ತುಮಕೂರು : ತುಮಕೂರಿನ ತನಿಷ್ಕಾ ಜ್ಯೂವೆಲ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರೇ 1 ಕೆಜಿ 854 ಗ್ರಾಮ್ ಚಿನ್ನಾಭರಣ ಮತ್ತು 4.05.000 ನಗದು ಹಣದ ದೋಚಿ ಪರಾರಿಯಾಗಿದ್ದರು ಈ ಸಂಬಂಧ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತನಿಷ್ಕಾ ಜ್ಯೂವೆಲ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ಆದಿಲ್ ಬಿನ್ ಸೈಯದ್ ಅನ್ವರ್ (43), ವಿನೋಬ ನಗರ, ರಿತೇಶ್ ಕುರುಪ್ ಬಿನ್ ಜನಾರ್ಧನ್ ಕುರುಪ್ (35) ಕೇರಳ, ಮಹೇಶ್ ಬಿನ್ ರಾಜಶೇಖರ್ (32) ಗುಬ್ಬಿ, ಮೀನಾಕ್ಷಿ ಕೋಂ ಮಹೇಶ್ (26) ಗುಬ್ಬಿ, ರುಕ್ಸಾನ ತಂದೆ ಲೇ ಅಯೂಬ್ ಖಾನ್ (28) ಹೆಬ್ಬೂರು ಇವರ ಮೇಲೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಶೋಧ ನಡೆಸಿ ಮೂರವನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡ ಕಳ್ಳರಿಂದ ಪೊಲೀಸರು ಹಣ ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾರ್ಯಪ್ರವೃತ್ತರಾದ ಪೊಲೀಸರು…
Author: News Desk Benkiyabale
ತುಮಕೂರು : ಕೊರೊನಾ ಮಹಾಮಾರಿಯಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ ಸೋಮವಾರದಿಂದ ಆರಂಭಗೊಂಡಿದೆ. ಬೆಳಿಗ್ಗೆ 7.30ಕ್ಕೆ ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ಬೆಂಗಳೂರಿಗೆ ಉದ್ಯೋಗಗಳಿಗೆ ತೆರಳುವವರು ಸಂತಸದಿಂದಲೇ ಪ್ರಯಾಣ ಬೆಳೆಸಿದರು. ಕಳೆದ 9 ತಿಂಗಳ ಹಿಂದೆ ಕೊರೊನಾ ಸೋಂಕಿನ ರೌದ್ರಾವತಾರದಿಂದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ರೈಲು ಸಂಚಾರವನ್ನು ಸ್ಥಗಿತಗೊಳಿಸಿತ್ತು. ಅಂದಿನಿಂದ ಇಂದಿನವರೆಗೆ ಪ್ಯಾಸೆಂಜರ್ ರೈಲುಗಳು ಓಡಾಟ ಮಾಡುತ್ತಿರಲಿಲ್ಲ. ಜತೆಗೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟಿಕೆಟ್ ಸಹ ವಿತರಿಸಲಾಗುತ್ತಿರಲಿಲ್ಲ. ಕೊರೊನಾ ಆರ್ಭಟ ದೇಶಾದ್ಯಂತ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂದಿನಿಂದ ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಸಂಸದ ಜಿ.ಎಸ್. ಬಸವರಾಜು ಅವರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು, ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಪ್ಯಾಸೆಂಜರ್…
