Author: News Desk Benkiyabale

ಗುಬ್ಬಿ:       ದೇವಾಲಯದ ಬಾಗಿಲು ಮುರಿದು ಹುಂಡಿ ಹಣವನ್ನು ದೋಚಿದ ಕಳವು ಪ್ರಕರಣ ತಾಲ್ಲೂಕಿನ ಕಸಬ ಹೋಬಳಿ ಮಡೇನಹಳ್ಳಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದಿದೆ.       ಗ್ರಾಮದ ಆರಾಧ್ಯ ದೈವ ಮಹಾಲಿಂಗೇಶ್ವರ ದೇವಾಲಯದಲ್ಲಿ ಅಲವಡಿಸಲಾದ ಹುಂಡಿಯಲ್ಲಿನ ಹಣ ಮಾತ್ರ ದೋಚಲಾಗಿದೆ. ಸುಮಾರು 30 ಸಾವಿರ ರೂಗಳ ಅಂದಾಜು ದೇವಾಲಯ ಸಮಿತಿ ತಿಳಿಸುತ್ತಿದೆ. ಈ ಹಿಂದೆ ಕೂಡಾ ಹುಂಡಿ ಕಳವು ನಡೆದು ಅಂದಾಜು 50 ಸಾವಿರ ರೂ ದೋಚಲಾಗಿತ್ತು. ಎರಡು ಬಾರಿ ಕಳ್ಳತನದಲ್ಲೂ ದೇವಾಲಯದಲ್ಲಿರುವ ಇನ್ನಿತರ ಚಿನ್ನಾಭರಣ, ಬೆಳ್ಳಿ ಸಾಮಾಗ್ರಿಗಳ ಕಳ್ಳತನವಾಗಿಲ್ಲ. ಈ ಬಗ್ಗೆ ಸೂಕ್ಷ್ಮತೆ ಅರಿತು ಪೊಲೀಸರು ಚುರುಕಿನ ತೀವ್ರ ತನಿಖೆ ನಡೆಸಿ ಖದೀಮರನ್ನು ಬಂದಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.       ಸ್ಥಳ ಮಹಜರು ನಡೆಸಿದ ಗುಬ್ಬಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಗುಬ್ಬಿ:       ಅಡುಗೆ ಅನಿಲ ಸೋರಿಕೆಯಿಂದ ಹಬ್ಬಿದ ಬೆಂಕಿ ಕ್ಷಣಾರ್ಧದಲ್ಲಿ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳನ್ನು ಸುಟ್ಟು ಕರಕಲಾಗಿಸಿದ ಘಟನೆ ಮಂಗಳವಾರ ಪಟ್ಟಣದ ಸಿಡಿಲು ಬಸವೇಶ್ವರ ದೇವಾಲಯದ ಬಳಿ ನಡೆದಿದೆ.       ಶಿಕ್ಷಕ ನಿಂಗಣ್ಣ ಅವರ ಮನೆಯಲ್ಲಿ ಬೆಳಿಗ್ಗೆ ಎಂದಿನಂತೆ ಅಡುಗೆ ಸಿದ್ದ ಪಡಿಸುತ್ತಿದ್ದ ಸಂದರ್ಭದಲ್ಲಿ ಸಿಲೆಂಡರ್ ಮೂಲಕ ಅನಿಲ ಸೋರಿಕೆಯಾಗಿ ಬೆಂಕಿ ಕೆನ್ನಾಲಿಗೆ ಅಡುಗೆಮನೆಯನ್ನು ಪಸರಿಸಿದೆ. ನಂತರ ಶಿಕ್ಷಕ ನಿಂಗಣ್ಣ ಸಿಲೆಂಡರ್ ಹೊರ ತರುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಿಲ್ಲ. ಕ್ಷಣಾರ್ಧದಲ್ಲಿ ಮನೆಯ ಹೊರಾಂಡಕ್ಕೂ ಹಬ್ಬಿದ ಬೆಂಕಿಗೆ ಟಿವಿ, ಫ್ರಿಡ್ಜ್, ಬೀರು ಕೂಡಾ ಆಹುತಿಯಾಗಿದೆ. ಬೀರುವಿನಲ್ಲಿದ್ದ 10 ಸಾವಿರ ನಗದು ಹಣದ ಜತೆ ಬೆಲೆಬಾಳುವ ವಸ್ತ್ರಗಳು ಸುಟ್ಟು ಕರಕಲಾಗಿದೆ.       ಶಿಕ್ಷಕ ನಿಂಗಣ್ಣ ಮತ್ತು ಪುತ್ರ ಇಬ್ಬರೇ ಮನೆಯಲ್ಲಿ ಅಡುಗೆ ಕೆಲಸಕ್ಕೆ ಮುಂದಾಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಾರು 1.20 ಲಕ್ಷ ರೂಗಳ ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ. ಅದೃಷ್ಟವಶಾತ್ ಸಿಲಿಂಡೆರ್ ಸ್ಫೋಟವಾಗಿಲ್ಲ.…

