ಗುಬ್ಬಿ: ಸಾರ್ವಜನಿಕರು ಲಾಕ್ ಡೌನ್ ಆದೇಶ ಸರಿಯಾಗಿ ಪಾಲನೆ ಮಾಡುತ್ತಿಲ್ಲ, ಅನಾವಶ್ಯಕವಾಗಿ ಓಡಾಟ ನಡೆಸುತ್ತಿದ್ದಾರೆ, ಅಧಿಕಾರಿಗಳು ಕ್ರಮವನ್ನು ತೆಗೆದುಕೊಳ್ಳದೆ ಜಾಣ ಕು ರುಡು ತೋರಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾ ಎಸ್ಪಿಯವರೆ ಅಖಾಡಕ್ಕೆ ಇಳಿದು ಪರಿಶೀಲನೆ ನಡೆಸಿ ಅನಾವಶ್ಯಕವಾಗಿ ಓಡಾಡುವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಂದು ತಿಪಟೂರಿಗೆ ಹೊರಟಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕ ವಂಶಿಕೃಷ್ಣ ರವರು ಮಾರ್ಗಮಧ್ಯದಲ್ಲಿ ಗುಬ್ಬಿ ಬಸ್ ನಿಲ್ದಾಣದ ಎದುರು ಬಿ.ಎಚ್. ರಸ್ತೆಯಲ್ಲಿ ಅನಾವಶ್ಯಕವಾಗಿ ಓಡಾಟ ನಡೆಸುತ್ತಿದ್ದ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
Author: News Desk Benkiyabale
ತುಮಕೂರು: ನಗರದ ಚಿಕ್ಕಪೇಟೆಯಲ್ಲಿರುವ ನ್ಯಾಯಬೆಲೆ ಅಂಗಡಿ(ಸಂಖ್ಯೆ 250)ಯು ಏಪ್ರಿಲ್ 7 ರಂದು ತಾಲ್ಲೂಕು ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆಯಿಂದ ಪಡಿತರ ಎತ್ತುವಳಿ ಮಾಡಿ ಏಪ್ರಿಲ್ 9ರ ಮಧ್ಯಾಹ್ನದವರೆಗೂ ಕಾರ್ಡುದಾರರಿಗೆ ವಿತರಣೆ ಪ್ರಾರಂಭ ಮಾಡದೆ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸದರಿ ಅಂಗಡಿಯ ಲೈಸನ್ಸ್ಅನ್ನು ತಕ್ಷಣದಿಂದ ಅಮಾನತ್ತುಪಡಿಸಿ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಬೆಲೆ ಅಂಗಡಿಯವರು ಪಡಿತರ ಎತ್ತುವಳಿಯಾದ ಕೂಡಲೇ ವಿತರಣೆ ಪ್ರಾರಂಭ ಮಾಡಬೇಕು. ಸರ್ಕಾರ ನಿಗಧಿಪಡಿಸಿರುವ ಪ್ರಮಾಣದಂತೆ ಪಡಿತರ ಪದಾರ್ಥಗಳನ್ನು ಏಪ್ರಿಲ್ ಅಂತ್ಯದವರೆಗೆ ವಿತರಣೆ ಮಾಡಬೇಕು. ಪಡಿತರ ಪದಾರ್ಥಗಳಲ್ಲದೆ ಬೇರೆ ಪದಾರ್ಥಗಳನ್ನು ಖರೀದಿಸುವಂತೆ ಕಾರ್ಡುದಾರರನ್ನು ಒತ್ತಾಯಿಸಬಾರದು. ಹಾಗೂ ಕಾರ್ಡುದಾರರಿಂದ ಯಾವುದೇ ರೀತಿಯ ಹಣವನ್ನು ಪಡೆಯಬಾರದು ಎಂದು ಅವರು ತಿಳಿಸಿದ್ದಾರೆ. ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿರಂತರವಾಗಿ ಪಡಿತರ ವಿತರಣೆ ಮಾಡತಕ್ಕದ್ದು. ನ್ಯಾಯಬೆಲೆ…
ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾ.ಪಂ ವ್ಯಾಪ್ತಿಯ ಚೀಲಗಾನಗಳ್ಳಿ ಗ್ರಾಮದ ಕೆರೆ ಅಂಗಳದಲ್ಲಿ ವಾಸವಾಗಿದ್ದ ಬಿಹಾರದ ವಲಸಿಗರಿಗೆ ಉಚಿತ ಆಹಾರ ಹಾಗೂ ಮಾಸ್ಕ್ ಗಳನ್ನು ಫ್ರೇಂಡ್ಸ್ ಗ್ರೂಪ್ನವರು ವಿತರಿಸಿದರು. ಚೀಲಗಾನಹಳ್ಲಿ ಗ್ರಾಮದ ಅಂಗವಾಡಿ ಕಾರ್ಯಕರ್ತೆ ರಾಜಲಕ್ಷ್ಮೀಯವರಿಂದ ಮಾಹಿತಿ ಪಡೆದ ಎ.