ಚಿಕ್ಕನಾಯಕನಹಳ್ಳಿ: ಹೇಮಾವತಿ ನಾಲೆಯಿಂದ ತಾಲ್ಲೂಕಿನ 22 ಕೆರೆಗಳಿಗೆ ಕುಡಿಯುವ ನೀರಿಗಾಗಿ ನೀರುಣಿಸುವ ಯೋಜನೆಯ ಕಾಮಗಾರಿಯ ಒಂದು ಭಾಗ ಮುಗಿದಿದ್ದು ಪ್ರಾಯೋಗಿಕವಾಗಿ ನಾಲೆಯಲ್ಲಿ ನೀರು ಹರಿಸಲಾಗಿದೆ. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯವರೆಗೆ ಹೇಮಾವತಿ ನಾಲೆಯಿಂದ ನೀರು ಹರಿಸುವ ಕಾಮಗಾರಿ ಈಚೆಗೆ ಭರದಿಂದ ನಡೆಯುತ್ತಿತ್ತು. ಈ ಕಾಮಗಾರಿ ಕೆಲತಿಂಗಳಹಿಂದಯೇ ಮುಗಿಯಬೇಕಿತ್ತು ಆದರೆ ಭೂ ಸಂತ್ರಸ್ಥರ ಪರಿಹಾರ, ಗುತ್ತಿಗೆದಾರರ ಸಮಸ್ಯೆ, ಲಾಕ್ಡೌನ್ ಹಾಗೂ ಮಳೆಯಕಾರಣದಿಂದ ಕಾಮಗಾರಿ ವಿಳಂಬವಾಗಿತ್ತು. ಇದೆಲ್ಲದರ ತೊಡಕುಗಳನ್ನು ಶೀಘ್ರವಾಗಿ ನಿವಾರಿಸಿ ಕಾಮಗಾರಿ ಅತ್ಯಂತ ತ್ವರಿತಗತಿಯಲ್ಲಿ ನಡೆಸುವ ನಿಟ್ಟಿನಲ್ಲಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತೋರಿದ ಆಸ್ಥೆಯಿಂದ ಒಂದುಭಾಗದ ಕಾಮಗಾರಿ ಪೂರ್ಣಗೊಂಡಿದ್ದು ಈಗ ಸಾಸಲುಕೆರೆವರೆಗಿನ ಕಾಮಗಾರಿಯನ್ನು ಮುಗಿಸಲಾಗಿದೆ. ಇಂದು ನಾಲೆಯಿಂದ ನೀರನ್ನು ಪ್ರಾಯೋಗಿಕವಾಗಿ ಹರಿಯಬಿಡಲಾಗಿದ್ದು ನಾಲೆಯಲ್ಲಿ ನೀರಿನ ಹರಿಯುವಿಕೆಯ ಸಮಯದಲ್ಲಿ ಆಗುವ ಮಣ್ಣುಕುಸಿತ ಮುಂತಾದ ತೊಡಕುಗಳನ್ನು ನಾಲಾ ಅಧಿಕಾರಿಗಳು ಗಮನಿಸಿ ನೀರು ಹರಿಯುವ ನಡುವೆಯೇ ಕುಸಿದ ಮಣ್ಣು ಕಲ್ಲುಗಳನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಗುತ್ತಿತ್ತು. …
Author: News Desk Benkiyabale
ಮಧುಗಿರಿ : ಇಲ್ಲಿನ ಪುರಸಭೆಗೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಸರ್ಕಾರ ಆದೇಶ ಮಾಡಿರುವುದು, 22 ವರ್ಷಗಳ ನಂತರ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ಸಿಕ್ಕಿರುವುದರಿಂದ ಈ ಬಾರಿ ಆಯ್ಕೆಯಾಗಿರುವ ಪುರಸಭಾ ಸದಸ್ಯರ ಪೈಕಿ ಒಬ್ಬರೇ ಈ ಮೀಸಲಾತಿಯಿಂದ ಆಯ್ಕೆಯಾಗಿರುವುದು, ಪುರಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪುರಸಭೆಗೆ ವಾರ್ಡುವಾರು ಪದ್ಧತಿ ಜಾರಿಯಾದ ನಂತರ ಎರಡನೇ ಅವಧಿಯಲ್ಲಿ ಅಧ್ಯಕ್ಷ ಸ್ಥಾನ 1998 ರಿಂದ 2001ರವರೆವಿಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿ ಅಂಜಿನಪ್ಪ ಮತ್ತು ಇಂದಿರಮ್ಮ ಅಧ್ಯಕ್ಷರಾದರು. ತದನಂತರ 2020ರಲ್ಲಿ ಈ ಮೀಸಲಾತಿ ದೊರೆತಿದೆ. ಮಧುಗಿರಿ ಪುರಸಭೆ ಸದಸ್ಯ ಸ್ಥಾನಕ್ಕೆ 2018 ರ ಆಗಸ್ಟ್ 30 ರಂದು ಚುನಾವಣೆ ನಡೆದು, ಸೆಪ್ಟೆಂಬರ್ 3 ರಂದು ಪ್ರಕಟವಾದ ಫಲಿತಾಂಶದಲ್ಲಿ ಕಾಂಗ್ರೆಸಿನಿಂದ ಹದಿಮೂರು, ಜೆಡಿಎಸ್ ನಿಂದ ಒಂಬತ್ತು ಹಾಗೂ ಒಬ್ಬರು ಪಕ್ಷೇತರರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಜೆಡಿಎಸ್…
ತುಮಕೂರು: ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿರಾ ಚುನಾವಣಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸುವ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಜರಿದ್ದರು. ಶಿರಾ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ 12.1 ನಿಮಿಷಕ್ಕೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳುದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು. ಈ ಅವಧಿ ಶುಭಗಳಿಗೆ ಎನ್ನುವ ಕಾರಣ ಜಯಚಂದ್ರ ನಾಮಪತ್ರ ಸಲ್ಲಿಸಿದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜಯಚಂದ್ರ, ಅವರು ಅಂದುಕೊಂಡಿದ್ದ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಮತ್ತೊಬ್ಬರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ಕಾರಣದಿಂದ ಇಂದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,…
ಬೆಂಗಳೂರು: ಶಿರಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಕೆಪಿಸಿಸಿ ನಿರ್ಧಾರವನ್ನು ರಾಜ್ಯ ಉಸ್ತುವಾರಿ ಕಾಂಗ್ರೆಸ್ನ ನಾಯಕ ರಣದೀಪ್ ಸುರ್ಜೆವಾಲ ಟೀಕಿಸಿದ್ದಲ್ಲದೇ, ರಾಜ್ಯ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಜಯಚಂದ್ರ 9 ಬಾರಿ ಚುನಾವಣೆಗೆ ನಿಂತಿದ್ದಾರೆ. ಮತ್ತೆ ಅವರ ಹೆಸರನ್ನೇ ಶಿಫಾರಸ್ಸು ಮಾಡಿದ್ದೀ ರಲ್ಲ. ನಿಮಗೆ ಸಾಮಾನ್ಯಜ್ಞಾನ ವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ರಣದೀಪ್ ಸುರ್ಜೆವಾಲ ಶಿರಾ ಕ್ಷೇತ್ರದ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಕಾರ್ಯಕ್ರಮದ ಸಂದರ್ಭದಲ್ಲಿ ಹೈಕಮಾಂಡ್ನ ಸುರ್ಜೆವಾಲಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದು, ಜಯಚಂದ್ರ ಅವರಿಗೆ ಟಿಕೆಟ್ ನೀಡಬಾರದಿತ್ತು. ರಾಜೇಶಗೌಡ ಅವರಿಗೆ ಟಿಕೆಟ್ ಕೊಡಬೇಕಿತ್ತು ಎಂದಿದ್ದಾರೆ. 1978ರಿಂದಲೂ 9 ಬಾರಿ ಜಯಚಂದ್ರ ಅವರೇ ಚುನಾವಣೆಗೆ ನಿಂತಿದ್ದಾರೆ. ನಿಮಗೆ ಕಾಮನ್ ಸೆನ್ಸ್ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜೇಶ್ಗೌಡ ಅವರು ಕಳೆದ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿ ದ್ದರು. ಈಗ ಬಿಜೆಪಿ ಸೇರಿ ದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೆಪ…
