Author: News Desk Benkiyabale

ಚಿಕ್ಕನಾಯಕನಹಳ್ಳಿ:       ಮಹಿಳೆಯ ಹೊಟ್ಟೆ ಯಲ್ಲಿದ್ದ 5.6ಕಿಲೋ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಮೂಲಕ ಹೊರತೆಗೆಯುವ ಮೂಲಕ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಸಾಧನೆಗೈದಿದ್ದಾರೆ.        ಪಟ್ಟಣದ ನಾಯಕರ ಬೀದಿಯ ಸೌಭಾಗ್ಯಮ್ಮ(55) ವರ್ಷದ ಮಹಿಳೆ ಗರ್ಭಕೊಶದ ಚಿಕಿತ್ಸೆಗಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಇದೇ 17 ರಂದು ದಾಖಲಾಗಿದ್ದರು. ಈಕೆಯ ಹೊಟ್ಟೆಯಲ್ಲಿ ಗೆಡ್ಡೆಯಿರುವ ಬಗ್ಗೆ ತಪಾಸಣೆಯಿಂದ ಖಾತ್ರಿಪಡಿಸಿಕೊಂಡ ಆಸ್ಪತ್ರೆಯ ವೈದ್ಯರಾದ ಡಾ. ಕುಮಾರಸ್ವಾಮಿ, ಪ್ರಸೂತಿ ಪರಿಣಿತ ಡಾ. ನಟರಾಜ್, ಅರವಳಿಕೆ ತಜ್ಞರಾದ ಡಾ. ಶಶಾಂಕ್ ಹಾಗೂ ಸಿಬ್ಬಂದಿಯವರು ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 5.6 ಕಿಲೋ ತೂಕದ ಮಾಂಸದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದರು. ಈ ಶಸ್ತ್ರಚಿಕಿತ್ಸೆಯಿಂದ ಮಹಿಳೆ ಅಪಾಯದಿಂದ ಪಾರಾಗಿ ಆರೋಗ್ಯವಾಗಿದ್ದಾರೆ.       ಈ ಸಂದರ್ಭದಲ್ಲಿ ಆಡಳಿತ ವೈದ್ಯರಾದ ಡಾ. ಕುಮಾರಸ್ವಾಮಿ ಮಾತನಾಡಿ ಸರ್ಕಾರಿ ಆಸ್ಪತ್ರೆಯಲ್ಲಿಯೂಸಹ ಇಂತಹ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ ಎಂಬ ವಿಚಾರ ಸಾರ್ವಜನಿಕರಿಗೆ ತಿಳಿಯಬೇಕಿದೆ.       ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ…