ತುಮಕೂರು; ಕೊಲೆ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಓರ್ವನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಭಾನುವಾರ ನಡೆದಿದೆ. ತುಮಕೂರು ನಗರದಲ್ಲಿ ಇತ್ತೀಚೆಗೆ ನಡೆದ RX ಮಂಜ ಅಲಿಯಾಸ್ ಉಚ್ಚೆಮಂಜನ ಕೊಲೆ ಕೇಸಿನಲ್ಲಿ ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ವಂಶಿಕೃಷ್ಣ ಅವರು ಮೂರು ತನಿಖಾ ತಂಡವನ್ನು ರಚಿಸಿದ್ದರು. https://www.benkiyabale.com/rowdy-sheeter-rx-manja-murder-in-tumkur/ ಅದರಂತೆ ತನಿಖಾ ತಂಡಕ್ಕೆ ಆರೋಪಿಗಳ ಪೈಕಿ ಓರ್ವ ವ್ಯಕ್ತಿಯ ಸುಳಿವು ಲಭಿಸಿತ್ತು. ಬೆಳಗಿನ ಜಾವ 5.30 ರ ಸಮಯದಲ್ಲಿ ತುಮಕೂರು ಗ್ರಾಮಾಂತರ ಸರಹದ್ದಿನ ಅಜ್ಜಪ್ಪನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ತಿಲಕ್ ಪಾರ್ಕ್ ಠಾಣೆಯ ಪಿಎಸ್ಐ ನವೀನ್ ಹಾಗೂ ಸಿಬ್ಬಂದಿಗಳು ಆತನನ್ನು ಹಿಡಿಯಲು ತೆರಳಿದ್ದರು. ಆಗ ಪೊಲೀಸರನ್ನು ಕಂಡ ಆರೋಪಿಯು ಹಠಾತ್ತಾಗಿ ಎಎಸ್ಐ…
ಮಧುಗಿರಿ : ಗ್ರಾಮ ಪಂಚಾಯಿತ್ ಚುನಾವಣೆಯಲ್ಲಿ ಕಾರ್ಯಕರ್ತರುಗಳಿಗೆ ಅಧಿಕಾರ ಕೊಡಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಮುಖಂಡರುಗಳಿಗೆ ಆಪೇಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಕೆ.ಎನ್.ರಾಜಣ್ಣ ತಿಳಿಸಿರು. ಮಧುಗಿರಿಯ ತಮ್ಮ ನಿವಾಸದಲ್ಲಿ ಕಳೆದ 4 ದಿನಗಳಿಂದ ಸತತವಾಗಿ ಹೋಬಳಿವಾರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಾಂಗ್ರೆಸ್ ಮುಖಂಡರುಗಳೊಡನೆ ಸರಣಿ ಸಭೆಗಳನ್ನು ನಡೆಸಿ ಕಾರ್ಯಕರ್ತರ ಮತ್ತು ಮುಖಂಡರಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ಚುನಾವಣೆಯ ಮಹತ್ವವನ್ನು ತಿಳಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳಾಗಲು ಸಾಕಷ್ಟು ಪೈಪೋಟಿಗಳಿದ್ದು, ಸಂಸ್ಥೆಯ ಮುಖಂಡರುಗಳು ಪರಸ್ವರ ವಿಶ್ವಾಸದಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ನಾನು ಯಾರ ಪರವು ಇಲ್ಲ ವಿರುದ್ಧವು ಇಲ್ಲ ಎಲ್ಲಾ ಅಭ್ಯರ್ಥಿಗಳು ಒಂದೆ ಎಲ್ಲರೂ ನನಗೆ ಬೇಕು ಕಾರ್ಯಕರ್ತರನ್ನು ಮುಖಂಡರುಗಳನ್ನಾಗಿ ಮಾಡುವುದರಿಂದ ಮುಂಬರುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ವಿಧಾನ ಸಭೆ ಲೋಕಸಭೆ ಚುನಾವಣೆಗೆ ಭದ್ರ ಮುನಾದಿಯಾಗುತ್ತದೆ ಎಂದರು. …
ಹುಳಿಯಾರು : ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಹಾಗೂ ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂಪಡೆಯಲು ಒತ್ತಾಯಿಸಿ ಡಿಸೆಂಬರ್ 8 ಸೋಮವಾರ ಬಾರು ಕೋಲು ಚಳುವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಿರ್ಧರಿಸಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ತಿಳಿಸಿದರು. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರ ಸರ್ಕಾರವು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳ ತಿದ್ದುಪಡಿ ಕಾನೂನು ರೂಪಿಸಿದ್ದು, ರಾಷ್ಟ್ರಪತಿ ಅವರ ಸಹಿ ಆಗಿದೆ. ರಾಜ್ಯ ಸರ್ಕಾರ ಕಾನೂನು ಜಾರಿಗೆ ಹೊರಟಿದೆ. ಈ ತಿದ್ದುಪಡಿ ಕಾಯ್ದೆಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಇವುಗಳನ್ನು ವಿರೋಧಿಸಿ ದೇಶಾಧ್ಯಂತೆ ಅನೇಕ ಪ್ರತಿಭಟನೆಗಳು ನಡೆಯುತ್ತಿದ್ದರೂ ಪ್ರಧಾನಿ, ಮುಖ್ಯಮಂತ್ರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ತಿದ್ದುಪಡಿ…
ತುಮಕೂರು : ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಿನ್ನೆ ಕರೆ ನೀಡಿದ್ದ ಕರ್ನಾಟಕ ಬಂದ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿಫಲವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಮಂಜುನಾಥಗೌಡ ನೇತೃತ್ವದಲ್ಲಿ ಜಮಾಯಿಸಿ ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಒಕ್ಕೂಟದ ವತಿಯಿಂದ ಬಂದ್ಗೆ ಕರೆ ನೀಡಿದ್ದು, ಇದರ ಅಂಗವಾಗಿ ಪ್ರತಭಟನೆ ನಡೆಸಲಾಗುತ್ತಿದೆ ಎಂದರು. ಮರಾಠ ಅಭಿವೃದ್ಧಿ ನಿಗಮವನ್ನು ರಚನೆ ಮಾಡಿ 50 ಕೋಟಿ ರೂ. ಮೀಸಲಿಟ್ಟು ಕನ್ನಡಿಗರಿಗೆ ಅವಮಾನ ಮಾಡುವ ಕೆಲಸವನ್ನು ಸರ್ಕಾರ…
ಕೊರಟಗೆರೆ : ಕೊರೊನಾ ರೋಗದ ಲಾಕ್ಡೌನ್ ಮತ್ತು ಸೀಲ್ಡೌನ್ ನಡು ವೆಯು ಕರುನಾಡಿನ ಇತಿಹಾಸ ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದ ಹುಂಡಿಗೆ ಸಾವಿರಾರು ಭಕ್ತಾದಿಗಳಿಂದ 49ಲಕ್ಷಕ್ಕೂ ಅಧಿಕ ಕಾಣಿಕೆ ರೂಪದಲ್ಲಿ ಹಣ ಮತ್ತು ಬಂಗಾರದ ಒಡವೆ ಹರಿದು ಬಂದಿರುವ ಘಟನೆ ಬುಧವಾರ ಎಣಿಕೆಯ ಸಂದರ್ಭದಲ್ಲಿ ಕಂಡುಬಂದಿದೆ. ಕಲ್ಪತರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಕಳೆದ 4ತಿಂಗಳಿಂದ ಸಂಗ್ರಹಣೆ ಆಗಿದ್ದ 8ಹುಂಡಿಗಳಿಂದ 49,89,780ರೂ ನಗದು ಹಣದ ಜೊತೆ ಲಕ್ಷಾಂತರ ರೂ ಮೌಲ್ಯದ ಬಂಗಾರದ ಒಡವೆವು ಸಹ ಸಂಗ್ರಹಣೆಯಾಗಿ ಮಹಾಲಕ್ಷ್ಮೀ ದೇವಾಲಯದ ಖಾತೆಗೆ ಜಮಾವಾಗಿದೆ. ಸಾವಿರಾರು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಕ್ಷಾಂತರ ರೂಪಾಯಿ ಹಣದ ಜೊತೆಗೆ ಬಂಗಾರದ ತಾಳಿ ದೊಡ್ಡದು-1, ಚಿಕ್ಕದು-5, ನತ್ತು-3, ಬೆಳ್ಳಿಯ ಲಕ್ಷ್ಮೀ ಮುಖವಾಡ-1, ಬಳೆ-1, ಬಿಸ್ಕತ್ತು-2, ಕಾಲುಚೈಲು-4, ಲಕ್ಷ್ಮೀನಾಣ್ಯ-1, ಕಾಲುಂಗರ-2, ತಾಳಿ-2, ಕಣ್ಣು-2,…