ಎಸ್. ಐ ಯೋಗೇಶ್ ರವರ ಸಿಬ್ಬಂದಿ ವರ್ಗ ಆಹಾರವಿಲ್ಲದೆ ಮರುಗುತ್ತಿದ್ದ ಬಿಹಾರದಿಂದ ಸೀಮೆಜಾಲಿ ಮರಗಳನ್ನು ಕಡಿದು ಸುಟ್ಟು ಇಜ್ಜಿಲನ್ನು ಮಾಡುವ ಕೆಲಸಕ್ಕಾಗಿ ಬಂದಿದ್ದ ವಲಸಿಗರ ಕುಟುಂಬಕ್ಕೆ ಫ್ರೇಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದ ಸಹಯೋಗದೊಂದಿಗೆ ಹಸಿದ ಜೀವಗಳಿಗೆ ಊಟ ನೀಡುವಂತಹ ಕೆಲಸ ಮಾಡಿರುವುದು ಶ್ಲಾಘನೀಯವಾಗಿದೆ. ಇಡೀ ವಿಶ್ವವೇ ಮಾಹಾಮಾರಿ ಕೊರೊನಾ ವೈರೆಸ್ ಮಾರಕ ರೋಗಕ್ಕೆ ನಲುಗಿ ಹೋಗಿರುವ ಸಂಧರ್ಭದಲ್ಲಿ ಕೊರಟಗೆರೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಗೆ ದಿನಂಪ್ರತಿ ಉಚಿತ ಅನ್ನ ಪ್ರಸಾದ ವಿತರಿಸುತ್ತಿರುವ ಫ್ರೆಂಡ್ಸ್ ಗ್ರೂಪ್ ಈ ಪರಿಸ್ಥಿತಿ ತಿಳಿದ ತಕ್ಷಣ ಆ ಬಡಕುಟುಂಬಗಳಿಗೆ ಅನ್ನ ನೀಡುವ ಕೆಲಸ…
ತುಮಕೂರು : ರೈತರು ತಮ್ಮ ತೋಟದಲ್ಲಿ ಬೆಳೆದಿರುವ ಟಮೋಟೋ, ಸೋರೆಕಾಯಿ, ಕುಂಬಳಕಾಯಿ, ನುಗ್ಗೆಕಾಯಿ, ಇತರೆ ಎಲ್ಲಾ ತರಕಾರಿಗಳನ್ನು ಜಿಲ್ಲಾ ತೋಟಗಾರಿಕೆ, ಹಾಪ್ಕಾಮ್ಸ್ ಹಾಗೂ ಹನಿಮಿತ್ರ ಸಂಸ್ಥೆಯಿಂದ ನೇರವಾಗಿ ಖರೀದಿಸಿ ಗ್ರಾಹಕರ ಮನೆ-ಮನೆಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಅವರು ಇಂದು ತುಮಕೂರಿನ ಪ್ರವಾಸಿ ಮಂದಿರದಲ್ಲಿ ಹಣ್ಣು, ತರಕಾರಿಗಳ ಮಾರಾಟದ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ತುಮಕೂರು ಫುಡ್ಪಾರ್ಕ್ ವತಿಯಿಂದ ದಿನಬಿಟ್ಟು ದಿನ 100-150 ಟನ್ಗಳಷ್ಟು ಟಮೋಟೋಗಳನ್ನು ಖರೀದಿಸಿ ಸಂಸ್ಕರಣೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ರೈತರು ಬೆಳೆದಿರುವ ಎಲ್ಲಾ ಹಣ್ಣು, ತರಕಾರಿಗಳನ್ನು ರೈತರ ತೋಟಗಳಿಂದಲೇ ನೇರವಾಗಿ ಖರೀದಿ ಮಾಡಿ ತಾಜಾ ಹಣ್ಣು ಮತ್ತು ತರಕಾರಿಗಳನ್ನು ನಗರ ಮತ್ತು ಗ್ರಾಮೀಣ ಭಾಗದ ಗ್ರಾಹಕರ ಮನೆ ಬಾಗಿಲಿಗೆ ರಿಯಾಯತಿ ದರದಲ್ಲಿ ಮಾರಾಟ…
ತುಮಕೂರು : ವೈದ್ಯರ ಚೀಟಿಯಿಲ್ಲದೆ ಔಷಧಿ ವ್ಯಾಪಾರಿ(ಮೆಡಿಕಲ್ ಸ್ಟೋರ್ಸ್)ಗಳು ಔಷಧಿಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಬಾರದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದಿಲ್ಲಿ ತಿಳಿಸಿದರು. ಕೋವಿಡ್-19ರ ನಿಯಂತ್ರಣದ ಹಿನ್ನೆಲೆಯಲ್ಲಿ ಕುಣಿಗಲ್ ತಾಲ್ಲೂಕ್ ಪಂಚಾಯತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಾರಾಸೀಟ್ಮೋಲ್, ಹೈಡ್ರಾಕ್ಸಿಕ್ಲೊರೊಕ್ವಿನ್, ಜ್ವರಕ್ಕಾಗಿ ವೈದ್ಯರ ಚೀಟಿಯಿಲ್ಲದೆ ಔಷಧಿಗಳನ್ನು ಖರೀದಿಸಲು ಬರುವವರಿಗೆ ಔಷಧಿ ವ್ಯಾಪಾರಿಗಳು ಔಷಧಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಈಗಾಗಲೇ ಜಿಲ್ಲೆಯಲ್ಲಿ ಔಷಧಿ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಕೋವಿಡ್-19 ಸೋಂಕು ಹರಡದಂತೆ ನಿಯಂತ್ರಿಸಲು ಲಾಕ್ಡೌನ್ ಘೋಷಿಸಲಾಗಿದೆ. ಜನರು ವಿನಾಕಾರಣ ಓಡಾಡಬಾರದು. ಈಗಾಗಲೇ ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್ಗಳನ್ನು ತೆರೆಯಲಾಗಿದ್ದು, ಜ್ವರದಿಂದ ಬಳಲುತ್ತಿರುವವರನ್ನು ಈ ಕ್ಲಿನಿಕ್ಗಳಲ್ಲಿ ಪರೀಕ್ಷಿಸಲಾಗುತ್ತಿದೆ.…
ತುಮಕೂರು : ಕೋವಿಡ್ – 19 ಮುಂಜಾಗ್ರತಾ ಕ್ರಮವಾಗಿ ಲಾಕ್ ಡೌನ್ ಇದ್ದರೂ ಅನಾವಶ್ಯಕವಾಗಿ/ಸಕಾರಣ ವಿಲ್ಲದೆ ತುಮಕೂರು ನಗರದಲ್ಲಿ ಸಂಚರಿಸುತ್ತಿದ್ದ ಸವಾರರುಗಳನ್ನ ಡ್ರೋನ್ ಕ್ಯಾಮೆರಾ ದಿಂದ ಸೆರೆಹಿಡಿದು ವಶಪಡಿಸಿಕೂಂಡರು. ಎಸ್ಪಿ ಡಾ.ಕೆ.ವಂಸಿ ಕೃಷ್ಣ IPS ರವರಿಂದ ಕೋವಿಡ್ 19 ರ ಮುಂಜಾಗ್ರತಾ ಕ್ರಮವಾಗಿ ನಗರ ಗಸ್ತಿನಲ್ಲಿ ಶೆಟ್ಟಿಹಳ್ಳಿ ಗೇಟ್ ಬಳಿ ಡ್ರೋನ್ ಕ್ಯಾಮರಾ ದಿಂದ ಸಂಚಾರದ ಮಾಹಿತಿ ಪಡೆದು ನಂತರ ಅಲ್ಲಿಂದ ಕಾಲ್ನಡಿಗೆಯಲ್ಲಿ ಅನಾವಶ್ಯಕ ವಾಗಿ ವಾಹನದಲ್ಲಿ ತಿರುಗಾಡುತ್ತಿದ್ದವರನ್ನು ವಿಚಾರಣೆ ಮಾಡಿ ನಂತರ ಶೆಟ್ಟಿ ಹಳ್ಳಿ ಅಂಡರ್ ಪಾಸ್ ಮೂಲಕ ರಸ್ತ ಬದಿಗಳಲ್ಲಿ ತರಕಾರಿ ಮಾರುವವರಿಗೆ ಹಾಗೂ ಕೂಂಡುಕಳ್ಳುವವರಿಗೆ ಸಮಾಜಕ ಅಂತರದ ಬಗ್ಗೆ ತಿಳುವಳಿಕೆ ನೀಡಿದರು. ವಾಹನಗಳ ವಿವರ : ದ್ವಿಚಕ್ರ ವಾಹನಗಳು : 02 ದಿನಾಂಕ 07-04-2020 ನಾಲ್ಕು ಚಕ್ರದ ವಾಹನಗಳು – 09 ತ್ರಿ ಚಕ್ರ ವಾಹನಗಳು -…
ತುಮಕೂರು : ಕೋವಿಡ್-19ರ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ಓಟಿಪಿ ಅಥವಾ ಬಯೋಮೆಟ್ರಿಕ್ ತಂಬ್ ಇಂಪ್ರೇಷನ್ಗೆ ಕಾಯದೆ ಸಹಿ ಮಾಡಿಸಿಕೊಂಡು ಏಪ್ರಿಲ್ 10ರೊಳಗೆ ಪಡಿತರವನ್ನು ವಿತರಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸೂಚನೆ ನೀಡಿದರು. ಗುಬ್ಬಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ನಿಯಂತ್ರಣದ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಡಿತರ ಚೀಟಿ ಇಲ್ಲದಿದ್ದರೂ ಪಡಿತರ ವಿತರಿಸಬೇಕು. ನ್ಯಾಯ ಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರು ಗುಂಪು ಸೇರದಂತೆ 1 ಮೀಟರ್ ಅಂತರದಲ್ಲಿ ಬಾಕ್ಸ್ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಸೂಚಿಸಿದರು. ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರದಿಂದ ನೀಡಲಾಗುವ ವಸ್ತುಗಳನ್ನು ಮಾತ್ರ ಮಾರಾಟ ಮಾಡುವಂತೆ ಸೂಚಿಸಿದಲ್ಲದೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಿಕ್ಕರ್ ಶಾಪ್ ಇರುವ ಕಡೆ ಹೆಚ್ಚಿನ ಗಸ್ತು ಮಾಡಿ ಎಂದು ತಿಳಿಸಿದರು. …
