ತುಮಕೂರು : ವೈದ್ಯರ ಸಲಹಾ ಚೀಟಿಯಿಲ್ಲದೆ ಜ್ವರ, ಶೀತ, ಕೆಮ್ಮು, ಸಾರಿ(SARI) ಹಾಗೂ ಐಎಲ್ಐಗೆ ಸಂಬಂಧಪಟ್ಟಂತಹ ಯಾವುದೇ ಔಷಧಗಳನ್ನು ವಿತರಣೆ/ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ಕುಮಾರ್ ಅವರು ಔಷಧ ವ್ಯಾಪಾಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾ ಔಷಧ ವ್ಯಾಪಾರಸ್ಥರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುನ್ನಚ್ಚರಿಕಾ ಕ್ರಮವಾಗಿ ಮೆಡಿಕಲ್ ಸ್ಟೋರ್ಗಳಲ್ಲಿ ಔಷಧಿ ಕೊಳ್ಳಲು ಬರುವ ರೋಗಿ ಮತ್ತು ಅವರನ್ನು ತಪಾಸಣೆ ಮಾಡಿರುವ ವೈದ್ಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೇ ಈ ಮಾಹಿತಿಯನ್ನು ಸರ್ಕಾರ ನೀಡಿರುವ ವೆಬ್ಸೈಟ್ನಲ್ಲಿ ನಮೂದಿಸಬೇಕೆಂದು ಅವರು ನಿರ್ದೇಶನ ನೀಡಿದರು. ವೈದ್ಯರ ಸಲಹಾ ಚೀಟಿಯಿಲ್ಲದೇ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ್ದಲ್ಲಿ ಅಂತಹವರ ವಿರುದ್ಧ Epidemic Act ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸಿ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು…
Author: News Desk Benkiyabale
ಗುಬ್ಬಿ : ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರದಲ್ಲಿ ನಡೆದಿದ್ದು ಮೃತ ಬಾಲಕನ್ನು ಶ್ರೀನಿವಾಸ್ ಎಂದು ಪತ್ತೆ ಹಚ್ಚಲಾಗಿದೆ. ಗುರುವಾರ ಬೆಳಗ್ಗೆ 10 ಗಂಟೆಯಲ್ಲಿ ಸ್ನೇಹಿತರೊಂದಿಗೆ ಸಿ ಎಸ್ ಪುರ ಕೆರೆಗೆ ಈಜಲು ಹೋದ ಶ್ರೀನಿವಾಸ್ ಅಚಾನಕ್ ಆಗಿ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ಕಂಡ ಸ್ನೇಹಿತರೆಲ್ಲರು ಭಯದಿಂದ ಓಡಿ ಹೋಗಿದ್ದಾರೆ. ಘಟನೆ ಬಗ್ಗೆ ತಿಳಿದ ಸ್ಥಳೀಯ ವ್ಯಕ್ತಿಗಳು ಅವನನ್ನು ರಕ್ಷಿಸಲು ಮುಂದಾಗಿದ್ದು ಅಷ್ಟರಲ್ಲಾಗಲೇ ಶ್ರೀನಿವಾಸ್ ಮೃತಪಟ್ಟಿದ್ದನು ಸ್ಥಳಕ್ಕೆ ಸಿ.ಎಸ್.ಪುರ ಪೆÇಲೀಸ್ ಠಾಣೆಯ ಎ ಎಸ್ ಐ ಬಸವರಾಜ್ ಭೇಟಿ ನೀಡಿ ಪ್ರಕರಣವನ್ನು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ವತಿಯಿಂದ ತಂಬಾಕು ನಿಯಂತ್ರಣ ಕಾನೂನು-2003 ರ ಪ್ರಮುಖ ನಿಯಮಗಳಡಿ ಹಾಗೂ ಕೋವಿಡ್ -19 ನಿಯಂತ್ರಣದ ಸಲುವಾಗಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತುಮಕೂರು ನಗರದ ಶಿರಾಗೇಟ್, ಊರುಕೆರೆ, ಯಲ್ಲಾಪುರದ ಕೆಲ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ಹಾಗೂ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದವರ ವಿರುದ್ದ ಒಟ್ಟು 100 ಪ್ರಕರಣಗಳನ್ನು ದಾಖಲಿಸಿ, 11,580 ರೂ.