ಶಿರಾ: ಚುನಾವಣೆ ಘೋಷಣೆಗೂ ಮುನ್ನವೇ ರಾಜ್ಯದ ಗಮನಸೆಳೆಯುತ್ತಿರೋ ತುಮಕೂರಿನ ಶಿರಾ ಕ್ಷೇತ್ರ ಮತ್ತಷ್ಟು ರಂಗೇರಿದೆ. ಈವರೆಗೂ ಖಾತೆಯೇ ತೆರೆಯದ ಬಿಜೆಪಿ ಪಕ್ಷ ಈ ಬಾರಿಯ ಉಪಚುನಾವಣೆಯನ್ನ ಗಂಭೀರವಾಗಿ ಪರಿಗಣಿಸಿದಂತಿದೆ. ಶಿರಾ ಕ್ಷೇತ್ರವನ್ನ ತಮ್ಮದಾಗಿಸಿಕೊಳ್ಳಲು ಪಣತಟ್ಟಿರೋ ಮೂರು ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿವೆ. ಶಿರಾಗೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಶಿರಾ ಪಟ್ಟಣದ ದೇವಮೂಲೆಯಲ್ಲಿರೋ ಕೋಟೆ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಬೂತ್ ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ಈ ಉಪಚುನಾವಣೆಯನ್ನ ಗಂಭೀರವಾಗಿ ಪರಿಗಣಿಸಿದ್ದು, ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಉಪಚುನಾವಣೆಗೆ ಬಿಜೆಪಿ ಸಜ್ಜಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕೆ.ಆರ್.ಪೇಟೆಯಲ್ಲಿ ವಿಜಯ ಸಾಧಿಸಿದಂತೆ ಶಿರಾದಲ್ಲೂ ಖಾತೆ ತೆರೆಯಲ್ಲಿದ್ದು, ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲೋದಿಲ್ಲ ಎಂದು ವಿರೋಧ ಪಕ್ಷ ಬೊಬ್ಬೆ ಹೊಡೆದಿದ್ರು, ನಮ್ಮನ್ನ ಲೆಕ್ಕಕೆ ತೆಗೆದುಕೊಂಡಿರಲಿಲ್ಲ. ಮುಖಂಡರು, ಕಾರ್ಯಕರ್ತರು ಎಲ್ಲಾ ಒಗ್ಗಟ್ಟಾಗಿ ಪ್ರಯತ್ನ ಮಾಡಿದ್ವಿ. ಕೆ.ಆರ್.ಪೇಟೆಯಲ್ಲಿ 10…
Author: News Desk Benkiyabale
ಹುಳಿಯಾರು: ಹುಳಿಯಾರಿನ ಪಾನಿಪುರಿ ಮಂಜಣ್ಣನ ಮಗ ಎಂ.ರಾಘವೇಂದ್ರ (23) ಹಾಗೂ ಬಿಜಾಪುರದ ಬಸವರಾಜು (22) ಎಂಬಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿನ ಘಟನೆ ತಿಪಟೂರಿನ ಕೋಟನಾಯಕನಹಳ್ಳಿ ಬಳಿ ಭಾನುವಾರ ಸಂಜೆ ಜರುಗಿದೆ. ಯಗಟಿಯಲ್ಲಿ ಮದುವೆ ಕಾರ್ಯಕ್ರಮಕ್ಕೆಂದು ಬೊಲೆರೋ ವಾಹನದಲ್ಲಿ ತಾಯಿ ಗೌರಮ್ಮ ಮತ್ತು ಸಂಬಂಧಿ ಸುಮಾ ಅವರೊಂದಿಗೆ ತೆರಳಿದ್ದರು. ಇವರು ಮದುವೆ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ತಿಪಟೂರಿನಲ್ಲಿ ಚಾಲಕ ಮುತ್ತು ತನ್ನ ಸಂಬಂಧಿ ಬಿಜಾಪುರದ ಬಸವರಾಜು ಅವರನ್ನು ಹತ್ತಿಸಿಕೊಂಡಿದ್ದಾರೆ. ಈ ಐವರೂ ಹುಳಿಯಾರಿಗೆ ಬರುತ್ತಿರುವಾಗ ಕೋಟನಾಯಕನಹಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಹುಳಿಯಾರಿನ ಪಾನಿಪುರಿ ರಾಘವೇಂದ್ರ ಹಾಗೂ ಬಿಜಾಪುರದ ಬಸವರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಮುತ್ತು ಪರಾರಿಯಾಗಿದ್ದು ಗೌರಮ್ಮ ಹಾಗೂ ಸುಮಾ ಅವರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು ತಿಪಟೂರಿನ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತದ ಬೀಕರತೆ ಹೇಗಿತ್ತೆಂದರೆ ಕೆಎಸ್ಆರ್ಟಿಸಿ ಬಸ್ ಮುಭಾಂಗ ಹಾಗೂ ಬೊಲೇರೋ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ…
ಮಧುಗಿರಿ : ಕೆಟ್ಟು ನಿಂತಿದ್ದ ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಬೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಾಲೂಕಿನ ಮಿಡಿಗೇಶಿ ಹೋಬಳಿ ಚಂದ್ರಬಾವಿ ಬಳಿ ಘಟನೆ ನಡೆದಿದ್ದು, ಸೀಮಾಂದ್ರದ ಎನ್.ಆರ್. ರೊಪ್ಪಂ ಗ್ರಾಮದ ನರಸಿಂಹಮೂರ್ತಿ(32), ಪಾವಗಡ ತಾಲೂಕಿನ ನಲ್ಲಿಗಾನಹಳ್ಳಿಯ ದುರ್ಗಪ್ಪ(21), ನರಸಮ್ಮ(35) ಸ್ಥಳದಲ್ಲೇ ಮೃತಪಟ್ಟವರು. ಗೋವಿಂದಪ್ಪ, ಅಲುವೇಲಮ್ಮ, ಮಾರಪ್ಪ ಗಂಬೀರವಾಗಿ ಗಾಯಗೊಂಡಿದ್ದು, ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಗೋಪಾಲ್ ಎಂಬುವವರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಇವರೆಲ್ಲರೂ ಇನ್ನೋವಾ ವಾಹನದಲ್ಲಿ ಬೆಂಗಳೂರಿಗೆ ಹೋಗಿ ಪಾವಗಡಕ್ಕೆ ವಾಪಾಸ್ಸಾಗುವಾಗ ಘಟನೆ ನಡೆದಿದ್ದು, ಮಿಡಿಗೇಶಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿತೃವಾಕ್ಯ ಪರಿಪಾಲನೆಗಾಗಿ ರಾಮ ಕಾಡಿಗೆ ಹೋದ. ಪ್ರಪಂಚದಾದ್ಯಂತ ರಾಮನಿಗೆ ಬಹುದೊಡ್ಡ ಹೆಸರು ಬಂತು. ಮಾತೃವಾಕ್ಯ ಪರಿಪಾಲನೆಗಾಗಿ ಗಣಪತಿ ತಲೆದಂಡವಾಗಿಸಿಕೊಂಡ. ವಿಶ್ವದಾದ್ಯಂತ ಗಣಪತಿಗೆ ದೊಡ್ಡ ಹೆಸರು ಬಂತು. ಆತ ಪ್ರಥಮಪೂಜಿತನಾದ, ಪ್ರಥಮವಂದಿತನಾದ. ಮಾದಕ ಪದ-ಪದಾರ್ಥಗಳ ಗುಲಾಮರಾಗಿ, ಮತ್ತವುಗಳ ದಾಸಾನುದಾಸರಾಗಿ ಹೋಗಿರುವ ಮತ್ತು ಮಾದಕದ್ರವ್ಯಗಳ ಸೇವನೆಯನ್ನು ದಿನನಿತ್ಯದ ಜೀವನದಲ್ಲಿ ಕಡ್ಡಾಯವಾಗಿಸಿಕೊಂಡಿರುವ ಯುವಕರನ್ನು ಕುರಿತು ನಾವು ಒಂದು ಪ್ರಶ್ನೆಯನ್ನು ಕೇಳಲಿಚ್ಛಿಸುತ್ತೇವೆ. “ಅದಾರ ವಾಕ್ಯಪರಿಪಾಲನೆಗಾಗಿ ನೀವು ನಮ್ಮ ಬದುಕನ್ನು ಕಾಡಾಗಿಸಿಕೊಳ್ಳುತ್ತಿದ್ದೀರಿ? ಅದಾವ ಪುರುಷಾರ್ಥಕ್ಕಾಗಿ ನೀವು ನಿಮ್ಮ ತಲೆಯನ್ನು ತಲೆದಂಡವಾಗಿಸಿಕೊಳ್ಳುತ್ತಿದ್ದೀರಿ? ಅದಾವ ಕಾರಣಕ್ಕಾಗಿ ನೀವು ನಿಮ್ಮ ಬದುಕಿಗೆ ನಶಾದೀಕ್ಷೆಯನ್ನು ಕೊಟ್ಟುಕೊಂಡಿದ್ದೀರಿ? ನೀವು ಡ್ರಗ್ಸ್ ದಾಸರಾಗಿ, ನಶಾದಾಸರಾಗಿ ದೈನಂದಿನ ಬದುಕಿನೊಂದಿಗೆ ಸಹಜವಾಗಿರದೆ ಬೇರೊಂದು ಲೋಕದಲ್ಲಿ ಕಳೆದುಹೋಗಿರುವುದನ್ನು ಕಂಡು ನಿಮ್ಮ ತಂದೆ, ತಾಯಿಗಳ ಜೀವನ ಅದೆಷ್ಟೊಂದು “ವಿಲವಿಲ’’ ಎನ್ನುತ್ತದೆ ಎಂಬ ಅರಿವು ನಿಮಗಿದೆಯಾ?’’ ನೀವು ವ್ಯಸನಾಧೀನರಾದಾಗ, ನೀವು ಮಾದಕದ್ರವ್ಯಗಳ ದಾಸಾನುದಾಸರಾದಾಗ ನಿಮ್ಮ ತಂದೆ, ತಾಯಿಗಳು ಆ ದಶರಥ ಮಹಾರಾಜ ಶ್ರೀರಾಮಚಂದ್ರ ಕಾಡಿಗೆ ಹೋಗುವಾಗ ಅದೆಷ್ಟು…
ತುಮಕೂರು: ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ವದಂತಿ ಹಬ್ಬಿಸಿದ್ದ ಹೇಮಂತ್ ಕುಮಾರ್ ಎಂಬ ಕಿಡಿಗೇಡಿಯನ್ನು ಕುಟುಕು ಕಾರ್ಯಾಚರಣೆ ಮಾಡಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೋಲಿಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಕಳೆದ 3 – 4 ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲೊಂದಾದ ಫೇಸ್ಬುಕ್ ನಲ್ಲಿ ಹೇಮಂತ್ ಗೌಡ ಎನ್ನುವ ಹೆಸರಿನ ಕಿಡಿಗೇಡಿಯೊಬ್ಬ ಕೆಲವು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದು, ತುಮಕೂರು ನಗರದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಸಮುದಾಯದವರಾದ ಮಾಜಿ ಶಾಸಕ ರಫೀಕ್ ಅಹ್ಮದ್ ಸಂಬಂಧಿಕರ ಮಗನಿಂದ ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ ಎಂಬ ಸುಳ್ಳು ವದಂತಿಯನ್ನು ಬಿತ್ತರಿಸುತ್ತಿದ್ದ. ಈ ಸುದ್ದಿ ನನ್ನ ಗಮನಕ್ಕೆ ಬಂದ ಕೂಡಲೇ ಕ್ಯಾತ್ಸಂದ್ರ ಪೋಲಿಸ್ ಠಾಣೆಯಲ್ಲಿ ಮತ್ತು ನಗರದ ಸೈಬರ್ ಕ್ರೈಂ ಪೋಲೀಸ್ ಠಾಣೆಯಲ್ಲಿ ಅವನ ವಿರುದ್ಧ ಕಾನೂನು ಕ್ರಮಗಳನ್ನು ತಗೆದುಕೊಳ್ಳುವಂತೆ ದೂರು ದಾಖಲಿಸಿದ್ದೆವು. ನಾವು ನೀಡಿದ ದೂರಿನನ್ವಯ ಪ್ರಕರಣದ ಸತ್ಯಾಸತ್ಯತೆಯ…
ತುಮಕೂರು: ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಪಟ್ಟಿಯಲ್ಲಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ (ಕೊಡಗು ಜಿಲ್ಲೆ) ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. 28 ನೇ ಪಟ್ಟಿಯಲ್ಲಿರುವ ಕುರುಬ (ಕೊಡಗು). ಇದನ್ನು ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಇದರ ಸಂಬಂಧ ಹಲವು ವರ್ಷಗಳಿಂದ ಜಾಗೃತಿ ಸಭೆಗಳು,…