ಮಧುಗಿರಿ: ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಎಂ.ಪ್ರವೀಣ್ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಸುಮಾರು 19 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಇತ್ತೀಚೆಗೆ ನಡೆದಿದೆ. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಬಡಿಗೇನಹಳ್ಳಿ ಗ್ರಾಮದ ಜಮೀನಿನಲ್ಲಿ ಪಾಪಣ್ಣ ಎಂಬುವವರು 19 ಗಾಂಜಾ ಗಿಡಗಳನ್ನು ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂದಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಪಿಐ ಸರ್ಧಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ತುಮಕೂರು: ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ದೇಶವ್ಯಾಪಿ ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆ ಮತ್ತು ಮೂಲಭೂತ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತ ಬಂದಿದೆ. ನವ ಉದಾರಿಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಪರಿಣಾಮ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಪೋರೇಟ್ ಕಂಪನಿಗಳು ಹಣಹೂಡಿ ವಿದ್ಯಾರ್ಥಿಗಳಿಂದ ವಸೂಲಿಗೆ ಇಳಿದಿವೆ. ಇಂತಹ ಸಂದರ್ಭದಲ್ಲಿ ಬಡವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಂಬುದು ಕನಸಿನ ಮಾತಾಗಿದೆ. ಕಲಾ ಮತ್ತು ವಿಜ್ಞಾನ ಹೊರತುಪಡಿಸಿ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ನಮ್ಮನ್ನು ಆಳುವ ಸರ್ಕಾರಗಳು ಸಹ ಶ್ರೀಮಂತರ ಪರವಾದ ನೀತಿಗಳನ್ನು ಜಾರಿಗೊಳಿಸಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರವಿಡುವ ಕೆಲಸ ಮಾಡುತ್ತಿವೆ. ರಾಜಕಾರಣಿಗಳಿಗೆ ಸೇರಿದ ಶಿಕ್ಷಣ ಸಂಸ್ಥೆಗಳೇ ಹೆಚ್ಚಾಗಿದ್ದು ದುಬಾರಿ ಶುಲ್ಕ ವಿಧಿಸುವ ಮೂಲಕ ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಇದನ್ನು ಗಮನಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಉಚಿತವಾಗಿ…
ತುಮಕೂರು: ತುಮಕೂರು ಜಿಲ್ಲೆಯ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಅರಕೆರೆರವರನ್ನು ಆಯ್ಕೆ ಮಾಡಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಸುರೇಶ್ಗೌಡರು ಆದೇಶ ಹೊರಡಿಸಿರುತ್ತಾರೆ. ನೂತನ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ರವೀಶ್ ಅರಕೆರೆರವರು ಉತ್ತಮ ಸಂಘಟನಾ ಸಾಮಥ್ರ್ಯವನ್ನು ಹೊಂದಿದ್ದು, ಸಂಘಟನೆಯ ವಿಚಾರದಲ್ಲಿ ಪ್ರಭಾವಿ ರಾಜಕಾರಣಿಗಳ ಅನುಭವವನ್ನು ಮೀರಿಸುವಂತಹ ಸಂಘಟನಾ ಚಾತುರ್ಯವನ್ನು ಹೊಂದಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಜವಾಬ್ದಾರಿಗಳನ್ನ ಯಾವುದೇ ರೀತಿಯ ಲೋಪಗಳಿಲ್ಲದೆ ಸಮರ್ಥವಾಗಿ ನಿಭಾಯಿಸುವ ಮುಖೇನ ಚುನಾವಣೆಯ ಜವಾಬ್ದಾರಿಗಳಲ್ಲಿ ತಮ್ಮ ಚಾಣಾಕ್ಷತನವನ್ನು ಪ್ರದರ್ಶಿಸಿದ್ದರು. ಯಾವುದೇ ರೀತಿಯ ಅಧಿಕಾರ ಮತ್ತು ಲಲಾಸೆಗೆ ಒಳಗಾಗದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆಸಲ್ಲಿಸಿದ್ದ ಇವರ ಚಾಣಾಕ್ಷನದ ಸಂಘಟನಾ ಸಾಮಥ್ರ್ಯವನ್ನು ಅರಿತ ಸುರೇಶ್ಗೌಡರು ಪ್ರಸ್ತುತ ಜಿಲ್ಲಾ ಯುವಮೋರ್ಚಾಗೆ ಇವರ ಅಗತ್ಯತೆ ಇದೆ ಎನ್ನುವುದನ್ನು ಮನಗಂಡು ಆಯ್ಕೆ ಮಾಡಿದ್ದಾರೆ ಎನ್ನುವುದು ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಯುವ ಮೋರ್ಚಾದ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆ…
ತುಮಕೂರು : ಜಿಲ್ಲೆಯ ಅಂಗಡಿ ಮುಂಗಟ್ಟು ಗಳಿಗೆ ಹಾಗೂ ಜಾಹೀರಾತು ಫಲಕಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥಗೌಡ ಅವರ ನೇತೃತ್ವದಲ್ಲಿ ನೂರಾರು ಕರವೇ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕನ್ನಡ ನಾಮಪತ್ರಗಳನ್ನು ಅಳವಡಿಸುವಂತೆ ಆಗ್ರಹಿಸಿದರು. ಭಾರತ ಬಹುಭಾಷೆಗಳ ನಾಡು, ಭಾಷಾ ವಾರು ಪ್ರಾಂತ್ಯಗಳ ವಿಂಗಡನೆಯ ನಂತರ ಕರ್ನಾಟಕ ಆಸ್ಥಿತ್ವಕ್ಕೆ ಬಂದಿದ್ದು, ಇದಕ್ಕಾಗಿ ಗೋಕಾಕ್ ಚಳುವಳಿಯಂತಹ ಹಲವಾರು ಹೋರಾಟಗಳೇ ನಡೆದಿವೆ. ಆದರೂ ಸಹ ಇಂದಿಗೂ ಕರ್ನಾಟಕದ ರಾಜ್ಯಧಾನಿ ಸೇರಿದಂತೆ, ಜಿಲ್ಲಾ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕ ಹಾಕುವುದರಲ್ಲಿ ಹಿಂದೆಟು ಹಾಕಲಾಗುತ್ತಿದೆ. ನಾಡಿನ ಇತರ ಭಾಷೆಗಳಿಗಿಂತ ಕನ್ನಡ ಭಾಷೆಯ ನಾಮಫಲಕ ದೊಡ್ಡದಾಗಿರ ಬೇಕೆಂಬ ನಿಯಮವನ್ನು ಜಾರಿಗೆ ತಂದರೂ ಪ್ರಯೋಜನವಾಗಿಲ್ಲ. ನಿಯಮ ಪಾಲಿಸ ದವರ ವಿರುದ್ಧ ಕೇಸು ದಾಖಲಿಸಲು ಕಾರ್ಮಿಕ…
