ಹುಳಿಯಾರು: ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ರಸ್ತೆಯು ಅನೇಕ ವರ್ಷಗಳಿಂದ ದುರಸ್ತಿಯಾಗದೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ಉಂಟಾಗಿದ್ದರೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ರಸ್ತೆಯು ಹುಳಿಯಾರು ಮಾರ್ಗವಾಗಿ ಹೋಗುವ ರಾಷ್ಟ್ರೀಯ ಹೆದ್ದಾರಿ 234 ಕ್ಕೆ ಸೇರಿಕೊಳ್ಳುತ್ತದೆ. ಅಲ್ಲದೆ ಈ ಮಾರ್ಗವಾಗಿ ಹೊಸಹಳ್ಳಿ, ಹೊಸಹಳ್ಳಿಪಾಳ್ಯ, ಸೀಗೆಬಾಗಿ ಗ್ರಾಮಗಳ ಗ್ರಾಮಸ್ಥರು ಪಟ್ಟಣಕ್ಕೆ ಓಡಾಡುತ್ತಾರೆ. ಈ ಊರಿಗೆ ಬಸ್ ವ್ಯವಸ್ಥೆಯಿಲ್ಲದಿದ್ದರಿಂದ ಬೈಕ್ ಅಥವಾ ನಡೆದುಕೊಂಡೇ ಓಡಾಡಬೇಕಿದೆ. ಆದರೆ ಮಳೆಗಾಲದಲ್ಲಿ ಬಿದ್ದ ಮಳೆಯ ನೀರು ಈ ರಸ್ತೆಯ ಮೇಲೆ ನಿಂತು ರಸ್ತೆಯು ಕೆಸರು ಗದ್ದೆಯಂತಾಗುತ್ತದೆ. ವೃದ್ಧರು, ಮಕ್ಕಳು, ವಿದ್ಯಾರ್ಥಿಗಳು ಕೆಸರು ಸಿಡಿಸಿಕೊಂಡು ಓಡಾಡುವ ಅನಿವಾರ್ಯತೆ ನಿರ್ಮಾಣವಾಗಿದೆ. ಬೈಕ್ ಸವಾರರು ಬಿದ್ದು ಪೆಟ್ಟು ಮಾಡಿಕೊಂಡ ನಿದರ್ಶನಗಳೂ ಸಾಕಷ್ಟಿವೆ. ರಸ್ತೆ ದುರಸ್ತಿಗೆ ಗ್ರಾಮಸ್ಥರು ಹಲವಾರು ವರ್ಷಗಳಿಂದ ಸಾಕಷ್ಟು ಬಾರಿ ಮನವಿ ಮಾಡಿದರೂ ಜನಪ್ರತಿ…
Author: News Desk Benkiyabale
ತುಮಕೂರು: ರೈತರು ತಾವು ಬೆಳೆದ ಬೆಳೆಯ ವಿವರಗಳನ್ನು “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಅಪ್ಲೋಡ್ ಮಾಡಲು ಸೆಪ್ಟೆಂಬರ್ 23 ಕಡೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನ ತಿಳಿಸಿದ್ದಾರೆ. ರೈತರೇ ಸ್ವತಂತ್ರವಾಗಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾಚಿತ್ರ ಮತ್ತು ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ಗೆ ನಿಗಧಿತ ಅವಧಿಯೊಳಗೆ ಅಪ್ಲೋಡ್ ಮಾಡಲು ಅವಕಾವಿದ್ದು, ಜಿಲ್ಲೆಯ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ಗೆ ತಮ್ಮ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಿದಲ್ಲಿ ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಹಾಗೂ ನಫೆಡ್ ಮೂಲಕ ಕೊಬ್ಬರಿ ಖರೀದಿ ನೋಂದಣಿಗೆ ಬೆಳೆ ಸಮೀಕ್ಷೆ ಆಧಾರದ ಮೇಲೆ ಅವಕಾಶ ದೊರೆಯಲಿದೆ. ಅಲ್ಲದೆ ಸೆಪ್ಟೆಂಬರ್ 12 ರಿಂದ ಖಾಸಗಿ ನಿವಾಸಿಗಳನ್ನು ಬಳಸಿಕೊಂಡು ರೈತರೇ ಖುದ್ದು ತಮ್ಮ ಬೆಳೆ ವಿವರಗಳನ್ನು ಅಪ್ಲೋಡ್ ಮಾಡುವ ಅವಕಾಶವನ್ನು ಸಹ ಕಲ್ಪಿಸಲಾಗಿದ್ದು,…