ಗುಬ್ಬಿ: ಕೋವಿಡ್ ವೈರಸ್ ಬಗ್ಗೆ ತಾತ್ಸರ ತಾಳಬಾರದು ಎಂದು ಸಭೆಯಲ್ಲಿ ಹೇಳಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರೇ ಈ ವೈರಸ್ಗೆ ಬಲಿಯಾಗಿದ್ದು ತೀವ್ರ ಆಘಾತಕಾರಿ ವಿಚಾರ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ವಿಷಾದಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಾಯಿ ಮತ್ತು ಅತ್ತೆಯವರನ್ನು ಕಳೆದುಕೊಂಡು ನಂತರ ತಾವೂ ಈ ಮಹಾಮಾರಿಗೆ ಬಲಿಯಾಗಿದ್ದ ನೋವಿನ ಸಂಗತಿ. ಅವರ ಸಾವು ನಮಗೆ ಪಾಠ ಕಲಿಸಲಿದೆ. ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಕೊಂಡು ಸಾಮಾಜಿಕ ಅಂತರ ಕಾಯುವ ಸ್ವಯಂ ಪ್ರೇರಣೆ ನಿರ್ಧಾರ ಸಾರ್ವಜನಿಕರಲ್ಲಿ ಮೂಡಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ಮಾತನಾಡಿ ಕಾರ್ಯಕರ್ತರೇ ಬಿಜೆಪಿಗೆ ಜೀವಾಳ ಎಂಬ ಅಂಶಕ್ಕೆ ಜೀವಂತ ಸಾಕ್ಷಿಯಾಗಿದ್ದ ಅಶೋಕ್ ಗಸ್ತಿ ಅಕಾಲಿಕ ಸಾವು ಪಕ್ಷಕ್ಕೆ ಪೆಟ್ಟು ನೀಡಿದಂತಾಗಿದೆ. ಈ ಜತೆಗೆ ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ…
ತುಮಕೂರು: ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಸಾಹೇ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಹಾಗೂ ಆಸ್ಪತ್ರೆಯಲ್ಲಿ ‘ಕೊವೀಡ್ 19 ಪರಿಕ್ಷಾ ಪ್ರಯೋಗಾಲಯದ ಆರಂಭವನ್ನು ರಾಜ್ಯದ ವೈದ್ಯಕೀಯ ಸಚಿವ ಡಾ.ಸುಧಾಕರ್ ಸೆ. 19 ರಂದು ನೇರವೇರಿಸಲಿದ್ದಾರೆ. ನಗರದ ಸಮೀಪದ ಆಗಲಕೋಟೆಯಲ್ಲಿರುವ ಆಸ್ಪತ್ರೆಯಲ್ಲಿ ವಿಶೇಷ ಘಟಕವನ್ಮ್ನ ಸೆ.19ದಂದು ಬೆಳಿಗ್ಗೆ ಬೆಳಿಗ್ಗೆ 11ಕ್ಕೆ ಉದ್ಗಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಡಾ.ಜಿ.ಎಸ್. ಆನಂದ್, ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಬಾಲಕೃಷ್ಣ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ , ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ, ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸಿಇಓ ಡಾ. ದೇವದಾಸ್ ಪಿ.ಕೆ, ಪ್ರಾಂಶುಪಾಲರಾದ ಡಾ. ಎ.ಜಿ.ಶ್ರೀನಿವಾಸಮೂರ್ತಿ, ವೈದಕೀಯ ಅಧೀಕ್ಷಕರಾದ ಎನ್.ಎಸ್.…
