Author: News Desk Benkiyabale

ಕೊರಟಗೆರೆ:       ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ತಾಲೂಕಿನ ನಾಲ್ಕು ಗ್ರಾಪಂಗಳು ಆಯ್ಕೆಯಾಗಿದ್ದು, ಗ್ರಾಪಂಯ ಪ್ರತಿಯೊಂದು ಮನೆಯಿಂದ ಒಣ ಕಸ ಮತ್ತು ಹಸಿಕಸ ಸಂಗ್ರಹಸಿ ಅದನ್ನ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಮಾಡಲಾಗುವುದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಂದು ತಿಳಿಸಿದರು.       ತಾಲೂಕಿನ ಹೊಳವನಹಳ್ಳಿ ಗ್ರಾಪಂಯಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಕಸವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಮಾತನಾಡಿದರು.       ಸ್ವಚ್ಛ ಭಾರತ ಮಿಷನ್ ಪರಿಕಲ್ಪನೆಯಿಂದ ಗ್ರಾಮ ಗಳಲ್ಲಿ ಸಂಗ್ರಹವಾಗುವ ಒಣ ಮತ್ತು ಹಸಿ ತ್ಯಾಜ್ಯವನ್ನ ಒಂದೆಡೆ ಸಂಗ್ರಹಿಸಿ ವಿಲೇವಾರಿ ಮಾಡುವುದು ಮತ್ತು ಸಂಸ್ಕರಿಸಿ ಬೇರೆಡೆ ಸಾಗಿಸುವ ಉದ್ದೇಶದಿಂದ ಹೊಳವನಹಳ್ಳಿ ಗ್ರಾಪಂಯ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ಸಂಗ್ರಹ ನಿರ್ವಹಣೆ ಘಟಕವೊಂದನ್ನ ಸ್ಥಾಪಿಸಲಾಗುತ್ತಿದೆ.        ರಾಜ್ಯದಲ್ಲಿ ಕಸಮುಕ್ತ ಮಾಡುವ ಸಲುವಾಗಿ ಗ್ರಾಪಂಗಳಲ್ಲಿ ಕಸವಿಲೇವಾರಿ ಘಟಕವನ್ನ ಜಾರಿಗೆ ತಂದಿದ್ದು, ಒಂದು ಕಸವಿಲೇವಾರಿ ಘಟಕ ನಿರ್ಮಾಣಕ್ಕಾಗಿ ಸರಕಾರ 20 ಲಕ್ಷ ರೂ ಘೋಷಣೆ ಮಾಡಲಾಗಿದ್ದು,…

Read More

ಹುಳಿಯಾರು:      ಕೇಂದ್ರ ಸರ್ಕಾರ ವಿದ್ಯುತ್ ವಲಯ ವನ್ನು ಖಾಸಗಿಕರಣ ಮಾಡುತ್ತಿ ರುವುದನ್ನು ವಿರೋಧಿಸಿ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.      ಅಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀ ಕರಣಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದು ಇದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ದೂರಲಾಯಿತು.       ಖಾಸಗಿಕರಣದಿಂದ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೇ ಖಾಸಗೀಕರಣದ ನೀತಿ ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ವಿದ್ಯುತ್ ಇಲಾಖೆ ಲಾಭದಲ್ಲಿ ನಡೆಯುತ್ತಿದ್ದರೂ ಸಹ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವ ಕ್ರಮ ಸರಿಯಲ್ಲ. ಸರ್ಕಾರ ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಲಾಯಿತು.      ಸೆಕ್ಷನ್ ಆಫೀಸರ್ ಉಮೇಶ್ ನಾಯಕ್, ಮೂರ್ತಪ್ಪ ಸೇರಿದಂತೆ 50 ಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ಕಪ್ಪುಪಟ್ಟಿ ಧರಿಸಿ ಕೆಲಸ ಮುಂದುವರಿಸಿದರು.

