ತುಮಕೂರು : ಜಿಲ್ಲೆಗೆ ಈ ಬಾರಿಯ ವಿಧಾನ ಪರಿಷತ್ ಗೆಲುವು ಜಿಲ್ಲೆಯಲ್ಲಿ ಎಲ್ಲರಲ್ಲೂ ಹೊಸ ಹುರುಪನ್ನು ತಂದಿದೆ ಎಂದು ಶಾಸಕ ಜ್ಯೋತಿಗಣೇಶ್ ವಿಧಾನ ಪರಿಷತ್ ನೂತನ ಸದಸ್ಯರನ್ನು ಅಭಿನಂದಿಸಿ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ,ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಇಂದು ತುಮಕೂರು ನಗರದ ಜಿಲ್ಲಾ ಕನ್ನಡ ಭವನ ಸಭಾಭವನದಲ್ಲಿ ನೂತನ ವಿಧಾನಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ ರವರಿಗೆ ಅಭಿನಂದನ ಕಾರ್ಯಕ್ರಮ ಹಮ್ಮಿಕೂಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯರು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಇನ್ನೂ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ನಗರ ಶಾಸಕರಾದ ಜ್ಯೋತಿ ಗಣೇಶ್ರವರು ತುಮಕೂರು ಜಿಲ್ಲೆಗೆ ಈ ಬಾರಿಯ ವಿಧಾನ ಪರಿಷತ್ ಗೆಲುವು ಜಿಲ್ಲೆಯಲ್ಲಿ ಎಲ್ಲರಲ್ಲೂ ಹೊಸ ಹುರುಪನ್ನು ತಂದಿದೆ ಎಂದರು ಚಿದಾನಂದ…
Author: News Desk Benkiyabale
ತುಮಕೂರು : ಜನಪರ ಕಾರ್ಯಗಳಲ್ಲಿ ತೊಡಗಿರುವ ಸರಕಾರೇತರ ಸಂಸ್ಥೆಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಮಾದರಿಯಾಗಿದೆ ಎಂದು ತುಮಕೂರು ನಗರ ಕ್ಷೇತ್ರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ತುಮಕೂರು ನಗರದ 26ನೇ ವಾರ್ಡಿನ ದೋಬಿಘಾಟ್ ರಸ್ತೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ನಗರಪಾಲಿಕೆ ಸಹಕಾರದಲ್ಲಿ ನಿರ್ಮಿಸಿರುವ ಶುದ್ದಗಂಗಾ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಸರಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಮೂಲಕ ಸಾಕಷ್ಟು ಜನರಿಗೆ ಉಪಯುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ. ಇದಕ್ಕಾಗಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀವಿರೇಂದ್ರ ಹೆಗಡೆ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ತುಮಕೂರು ನಗರಕ್ಕೆ ಸಾಕಷ್ಟು ಶುದ್ದ ಕುಡಿಯುವ ನೀರಿನ ಘಟಕಗಳ ಅಗತ್ಯವಿದೆ. ಆದ್ದರಿಂದ ನಾವುಗಳೆಲ್ಲರೂ ಒಗ್ಗೂಡಿ ಮತ್ತೊಮ್ಮೆ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿ, ಹೆಚ್ಚಿನ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲು ಮನವಿ ಸಲ್ಲಿಸಲಾಗುವುದು ಎಂದು ಶಾಸಕರು,ಅತಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಸಾಮಥ್ರ್ಯದ ಘಟಕಗಳನ್ನು ಸ್ಥಾಪಿಸಲಾಗಿದೆ. ಗುಣಮಟ್ಟವೂ…