Read More

ತುಮಕೂರು:      ಜಿಲ್ಲಾ ಪಂಚಾಯತ್ ಹಂತದಲ್ಲಿ ಬಗೆಹರಿಸಬಹುದಾದ ಬೇಡಿಕೆಗಳನ್ನು ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಗ್ರಾಮ ಪಂಚಾಯತ್ ನೌಕರರು ಹಿಂತೆಗೆದುಕೊಂಡಿದ್ದಾರೆ.      ಸೆಪ್ಟೆಂಬರ್ 22ರಿಂದ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2 ಗ್ರಾಮ ಪಂಚಾಯತ್ ನೌಕರರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈಡೇರಿಸಬಹುದಾದ ಬೇಡಿಕೆಗಳ ಸಂಬಂಧ ಸೆಪ್ಟೆಂಬರ್ 30ರಂದು ಸಭೆ ಕರೆಯುವುದಾಗಿ ತಿಳಿಸಿದರು.       ಗ್ರಾಮ ಪಂಚಾಯ್ತಿ ನೌಕರರ ಬೇಡಿಕೆಗಳ ಸಂಬಂಧ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿಗಳು ಕೂಡಲೇ ಮಾಹಿತಿಯನ್ನು ತಮಗೆ ರವಾನಿಸಬೇಕೆಂದು ಪತ್ರ ಬರೆಯಲಾಗಿದೆ ಎಂದು ಪತ್ರದ ಪ್ರತಿಯೊಂದನ್ನು ಸಂಘದ ಮುಖಂಡರಿಗೆ ನೀಡಿದರು.       ಇದೇ ವೇಳೆ ಮಾತನಾಡಿ ಸಂಘದ ಜಿಲ್ಲಾಧ್ಯಕ್ಷ ಎನ್.ಕೆ.ಸುಬ್ರಮಣ್ಯ, ಇಎಫ್‍ಎಂಎಸ್ ಸೇರ್ಪಡೆ, ಉಪಧನ, ಬಾಕಿ ವೇತನ, ತೆರಿಗೆ ಸಂಗ್ರಹದಲ್ಲಿ 40ರಷ್ಟು…