ಗುಬ್ಬಿ: ಹಲವಾರು ವರ್ಷಗಳಿಂದ ಇತ್ಯರ್ಥವಾಗದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಎಸ್.ಆರ್.ಶ್ರೀನಿವಾಸ್ ಎರಡು ಬಣಗಳಾಗಿದ್ದ ರೈತರೊಟ್ಟಿಗೆ ಚರ್ಚಿಸಿ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಿ ಕೊಡುವ ಭರವಸೆಯೊಂದಿಗೆ ಸುಖಾಂತ್ಯ ಕಾಣಿಸಿದರು. ತಾಲ್ಲೂಕಿನ ಚೇಳೂರು ಹೋಬಳಿ ಸಿ.ಹರುವೇಸಂದ್ರಪಾಳ್ಯ ಗ್ರಾಮದಲ್ಲಿ ಗಂಗಣ್ಣ ಸಹೋದರರ ಮನೆಗಳಿಗೆ ತೆರಳಲು ಇದ್ದ ರಸ್ತೆ ವಿವಾದ ತಾರಕಕ್ಕೇರಿ ನ್ಯಾಯಾಲಯ ಮೆಟ್ಟಿಲೇರಿದ್ದರು. ಈ ನಡುವೆ ಅಲ್ಲಿನ ಖರಾಬುಹಳ್ಳ ತೆರವು ಮಾಡಲು ಅರ್ಜಿ ಸಲ್ಲಿಸಲಾಗಿದ್ದ ಕಾರಣ ರಸ್ತೆಗಾಗಿ ನಡೆದ ತಿಕ್ಕಾಟಕ್ಕೆ ಹಲವಾರು ಮನೆಗಳಿಗೆ ಹೋಗಲು ರಸ್ತೆ ಇಲ್ಲವಾಗುವ ಬಗ್ಗೆ ಅರಿತು ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಸಕರು ಅಧಿಕಾರಿಗಳಿಂದ ಆಗಬೇಕಿದ್ದ ಹಳ್ಳ ತೆರವು ಕೆಲಸ ತಾತ್ಕಾಲಿಕವಾಗಿ ನಿಲ್ಲಿಸಿ ವಿವಾದ ಮಾಡಿಕೊಂಡ ರೈತರೊಟ್ಟಿಗೆ ಎರಡು ತಾಸು ಚರ್ಚಿಸಿ ರಸ್ತೆ, ಖರಾಬು ಸ್ಥಳಗಳನ್ನು ಪರಿಶೀಲಿಸಿ ಅಂತಿಮವಾಗಿ ಎರಡೂ ಗುಂಪುಗಳಿಂದ ಐದು ಅಡಿಗಳಂತೆ ಸ್ಥಳ ಬಿಟ್ಟುಕೊಡಬೇಕು. ಒಟ್ಟು 10 ಅಡಿಗಳೊಂದಿಗೆ ದೊಡ್ಡ ಸಿಸಿ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ…
ತುಮಕೂರು: ಕಳೆದ ಮೂರೂವರೆ ತಿಂಗಳಿನಿಂದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಅಶೋಕ ರಸ್ತೆಯು ಸದ್ಯದಲ್ಲೇ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದ್ದು, ಬರುವ ಅಕ್ಟೋಬರ್ 10 ರಂದು ಈ ರಸ್ತೆ ಲೋಕಾರ್ಪಣೆಯಾಗಲಿದೆ. ನಗರದ ಹೃದಯಭಾಗದಲ್ಲಿರುವ ಹಾಗೂ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಅಶೋಕ ರಸ್ತೆಯಲ್ಲಿ ಕಳೆದ 110 ದಿನಗಳಿಂದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸ್ಮಾರ್ಟ್ಸಿಟಿ ಯೋಜನೆ ವತಿಯಿಂದ ಕೈಗೊಳ್ಳಲಾಗಿದ್ದು, ಈ ರಸ್ತೆಯ ಕಾಮಗಾರಿ ಮತ್ತು ಗುಣಮಟ್ಟವನ್ನು ಸ್ಮಾರ್ಟ್ಸಿಟಿ ಅಧಿಕಾರಿಗಳೊಂದಿಗೆ ಬೆಳ್ಳಂಬೆಳಿಗ್ಗೆ ಪರಿಶೀಲನೆ ನಡೆಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ಹಗಲು-ರಾತ್ರಿ ಕೆಲಸ ಮಾಡಿ ನಿಗದಿತ ದಿನಾಂಕದೊಳಗೆ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಮಾರ್ಟ್ಸಿಟಿ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಅಶೋಕ ರಸ್ತೆಯಲ್ಲಿ 110 ದಿನಗಳಿಂದ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ ಎಂದು ಅವರು ಹೇಳಿದರು. …
ತುಮಕೂರು: ಕೊರೊನಾ ಮಹಾಮಾರಿಯನ್ನು ಸಮರ್ಥ ವಾಗಿ ಜಿಲ್ಲೆಯಲ್ಲಿ ಎದುರಿಸುವಲ್ಲಿ ಲ್ಯಾಬ್ ಟೆಕ್ನೀಷಿಯನ್ಗಳ ಪಾತ್ರ ಮಹತ್ವದ್ದಾಗಿದ್ದು, ಅವರ ಸೇವೆಯನ್ನು ಮರೆಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಕರ್ನಾಟಕ ಮೆಡಿಕಲ್ ಲ್ಯಾಬ್ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್(ರಿ), ಬೆಂಗಳೂರು, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಾಜಿಸ್ಟ್ ಅಸೋಸಿಯೇಷನ್(ರಿ) ತುಮಕೂರು ಹಾಗೂ ಸರಕಾರಿ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಸಂಘ (ರಿ) ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಕೊಂಡಿದ್ದ ಕೋರೋನಾ ವಾರಿಯರ್ಸ್ ಲ್ಯಾಬ್ ಟೆಕ್ನೇಷಿಯನ್ಸ್ಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ತೆರೆಯ ಮೆರೆಯಲ್ಲಿ ನಿಮ್ಮ ಕೆಲಸ ಅವಿಸ್ಮರಣಿಯವಾದುದ್ದು ಎಂದರು. ಜನರ ಇತ್ತೀಚಿನ ನಡವಳಿಕೆಗಳನ್ನು ನೋಡಿದರೆ ಕೊರೊನಾ ಭಯ ಹೋದಂತೆ ಕಾಣುತ್ತಿದೆ. ಅಲ್ಲದೆ ಕೊರೊನಾ ಎಂಬುದು ಅಧಿಕಾರಿಗಳು, ರಾಜಕಾರಣಿಗಳು ಹಣ ಮಾಡಲು ಬಳಸುತ್ತಿರುವ ದಂಧೆ ಎಂಬ ತಪ್ಪು ಅಭಿಪ್ರಾಯ ಮೂಡಿ ದಂತಿದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೊರೊನಾ ತಡೆಗಟ್ಟುವಲ್ಲಿ ಭಾಗಿಯಾಗಿರುವ ಎಲ್ಲಾ ವಾರಿಯರ್ಸ್ಗಳು ಜನರಲ್ಲಿ ಜಾಗೃತಿ…
