ತುಮಕೂರು : ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ ಹೋಂ ಕ್ವಾರೆಂಟೈನ್ನಲ್ಲಿ ಯಾರೂ ಇರುವುದಿಲ್ಲ. ಒಟ್ಟು 395 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, ಆಸ್ಪತ್ರೆಯ ಐಸೋಲೇಷನ್ನಲ್ಲಿರುವವರು 76 ಮಂದಿ, 370 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 1078 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 884 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಮತ್ತೊಬ್ಬ ಗುಣಮುಖರಾಗಿರುತ್ತಾರೆ. 9 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ 183 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: News Desk Benkiyabale
ತುಮಕೂರು : ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟ ಅನುಭವಿಸುತ್ತಿರುವ ಬಡವರಿಗೆ ಉಚಿತ ತರಕಾರಿ, ರೇಷನ್ ಕಿಟ್ ನ್ನು ಜನಪ್ರಿಯ ಮಾಜಿ ಶಾಸಕರಾದ ಬಿ.ಸುರೇಶ್ ಗೌಡ ರವರು ವಿತರಿಸಿದರು. ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಗೂಳೂರು ಜಿಲ್ಲಾ ಪಂಚಾಯ್ತಿಯ ಹರಳೂರು ಗ್ರಾಮ ಪಂಚಾಯತಿ ಪ್ರತಿ ಮನೆ ಮನೆಗೆ ಉಚಿತವಾಗಿ ಮಾಸ್ಕ್ ಹಾಗೂ ನೇರವಾಗಿ ರೈತರಿಂದ ಖರೀದಿ ಮಾಡಿದ ತರಕಾರಿಯನ್ನು ಮತ್ತು ರೇಷನ್ ಕಾರ್ಡ್ ರಹಿತ ಬಡ ಕುಟುಂಬಗಳಿಗೆ ರೇಷನ್ ಕಿಟ್ ನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಕುಮಾರ್, ಹರಳೂರು ಕುಮಾರಯ್ಯ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಜಣ್ಣ, ಗ್ರಾಮ ಪಂ ಸದಸ್ಯರಾದ ರಮೇಶ್, ಪುಟ್ಟರಾಜು, ಶಾಂತಕುಮಾರ್, ಕೃಷ್ಣಪ್ಪ, ಮುಖಂಡರಾದ ಹೊನ್ನೇಶ್ ಕುಮಾರ್, ಪಾಲಣ್ಣ ಮುಂತಾದವರು ಭಾಗವಹಿಸಿದ್ದರು.
ತುಮಕೂರು: ಗುಬ್ಬಿಯ ಕೆ.ಎಂ.ಎಫ್. ಪಶು ಆಹಾರ ಘಟಕದಲ್ಲಿ ಕರ್ತವ್ಯದಲ್ಲಿದ್ದ ಗುತ್ತಿಗೆ ಕಾರ್ಮಿಕ ಮಹಿಳೆ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ಹಾಜರಾದ ಪಟ್ಟಣದ ಹೊರವಲಯದ ಕರೇಕಲ್ಲುಬಾರೆ ಬಡಾವಣೆಯ ಮಂಗಳಮ್ಮ(30) ಘಟಕದಲ್ಲಿನ ಹೊಸ ಯೂನಿಟ್ನಲ್ಲಿನ ಹೊಸ ಯಂತ್ರಗಳಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ ದೊಡ್ಡ ಗಾತ್ರದ ಮೋಟಾರ್ ಬೆಲ್ಟ್ ಗೆ ಸಿಲುಕಿದ ಮಂಗಳಮ್ಮ ತೀವ್ರ ಅಸ್ವಸ್ಥರಾದರು. ಗುಬ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ತಕ್ಷಣ ಆತಂಕದಲ್ಲಿದ್ದ ಘಟಕದಲ್ಲಿದ್ದ ನೂರಾರು ಕಾರ್ಮಿಕರು ಹಾಗೂ ಮೃತ ಮಂಗಳಮ್ಮ ಅವರ ಸಂಬಂಧಿಕರು ಕಾರ್ಖಾನೆ ಮುಂಭಾಗ ಗೇಟ್ ಬಳಿ ಪ್ರತಿಭಟನೆಗೆ ಮುಂದಾದರು. ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಸಾಥ್ ನೀಡಿದ ಕಾರ್ಮಿಕರು ಮಂಗಳಮ್ಮ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿದರು. ಮೃತ ಮಹಿಳೆ ಪತಿ ಗಾರೆ ಕೆಲಸ ಮಾಡುತ್ತಿದ್ದು, ಎಂಟು ವರ್ಷದ ಮಗಳಿದ್ದಾಳೆ. ಸ್ಥಳದಲ್ಲಿ ಮಂಗಳಮ್ಮ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಕಾರ್ಮಿಕ ಮಂಗಳಮ್ಮ…
ತುಮಕೂರು: ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಅವರು ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿನೀಡಿ ಶ್ರೀ ಸಿದ್ಧಲಿಂಗಸ್ವಾಮೀಜಿ ಅವರ ದರ್ಶನ ಮಾಡಿ ವಸತಿ ಶಾಲೆಯಲ್ಲಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಶ್ರೀ ಮಠದಲ್ಲಿ 1320 ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇರುವುದನ್ನು ಖಚಿತಪಡಿಸಿಕೊಂಡು ಈ ವಿದ್ಯಾರ್ಥಿಗಳಲ್ಲಿರುವ ಸಂಶಯ ಮತ್ತು ಸಂದೇಹಗಳಿಗೆ ಪರಿಹಾರ ಸೂಚಿಸುವ ಸಲುವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಉತ್ಸಾಹದಿಂದ ಓದಿನಲ್ಲಿ ಪ್ರವೃತ್ತರಾಗುವಂತೆ ಮನವೊಲಿಸುವ ಸಲುವಾಗಿ ಮಠಕ್ಕೆ ಭೇಟಿ ನೀಡಿದ್ದೇನೆಂದು ಅವರು ತಿಳಿಸಿದರು. ವಿಶ್ವಕ್ಕೆ ಅಂಟಿಕೊಂಡಿರುವ ಪ್ರಾಣಾಂತಿಕ ಕೋವಿಡ್-19 ಸೋಂಕಿನಿಂದ ಮುಕ್ತರಾಗಲು ದೇಶ…
ತುಮಕೂರು: ಜಿಲ್ಲೆಯಿಂದ ಹುಣಸೆ ಹಣ್ಣು ಮತ್ತು ಕೊಬ್ಬರಿಯನ್ನು ಕೆಲವು ನಿಬಂಧನೆಗೊಳಪಟ್ಟು ಹೊರ ರಾಜ್ಯಗಳಿಗೆ ಕಳುಹಿಸಲು ಏಪ್ರಿಲ್ 24ರಿಂದ(ನಾಡಿದ್ದು) ಅವಕಾಶ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಹೊರ ರಾಜ್ಯಗಳಿಗೆ ಹುಣಸೆ ಹಣ್ಣು ಮತ್ತು ಕೊಬ್ಬರಿ ತೆಗೆದುಕೊಂಡು ಹೋಗಿ ವಾಪಸ್ ಬರುವ ಲಾರಿ ಡ್ರೈವರ್ಗಳನ್ನು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಲಾಗುವುದು ಎಂದರು. ಕೋವಿಡ್-19ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೈಸ್ಮಿಲ್ಗಳಲ್ಲಿ ಹೊರ ರಾಜ್ಯಗಳಿಂದ ಭತ್ತ ತರಿಸುತ್ತಿರುವುದು ಹಾಗೂ ರೈಸ್ ಸರಬರಾಜು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ ಕೊಬ್ಬರಿ ಹಾಗೂ ಹುಣಸೆ ಹಣ್ಣಿನ ವರ್ತಕರು/ಎಪಿಎಂಸಿಗಳು ನಿರ್ವಹಣೆ ಮಾಡಬೇಕು ಎಂದರು.…
ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು. ಇದುವರೆಗೂ ತಾವು ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ.ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ – ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೊಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ…
ತುಮಕೂರು: ಜಿಲ್ಲೆಯ ಪಾಲಿನ ಬಾಕಿ ಉಳಿಸಿಕೊಂಡಿರುವ ಹೇಮಾವತಿ ನೀರನ್ನು ಕೂಡಲೇ ಹರಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ, ಮಾಜಿ ಶಾಸಕ ಬಿ.ಸುರೇಶ ಗೌಡ ಸಲಹೆ ನೀಡಿದ್ದಾರೆ. ಗೊರೂರು ಜಲಾಶಯದಲ್ಲಿ ಇನ್ನೂ 7 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿದೆ. ಇದು ತುಮೂರು ಪಾಲಿನ ನೀರು ಆಗಿದೆ. ಈ ನೀರನ್ನು ಕೂಡಲೇ ತುಮಕೂರಿಗೆ ಬಿಡಬೇಕು ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಅಷ್ಟೇ ಅಲ್ಲದೇ ಅಂತರ್ಜಲದ ಕುಸಿತದ ಕಾರಣ ರೈತರು ಬೀದಿಗೆ ಬೀಳುತ್ತಿದ್ದಾರೆ. ಹೀಗಾಗಿ ತುಮಕೂರು ಪಾಲಿನ ನೀರನ್ನು ಕೂಡಲೇ ಹರಿಸಬೇಕು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೊಂದಿಗೆ ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ. ಕಳೆದ ಜಲಾಶಯದಲ್ಲಿ ನೀರಿದ್ದರೂ ತುಮಕೂರು ಗ್ರಾಮಾಂತರ ಕ್ಷೇತ್ರದ ಕೆರೆಗಳನ್ನು ತುಂಬಿಸಿಕೊಳ್ಳುವಲ್ಲಿ ಶಾಸಕ ಬಿ.ಸಿ.ಗೌರಿಶಂಕರ್ ವಿಫಲರಾದರು. ಸರ್ಕಾರದ ಮೇಲೆ ಒತ್ತಡ…
ಚಿಕ್ಕನಾಯಕನಹಳ್ಳಿ: ಬಿಜಾಪುರ, ಗುಲ್ಬರ್ಗಾ ಜಿಲ್ಲೆಯ ಸಂಪರ್ಕದಲ್ಲಿದ್ದು ಇಲ್ಲಿ ನೆಲೆಸಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಖಡಕ್ ಸೂಚನೆ ನೀಡಿದರು. ಕೊರೊನಾ ವೈರಸ್ ತಡೆ ಅನ್ವಯ ಲಾಕ್ಡೌನ್ ಸಂದರ್ಭದಲ್ಲಿ ನಡೆದಿರುವ ಕಾನೂನು ಪರಿಪಾಲನೆ ಹಾಗೂ ವಿವಿಧ ಇಲಾಖೆಗಳ ಕಾರ್ಯಪ್ರಗತಿಯ ಮಾಹಿತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಇದಕ್ಕೂ ಮೊದಲು ತಹಸೀಲ್ದಾರ್ ತೇಜಸ್ವಿನಿ ಮಾಹಿತಿ ನೀಡಿ ಬೆಸ್ಕಾ ಇಲಾಖೆಯಡಿ ನಡೆಯುವ ಕಾಮಗಾರಿ ಕೆಲಸಕ್ಕೆ ಚಿಕ್ಕೋಡಿ ಜಿಲ್ಲೆಯಿಂದ ನಾಲ್ಕುಮಂದಿ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿಗೆ ಬಂದಿದ್ದಾರೆ, ಇದಲ್ಲದೆ ತಮಿಳುನಾಡಿನ ಕೃಷ್ಣಗಿರಿ ಮೂಲದ ಲಾರಿ ಚಾಲಕ ತಾಲ್ಲೂಕಿನ ಅರೇನಹಳ್ಳಿಗೇಟ್ ಬಳಿ ನೆಲೆಸಿದ್ದರೆ, ಮತ್ತೊಬ್ಬ ಮುದ್ದೆಬಿಹಾಳದ ಲಾರಿ ಮಾಲಿಕ ಹಾಗೂ ಅವನೊಂದಿಗಿರುವ ಚಾಲಕನನ್ನೂ ಸಹ ಬಂದಿದ್ದು ಇವರೆಲ್ಲರನ್ನೂಸಹ ಐಸೋಲೇಷನ್ನಲ್ಲಿ ಇರಿಸಲಾಗಿದ್ದು ಯಾವುದೇ ಸೋಂಕಿನ ಲಕ್ಷಣ ಕಂಡುಬಂದಿಲ್ಲವೆಂದರು. ಈ ವಿವರದಿಂದ ಗಾಬರಿಗೊಂಡ ಸಚಿವರು ಇಂತಹ ವ್ಯಕ್ತಿಗಳ ಬಗ್ಗೆ ಹೆಚ್ಚು ನಿಗಾವಹಿಸಿ, ಇವರೆಲ್ಲಾ ಹೇಗೆ ಇಲ್ಲಿಗೆ ನುಸುಳಿದರೆಂದು ಪ್ರಶ್ನಿಸಿದರು.…