Read More

ತುಮಕೂರು:       ಪರೀಕ್ಷೆಗಳನ್ನು ರದ್ದುಪಡಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು.      ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಎಫ್‍ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಮಾತನಾಡಿ ಯುಜಿಸಿ ಹಾಗೂ ಕೇಂದ್ರ-ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಕೋವಿಡ್ ಸಂದರ್ಭದಲ್ಲಿ ದೇಶವ್ಯಾಪಿ ಎಲ್ಲಾ ವಿವಿಗಳಲ್ಲೂ ಸಹ ತರಗತಿಗಳು ನಡೆದಿಲ್ಲ. ಆದ್ದರಿಂದ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯ ಮಾಡಲಾಗಿತ್ತು.      ಇದನ್ನು ಮನಗಂಡ ಯುಜಿಸಿ ಹಾಗೂ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೂ ಮುಂಬಡ್ತಿ ನೀಡುವಂತೆ ಸೂಚಿಸಿತ್ತು. ಆದರೆ ತುಮಕೂರು ವಿವಿಯು ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡದೆ ನಿರ್ಲಕ್ಷ ಮಾಡಿತ್ತು. ಹಾಗಾಗಿ ಇಲ್ಲಿಯೂ ಸಹ ಯುಜಿಸಿ ನಿಯಮಗಳನ್ನು ಪಾಲಿಸಿ ಬಿಇಡಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ, ಮುಂದಿನ ಸೆಮಿಸ್ಟರ್‍ಗೆ ಬಡ್ತಿ ನೀಡಬೇಕೆಂದು ಒತ್ತಾಯಿಸಿದರು.      ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ವಿವಿಯು ಪ್ರಾಮಾಣಿಕವಾಗಿ ಸ್ಪಂದಿಸುವ…

Read More

ಗುಬ್ಬಿ:       ಉತ್ತರ ಪ್ರದೇಶ ರಾಜ್ಯದಲ್ಲಿ ವಾಲ್ಮೀಕಿ ಜನಾಂಗದ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ನಾಲಿಗೆ ತಂಡರಿಸಿ ಬೆನ್ನುಮೂಳೆ ಮುರಿದು ವಿಕೃತಿ ಮೆರದ ಆರೋಪಿಗಳಿಗೆ ಗಲ್ಲು ಶಿಕ್ಷೆ ಅಥವಾ ಎನ್‍ಕೌಂಟರ್ ಮೂಲಕ ಉತ್ತರ ನೀಡಬೇಕು ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಪದಾಧಿಕಾರಿಗಳು ಸೋಮವಾರ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.        ಪಟ್ಟಣದ ಪ್ರವಾಸಿಮಂದಿರದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ತಲುಪಿ ಪ್ರತಿಭಟಿಸಿ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಧಿಕ್ಕರಿಸಿ ಘೊಷಣೆ ಕೂಗಿದರು. ನ್ಯಾಯಕ್ಕೆ ಆಗ್ರಹಿಸಿ ಮಾತನಾಡಿದ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜ ಅಧ್ಯಕ್ಷ ಕೆ.ಆರ್.ಗುರುಸ್ವಾಮಿ, ಉತ್ತರ ಪ್ರದೇಶದ ಹತ್ರಾಸ್ ಎಂಬ ಗ್ರಾಮದಲ್ಲಿ ನಡೆದ ಅಮಾನುಷ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸಬೇಕಿದೆ. ಈ ಮಟ್ಟದ ಅಟ್ಟಹಾಸ ಮೆರದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಗೊಂದಲ ಮೂಡುತ್ತಿರುವ ಬಗ್ಗೆ ಸಮಾಜ ಖಂಡಿಸುತ್ತದೆ ಎಂದರು.       ದೇಶದ ವಾಲ್ಮೀಕಿ ಜನಾಂಗದವರು ಆಯಾ ಪಟ್ಟಣ…

Read More

ತುಮಕೂರು:       ಭಾರತ ಚುನಾವಣಾ ಆಯೋಗವು ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ಹೊರಡಿಸಿರುವ ವೇಳಾಪಟ್ಟಿಯನ್ವಯ ಚುನಾವಣಾ ನಾಮನಿರ್ದೇಶನ ಪ್ರಕ್ರಿಯೆಗಳ ಹಿನ್ನಲೆಯಲ್ಲಿ ಅಕ್ಟೋಬರ್ 7ರಂದು ನಿಗಧಿಯಾಗಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅವರ ವಿರುದ್ಧ ಅವಿಶ್ವಾಸ ಸೂಚನಾ ಸಭೆಯನ್ನು ಅಕ್ಟೋಬರ್ 15ರ ಬೆಳಿಗ್ಗೆ 11.30 ಗಂಟೆಗೆ ಮುಂದೂಡಲಾಗಿದೆ.      ಸಭೆಯು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಗುಬ್ಬಿ :      ಪಟ್ಟಣದ ಪರಿಸರ ಕಾಪಾಡಬೇಕಾದ ಸ್ಥಳೀಯ ಪಟ್ಟಣ ಪಂಚಾಯಿತಿ ಅಧಿಕಾರಿಗಳೇ ಮುಂದೆ ನಿಂತು ತಮ್ಮ ಕಚೇರಿ ಆವರಣದಲ್ಲಿದ್ದ ಮರವೊಂದನ್ನು ಕಡಿದು ಧರೆರುಳಿಸಿರುವ ಘಟನೆ ಶನಿವಾರ ನಡೆದಿದೆ.       ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಕೆಲಸ ಮಾಡಬೇಕಾದ ಪಪಂ ಅಧಿಕಾರಿಗಳು ಕಚೇರಿ ಆವರಣದಲ್ಲಿದ್ದ ಸುಮಾರು 30 ವರ್ಷದ ಹಳೆಯ ಹೊಂಗೇಮರವನ್ನು ಕಡಿದಿದ್ದಾರೆ. ಕೆಲ ದಿನಗಳ ಹಿಂದೆ ಒಣಗಿದ ರೀತಿ ಕಾಣುವಂತೆ ಮಾಡಲಾಗಿ ನಂತರ ತುಂಡರಿಸಲಾಗಿದೆ. ಶುದ್ದ ಗಾಳಿ ಒದಗಿಸುವ ಕೆಲಸ ಸ್ಥಳೀಯ ಸಂಸ್ಥೆಯಾದ ಪಟ್ಟಣ ಪಂಚಾಯಿತಿ ಜವಾಬ್ದಾರಿ ಎನ್ನುವುದು ಮರೆತು ಇನ್ನೂ ಹಸಿಯಾದ ಮರವನ್ನು ಕಡಿಯುವ ಅಗತ್ಯವೇನಿತ್ತು ಎನ್ನುವುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.       ಬೆಳಿಗ್ಗೆ ಕಚೇರಿ ಸಮಯಕ್ಕೆ ಮುನ್ನವೇ ಧರೆಗುರುಳಿದ ಹೊಂಗೇಮರದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಪರಸರ ಕಾಳಜಿವಹಿಸಬೇಕಿದ್ದ ಅಧಿಕಾರಿಗಳು ಈ ಕೃತ್ಯವೆಸಗಿರುವುದು ಸರಿಯಲ್ಲ ಎನ್ನುವ…

