ತುಮಕೂರು: ಜಿಲ್ಲಾಡಳಿತ ಹಾಗೂ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ೭೫ ಲಕ್ಷ ರೂ. ವೆಚ್ಚದಲ್ಲಿ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಟೆನಿಸ್ ಕೋರ್ಟ್ ಹಾಗೂ ಆಟಗಾರರ ಕೊಠಡಿಯ ನವೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ತುಮಕೂರು ಬಹಳ ವೇಗವಾಗಿ ಬೆಳೆಯುತ್ತಿದೆ. ಇದರ ದೂರದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವ ಪರಮೇಶ್ವರ ಅವರು ಹೇಳಿದರು. ೨೦೦೩ರಲ್ಲಿ ಎಟಿಪಿ ರ್ಯಾಂಕ್ ಟೆನಿಸ್ ಟೂರ್ನಿಮೆಂಟ್ ನಡೆಸಬೇಕು ಎಂಬ ಮನವಿ ಬಂದಿತ್ತು. ಆಗ ಈ ಜಾಗವನ್ನು ಗುರುತಿಸಿ, ಎರಡು ತಿಂಗಳಲ್ಲಿ ಟೆನಿಸ್ ಮೈದಾನ ನಿರ್ಮಿಸಲಾಯಿತು. ಅಂದಿನ ಟೂರ್ನಮೆಂಟ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಿದರು. ತದನಂತರ ಇದರ ನಿರ್ವಹಣೆಯ ಹೊಣೆಯನ್ನು ತುಮಕೂರು ಟೆನಿಸ್ ಅಸೋಸಿಯೇಷನ್ಗೆ ವಹಿಸಲಾಯಿತು. ಕೆಲವು ದಿನ ನಿರ್ವಹಣೆ ಮಾಡಿದರು. ಸಂಪನ್ಮೂಲ ಕೊರತೆಯಿಂದ ಮುಂದುವರೆಯಲಿಲ್ಲ. ನಾಲ್ಕೂ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಉದ್ಘಾಟನೆಯ ಸಂದರ್ಭದಲ್ಲಿ ಟೂರ್ನಮೆಂಟ್ ಆಯೋಜಿಸಲಾಗುವುದು. ರಾಜ್ಯದ ಕ್ರೀಡಾಕೂಟ ತುಮಕೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬ್ಯಾಸ್ಕೆಟ್ಬಾಲ್,…
Author: News Desk Benkiyabale
ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನ ಸಭಾಂಗಣ ಕಟ್ಟಡದ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ತುಮಕೂರಿನ ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯ ಆಡಳಿತದ ವೈಖರಿ ಮತ್ತಷ್ಟು ಸುಧಾರಣೆಯಾಗಬೇಕು. ಯಾವುದೇ ರೀತಿಯ ಆಪೇಕ್ಷೆ ಇಲ್ಲದೆ ಜನಸಮುದಾಯಕ್ಕೆ ಕೆಲಸಗಳು ಆಗಬೇಕು ಎಂದು ಸಚಿವರು ಹೇಳಿದರು. ಸಾಮಾನ್ಯ ಪ್ರಜೆ, ಬಡ ರೈತ ತಹಶೀಲ್ದಾರರ ಕಚೇರಿಗೆ ತೊಂದರೆ, ನೋವಿನಿಂದ ಬರುತ್ತಾನೆ. ಅಂತವರ ಕೆಲಸಗಳನ್ನು ಸುಲಭವಾಗಿ ಮಾಡಿಕೊಡಬೇಕು. ಆತ ನಗುವಿನಿಂದ ಹೋದರೆ ಅದೇ ಒಳ್ಳೆಯ ಆಡಳಿತ. ಒಂದು ದಾಖಲೆ ಪಡೆದುಕೊಳ್ಳಲು ಹತ್ತು ಬಾರಿ ಅಲೆಯಬಾರದು. ಈ ವಿಚಾರವನ್ನು ಅಧಿಕಾರಿಗಳು ಮನಸ್ಸಿನಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು. ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಅನೇಕ ನೀತಿಗಳನ್ನು, ತೀರ್ಮಾನಗಳನ್ನು ಮಾಡುತ್ತೇವೆ. ಅವುಗಳು ಜನರಿಗೆ ತಲುಪುವ ನಿಟ್ಟಿನಲ್ಲಿಅನುಷ್ಟಾನಗೊಳಿಸುವ ಜವಾಬ್ಧಾರಿ ನಿಮ್ಮ ಮೇಲಿದೆ ಎಂದರು. ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ಕಟ್ಟಿಸಿದ್ದಾರೆ.…