ಗಳ ದಂಡ ವಸೂಲಿ ಮಾಡಲಾಗಿದೆ. ಕಾರ್ಯಾಚರಣೆಯ ಬಗ್ಗೆ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ನಾಗೇಂದ್ರಪ್ಪ ಹಾಗೂ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳಾದ ಡಾ|| ಮೋಹನ್ ದಾಸ್ ಆರ್.ವಿ ಇವರುಗಳು ಮಾತನಾಡಿ, ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ಮಸಾಲ, ಜರ್ದಾ, ಖೈನಿ, ಇತ್ಯಾದಿಗಳ ಬಳಕೆ ಮಾಡಿ ಸಾರ್ವಜನಿಕ…
ಪಾವಗಡ : ತುಂಗಭದ್ರಾ ಕುಡಿ ಯುವ ನೀರಿನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಕಳೆದ 50 ದಿನಗಳಿಂದ ಆಹಾರವಿಲ್ಲ. ಪ್ರತಿದಿನ ತಿಂಡಿ ಊಟಕ್ಕಾಗಿ ಸಮೀಪದ ಬೆಳ್ಳಿಬೆಟ್ಲು ಮತ್ತು ಶೈಲಾಪುರ ಗ್ರಾಮಗಳಿಗೆ ಅಲೆದಾಡುತ್ತಿರುವುದು ಮನಕಲಕುವಂತಿದೆ. ಸುಮಾರು 2,350 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿ ಕೆಲಸ ಮಾಡಲು ಬಂದಿದ್ದರು. ಆದರೆ ಈ ಲಾಕ್ಡೌನ್ಯಿಂದಾಗಿ ತಮ್ಮ ಊರುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಇವರು ಸ್ವಗ್ರಾಮಗಳಿಗೆ ತೆರಳುತ್ತೇವೆ ಎಂದು ಮನವಿ ಮಾಡಿದರೆ ಗುತ್ತಿಗೆದಾರರಿಂದಲೇ ಹಲ್ಲೆಯತ್ನ ನಡೆಯುತ್ತದೆ. ಈ ರೀತಿಯ ಹತ್ತು ಹಲವು ಚಿತ್ರಹಿಂಸೆ ಅನುಭವಿಸುತ್ತಾ ಕಳೆದ 4 ತಿಂಗಳಿಂದ ವೇತನವಿಲ್ಲದೆ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ವಲಸೆ ಕಾರ್ಮಿಕರಿಂದ ಕೇಳಿ ಬರುತ್ತಿದೆ. ತಮಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಅಂಗಲಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಕೆಲಸಕ್ಕಾಗಿ ಉತ್ತರ ಪ್ರದೇಶದಿಂದ…
ತುಮಕೂರು : ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ತುಮಕೂರು ಜಿಲ್ಲೆಗೆ ಬರುವವರ ಮೇಲೆ ತೀವ್ರ ನಿಗಾವಹಿಸಲಾಗುತ್ತಿದ್ದು, ಇಲ್ಲಿಯವರೆಗೂ ಹೊರ ಜಿಲ್ಲೆಯಿಂದ 2711 ಮಂದಿ ಹಾಗೂ ಮೇ 1 ರಿಂದ ಹೊರ ರಾಜ್ಯಗಳಿಂದ 289 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈಗಾಗಲೇ ಇವರನ್ನು ಪ್ರತ್ಯೇಕವಾಗಿ ವಸತಿ ಶಾಲೆ, ಶಾಲೆಗಳಲ್ಲಿ ಹಾಗೂ ಹೋಟೆಲ್ಗಳಲ್ಲಿ ಕ್ವಾರಂಟೈನ್ ಮಾಡಿ ಪರಿಶೀಲಿಸಲಾಗುತ್ತಿದೆ. ಹೊರ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಬರುವವರಿಗೆ ಪಾವಗಡದಲ್ಲಿ ತಪಾಸಣಾ ಕೇಂದ್ರ ಮಾಡಿದ್ದು, ಮಧುಗಿರಿಯಲ್ಲಿ ಸ್ವೀಕರಣಾ ಕೇಂದ್ರವನ್ನು ತೆರೆಯಲಾಗಿದೆ. ಅದೇರೀತಿ ಉತ್ತರ ಕರ್ನಾಟಕದಿಂದ ಬರುವವರಿಗೆ ಶಿರಾದಲ್ಲಿ ಹಾಗೂ ಹೊರ ರಾಜ್ಯಗಳಿಂದ ಬೆಂಗಳೂರು ಕಡೆಯಿಂದ ಬರುವವರಿಗೆ ತುಮಕೂರು ನಗರದ ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ಸು ನಿಲ್ದಾಣದಲ್ಲಿ ಸ್ವೀಕರಣಾ ಕೇಂದ್ರವನ್ನು ತೆರೆಯಲಾಗಿದೆ ಎಂದರು. ತುಮಕೂರು ನಗರಕ್ಕೆ 2 ಕಡೆ ಪ್ರವೇಶ ದ್ವಾರಗಳನ್ನು ಕಲ್ಪಿಸಿದ್ದು, ಇಲ್ಲಿ ಆರೋಗ್ಯ, ಕಂದಾಯ…
ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಕಾಪಾಡುವ ನಿಟ್ಟಿನಲ್ಲಿ ಅಂಗಡಿ ಮುಂಗಟ್ಟು ಮತ್ತಿತರ ಸಾಮಾಜಿಕ ಸ್ಥಳಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಅಕ್ಕಪಕ್ಕದ ಜನರು ಕೆಮ್ಮುವಾಗ, ಸೀನುವಾಗ ಎಚ್ಚರವಹಿಸಬೇಕು ಎಂದರಲ್ಲದೇ ಈಗಾಗಲೇ ಮುಸ್ಲಿಂ ಭಾಂದವರ ಪವಿತ್ರ ರಂಜಾನ್ ಹಬ್ಬ ಪ್ರಯುಕ್ತ ಪ್ರಾರ್ಥನೆ ಮಾಡುವವರು ಈದ್ಗಾಗೆ ಹೋಗುವುದು ಬೇಡ. ಇದರಿಂದ ಹಲವಾರಿಗೆ ತೊಂದರೆಯಾಗುತ್ತದೆ. ಈಗ ಹಗ್ ಮಾಡುವುದು ಬೇಡ. ಆದ್ದರಿಂದ ಮುಸ್ಲಿಂ ಭಾಂದವರು ಮನೆಯಲ್ಲಿಯೇ ಕುಳಿತು ಪ್ರಾರ್ಥನೆ ಮಾಡಿ ಎಂದರು. ಕೊರೊನಾ ವೈರಸ್ ಎಂಬುದು ಒಂದು ಸಮುದಾಯದ ಜನರಿಗೆ ಮಾತ್ರ ಬರುವಂತಹದ್ದಲ್ಲ. ಸಾರ್ವಜನಿಕರು ಕೇವಲ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಬಾರದು. ಖಾಯಿಲೆ ಪ್ರತಿಯೊಬ್ಬರಿಗೂ ಬರುತ್ತದೆ. ನಾವೆಲ್ಲರೂ…
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ನಡೆಯಬೇಕಿರುವ ಯುಜಿಡಿ, ನೀರಿನ ಟ್ಯಾಂಕ್, ಚರಂಡಿ ಹಾಗೂ ಹುಳಿಯಾರಿನ ರಸ್ತೆ ಕಾಮಗಾರಿಗಳ ಪ್ರಗತಿ ತೃಪ್ತಿದಾಯಿಕವಾಗಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಧಾನ ವ್ಯಕ್ತಪಡಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ರಕ್ಷಣಾಕಿಟ್ಗಳನ್ನು ವಿತರಿಸಿದ ನಂತರ ಇಲಾಖಾವಾರು ಸಂಬಂಧಿಸಿದ ಅಧಿಕಾರಿಗಳಿಂದ ಹಲವು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿರೂ. 