ಮಧುಗಿರಿ : ದೊಡ್ಡೇರಿ ಹೋಬಳಿಯ ಗಡಿಗ್ರಾಮ ಸಜ್ಜೆಹೊಸಹಳ್ಳಿಯ ಸಕಲ ಅಭಿವೃದ್ಧಿಗಾಗಿ 50 ಲಕ್ಷ ವೆಚ್ಚದಲ್ಲಿ ಸುವರ್ಣಗ್ರಾಮ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಗುಣಮಟ್ಟದ ಕಾಮಗಾರಿಗೆ ಚಾಲನೆ ನೀಡಲಾಗಿದೆಯೆಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ದೊಡ್ಢೆರಿ ಹೋಬಳಿಯ ಸಜ್ಜೆಹೊಸಹಳ್ಳಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಆಂದ್ರಗಡಿಗೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಈ ಸುವರ್ಣಗ್ರಾಮ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ. ಇದು ಹೆಚ್ಚುವರಿ ಅನುದಾನದಿಂದ ತಂದಿದ್ದು, 6 ಸಿಸಿ ರಸ್ತೆ, 6 ಚರಂಡಿ ಒಳಗೊಂಡ ಕಾಮಗಾರಿಯನ್ನು ಕೆಆರ್ಐಡಿಎಲ್ ಇಲಾಖೆಗೆ ನೀಡಿದ್ದು, ಗುಣಮಟ್ಟದ ಕಾಮಗಾರಿಯನ್ನು ಮಾಡಲು ಸೂಚಿಸಲಾಗಿದೆ. ಇದರೊಂದಿಗೆ ಈಗಾಗಲೇ 8 ಕೋಟಿ ವೆಚ್ಚದಲ್ಲಿ ಕವಣದಾಲ, ಪೂಜಾರಹಳ್ಳಿ, ಬಡವನಹಳ್ಳಿ ಬಳಿ ಸುವರ್ಣಮುಖಿ ನದಿಯ ಸೇತುವೆಯ ಎರಡೂ ಕಡೆ ಹಾಗೂ ತೆರಿಯೂರು ಗ್ರಾಮಗಳಲ್ಲಿ ಚೆಕ್ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಪಿಡಿಓ ಪ್ರಶಾಂತ್, ಬಾವಿಮನೆ ಕಾಂತಣ್ಣ, ವೆಂಕಟೇಶಗೌಡ,…
ತುಮಕೂರು : ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಹಾನಿಕರ. ಇದನ್ನು ಪ್ರತಿಯೊಬ್ಬರೂ ಅರಿತು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಫರೀದಾ ಬೇಗಂ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಸಂಕಲ್ಪ ಫೌಂಡೇಶನ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹೋಟೆಲ್ ಆಹಾರ ವಿತರಣೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹೋಟೆಲ್ನವರು, ಅಂಗಡಿಗಳ ವರ್ತಕರು ತಮ್ಮ ದಿನನಿತ್ಯ ವ್ಯಾಪಾರ ವಹಿವಾಟಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು. ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ಹಾಕಲಾಗುತ್ತಿದ್ದರೂ ದಂಡ ಕಟ್ಟಿದ ತದ ನಂತರ ಮತ್ತೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ದೂರು ಬರುತ್ತಿವೆ.…
ತುಮಕೂರು: ರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಪ್ರೊ|| ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಮೆಳೇಕಲ್ಲಹಳ್ಳಿ ಯೋಗೀಶ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಹೊರಟಿರುವುದು ಖಂಡನೀಯ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಕಾಯ್ದೆ ಖಾಸಗೀಕರಣ, ದಲಿತ ವಿರೋಧಿ ನೀತಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ಈ ಕೂಡಲೇ…