Read More

ಹುಳಿಯಾರು:       ಕೆಲಸ ಎಷ್ಟಾದ್ರೂ ಕೇಳಿ, ಶಕ್ತಿ ಮೀರಿ ಮಾಡ್ತೀನಿ. ಆದರೆ, ಹಣಕೇಳೋಕೆ ನನ್ನ ಹತ್ತಿರ ಅವಕಾಶ ಇಲ್ಲಾ. ಇದೊಂದೇ ಕಾರಣಕ್ಕೆ ಕೆಲವರು ನನ್ನ ಬೈಕೊಂಡ್ ಓಡಾಡುತ್ತಾರೆ. ಹೀಗಂತ ಹೇಳಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ.       ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಿಡ್ಲೆಕೋಣ ಗ್ರಾಮದಲ್ಲಿನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಮಾಡಿ ಮಾತನಾಡಿದರು      ಸಚಿವರು ನಾನು ಯಾರ ಜೇಬಿಗೂ ಕೈ ಇಟ್ಟವನಲ್ಲ. ಅಡ್ಡದಾರಿ ಹಿಡಿದು ದುಡ್ದು ಮಾಡಿ ರಾಜಕಾರಣ ಮಾಡೋ ಜಾಯಮಾನ ನನ್ನದಲ್ಲ. ಇದೇ ಸಿದ್ಧಾಂತ ಮೈಗೂಡಿಸಿಕೊಂಡು 30 ವರ್ಷ ರಾಜಕಾರಣದಲ್ಲಿ ಹೆಜ್ಜೆ ಸವೆಸಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಎಂದೆಂದಿಗೂ ಹೀಗೆಯೇ ಮುಂದುವರಿಯಲಿ. ಮತ ನೀಡಿ ಚುನಾಯಿಸಿದ ನಿಮ್ಮ ಋಣವನ್ನ ಪ್ರಾಮಾಣಿಕವಾಗಿಯೇ ತೀರಿಸುವೆ ಎಂದು ಭಾವುಕರಾಗಿ ನುಡಿದರು.       ಯಾವುದೇ ನೀರಾವರಿ ಯೋಜನೆ ಕಾಣದ ಬುಕ್ಕಾ ಪಟ್ಟಣ ಹೋಬಳಿಗೆ ಭದ್ರಾಮೇಲ್ದಂಡೆ ಯೋಜ ನೆಯಡಿಯಲ್ಲಿ ನೀರು…

Read More

ತುಮಕೂರು:      ಪದೋನ್ನತಿ ಹೊಂದಿ ರುವ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹೆಚ್.ಸವಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎನ್. ಸೌಭಾಗ್ಯ ಅವರಿಗೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಸೋಮವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.      ಸವಿತಾ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರರಾಗಿ ಹಾಗೂ ಸೌಭಾಗ್ಯ ಅವರು ಸಿದ್ದರಬೆಟ್ಟ ಶ್ರೀ ಸಿದ್ದೇಶ್ವರ ದೇವಾಲಯದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ.       ಬೀಳ್ಕೊಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಪದೋನ್ನತಿ ಹೊಂದಿದವರು ಸಲ್ಲಿಸಿದ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದೆಯೂ ಇದೇ ರೀತಿ ಉತ್ತಮ ಸೇವೆ ಸಲ್ಲಿಸಬೇಕೆಂದು ಶುಭ ಹಾರೈಸಿದರು.       ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಯಡಿಯೂರು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೈ.ಎಸ್.…

Read More

ಹುಳಿಯಾರು:       ಹುಳಿಯಾರು ಪಟ್ಟಣದ ಭೀಮಮ್ಮನ ದೇವಾಲಯದ ಬಳಿ ಇಟ್ಟಿಗೆ ತುಂಬಿದ ಲಾರಿ ಅಪಘಾತಕ್ಕೀಡಾಗಿ ಕೂದಳೆಲೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ.       ಶಿರಾ-ಹುಳಿಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟಿಗೆ ತುಂಬಿದ ಲಾರಿ ಪಟ್ಟಣದ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಉರುಳಿದೆ. ಒಂದಿಂಚು ಮುಂದೆ ಬಿದ್ದಿದ್ದರೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುತ್ತಿತ್ತು.      ಅದು ಹೈವೋಲ್ಟೇಜ್ ಇರುವ ಲೈನ್ ಆಗಿರುವುದರಿಂದ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶತ್ ಕಂಬದ ಸಮೀಪದ ಗುಂಡಿಗೆ ಬಿದ್ದಿದೆ. ಲಾರಿ ತಲೆಕೆಳಗಾಗಿ ಬಿದ್ದಿದ್ದು ಇಟ್ಟಿಗೆ ಚಲ್ಲಾಪಿಲ್ಲಿಯಾಗಿ ಬಿದಿದ್ದು ಚಾಲಕ, ಕ್ಲೀನರ್ ಅನಾಹುತದಿಂದ ಪಾರಾಗಿದ್ದಾರೆ.