ತುಮಕೂರು: ಮಿನಿವಿಧಾನಸೌಧವು ಬಡ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವಂತಹ ಸೌಧವಾಗಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು. ಶಿರಾ ತಾಲೂಕಿನಲ್ಲಿ ನೂತನ ಮಿನಿ ವಿಧಾನಸೌಧ ಉದ್ಘಾಟಿಸಿ ಮಾತನಾಡಿದ ಅವರು, ಶಿರಾ ತಾಲೂಕಿನಲ್ಲಿ ಸುಮಾರು 11 ಎಕರೆ ಜಾಗದಲ್ಲಿ ಸುಮಾರು 9.85 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜನರ ಸೇವೆ ಮಾಡದೇ ದರ್ಪ ತೋರುವ ಅಧಿಕಾರಿಗಳನ್ನು ಮುಲಾಜಿಲ್ಲದೇ ಅಮಾನತುಗೊಳಿಸಲಾಗುವುದು. ಸರ್ಕಾರದ ಕೆಲಸ ದೇವರ ಕೆಲಸವಿದ್ದಂತೆ, ಬಡ ಜನರ ಕಷ್ಟಗಳಿಗೆ ಸ್ಪಂದಿಸಿ, ಜನರು ಅನಾವಶ್ಯಕವಾಗಿ ಓಡಾಡುವುದನ್ನು ತಪ್ಪಿಸುವುದೇ ನಮ್ಮ ಉದ್ದೇಶ ಎಂದು ಅವರು ತಿಳಿಸಿದರು. ಇನ್ನು ಮುಂದೆ ವೃದ್ಧಾಪ್ಯ ವೇತನ ಪಡೆಯಲು ಅನುಕೂಲವಾಗುವಂತೆ ನೂತನ ಯೋಜನೆಯನ್ನು ಜಾರಿಗೊಳಿಸಲಾಗುವುದು. 60 ವರ್ಷ ಪೂರ್ಣಗೊಂಡ ವೃದ್ಧ/ವೃದ್ಧೆಯ ಆಧಾರ್ ಕಾರ್ಡ್ ದಾಖಲೆಯ ಮೇಲೆ 60 ವರ್ಷ ತುಂಬಿದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ವೃದ್ಧ/ವೃದ್ಧೆಯರಿಗೆ ವೃದ್ಧಾಪ್ಯ ವೇತನ ಪಡೆಯಲು ಅಗತ್ಯವಿರುವ ದಾಖಲಾತಿಗಳು…
ಮಧುಗಿರಿ: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತಕ್ಕೆ ಮಧುಗಿರಿಯ ಕಾಂಗ್ರೆಸ್ಸಿನ ಮುಖಂಡರಾಗಿರುವ ತುಮುಲ್ ಮಾಜಿ ಅಧ್ಯಕ್ಷ ಬಿ.ನಾಗೇಶ್ ಬಾಬು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಥಮ ಬಾರಿಗೆ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಪ್ರವೇಶ ಪಡೆದಿದ್ದಾರೆ. ಬಿ.ನಾಗೇಶ್ ಬಾಬು ತುಮುಲ್ ಗೆ ಮೂರು ಬಾರಿ ನಿರ್ದೇಶಕರಾಗಿ ಚುನಾಯಿತರಾಗಿ ಒಂದು ಬಾರಿ ಅಧ್ಯಕ್ಷರೂ ಸಹ ಆಗಿದ್ದರು. ಕೆ.ಎಂ.ಎಫ್ ನಿರ್ದೇಶಕರಾಗಿದ್ದರು. ಈ ಹಿಂದೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಎರಡು ಬಾರಿ ಸ್ಪರ್ದಿಸಿ ಸೋತಿದ್ದರು. ಬಿ.ನಾಗೇಶ್ ಬಾಬು ಆಯ್ಕೆಯಾಗಿರುವ ಕ್ಷೇತ್ರದಿಂದ ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊಂಡವಾಡಿ ಚಂದ್ರಶೇಖರ್ ಆಯ್ಕೆಯಾಗಿ ಉಪಾಧ್ಯಕ್ಷರೂ ಸಹ ಆಗಿದ್ದರು ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಬಿ.ನಾಗೇಶ್ ಬಾಬು ಜೆ.ಡಿಎಸ್ ತೊರೆದು ಕೆ.ಎನ್ ರಾಜಣ್ಣನವರ ನಾಯಕತ್ವದಡಿ ಕಾಂಗ್ರೆಸ್ ಸೇರಿದ ನಂತರ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂಚಿಟಿಗ ಜನಾಂಗದ ಅಭ್ಯರ್ಥಿಗಳೇ ಈ ಕ್ಷೇತ್ರದಿಂದ ಆಯ್ಕೆಯಾಗುತ್ತಿರುವುದು ವಿಶೇಷವಾಗಿದೆ.…
ತುಮಕೂರು: ತುಮಕೂರು ನಗರಕ್ಕೆ ಸುಮಾರು 2500 ಮನೆಗಳನ್ನು ವಸತಿ ಇಲಾಖೆಯಿಂದ ನೀಡಿದ್ದು,ಈಗ ನೇಮಕವಾಗಿರುವ ಆಶ್ರಯ ಸಮಿತಿಯ ಸದಸ್ಯರು ಅದಷ್ಟು ಶೀಘ್ರವಾಗಿ ಫಲಾನುಭವಿಗಳನ್ನು ಗುರುತಿಸಿ,ಜಾಗ ಗೊತ್ತು ಮಾಡಿ,ಸಮಿತಿಗೆ ಪಟ್ಟಿ ನೀಡುವಂತೆ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದವತಿಯಿಂದ ತುಮಕೂರು ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಗೆ ನೇಮಕವಾಗಿ ಸದಸ್ಯರುಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು, ನಗರದಲ್ಲಿ ಸುಮಾರು 22 ಸಾವಿರ ಜನರು ಮನೆಗಳಿಗಾಗಿ ಅರ್ಜಿ ಸಲ್ಲಿಸಿದ್ದು, ಇವರಲ್ಲಿ ಅರ್ಧದಷ್ಟು ಪುನಾರಾವರ್ತನೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಮೊದಲು ಪಟ್ಟಿಯನ್ನು ಪರೀಷಕ್ಕರಿಸಿ, ಆರ್ಹರಿಗೆ ಮನೆಗಳು ತಲುಪುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸಮಿತಿಯ ಸದಸ್ಯರು ಜಾತ್ಯಾತೀತ, ಧರ್ಮಾತೀತರಾಗಿ ನಡೆದುಕೊಳ್ಳುವಂತೆ ಸಲಹೆ ನೀಡಿದರು. ವಸತಿ ಇಲಾಖೆಯಿಂದ ರಾಜೀವ್ಗಾಂಧಿ ಹೌಸಿಂಗ್ ಸ್ಕಿಂ ಅಡಿಯಲ್ಲಿ ಮಂಜೂರಾಗಿರುವ 2500 ಮನೆಗಳ ಜೊತೆಗೆ, ಘೋಷಿತ ಕೊಳಗೇರಿಗಳಲ್ಲಿ ಈಗಾಗಲೇ ಕಚ್ಚಾ ಮನೆ ನಿರ್ಮಿಸಿಕೊಂಡು ವಾಸವಿರುವ ಜನರಿಗೆ ಅಲ್ಲಿಯೇ…
ಹಿರಿಯೂರು: ಚಿತ್ರದುರ್ಗ ಮತ್ತು ತುಮಕೂರಿನ ವಿವಿಧ ಕಡೆಗಳಲ್ಲಿ ಮನೆಗಳ್ಳತನ ಮಾಡಿ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ದರೋಡೆ ಮಾಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಪೊಲೀಸ್ ಅಧೀಕ್ಷರಾದ ಶ್ರೀಮತಿ ಜಿ.ರಾಧಿಕ, ಪಿಎಸ್ಐ ಹಾಗೂ ಹೆಚ್ಚುವರಿ ಪೊಲೀಸ್ ಉಪಾಧೀಕ್ಷಕರಾದ ಮಹಾನಿಂಗ ಬಿ.