Author: News Desk Benkiyabale

ತುಮಕೂರು:       ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು        ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದುರಸ್ಥಿಯಲ್ಲಿರುವ ಆರ್.ಓ ಪ್ಲಾಂಟ್‍ಗಳನ್ನು ಪಟ್ಟಿ ಮಾಡಿ, ದುರಸ್ಥಿಯಾಗಿರುವ ಘಟಕದಲ್ಲಿ ದುರಸ್ಥಿಯಲ್ಲಿದೆ ಎಂದು ಬೋರ್ಡ್ ಹಾಕಬೇಕು. ಅಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ನೀರಿನ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಟರ್ ಮ್ಯಾನ್‍ಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಘಟಕ ನಿರ್ವಹಿಸುವ…

Read More

ತುಮಕೂರು:       ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೇ ಉಳಿದುಕೊಂಡಿದ್ದ ರಾಜ್ಯದ ವಿವಿಧ ಜಿಲ್ಲೆಗಳ 765 ವಲಸೆ ಕಾರ್ಮಿಕರು ತಮ್ಮ ಊರಿಗೆ ಪ್ರಯಾಣ ಬೆಳೆಸಲು ಒಟ್ಟು 24 ಬಸ್‍ಗಳ ವ್ಯವಸ್ಥೆ ಮಾಡಲಾಗಿತ್ತು ಎಂದು ಕ.ರಾ.ರ.ಸಾ.ನಿ.ದ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ತಿಳಿಸಿದ್ದಾರೆ.       ತುಮಕೂರು ನಗರದ ಬಸ್ ನಿಲ್ದಾಣದಿಂದ ಮುದ್ದೇಬಿಹಾಳ್, ರಾಯಚೂರು, ಶಿವಮೊಗ್ಗ, ಹಾವೇರಿ, ಕಲ್ಬುರ್ಗಿ, ಬಾಗಲಕೋಟೆ, ಹುಬ್ಬಳ್ಳಿ, ಬೆಂಗಳೂರು, ಯಾದಗಿರಿ, ರಾಯಚೂರು-ಬಳ್ಳಾರಿ, ಹಾಸನ-ಶಿವಮೊಗ್ಗ, ಯಾದಗಿರಿ-ಕಲ್ಬುರ್ಗಿ ಜಿಲ್ಲೆಗಳಿಗೆ ಒಟ್ಟು 13 ಬಸ್‍ಗಳಲ್ಲಿ 438 ಕಾರ್ಮಿಕರು ಪ್ರಯಾಣ ಮಾಡಿದರು.       ಗುಬ್ಬಿ ಬಸ್ ನಿಲ್ದಾಣದಿಂದ ಕಲ್ಬುರ್ಗಿ ಜಿಲ್ಲೆಗೆ 30; ಕುಣಿಗಲ್‍ನಿಂದ ಕರಟಗಿ ಹಾಗೂ ಬಾಗಲಕೋಟೆ-ವಿಜಾಪುರ ಜಿಲ್ಲೆಗಳಿಗೆ ಒಟ್ಟು 73; ಮಧುಗಿರಿಯಿಂದ ತುಮಕೂರಿಗೆ 22; ಚಿಕ್ಕನಾಯಕನಹಳ್ಳಿಯಿಂದ ಬೆಂಗಳೂರು ಹಾಗೂ ವಿಜಾಪುರಕ್ಕೆ 91; ತುರುವೇಕೆರೆ ಬಸ್‍ನಿಲ್ದಾಣದಿಂದ ಬೆಂಗಳೂರು, ರಾಯಚೂರು ಹಾಗೂ ವಿಜಾಪುರಕ್ಕೆ 111 ಪ್ರಯಾಣಿಕರು ತಮ್ಮ ಊರಿಗೆ ಸೇರಲು ಒಟ್ಟು 11 ಬಸ್‍ಗಳ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಲಾಕ್‍ಡೌನ್ ಹಿನ್ನಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಕೂಲಿಕಾರ್ಮಿಕರಿಗೆ, ನಿರ್ಗತಿಕರಿಗೆ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ಹೋಂಗಾಡ್ರ್ಸ್‍ಗಳಿಗೆ ನಿರಂತರವಾಗಿ ಆಹಾರ ವಿತರಿಸುತ್ತಿರುವ ಆರ್. ರಾಜೇಂದ್ರ ನೇತೃತ್ವದ ಆರ್.ಆರ್. ಅಭಿಮಾನಿ ಬಳಗವು ಮಂಗಳವಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಆಹಾರ, ಮಕ್ಕಳಿಗೆ ಬಿಸ್ಕೆಟ್ ಮತ್ತು ನೀರು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.       ಪ್ರಯಾಣಿಕರಿಗೆ ಉಚಿತ ಊಟದ ಪಾಕೆಟ್ ಮತ್ತು ಕುಡಿಯುವ ನೀರನ್ನು ವಿತರಿಸಿ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಕೋವಿಡ್-19 ಲಾಕ್‍ಡೌನ್ ಆದಾಗಿನಿಂದ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ನಿರಂತರವಾಗಿ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಿಕೊಂಡು ಬರಲಾಗುತ್ತಿದೆ. ನಿನ್ನೆಯಿಂದ ನಗರದ ಕೆಎಸ್ ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು.        ಕೂಲಿಕಾರ್ಮಿಕರು ಅವರ ಸ್ವಂತ ಊರಿಗೆ ತೆರಳಲು ಬಹಳ ಕಷ್ಟವಾಗಿರುವಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಳೆದ…

