪಟ್ಟಣದ ಮನೆಮನೆಗೆ ಸರಬರಾಜಾಗುತ್ತಿತ್ತು. ಎಂತಹ ಕಡುಬೇಸಿಗೆಯಲ್ಲೂ ಪಟ್ಟಣದಲ್ಲಿ ಕುಡಿಯುವ ನೀರನ ಕೊರತೆಯುಂಟಾಗುತ್ತಿರಲಿಲ್ಲ.       ಆದರೆ ವರ್ಷ ಕಳೆದಂತೆ ಮಳೆಗಾಲ ಕಮ್ಮಿಯಾಗಿ ಕೆರೆಗೆ ನೀರು ಹರಿಯುವದೇ ಅಪರೂಪವೆನಿಸುತ್ತಾ ಕೊನೆಗೆ ಕೆರೆ ಬಹುತೇಕ ಖಾಲಿಯಾಗಿ ಬಟಾಬಯಲಾಗುತ್ತಿದ್ದಂತಯೇ ಪಟ್ಟಣದಲ್ಲಿ ಕುಡಿಯುವ ನೀರಿನ ಹಾಹಾಕಾರ ಬೇಸಿಗೆ ಸಂದರ್ಭದಲ್ಲಿ ಮುಗಿಲು ಮಟ್ಟುತ್ತಿತ್ತು. ಈ ಸಮಸ್ಯೆ ನಿವಾರಣೆಗೆ ಹಲವರ ಪ್ರಯತ್ನದಿಂದ ಹೇಮಾವತಿ ನಾಲೆಯಿಂದ ಪೈಪ್‍ಲೈನ್ ಮೂಲಕ ಇಲ್ಲಿನ ಕೆರೆಗೆ ಕುಡಿಯುವ ಉದ್ದೇಶಕ್ಕಾಗಿ ನೀರನ್ನು ಹರಿಸುವ ಯೋಜನೆ ಜಾರಿಗೆ…

Read More

ತುಮಕೂರು :      ಸರ್ಕಾರದ ಯೋಜನೆಗಳನ್ನು ಕಾಲಬದ್ಧ ಮಿತಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ ಅರ್ಹರಿಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವ ಕೆಲಸ ಮಾಡಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.        ಅವರು ಇಂದು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2019-20ನೇ ಸಾಲಿನ 4ನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಔಷಧಿಗಳ ದಾಸ್ತಾನಿನ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ 120 ಮಿ.ಮಿ. ವಾಡಿಕೆ ಮಳೆಯಾಗಬೇಕಾಗಿದ್ದು, 108 ಮಿ.ಮಿ. ಮಳೆಯಾಗಿರುತ್ತದೆ. ಉದ್ದು, ಹೆಸರು ಮತ್ತು ಅಲಸಂದೆ ಬೆಳೆ ಸುಮಾರು 10472 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ಬಿತ್ತನೆ ಬೀಜದ ಮತ್ತು ರಸಗೊಬ್ಬರದ ಕೊರತೆ…

Read More

 ಗುಬ್ಬಿ:      ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಿದ್ದತೆ ನಡೆಸಿರುವ ಗುಬ್ಬಿ ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ 19 ತುರ್ತು ಮಾರ್ಗಸೂಚಿ ಅನ್ವಯ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲು ಸಕಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್  ತಿಳಿಸಿದರು.       ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನ ಒಟ್ಟು 3360 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಸನ್ನದ್ದರಾಗಿದ್ದಾರೆ. ಈ ನೋಂದಾಯಿತ ಮಕ್ಕಳಿಗೆ ಪರೀಕ್ಷಾ ವೇಳಾಪಟ್ಟಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಗಸೂಚಿಯನ್ನು ತಿಳಿಸಲಾಗುತ್ತಿದೆ. ಜತೆಗೆ ಪೋಷಕರಿಗೂ ಅಗತ್ಯ ಮಾಹಿತಿ ರವಾನೆ ಮಾಡಲಾಗುತ್ತಿದೆ ಎಂದರು.       ಜೂನ್ 25 ರಿಂದ ಆರಂಭವಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಹಾಗೂ ಇಲಾಖಾ ಸಿಬ್ಬಂದಿಗಳಿಗೆ ಕಡ್ಡಾಯ ಮಾಸ್ಕ್ ಬಳಕೆಗೆ ಸೂಚಿಸಲಾಗಿದೆ. ಜತೆಗೆ ದೇಹದ ತಪಮಾನ ತಿಳಿಯಲು ಸ್ಕ್ರೀನಿಂಗ್ ವ್ಯವಸ್ಥೆ ಹಾಗೂ ಸ್ಯಾನಿಟೇಜರ್ ಬಳಸಲು ವ್ಯವಸ್ಥೆ ಮಾಡಲಾಗುವುದು. ತಾಲ್ಲೂಕಿನ 14 ಪರೀಕ್ಷೆ ಕೇಂದ್ರವು…

Read More