ನಂದಗಾಂವಿರವರ ಮಾರ್ಗದರ್ಶನಲ್ಲಿದ್ದ ಹಿರಿಯೂರು ಪೊಲೀಸ್ ಉಪಾಧೀಕ್ಷಕರಾದ ಎಸ್.ರೋಷನ್ ಜಮೀರ್, ಹಿರಿಯೂರು ಪೊಲೀಸ್ ನಿರೀಕ್ಷಕರಾದ ಆರ್.ಕೆ.ರಾಘವೇಂದ್ರ, ಹಿರಿಯೂರು ಪೊಲೀಸ್ ಠಾಣೆಯ ಪಿಎಸ್ಐ ಡಿ.ಜಿ.ಪರಮೇಶ್ ಮತ್ತು ಸಿಬ್ಬಂದಿಗಳಾದ ಕಮಲಾಕರ, ಆನಂದಮೂರ್ತಿ, ಧನಂಜಯಮೂರ್ತಿ, ಮಂಜುನಾಥ, ವೆಂಕಟೇಶ್, ತಿಮ್ಮೇಶ್ ಹಾಗೂ ನಳಿನಾರವರ ತಂಡವು ಈ ಖದೀಮರ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಸದರಿ ಬಂಧಿತ ಆರೋಪಿಗಳು ಚಿತ್ರದುರ್ಗ ಹಾಗೂ ತುಮಕೂರಿಗೆ ಸಂಬಂಧಿಸಿದಂತೆ 9 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆರೋಪಿಗಳಾದ ಧನಂಜಯ@ಧನು ತಂದೆ ರಾಮಕೃಷ್ಣಪ್ಪ (44), ಕಾರ್ ಡ್ರೈವಿಂಗ್ ಕೆಲಸ ಮಾಡುತ್ತಿದ್ದ. ಈತ ಮೂಲತಃ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಎನ್.ಜಿ.ಓ ಕಾಲೋನಿಯ ನಿವಾಸಿ. ಮತ್ತೊಬ್ಬ ಮೋಹನ್ ತಂದೆ ನಾರಾಯಣಸ್ವಾಮಿ (39), ಚಿಕ್ಕಬಳ್ಳಾಪುರ…
ತುಮಕೂರು: ಕೃಷಿಗೆ ಪ್ರವಾಸೋದ್ಯಮ ಸ್ಪರ್ಶ ನೀಡಲು ಅಗ್ರಿ ಟೂರಿಸಂ ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಚಿವರಾದ ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಗ್ರಿ ಟೂರಿಸಂ ಯೋಜನೆಯಿಂದ ನಗರ ಪ್ರದೇಶದಲ್ಲಿರುವ ಯುವ ಪೀಳಿಗೆಗೆ ಕೃಷಿ ಆಧಾರಿತ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಮಾಹಿತಿ ತಿಳಿಸುವುದು ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಕುಣಿಗಲ್ ತಾಲೂಕು ಮತ್ತು ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯಲ್ಲಿರುವ ಮೈಸೂರು ಬಿತ್ತನೆ ಪ್ರದೇಶದಲ್ಲಿ 911.56 ಹೆಕ್ಟೇರ್ ಪ್ರದೇಶದಲ್ಲಿ ಶುದ್ಧ ಮೈಸೂರು ರೇಷ್ಮೆ ಬೆಳೆಯುತ್ತಿದ್ದಾರೆ. ಅಲ್ಲದೇ ತಿಪಟೂರು, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳು ದ್ವಿತಳಿ ಬಿತ್ತನೆ ಪ್ರದೇಶವಾಗಿವೆ. ವಿಶೇಷ ಕ್ಲಸ್ಟರ್ ಅಭಿವೃದ್ಧಿ ಯೋಜನೆಯಡಿ 19.347 ಲಕ್ಷ ದ್ವಿತಳಿ ಸಂಕರಣ ಮೊಟ್ಟೆ…











