ಹುಳಿಯಾರು : ಬಯಲು ಬಹಿರ್ದೆಸೆ ನಿರ್ಮೂಲನೆಗೆ ಸರ್ಕಾರ ಯುದ್ದೋಪಾದಿಯಲ್ಲಿ ಕ್ರಮ ಕೈಗೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಪಂಚಾಯ್ತಿಯ ನಿರ್ಲಕ್ಷ್ಯದಿಂದಾಗಿ ಬಯಲು ಬಹಿರ್ದೆಸೆ ಇನ್ನೂ ಜೀವಂತವಾಗಿದ್ದು ಸಾರ್ವಜನಿಕರು ರಸ್ತೆ ಬದಿ ಮಲಮೂತ್ರ ವಿಸರ್ಜಿಸುವ ವ್ಯವಸ್ಥೆ ಇದ್ದು ನಾಗರಿಕ ಸಮಾಜವನ್ನು ಅಣಕಿಸುವಂತಿದೆ. ಹೌದು, ಜಿಲ್ಲೆಯಲ್ಲೇ ಅತೀ ಹೆಚ್ಚು ಆದಾಯವುಳ್ಳ, ತಾಲೂಕು ಸರಿಸಮಾನಕ್ಕೆ ಬೆಳೆದು ನಿಂತಿರುವ, ವ್ಯಾಪಾರ ವಹಿವಾಟಿಗೆ ಹೆಸರಾಗಿರುವ ಹುಳಿಯಾರಿನ ಸ್ಥಿತಿ ಇದು. ಹೆಚ್ಚು ಜನಸಂದಣಿ ಇರುವ ರಾಮಗೋಪಾಲ್ ಸರ್ಕಲ್ ಮತ್ತು ಬಸ್ ನಿಲ್ದಾಣದಲ್ಲಿ ಪಂಚಾಯ್ತಿಯಿಂದ ದಶಕಗಳ ಹಿಂದೆ ಶೌಚಾಲಯ ಕಟ್ಟಿಸಿ, ಪ್ರಯಾಣಿಕರು, ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕರು, ಹಮಾಲಿಗಳು, ಕೂಲಿಕಾರ್ಮಿಕರಿಗೆ, ಸಾರ್ವಜನಿಕರಿಗೆ ದೇಹಬಾಧೆ ತೀರಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದರು. ಆದರೆ ರಾಮಗೋಪಾಲ್ ಸರ್ಕಲ್ ಶೌಚಾಲಯ ಹೈವೆ ರಸ್ತೆ ಕಾಮಗಾರಿಗೆ ತೆರವು ಮಾಡಿದವರು ಪುನಃ ನಿರ್ಮಿಸಿಲ್ಲ. ಬಸ್ ನಿಲ್ದಾಣದ ಶೌಚಾಲಯವನ್ನು ಕೋವಿಡ್ ಲಾಕ್ಡೌನ್ ನೆಪದಲ್ಲಿ ಮುಚ್ಚಿದ್ದು ತೆರೆಯದಿರುವುದು ಬಯಲು ಬಹಿರ್ದೆಸೆಗೆ ಕಾರಣವಾಗಿದೆ. …
Author: News Desk Benkiyabale
ಮಧುಗಿರಿ: ರೈತರ ಬಗ್ಗೆ ಕಾಳಜಿಯಿರುವ ನರೇಂದ್ರ ಮೋದಿಯವರ ಕಾರ್ಯಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಡ್ಡಗಾಲಾಗಿದ್ದು, ಎಪಿಎಂಸಿ ತಿದ್ದುಪಡಿಯಾಗಲು ಬಿಜೆಪಿಗೆ ಮತ ನೀಡುವಂತೆ ಶಾಸಕ ವೈ.ಎನ್.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಗ್ನೀಯ ಪದವೀಧರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಎಂ.ಚಿದಾನಂದ ಗೌಡರ ಪರವಾಗಿ ಮತಯಾಚನೆ ಮಾಡಿದ ಅವರು ರೈತರು ದಲ್ಲಾಳಿಗಳ ಹಾವಳಿಯಿಂದ ಹೊರಬಂದು ಸ್ವತಂತ್ರವಾಗಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ನೂತನ ಎಪಿಎಂಸಿ ಕಾಯ್ದೆ ಸಹಕಾರಿಯಾಗಿದೆ. ಆದರೆ ಈ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳು ಅಡ್ಡಿಯಾಗಿದ್ದು, ಕಾಯ್ದೆ ಮೇಲ್ಮನೆಯಲ್ಲಿ ಬಿದ್ದುಹೋಗುವಂತೆ ಮಾಡಿವೆ. ಈಗಿನ ನಾಲ್ಕು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಆ ಕಾಯ್ದೆ ಜಾರಿಗೆ ಬಂದು ರೈತರಿಗೆ ಅನುಕೂಲವಾಗಲಿದೆ. ಬಿಜೆಪಿ ಕಾರ್ಯಕರ್ತರು ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿ ಗೆಲುವಿಗೆ ಕಾರಣರಾಗಬೇಕು ಎಂದರು. ಅಭ್ಯರ್ಥಿ ಎಂ. ಚಿದಾನಂದ ಗೌಡ ಮಾತನಾಡಿ ಬಡ…
ಹುಳಿಯಾರು: ಶ್ರೀಮಂತರು ತಿನ್ನುವ ಹಣ್ಣು ಎಂದೇ ಕರೆಯಲ್ಪಡುವ ಸೇಬು ಹಣ್ಣಿನ ಬೆಲೆ ಕಳೆದ ಒಂದು ವಾರದಿಂದ ಕುಸಿತ ಕಂಡಿದ್ದು ಹುಳಿಯಾರಿನಲ್ಲಿ ಸೇಬು ಹಣ್ಣಿನ ಮಾರಾಟ ಗಲ್ಲಿಗಲ್ಲಿಯಲ್ಲೂ, ಹೆಜ್ಜೆಹೆಜ್ಜೆಗೂ ಭರ್ಜರಿಯಾಗಿ ನಡೆಯುತ್ತಿದೆ. ಹಿಮಾಚಲ ಪ್ರದೇಶ ಹಾಗೂ ಕಾಶ್ಮೀರಿ ಹಣ್ಣು ಹುಳಿಯಾರಿಗೆ ಬರುತ್ತಿದ್ದು ಬೆಂಗಳೂರು, ಚಿತ್ರದುರ್ಗದ ಮಾರುಕಟ್ಟೆಯಿಂದ ಇಲ್ಲಿಗೆ ಸರಬರಾಜಾಗುತ್ತಿದೆ. ಕಳೆದ ಹತ್ತದಿನೈದು ದಿನಗಳ ಹಿಂದಷ್ಟೆ ಕೆಜಿ ಸೇಬಿಗೆ 120 ರಿಂದ 150 ರೂ. ಇದ್ದ ಬೆಲೆ ಈಗ ಶೀತದ ಕಾರಣಕ್ಕೆ ಸೇಬು ತಿನ್ನುವವರ ಸಂಖ್ಯೆ ತೀರಾ ಕಡಿಮೆಯಾಗಿ ಬೇಡಿಕೆ ಕುಸಿದಿದೆ. ಪರಿಣಾಮ ಕೆ.ಜಿ ಗೆ 80 ರೂ. ರಿಂದ 120 ರೂ ವರೆಗೆ ಮಾರಾಟವಾಗುತ್ತಿದೆ. ಐದಾರು ಕೆಜಿ ಕೊಂಡರೆ ಇನ್ನೂ ಕಡಿಮೆ ಬೆಲೆಗೆ ಕೊಡುತ್ತಿದ್ದಾರೆ. ಪರಿಣಾಮ ಪಟ್ಟಣದ ಬಸ್ ನಿಲ್ದಾಣ, ರಾಜಕುಮಾರ್ ರಸ್ತೆ, ರಾಮಗೋಪಾಲ್ ಸರ್ಕಲ್, ಬಿ.ಎಚ್.ರಸ್ತೆ ಎಲ್ಲಾ ಕಡೆ ಸೇಬುಹಣ್ಣಿನ ಮಾರಾಟವೆ ಕಾಣುತ್ತಿದೆ. ಸಾಲದಕ್ಕೆ ತಳ್ಳುವ ಗಾಡಿಯಲ್ಲಿ ಸೇಬಿನ ರಾಶಿ…
ತುಮಕೂರು: ವಿದ್ಯಾವಂತ ಸಮುದಾಯ ಅಮೀಷಗಳಿಗೆ ಬಲಿಯಾಗಿ ಮತ ಚಲಾಯಿಸುತ್ತಿದ್ದಾರೆ ಎಂಬ ಆರೋಪ, ಶಿಕ್ಷಕರು ಮತ್ತು ಪದವಿಧರರ ಕ್ಷೇತ್ರಗಳ ಮತದಾರರ ಮೇಲಿದ್ದು, ಇದರಿಂದ ಹೊರಬರಲು ಆಗ್ನೇಯ ಪದವಿಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ಬಾಬು ಅವರಿಗೆ ಮತಚಲಾಯಿಸುವಂತೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಮನವಿ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಕ್ಷಕರು