Read More

 ತುಮಕೂರು:        ಸ್ಮಾರ್ಟ್ ಸಿಟಿ ವತಿಯಿಂದ ಗಾಂಧಿಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಸ್ವಚ್ಛ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.       ಗಾಂಧೀಜಿಯವರ ಕನಸಿನ ಸ್ವಚ್ಛಭಾರತ ಅಭಿಯಾನದಡಿ ನಾಮದ ಚಿಲಮೆಯಲ್ಲಿನ ಪ್ಲಾಸ್ಟಿಕ್ ಸ್ವಚ್ಛಗೊಳಿಸುವ ಮೂಲಕ ಈ ಸ್ವಚ್ಛಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಾಂಧಿಜಯಂತಿಯನ್ನು ಇನ್ನಷ್ಟು ಅರ್ಥಪೂರ್ಣವನ್ನಾಗಿಸುವ ಸಲುವಾಗಿ ಪರಿಸರ ಸ್ನೇಹಿ ಮತ್ತು ಆರೋಗ್ಯವನ್ನು ವೃದ್ಧಿಸುವ ಸೈಕಲ್ ತುಳಿಯುವ ಹವ್ಯಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ 150 ಹವ್ಯಾಸಿ ಸೈಕ್ಲಿಸ್ಟ್‍ಗಳನ್ನೊಳಗೊಂಡ ತಂಡವು ನಗರದ ಬಾಲಗಂಗಾಧರ ಸ್ವಾಮಿ ವೃತ್ತದಿಂದ ಪ್ರವಾಸಿ ತಾಣವಾದ ನಾಮದ ಚಿಲುಮೆಯವರೆಗೂ ಸೈಕ್ಲೋಥಾನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.       ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.       ಇದೇ ಸಂದರ್ಭದಲ್ಲಿ ತುಮಕೂರು ನಗರದಲ್ಲಿ ಹಸಿರೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ 150 ಸಸಿಗಳನ್ನು ಆದರ್ಶನಗರದ ಉದ್ಯಾನವನದಲ್ಲಿ ಮತ್ತು ವರ್ತುಲ ರಸ್ತೆ ಬದಿಯಲ್ಲಿ ನೆಡಲಾಯಿತಲ್ಲದೆ,…