ಗುಬ್ಬಿ: ಹೋಬಳಿ ಮಟ್ಟದಲ್ಲಿ ನಡೆಯುತ್ತಿದ್ದ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಶೀಘ್ರದಲ್ಲಿ ಮರಳಿ ಆರಂಭಿಸಿ ಕಚೇರಿಗೆ ಅಲೆದಾಡುವ ಮುಗ್ದ ಜನರ ಕೆಲಸವನ್ನು ಅವರ ಗ್ರಾಮಗಳಲ್ಲಿ ನಡೆಸಲಾಗುವುದು. ಈ ಕೆಲಸಕ್ಕೆ ಅಧಿಕಾರಿಗಳೊಟ್ಟಿಗೆ ಚರ್ಚಿಸಿರುವುದಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶಾಸಕರ ನೂತನ ಹೈಟೆಕ್ ಕಾರ್ಯಾಲಯಕ್ಕೆ ಚಾಲನೆ ನೀಡಿ ತಾಲ್ಲೂಕಿನ 1800 ಮಂದಿ ಕರೋನಾ ವಾರಿಯರ್ಸ್ಗಳಿಗೆ ಸನ್ಮಾನಿಸಿ ಮಾತನಾಡಿದ ಅವರು ಬಗರ್ಹುಕುಂ ಮಂಜೂರಾತಿಯಲ್ಲಿ ಈ ಹಿಂದೆ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ದೂರುಗಳಿದ್ದ ಕಾರಣ ಹೋಬಳಿ ಮಟ್ಟದಲ್ಲಿ ಅದಾಲತ್ ಮೂಲಕ ಅರ್ಹರನ್ನು ಗುರುತಿಸಿ ಮಂಜೂರು ಮಾಡಲಾಗುತ್ತಿದೆ. ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆದಿದ್ದಲ್ಲಿ ಕಾನೂನು ಕ್ರಮ ಜರುಗಿಸಿ ಅರ್ಹ ಫಲಾನುಭವಿಗಳಿಗೆ ಭೂಮಿ ನೀಡುವ ಕೆಲಸವನ್ನು ಖುದ್ದು ನಡೆಸುತ್ತೇನೆ ಎಂದು ಭರವಸೆ ನೀಡಿದರು. ಕಳೆದ ಎಂಟು ತಿಂಗಳಿಂದ ಸಾರ್ವಜನಿಕರ ಭೇಟಿಗೆ ಕೋವಿಡ್ ವೈರಸ್ ಮತ್ತು ಕಚೇರಿ ನವೀಕರಣ ಕೆಲಸ ಅಡ್ಡಿಯಾಗಿತ್ತು. ಇನ್ಮುಂದೆ ನಿತ್ಯ ಸಾರ್ವಜನಿಕರ…
ತುಮಕೂರು : ಸಾರ್ವಜನಿಕವಾಗಿ ಕಂಡುಬರುವ ಅನಾಥ ಮಗುವನ್ನು ಕದ್ದು ಮುಚ್ಚಿ ಸಾಕುವವರಿಗೆ ಕಾನೂನಿನ ಮಾರ್ಗದರ್ಶನ ನೀಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿಂದು ಜರುಗಿದ ಮಕ್ಕಳ ಸಹಾಯವಾಣಿಯ(CAB-child Advisory Board) ಹಾಗೂ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ, ಸಾರ್ವಜನಿಕವಾಗಿ ಕಂಡುಬರುವ ಅನಾಥ ಮಕ್ಕಳನ್ನು ಕೆಲವು ಪೋಷಕರು ಕಾನೂನಿನ ಕಣ್ತಪ್ಪಿಸಿ ಪೋಷಿಸುತ್ತಿದ್ದಾರೆ. ಇಂಥವರಿಗೆ ಸಲಹೆ ನೀಡಿ ಕಾನೂನಾತ್ಮಕವಾಗಿ ಸಾಕಲು ಮಾರ್ಗದರ್ಶನ ನೀಡಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ತಡೆಹಿಡಿಯಲಾದ ಬಾಲ್ಯವಿವಾಹ ಪ್ರಕರಣದಲ್ಲಿ ಮಕ್ಕಳು ಹಾಗೂ ಪೋಷಕರು ಮನೆ ಬಿಟ್ಟು ಹೋಗುವ ಸಾಧ್ಯತೆ ಇರುತ್ತದೆ. ಪ್ರಕರಣದ ಪರಿಶೀಲನೆಗಾಗಿ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯನ್ನು ಬಿಟ್ಟು ಹೋಗಿದ್ದರೆ ಎಲ್ಲಿಗೆ ಹೋಗಿದ್ದಾರೋ ಆ ಗ್ರಾಮಕ್ಕೆ ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಮಾಹಿತಿ ಪಡೆದು…
ಮಧುಗಿರಿ: ತಾಲೂಕಿನ ಮೈದನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಲೈಂಗಿಕ ಕಿರುಕುಳ ಒಳಪಟ್ಟಿದ್ದ ಅಪ್ರಾಪ್ತ ಬಾಲಕಿಗೆ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಗುರುವಾರದಂದು ಮಗುವಿನ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು, ಕೊಡಿಗೇನಹಳ್ಳಿ ಹೋಬಳಿಯ ಮೈದನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಬಂಧಿಸಿದ್ದಾರೆ, ಆರೋಪಿಗೆ ನ್ಯಾಯಲಯದಲ್ಲಿ ತಕ್ಕ ಶಿಕ್ಷೆಯಾಗುವಂತೆ ನಮ್ಮ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ವಹಿಸುತ್ತಾರೆ. ರಾಜ್ಯದಲ್ಲಿ 1 ಸಾವಿರ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಅನುದಾನ ದೊರೆಯಲಿದೆ ಎಂದರು. ಗ್ರಾಮಾಂತರ ಪ್ರದೇಶದಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಈಗಾಗಲೇ ಕ್ರಿಯಾ ಯೋಜನೆ ಸಿದ್ದವಾಗಿದ್ದು ಪಟ್ಟಣ ಪ್ರದೇಶಗಳಲ್ಲಿ ನಿವೇಶನಗಳ ಕೊರೆತೆಯಿಂದ ತಡವಾಗುತ್ತಿದೆ ಆದರೂ ಸ್ಥಳಿಯ…