ತುಮಕೂರು: ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 233 ಮಂದಿಯನ್ನು ಹೋಂ ಕ್ವಾರೆಂಟೈನ್ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ. ಒಟ್ಟು 130 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, 137 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 181 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 175 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 3 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 1 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಲಾಕ್ಡೌನ್ ಆಗಿದ್ದು, ಮಸೀದಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶಬ್-ಎ-ಬರಾತ್ ರಂದು ಸಾಮೂಹಿಕ ಪ್ರಾರ್ಥನೆ, ಖಬ್ರಸ್ಥಾನ್ಗಳಲ್ಲಿ ಪ್ರವೇಶವನ್ನು ನಿಷೇಧಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶ ಹೊರಡಿಸಿದೆ. ಅದೇ ರೀತಿ ಗುಂಪು ಗುಂಪು ಸೇರದಂತೆ ಮುಸ್ಲಿಂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಕೋವಿಡ್-19 ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಸಹಕರಿಸಬೇಕೆಂದು ತುಮಕೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ವಕ್ಫ್ ಅಧಿಕಾರಿಗಳು ಜಿಲ್ಲೆಯ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಈ ಆದೇಶವನ್ನು ಉಲ್ಲಂಘಿಸದೆ ಕಟ್ಟುನಿಟ್ಟಿನಿಂದ ಪಾಲಿಸಬೇಕೆಂದು ಅವರು ಮನವರಿಕೆ ಮಾಡಿದ್ದಾರೆ.
ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬುಲೆಟ್ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 1976 ಏಪ್ರಿಲ್ 2ರಂದು ಜನಿಸಿದ್ದ ಬುಲೆಟ್ ಪ್ರಕಾಶ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಸಂಜೆ 4.45 ರ ಸುಮಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. 325 ಸಿನಿಮಾಗಳಲ್ಲಿ ಬುಲೆಟ್ ಪ್ರಕಾಶ್ ಅಭಿನಯಿಸಿದ್ದರು. 44 ವರ್ಷದ ಬುಲೆಟ್ ಪ್ರಕಾಶ್ ಬಹುತೇಕ ಎಲ್ಲಾ ನಾಯಕ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.