Read More

ಹುಳಿಯಾರು:       ಚಿಕ್ಕ ನಾಯಕನಹಳ್ಳಿ ತಾಲೂಕಿನ ಹುಳಿಯಾರು ಹಾಗೂ ಶೆಟ್ಟಿಕೆರೆ ಗ್ರಾಮಗಳ ಹವ್ಯಾಸಿ ಚಾರಣಿಗರು ಪ್ರಸಕ್ತ ಸಾಲಿನ ಚಾರಣವನ್ನು ಭಾರತದ ಹತ್ತು ಎತ್ತರದ ಜಲಪಾತಗಳಲ್ಲಿ ಒಂದಾದ ಬರ್ಕಣ ಜಲಪಾತಕ್ಕೆ 2 ದಿನಗಳ ಚಾರಣ ಶಿಬಿರವನ್ನು ಅಕ್ಟೋಬರ್ 3 ಮತ್ತು 4 ರಂದು ಹಮ್ಮಿಕೊಂಡಿದ್ದಾರೆ.       ದಶಕದ ಹಿಂದೆ ನೆಹರು ಯುವ ಕೇಂದ್ರ ಸಕಲೇಶಪುರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏರ್ಪಡಿಸಿದ್ದ ಸಾಹಸ ಚಾರಣ ಶಿಬಿರದಿಂದ ಈ ತಂಡದ ಚಾರಣದ ಹವ್ಯಾಸ ಆರಂಭವಾಗಿದ್ದು ಪ್ರತಿವರ್ಷ ಒಂದು ಚಾರಣದಂತೆ ಇಲ್ಲಿಯವರೆವಿಗೆ ಇಪ್ಪತ್ತಕ್ಕೂ ಹೆಚ್ಚು ಚಾರಣ ಶಿಬಿರ ಸಂಘಟಿಸಿದೆ.       ಇವುಗಳಲ್ಲಿ ಬುರುಡೆಜೋಗ, ಅನಡ್ಕ, ಬಲ್ಲಾಳರಾಯನದುರ್ಗ, ಅರಿಶಿನಗುಂಡಿ, ಹಿಡ್ಲುಮನೆ, ದೇವಕಾರು, ಭಂಡಾಜೆ, ಕೊಡಚಾದ್ರಿ, ಕೂಡ್ಲುತೀರ್ಥ, ಬೆಳ್ಳಿಗುಂಡಿ ಪ್ರಮುಖವಾಗಿದ್ದಾಗಿದ್ದು ಬೀಚ್ ಟ್ರಕ್, ಕೇರಳದ ವಹಿನಾಡು ಚಾರಣ ವಿಶೇಷವಾಗಿದ್ದಾಗಿದೆ.       ಸರ್ಕಾರದ ಹಾಗೂ ದಾನಿಗಳ ಧನಸಹಾಯ ಪಡೆಯದೆ ತಮ್ಮ ಸ್ವಂತ ಖರ್ಚಿನಲ್ಲಿ ಚಾರಣ ಕೈಗೊಳ್ಳುತ್ತಿರುವ ಈ ತಂಡ ಈ ಭಾರಿ…

Read More

ತುಮಕೂರು:       ತುಮಕೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಗುರುವಾರ ಬೆಳಗಿನ ಜಾವ ಕಳ್ಳತನವಾಗಿದ್ದು ಕಛೇರಿಯ ಬೀಗ ಮುರಿದು ಟಿವಿ ಕದ್ದೊಯ್ಯಲಾಗಿದ್ದು, ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.       ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಮಾಲು ಸಮೇತ ಬಂಧಿಸಲಾಗಿದ್ದು, ಆರೋಪಿ ಮಂಜುನಾಥ್ ಆಲಿಯಾಸ್ ಕಳ್ಳಮಂಜ, ಚೆನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯ ವಾಸಿ. ಈತ ವೃತ್ತಿನಿರತ ಕಳ್ಳತನದ ಆರೋಪಿಯಾಗಿದ್ದು, ತುಮಕೂರು ನಗರ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಆರೋಪಿಯ ಮೇಲೆ ಈ ಹಿಂದೆ ಪ್ರಕರಣಗಳು ದಾಖಲಾಗಿದೆ. ಹೊಸಬಡಾವಣೆ ಪೊಲೀಸ್ ಠಾಣೆ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಕಳ್ಳಮಂಜನ ವಿರುದ್ಧ ಸುಮಾರು 15 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.       ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಕಳ್ಳತನ ಪ್ರಕರಣದ ವಿಚಾರವಾಗಿ ತುಮಕೂರು ನ್ಯಾಯಾಲಯಕ್ಕೆ ಬಂದಿದ್ದು, ನ್ಯಾಯಾಲಯದಲ್ಲಿ ಬುಧವಾರ ಎಂದಿನಂತೆ ತನ್ನ…

Read More

 ತುಮಕೂರು:       ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಧಿಸೂಚನೆಯನ್ನು ಅಕ್ಟೋಬರ್ 9ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಅದರಂತೆ ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 17, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 19 ಕೊನೆಯ ದಿನವಾಗಿರುತ್ತದೆ. ನವೆಂಬರ್ 3ರಂದು ಚುನಾವಣಾ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದರು.       ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಧುಗಿರಿ ಉಪವಿಭಾಗದ ಉಪವಿಭಾಗಾಧಿಕಾರಿ ಡಾ: ನಂದಿನಿದೇವಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಶಿರಾ ತಾಲ್ಲೂಕಿನ ತಹಶೀಲ್ದಾರ್ ನಾಹೀದಾ ಝಂ ಝಂ ಸಹಾಯಕ…

Read More