ತುಮಕೂರು: ಹಿಂದೆಲ್ಲಾ ಮಕ್ಕಳಿಗೆ ಊಟ ಮಾಡಿಸುವಾಗ ಪೋಷಕರು ಚಂದಮಾಮ ಹಾಗೂ ಪಂಚ ತಂತ್ರದ ಕಥೆಗಳನ್ನು ಹೇಳುತ್ತಿದ್ದರು. ಈಗ ಆ ಕಥೆ ಹೇಳಿ ಊಟ ಮಾಡಿಸುವ ಪೋಷಕರು ಕಾಣುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್. ವಿಷಾದಿಸಿದರು. ತುಮಕೂರಿನ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗ ಮಕ್ಕಳಿಗೆ ಪೋಷಕರು ಊಟ ಮಾಡಿಸುವಾಗ ಮೊಬೈಲ್ ಅನ್ನು ಕೊಡುತ್ತಿದ್ದಾರೆ. ಇದು ಸರಿಯಲ್ಲ ಎಂದು ವಿಷಾದಿಸಿದರು. ಹೀಗಾಗಿ ಚಂದಮಾಮ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡುವ ಪೋಷಕರ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು. ಮೊಬೈಲ್ ನಲ್ಲಿ ಮಕ್ಕಳು ಕಳೆದು ಹೋಗಿರುವ ಆಂತಕ ಇದೆ. ಇದು ಮಕ್ಕಳ ಸಮಸ್ಯೆಯಲ್ಲ, ಪೋಷಕರ ಸಮಸ್ಯೆ. ಮನೆಗಳಲ್ಲೂ ಕೂಡ ರೋಬರ್ಟ್ ಗಳು ಬಂದಿವೆ. ಮೊಬೈಲ್ ನಿಂದ ಮಕ್ಕಳು ಹೊರಗೆ ಬರುವುದು…
Author: News Desk Benkiyabale
ತುಮಕೂರು: ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋ ಲನ-ಕರ್ನಾಟಕದ ಸಂಚಾಲಕರಾದ ಎ.ನರ ಸಿಂಹಮೂರ್ತಿರವರ ೫೦ನೇ ವರ್ಷದ ಜನ್ಮದಿ ನದ ಅಂಗವಾಗಿ ಕ್ಯಾತ್ಸಂದ್ರ ಎಳ್ಳರಬಂಡೆ, ಮಾರಿಯಮ್ಮ ನಗರ, ಸ್ಲಂ ಭವನದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ನೋಟ್ ಬುಕ್ ವಿತರಣೆ, ಅನ್ನದಾನ, ಸ್ನೇಹಕೂಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಜ್ಯದಲ್ಲಿ ಸ್ಲಂ ಜನರನ್ನು ಸಂವಿಧಾನದ ಆಶ ಯದೊಂದಿಗೆ ಕಳೆದ ೨೫ನೇ ವರ್ಷಗಳಿಂದ ಸ್ಲಂ ಜನಾಂದೋಲನ ಕರ್ನಾಟಕದ ಕಾರ್ಯದರ್ಶಿ ಯಾಗಿ, ಸಂಚಾಲಕರಾಗಿ ಜವಾಬ್ದಾರಿ ತೆಗೆದು ಕೊಂಡು ಸ್ಲಂ ಜನರ ಸಂಘಟನೆಗೆ ಅವಿರತವಾಗಿ ಶ್ರಮಿಸಿ, ಹಲವಾರು ಯಶಸ್ಸುಕಂಡು ರಾಜ್ಯದಲ್ಲಿ ಸ್ಲಂ ಜನರ ಧ್ವನಿಯಾಗಿ ಸ್ಲಂ ಜನರ ಭೂಮಿ, ವಸತಿ ಹೋರಾಟಗಳು ಹಲವಾರು ಜಿಲ್ಲೆಗಳಲ್ಲಿ ಕಾಲಕಾಲಕ್ಕೆ ಹಮ್ಮಿಕೊಳ್ಳುತ್ತ ನಗರಗಳ ಮೇಲಿನ ಹಕ್ಕನ್ನು ಸ್ಪಾಪಿಸಲು ನಗರವಂಚಿತ ಸಮುದಾಯಗಳು ಮುಂದಾಗಿರುವುದು ಶ್ಲಾಘನೀಯವಾದದ್ದು ಹಗಲು ರಾತ್ರಿಯನ್ನದೆ ರಾಜ್ಯಾದ್ಯಂತ ಸ್ಲಂ ಜನರನ್ನು ಎ.ನರಸಿಂಹಮೂರ್ತಿ ಸಂಘಟಿಸಿರುವುದು ಮತ್ತು ಜಾಗೃತರನ್ನಾಗಿಸುತ್ತಿರುವುದು ಅಭಿನಂದನೀಯ ವಾಗಿದೆ ಎಂದು ಉಪಾದ್ಯಕ್ಷರಾದ ದೀಪಿಕಾ ಹೇಳಿದ್ದರು. ಮಾಜಿ ಶಾಸಕರಾದ ಡಾ. ರಫೀಕ್ ಅಹ್ಮದ್…
ಚಿಕ್ಕನಾಯಕನಹಳ್ಳಿ: ಪುಣ್ಯಕ್ಷೇತ್ರಗಳ ದರ್ಶ ನಕ್ಕೆ ತೆರಳಿ ಅಪಘಾತಕ್ಕೆ ಈಡಾಗಿ ಸಾವನ್ನಪ್ಪಿದ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್ ಬಿಜೆಪಿ ಮುಖಂಡ ಕೆಂಕೆರೆ ಸಂತೋ ಷ್ ಹಾಗೂ ಲೋಕೇಶ್ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪಟ್ಟಣದ ನೆಹರು ಸರ್ಕಲ್ ನಲ್ಲಿ ನಡೆದ ಶ್ರದ್ಧಾಂಜಲಿ ಸಂದರ್ಭದಲ್ಲಿ ಅ.ಭಾವೀ.ಲಿಂ.ಮ.ಸಭಾ ತಾಲ್ಲೂಕು ಅಧ್ಯಕ್ಷ ಸಾಸಲು ದಿನೇಶ್ ಮಾತನಾಡಿ ಮೃತ ದುರ್ದೈವಿಗಳು ಸಮಾ ಜಕ್ಕೆ ಅನೇಕ ಸೇವೆಸಲ್ಲಿಸಿದ್ದರು. ಕೆಂಕೆರೆ ನವೀನ್ ರಾಜಕೀಯ ಕ್ಷೇತ್ರದಲ್ಲಿ ಸರಳತೆಯ ನಾಯಕತ್ವವನ್ನ ಹೊಂದಿದ್ದರು. ಸಂತೋಷ್ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು ಲೋಕೇ ಶ್ ಕೂಡ ಸಮಾಜದ ಸೇವೇಯಲ್ಲಿ ಸಾಧನೆಯ ಕನಸುಗಳನ್ನ ಕಂಡಿದ್ದರು ಅವರ ಅಕಾಲಿಕ ಮರಣದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಂಬನಿ ಮಿಡಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿರಂಜನ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಯಲ್ಲಿ ಮೃತರು ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು. ಪಕ್ಷ ಸಂಘಟಣೆಯಲ್ಲಿ ನವೀನ್ ಚತುರರಾಗಿದ್ದರು. ಸಂತೋಷ್ ಪಕ್ಷದ ಯುವಮೋರ್ಚರಾಗಿ ಕೆಲಸ ನಿರ್ವಹಿಸಿದ್ದರು ಲೋಕೇಶ್…
ತುಮಕೂರು: ಡಾ: ಡಿ.ಎಂ. ನಂಜುAಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ ೨೦೦೭-೦೮ ರಿಂದ ೨೦೨೩-೨೪ರವರೆಗೂ ಸರ್ಕಾರದಿಂದ ಬಿಡುಗಡೆಯಾಗಿರುವ ೩೭,೬೬೧.೬೫ ಕೋಟಿ ರೂ.ಗಳ ಅನುದಾನದಲ್ಲಿ ೩೪,೩೮೧.೦೨ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ: ಎಂ. ಗೋವಿಂದರಾವ್ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬAಧ ಸೆಪ್ಟೆಂಬರ್ ೨೦೨೪ರಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿರುವ ಪ್ರಾದೇಶಿಕ ಅಸಮತೋಲನಾ ನಿವಾರಣೆಗಾಗಿ ಈ ಸಮಿತಿಯು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ ಎಂದು ಹೇಳಿದರು. ಸಮಿತಿಯು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಡಾ: ನಂಜುAಡಪ್ಪ ಸಮಿತಿ ಶಿಫಾರಸ್ಸುಗಳ ಆಧಾರದ ಮೇಲೆ ಅಸಮತೋಲನೆ ನಿವಾರಣೆಗೆ ಪರಿಣಾಮಕಾರಿಯಾಗಿ ಕೈಗೊಳ್ಳಲಾದ ಕ್ರಮಗಳ ಮೌಲ್ಯಮಾಪನ ಮಾಡಲಿದೆ ಎಂದು ತಿಳಿಸಿದರು. ರಾಜ್ಯದ ಯಾವುದೇ ಸಮುದಾಯ, ಪ್ರದೇಶಗಳು ಅಭಿವೃದ್ಧಿಯಲ್ಲಿ ಹಿಂದುಳಿಯಬಾರದೆAಬುದೇ ಸಮಿತಿ ರಚನೆ ಮುಖ್ಯ ಉದ್ದೇಶವಾಗಿದೆ. ಈ…
