ತುಮಕೂರು: ತುಮಕೂರು ನಗರದ ಅಭಿವೃದ್ಧಿಗೆ ಪೂರಕವಾಗಿ ಸರಕಾರ ಪಾಲಿಕೆಗೆ ನಾಮನಿರ್ದೇಶನ ಮಾಡಿರುವ ಸದಸ್ಯರು ನಡೆದುಕೊಳ್ಳುವಂತೆ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ. ನಗರದ ಪಾಲಿಕೆ ಸಭಾಂಗಣದಲ್ಲಿ ಸರಕಾರದವತಿಯಿಂದ ಪಾಲಿಕೆಗೆ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಮೋಹನ್ ಡಿ.ಎ.ಬಿನ್ ಲೇಟ್ ಆನಂತನಾರಾಯಣಶೆಟ್ಟಿ, ಶಿವರಾಜು ಕೆ.ಎನ್.ಬಿನ ನಟರಾಜಯ್ಯ, ನರಸಿಂಹಸ್ವಾಮಿ ಬಿನ್ ಚಂದ್ರಶೇಖ ರಾಚಾರ್,ತ್ಯಾಗರಾಜಸ್ವಾಮಿ ಬಿನ್ ರಾಮಚಂದ್ರಯ್ಯ ಎಂ, ಹಾಗೂ ವಿಶ್ವನಾಥ್ ಟಿ.ವಿ. ಬಿನ್ ಲೇಟ್ ವೆಂಕಟೇಶ್ ಅವರುಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಮನಿರ್ದೇಶನ ಸದಸ್ಯರಿಗೆ ಇಂತಹದ್ದೇ ವಾರ್ಡುಗಳೆಂಬುದಿಲ್ಲ. ನಗರದ 35ವಾರ್ಡುಗಳಲ್ಲಿಯೂ ಕೆಲಸ ಮಾಡಲು ಅವಕಾಶವಿದೆ.ಆದರೆ ಹಾಲಿ ಸದಸ್ಯರ ಜೊತೆಗೆ ಜಿದ್ದಾಜಿದ್ದಿಗೆ ಬೀಳದೆ,ಅವರಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ನಗರದಲ್ಲಿ ಉದ್ಬವಿಸಿರುವ ಸಮಸ್ಯೆಗಳಿಗೆ ಪರಿಹಾರ ಕಂಡಕೊಳ್ಳಲು ಸಹಕಾರ ನೀಡಬೇಕೆಂದರು. ಕಳೆದ 45 ದಿನಗಳ ಹಿಂದೆಯೇ ಸರಕಾರ ಮೇಲಿನ ಐವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅವರನ್ನು…
Author: News Desk Benkiyabale
ತುಮಕೂರು : ಕೊರೊನಾ ಮಹಾಮಾರಿ ರುದ್ರನರ್ತನದಿಂದಾಗಿ ಕಳೆದ 8 ತಿಂಗಳಿನಿಂದ ತೆರೆಯದ ಕಾಲೇಜುಗಳು ನಿನ್ನೆಯಿಂದ ಪುನರಾರಂಭವಾಗಿದ್ದರೂ ಸಹ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿರುವ ಹಿನ್ನೆಲೆಯಲ್ಲಿ ತರಗತಿಗಳು ಬಣಗುಡುತ್ತಿವೆ. ತುಮಕೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಸರ್ಕಾರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸಿದ್ದಗಂಗಾ ಪದವಿ ಕಾಲೇಜು, ಸಿದ್ದಗಂಗಾ ಡಿಪೆÇ್ಲೀಮಾ ಕಾಲೇಜು ಸೇರಿದಂತೆ ನಗರದ ವಿವಿಧ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟು ಪಾಲನೆಯೊಂದಿಗೆ ತರಗತಿಗಳನ್ನು ಆರಂಭಿಸಿವೆ ಎಲ್ಲ ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ತರಗತಿ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸ್ ಹಾಕಲಾಗುತ್ತಿದ್ದು, ತರಗತಿಗಳನ್ನು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಒಂದು ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಪೋಷಕರು ಇನ್ನು ಮಕ್ಕಳನ್ನು ಕಾಲೇಜುಗಳಿಗೆ ಕಳುಹಿಸಲು ಮನಸ್ಸು ಮಾಡಿದಂತಿಲ್ಲ. ಬೆರಳೆಣಿಕೆಯಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಾತ್ರ…
ತುಮಕೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಈ ಹಿಂದೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಅವರು ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ರಾಜರಾಜೇಶ್ವರಿ ನಗರದ ನೂತನ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ನಮ್ಮೆಲ್ಲರಿಗೆ ಇದೆ. ಮುಖ್ಯಮಂತ್ರಿಗಳು ಇದುವರೆಗೂ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ಕೊಟ್ಟಿದ್ದರೆ, ಸೋತವರಿಗೂ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದಾರೆ. ಇನ್ನು ಉಳಿದವರಿಗೆ ಏನು ಮಾಡಬೇಕು ಎಂಬ ವಿಚಾರ ಮುಖ್ಯಮಂತ್ರಿಗಳಿಗೆ ಗೊತ್ತಿದೆ. ಆ ಪ್ರಕಾರ ಅವರು ನಡೆದುಕೊಳ್ಳುತ್ತಾರೆ ಎಂದರು. ನಗರದ ಸಿದ್ದಗಂಗಾ ಮಠಕ್ಕೆ ನಿನ್ನೆ ಸಂಜೆ ನಗರಾಭಿವೃದ್ಧಿ ಸಚಿವ…
ಹುಳಿಯಾರು: ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗ್ರಾಮದ ಬಳಿಯ ಹೊಲದಲ್ಲಿ ರಾಗಿ ಕೊಯ್ಲು ಮಾಡುವಾಗ ಕಾಣಿಸಿಕೊಂಡ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಗ್ರಾಮದ ನಾಗಣ್ಣ ಅವರ ಹೊಲದಲ್ಲಿ ರಾಗಿ ಕೊಯ್ಲು ಮಾಡುವ ವೇಳೆ ಹಾವು ಕಾಣಿಸಿಕೊಂಡಿತ್ತು. ನಂತರ ಹೊಲದ ಮಾಲೀಕರು ಹೆಬ್ಬಾವು ಇರುವುದನ್ನು ಖಚಿತಪಡಿಸಿಕೊಂಡು ಬುಕ್ಕಾಪಟ್ಟಣ ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ತಂದರು. ಉಪಅರಣ್ಯಾಧಿಕಾರಿ ಸಿದ್ಧಲಿಂಗಮೂರ್ತಿ ಅವರ ನೇತೃತ್ವದ ತಂಡ ತಮ್ಮಡಿಹಳ್ಳಿಗೆ ಆಗಮಿಸಿ 3 ವರ್ಷ ವಯಸ್ಸಿನ 7 ಅಡಿ ಉದ್ದದ 12 ಕೆಜಿ ತೂಕದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಆರಣ್ಯ ವೀಕ್ಷಕ ಸುರೇಶ್, ಸಂತೋಷ್, ಪಿಸಿಪಿ ವಾಚರ್ ಸಂತೋಷ್, ರಂಗನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗುಬ್ಬಿ: ಉಪನೋಂದಾಣಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಮಧ್ಯವರ್ತಿಗಳೇ ಕಾರಣ. ಕಚೇರಿಯಲ್ಲಿ ನಡೆಯಬೇಕಾದ ಕೆಲಸಗಳಿಗೆ ಮಧ್ಯವರ್ತಿಗಳ ಆದೇಶ ಮುಖ್ಯವಾಗಿದೆ. ಉಪನೋಂದಣಾಧಿಕಾರಿಗಳನ್ನು ಹತೋಟಿಯಲ್ಲಿಟ್ಟುಕೊಂಡಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕಿ ಉಗ್ರ ಹೋರಾಟ ನಡೆಯಲಿದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಎಚ್ಚರಿಕೆ ನೀಡಿದರು. ಪಟ್ಟಣದ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕರು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪೆಡ್ಡಿಂಗ್ ಇರುವ ಕಡತಗಳ ಪರಿಶೀಲನೆ ಮಾಡಲು ಸೂಚಿಸಿದರು. ಕಳೆದ ಎಂಟು ತಿಂಗಳಿಂದ ಸಿ.ಎಸ್.ಪುರ ಹೋಬಳಿಯ ರೈತರ ಕೆಲಸಗಳನ್ನು ಮಾಡದೇ ಮಧ್ಯವರ್ತಿ ಪತ್ರ ಬರಹಗಾರ ವಿಶ್ವಣ್ಣ ಅವರ ಆಣತಿಯಂತೆ ಕಡತವನ್ನು ಸ್ಥಗಿತ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಜತೆಗೆ ಹೊರಗುತ್ತಿಗೆ ಕೆಲಸಗಾರರು ಮಧ್ಯವರ್ತಿಗಳ ಕೆಲಸವಷ್ಟೇ ಮಾಡುತ್ತಾರೆ. ಇವರ ಮೇಲೆ ಕ್ರಮವಹಿಸಬೇಕು ಜತೆಗೆ ಉಪನೋಂದಣಾಧಿಕಾರಿಗಳ ಅಮಾನತು ಮಾಡಬೇಕು ಎಂದು ಮೇಲಾಧಿಕಾರಿಗಳಿಗೆ ಒತ್ತಾಯಿಸಿದರು. ಓರ್ವ…