ತುಮಕೂರು: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ಅವರು, ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಜವಾಬ್ದಾರಿಯನ್ನು ಮುಖಂಡರ ಹೊರಬೇಕಿದೆ ಎಂದು ಹೇಳಿದರು. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಯುವಕರನ್ನು ಕಣಕ್ಕಿಳಿಸುವ ಮೂಲಕ ಪಕ್ಷಕ್ಕೆ ಹೊಸ ಹುರುಪು ತರುವ ನಿಟ್ಟಿನಲ್ಲಿ ವಿಧಾನ ಸಭಾ ಕ್ಷೇತ್ರಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮುಖಂಡರನ್ನು ನಿಯೋಜಿಸಲಾಗಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು. …
ಹುಳಿಯಾರು: ದಾಸ ಶ್ರೇಷ್ಠ ಕನಕದಾಸರ ತತ್ವಾದರ್ಶದಂತೆ ಕುಲಕುಲವೆಂದು ಹೊಡೆದಾಡದೆ ಎಲ್ಲಾ ಜಾತಿ, ಧರ್ಮದವರೊಂದಿಗೆ ಸಮಾರಸ್ಯ ಮತ್ತು ಸೌಹಾರ್ದತೆಯಿಂದ ಬಾಳುವಂತೆ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಬಿ.ಸುರೇಶ್ಬಾಬು ಕರೆ ನೀಡಿದರು. ಹುಳಿಯಾರಿನ ಕನಕದಾಸ ಸರ್ಕಲ್ನಲ್ಲಿ ಹೋಬಳಿ ಕುರುಬರ ಸಂಘದಿಂದ ಏರ್ಪಡಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ವರ್ಷ ಹುಳಿಯಾರಿನ ಕನಕ ಸರ್ಕಲ್ ವಿವಾಧಕ್ಕೆ ತಿರುಗಿ ರಾಜ್ಯಾಧ್ಯಂತ ಹೋರಾಟ ಮಾಡುವ ಅನಿವಾರ್ಯತೆ ಸೃಷ್ಠಿಯಾಯಿತು. ಈ ಕಹಿ ಘಟನೆಯನ್ನು ಕುರುಬರು ಮರೆತು ಎಲ್ಲರೊಂದಿಗೂ ಪ್ರೀತಿ ವಿಶ್ವಾಸದಿಂದ ಬಾಳ್ವೆ ನಡೆಸಲು ಮುಂದಾಗಬೇಕು ಎಂದರಲ್ಲದೆ ಮುಂದಿನ ವರ್ಷ ಕನಕ ಸರ್ಕಲ್ನಲ್ಲಿ ಕನಕರ ಕಂಚಿನ ಪುತ್ಥಳಿ ಸ್ಥಾಪಿಸಿ ಅದ್ದೂರಿಯಾಗಿ ಕನಕ ಜಯಂತಿ ಆಚರಿಸಲು ಎಲ್ಲರೂ ಕೈ ಹಾಲುಮತ ಸಮುದಾಯದವರು ಹಾಲಿನಂತ ಮನಸ್ಸುಳ್ಳವರು. ನಂಬಿಕೆಗೆ ಅರ್ಹವಾದವರು ಎನ್ನಲಾಗುತ್ತದೆ. ಹಾಗಾಗಿಯೇ ಉತ್ತರ ಕರ್ನಾಟಕದ ಕಡೆ ಹಾಲುಮತದವರ ಕೈಯಲ್ಲಿ ಬೋಣಿಗೆ ಮಾಡಿಸಿಕೊಳ್ಳಲು ಇತರ ಜಾತಿ, ಧರ್ಮದ ವ್ಯಾಪಾರಸ್ಥರು…
ತುಮಕೂರು: ಶ್ರಮಿಕ ವರ್ಗವಾಗಿರುವ ತಿಗಳ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ “ತಿಗಳ ಅಭಿವೃದ್ಧಿ ನಿಗಮ” ಸ್ಥಾಪಿಸಿ, ಕನಿಷ್ಠ 100 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಬೇಕು ಎಂದು ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ತಿಗಳ ಜನಾಂಗವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮೇಲೆತ್ತಲು ಹಾಲಿ ಇರುವ ಪ್ರವರ್ಗ-2ಎ ಯಿಂದ ಪ್ರವರ್ಗ-1ಕ್ಕೆ ಬದಲಾಯಿಸಬೇಕು ಎಂದು ಸಮಾಜದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಮುದಾಯದ ಪ್ರಗತಿಗಾಗಿ 80 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಸಮುದಾಯದ ಪ್ರಗತಿಗಾಗಿ ಯಾವುದೇ ಅನುದಾನ ನೀಡಲಿಲ್ಲ ಎಂದು ದೂರಿದರು. ಮಡಿವಾಳ, ಕುಂಬಾರ, ಸವಿತಾ ಸಮಾಜ, ತಿಗಳ ಸಮುದಾಯದ ಅಭಿವೃದ್ಧಿಗೆ 2018ರಲ್ಲಿ 60 ಕೋಟಿ ಪ್ಯಾಕೇಜ್…