Read More

ಚಿಕ್ಕನಾಯಕನಹಳ್ಳಿ :        ಮುಂದಿನವಾರದಲ್ಲಿ ತಾಲ್ಲೂಕಿನ ಹಲವೆಡೆ ಸುಮಾರು 20ರಿಂದ 30ಕೋಟಿರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗವುದೆಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.        ತಾಲ್ಲೂಕಿನ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಅಗಸರಹಳ್ಳಿ ಬಾಳನಕೆರೆ ಹಳ್ಳದ ಬಳಿ ರೂ.1ಕೋಟಿ ವೆಚ್ಚದ ಚೆಕ್‍ಡ್ಯಾಂ ಹಾಗೂ ಸೇತುವೆ ನಿರ್ಮಾಣದ ಕಾಮಗಾರಿಗೆ ಪೂಜೆಸಲ್ಲಿಸಿಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಸಬಹೋಬಳಿ ಹೊಸಳ್ಳಿ ಗೊಲ್ಲರಹಟ್ಟಿ ನಡುವೆ 2ಕೋಟಿ ರೂ. ಅಂದಾಜಿನ ಚೆಕ್‍ಡ್ಯಾಂ ನಿರ್ಮಾಣ ಮತ್ತು ಹಂದನಕೆರೆ ಹೋಬಳಿ ಓಟಿಕೆರೆಬಳಿ 1.20ಕೋಟಿರೂ.ಗಳ ಚೆಕ್‍ಡ್ಯಾಂಗಳ ಕಾಮಗಾರಿಗಳನ್ನು ಇಂದು ಆರಂಭಿಸಲಾಗವುದೆಂದರು. ಹಲವು ಅಭಿವೃದ್ದಿ ಕೆಲಸಗಳ ಚಾಲನೆಗೆ ಇದುವರೆಗೂ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿತ್ತು.       ಮುಂದಿನ ವಾರದಲ್ಲಿ ತಾಲ್ಲೂಕಿನೆಡೆ ಸುಮಾರು 20ರಿಂದ 30 ಕೋಟಿರೂ.ಗಳ ಕಾಮಗಾರಿಗಳು ಆರಂಭಗೊಳ್ಳಲಿದೆ. ಈಗಾಗಲೇ ತಾಲ್ಲೂಕಿಗೆ ನಾಲೆಯಿಂದ ನೀರು ಹರಿದುಬರುತಿದ್ದು ಅಂತರ್ಜಲ ಸಹಜವಾಗಿ ಏರಿಕೆಯಾಗುತ್ತಿದೆ. ಇದೇ ರೀತಿ ಅವಶ್ಯವಿರುವಡೆ ಚೆಕ್‍ಡ್ಯಾಂ, ಸೇತುವೆಗಳ ನಿರ್ಮಿಸುವ ಮೂಲಕ ಅಂತರ್ಜಲ ಅಭಿವೃದ್ದಿಗೆ ಆದ್ಯತೆನೀಡಲಾಗುವುದು. ಇದರಿಂದ ಕೃಷಿ,…

Read More

ತುಮಕೂರು:       ಸಚಿವ ಸಂಪುಟ ವಿಸ್ತರಣೆಯ ಪಟ್ಟಿ ಇಟ್ಟುಕೊಂಡು ಪಕ್ಷದ ಹೈಕಮಾಂಡ್‍ನ್ನು ಭೇಟಿಯಾಗಿ ಬರಿಗೈಯಲ್ಲಿ ಬಿ.ಎಸ್.ಯಡಿಯೂರಪ್ಪ ಮರಳಿರುವುದು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ರಾಜ್ಯ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.       ನಗರದ ಟಿ.ಎ.ಪಿ.ಸಿ.ಎಂ. ಮುಂಭಾಗದಲ್ಲಿ ಏರ್ಪಡಿಸಿದ್ದ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ 103ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ಎಸ್.ವೈ ಅವರನ್ನು ಮುಂದುವರೆಸುವ ಇರಾಧೆ ಬಿಜೆಪಿ ಪಕ್ಷಕ್ಕೆ ಇದ್ದರೆ, ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋಧನೆ ನೀಡುತಿದ್ದರು.ಬಿಜೆಪಿ ಪಕ್ಷಕ್ಕೆ ಈಗ ಬಿ.ಎಸ್.ವೈ ಬೇಕಾಗಿಲ್ಲ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.       ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದು ರಾಜ್ಯವನ್ನು ಪ್ರತಿನಿಧಿಸುವ ವ್ಯಕ್ತಿ. ಇಂತಹವರಿಗೆ ಕೇಂದ್ರದ ಗೃಹಸಚಿವರನ್ನು ಭೇಟಿಯಾಗಲು ಐದು ನಿಮಿಷ ಕಾಲಾವಕಾಶ ಕೊಡಲಿಲ್ಲವೆಂದರೆ, ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅಪಮಾನವಲ್ಲ. ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದು ಖಂಡನೀಯ…