Read More

ಕೊರಟಗೆರೆ:       ಕೋರಾ ಮತ್ತು ಪುರವಾರ ಜಿಪಂ ಕ್ಷೇತ್ರಕ್ಕೆ ಸರಕಾರದ ಆದೇಶದಂತೆ ಅನುಧಾನ ಹಂಚಿಕೆ ಮಾಡಿ.. ನೀವೇನು ನನ್ನ ಕೊರಟಗೆರೆ ಕ್ಷೇತ್ರಕ್ಕೆ ಏನು ದಾನ ಕೋಡಬೇಡಿ.. ಟಾಸ್ಕ್‍ಪೂರ್ಸ್ ಸಮಿತಿಯಿಂದ ನನ್ನ ಕೈಬಿಟ್ಟಿರುವ ಹಿಂದಿರುವ ಉದ್ದೇಶವೇನು ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ತುಮಕೂರು ಗ್ರಾಮಾಂತರ ಮತ್ತು ಮಧುಗಿರಿ ತಹಶೀಲ್ದಾರ್, ಇಓ ವಿರುದ್ದ ಕಿಡಿಕಾರಿದರು.        ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಮಧುಗಿರಿ ತಾಲೂಕು ಮಟ್ಟದ ಅಧಿಕಾರಿಗಳ ಕೋವಿದ್-19 ಮತ್ತು ಕುಡಿಯುವ ನೀರು ಪೂರೈಕೆಯ ತುರ್ತುಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.        ತುಮಕೂರು ಗ್ರಾಮಾಂತರ, ಕೊರಟಗೆರೆ ಮತ್ತು ಮಧುಗಿರಿ ತಾಲೂಕು ಬರಪೀಡಿತವೆಂದು ಸರಕಾರ ಘೋಷಣೆ ಮಾಡಿ ಪ್ರತಿ ತಾಲೂಕಿಗೆ 1ಕೋಟಿ ಅನುಧಾನ ಬಿಡುಗಡೆ ಮಾಡಿದೆ. ತುಮಕೂರು ಗ್ರಾಮಾಂತರದ ಕೋರಾ ಮತ್ತು ಮಧುಗಿರಿಯ ಪುರವಾರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಕೊರಟಗೆರೆ ಕ್ಷೇತ್ರದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಟಾಸ್ಕ್‍ಪೂರ್ಸ್ ಕಮಿಟಿಯ…