60ಕೋಟಿ. ಬಿಡುಗಡೆಯಾಗಿ ಆರುತಿಂಗಳು ಕಳೆದರೂ ಆಮೆಗತಿಯಲ್ಲಿ ನಡೆದಸಿರುವ ಬಗ್ಗೆ ತೀವ್ರ ಅತೃಪ್ತಿವ್ಯಕ್ತಪಡಿಸಿ ಮೊದಲು ಸಂಸ್ಕರಣಾ ಪಿಟ್ಗಳ ನಿರ್ಮಾಣಕ್ಕಾಗಿ ಜಾಗಗಳನ್ನು ಪುರಸಭಾ ವಶಕ್ಕೆ ಪಡೆದು ಕಾಮಗಾರಿ ಅಲ್ಲಿನಿಂದಲೇ ಆರಂಭಿಸಲು ತಿಳಿಸಿದ್ದರೂ ಇನ್ನು ತಡವಾಗಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಇದಕ್ಕಾಗಿಯೇ ಪಟ್ಟಣದ ಯಾವುದೇ ರಸ್ತೆಕಾಮಗಾರಿಗೆ ಅನುದಾನ ಹಾಕದೇ ಬೇರೆಡೆಗೆ ವಿನಿಯೋಗಿಸಲಾಗಿದೆ. ಆದರೆ ನೀವು ಇನ್ನೂ ಇದರ ಬಗ್ಗೆ ಆಸಕ್ತಿಯೇ ತೆಳೆದಿಲ್ಲವೆಂದು ಮುಖ್ಯಾಧಿಕಾರಿ ಶ್ರೀನಿವಾಸ್ರವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಂಸ್ಕರಣಾಪಿಟ್ಗಳಿಗೆ ಜಾಗದ ಸಮಸ್ಯೆಗಳ ನಿವಾರಣೆಗಾಗಿ…
ತುಮಕೂರು: ವಿಶ್ವದಾದ್ಯಂತ ಹರಡುತ್ತಿರುವ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೋನಾ ಸೋಂಕಿತರು, ಶಂಕಿತರು, ವೈದ್ಯರು, ಶುಶ್ರೂಷಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿ ದಿನ 2 ಗ್ರಾಂ ಸ್ಪಿರುಲಿನಾ ಮಾತ್ರೆ ಸೇವಿಸುವಂತೆ ತುಮಕೂರು ಸ್ಪಿರುಲಿನಾ ಫೌಂಡೇಷನ್ ಸಂಸ್ಥೆಯ ಅಧ್ಯಕ್ಷ ಮಹೇಶ್ ಆರ್.ವಿ. ಅವರು ಸಲಹೆ ನೀಡಿದರು. ಸ್ಪಿರುಲಿನಾ ಫೌಂಡೇಷನ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿಂದು 350 ಚಿಕ್ಕಿ ಪ್ಯಾಕೆಟ್ ಹಾಗೂ 150 ಬಾಕ್ಸ್ ಸ್ಪಿರುಲಿನಾ ಮಾತ್ರೆಗಳನ್ನು ವಿತರಿಸಿ ಅವರು ಮಾತನಾಡಿದರು. ಸ್ಪಿರುಲಿನಾ ಒಂದು ಸೂಕ್ಷ್ಮಾಣು ಜೀವಿಯಾಗಿದ್ದು, ಅತೀ ಹೆಚ್ಚು ಪೋಷಕಾಂಶಗಳನ್ನು ಹೊಂದಿರುವ ಕಾರಣ ದೇಹದಲ್ಲಿ ಬೇರೆಲ್ಲಾ ಆಹಾರಗಳಿಗಿಂತ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹೀರಲ್ಪಟ್ಟು ಇದರ ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ವೃದ್ಧಿಸಿ ಯಾವುದೇ ವೈರಾಣು ಸೋಂಕನ್ನು ಪ್ರತಿರೋಧಿಸುವಲ್ಲಿ ಸಹಕಾರಿಯಾಗಿರುತ್ತದೆ ಎಂದು ತಿಳಿಸಿದರು. ತುಮಕೂರಿನ ಸ್ಪಿರುಲಿನಾ ಫೌಂಡೇಷನ್…
ಮಧುಗಿರಿ : ಇಲ್ಲಿಯವರೆವಿಗೂ ಕೊರೊನಾ ವೈರಸ್ ಹರಡದಂತೆ ಮಧುಗಿರಿ ಜನತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟನಿಟ್ಟಾಗಿ ಪಾಲಿಸಿದಕ್ಕೆ ವೈಯಕ್ತಿಕವಾಗಿ ಧನ್ಯವಾದಗಳು ಎಂದು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು. ಅವರು ಉಪವಿಭಾಗಾಧಿಕಾರಿ ಕಛೇರಿಯಲ್ಲಿ ಮಧುಗಿರಿ ವಿದ್ಯಾಸಂಸ್ಥೆಯ ಖಜಾಂಚಿ ಎಂ.