ಮತ್ತು ಪದವಿಧರರಿಗೆ ಏನಾದರೂ ಕಿಂಚಿತ್ತು ಸರಕಾರದ ಸವಲತ್ತುಗಳು ನೀಡಿದ್ದರೆ,ಅದು ಕಾಂಗ್ರೆಸ್ ಪಕ್ಷದ ಸರಕಾರವಿದ್ದಾಗ ಮಾತ್ರ. ಆದರೆ ಈ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಕಾಣಲು ಸಾಧ್ಯವಾಗುತ್ತಿಲ್ಲ.ಇದಕ್ಕೆ ಕಾರಣ ಈ ಕ್ಷೇತ್ರಗಳ ಮತದಾರರು ಅಮೀಷಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ ಎಂಬ ಅಪಾದನೆಗಳು ಕೇಳಿ ಬರುತ್ತಿದ್ದು,ಇದರ ಹೊರಬರಲು ಇರುವ ಏಕೈಕ ಮಾರ್ಗವೆಂದರೆ ಈ ಸಾಲಿನಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ಬಾಬು ಗೆಲುವು ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ…
ತುರುವೇಕೆರೆ: ಪಟ್ಟಣ ಪಂಚಾಯ್ತಿ ಮೀಸಲಾತಿ ಪ್ರಕಟಗೊಂಡ ಬೆನ್ನಲೇ ಪಟ್ಟಣ ಪಂಚಾಯಿತಿ ಸದಸ್ಯರಲ್ಲಿ ರಾಜಕೀಯ ಲೆಕ್ಕಾಚಾರ ಚುರುಕುಗೊಂಡಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ. ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಮೀಸಲಾತಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಒಟ್ಟು 14 ಪಟ್ಟಣ ಪಂಚಾಯಿತಿ ಸದಸ್ಯರನ್ನು ಒಳಗೊಂಡಿರುವ ತುರುವೇಕೆರೆ ಪಟ್ಟಣ ಪಂಚಾಯ್ತಿ ಸ್ಥಾನಗಳಲ್ಲಿ, ಪಟ್ಟಣ ಪಂಚಾಯ್ತಿಯ ಅಧಿಕಾರದ ಆಡಳಿತ ಹಿಡಿಯಲು 8 ಸದಸ್ಯರ ಬಹುಮತ ಅಗತ್ಯವಿದೆ. ಇದರಲ್ಲಿ ಬಿಜೆಪಿ 6ರಲ್ಲಿ ಜಯಭೇರಿ ಭಾರಿಸಿ ದೊಡ್ಡ ಪಕ್ಷವಾಗಿ ಹೊರಹುಮ್ಮಿದ್ದು, ಜೆಡಿಎಸ್ 5ರಲ್ಲಿ, ಕಾಂಗ್ರೇಸ್ ಕೇವಲ 2ರಲ್ಲಿ, ಪಕ್ಷೇತರ ಒಬ್ಬರು ಸದಸ್ಯರಿದ್ದಾರೆ. 12 ನೇ ವಾರ್ಡ್ನಲ್ಲಿ ಜಯದ ನಗೆ ಬೀರಿರುವ ಪಕ್ಷೇತರ ಸದಸ್ಯರಾದ ಟಿ.ಕೆ. ಪ್ರಭಾಕರ್ ಈಗಾಗಲೇ ಶಾಸಕ ಮಸಾಲ ಜಯರಾಮ್ರವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಈಗಾಗಲೇ ಬಿಜೆಪಿ ಸೇರ್ಪಡೆಗೊಂಡಿರುವುದು ಒಂದೆಡೆಯಾದರೆ ಅಧ್ಯಕ್ಷ,…
ಹುಳಿಯಾರು: ಹುಳಿಯಾರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ಬಿಡಾಡಿ ನಾಯಿಗಳು ಉಪಟಳದಿಂದ ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿವೆ. ಐಬಿ ರಸ್ತೆ, ಮಸೀದಿ ರಸ್ತೆಗಳಲ್ಲಿ ಮಾಂಸ ದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. …