ತುಮಕೂರು : ತಾಲ್ಲೂಕಿನ ನಾಗವಲ್ಲಿಯಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದ ಸಂಕಷ್ಟ ಅನುಭವಿಸುತ್ತಿರುವ ಬಡವರಿಗೆ ಮಾಜಿ ಶಾಸಕ ಸುರೇಶ್ಗೌಡ ಆಹಾರ ಸಾಮಗ್ರಿ ಕಿಟ್, ಹಣ್ಣು ತರಕಾರಿಗಳನ್ನು ವಿತರಿಸಿದರು. ಕೊರೊನಾ, ಲಾಕ್ ಡೌನ್ ಕಾರಣದಿಂದ ತುಮಕೂರು ಗ್ರಾಮಾಂತರ ಕ್ಷೇತ್ರದ ಜನರು ತೀರಾ ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮಾಂತರ ಕ್ಷೇತ್ರದಿಂದ ಬೆಂಗಳೂರು ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ನೆಲೆಸಿರುವ ಉದ್ಯಮಿಗಳು, ಶ್ರೀಮಂತರು, ಸಾಪ್ಟವೇರ್ ಎಂಜಿನಿಯರ್ ಗಳು ಕ್ಷೇತ್ರಕ್ಕೆ ನೆರವಾಗುವ ನಿಟ್ಟಿನಲ್ಲಿ ಮುಂದೆ ಬರಬೇಕು ಎಂದು ಮಾಜಿ ಶಾಸಕ ಬಿ.ಸುರೇಶಗೌಡ ಮನವಿ ಮಾಡಿದರು. ಜಿ.ಪಂ. ಸದಸ್ಯೆ ಅನಿತಾಸಿದ್ದೇಗೌಡ, ಗ್ರಾ.ಪಂ. ಅಧ್ಯಕ್ಷೆ ಪಾರ್ವತಮ್ಮ,ಉಪಾಧ್ಯಕ್ಷೆ ಮಂಜುಳಾ, ಸದಸ್ಯ ರಮೇಶ್, ಮಾಜಿ ಅಧ್ಯಕ್ಷ ನಾಗಣ್ಣ, ಸುಮಿತ್ರಮ್ಮ, ಆರಾಧ್ಯ, ಗೋಪಿ,ನಾರಾಯಣಪ್ಪ, ಪ್ರಕಾಶ್, ಗಿರೀಶ್,ಪಾಪಣ್ಣ, ನವೀನ್ ಮತ್ತಿತರರು ಉಪಸ್ಥಿತರಿದ್ದರು.
ತುಮಕೂರು : ಪಶು ಸಂಗೋಪನೆ ಇಲಾಖೆಯಡಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ನಗರದ ಹನುಮಂತಪುರದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಇಂದು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಮಾಂಸವನ್ನು ನೇರವಾಗಿ ಜನರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ವೈದ್ಯರು ಹೇಳುವಂತೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಹಕ್ಕೆ ಪ್ರೋಟಿನ್ ಅಂಶ ಅಗತ್ಯವಿರುವುದರಿಂದ ಆರೋಗ್ಯಕರ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ. ಮಾರುಕಟ್ಟೆಯ ದರಕ್ಕಿಂತ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮಾಂಸವನ್ನು ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು. ಪಾಲಿಕೆ ಮೇಯರ್ ಫರೀದಾ ಬೇಗಂ ಅವರು ಮಾತನಾಡಿ, ಕೋವಿಡ್-19ರ ನಿಯಂತ್ರಣದ ಹಿನ್ನಲೆಯಲ್ಲಿ ಲಾಕ್ಡೌನ್ ಆಗಿರುವುದರಿಂದ ಮನೆ ಬಾಗಿಲಿಗೆ ಮಾಂಸವನ್ನು ತಲುಪಿಸುವ ಉದ್ದೇಶದಿಂದ ಮಾಂಸ ಮಾರಾಟದ ಸಂಚಾರಿ ಮಳಿಗೆ ತೆರೆಯಲಾಗಿದೆ. ಜನರು ಸ್ಮಾರ್ಟ್ ಆಗಿ ಮನೆಯಿಂದ ಫೋನ್ ಮಾಡಿ ಮನೆ ಬಾಗಿಲಿಗೆ…