ತುಮಕೂರು: ದಿ:೦೧/೦೨/೨೦೨೫ ರಂದು ಸಂಜೆ ೦೬-೧೫ ಗಂಟೆಗೆ ಪಿರ್ಯಾದಿ ಬಸವರಾಜ ಪೂಜಾರಿರವರು ಠಾಣೆಗೆ ಹಾಜರಾಗಿ, ಪಾವಗಡ ತಾ ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯ ವಳ್ಳೂರು ಗ್ರಾಮದ ಅವಧಾ ಸೋಲಾರ್ ಪ್ಲಾಂಟ್ನಲ್ಲಿ ದಿ:೨೦/೦೧/೨೦೨೫ ರಂದು ರಾತ್ರಿ ೧೦-೦೦ ಗಂಟೆಯಿAದ ದಿನಾಂಕ:೨೧/೦೧/೨೦೨೫ ರಂದು ಸುಮಾರು ಬೆಳಗ್ಗೆ ೦೭-೦೦ ನಡುವಿನ ಸಮಯದಲ್ಲಿ ಯಾರೋ ಕಳ್ಳರು ಸೋಲಾರ್ ಪ್ಯಾನಲ್ಗೆ ಆಳವಡಿಸಿದ್ದ ಸುಮಾರು ೨,೫೦೦ ಮೀಟರ್ ಡಿ.ಸಿ ಕೇಬಲ್ ವೈರ್ (ಇವುಗಳ ಅಂದಾಜು ಮೌಲ್ಯ ೧.೩೦,೦೦೦/- ರೂಗಳು) ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು, ಪತ್ತೆ ಮಾಡಿಕೊಡಿ ಎಂದು ನೀಡಿದ ದೂರಿನ ಮೇರೆಗೆ ತಿರುಮಣಿ ಪೊಲೀಸ್ ಠಾಣೆಯಲ್ಲಿ ಮೊ.ನಂ:೦೭/೨೦೨೫, ಕಲಂ:೩೦೩(೨) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ. ದಿ:೧೭-೦೫-೨೦೨೫ ರಂದು ಈ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳಾದ ೧) ಮಲ್ಲೇಶ್ @ ಮಲ್ಲಿಕಾರ್ಜುನ ಕೋಯಪ್ಪ ಬಿನ್ ಸುಂಕಪ್ಪ, ೨೮ ವರ್ಷ, ಈಚಲು ಪೊರಕೆ ವ್ಯಾಪಾರ, ಆಫ್ ಬಂಡೆ. ಪಾವಗಡ ಟೌನ್. ೨) ಬಾಬು @ ಬಾಬುರಾವ್ ಬಿನ್…
ತುಮಕೂರು: ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ೧೭ ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಸ್ವಾಭಾವಿಕವಾಗಿ ದೊರೆಯುವ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಸಸ್ಯಗಳಿಗೆ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಲಘು ಪೋಷಕಾಂಶಗಳಾದ ಕಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗಿರುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೇಕಾದ ಪ್ರಮಾಣದಲ್ಲಿ ಬೆಳೆಗಳಿಗೆ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕು. ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ…