Read More

ಗುಬ್ಬಿ:       ಹೆದ್ದಾರಿ ರಸ್ತೆ ಬದಿ ಯಲ್ಲಿ ನಿಂತಿದ್ದ ಟಿಪ್ಪರ್ ಲಾರಿ ಯ ಹಿಂಬದಿಗೆ ಗುದ್ದಿದ್ದ ಸರ್ಕಾರಿ ಬಸ್ ಸಂಪೂರ್ಣ ಜಖಂಗೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಮುಂಜಾನೆ ನುಸುಕಿನಲ್ಲಿ ತಾಲ್ಲೂಕಿನ ನಿಟ್ಟೂರು ಬಾಗೂರು ಬಳಿ ರಾ.ಹೆ 206 ರಲ್ಲಿ ನಡೆದಿದೆ.       ಬಸ್‍ನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರು ತರೀಕೆರೆ ತಾಲ್ಲೂಕು ತಡಿಗೆಬಯಲು ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದ ಶಿವಮೂರ್ತಿ(24) ಹಾಗೂ ಪೂಜಾ(20) ಮೃತರಾದ ದುರ್ದೈವಿಗಳು. ಬಸ್ ಚಾಲಕನ ಅಜಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿ ಗಮನಿಸದೇ ವೇಗವಾಗಿ ಬಂದು ಗುದ್ದಿದ ಚಾಲಕ ಪಾರಾಗಿದ್ದು, ಎಡ ಬದಿಯಲ್ಲಿ ಕುಳಿತಿದ್ದ ಈ ಇಬ್ಬರು ಬಲಿಯಾದರು.       ಶಿವಮೂರ್ತಿ ಮತ್ತು ಪೂಜಾಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾದೇ ಈರ್ವರು ಮೃತಪಟ್ಟರು. ಉಳಿದಂತೆ ಏಳು ಮಂದಿಗೆ ತೀವ್ರ ಸ್ವರೂಪದ ಗಾಯಗೊಂಡವರನ್ನು ಬೆಂಗಳೂರು ಮತ್ತು ತುಮಕೂರು ಆಸ್ಪತ್ರೆಯಲ್ಲಿ…

Read More

ತುಮಕೂರು :        ಮೋಟಾರ್ ಸೈಕಲ್ ಗಳನ್ನು ಕಳವು ಮಾಡುತ್ತಿದ್ದ ಕಳ್ಳನನ್ನು ಬಂಧಿಸಲಾಗಿದೆ.        ಆರೋಪಿಯನ್ನು ಜಗನ್ನಾಥ ಗೌಡ (28 ವರ್ಷ) ಎಂದು ಗುರುತಿಸಲಾಗಿದೆ.         ಸೆ. 20 ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆ ಪಿ.ಎಸ್.ಐ. ಮಂಜುಳ ರವರು ಹಿರೇಹಳ್ಳಿ ಕೈಗಾರಿಕಾ ಪ್ರದೇಶದದಲ್ಲಿ ತನ್ನ ಸಿಬ್ಬಂದಿಗಳೊಂದಿಗೆ ಗಸ್ತು ಮಾಡುತ್ತಿರುವಾಗ ಪಂಡಿತನಹಳ್ಳಿ ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ಒಬ್ಬ ಅಸಾಮಿಯು ಅನುಮಾನಸ್ಪದವಾಗಿ ಪೊಲೀಸ್ ಜೀಪನ್ನು ನೋಡಿ ಬೈಕನ್ನು ತಿರುಗಿಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಹಿಡಿದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಆರೋಪಿಯು ಶಿರಾ, ಕ್ಯಾತ್ಸಂದ್ರ, ಮತ್ತು ಬೆಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಸುಮಾರು 1 ಲಕ್ಷ ರೂ ಮೌಲ್ಯದ ಒಟ್ಟು 03 ಮೋಟಾರ್ ಸೈಕಲ್‌ಗಳನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿರುತ್ತದೆ.       ಸದರಿ ಆರೋಪಿಯು ಈ ಹಿಂದೆ 2018 ನೇ ಸಾಲಿನಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ ಬಾಗಿಯಾಗಿಯಾಗಿವುದಾಗಿ ತಿಳಿದು ಬಂದಿರುತ್ತದೆ.…