Read More

ಚಿಕ್ಕನಾಯಕನಹಳ್ಳಿ:       ಲಾಕ್ಡೌನ್ ಹಿನ್ನಲೆಯಲ್ಲಿ ನೆನೆಗುದಿಗೆ ಬಿದ್ದಿದ್ದ ಮುಖ್ಯಕಾಮಗಾರಿಗಳಿಗೆ ಚಾಲನೆ ದೊರೆಯುತ್ತಿದೆ ಆದರೆ ಈ ಕೆಲಸಗಳಿಗೆ ಹೊರಗಿನ ಕೂಲಿಕಾರ್ಮಿಕರು ಬರುತ್ತಿದ್ದು ಸುರಕ್ಷತೆಯ ಕೆಲ ನಿಯಮಗಳು ಪಾಲನೆಯಾಗದಿರುವುದು ಆತಂಕಕ್ಕೆಡೆ ಮಾಡಿಕೊಟ್ಟಿದೆ.       ಕಾಮಗಾರಿಗೆ ಗ್ರೀನ್ ಸಿಗ್ನಲ್:       ಕೊರೊನಾ ಸೋಂಕಿನ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಇದೇ ಮೊದಲಬಾರಿಗೆ ಲಾಕ್‍ಡೌನ್ ಆದ ಪರಿಣಾಮ ದೇಶದಲ್ಲಿ ಕೊರೊನಾ ಹರಡುವಿಕೆಗೆ ಕಡಿವಾಣ ಬಿದ್ದಿದ್ದು ಈಗ ಲಾಕ್‍ಡೌನ್ ಸಡಿಲಿಕೆಯಾಗಿದೆ. ಕಾರ್ಮಿಕರ ನೆರವಿನಿಂದ ನಡೆಯುವ ಕಾಮಗಾರಿಗಳನ್ನು ಆರಂಭಿಸಲು À ಸರ್ಕಾರ ಕೆಲವು ಶರತ್ತುಬದ್ದದನ್ವಯ ನಡೆಸಲು ಸೂಚಿಸಿದೆ. ಅದರಂತೆ ತಾಲ್ಲೂಕಿನಲ್ಲಿ ಈಗಾಗಲೇ ಇದಕ್ಕೆ ಚಾಲನೆ ನೀಡಲಾಗಿದೆ ಪಟ್ಟಣದ ಮುಲಕ ಹಾದುಹೋಗುವು ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು ಎತ್ತಿನಹೊಳೆ, ಹೇಮಾವತಿಯ ನಾಲಾ ಕಾಮಗಾರಿಗಳು ಇನ್ನೇನು ಆರಂಭಗೊಳ್ಳಲಿದೆ. ಸುರಕ್ಷತಾ ಕ್ರಮಕ್ಕೆ ತಿಲಾಂಜಲಿ:        ಈ ನಡುವೆ ಹೆದ್ದಾರಿ ಕಾಮಗಾರಿ ಆರಂಭಕ್ಕಾಗಿ ಹೊರ ಪ್ರದೇಶದಿಂದ ಸುಮಾರು 34 ಮಂದಿ ಆಗಮಿಸಿದ್ದಾರೆ. ಇಂತಹ ಕಾರ್ಮಿಕರು ಉಳಿದುಕೊಳ್ಳಲು ಗ್ಯಾರೆಹಳ್ಳಿ,…

Read More

ತುಮಕೂರು:        ತುಮಕೂರು ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಉಚಿತವಾಗಿ ಕರೆದೊಯ್ಯುವ ಕೆಸ್ಸಾರ್ಟಿಸಿ ಬ ಸ್ಸುಗಳಿಗೆ ತುಮಕೂರು ನಗರದ ಶಾಸಕರಾದ ಜಿ.ಬಿ ಜ್ಯೋತಿಗಣೇಶ್ ಅವರು ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದಿಂದ ಹಸಿರು ನಿಶಾನೆ ತೋರಿದರು.       ಅನಂತರ ಮಾತನಾಡಿದ ಅವರು, ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕರ್ನಾಟಕ ಸರ್ಕಾರ, ಕೆ.ಎಸ್.ಆರ್.ಟಿ.ಸಿ ಮತ್ತು ಜಿಲ್ಲಾಡಳಿತ ವತಿಯಿಂದ ಇವತ್ತು ಮತ್ತು ನಾಳೆ ತಮ್ಮ ತಮ್ಮ ಊರುಗಳಿಗೆ ಹೋಗಲು ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಆರೋಗ್ಯ ಇಲಾಖೆಯಿಂದಲೂ ಸಹ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ. ಎಷ್ಟು ಜನ ಬಂದರೂ ಕೂಡ ಕರೆದುಕೊಂಡು ಹೋಗುವ ವವ್ಯಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ ಎಂದರು.       ವಿಭಾಗ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮಾತನಾಡಿ ಜಿಲ್ಲಾಡಳಿತ ವತಿಯಿಂದ ತುಮಕೂರು ನಗರದಲ್ಲಿ ಉಳಿದು ಕೊಂಡಿರುವ ಮುದ್ದೆಬಿಹಾಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಹೀಗೆ ನಾನಾ ಕಡೆಯ ವಲಸೆ ಕಾರ್ಮಿಕರನ್ನು…