Read More

ತುಮಕೂರು:       ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ ಡಿಸೆಂಬರ್ 19ರಂದು “ಬೃಹತ್ ಲೋಕ್ ಅದಾಲತ್” (ಜನತಾ ನ್ಯಾಯಾಲಯ)ಅನ್ನು ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್.ಸಂಗ್ರೇಶಿ ತಿಳಿಸಿದರು.       ನ್ಯಾಯಾಲಯ ಸಭಾಂಗಣದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಬೃಹತ್ ಲೋಕ್ ಅದಾಲತ್ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಅತೀ ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ…

Read More

ತುಮಕೂರು:       ರೈತ ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಮಾರಕವಾದ ರೀತಿಯಲ್ಲಿ ಕಾಯ್ದೆಗಳ ಬದಲಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮದ ವಿರುದ್ಧವಾಗಿ ನ.26ರಂದು ಅಖಿಲ ಭಾರತ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆನೀಡಲಾಗಿದೆ.       ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಮಾಡುತ್ತಿದ್ದು, ಸಾಮಾನ್ಯ ಕುಟುಂಬಕ್ಕೆ ಹೊರೆಯಾಗಿ ಪರಿಣಮಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು, ರಕ್ಷಣಾ, ಆರೋಗ್ಯ, ರೈಲ್ವೆ, ವಿದ್ಯುತ್, ವಿಮಾ, ಬ್ಯಾಂಕ್ ಮತ್ತು ರಕ್ಷಣಾ ವಲಯದ ಕೈಗಾರಿಕೆಗಳ ಖಾಸಗೀಕರಣವನ್ನು ವಿರೋಧಿಸಿ, ಕನಿಷ್ಠ ವೇತನ, ಮಾಸಿಕ 21 ಸಾವಿರ ಕನಿಷ್ಠ ಕೂಲಿ, ಗುತ್ತಿಗೆ ನೌಕರರ ಕಾಯಂಮಾತಿಗೆ ಶಾಸನ ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.       ಅಖಿಲ ಭಾರತ ಮುಷ್ಕರವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಆವರಣದಲ್ಲಿರುವ ರಂಗತಾಲೀಮು ಕೇಂದ್ರದಲ್ಲಿ ನಡೆದ ಜೆಸಿಟಿಯು…

Read More

ತುಮಕೂರು:       ತುಮಕೂರು ನಗರದ ಅಭಿವೃದ್ಧಿಗೆ ಪೂರಕವಾಗಿ ಸರಕಾರ ಪಾಲಿಕೆಗೆ ನಾಮನಿರ್ದೇಶನ ಮಾಡಿರುವ ಸದಸ್ಯರು ನಡೆದುಕೊಳ್ಳುವಂತೆ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ.       ನಗರದ ಪಾಲಿಕೆ ಸಭಾಂಗಣದಲ್ಲಿ ಸರಕಾರದವತಿಯಿಂದ ಪಾಲಿಕೆಗೆ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಮೋಹನ್ ಡಿ.ಎ.ಬಿನ್ ಲೇಟ್ ಆನಂತನಾರಾಯಣಶೆಟ್ಟಿ, ಶಿವರಾಜು ಕೆ.ಎನ್.ಬಿನ ನಟರಾಜಯ್ಯ, ನರಸಿಂಹಸ್ವಾಮಿ ಬಿನ್ ಚಂದ್ರಶೇಖ ರಾಚಾರ್,ತ್ಯಾಗರಾಜಸ್ವಾಮಿ ಬಿನ್ ರಾಮಚಂದ್ರಯ್ಯ ಎಂ, ಹಾಗೂ ವಿಶ್ವನಾಥ್ ಟಿ.ವಿ. ಬಿನ್ ಲೇಟ್ ವೆಂಕಟೇಶ್ ಅವರುಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಮನಿರ್ದೇಶನ ಸದಸ್ಯರಿಗೆ ಇಂತಹದ್ದೇ ವಾರ್ಡುಗಳೆಂಬುದಿಲ್ಲ. ನಗರದ 35ವಾರ್ಡುಗಳಲ್ಲಿಯೂ ಕೆಲಸ ಮಾಡಲು ಅವಕಾಶವಿದೆ.ಆದರೆ ಹಾಲಿ ಸದಸ್ಯರ ಜೊತೆಗೆ ಜಿದ್ದಾಜಿದ್ದಿಗೆ ಬೀಳದೆ,ಅವರಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ನಗರದಲ್ಲಿ ಉದ್ಬವಿಸಿರುವ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಲು ಸಹಕಾರ ನೀಡಬೇಕೆಂದರು.       ಕಳೆದ 45 ದಿನಗಳ ಹಿಂದೆಯೇ ಸರಕಾರ ಮೇಲಿನ ಐವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅವರನ್ನು…