ಹುಳಿಯಾರು: ಎಸಿಬಿಯ ಸಾರ್ವಜನಿಕ ಸಭೆಗಳಲ್ಲಿ ಬರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂಧಿಸದೆ ಪೆಂಡಿಗ್ ಇಟ್ಟರೆ ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಎಸಿಬಿ ಅಧಿಕಾರಿ ಪ್ರವೀಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ವತಿಯಿಂದ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಅನೇಕ ಕಡೆ ಎಸಿಬಿಯಿಂದ ಸಾರ್ವಜನಿಕ ಸಭೆ ನಡೆಸಿದ್ದು ಈ ಸಭೆಯಲ್ಲಿ ಬಂದಿದ್ದ ಅರ್ಜಿಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಪೆಂಡಿಗ್ ಇಟ್ಟಿದ್ದಾರೆ. ಎಸಿಬಿಗೆ ಕೊಟ್ಟರೂ ಸಮಸ್ಯೆ ಬಗೆಹರಿಯದಿದ್ದರೆ ಸಾರ್ವಜನಿಕವಾಗಿ ಇಲಾಖೆ ನಂಬಿಕೆ ಕಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜನರು ಎಸಿಬಿ ಮೇಲಿಟ್ಟಿರುವ ನಂಬಿಕೆ ಮತ್ತು ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಿರ್ಲಕ್ಷ್ಯಿಸಿರುವ ಅಧಿಕಾರಿಗಳ ಮೇಲೆ ಕ್ರಮ ಅನಿವಾರ್ಯ ಎಂದರು. …
ತುಮಕೂರು : ರಾಷ್ಟ್ರೀಯ ಹೆದ್ಧಾರಿ 2006 ರಸ್ತೆಗೆ ಹೊಂದಿಕೊಂಡಿರುವ ಮಲ್ಲಸಂದ್ರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣ ಮಾಡಲು ಆಡಳಿತಾಧಿಕಾರಿ ಸ್ಥಳ ಪರಿಶೀಲನೆ ನೆಡೆಸಿದರು. ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ಧಾರಿ ಅಗಲೀಕರಣದಿಂದ ಗ್ರಾಮ ಪಂಚಾಯಿತಿತೆರವಾಗುತ್ತಿರುವ ಹಿನ್ನೇಲೆಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸ್ಥಳಾಂತರಿಸಲಾಗುತ್ತಿದ್ದು,ನೂತನ ಕಟ್ಟಡವನ್ನು ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಪಂಚಾಯಿತಿ ಅಭಿವೃದ್ಧಿ ಅಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಮಾತನಾಡಿ,ಗ್ರಾಮ ಪಂಚಾಯಿತಿಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮಾಡುವ ಹಿನ್ನೇಲೆಯಲ್ಲಿ ಪಂಚಾಯಿತಿಯನ್ನು ಸ್ಥಳಾಂತರ ಮಾಡಬೇಕಿದೆ. ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗ ಸರ್ವೆ ನಂಬರ್ 34 ರಲ್ಲಿ 1.5 ಎಕರೆ ಜಾಗವಿದ್ದು,ಈ ಜಾಗದಲ್ಲಿ ಸುಸರ್ಜಿತವಾಗಿ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಸುಮಾರು 60-70 ಲಕ್ಷಗಳಲ್ಲಿ ನಿರ್ಮಾಣ ಮಾಡಲಾಗುವುದು.ಶೀಘ್ರವೇ ಕಾಮಗಾರಿ ಆರಂಭ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ…