Read More

ತುಮಕೂರು:       ಒಳಮೀಸಲಾತಿ ಪರ್ಗೀಕರಣ ಸಂಬಂಧ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನ್ಯಾ. ಎ.ಜೆ. ಸದಾಶಿವ ಆಯೋಗ ಜಾರಿ ಹಕ್ಕೋತ್ತಾಯ ಸಮಿತಿ ವತಿಯಿಂದ ನಗರದಲ್ಲಿ ಅಹೋರಾತ್ರಿ ಪ್ರತಿಭಟನೆಯಲ್ಲಿ ನಡೆಸಲಾಗುತ್ತಿದೆ.       ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಸಮಿತಿಯ ಪದಾಧಿಕಾರಿಗಳು ಒಳಮೀಸಲಾತಿ ವರ್ಗೀಕರಣಕ್ಕಾಗಿ ಎ.ಜೆ. ಸದಾಶಿವ ಆಯೋಗದ ವರದಿಯ ಶಿಫಾರಸ್ಸುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅನುಷ್ಟಾನಗೊಳಿಸಬೇಕು ಎಂದು ಆಗ್ರಹಿಸಿದರು. ಈ ಅಹೋರಾತ್ರಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು, ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿಗಾಗಿ ಬಹಳ ದಿನದಿಂದ ಹೋರಾಟ ನಡೆಯುತ್ತಲೇ ಇದೆ. ನ್ಯಾಯುಯತ ಬೇಡಿಕೆಗಳಿಗೆ ಯಾವುದೇ ಸರ್ಕಾರ ಸ್ಪಂದನೆ ಮಾಡದಿದ್ದರೆ ಆ ಸಮುದಾಯಗಳಿಗೆ ಆಗುವ ಅನ್ಯಾಯವನ್ನು ಸರಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಆದಷ್ಟು ಬೇಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾಶಿವ ಆಯೋಗದ…

Read More

ತುಮಕೂರು:        ಕೊರೊನಾ ವಾರಿಯರ್ಸ್ ಎಂದೇ ಹೆಸರಾದ ರಾಜ್ಯದ 42,000 ಆಶಾ ಕಾರ್ಯಕರ್ತೆಯರು ಎರಡು ತಿಂಗಳ ಹಿಂದೆ 20 ದಿನಗಳ ನಿರಂತರ ಹೋರಾಟ ಮಾಡಿದ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡಲಾಗುವುದು ಎಂಬ ಭರವಸೆ ನೀಡಿ, ಇದೀಗ ಎರಡು ತಿಂಗಳು ತಾಳ್ಮೆಯಿಂದ ಕಾಯ್ದು ಕೊರೊನಾ ವಿರುದ್ಧದ ಹೋರಾಟದಲ್ಲಿ ಕರ್ತವ್ಯನಿರತರಾದ ಆಶಾಗಳಿಗೆ ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಮತ್ತೇ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಹೋರಾಟಕ್ಕಿಳಿಯಲು ನಿರ್ಧರಿಸಿದ್ದಾರೆ.       ಅಂತೆಯೇ ರಾಜ್ಯದಾದ್ಯಂತ ಎಲ್ಲಾ ಶಾಸಕರು, ಸಂಸದರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಆಶಾ ಪರ ಧ್ವನಿಯೆತ್ತುವಂತೆ ಆಗ್ರಹಿಸಲಾಗುವುದು. ಹಾಗೆಯೇ ದಿನಾಂಕ 21 ರಿಂದ 10 ದಿನಗಳ ಕಾಲ ನಡೆಯುವ ವಿಧಾನಸಭೆಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವಿವಿಧ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು.       ಕಳೆದ ಸುಮಾರು 10-11 ವರ್ಗಗಳಿಂದ ಆಶಾ ಕಾರ್ಯಕರ್ತೆಯರು…

Read More