ತುಮಕೂರು: ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ನಿಟ್ಟಿನಲ್ಲಿ ತಿಪಟೂರಿನಲ್ಲಿ ವಿಶೇಷ ಕೋರ್ಸ್ ಆರಂಭಿಸಲು ತುಮಕೂರು ವಿವಿ ಚಿಂತನೆ ನಡೆಸಿದೆ. ತಿಪಟೂರು ಹೊರವಲಯದ ರಂಗಾಪುರ ಹೊಸಳ್ಳಿ ಸರ್ವೇ ನಂ28ರಲ್ಲಿ ಸರ್ಕಾರ ವಿವಿಗೆ ನೀಡಿರುವ 15 ಎಕರೆ ಭೂಮಿ ಸರ್ವೇ ವೇಳೆ ಸಿಂಡಿಕೇಟ್ ಸದಸ್ಯ ರಾಜು ಈ ಬಗ್ಗೆ ಮಾಹಿತಿ ನೀಡಿದರು. ತಿಪಟೂರು ಸೇರಿ ತೆಂಗು ಸೀಮೆಯ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲು ಸರ್ಕಾರ ಭೂಮಿ ನೀಡಿದ್ದು, ಸದುಪಯೋಗ ಮಾಡಿಕೊಳ್ಳುವ ಹೊಣೆ ವಿವಿ ಮೇಲಿದೆ ಎಂದರು. ಇದರ ಮೊದಲ ಹಂತವಾಗಿ ಭೂಮಿ ಭದ್ರಪಡಿಸಿಕೊಳ್ಳುವ ಕಾರ್ಯಕ್ಕೆ ಈಗ ಚಾಲನೆ ನೀಡಲಾಗಿದ್ದು, ಭವಿಷ್ಯದಲ್ಲಿ ವಿವಿ ಆಂತರಿಕ ಸಂಪನ್ಮೂಲ ಹಾಗೂ ಸರ್ಕಾರದ ವಿಶೇಷ ಅನುದಾನ ಬಳಸಿಕೊಂಡು ಕ್ಯಾಂಪಸ್ ನಿರ್ಮಿಸುವ ಕನಸಿದೆ ಎಂದರು. ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನೀಲ್ಪ್ರಸಾದ್ ಮಾತನಾಡಿ, ವಿವಿಗೆ ಸಂಬಂಧಪಟ್ಟ ಭೂಮಿ ತಿಪಟೂರು ಹಾಗೂ ಶಿರಾ ತಾಲೂಕಿನಲ್ಲಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಶೈಕ್ಷಣಿಕ ವರ್ಷದಿಂದಲೇ ಹೊಸ ಕೋರ್ಸ್ ಆರಂಭಿಸಲು ವಿವಿ ಆಸಕ್ತಿ…
ತುಮಕೂರು: ಅಪೌಷ್ಟಿಕತೆಯನ್ನು ದೂರ ಮಾಡಲು ಪೌಷ್ಟಿಕ ಕೈತೋಟಗಳನ್ನು ಬೆಳೆಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ರೈತ ಮಹಿಳೆಯರಿಗೆ ಕರೆ ನೀಡಿದರು. “ರಾಷ್ಟ್ರೀಯ ಪೋಷಣ್ ಅಭಿಯಾನ} ಅಂಗವಾಗಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಇಫ್ಕೊ(Iಈಈಅಔ) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಇತ್ತೀಚೆಗೆ ಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯನ್ನು ದೂರ ಮಾಡಲು ತಮ್ಮ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರಲ್ಲದೆ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಅಂಗನವಾಡಿ ಕಾರ್ಯಕತೆಯರು ಮನೆ-ಮನೆಗೆ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದಾರೆ. ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಲು ನೀಡುವ ಸಲಹೆಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಮನವಿ ಮಾಡಿದರು. “ಕಾವೇರಿ ಕೂಗು ಅಭಿಯಾನ”ದ ಸಂಚಾಲಕ ಶರದ್ ಮಾತನಾಡಿ, ರೈತ ಮಹಿಳೆಯರು ಮರ ಆಧಾರಿತ ಕೃಷಿ…