Read More

ತುಮಕೂರು :        ಕೊರೊನಾ ಮಹಾಮಾರಿ ರುದ್ರನರ್ತನದಿಂದಾಗಿ ಕಳೆದ 8 ತಿಂಗಳಿನಿಂದ ತೆರೆಯದ ಕಾಲೇಜುಗಳು ನಿನ್ನೆಯಿಂದ ಪುನರಾರಂಭವಾಗಿದ್ದರೂ ಸಹ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿರುವ ಹಿನ್ನೆಲೆಯಲ್ಲಿ ತರಗತಿಗಳು ಬಣಗುಡುತ್ತಿವೆ.       ತುಮಕೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಸರ್ಕಾರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸಿದ್ದಗಂಗಾ ಪದವಿ ಕಾಲೇಜು, ಸಿದ್ದಗಂಗಾ ಡಿಪೆÇ್ಲೀಮಾ ಕಾಲೇಜು ಸೇರಿದಂತೆ ನಗರದ ವಿವಿಧ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟು ಪಾಲನೆಯೊಂದಿಗೆ ತರಗತಿಗಳನ್ನು ಆರಂಭಿಸಿವೆ ಎಲ್ಲ ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ತರಗತಿ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸ್ ಹಾಕಲಾಗುತ್ತಿದ್ದು, ತರಗತಿಗಳನ್ನು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಒಂದು ಡೆಸ್ಕ್‍ಗೆ ಇಬ್ಬರು ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.        ಆದರೆ ಪೋಷಕರು ಇನ್ನು ಮಕ್ಕಳನ್ನು ಕಾಲೇಜುಗಳಿಗೆ ಕಳುಹಿಸಲು ಮನಸ್ಸು ಮಾಡಿದಂತಿಲ್ಲ. ಬೆರಳೆಣಿಕೆಯಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಾತ್ರ…

Read More

ತುಮಕೂರು:       ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.       ಈ ಹಿಂದೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಅವರು ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು.       ರಾಜರಾಜೇಶ್ವರಿ ನಗರದ ನೂತನ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ನಮ್ಮೆಲ್ಲರಿಗೆ ಇದೆ. ಮುಖ್ಯಮಂತ್ರಿಗಳು ಇದುವರೆಗೂ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ಕೊಟ್ಟಿದ್ದರೆ, ಸೋತವರಿಗೂ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದಾರೆ. ಇನ್ನು ಉಳಿದವರಿಗೆ ಏನು ಮಾಡಬೇಕು ಎಂಬ ವಿಚಾರ ಮುಖ್ಯಮಂತ್ರಿಗಳಿಗೆ ಗೊತ್ತಿದೆ. ಆ ಪ್ರಕಾರ ಅವರು ನಡೆದುಕೊಳ್ಳುತ್ತಾರೆ ಎಂದರು.      ನಗರದ ಸಿದ್ದಗಂಗಾ ಮಠಕ್ಕೆ ನಿನ್ನೆ ಸಂಜೆ ನಗರಾಭಿವೃದ್ಧಿ ಸಚಿವ…