ಹುಳಿಯಾರು: ಪರಿಹಾರ ಮೊತ್ತ ಘೋಷಿಸದೆ ಸರ್ವೆಗೆ ಮುಂದಾಗಿರುವ ಕ್ರಮ ವಿರೋಧಿಸಿ ಹುಳಿಯಾರು ಹೋಬಳಿ ಹೊಯ್ಸಲಕಟ್ಟೆ ಹಾಗೂ ದಸೂಡಿ ಗ್ರಾಮ ಪಂಚಾಯ್ತಿಯ ರೈತರ ನಿಯೋಗ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿತು. ಚಿಕ್ಕನಾಯಕನಹಳ್ಳಿ ತಾಲೂಕಿನ ಮಾರ್ಗವಾಗಿ ಹಾಸನದಿಂದ ಚರ್ಲಪಲ್ಲಿಗೆ ಪೈಪ್ ಲೈನ್ ಮೂಲಕ ಅನಿಲ ಸಾಗಿಸುವ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳಲು ಸರ್ವೆ ಮಾಡುತ್ತಿದ್ದಾರೆ. ಆದರೆ ಸರ್ವೆವೆ ಮೊದಲೇ ಈ ಯೋಜನೆಗೆ ಆಕ್ಷೇಪಣೆ ಸಲ್ಲಿಸಿ ಬಂದಿದ್ದರೂ ಸಹ ನಮ್ಮ ಅರ್ಜಿ ಇತ್ಯಾರ್ಥ ಮಾಡದೆ ಸರ್ವೆಗೆ ಮುಂದಾಗಿದ್ದಾರೆ ಎಂದು ರೈತರು ಈ ಸಂದರ್ಭದಲ್ಲಿ ದೂರಿದ್ದಾರೆ. ಗ್ಯಾಸ್ ಪೈಲ್ಲೈನ್ ಹೋಗುವ ಮಾರ್ಗದಲ್ಲಿ ಅತೀ ಸಣ್ಣ ರೈತರಿದ್ದು ಈ ಭೂಮಿಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆಗೆ ಭೂಸ್ವಾದೀನ ಮಾಡಿಕೊಂಡರೆ ಅನೇಕ ರೈತರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಹಾಗಾಗಿ ನಮ್ಮ ಭಾಗ ಬಿಟ್ಟು ಬೇರೆಡೆ ಪೈಪ್ಲೈನ್ ಹಾದು ಹೋಗವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ…
ತುಮಕೂರು: ಕೊರೊನಾ ಹಾಗೂ ಜಿಲ್ಲೆಯಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಮಾದರಿಯಲ್ಲಿಯೇ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್, ಜನಸಂದಣಿಯಿಲ್ಲದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ರಾಜ್ಯೋತ್ಸವ ಸಮಾರಂಭವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿದೆ. ಇದರೊಂದಿಗೆ ಒಂದು ಕಲಾತಂಡ ಹಾಗೂ ಕೊರೋನಾ ಕುರಿತು ಅರಿವು ಮೂಡಿಸುವ ಒಂದು ಸ್ಥಬ್ಧಚಿತ್ರಕ್ಕೆ ಅವಕಾಶ ನೀಡಲಾಗುವುದು ಎಂದರು.…