Read More

ತುಮಕೂರು:       ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-20ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ) ಪ್ರವೇಶಾತಿ ಪಡೆದಿದ್ದ ಪ್ರಥಮ ಮತ್ತು ದ್ವಿತೀಯ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಸಂಪರ್ಕ ತರಗತಿಗಳು ಪ್ರಾರಂಭವಾಗಿವೆ ಎಂದು ಪ್ರಾದೇಶಿಕ ನಿರ್ದೇಶಕ ದಿಲೀಪ ಡಿ. ಅವರು ತಿಳಿಸಿದ್ದಾರೆ.       ವೇಳಾಪಟ್ಟಿಯನ್ನು ಈಗಾಗಲೇ www.ksoumyuru.ac.in ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಞsousಣuಜeಟಿಣ ಂಠಿಠಿ ಅನ್ನು ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ ಆನ್‍ಲೈನ್ ಸಂಪರ್ಕ ಕಾರ್ಯಕ್ರಮಕ್ಕೆ ಲೈವ್ ಆಗಿ ಸೇರಿಕೊಳ್ಳಬಹುದಾಗಿದೆ.       www.ksoumyuru.ac.in  ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.        ವಿದ್ಯಾರ್ಥಿಗಳು ಆನ್‍ಲೈನ್ ಸಂಪರ್ಕ ತರಗತಿಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸಿ.ಎ-07, ಟೂಡಾ ಲೇಔಟ್, ಮೇಳೆಕೋಟೆ-ವೀರಸಾಗರೆ, ತುಮಕೂರು-572105 ಅಥವಾ ದೂರವಾಣಿ ಸಂಖ್ಯೆ: 9108808219 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಜಿಲ್ಲೆಯಲ್ಲಿ ನೈಸರ್ಗಿಕ ನೀರಿನ ಮೂಲಗಳಾದ ಹಳ್ಳ, ಕೆರೆಗಳನ್ನು ಪುನಶ್ಚೇತನಗೊಳಿಸುವುದರಿಂದ ಅಂತರ್ಜಲ ಸಾಮಥ್ರ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ ತಿಳಿಸಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಅಂತರ್ಜಲ ಚೇತನ ಯೋಜನೆ ಅನುಷ್ಠಾನ ಕುರಿತು ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಸಹಾಯಕ ನಿರ್ದೇಶಕರು(ಗ್ರಾ.ಉ.)ಗಳು, ಎಂ.ಐ.ಎಸ್. ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರುಗಳಿಗಾಗಿ ಏರ್ಪಡಿಸಿದ್ದ ತರಬೇತಿಯನ್ನುದ್ದೇಶಿಸಿ ಅವರು ಮಾತನಾಡುತ್ತಾ, ನೀರಿನ ಮೂಲಗಳಲ್ಲಿ ಮಣ್ಣಿನ ಸವಕಳಿ ಹಾಗೂ ಹೂಳು ತುಂಬುವಿಕೆಯನ್ನು ಕಡಿಮೆ ಮಾಡುವುದರಿಂದ ಹಳ್ಳ, ಕೆರೆಗಳಿಗೆ ನೀರಿನ ಹರಿವು ಹೆಚ್ಚುತ್ತದೆ. ನದಿ ಮತ್ತು ಜಲಾನಯನ ಪ್ರದೇಶಗಳಲ್ಲಿ ಸ್ವಾಭಾವಿಕ ಸಸ್ಯವರ್ಗವನ್ನು ಅಭಿವೃದ್ಧಿಗೊಳಿಸುವುದರಿಂದ ನೈಸರ್ಗಿಕ ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸಬಹುದಾಗಿದೆ ಎಂದು ತಿಳಿಸಿದರು.       ರಾಜ್ಯ ಸರ್ಕಾರವು ಪ್ರಸಕ್ತ ವರ್ಷದಲ್ಲಿ ಅಂತರ್ಜಲ ಚೇತನ ಯೋಜನೆ ಅನುಷ್ಠಾನ ಮಾಡಲು ಅವಕಾಶ ಕಲ್ಪಿಸಿರುವ ರಾಜ್ಯದ…