ತುಮಕೂರು: ಶಿರಾ ತಾಲ್ಲೂಕಿಗೆ ಶಾಶ್ವತ ನೀರಾವರಿ ಕಲ್ಪಿಸುವ ನಿಟ್ಟಿನಲ್ಲಿ ನೀರಾವರಿಗೆ ಒತ್ತು ನೀಡಿ ಕಾರ್ಯನಿರ್ವಹಿಸುವುದಾಗಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ತಿಳಿಸಿದರು. ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿಗಳ ಗದ್ದುಗೆ ಪೂಜೆ ಸಲ್ಲಿಸಿ, ಸಿದ್ಧಲಿಂಗಸ್ವಾಮೀಜಿ ಅವರ ಆರ್ಶೀವಾದ ಪಡೆದ ನಂತರ ಮಾತನಾಡಿದ ಅವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದು, ಅಧಿಕಾರಿಗಳು ಮದಲೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆನಾಲ್ ಗಳಲ್ಲಿ ಜಂಗಲ್ ತೆರವುಗೊಳಿಸುವ ಕಾರ್ಯ ಮುಂದಿನವಾರದಿಂದ ಆರಂಭಗೊಳ್ಳಲಿದ್ದು ಮೂರು ತಿಂಗಳ ಒಳಗೆ ನೀರು ಹರಿಯಲಿದೆ ಎಂದರು. ಹೇಮಾವತಿ ನೀರನ್ನು ಹರಿಸುವ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಣ್ಣನೀರಾವರಿ ಇಲಾಖೆ ಮುಖ್ಯಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದು, ಚುನಾವಣೆಯಲ್ಲಿ ಜನರಿಗೆ ನೀಡಿರುವ ಭರವಸೆ ಈಡೇರಿಸಲು ಮುಂದಾಗುವಂತೆ ತಿಳಿಸಿದ್ದಾರೆ ಎಂದರು. …
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸುಮಾರು 500 ಕೋಟಿ ಹಣ ಮಂಜೂರು ಮಾಡಿಸಿಕೊಂಡು ಬಂದು ಹಳ್ಳಿಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ, ಈ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರಚಾರಾಂದೋಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ. ಆಂಜನಪ್ಪ ತಿಳಿಸಿದರು. ತುಮಕೂರು ಗ್ರಾಮಾಂತರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದಿಂದ ಹಮ್ಮಿಕೊಂಡಿದ್ದ ಪ್ರಚಾರಾಂದೋಲನ ಕಾರ್ಯಕ್ರಮವನ್ನು ಬೆಳಗುಂಬ ಗ್ರಾಮದಲ್ಲಿ ಉದ್ಘಾಟಿಸಿ ಮಾತನಾಡಿ, ಶಾಸಕ ಗೌರಿಶಂಕರ್ ತಮ್ಮ ಕ್ಷೇತ್ರವನ್ನು ಮಾದರಿ ಮಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಗೌರಿಶಂಕರ್ ಈಗಾಗಲೇ ತಮ್ಮ ಉತ್ತಮ ಕಾರ್ಯಗಳ ಮೂಲಕ ಜನ ಮೆಚ್ಚದ ನಾಯಕರೆನಿಸಿಕೊಂಡಿದ್ದಾರೆ, ಅಪ್ಪ ಚೆನ್ನಿಗಪ್ಪರ ಹಾದಿಯಲ್ಲೇ ಸಾಗುತ್ತಿರುವ ಅವರು ಮತ್ತೊಬ್ಬ ಚೆನ್ನಿಗಪ್ಪ ಆಗಲಿದ್ದಾರೆ, ಬಡವರು, ರೈತರ…
ಹುಳಿಯಾರು : ಈ ಭಾಗದ ಜನರ ದಶಕಗಳ ಕಾಲದ ಕನಸು ನನಸಾಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿಯಲಿದ್ದು, ಈ ಮೂಲಕ ಸಂಘ-ಸಂಸ್ಥೆಗಳು ಸೇರಿದಂತೆ ಅನೇಕರ ಹೋರಾಟದ ಫಲ ದಕ್ಕಲು ಕ್ಷಣಗಣನೆ ಆರಂಭವಾಗಿದೆ. ದಶಕಗಳಿಂದಲೂ ಮಳೆಯಿಲ್ಲದೆ ಬರಪೀಡಿತ ಪ್ರದೇಶವಾಗಿರುವ ಹುಳಿಯಾರಿನಲ್ಲಿ ನೀರಿನ ಸಮಸ್ಯೆ ತೀವ್ರ ಉಲ್ಬಣವಾಗಿದ್ದು ಇಂತಹ ಸಮಯದಲ್ಲಿ ಹೇಮಾವತಿ ನೀರು ಹರಿದು ಜನರ ಸಂಕಷ್ಟಕ್ಕೆ ಇತಿಶ್ರೀ ಹಾಡಲಿರುವುದು