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗವಲ್ಲಿ ಗ್ರಾಮದ ಕೆರೆ ಕೋಡಿಯ ಅಂಚಿನಲ್ಲಿ ವಾಸವಿದ್ದ ಸುಡುಗಾಡು ಸಿದ್ದ ಸಮುದಾಯದ ೧೯ ಕುಟುಂಬಗಳನ್ನು ಬಳ್ಳಗೆರೆ ಗ್ರಾಮ ಪಂಚಾಯಿತಿ ಹನುಮಂತನಗರಕ್ಕೆ ಸ್ಥಳಾಂತರಿಸಲಾಗಿದ್ದು ಈ ಕೂಡಲೇ ಅವರಿಗೆ ನಿವೇಶನದ ಹಕ್ಕುಪತ್ರ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳೆಗೆರೆ ಗ್ರಾಮ ಪಂಚಾಯಿತಿ ಹನುಮಂತನಗರಕ್ಕೆ ಸಮಾಜ ಕಲ್ಯಾಣ ಯಾಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನಿವೇಶನ ನೀಡುವ ಜಾಗವನ್ನು ಶಾಸಕರು ಪರಿಶೀಲಿಸಿದರು. ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಇಂದಿಗೂ ಗುಡಿಸಲಿ ನಲ್ಲಿ ವಾಸ ಮಾಡುತ್ತಿರುವುದು ನಮಗೆಲ್ಲ ಅವಮಾನ ಮತ್ತು ಅಪಮಾನ ಎಂದು ಶಾಸಕ ಬಿ ಸುರೇಶ್ ಗೌಡ ಹೇಳಿದರು. ರಾಜ್ಯದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಇರುವ ಈ ಸಮುದಾಯವು ಅಳಿವಿನ ಅಂಚಿನಲ್ಲಿ ಇದಾವೆ. ಇಂತಹ ಜನ ಸಮುದಾಯದ ಉಳಿವಿಗಾಗಿ ಅವರಿಗೆ ಉತ್ತಮ ಶಿಕ್ಷಣ ಉತ್ತಮ ಅರೋಗ್ಯ ಹಾಗೂ ಉತ್ತಮ ಜನ ವಸತಿ ಪ್ರದೇಶ ನಿರ್ಮಾಣ ಮಾಡಿಕೊಡಬೇಕು ಈ…
ತುಮಕೂರು: ಸರಕಾರಿ ಶಾಲೆಗಳನ್ನು ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ದೊರೆಯುವಂತೆ ಮಾಡಿ, ಸರಕಾರಿ ಶಾಲೆಗಳನ್ನು ಉಳಿಸುವ ಗುರುತರಜವಾಬ್ದಾರಿ ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಎಸ್.ಡಿ.ಎಂ.ಸಿ ಸದಸ್ಯರುಗಳ ಮೇಲಿದೆ ಎಂದು ಬಿಇಓ ಹನುಮಂತಪ್ಪ ತಿಳಿಸಿದ್ದಾರೆ. ನಗರದಉತ್ತರಬಡಾವಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ “ನಮ್ಮ ಶಾಲೆ, ನಮ್ಮಜವಾಬ್ದಾರಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದಅವರು,ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯತ್ತದೆ ಎಂಬ ನಂಬಿಕೆಯನ್ನು ಮಕ್ಕಳ ಪೋಷಕರಲ್ಲಿಉಂಟು ಮಾಡಿದರೆ, ತಾನಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿದೆ.ಈ ನಿಟ್ಟಿನಲ್ಲಿ ಶಿಕ್ಷಕರು,ಎಸ್.ಡಿ.ಎಂಸಿ ಸದಸ್ಯರು ಮತ್ತುಇಲಾಖೆಯಜವಾಬ್ದಾರಿಯೂಇದೆಎಂದರು. ಸರಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದಉಚಿತವಾಗಿ ಪುಸ್ತಕ,ಬಿಸಿಯೂಟ, ಕ್ಷೀರಭಾಗ್ಯ,ಷೂ ಭಾಗ್ಯ ನೀಡುತ್ತಿದೆ.ಅಲ್ಲದೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲುಚಿಕ್ಕಿ, ಬಾಳೆ ಹಣ್ಣು ಮತ್ತು ಮೊಟ್ಟೆಯನ್ನು ನೀಡುತ್ತಿದೆ.ನಾನು ಕೂಡ ಶಾಲೆಯಲ್ಲಿಕೊಡುತ್ತಿದ್ದಗೋಧಿ ನುಚ್ಚಿನಉಪ್ಪಿಟ್ಟುತಿಂದುಕಲಿತವ. ಮಕ್ಕಳ ಬೌದ್ದಿಕ ಮತ್ತು ಶಾಲೆಯ ಭೌತಿಕ ಬೆಳವಣಿಗೆ ಸರಕಾರಎಲ್ಲಾರೀತಿಯ ಸಹಾಯ ಮತ್ತು ಸಹಕಾರ ನೀಡುತ್ತಾ ಬಂದಿದೆ.ಉತ್ತರ ಬಡಾವಣೆಯ…