ಗುಬ್ಬಿ: ರೈತರು ಬಳಸುತ್ತಿದ್ದ ಸರ್ಕಾರಿ ರಸ್ತೆಯನ್ನೇ ಸೇರಿಸಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ದೂರು ನೀಡಿದರೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಾರಶೆಟ್ಟಿಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಜಾಣಮೌನ ತೋರುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ರಸ್ತೆ ತೆರವುಗೊಳಿಸಬೇಕು ಎಂದು ತಾಲ್ಲೂಕಿನ ಕಡಬ ಹೋಬಳಿ ಅತ್ತಿಕಟ್ಟೆ ಗ್ರಾಮಸ್ಥರು ಬುಧವಾರ ಮನವಿ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಓಡಾಡಲಾಗುತ್ತಿದ್ದ ರಸ್ತೆ ನಿತ್ಯ ಬಳಕೆ ಮಾಡಲಾಗುತ್ತಿತ್ತು. ಜತೆಗೆ ಕೃಷಿಕರು ತಮ್ಮ ಹೊಲ, ತೋಟಗಳಿಗೆ ಈ ರಸ್ತೆ ಬಳಸಿಕೊಳ್ಳುತ್ತಿದ್ದರು. ಇಲ್ಲಿನ ನಿವೇಶನವೊಂದರ ಮಾಲೀಕತ್ವಕ್ಕೆ ನ್ಯಾಯಾಲಯದ ಮೆಟ್ಟಿಲೇರಿದೆ. ಕಳೆದೆರಡು ವರ್ಷದಿಂದ ನಿವೇಶನಕ್ಕೆ ನಡೆದ ವ್ಯಾಜ್ಯ ದಿನಕಳೆದಂತೆ ಓಡಾಡುವ ರಸ್ತೆ ಅತಿಕ್ರಮಣಕ್ಕೆ ತಿರುಗಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಲಿಖಿತ ದೂರು ನೀಡಲಾಗಿತ್ತು. ಸ್ಥಳ ಪರಿಶೀಲನೆ ನಡೆಸಿದ ಅಭಿವೃದ್ದಿ ಅಧಿಕಾರಿ ಗುರುಮೂರ್ತಿ ಸರ್ಕಾರಿ ರಸ್ತೆ ಒತ್ತುವರಿ ತೆರವು ಮಾಡುವ ಮಾತುಗಳಾಡುತ್ತಲೇ ಕಾಲಹರಣ ಮಾಡಿದರು. ಇದರ ಫಲ ಅಕ್ರಮವಾಗಿ ಕಟ್ಟಡವೂ ನಿರ್ಮಾಣವಾಗಿದೆ.…
ತುಮಕೂರು: ಹೊಸ ಲೇಔಟ್ಗಳ ನಿರ್ಮಾಣದ ಜೊತೆಗೆ, ನಗರಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಆಸ್ತಿಗಳನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಟೂಡಾ ಸದಸ್ಯರ ಮೇಲಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ವಿಘ್ನೇಶ್ವರ ಕಂರ್ಪಟ್ನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ನೂತನವಾಗಿ ಟೂಡಾ ಸದಸ್ಯರಾಗಿ ನೇಮಕವಾದವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸದಸ್ಯರಿಗೆ ಅಭಿನಂದಿಸಿ ಮಾತನಾಡುತಿದ್ದ ಅವರು, ಟೂಡಾ ಆಸ್ತಿಗಳಾದ ಉದ್ಯಾನವನಗಳು, ಸಿ.ಎ.ಸೈಟಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಸದಸ್ಯರು ಮಾಡಬೇಕಾಗಿದೆ ಎಂದರು. ನಗರದ ಹಲವಾರು ಉದ್ಯಾನವನಗಳನ್ನು ಕೆಲವರು ವಿಂಗಡಿಸಿ ಮಾರಾಟ ಮಾಡಿದ್ದಾರೆ. ನಗರಪಾಲಿಕೆ ವತಿಯಿಂದ ಪಾರ್ಕುಗಳ ಅಭಿವೃದ್ಧಿಗೆ ಮುಂದಾದಾಗ ನಿವೇಶನ ಕೊಂಡುಕೊಂಡವರು ಪರದಾಡುತ್ತಿದ್ದಾರೆ. ಹಾಗಾಗಿ ಮೊದಲು ನಗರದಲ್ಲಿ ಎಷ್ಟು ಪಾರ್ಕುಗಳಿವೆ? ಯಾವ ಸ್ಥಿತಿಯಲ್ಲಿವೆ? ಎಂಬ ಅಂಕಿ ಅಂಶವನ್ನು ದಾಖಲೆಗಳ ಸಮೇತ ಸಿದ್ದಪಡಿಸುವುದಲ್ಲದೆ, ಪಾಲಿಕೆಯ ಅಧಿಕಾರಿಗಳೊಂದಿಗೆ ಸದರಿ ಜಾಗಗಳನ್ನು ಟೂಡಾ ವಶಕ್ಕೆ ಪಡೆಯಲು ಪ್ರಯತ್ನಿಸ…