ಇಲ್ಲಿನ ಜನಗಳ ಸಂತಸಕ್ಕೆ ಕಾರಣವಾಗಲಿದೆ. ತಾಲೂಕಿನ 24 ಕೆರೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನೀರು ಹರಿಸಲು ಅಲೊಕೇಶನ್ ಸದ್ಯ ಶೆಟ್ಟಿಕೆರೆ ಕೆರೆಗೆ ನೀರು ತುಂಬುತ್ತಿದೆ. ಅಲ್ಲಿಂದ ಜೋಡಿ ತಿರುಮಲಾಪುರದ ಕೆರೆಗೆ ನೀರು ಬರಲಿದ್ದು, ಅದು ತುಂಬಿದ ನಂತರ ತಿರುಮಲಾಪುರದ ಕೆರೆ ಕೋಡಿಯಿಂದ ಒಣ ಕಾಲುವೆ ಮೂಲಕ ಹುಳಿಯಾರು ಕೆರೆಗೆ ನೀರು ತಲುಪಲಿದೆ. ನಾನಾ ಕಾರಣಗಳಿಂದಾಗಿ ವಿಳಂಬಗೊಂಡಿದ್ದ ಹೇಮಾವತಿ ನಾಳೆಯ…
ತುಮಕೂರು : ಚುನಾವಣಾ ಪೂರ್ವದಲ್ಲಿ ಪದವೀಧರರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗುತ್ತೇನೆ ಎಂದು ಆಗ್ನೇಯ ಪದವೀಧರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಇಂದಿಲ್ಲಿ ತಿಳಿಸಿದರು. ನಿರುದ್ಯೋಗಿ ಪದವೀಧರರು, ಶಿಕ್ಷಕರು ಸೇರಿದಂತೆ ಈ ಕ್ಷೇತ್ರದ ಪದವೀಧರ ಸರ್ಕಾರಿ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿರುತ್ತೇನೆ. ಇಂದಿನಿಂದಲೇ ಪದವೀಧರರ ಸಮಸ್ಯೆಗಳ ನಿವಾರಣೆಗೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುವುದಾಗಿ ಅವರು ಹೇಳಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನೆ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ 7134 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ನನ್ನ ಈ ಗೆಲುವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳೇ ಪ್ರಮುಖ ಕಾರಣ ಎಂದರು. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ…
ಹುಳಿಯಾರು: ಹವಾಮಾನ ವೈಪರೀತ್ಯ ಪರಿಸ್ಥಿತಿಗಳಾದ ಪ್ರವಾಹ ಅನಾವೃಷ್ಟಿ, ಮಿಂಚು, ಭಾರಿ ಮಳೆ, ಶೀತ ಅಲೆಗಳು ಮತ್ತು ಶಾಖದ ಅಲೆಗಳು ಮಿಂಚಿನ ಹೊಡೆತಗಳು ಈ ಎಲ್ಲಾ ವೈಪರೀತ್ಯಗಳಿಂದಾಗಿ ಭಾರತದಲ್ಲಿ 1,562 ಜನರು ಮೃತಪಟ್ಟಿದ್ದಾರೆ. ಅದರಲ್ಲಿ 75 ಜನರು ಮಿಂಚಿನ ಹೊಡೆತಕ್ಕೆ ಮೃತಪಟ್ಟಿದ್ದಾರೆ. (2019 ರ ಕ್ಲೈಮೆಟ್ ಆಫ್ ಇಂಡಿಯಾ ವರದಿಯ ಪ್ರಕಾರ) ಹವಾಮಾನ ಬದಲಾವಣೆಯು ಇಂದಿನ ಅತಿದೊಡ್ಡ ಸಮಸ್ಯೆಯಾಗಿದೆ ಮತ್ತು ಇದು ಮಾನವ ಕುಲದ ಮೂಲಭೂತ ಉಳಿವನ್ನು ಪ್ರಶ್ನಿಸುತ್ತದೆ. ಬರ ಮತ್ತು ಪ್ರವಾಹವು ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಮತ್ತು ನಮ್ಮ ಆಹಾರ ಮತ್ತು ನೀರು ಸರಬರಾಜಿನ ಮೇಲೆ ಹವಾಮಾನ ಬದಲಾವಣೆಯನ್ನು ಪರಿಹರಿಸಲು ಮತ್ತು ಅಧ್ಯಯನ ಮಾಡಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ವಿಶ್ವದ ಅತ್ಯುತ್ತಮ ತಂತ್ರಜ್ಞಾನಗಳು ಸಹ ಪ್ರಯೋಜನಕಾರಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ ಮತ್ತು ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ “ದಾಮಿನಿ” ಎಂಬ ಮೊಬೈಲ್ ಆಧಾರಿತ ಅಪ್ಲಿಕೇಶನ್…