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರ ಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ‘ಪ್ಲೇಸ್ಮೆಂಟ್ ಸೆಲ್ ಮತ್ತು ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್’ (ಐಕ್ಯೂಎಸಿ) ವತಿಯಿಂದ “ಮಾಸ್ಟರಿಂಗ್ ದ ಆರ್ಟ್ ಆಫ್ ರೆಸುಮ” ಕಾರ್ಯಗಾರವನ್ನು ಹಮ್ಮಿ ಕೊಳ್ಳಲಾಗಿತ್ತು. ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಗಾರದ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಕುಮುದಿನಿ, ಹಂತ ಹಂತವಾಗಿ ರೆಸು ಮ್ ತಯಾರಿ ಬಗ್ಗೆ ಹಾಗೂ ಜಾಬ್ ಇಂಟರ್ವ್ಯೂಲ್ಲಿ ಯಾವ ರೀತಿ ಪ್ರಶ್ನೆ ಕೇಳುತ್ತಾರೆ ಹಾಗೂ ಯಾವ ರೀತಿ ಉತ್ತರಿಸಬೇ ಕೆಂದು, ಹೀಗೆ ರೆಸುಮ ತಯಾರಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಹೇಮಲತ ಪಿ ಅಧ್ಯಕ್ಷತೆ ವಹಿಸಿ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್ ಹಮ್ಮಿಕೊಳ್ಳಲಾಗುತ್ತೆ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ರೆಸುಮ್ ತಯಾರಿ ಅತಿ ಮುಖ್ಯವಾದ ಅಂಶ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಗಾರವನ್ನು ಸಂಪೂರ್ಣವಾಗಿ ಅಳವ ಡಿಸಿಕೊಂಡು ಮುಂದಿನ ದಿನಗಳಲ್ಲಿ ನಿಮ್ಮ ಭವಿ ಷ್ಯವನ್ನು ರೂಪಿಸಿಕೊಳ್ಳಲು ಯಶಸ್ವಿಯಾಗಲಿ ಎಂದು ಹೇಳಿದರು. ಕಾರ್ಯಗಾರದಲ್ಲಿ…
ಪಾವಗಡ: ಅಧಿಕಾರಿಗಳು ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರವರು ಅಧಿಕಾರಿಗಳಿಗೆ ಸೂಚಿಸಿದರು ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಬೇಕು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಬೇಕು, ಅಧಿಕಾರಿಗಳು ಹೊಣೆಗಾರಿಕೆಯಿಂದ ತಪ್ಪಿಸಿಕೊಂಡು ಹೋಗಲು ತಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ,ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಸಲು ಬದ್ಧ ರಾಗಿದ್ದೆವೆ. ಇಲಾಖೆವಾರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಶಾಶ್ವತ ಬರಪೀಡಿತ ಪ್ರದೇಶವಾದ ಪಾವಗಡ ತಾಲ್ಲೂಕಿನ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಯೋಜ ನೆಯೊಂದನ್ನು ಹಾಕಿಕೊಂಡಿದ್ದೇನೆ ಅದರ ಜಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕು, ಹಳ್ಳಿಗಾಡಿನ ಪ್ರದೇಶಗಳಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲ ಎಂಬ ಬಗ್ಗೆ…
ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ ೨೦ರವರೆಗೆ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆ ಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾ ಮಿನಲ್ಲಿ ಈವರೆಗೆ ಶೇ.೧೩೪ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿ ಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬ ಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡ ಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ…
ಹುಳಿಯಾರು: ಹೈನುಗಾರಿಕೆಯಲ್ಲಿ ವರ್ಗೀಸ್ ಕುರಿಯನ್ವರ ಪಾತ್ರವನ್ನು ನಾವೆಲ್ಲರೂ ಇಂದಿಗೂ ನೆನೆಯಬೇಕು. ಪ್ರಸ್ತುತ ಭಾರತದ ಜನಸಂಖ್ಯೆಗೆ ಎಲ್ಲರಿಗೂ ಹಾಲಿನ ಉತ್ಪನ್ನಗಳನ್ನು ಒದಗಿಸುವ ಅಗತ್ಯತೆಯಿದೆ. ಹಾಗಾಗಿ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಬೇಕಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕ್ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೆ.ಮ.ನಾಗಭೂಷಣ್ ತಿಳಿಸಿದರು. ಹುಳಿಯಾರು ಸಮೀಪದ ಬೆಳಗುಲಿ ಗ್ರಾಮದಲ್ಲಿ ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಲಾಗಿರುವ ರಾಷ್ಟಿçÃಯ ಸೇವಾ ಯೋಜನೆ ಘಟಕ-೧ ಮತ್ತು ೨ ರ ೨೦೨೪-೨೫ ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು “ಕರುಣ – ಕರುಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮ” ದ ಬಗ್ಗೆ ಮಾಹಿತಿ ನೀಡಿದ ಅವರು ಹಸುಗಳ ವಿವಿಧ ತಳಿಗಳನ್ನು ತಿಳಿಸುತ್ತಾ, “ಅವುಗಳಿಗೂ ಮನುಷ್ಯರಂತೆ ಪೌಷ್ಟಿಕಯುತವಾದ ಸಮತೋಲನ ಆಹಾರವನ್ನು ನೀಡಲು ಅವಶ್ಯಕತೆ ಇದೆ” ಎಂದರು. ಪಶು ಸಂಗೋಪನೆಯನ್ನು ಮಾಡಿ ಯಶಸ್ವಿಯಾದವರ ಉದಾಹರಣೆಗಳನ್ನು ನೀಡಿದರು. ಮುಂದುವರಿದು, “ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಜೀವನದಲ್ಲಿ ಬೆಳೆಯಲು ಸಾಧ್ಯ”…