ತುಮಕೂರು: ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಕಳೆದ ೨ ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮುಂಜಾನೆಯಿAದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಕಳೆದ ೨ ದಿನಗಳಲ್ಲಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವರುಣ ಅಬ್ಬರಿಸಿದ್ದು, ತಗ್ಗುಪ್ರದೇಶಗಳು, ಕೆಲ ಬಡಾವಣೆಗಳ ರಸ್ತೆಗಳು, ತೋಟಗಳು ಜಲಾವೃತಗೊಂಡಿವೆ. ಇAದು ಮುಂಜಾನೆಯಿAದಲೇ ಸಾಧಾರಣ ಮಳೆಯಾಗಿದ್ದು, ದಿನನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಸರ್ಕಾರಿ ನೌಕರರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ತೆರಳಲು ಪರದಾಡುವಂತಾಯಿತು. ಮುAಜಾನೆಯಿAದ ಆರಂಭವಾದ ಮಳೆ ಬೆಳಿಗ್ಗೆ ೯.೩೦ ಗಂಟೆಯಾದರೂ ಸುರಿದಿದ್ದರಿಂದ ಮಳೆಯಲ್ಲೇ ಸರ್ಕಾರಿ ನೌಕರರು, ಕಾಲೇಜು ವಿದ್ಯಾರ್ಥಿಗಳು ಜರ್ಕಿನ್ ಧರಿಸಿ ಛತ್ರಿಗಳನ್ನು ಹಿಡಿದು ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು. ನಗರದ ದಿಬ್ಬೂರಿಗೆ ಸಂಪರ್ಕ ಹೊಂದಿರುವ ಗಾರ್ಡನ್ ರಸ್ತೆಯಲ್ಲಿ ಮ್ಯಾನ್ ಹೋಲ್ ತುಂಬಿ ಕೊಳಚೆ ನೀರು ಮಳೆ ನೀರಿನೊಂದಿಗೆ ರಸ್ತೆಯಲ್ಲಿ ಹರಿಯುತ್ತಿರುವುದರಿಂದ ಈ ಭಾಗದಲ್ಲಿ ಸಂಚರಿಸುವ ಪಾದಚಾರಿಗಳು, ವಾಹನ ಸವಾರರು ತೀವ್ರ ಪ್ರಯಾಸ ಪಡುವಂತಾಗಿದೆ. ಮಳೆ ನೀರಿದೊಂದಿಗೆ ಕೊಳಚೆ ನೀರು ಮಿಶ್ರಣಗೊಂಡಿರುವುದರಿAದ ಈ ರಸ್ತೆಯಲ್ಲಿ…
ತುಮಕೂರು: ಸಂಗೀತ, ನೃತ್ಯ, ನಾಟಕಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮನುಷ್ಯನ ಮನಸ್ಸು, ಕೆಟ್ಟ ವಿಚಾರಗಳತ್ತ ಹೊರಳದಂತೆ ತಡೆಯುತ್ತವೆ. ಇಂತಹ ಅಭ್ಯಾಸಗಳಿಂದ ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕಲಾಕಾರ್ ಇವೆಂಟ್ಸ್ ಅವರ ಆಯೋಜಿಸಿದ್ದ ರಾಜ್ಯಮಟ್ಟದ ಸ್ವರ ಶೃಂಗಾರ ಕರೋಕೆ ಗೀತಗಾಯನ ಮತ್ತು ಸ್ವರ ಶೃಂಗಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ವರ ಶೃಂಗಾರ ಸಂಸ್ಥೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು,ಮಾದಕ ವ್ಯಸನಗಳಿಗೆ ಬಲಿಯಾಗಿ ಯುವಜನರು ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ.ಶಾಲಾ, ಕಾಲೇಜುಗಳ ಯುವಜನರು ಸಂಗೀತ, ಸಾಹಿತ್ಯದಂತಹ ಸಾಂಸ್ಕೃತಿಕ ಕಲೆಗಳನ್ನು ತಮ್ಮಲ್ಲಿ ರೂಢಿಸಿಕೊಂಡರೆ ವ್ಯಸನ ಮುಕ್ತ ಜೀವನ ನಡೆಸಲು ದಾರಿಯಾಗುತ್ತದೆ. ಹಾಗಾಗಿ ಕಲಾಕಾರ್ ಈವೆಂಟ್ಸ್ ಇಂತಹ ಕಾರ್ಯಕ್ರಮಗಳನ್ನು ಹದಿಹರೆಯದ ಯುವಜನರು ಕಲಿಯುವ ಕಾಲೇಜುಗಳಲ್ಲಿ ಏರ್ಪಡಿಸಿ, ಅವರಲ್ಲಿರುವ ಪ್ರತಿಭೆಗೆ ಸಾಣೆ ಹಿಡಿಯುವ ಕೆಲಸ ಮಾಡಿದರೆ, ಹೊಸ ಪ್ರತಿಭೆಗಳ ಉದಯದ ಜೊತೆಗೆ, ಸಾಮಾಜಿಕ ಸಮಸ್ಯೆಯಾಗಿರುವ ದುಶ್ಚಟಗಳಿಂದ ದೂರ ಇಡಲು…