ಶಿರಾ: ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದ ಕಾರ್ಯಕರ್ತರನ್ನ ಬಿಜೆಪಿ ತನ್ನೆಡೆ ಸೆಳೆಯಲು ರಣತಂತ್ರಗಳನ್ನು ರೂಪಿಸಿ ವಿವಿಧ ಆಮಿಷಗಳ ಮಹಾಪೂರವನ್ನೇ ಹರಿಸುತ್ತಿದೆ. ಕಾಂಗ್ರೆಸ್ ಪಕ್ಷವೂ ಸಹ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತೀಯರನ್ನ ತನ್ನೆಡೆ ಸೆಳೆದುಕೊಳ್ಳುವಲ್ಲಿ ತಾನೂ ಸಹ ಕಡಿಮೆಯಿಲ್ಲ ಎಂಬುದನ್ನ ನಿರೂಪಿಸಲು ಹೊರಟಿದೆ. ಜ್ಯಾತ್ಯಾತೀಯ ಜನತಾ ದಳದಲ್ಲಿ ಸಮರ್ಥ ದಂಡನಾಯಕನ ಕೊರತೆ ಹೆಚ್ಚಾಗಿ ಕಂಡುಬರುತ್ತಿದ್ದು, ದಿವಂಗತ ಬಿ.ಸತ್ಯನಾರಾಯಣ್ರವರ ಪತ್ನಿ ಅಮ್ಮಜಮ್ಮ ಅಧಿಕೃತ ಅಭ್ಯರ್ಥಿಯೆಂದು ಘೋಷಣೆಯಾಗಿದ್ದು, ಕಣ್ಣೀರಿನ ರಾಜಕಾರಣದಲ್ಲಿ ಅನುಕಂಪದ ಅಲೆಯಲ್ಲಿ ತೇಲುವ ಕನಸು ಹೊತ್ತಿದೆ. ರಾಜ್ಯದ ಪ್ರಭಲ ನಾಯಕರ ಸಾಲಿನಲ್ಲಿ ನಿಲ್ಲುವ ಟಿ.ಬಿ.ಜಯಚಂದ್ರ 9 ಬಾರಿ ಸ್ಪರ್ಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ತಮ್ಮನ್ನು ತಾವು ಓರೆ ಹಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ರಾಜೇಶ್ಗೌಡರು ಮೂಲ ಬಿಜೆಪಿಗರಲ್ಲದಿದ್ದರೂ ಜಾತಿಯ…
ತುರುವೇಕೆರೆ: ಆಸ್ತಿ ವಿಚಾರವಾಗಿ ಕಲಹ ನಡೆದು ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಕೇಳಿ ಬಂದಿದೆ. ತುರುವೇಕೆರೆ ತಾಲೂಕಿನ ಸೋಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರ್ 17 ವರ್ಷದ ಯುವತಿ ದೇವಿಕ ಮೃತ ದುದೈವಿ ಎಂದು ತಿಳಿದುಬಂದಿದೆ. ಅಜ್ಜಿ ತಾತನಿಗೆ ಸೇರಿದ ಜಮೀನು ಹಂಚಿಕೆಯ ಹಿನ್ನೆಲೆಯಲ್ಲಿ ಹತ್ಯೆಯಾದ ಯುವತಿ ಮತ್ತು ಅವರ ತಂದೆ ಮತ್ತು ದೊಡ್ಡಪ್ಪಂದಿರ ನಡುವೆ ಮಾತಿನ ವಿವಾದ ಏರ್ಪಾಟಾಗಿ ಮಾತು ಮಿತಿಮೀರಿ ಹಲ್ಲೆಯ ಹಂತ ತಲುಪಿದ್ದು, ಯುವತಿಯ ಮನೆಗೆ ನುಗ್ಗಿ ದೊಡ್ಡಪ್ಪಂದಿರಾದ ನಂಜೇಗೌಡ, ಪಂಚಾಕ್ಷರಯ್ಯ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಾದ ನಂತರ ದೇವಿಕ ತಾಯಿ ವಸಂತ ಮತ್ತು ತಂದೆ ದೇವಯ್ಯ ಹಲ್ಲೆಯ ಕುರಿತು ತುರುವೇಕೆರೆ ಪೊಲೀಸ್ ಠಾಣೆಗೆ ದೂರು ಕೊಡಲು ತೆರಳಿದ್ದು ಠಾಣೆಯಲ್ಲಿದ್ದ ಪೊಲೀಸರು ದೂರನ್ನು ಸ್ವೀಕಾರ ಮಾಡದೆ ಠಾಣೆಯಲ್ಲಿಯೇ ಬೆಳಗ್ಗೆಯಿಂದ ಸಂಜೆಯವರೆಗೂ ಕೂರಿಸಿಕೊಂಡಿದ್ದು, ಎಫ್ಐಆರ್ ಕೂಡ…