Read More

ಹುಳಿಯಾರು:       ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗ್ರಾಮದ ಬಳಿಯ ಹೊಲದಲ್ಲಿ ರಾಗಿ ಕೊಯ್ಲು ಮಾಡುವಾಗ ಕಾಣಿಸಿಕೊಂಡ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.       ಗ್ರಾಮದ ನಾಗಣ್ಣ ಅವರ ಹೊಲದಲ್ಲಿ ರಾಗಿ ಕೊಯ್ಲು ಮಾಡುವ ವೇಳೆ ಹಾವು ಕಾಣಿಸಿಕೊಂಡಿತ್ತು. ನಂತರ ಹೊಲದ ಮಾಲೀಕರು ಹೆಬ್ಬಾವು ಇರುವುದನ್ನು ಖಚಿತಪಡಿಸಿಕೊಂಡು ಬುಕ್ಕಾಪಟ್ಟಣ ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ತಂದರು.       ಉಪಅರಣ್ಯಾಧಿಕಾರಿ ಸಿದ್ಧಲಿಂಗಮೂರ್ತಿ ಅವರ ನೇತೃತ್ವದ ತಂಡ ತಮ್ಮಡಿಹಳ್ಳಿಗೆ ಆಗಮಿಸಿ 3 ವರ್ಷ ವಯಸ್ಸಿನ 7 ಅಡಿ ಉದ್ದದ 12 ಕೆಜಿ ತೂಕದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.       ಆರಣ್ಯ ವೀಕ್ಷಕ ಸುರೇಶ್, ಸಂತೋಷ್, ಪಿಸಿಪಿ ವಾಚರ್ ಸಂತೋಷ್, ರಂಗನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಗುಬ್ಬಿ:        ಉಪನೋಂದಾಣಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಮಧ್ಯವರ್ತಿಗಳೇ ಕಾರಣ. ಕಚೇರಿಯಲ್ಲಿ ನಡೆಯಬೇಕಾದ ಕೆಲಸಗಳಿಗೆ ಮಧ್ಯವರ್ತಿಗಳ ಆದೇಶ ಮುಖ್ಯವಾಗಿದೆ. ಉಪನೋಂದಣಾಧಿಕಾರಿಗಳನ್ನು ಹತೋಟಿಯಲ್ಲಿಟ್ಟುಕೊಂಡಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕಿ ಉಗ್ರ ಹೋರಾಟ ನಡೆಯಲಿದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಎಚ್ಚರಿಕೆ ನೀಡಿದರು.       ಪಟ್ಟಣದ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕರು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪೆಡ್ಡಿಂಗ್ ಇರುವ ಕಡತಗಳ ಪರಿಶೀಲನೆ ಮಾಡಲು ಸೂಚಿಸಿದರು.       ಕಳೆದ ಎಂಟು ತಿಂಗಳಿಂದ ಸಿ.ಎಸ್.ಪುರ ಹೋಬಳಿಯ ರೈತರ ಕೆಲಸಗಳನ್ನು ಮಾಡದೇ ಮಧ್ಯವರ್ತಿ ಪತ್ರ ಬರಹಗಾರ ವಿಶ್ವಣ್ಣ ಅವರ ಆಣತಿಯಂತೆ ಕಡತವನ್ನು ಸ್ಥಗಿತ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಜತೆಗೆ ಹೊರಗುತ್ತಿಗೆ ಕೆಲಸಗಾರರು ಮಧ್ಯವರ್ತಿಗಳ ಕೆಲಸವಷ್ಟೇ ಮಾಡುತ್ತಾರೆ. ಇವರ ಮೇಲೆ ಕ್ರಮವಹಿಸಬೇಕು ಜತೆಗೆ ಉಪನೋಂದಣಾಧಿಕಾರಿಗಳ ಅಮಾನತು ಮಾಡಬೇಕು ಎಂದು ಮೇಲಾಧಿಕಾರಿಗಳಿಗೆ ಒತ್ತಾಯಿಸಿದರು.       ಓರ್ವ…

Read More