ತುರುವೇಕೆರೆ: ಕಾಶ್ಮೀರದಲ್ಲಿನ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರು ಮತ್ತು ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಮೇಲೆ ಭಾರತ ಸಿಂಧೂರ್ ಆಫರೇಷ್ ನಡೆಸಿ ಯಶಸ್ವಿಯಾಗಿವ ಕಾರಣ ಇದರ ಕ್ರೆಡಿಟ್ ಅನ್ನು ಪ್ರಧಾನಿಯವರಿಗೆ ನೀಡದೆ ಸೈನಿಕರಿಗೆ ನೀಡಬೇಕು ಎನ್ನುವ ಮುಖ್ಯ ಮಂತ್ರಿಗಳ ನಿಲುವು ಖಂಡನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಯುದ್ದದ ಮೂಲಕ ಭಾರತ ಪಾಕಿಸ್ತಾನದ ತಪ್ಪನ್ನು ಮನವರಿಕೆ ಮಾಡಿಕೊಟ್ಟಿದೆ. ಜೊತೆಗೆ ಪಾಕಿಸ್ತಾನದ ಪ್ರಧಾನಿಯವರು ಯುದ್ದವನ್ನು ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿದ ಕಾರಣ ಪ್ರಧಾನಿ ನೇಂದ್ರ ಮೋದಿಯವರು ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದ್ದರೂ ಸಹ ಸಂಪೂರ್ಣವಾಗಿ ಯುದ್ದ ನಿಂತಿಲ್ಲ. ಭಾರತೀಯ ಸೈನಿಕರು ಉಗ್ರರನ್ನು ಹುಡುಕಿ ಸದೆಬಡಿದಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಂಧೂರ್ ಆಫರೇಷ್ ಗೆಲುವಿನ ಕ್ರೆಡಿಟ್ ಅನ್ನು ಯಾರಿಗೂ ನೀಡದೆ ಹೋರಾಡಿದ ಸೈನಿಕರಿಗೆ ನೀಡಬೇಕು ಎನ್ನುತ್ತಾರೆ ಇದನ್ನೂ ಒಪ್ಪೊಣ. ಆದರೆ ಶತ್ರುಗಳೊಂದಿಗೆ ಯುದ್ದ ನಡೆಸುವ…
ತುಮಕೂರು: ಮಾಧ್ಯಮರಂಗ ಇಂದು ಬಹಳ ವಿಸ್ತಾರವಾಗಿ ಹರಡಿಕೊಂಡಿದೆ. ಇದರಲ್ಲಿರುವ ವಿಫುಲ ಅವಕಾಶಗಳನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸಂತ ಟಿ. ಡಿ. ತಿಳಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಮಾಧ್ಯಮ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಧ್ಯಮ ಕ್ಷೇತ್ರ ಇಂದು ಪತ್ರಿಕೆ, ಟಿವಿಗಳಿಗೆ ಸೀಮಿತವಾಗಿಲ್ಲ. ಡಿಜಿಟಲ್ ಯುಗ ನಮ್ಮನ್ನು ಆವರಿಸಿಕೊಂಡಿದೆ. ಯುವಜನರು ಮನಸ್ಸು ಮಾಡಿದರೆ ಸಮಾಜದಲ್ಲಿ ಬದಲಾವಣೆ ತರಲು ಮಾಧ್ಯಮರಂಗವನ್ನು ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ರಂಗದ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ತುಮಕೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ. ವಿ. ಮಾಧ್ಯಮರಂಗದಲ್ಲಿ ಉದ್ಯೋಗ ಪಡೆಯುವವರಿಗೆ ಜೀವನೋಪಾಯವಷ್ಟೇ ಮುಖ್ಯವಾಗುವುದಿಲ್ಲ. ಸಮಾಜದ ಬದಲಾವಣೆಯಲ್ಲಿ ಪಾತ್ರವಹಿಸಿದ ತೃಪ್ತಿ ಹಾಗೂ ಸಾಮಾಜಿಕ ಮನ್ನಣೆ ಕೂಡ…