Read More

ತುಮಕೂರು:         ಕೊರೋನಾ ವೈರಸ್(ಕೋವಿಡ್-19) ಸೋಂಕು ರೋಗ ಹರಡದಂತೆ ನಿಯಂತ್ರಿಸುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮೇ 4 ರಿಂದ 17ರವರೆಗೆ ಜಿಲ್ಲಾದ್ಯಂತ ಕಲಂ 144ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದು ಆದೇಶ ಹೊರಡಿಸಿದ್ದಾರೆ.       ನಿಷೇಧಾವಧಿಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕ ಸಾರಿಗೆ ಸಂಪರ್ಕ, ಧಾರ್ಮಿಕ ಕೇಂದ್ರ/ದೇವಸ್ಥಾನಗಳಲ್ಲಿ ದೇವರ ದರ್ಶನ ಮತ್ತು ಪೂಜಾ ಕೈಂಕರ್ಯ ಹೊರತುಪಡಿಸಿ ಎಲ್ಲಾ ಸಾಮೂಹಿಕ ಸೇವೆ, ಜಿಲ್ಲೆಯಲ್ಲಿ ನಡೆಯುವ ಜಾತ್ರೆ/ ಉತ್ಸವ/ ಸಂತೆ/ ಮತ್ತಿತರ ಜನಸಂದಣಿ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.          ಜಿಲ್ಲೆಯಾದ್ಯಂತ ಚಿತ್ರಮಂದಿರ/ ನೈಟ್‍ಕ್ಲಬ್/ ನಾಟಕ ಪ್ರದರ್ಶನ/ ಶಾಪಿಂಗ್ ಮಾಲ್‍ಗಳನ್ನು ಹಾಗೂ ಎಲ್ಲಾ ಶಿಕ್ಷಣ ಸಂಸ್ಥೆಗಳು, ಸಂಶೋಧನೆ, ಕೋಚಿಂಗ್ ಸೆಂಟರ್‍ಗಳನ್ನು ಮುಚ್ಚುವಂತೆ ಆದೇಶಿಸಲಾಗಿದ್ದು, ಸರ್ಕಾರಿ ಸಮಾರಂಭಗಳಲ್ಲಿ ಜನದಟ್ಟಣೆ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಎಲ್ಲಾ ರೀತಿಯ ಸಾಮಾಜಿಕ/ ರಾಜಕೀಯ/ಕ್ರೀಡೆ/ ಮನರಂಜನೆ/ ಶೈಕ್ಷಣಿಕ/…

Read More

ತುಮಕೂರು :       ರಾಜ್ಯವ್ಯಾಪ್ತಿ ಕೊರೊನ ವೈರಸ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ರೈತರು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿರ್ಬಂಧನೆ ಇರುವುದಿಲ್ಲ.     ಕೋವಿಡ್-19 ಹರಡದಂತೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮುನ್ನೆಚರಿಕೆ ಕ್ರಮಗಳ ಅನುಸರಿಸಿ ರೈತರು ತಮ್ಮ ಜಮೀನಿನಲ್ಲಿ ಕಾಮಗಾರಿಗಳನ್ನು ಮಾಡಿಕೊಳ್ಳಲು ಕೋರಿದೆ.       2020-21 ನೇ ಸಾಲಿನ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸ್ತ್ರೀ ಪ್ರಧಾನ ಕುಟುಂಬಗಳು, ಬಡತನ ರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆ ಫಲಾನುಭವಿಗಳು, ಕೆಲಸ ನಿರ್ವಹಿಸುವ ಅಕುಶಲ ಕೂಲಿ ಕಾರ್ಮಿಕರ ವೇತನದ ದರ ಒಂದು ದಿನಕ್ಕೆ ಮೊತ್ತ 275 ರೂ. ನಿಗಧಿಪಡಿಸಲಾಗಿದೆ.      ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಯಡಿ ಸಹಾಯಧನ:-    …

Read More