ಎಸ್.ಧರ್ಮವೀರ್ರವರ ನಿರ್ಮಾಪಕತ್ವದಲ್ಲಿ ‘ಸಿನಿಕ್ ಬ್ಯೂಟಿ ಆಫ್ ಮಧುಗಿರಿ ಡ್ಯೂರಿಂಗ್ ಕೋವಿಡ್-19 ಲಾಕ್ಡೌನ್’ಗೆ ಸಂಬಂಧಿಸಿದ 9 ನಿಮಿಷಗಳ ಸಾಕ್ಷ್ಯ ಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಶ್ವವಿಖ್ಯಾತ ಏಕಶಿಲಾ ಬೆಟ್ಟ ಹೊಂದಿರುವ ಮಧುಗಿರಿ ಬೆಟ್ಟದ ಬಗ್ಗೆ ವರ್ಣಿಸಲು ಸಮಯವೇ ಸಾಲದು, ಈ ಸಾಕ್ಷ್ಯ ಚಿತ್ರದಲ್ಲಿ ಮಧುಗಿರಿ ಗಡಿಭಾಗದಿಂದ ಆರಂಭಗೊಂಡು ಮಧುಗಿರಿ ಚೋಳೇನಹಳ್ಳಿ ಕೆರೆ, ಸಿದ್ದಾಪುರ ಕೆರೆ, ಬೈಪಾಸ್ ರಸ್ತೆ, ಸೂರ್ಯ ಮುಳಗುವ ವೇಳೆ ಮಧುಗಿರಿ ಏಕಶಿಲಾ ಬೆಟ್ಟದ ಪ್ರಕೃತಿ ಸೌಂದರ್ಯ, ಐತಿಹಾಸಿಕ ಶ್ರೀ ಮಲ್ಲೇಶ್ವರ ಸ್ವಾಮಿ ಮತ್ತು ವೆಂಕಟರಮಣ ಸ್ವಾಮಿ, ಪ್ರಮುಖ ರಸ್ತೆಗಳು, ನ್ಯಾಯಾಲದ ಸಂಕೀರ್ಣ, ಸಾಲಮರದ ತಿಮ್ಮಕನ ಸಸ್ಯೋದ್ಯಾನ, ಪೊಲೀಸ್ ಠಾಣೆ, ಜೈಲು, ಪುರಸಭೆ, ಸರ್ಕಾರಿ ಪ್ರೌಢಶಾಲೆ,…
ಚಿಕ್ಕನಾಯಕನಹಳ್ಳಿ: ಹೊರರಾಜ್ಯ ಹಾಗೂ ಜಿಲ್ಲೆಯಿಂದ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುವುದೆಂದು ತಹಸೀಲ್ದಾರ್ ಬಿ.ತೇಜಸ್ವಿನಿ ತಿಳಿಸಿದರು. ಈಚೆಗೆ ಲಾಕ್ಡೌನ್ ಸಡಿಲಿಕೆಯ ಸಂದರ್ಭದಲ್ಲಿ ಹಸಿರುವಲಯದಲ್ಲಿರುವ ನಮ್ಮ ತಾಲ್ಲೂಕಿನಲ್ಲಿ ಯಾವುದೇ ಸೋಂಕಿನ ಪ್ರಕರಣ ಆಗದ ರೀತಿ ಪಟ್ಟಣ ಹಾಗೂ ಗ್ರಾಮಗಳಲ್ಲಿಯೂ ಸಹ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲಾಗುತ್ತದೆ. ಪಿಡಿಓಗಳಿಗೆ ಸೂಚನೆ: ಕೊರೊನಾ ಸೋಂಕು ತಾಲ್ಲೂಕಿನನೊಳಗೆ ಬರದಂತೆ ತಡೆಯುವ ಉದ್ದೇಶದಿಂದ ಹೊರಗಿನಿಂದ ಯಾವುದೇ ವ್ಯಕ್ತಿಗಳ ಆರೋಗ್ಯ ತಪಾಸಣೆ ಕಡ್ಡಾಯ ಹಾಗೂ ಕೆಂಪು ಮತ್ತು ಕಿತ್ತಳೆವಲಯದಿಂದ ಬಂದವರನ್ನು ಕಡ್ಡಾಯವಾಗಿ ಹೋಂ ಕ್ವರಂಟೈನ್ಗೆ ಒಳಪಡಿಸಲು ಗ್ರಾಮ ಪಂಚಾಯಿತಿ ಪಿಡಿಓಗಳಿಗೆ ನಿರ್ದೇಶನ ನೀಡಲಾಗಿದೆ. ಆರೋಗ್ಯತಪಾಸಣೆಯ ಸಂದರ್ಭದಲ್ಲಿ ಸಂಶಯ ಬಂದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಐಸೋಲೇಷನ್ಗೆ ಒಳಪಡಸಲಾಗುವುದೆಂದರು. ಹೊರರಾಜ್ಯದ ಎಂಟುಮಂದಿ: ತಮಿಳುನಾಡು ಮತ್ತು ಹೈದರಬಾದ್ನಿಂದ ಬಂದಿರುವ ಎಂಟು ಮಂದಿಯನ್ನು ಆಸ್ಪತ್ರೆಯಲ್ಲಿ ಕ್ವರಂಟೈನ್ಗೆ ಒಳಪಡಿಸಲಾಗಿದೆ. ಇವರು ಸ್ಥಳಿಯರಾಗಿದ್ದು ಕೆಲಸದ ನಿಮಿತ್ತ ಹೊರರಾಜ್ಯಗಳಿಗೆ ತೆರಳಿದ್ದವರಾಗಿದ್ದಾರೆಂದರು. ಇದಲ್ಲದೆ ಇತರೆ ಕಾಂಗಾರಿಗಳಾದ ಹೆದ್ದಾರಿ, ನೀರಿ…