ಚಿಕ್ಕನಾಯಕನಹಳ್ಳಿ: ದಲಿತರಲ್ಲಿ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆದಿರುವ ಜಾತಿಗಣಿತಿ ಕಾರ್ಯ ತಾಲ್ಲೂಕಿನಲ್ಲಿ ಬೇಕಾಬಿಟ್ಟಿಯಂತೆ ನಡೆಸಲಾಗುತ್ತಿದ್ದು ಸಂಬAಧಿಸಿದ ಅಧಿಕಾರಿವರ್ಗ ದಿವ್ಯ ನಿರ್ಲ್ಯಕ್ಷ ತೋರಿದೆ ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಮುಖಂಡರು ಆರೋಪಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ನಿರಂಜನ್ ಮಾತನಾಡಿ, ಪರಿಶಿಷ್ಟಜಾತಿಯಡಿ ಬರುವ ೧೦೧ ಜಾತಿಗಳಿಗೆ ಸಮರ್ಪಕವಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚಿಕೆ ಮಾಡುವ ಉದ್ದೇಶದಿಂದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ರವರ ಏಕಸದಸ್ಯಪೀಠವನ್ನು ಸರ್ಕಾರ ನೇಮಿಸಿದೆ. ಸದರಿ ಆಯೋಗವು ಸಮೀಕ್ಷೆ ನಡೆಸಿ ಮಾಹಿತಿ ನೀಡುವ ಸಲುವಾಗಿ ರಾಜ್ಯಾದ್ಯಂತ ಜಾತಿ ಸಮೀಕ್ಷೆಕಾರ್ಯ ನಡೆದಿದೆ. ಈ ಸಮೀಕ್ಷೆ ನಮಗೆ ಅತ್ಯಂತ ಉಪಯುಕ್ತವಾದುದಾಗಿದೆ. ಆದರೆ ತಾಲ್ಲೂಕಿನಲ್ಲಿ ಈಗಾಗಲೇ ಹತ್ತುದಿನದಿಂದ ನಡೆದಿರುವ ಸಮೀಕ್ಷೆಕಾರ್ಯ ಕೇವಲ ಕಾಟಾಚಾರವೆಂಬತೆ ನಡೆದಿದೆ ಉಸ್ತು ವಾರಿಯ ಪ್ರಮುಖರಾದ ತಹಸೀಲ್ದಾರ್ ರಾಗಲಿ, ಹೆಚ್ಚು ಜವಾಬ್ದಾರಿ ಹೊಂದಿದ ಸಮಾಜಕಲ್ಯಾಣ ಇಲಾಖೆಯಾಗಲಿ ಈ ಸಮೀಕ್ಷಾ ಕಾರ್ಯದ ಮಹತ್ವದ ಅರಿವೆ ಇಲ್ಲದಂತೆ ವರ್ತಿ ಸಿದ್ದಾರೆ. ಸಮೀಕ್ಷೆಯಲ್ಲಿ ನಿಯೋಜನೆಗೊಂಡ ಸಿಬ್ಬಂದಿ ಹತ್ತು ದಿನ ಕಳೆದರೂ…
ಕೊರಟಗೆರೆ: ರಾಜ್ಯ ಸರ್ಕಾರವು ನಡೆಸುತ್ತಿರುವ ಒಳಮೀಸಲಾತಿ ಜಾತಿಗಣತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವಂತೆ ಕೊರಟಗೆರೆ ತಾಲ್ಲೂಕು ಛಲವಾದಿ ಮಹಾಸಭಾ ಉಪಾದ್ಯಕ್ಷ ಹನುಮಂತರಾಯಪ್ಪ ಸರ್ಕಾರವನ್ನು ಮನವಿ ಮಾಡಿದ್ದಾರೆ. ಅವರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಈಗಾಗಲೇ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗ್ಮೋಹನ್ದಾಸ್ ರವರ ತೀರ್ಪಿನಂತೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಒಳಮೀಸಲಾತಿ ಜಾತಿಗಣತಿ ಪ್ರಾರಂಭಿಸಿದ್ದು ಛಲವಾದಿ ಮಹಾಸಭಾ ಇದನ್ನು ಸ್ವಾಗತಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ, ಆದರೆ ಈ ಜಾತಿಗಣತಿಯಲ್ಲಿ ಹಲವಾರು ತಾಂತ್ರಿಕ ದೋಷಗಳು ಬರುತ್ತಿವೆ ಸರ್ಕಾರವು ಈ ಜನಗಣತಿಗೆ ಇದೇ ಮೇ ತಿಂಗಳ ೧೭ ನೇ ತಾರೀಖು ಅಂತಿಮ ದಿನಾಂಕ ನಿಗದಿಪಡಿಸಿದ್ದು ಇದರಿಂದ ತಾಂತ್ರಿಕ ದೋµದಿಂದ ನಡೆಯುತ್ತಿರುವ ಜಾತಿಗಣತಿ ನಿಖರವಾಗಿ ಮತ್ತು ಗುಣಮಟ್ಟವಾಗಿ ಆಗದ ಕಾರಣ ಸರ್ಕಾರ ಇದರ ಕಾಲಮಿತಿಯನ್ನು ವಿಸ್ತರಿಸಬೇಕು ಎಂದ ಅವರು ಛಲವಾದಿಗಳು ಜಾತಿ ಗಣತಿ ಸಮಯದಲ್ಲಿ ಆದಿದ್ರಾವಿಡ ಎಂದು ಬರೆಸಿ ಬ್ರಾಕೆಟ್ ನಲ್ಲಿ ಛಲವಾದಿ ಎಂದು ಬರೆಸಬೇಕು ಎಂದು ಮನವಿ ಮಾಡಿದರು, ಜಿಲ್ಲಾ ದಲಿತ ಸೇನೆ ಅದ್ಯಕ್ಷ ಅನಂತ್ಕುಮಾರ್ ಮಾತನಾಡಿ ಕೊರಟಗೆರೆ ತಾಲ್ಲೂಕು…











